Tag: Prophet Muhammad

  • ಪ್ರವಾದಿ ಮೊಹಮ್ಮದ್ ಬಗ್ಗೆ ಸಿನಿಮಾ ಮಾಡಿದ್ರೆ ವಿಶ್ವದಾದ್ಯಂತ ರಕ್ತಪಾತ ಆಗುತ್ತೆ – ಗಿರೀಶ್ ಗೌತಮ್

    ಪ್ರವಾದಿ ಮೊಹಮ್ಮದ್ ಬಗ್ಗೆ ಸಿನಿಮಾ ಮಾಡಿದ್ರೆ ವಿಶ್ವದಾದ್ಯಂತ ರಕ್ತಪಾತ ಆಗುತ್ತೆ – ಗಿರೀಶ್ ಗೌತಮ್

    ಭೋಪಾಲ್: ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ನಂತರ, ರಾಜ್ಯದ ವಿಧಾನಸಭಾ ಸ್ಪೀಕರ್ ಗಿರೀಶ್ ಗೌತಮ್ (Girish Gautam) ಅವರು ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ನಟನೆಯ `ಪಠಾಣ್’ (Pathan) ಸಿನಿಮಾದ `ಬೇಷರಂ ರಂಗ್’ ಹಾಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಚಿತ್ರಮಂದಿರದಲ್ಲಿ ಪಠಾಣ್ ಸಿನಿಮಾ (Cinema) ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾರುಖ್ (Shah Rukh Khan) ಈ ಚಿತ್ರವನ್ನು ತನ್ನ ಮಗಳೊಂದಿಗೆ ನೋಡಬೇಕು. ಮಗಳ ಜೊತೆಗಿನ ಫೋಟೋ ಅಪ್‌ಲೋಡ್ ಮಾಡಿ, ಈ ಸಿನಿಮಾವನ್ನು ತನ್ನ ಮಗಳ ಜೊತೆ ನೋಡುತ್ತಿದ್ದೇನೆ ಎಂದು ಜಗತ್ತಿಗೇ ಹೇಳಬೇಕು ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್

    ನಾನು ಮುಕ್ತವಾಗಿ ಹೇಳಬಯಸುತ್ತೇನೆ. ಪ್ರವಾದಿ ಮೊಹಮ್ಮದ್ (Prophet Muhammad) ಅವರ ಮೇಲೆ ಅಂತಹ ಒಂದು ಚಲನಚಿತ್ರವನ್ನು ಮಾಡಿ, ಅದನ್ನು ಅಭಿವ್ಯಕ್ತಿ ಸ್ವಾತಂತ್ರ‍್ಯದ ಹೆಸರಿನಲ್ಲಿ ಬಿಡುಗಡೆ ಮಾಡಿ ನೋಡೋಣ? ವಿಶ್ವದಾದ್ಯಂತ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ.

    ವಿರೋಧ ಪಕ್ಷದ ನಾಯಕ ಡಾ.ಗೋವಿಂದ್ ಸಿಂಗ್ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಸೇರಿದಂತೆ ಹಿರಿಯ ಕಾಂಗ್ರೆಸ್ (Congress) ನಾಯಕರು ಈ ಚಿತ್ರದ ಹಾಡನ್ನು ವಿರೋಧಿಸಿದ್ದಾರೆ. ಇದು ನಮ್ಮ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಇದಕ್ಕೆ ದನಿಗೂಡಿಸಿರುವ ಸುರೇಶ್ ಪಚೌರಿ, ವಿರೋಧ ಇರುವುದು ಪಠಾಣ್ ಸಿನಿಮಾ ಬಗ್ಗೆ ಅಲ್ಲ, ಹಾಡಿನಲ್ಲಿ ಧರಿಸಿರೋ ಬಟ್ಟೆಯ ಬಗ್ಗೆ. ಭಾರತೀಯ ಸಂಸ್ಕೃತಿಯಲ್ಲಿ ಹಿಂದೂ, ಮುಸ್ಲಿಂ ಅಥವಾ ಯಾವುದೇ ಧರ್ಮದ ಅನುಯಾಯಿಗಳಿರಲಿ, ಮಹಿಳೆ ಅಂತಹ ಬಟ್ಟೆಗಳನ್ನು ಧರಿಸುವುದು ಹಾಗೂ ಅಂತಹ ದೃಶ್ಯವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ಯಾರೂ ಅನುಮತಿಸೋದಿಲ್ಲ ಎಂದು ಹೇಳಿದ್ದಾರೆ.

    `ಪಠಾಣ್’ ಸಿನಿಮಾದ `ಬೇಷರಂ ರಂಗ್’ ಹಾಡನ್ನು ಬಿಡುಗಡೆಗೊಳಿಸಿದ ಎರಡು ದಿನಗಳ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ಹೇಳಿಕೆ ನಂತರ ಕೇಸರಿ ವಿವಾದದ ಅಲೆ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವಾದಿ ಮೊಹಮ್ಮದ್‌ ಬಗ್ಗೆ ಅವಹೇಳನ – ತೆಲಂಗಾಣದ ಬಿಜೆಪಿ ಶಾಸಕ ಅರೆಸ್ಟ್‌

    ಪ್ರವಾದಿ ಮೊಹಮ್ಮದ್‌ ಬಗ್ಗೆ ಅವಹೇಳನ – ತೆಲಂಗಾಣದ ಬಿಜೆಪಿ ಶಾಸಕ ಅರೆಸ್ಟ್‌

    ಹೈದರಾಬಾದ್: ಪ್ರವಾದಿ ಮೊಹಮ್ಮದ್‌ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಕ್ಕೆ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕಾನೂನಿನ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!

    ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುವ ವೀಡಿಯೋವನ್ನು ಸಿಂಗ್ ಬಿಡುಗಡೆ ಮಾಡಿದ್ದರು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು.

    ಸಿಂಗ್ ಅವರು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ತಕ್ಷಣ ಅವರನ್ನು ವಶಕ್ಕೆ ಪಡೆದು ನಂತರ ವಿವಿಧ ಠಾಣೆಗಳಿಗೆ ರವಾನಿಸಲಾಗಿದೆ. ಇದನ್ನೂ ಓದಿ: 2 ವರ್ಷಗಳ ನಂತರ ಭಾರತದ ವಿದ್ಯಾರ್ಥಿಗಳಿಗೆ ವೀಸಾ ನೀಡಲು ಚೀನಾ ಅನುಮತಿ

    ನಗರದ ಗೋಶಾಮಹಲ್‌ನ ಶಾಸಕ ಟಿ.ರಾಜಾ ಸಿಂಗ್‌ ಕಳೆದ ವಾರ ಹಾಸ್ಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವ್ವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಸುಮಾರು 50 ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ತಲುಪಲು ಪ್ರಯತ್ನಿಸಿದಾಗ ಅವರನ್ನು ಶುಕ್ರವಾರ ಪೊಲೀಸರು ತಡೆದು ಕಸ್ಟಡಿಗೆ ತೆಗೆದುಕೊಂಡರು.

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾ ಹೇಳಿಕೆ ಬಗ್ಗೆ ಮೋದಿ ತನ್ನ ಬಾಲ್ಯ ಸ್ನೇಹಿತ ಅಬ್ಬಾಸ್‍ನನ್ನು ಕೇಳಲಿ: ಓವೈಸಿ

    ನೂಪುರ್ ಶರ್ಮಾ ಹೇಳಿಕೆ ಬಗ್ಗೆ ಮೋದಿ ತನ್ನ ಬಾಲ್ಯ ಸ್ನೇಹಿತ ಅಬ್ಬಾಸ್‍ನನ್ನು ಕೇಳಲಿ: ಓವೈಸಿ

    ಹೈದರಾಬಾದ್: ಪ್ರವಾದಿ ಮುಹಮ್ಮದ್ ಬಗ್ಗೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆ ಆಕ್ಷೇಪಾರ್ಹವೇ ಅಥವಾ ಇಲ್ಲವೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಾಲ್ಯ ಸ್ನೇಹಿತ ಅಬ್ಬಾಸ್ ಅವರನ್ನು ಕೇಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲಹೆ ಕೊಟ್ಟರು.

    ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ 100ನೇ ವರ್ಷದ ಹುಟ್ಟು ಹಬ್ಬದ ವೇಳೆ ಮೋದಿ ಅವರು ತಮ್ಮ ಬಾಲ್ಯ ಸ್ನೇಹಿತ ಅಬ್ಬಾಸ್ ಬಗ್ಗೆ ಬರೆದು ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಇದೇ ವಿಷಯವನ್ನು ತೆಗೆದುಕೊಂಡು ಓವೈಸಿ, ಪ್ರಧಾನಿ ಮೋದಿ ಅವರು ತಮ್ಮ ಬಾಲ್ಯದ ಸ್ನೇಹಿತನನ್ನು ಸುಮಾರು 8 ವರ್ಷಗಳ ನಂತರ ನೆನಪಿಸಿಕೊಂಡಿದ್ದಾರೆ. ನಮಗೂ ಸಹ ನಮಗೆ ಈ ಸ್ನೇಹಿತ ಇದ್ದಾರೆ ಎಂದು ತಿಳಿದಿರಲಿಲ್ಲ ಎಂದು ಮಾತನ್ನು ಪ್ರಾರಂಭಿಸಿದರು.

    ನಾನು ಇಂದು ಮೋದಿ ಅವರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಒಮ್ಮೆ ನಿಮ್ಮ ಸ್ನೇಹಿತ ಅಬ್ಬಾಸ್ ಅವರನ್ನು ಅಸಾದುದ್ದೀನ್ ಓವೈಸಿ ಮತ್ತು ಉಲೇಮಾಗಳ ಭಾಷಣಗಳನ್ನು ಕೇಳುವಂತೆ ಮಾಡಿ. ಆಗ ನಾವು ಸುಳ್ಳು ಹೇಳುತ್ತಿದ್ದೇವೆಯೇ ಎಂಬುದನ್ನು ಕೇಳಿ ಎಂದು ತಿಳಿಸಿದರು.

    ನಿಮಗೆ ಕೇಳಲು ಸಾಧ್ಯವಾಗಿಲ್ಲವೆಂದರೆ ನಮಗೆ ಅಬ್ಬಾಸ್ ವಿಳಾಸವನ್ನು ಕೊಡಿ. ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಬಗ್ಗೆ ಹೇಳಿರುವ ಹೇಳಿಕೆ ಸರಿನಾ ಎಂದು ನಾವೇ ಕೇಳುತ್ತೇವೆ. ಅವರು ಸಹ ಆಕೆ ಸರಿಯಾಗಿ ಮಾತನಾಡಿಲ್ಲವೆಂದು ಒಪ್ಪಿಕೊಳ್ಳುತ್ತಾರೆ ಎಂದರು.

    ನೀವು ನಿಮ್ಮ ಗೆಳೆಯನನ್ನು ನೆನಪಿಸಿಕೊಂಡಿದ್ದೀರಾ. ಇದೊಂದು ಕಥೆಯಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ನೀವು ಹೇಳುತ್ತಿರುವುದು ಸರಿನಾ ಎಂದು ನನಗೆ ಹೇಗೆ ಗೊತ್ತು! ಅಲ್ಲದೇ ಅವರು ‘ಅಚ್ಛೇ ದಿನ್’ ಭಾರತಕ್ಕೆ ಬರುವುದಾಗಿ ಭರವಸೆ ನೀಡಿದ್ದರು. ಆದರೆ ಎಲ್ಲಿ ಬಂತು ಎಂದು ಪ್ರಶ್ನೆ ಮಾಡಿದರು.

    ಮೋದಿ ಪೋಸ್ಟ್‌ನಲ್ಲಿ ಏನಿದೆ?
    ನನ್ನ ತಂದೆಯ ಆಪ್ತ ಸ್ನೇಹಿತ ಪಕ್ಕದ ಗ್ರಾಮದಲ್ಲಿ ವಾಸಿಸುತ್ತಿದ್ದರು. ಅವರ ಅಕಾಲಿಕ ಮರಣದ ನಂತರ, ನನ್ನ ತಂದೆ ಅವರ ಗೆಳೆಯನ ಮಗ ಅಬ್ಬಾಸ್‍ನನ್ನು ನಮ್ಮ ಮನೆಗೆ ಕರೆದುಕೊಂಡು ಬಂದರು. ಆತ ನಮ್ಮ ಜೊತೆ ಇದ್ದು ಶಿಕ್ಷಣ ಪೂರೈಸಿದ್ದ. ನನ್ನ ಅಮ್ಮ ಸಹ ಅವನನ್ನು ಪ್ರೀತಿಯಿಂದ ನಮ್ಮನ್ನು ನೋಡಿಕೊಳ್ಳುವ ರೀತಿಯಲ್ಲಿಯೇ ನೋಡಿಕೊಳ್ಳುತ್ತಿದ್ದರು. ಈದ್ ಸಮಯದಲ್ಲಿ ಅವನಿಗೆ ಇಷ್ಟವಾದ ತಿನಿಸುಗಳನ್ನು ಮಾಡಿಕೊಡುತ್ತಿದ್ದಳು ಎಂದು ಬರೆದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    Live Tv

  • ದೆಹಲಿ, ಮುಂಬೈ, ಉತ್ತರ ಪ್ರದೇಶ, ಗುಜರಾತ್‍ಗಳಲ್ಲಿ ಆತ್ಮಾಹುತಿ ದಾಳಿಯ ಬೆದರಿಕೆ ಹಾಕಿದ ಅಲ್ ಖೈದಾ

    ದೆಹಲಿ, ಮುಂಬೈ, ಉತ್ತರ ಪ್ರದೇಶ, ಗುಜರಾತ್‍ಗಳಲ್ಲಿ ಆತ್ಮಾಹುತಿ ದಾಳಿಯ ಬೆದರಿಕೆ ಹಾಕಿದ ಅಲ್ ಖೈದಾ

    ನವದೆಹಲಿ: ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಪ್ರವಾದಿಯ ಗೌರವಕ್ಕಾಗಿ ಹೋರಾಡಲು ಆತ್ಮಾಹುತಿ ದಾಳಿಗಳನ್ನು ನಡೆಸುವುದಾಗಿ ಭಯೋತ್ಪಾದಕ ಗುಂಪಾಗಿರುವ ಅಲ್ ಖೈದಾ ಬೆದರಿಕೆ ಹಾಕಿ ಪತ್ರವನ್ನು ನೀಡಿದೆ.

    ಕೆಲವು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಪತ್ರದಲ್ಲಿ ನಮ್ಮ ಪ್ರವಾದಿಯನ್ನು ಅವಮಾನಿಸುವವರನ್ನು ನಾವು ಕೊಲ್ಲುತ್ತೇವೆ. ನಮ್ಮ ಪ್ರವಾದಿಯನ್ನು ಅವಮಾನಿಸಲು ಧೈರ್ಯವಿರುವವರನ್ನು ಸ್ಫೋಟಿಸಲು ನಾವು ನಮ್ಮನ್ನು ಹಾಗೂ ನಮ್ಮ ಮಕ್ಕಳನ್ನು ಆಹುತಿ ನೀಡಲು ಸಿದ್ಧವಾಗಿದ್ದೇವೆ. ಈಗ ಮುಂಬೈ, ಉತ್ತರಪ್ರದೇಶ, ಗುಜರಾತ್, ದೆಹಲಿಯಲ್ಲಿರುವ ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಕಾಯಬೇಕು ಎಂದು ಎಚ್ಚರಿಕೆ ನೀಡಿದೆ.

    ಇತ್ತೀಚೆಗೆ ಕೆಲವು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಅವರ ಪತ್ನಿ ಹಾಗೂ ಅವರನ್ನು ಅವಮಾನಿಸಿದ್ದರು. ಅದರಲ್ಲಿ ಪ್ರಮುಖವಾಗಿ ಕಳೆದ ತಿಂಗಳು ಖಾಸಗಿ ವಾಹಿನಿಯ ಚರ್ಚೆಯಲ್ಲಿ ಭಾಗಿಯಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಹಲವು ಇಸ್ಲಾಮಿಕ್ ದೇಶಗಳು ಖಂಡನೆ ಮಾಡಿದ್ದವು. ಇದನ್ನೂ ಓದಿ: ಕಾಂಪೌಂಡ್ ಒಳಗಡೆ ನುಗ್ಗಿತು ಕಾರು

    bjP

    ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಲವು ಮಧ್ಯಪ್ರಾಚ್ಯ ರಾಷ್ಟ್ರಗಳು ಭಾರತದ ರಾಯಭಾರಿಗಳಿಗೆ ಸಮನ್ಸ್ ನೀಡಿದ್ದವು. ಕುವೈತ್ ಸೂಪರ್ ಮಾರ್ಕೆಟ್‍ನಿಂದ ಭಾರತದ ಉತ್ಪನ್ನಗಳನ್ನು ತೆಗೆದುಹಾಕಲಾಗಿತ್ತು. ಅಷ್ಟೇ ಅಲ್ಲದೇ ಇಂಡೋನೇಷ್ಯಾ ಸರ್ಕಾರದಿಂದ ಭಾರತದ ರಾಯಭಾರಿಗೆ ಸಮನ್ಸ್ ಸಹ ನೀಡಲಾಗಿತ್ತು. ಇದೀಗ ಅಲ್ ಖೈದಾ ದಾಳಿ ನಡೆಸುವುದಾಗಿ ಪತ್ರದ ಮೂಲಕ ಬೆದರಿಕೆ ಹಾಕಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್

  • ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ

    ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್‌ರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಒಳಗಾಗಿರುವ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತು ಮಾಡಿದೆ. ನೂಪುರ್ ಶರ್ಮಾ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಷೇಪಣೆಗೆ ಒಳಗಾಗಿದ್ದು ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಹ ಟ್ವೀಟ್ ಮಾಡಿದ್ದರು.

    ಪಾಕ್ ಪ್ರಧಾನಿಯ ಟ್ವೀಟ್‌ಗೆ ಭಾರತ ಸರ್ಕಾರ ತಿರುಗೇಟು ನೀಡಿದೆ. ಪಾಕಿಸ್ತಾನದ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡುವವರು ಮತ್ತೊಂದು ರಾಷ್ಟ್ರದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವುದರ ಕುರಿತು ಕಾಮೆಂಟ್ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಚರ್ಚ್‍ನಲ್ಲಿ ಹತ್ಯಾಕಾಂಡ – 50 ಮಂದಿಯನ್ನು ಗುಂಡಿಟ್ಟು ಕೊಂದ

    ಪಾಕಿಸ್ತಾನದಲ್ಲಿನ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಅಹ್ಮದೀಯರು ಸೇರಿದಂತೆ ಅಲ್ಪಸಂಖ್ಯಾತರ ವ್ಯವಸ್ಥಿತ ಕಿರುಕುಳಕ್ಕೆ ಜಗತ್ತೇ ಸಾಕ್ಷಿಯಾಗಿದೆ. ಹೀಗಿದ್ದೂ ಭಾರತದ ವಿರುದ್ಧ ಟೀಕೆ ಮಾಡುವುದು ಅಸಂಬದ್ಧ ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಂಕುಚಿತ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ – OICಗೆ ವಿದೇಶಾಂಗ ಇಲಾಖೆಯ ತಿರುಗೇಟು

    ನಮ್ಮ ಪ್ರೀತಿಯ ಪ್ರವಾದಿ ಬಗ್ಗೆ ಭಾರತದ ಬಿಜೆಪಿ ನಾಯಕರು ನೋವುಂಟು ಮಾಡುವ ಕಾಮೆಂಟ್‌ಗಳನ್ನು ನಾನು ಪ್ರಬಲವಾದ ಪದಗಳಲ್ಲಿ ಖಂಡಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಧಾರ್ಮಿಕ ಸ್ವಾತಂತ್ರ‍್ಯವನ್ನು ತುಳಿಯುತ್ತಿದೆ. ಮುಸ್ಲಿಮರನ್ನು ಹಿಂಸಿಸುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಜಗತ್ತು ಇದನ್ನು ಗಮನಿಸಬೇಕು ಮತ್ತು ಭಾರತದ ನಡೆಯನ್ನು ತೀವ್ರವಾಗಿ ಖಂಡಿಸಬೇಕು. ಪವಿತ್ರ ಪ್ರವಾದಿ ಅವರ ಮೇಲೆ ನಮ್ಮ ಪ್ರೀತಿ ಸರ್ವೋಚ್ಛವಾಗಿದೆ. ಎಲ್ಲಾ ಮುಸ್ಲಿಮರು ತಮ್ಮ ಪವಿತ್ರ ಪ್ರವಾದಿ ಪ್ರೀತಿ ಮತ್ತು ಗೌರವಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಬಹುದು ಎಂದು ಪಾಕ್‌ ಪ್ರಧಾನಿ ಷರೀಫ್ ಟ್ವೀಟ್ ಮಾಡಿದ್ದರು.

    ಇದಕ್ಕೆ ತಿರುಗೇಟು ನೀಡಿರುವ ಭಾರತ, ಪಾಕಿಸ್ತಾನದಲ್ಲಿ ಮತಾಂಧರನ್ನು ಪ್ರಶಂಸಿಸಲಾಗುತ್ತದೆ ಮತ್ತು ಅವರ ಗೌರವಾರ್ಥವಾಗಿ ಸ್ಮಾರಕಗಳನ್ನು ನಿರ್ಮಿಸಲಾಗುತ್ತದೆ. ಆದರೆ ಭಾರತದಲ್ಲಿ ಹಾಗಿಲ್ಲ. ಭಾರತ ಸರ್ಕಾರವು ಎಲ್ಲ ಧರ್ಮಗಳಿಗೆ ಅತ್ಯುನ್ನತ ಗೌರವ ನೀಡುತ್ತದೆ. ಇದು ಪಾಕಿಸ್ತಾನಕ್ಕಿಂತ ಭಿನ್ನವಾಗಿದೆ. ಭಾರತದಲ್ಲಿ ಕೋಮು ಸೌಹಾರ್ದತೆ ಹುಟ್ಟುಹಾಕುವ ಪ್ರಯತ್ನಿಸುತ್ತದೆ ಎಂದು ಹೇಳಿದ್ದಾರೆ.

    ಈ ರೀತಿಯ ಪ್ರಚಾರದಲ್ಲಿ ತೊಡಗುವ ಬದಲು ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮದ ಮೇಲೆ ಕೇಂದ್ರೀಕರಿಸಬೇಕು ಎಂದು ಕುಟುಕಿದ್ದಾರೆ.

  • ನೂಪುರ್ ಶರ್ಮಾ ವಿರುದ್ಧ ಕತಾರ್ ಕಿಡಿ – ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

    ನೂಪುರ್ ಶರ್ಮಾ ವಿರುದ್ಧ ಕತಾರ್ ಕಿಡಿ – ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

    ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆಯ ಬಳಿಕ ಇದೀಗ ಭಾರತ ಹಾಗೂ ಅರಬ್ ದೇಶಗಳ ಮಧ್ಯೆ ತಿಕ್ಕಾಟ ತಾರಕಕ್ಕೇರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಯ್‍ಕಾಟ್ ಕೂಗು ಕೇಳಿಬರುತ್ತಿದೆ.

    ನೂಪುರ್ ಶರ್ಮಾ, ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರಂಭಗೊಂಡ ವಿವಾದ ಬಳಿಕ ನೂಪುರ್ ಶರ್ಮಾರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸುವ ಮಟ್ಟಿಗೆ ಮುಂದುವರಿದಿತ್ತು. ಆ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ನೂಪುರ್ ಶರ್ಮಾ ಕೇವಲ ಉದಾಹರಣೆಯಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಮಾತನಾಡಿದ್ದಾರೆ. ಹೊರತು ಅವಹೇಳನಕಾರಿ ಮಾಡಿಲ್ಲ ಎಂದು ನೂಪುರ್ ಶರ್ಮಾರ ಹೇಳಿಕೆ ಪರ ಧ್ವನಿ ಕೇಳಿ ಬರುತ್ತಿದೆ. ಈ ನಡುವೆ ಅರಬ್ ದೇಶಗಳಾದ ಕತಾರ್, ಓಮನ್, ಸೌದಿ ಅರೇಬಿಯಾದಲ್ಲಿ ಭಾರತದಿಂದ ರಫ್ತಾಗುತ್ತಿರುವ ಸರಕುಗಳು ಸೇರಿದಂತೆ ಆಹಾರ ಉತ್ಪನ್ನಗಳನ್ನು ಖರೀದಿಸದಂತೆ ಬಾಯ್‍ಕಾಟ್ ಚಳವಳಿ ಆರಂಭವಾಗಿದೆ. ಈ ನಡುವೆ ಭಾರತದಲ್ಲಿ ಕಾರ್ಯಚರಿಸುತ್ತಿರುವ ಕತಾರ್ ಏರ್ವೇಸ್‍ಗೆ ಬಹಿಷ್ಕಾರ ಹಾಕಿ. ನಾವು ಅರಬ್ ದೇಶಗಳ ಯಾವುದೇ ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ ಎಂಬ ಅಭಿಯಾನ ಭಾರತದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

    https://twitter.com/ALoanIndian/status/1533486948161323008

    ಭಾರತೀಯರ ವಾದವೇನು?
    ನಮ್ಮ ಹಿಂದೂ ದೇವರುಗಳನ್ನು ಮಾತ್ರವಲ್ಲದೆ ನಮ್ಮ ಭಾರತ ಮಾತೆಯನ್ನು ಅವಮಾನಿಸಿದ ಎಂ.ಎಫ್ ಹುಸೇನ್‍ಗೆ ಕತಾರ್ ಪೌರತ್ವ ನೀಡಿದೆ. ಈ ಬಗ್ಗೆ ಕ್ಷಮೆಯಾಚಿಸಬೇಕು. ಹುಸೇನ್ ಭಾರತ ಮಾತೆಯ ನಗ್ನ ಚಿತ್ರಕಲೆ ಬಿಡಿಸಿ ಅವಮಾನ ಮಾಡಿದ್ದ ಅಂತವರಿಗೆ ಪೌರತ್ವ ನೀಡಿದೆ. ಆದರೆ ನೂಪುರ್ ಶರ್ಮಾ ಕೇವಲ ಉದಾಹರಣೆಗಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಆಡಿದ ಮಾತಿಗೆ ಈ ರೀತಿಯ ಪ್ರತಿಕಾರ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

    https://twitter.com/DivyaRajput060/status/1533737481798942722

    ಭಯೋತ್ಪಾದನೆಯ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಧನಸಹಾಯವನ್ನು ಸೌದಿ ಸ್ಥಗಿತಗೊಳಿಸಿದ ನಂತರ ಕತಾರ್ ಭಾರತದಲ್ಲಿ ಇಸ್ಲಾಮಿ ಭಯೋತ್ಪಾದನೆಯ ಪ್ರಮುಖ ಪ್ರಾಯೋಜಕವಾಗಿ ಹೊರಹೊಮ್ಮುತ್ತಿದೆ. ಕತಾರ್ ಮತ್ತು ಟರ್ಕಿ ಸೌದಿ ಅರೇಬಿಯಾವನ್ನು ವಿಶ್ವದ ಹೊಸ ಇಸ್ಲಾಮಿಸ್ಟ್ ನಾಯಕನಾಗಿ ಬದಲಾಯಿಸುವ ಕಾರ್ಯಕ್ಕೆ ಮುಂದಾಗುತ್ತಿದೆ. ಇದನ್ನೂ ಓದಿ: ಹಿಂದಿ ಹಿಂದುಳಿದ ರಾಜ್ಯಗಳ ಭಾಷೆ, ಇದು ಶೂದ್ರರಿಗೆ ಮಾತ್ರ: ಡಿಎಂಕೆ ಸಂಸದ

    https://twitter.com/Ajay67525201/status/1533713285618421761

    ಗಲ್ಫ್ ದೇಶಗಳ ಪ್ರಮುಖ ಆದಾಯದ ಮೂಲ ಪ್ರವಾಸೋದ್ಯಮ. ನಮ್ಮ ದೇಶದ ವಿಚಾರಕ್ಕೆ ತಲೆ ಹಾಕಿದ್ದಕ್ಕೆ ಅಲ್ಲಿನ ವಿಮಾನ ಸೇವೆಯ ಬಳಸಬಾರದು. ಜೊತೆ ಆ ದೇಶಗಳಿಗೆ ಪ್ರವಾಸ ಹೋಗುವುದನ್ನು ನಿಲ್ಲಿಸಬೇಕು ಎಂಬ ಮಾತು ಕೇಳಿಬರುತ್ತಿದೆ.