Tag: Prophet

  • ಸ್ವಂತ ಮಗಳು ಸೇರಿ 20ಕ್ಕೂ ಹೆಚ್ಚು ಯುವತಿಯರ ಮದುವೆ- ಸ್ವಘೋಷಿತ ಪ್ರವಾದಿ ಅರೆಸ್ಟ್

    ಸ್ವಂತ ಮಗಳು ಸೇರಿ 20ಕ್ಕೂ ಹೆಚ್ಚು ಯುವತಿಯರ ಮದುವೆ- ಸ್ವಘೋಷಿತ ಪ್ರವಾದಿ ಅರೆಸ್ಟ್

    ವಾಷಿಂಗ್ಟನ್: ತನ್ನ ಸ್ವಂತ ಮಗಳು ಸೇರಿದಂತೆ 20ಕ್ಕೂ ಹೆಚ್ಚು ಯುವತಿಯರನ್ನ ಮದುವೆಯಾಗಿರುವ (Marriage) ಆರೋಪದ ಮೇಲೆ ಯುಎಸ್‌ನ (US) ಸ್ವಯಂ ಘೋಷಿತ ಪ್ರವಾದಿಯನ್ನು (Prophet) ಎಫ್‌ಬಿಐ (FBI) (ಫೆಡರಲ್ ಬ್ಯೂರೋ ಇನ್ವೆಷ್ಟಿಗೇಷನ್) ಬಂಧಿಸಿದೆ. ಯುಎಸ್ (US) ಮೂಲದ ಆಧ್ಯಾತ್ಮಿಕ ನಾಯಕನ ಬಹುಪತ್ನಿತ್ವ ಬೆಚ್ಚಿಬೀಳಿಸುವಂತೆ ಮಾಡಿದೆ.

    ಲೇಟರ್ ಡೇ ಸೇಂಟ್ಸ್ ಜೀಸಸ್ ಕ್ರೈಸ್ಟ್ ಚರ್ಚ್ನಲ್ಲಿ ಬಹುಪತ್ನಿತ್ವವಾದಿ `ಮೊರನ್ಸ್’ ಗುಂಪಿನ ಆರಾಧಕನಾಗಿದ್ದ ಸ್ಯಾಮ್ಯುಯೆಲ್ ರಾಪ್ಪಿಲೀ ಬೇಟ್‌ಮ್ಯಾನ್ (46) ತನ್ನ ಸ್ವಂತ ಮಗಳು ಸೇರಿ 20ಕ್ಕೂ ಹೆಚ್ಚು ಯುವತಿಯರನ್ನ ಮದುವೆಯಾಗಿದ್ದಾನೆ. ಅವರಲ್ಲಿ ಬಹುತೇಕರು 15 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿದ್ದಾರೆ ಎಂದು ಎಫ್‌ಬಿಐ ಹೇಳಿದೆ. ಇದನ್ನೂ ಓದಿ: ಕ್ಯಾಚ್ ಕೈಚೆಲ್ಲಿದ ಸುಂದರ್‌ಗೆ ಕೆಟ್ಟದಾಗಿ ಬೈದ ರೋಹಿತ್ – ನೆಟ್ಟಿಗರ ಆಕ್ರೋಶ

    2019ರಲ್ಲಿ ಸಣ್ಣ ಗುಂಪಿನ ಅನುಯಾಯಿಗಳ ನಿಯಂತ್ರಣ ವಹಿಸಿಕೊಂಡ ಬೇಟ್‌ಮ್ಯಾನ್ ನಂತರದಲ್ಲಿ ತನ್ನನ್ನೇ ತಾನು ಪ್ರವಾದಿ ಎಂದು ಘೋಷಿಸಿಕೊಂಡನು. ಆಮೇಲೆ ಹದಿಹರೆಯದ ಮಗಳನ್ನು ಮದುವೆಯಾಗುವುದಾಗಿ ಘೋಷಿಸಿದನು. ನಂತರ ಅನೇಕ ಅಪ್ರಾಪ್ತೆಯರನ್ನೂ ವಿವಾಹವಾದನು. ಎಫ್‌ಬಿಐ (FBI) ಕೊಲೊರಾಡೋ ನಗರದಲ್ಲಿನ ಬೇಟ್‌ಮ್ಯಾನ್ ಎರಡೂ ಮನೆಗಳ ಮೇಲೆ ದಾಳಿ ನಡೆಸಿದಾಗ ಈ ಸತ್ಯ ಬಹಿರಂಗವಾಗಿದೆ.

    ಸದ್ಯ ದಾಖಲೆಗಳ ಸಮೇತ ಆರೋಪಿಯನ್ನ ಬಂಧಿಸಿ ಜೈಲಿನಲ್ಲಿಡಲಾಗಿದೆ. ಇದನ್ನೂ ಓದಿ: ಕ್ಯಾಚ್ ಕೈಚೆಲ್ಲಿದ ಸುಂದರ್‌ಗೆ ಕೆಟ್ಟದಾಗಿ ಬೈದ ರೋಹಿತ್ – ನೆಟ್ಟಿಗರ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚು?

    ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚು?

    – ಪ್ರವಾದಿ ವಿರುದ್ಧ ಹೇಳಿಕೆ ಖಂಡಿಸಿ ಹಿಂಸಾಚಾರ
    – 10 ರಾಜ್ಯಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ
    – ಪಾಕಿಸ್ತಾನ, ಬಾಂಗ್ಲಾದೇಶದಲ್ಲೂ ಪ್ರತಿಭಟನೆ

    ನವದೆಹಲಿ: ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಭಾರತದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಗಳು, ಹಿಂಸಾಚಾರಗಳು ಸಂಪೂರ್ಣ ವ್ಯವಸ್ಥಿತವಾದ ಟೂಲ್ ಕಿಟ್ ಭಾಗ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಚು ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ದೇಶದ 10 ರಾಜ್ಯಗಳಲ್ಲಿ ಏಕಕಾಲದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದವು. ಎಲ್ಲ ಪ್ರತಿಭಟನೆಗಳ ನಡುವೆ ಸಾಮ್ಯತೆ ಕೂಡ ಕಂಡು ಬಂದಿದೆ. ಸಾಮೂಹಿಕ ಪ್ರಾರ್ಥನೆ ಬಳಿಕ ಜಮ್ಮು ಕಾಶ್ಮೀರದಿಂದ ಶುರುವಾದ ಪ್ರತಿಭಟನೆ ದೆಹಲಿ ಮೂಲಕ ದಕ್ಷಿಣ ಭಾರತದವರೆಗೂ ಹಬ್ಬಿತ್ತು.

    ಉತ್ತರ ಪ್ರದೇಶ, ಜಮ್ಮುಕಾಶ್ಮೀರ, ಜಾರ್ಖಂಡ್, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ನಡೆದ ಎಲ್ಲ ಪ್ರತಿಭಟನೆಗಳಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಿ ಶಾಂತಿ ಕದಡುವ ಪ್ರಯತ್ನ ಮಾಡಲಾಗಿದೆ. ಅಲ್ಲದೇ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡುವ ಯತ್ನವೂ ಆಗಿದೆ. ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದ ಸಂದರ್ಭದಲ್ಲಿಯೇ ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದಲ್ಲಿಯೂ ಭಾರೀ ಪ್ರತಿಭಟನೆಗಳು ನಡೆದಿವೆ. ದೇಶದ ಹಲವೆಡೆ ಪರಿಸ್ಥಿತಿ ಇನ್ನೂ ಬೂದಿಮುಚ್ಚಿದ ಕೆಂಡದಂತೆ ಇದೆ. ಅದರಲ್ಲೂ ಬಂಗಾಳದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ. ಹೌರಾದಲ್ಲಿ ಉದ್ರಿಕ್ತರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ದಾಂಧಲೆ ಎಬ್ಬಿಸಿದ್ದಾರೆ. ರಸ್ತೆ ಮತ್ತು ರೈಲು ಮಾರ್ಗಗಳನ್ನು ನಿರ್ಬಂಧಿಸಿದ್ರು. ಪರಿಣಾಮ ಆಗ್ನೇಯ ರೈಲ್ವೇಯ ಹಲವು ರೈಲು ಸೇವೆ ಸಂಪೂೂರ್ಣವಾಗಿ ರದ್ದಾಗಿವೆ. ಉತ್ತರ ಭಾರತದ ಹಲವು ನಗರಗಳಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ.


    ಉತ್ತರಪ್ರದೇಶದಲ್ಲಿ 109 ಗಲಭೆಕೋರರನ್ನು ಬಂಧಿಸಲಾಗಿದೆ. ದೆಹಲಿ ಮತ್ತು ತೆಲಂಗಾಣದಲ್ಲಿ ಪ್ರತಿಭಟನೆ ಸಂಬಂಧ ಎಂಐಎಂ ಕಾರ್ಯಕರ್ತರನ್ನು, ಇನ್ನೂ ಕೆಲವು ಕಡೆ ಸಿಎಫ್‍ಐ ಸದಸ್ಯರನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಅಲರ್ಟ್ ಆಗಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

    ಪ್ರವಾದಿ ವಿವಾದ ತೀವ್ರಗೊಳ್ಳಬಹುದು ಮತ್ತಷ್ಟು ಗಲಭೆ, ದೊಂಬಿಗಳು, ಶಾಂತಿ ಕದಡುವ ಕೆಲಸ ಆಗಬಹುದು. ಹೀಗಾಗಿ ಇದನ್ನು ತಡೆಯಲು ರಾಜ್ಯಗಳು ಸನ್ನದ್ಧರಾಗಬೇಕು. ಅಗತ್ಯ ಬಿದ್ದಲ್ಲಿ ಅರೆಸೇನಾ ತುಕಡಿಗಳನ್ನು ಬಳಸಿಕೊಳ್ಳಿ. ಉದ್ರೇಕಕಾರಿ ಭಾಷಣ ಮಾಡುವ ವ್ಯಕ್ತಿಗಳು, ಸೋಶಿಯಲ್ ಮಿಡಿಯಾ ಪೋಸ್ಟ್‌ಗಳ ಮೇಲೆ ನಿಗಾ ಇಡಿ ಎಂದು ಸೂಚಿಸಿದೆ. ಸಮಾಜದ ಶಾಂತಿ ಕದಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ.