Tag: protect

  • ರೈಲಿನಿಂದ ಬಿದ್ದ ಪ್ರಯಾಣಿಕನ ರಕ್ಷಣೆ

    ರೈಲಿನಿಂದ ಬಿದ್ದ ಪ್ರಯಾಣಿಕನ ರಕ್ಷಣೆ

    ಕಾರವಾರ: ರೈಲ್ವೆ ಬೋಗಿಯಿಂದ ರೈಲಿನ ಅಡಿಭಾಗಕ್ಕೆ ಆಯಾ ತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

    ರೈಲ್ವೆ ಸಿಬ್ಬಂದಿ ನರೇಶ್ ರಕ್ಷಣೆ ಮಾಡಿದ ವ್ಯಕ್ತಿ. ಬೆಂಗಳೂರು ಮೂಲದ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ.ದೇಸಾಯಿ (59) ರಕ್ಷಣೆಗೊಳಗಾದ ವ್ಯಕ್ತಿಯಾಗಿದ್ದಾರೆ. ಪ್ಲಾಟ್‍ಫಾರಂ ಒಂದರಲ್ಲಿ ಲಗೇಜು ತೆಗೆದುಕೊಳ್ಳಲು ಟ್ರೈನ್‍ನಿಂದ ದೇಸಾಯಿ ಅವರು ಇಳಿಯುವಾಗ ಟ್ರೈನ್ ಹೊರಟಿದ್ದರಿಂದ ಆಯಾತಪ್ಪಿ ಬಿದ್ದಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಇವರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ಚಿಕ್ಕಪುಟ್ಟ ಗಾಯವಾಗಿದ್ದ ಅವರನ್ನು ಪ್ರಥಮ ಚಿಕಿತ್ಸೆ ಕೊಡಿಸಿ ರೈಲ್ವೆ ಇನ್ಸ್‍ಪೆಕ್ಟರ್ ನೀಲೇಶ್ ದುಬೆ ಅವರ ಸಹಾಯದಿಂದ ಮತ್ತೊಂದು ಟ್ರೈನ್ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ರೈಲ್ವೆ ಇಲಾಖೆ ಸಿಬ್ಬಂದಿ ಕಳುಹಿಸಿಕೊಟ್ಟಿದ್ದಾರೆ. ರಕ್ಷಣೆ ಮಾಡಿದ ವೀಡಿಯೋವನ್ನು ಕೊಂಕಣ ರೈಲ್ವೆ ಇಲಾಖೆ ಬಿಡುಗಡೆಗೊಳಿಸಿ ಪ್ರಯಾಣಿಕರು ಜಾಗೃತಿ ಇರುವಂತೆ ಕೋರಿದ್ದಾರೆ. ಇದನ್ನೂ ಓದಿ: ರಾಜ್ಯದ ಕೋವಿಡ್ ವಾರ್ ರೂಮ್​ಗೆ ರಾಷ್ಟ್ರ ಪ್ರಶಸ್ತಿ

  • ರಾಯಚೂರಿನಲ್ಲಿ ಅಧಿಕಾರಿಗಳಿಂದ ದಾಳಿ – 22 ಬಾಲಕಾರ್ಮಿಕರ ರಕ್ಷಣೆ

    ರಾಯಚೂರಿನಲ್ಲಿ ಅಧಿಕಾರಿಗಳಿಂದ ದಾಳಿ – 22 ಬಾಲಕಾರ್ಮಿಕರ ರಕ್ಷಣೆ

    ರಾಯಚೂರು: ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ 22 ಬಾಲಕಾರ್ಮಿಕರನ್ನು ಮಕ್ಕಳ ರಕ್ಷಣಾ ಘಟಕ, ಆರ್‌ಟಿಓ ಸೇರಿ ಅಧಿಕಾರಿಗಳ ತಂಡ ರಕ್ಷಿಸಿದ್ದಾರೆ.

    ಇಂದು ಅಧಿಕಾರಿಗಳು ರಾಯಚೂರು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ 22 ಮಕ್ಕಳನ್ನು ರಕ್ಷಿಸಿದ್ದಾರೆ. ಪ್ರಕರಣ ಸಂಬಂಧಿಸಿ ಕೂಲಿ ಕೆಲಸಕ್ಕೆ ಮಕ್ಕಳನ್ನು ಗೂಡ್ಸ್ ವಾಹನಗಳಲ್ಲಿ ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

     

    ಹತ್ತಿ ಬಿಡಿಸುವುದು ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಮಕ್ಕಳನ್ನು ಜಮೀನುಗಳಿಗೆ ಕರೆದೊಯ್ಯಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ಕು ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಂಜುನಾಥ ರೆಡ್ಡಿ, ಆರ್ ಟಿ ಓ ಕೃಷ್ಣ ಮೂರ್ತಿ, ಮಕ್ಕಳ ಸಹಾಯವಾಣಿ ಅಧಿಕಾರಿ ತಾಯಿ ರಾಜ್, ರವಿಕುಮಾರ್ ಸೇರಿ 5 ಅಧಿಕಾರಿಗಳು ದಾಳಿ ನಡೆಸಿದ ತಂಡದಲ್ಲಿದ್ದರು. ನಂತರ ರಕ್ಷಿಸಿದ ಬಾಲ ಕಾರ್ಮಿಕರನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

  • ಬೆಣ್ಣೆ ನಗರಿ ಮಹಿಳೆಯರ ರಕ್ಷಣೆಗೆ ಸಜ್ಜಾಗಿದೆ ಖಾಕಿ ಪಡೆ

    ಬೆಣ್ಣೆ ನಗರಿ ಮಹಿಳೆಯರ ರಕ್ಷಣೆಗೆ ಸಜ್ಜಾಗಿದೆ ಖಾಕಿ ಪಡೆ

    ದಾವಣಗೆರೆ: ಜಿಲ್ಲೆಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಪೊಲೀಸ್ ಇಲಾಖೆಯು ಹಲವು ಯೋಜನೆಗಳಡಿ 24×7 ಕಾರ್ಯನಿರ್ವಹಿಸಲಿದೆ ಎಂದು ದಾವಣಗೆರೆಯ ಎಸ್.ಪಿ ಹನುಮಂತರಾಯ ತಿಳಿಸಿದರು.

    ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದರಿಂದ ನಗರ ಹಾಗೂ ತಾಲೂಕುಗಳಲ್ಲಿ ಪೊಲೀಸ್ ಗಸ್ತು ವಾಹನ ರಾತ್ರಿ 11 ಗಂಟೆಯಿಂದ ಬೆಳಗ್ಗಿನ ಜಾವ 4 ಗಂಟೆಯವೆರೆಗೆ ಸಂಚರಿಸುತ್ತದೆ. ನಗರದಲ್ಲಿ 7 ಪಿಸಿಆರ್ ವಾಹನಗಳು, 14 ಚೀತಾ ವಾಹನಗಳು (ಮೋಟಾರ್ ಸೈಕಲ್) ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ 7 ಗಸ್ತುವಾಹನಗಳು ಕಾರ್ಯನಿರ್ವಹಿಸಲಿವೆ. ಈ ವಾಹನಗಳು ಜಿಪಿಎಸ್ ವ್ಯವಸ್ಥೆ ಹೊಂದಿದ್ದು, ತೊಂದರೆಯಲ್ಲಿರುವ ಮಹಿಳೆಯರನ್ನು ರಕ್ಷಿಸಲು ಅನುಕೂಲವಾಗಲಿದೆ ಎಂದರು.

    ರಾತ್ರಿ ಸಮಯದಲ್ಲಿ ಮಹಿಳೆಯರು ತೊಂದರೆಯಲ್ಲಿದ್ದಾಗ, ಮನೆಗೆ ತಲುಪಲು ಸಮಸ್ಯೆಯಾದಾಗ ತಕ್ಷಣ ಜಿಲ್ಲಾ ಪೊಲೀಸ್ ಸಹಾಯವಾಣಿ ಮೊ.ನಂ:9480803200, ಸ್ಥಿರ ದೂರವಾಣಿ 08192-253100, 08192-262699 ಹಾಗೂ ಎಮರ್ಜೆನ್ಸಿ ರಿಜಿಸ್ಟ್ರೇಷನ್ ಸಿಸ್ಟಮ್ ನಂ. 112/100 ಗೆ ಕರೆ ಮಾಡಿ ಜಿಲ್ಲಾ ಪೊಲೀಸರ ಸಹಾಯ ಪಡೆಯಬಹುದು. ಈಗಾಗಲೇ ಜಿಲ್ಲಾ ನಿಸ್ತಂತು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊಬೈಲ್ ನಂಬರ್‍ಗಳು, ಸ್ಥಿರ ದೂರವಾಣಿ ಸಂಖ್ಯೆಗಳೂ ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಚುರುಕಾಗಿ ಕಾರ್ಯನಿರ್ವಹಿಸಲು ಒತ್ತು ನೀಡಲಾಗುವುದು ಎಂದರು.

    ಸಹಾಯವಾಣಿಗೆ ಬರುವ ಕರೆಗಳನ್ನು ಸ್ವೀಕರಿಸುವ ಕಂಟ್ರೋಲ್ ರೂಮ್ ಸಿಬ್ಬಂದಿಯವರು ತಕ್ಷಣವೇ ಆ ಮಾಹಿತಿಯನ್ನು ರಾತ್ರಿ ಕರ್ತವ್ಯದಲ್ಲಿರುವ ಪೊಲೀಸರಿಗೆ ರವಾನಿಸುತ್ತಾರೆ. ತಕ್ಷಣ ಪೊಲೀಸರು ವಾಹನದೊಂದಿಗೆ ನಿರ್ದಿಷ್ಟ ಸ್ಥಳ ತಲುಪಿ ಕಾರ್ಯ ಪ್ರವೃತ್ತರಾಗುತ್ತಾರೆ. ನಗರದಲ್ಲಿ ಗಸ್ತು ಮಾಡುವ ಪೊಲೀಸರು ನಗರದ ಯಾವುದೇ ಪ್ರದೇಶದಿಂದ ನೆರವು ಕೋರಿ ಬಂದರೂ ಕೆಲವೇ ನಿಮಿಷಗಳಲ್ಲಿ ಆ ಸ್ಥಳ ತಲುಪಿ ಸಹಾಯ ಮಾಡುವರು ಎಂದರು.

    ಆ್ಯಪ್ ಸೌಲಭ್ಯ:
    ಪೊಲೀಸ್ ಇಲಾಖೆಯು ಮಹಿಳೆಯರ ರಕ್ಷಣೆಗಾಗಿ ಕೆಎಸ್‍ಪಿ ಎಂಬ ಆ್ಯಪ್ ಪರಿಚಯಿಸಿದ್ದು, ಈ ಆ್ಯಪನ್ನು ಇನ್‍ಸ್ಟಾಲ್ ಮಾಡಿಕೊಂಡು ತ್ವರಿತ ನೆರವು ಪಡೆಯಬಹುದು. ಇದರಲ್ಲಿ ನಿಮಗೆ ಹತ್ತಿರವಿರುವ ಪೊಲೀಸ್ ಠಾಣೆ ಹಾಗೂ ಅಗತ್ಯ ದೂರವಾಣಿ ಸಂಖ್ಯೆಗಳು ಲಭ್ಯವಿರುತ್ತವೆ. ಇದರಲ್ಲಿ ಜಿಪಿಎಸ್ ಸೌಲಭ್ಯವಿದ್ದು, ನಿಮಗೆ ಸೂಕ್ತವೆನಿಸಿದ 5 ಜನರ ನಂಬರನ್ನು ಸೇವ್ ಮಾಡಿಕೊಳ್ಳಬೇಕು. ಹೀಗೆ ಮಾಡಿದ್ದಲ್ಲಿ ನೀವು ಒಮ್ಮೆ ಕರೆ ಅಥವಾ ಮೆಸೇಜ್ ಮಾಡಿದರೆ ಆ 5 ಜನರಿಗೂ ಮಾಹಿತಿ ತಿಳಿಯುತ್ತದೆ. ಇದು ಮಹಿಳೆಯರ ರಕ್ಷಣೆಗೆ ಉತ್ತಮವಾದ ಆ್ಯಪ್ ಆಗಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

    ಬೆಳಗ್ಗಿನ ಜಾವದಲ್ಲಿ ಗುಡ್ ಮಾರ್ನಿಂಗ್ ಬೀಟ್ ಎಂಬ ತಂಡ ಅಪರಾಧ ತಡೆ ಮತ್ತು ಮಹಿಳೆಯರ ಸುರಕ್ಷತೆಗಾಗಿ ಕಾರ್ಯ ನಿರ್ವಹಿಸಲಿದೆ. ಚೈನ್ ಸ್ನಾಚಿಂಗ್ ತಡೆಯುವುದು ಇದರ ಪ್ರಮುಖ ಉದ್ದೇಶವಾಗಿದೆ. ನಗರದಲ್ಲಿ ಮಹಿಳೆಯರ ರಕ್ಷಣೆಗಾಗಿ ದುರ್ಗಪಡೆ ರಚಿಸಿದ್ದು, ಈ ಪಡೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಲಾಗಿದೆ. ಕಾಲೇಜ್, ಬಸ್‍ಸ್ಟ್ಯಾಂಡ್, ಶಾಪಿಂಗ್ ಮಾಲ್, ಚಿತ್ರಮಂದಿರಗಳು ಹಾಗೂ ಲೇಡಿಸ್ ಹಾಸ್ಟೆಲ್‍ನಂತಹ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಾರೆ.

    ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಆತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯು ಈ ಎಲ್ಲಾ ಯೋಜನೆಗಳ ಮೂಲಕ ಮಹಿಳೆಯರಿಗೆ ರಕ್ಷಣೆ ಒದಗಿಸುವ ಕೆಲಸ ಮಾಡಲಿದೆ. ಈ ಎಲ್ಲಾ ಸಹಾಯವಾಣಿಗಳು 24×7  ಕಾರ್ಯನಿರ್ವಹಿಸಲಿದ್ದು, ಮಹಿಳೆಯರು ಈ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ಎಸ್ ಪಿ ಹನುಮಂತರಾಯ ವಿವರಿಸಿದರು.

  • ತಂತಿ ಉರುಳಿಗೆ ಸಿಲುಕಿದ್ದ ನವಿಲಿನ ರಕ್ಷಣೆ

    ತಂತಿ ಉರುಳಿಗೆ ಸಿಲುಕಿದ್ದ ನವಿಲಿನ ರಕ್ಷಣೆ

    ಚಿತ್ರದುರ್ಗ: ಬೇಟೆಗಾರರ ತಂತಿ ಉರುಳಿಗೆ ಸಿಲುಕಿ ಪರದಾಡುತ್ತಿದ್ದ ನವಿಲನ್ನು ಚಿತ್ರದುರ್ಗದಲ್ಲಿ ರಕ್ಷಣೆ ಮಾಡಲಾಗಿದೆ.

    ಚಿತ್ರದುರ್ಗ ಹೊರವಲಯದ ಜೋಗಿಮಟ್ಟಿ ಅರಣ್ಯ ಸಮೀಪದ ಜಮೀನಿನಲ್ಲಿ ಬೇಟೆಗಾಗಿ ಹಾಕಿದ್ದ ತಂತಿಯಲ್ಲಿ ಸಿಲುಕಿ ನವಿಲು ಪ್ರಾಣಾಪಾಯದಲ್ಲಿತ್ತು. ನವಿಲು ಒದ್ದಾಡುತ್ತಿರುವುದನ್ನು ವಾಯುವಿಹಾರಿಗಳು ಗನಿಸಿದ್ದಾರೆ. ಅಲ್ಲದೇ ಅದನ್ನು ರಕ್ಷಣೆ ಮಾಡುವ ಮೂಲಕ ನಮ್ಮ ರಾಷ್ಟ್ರೀಯ ಪಕ್ಷಿಯ ಜೀವ ಉಳಿಸಿದ್ದಾರೆ. ಬಳಿಕ ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

    ಜೋಗಿಮಟ್ಟಿ ಅರಣ್ಯ ಪ್ರದೇಶ ನವಿಲುಗಳ ಆವಾಸಸ್ಥಾನವಾಗಿದೆ. ಆದ್ರೆ ಇದೀಗ ನೀರು, ಆಹಾರ ಅರಸಿ ಕಾಡು ಪ್ರಾಣಿ-ಪಕ್ಷಿಗಳು ನಗರ ಪ್ರದೇಶದತ್ತ ಬರುತ್ತಿದ್ದು, ಬೇಟೆಗಾರರ ಬಲೆಗೆ ಸಿಲುಕಿ ಅವನತಿಯತ್ತ ಸಾಗುತ್ತಿದೆ ಅನ್ನೋ ಆರೋಪ ಕೇಳಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿಮಪಾತದಿಂದ 140 ಮಂದಿಯನ್ನು ರಕ್ಷಿಸಿದ ಸೇನೆ

    ಹಿಮಪಾತದಿಂದ 140 ಮಂದಿಯನ್ನು ರಕ್ಷಿಸಿದ ಸೇನೆ

    ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತ ಮತ್ತು ಮಳೆಯಾಗುತ್ತಿದ್ದು, ಸೇನೆ ಮತ್ತು ಪೊಲೀಸರು ಸುಮಾರು 140 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

    ಭಾರೀ ಹಿಮಪಾತದಿಂದಾಗಿ ಪೂಂಚ್ ಜಿಲ್ಲೆಯ ಮುಘಲ್ ರಸ್ತೆಯ ಬಳಿ ಸಿಲುಕಿಕೊಂಡಿದ್ದ 140 ಮಂದಿಯನ್ನು ಪೊಲೀಸರು ಮತ್ತು ಸೈನಿಕರು ಶುಕ್ರವಾರ ರಾತ್ರಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಷ್ಟೇ ಅಲ್ಲದೇ ರಕ್ಷಿಸಿದ ಜನರನ್ನು ಸುರಣ್‍ಕೋಟ್‍ನಲ್ಲಿರುವ ಸೇನಾ ಶಿಬಿರಕ್ಕೆ ಕರೆತಂದಿದ್ದಾರೆ. ಅಲ್ಲಿಯೇ ಸಂತ್ರಸ್ತರಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ.

    ಶುಕ್ರವಾರದಿಂದಲೂ ಜಮ್ಮು ಮತ್ತು ಕಾಶ್ಮೀರದ ಅನೇಕ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಹಿಮ ಸುತ್ತಲೂ ಆವರಿಸಿಕೊಂಡಿವೆ. ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಶುಕ್ರವಾರದಿಂದಲೇ ಭಾರೀ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದ ಅನೇಕ ಜಿಲ್ಲೆಗಳಲ್ಲೂ ಹಿಮಾಪಾತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಯಿಗಳಿಂದ ನವಜಾತ ಶಿಶುವನ್ನು ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳು!

    ನಾಯಿಗಳಿಂದ ನವಜಾತ ಶಿಶುವನ್ನು ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳು!

    ನವದೆಹಲಿ: ಸಂಚಾರ ಪೊಲೀಸ್ ಅಧಿಕಾರಿಗಳು ರಸ್ತೆಯ ಬಳಿ ಇದ್ದ ಪೊದೆಯಲ್ಲಿ ಬಿದ್ದಿದ್ದ ನವಜಾತ ಶಿಶುವಿನ ಸುತ್ತ ಸುತ್ತುವರಿದ್ದಿದ್ದ ನಾಯಿಗಳಿಂದ ಮಗುವನ್ನು ರಕ್ಷಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.

    ಅನಿಲ್, ಅಮರ್ ಸಿಂಗ್ ಮತ್ತು ಪರ್ವೀನ್ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳಾಗಿದ್ದು, ಇವರು ಆರ್.ಕೆ ಖನ್ನಾ ಟೆನಿಸ್ ಕ್ರೀಡಾಂಗಣದ ಸಮೀಪ ಸಂಚಾರವನ್ನು ನಿಯಂತ್ರಿಸುತ್ತಿದ್ದರು. ಈ ಮೂವರು ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಮಗುವನ್ನು ರಕ್ಷಿಸಿದ್ದಾರೆ.

    ಘಟನೆ ವಿವರ:
    ಮೂವರು ಅವಿಭಾಜ್ಯ ಪೊಲೀಸ್ ಅಧಿಕಾರಿಗಳಾಗಿ ಆಫ್ರಿಕಾ ಅವಿನ್ಯೂ ರಸ್ತೆಯ ಬಳಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಅಲ್ಲೇ ರಸ್ತೆಯ ಬಳಿ ಇದ್ದ ಪೊದೆಯಲ್ಲಿ ನವಜಾತ ಶಿಶುವಿನ ಅಳು ಕೇಳಿಸುತ್ತಿದೆ. ಮಗುವಿನ ಅಳು ಆಲಿಸಿದ ಪೊಲೀಸರು ಸ್ಥಳಕ್ಕೆ ಬಂದಾಗ ಕಂದಮ್ಮನ ಸುತ್ತ ನಾಯಿಗಳು ಸುತ್ತುವರಿದಿದ್ದವು. ಅದನ್ನು ಕಂಡು ಗಾಬರಿಗೊಂಡ ಪೊಲೀಸರು ನಾಯಿಗಳಿಂದ ಮಗುವನ್ನು ರಕ್ಷಿಸಿದ್ದಾರೆ.

    ಘಟನೆಯ ಬಳಿಕ ಸಂಚಾರ ಅಧಿಕಾರಿಗಳು ತಕ್ಷಣವೇ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿದರು. ಬಳಿಕ ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆತಂದರು. ಸದ್ಯಕ್ಕೆ ಮಗು ಆರೋಗ್ಯವಾಗಿದೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    ಈ ಘಟನೆಗೆ ಸಂಬಂಧಪಟ್ಟಂತೆ ಐಪಿಸಿ ಸೆಕ್ಷನ್ 317 ರ ಅಡಿಯಲ್ಲಿ ಸಫ್ದರ್ಜಂಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನೆಯ ಮೇಲ್ಛಾವಣಿಯಲ್ಲಿ ವಾಸವಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ

    ಮನೆಯ ಮೇಲ್ಛಾವಣಿಯಲ್ಲಿ ವಾಸವಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ

    ಚಿಕ್ಕಮಗಳೂರು: ಕಳೆದ ಮೂರು ದಿನದಿಂದ ಮನೆಯ ಚಾವಣಿಯಲ್ಲಿ ವಾಸವಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಮೂಡಿಗೆರೆಯ ಆಲೆಖಾನ್ ಹೊರಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಗಿರೀಶ್ ಎಂಬವರ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಕಾಳಿಂಗ ಸರ್ಪ ವಾಸವಿದ್ದು, ಕೆರೆ ಹಾವು ನುಂಗಿ ಕಾರಣ ಬೇರೆಡೆ ತೆರಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ವೇಳೆ ಕಾಳಿಂಗ ಸರ್ಪ ನೋಡಿ ಭಯಗೊಂಡ ಮನೆ ಮಾಲೀಕ ಗಿರೀಶ್ ಉರಗ ತಜ್ಞ ಸ್ನೇಕ್ ನರೇಶ್ ಅವರಿಗೆ ಮಾಹಿತಿ ನೀಡಿದ್ದಾರೆ.

    ಗಿರೀಶ್ ಅವರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಉರಗ ತಜ್ಞ ಸ್ನೇಕ್ ನರೇಶ್ ಸ್ಥಳಕ್ಕೆ ಬಂದು ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ಸತತ ಒಂದು ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಮನೆಯ ಚಾವಣೆಯಲ್ಲಿದ್ದ ಕಾಳಿಂಗ ಸರ್ಪವನ್ನು ಬಿದಿರಿನ ಮೂಲಕ ಕೆಳಗೆ ಬೀಳಿಸಿ, ಬಳಿಕ ಸೆರೆ ಹಿಡಿಯುವ ಸಂದರ್ಭದಲ್ಲಿ ಕಾಳಿಂಗ ಸರ್ಪ ನುಂಗಿದ ಹಾವನ್ನು ಹೊರ ಹಾಕಲು ಯತ್ನಿಸಿ ಸಾಧ್ಯವಾಗದೆ ತಪ್ಪಿಸಿಕೊಳ್ಳು ಯತ್ನಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ವಿಜಯಕುಮಾರ್ ಹಾಗೂ ಸುರೇಶ್ ನೇತೃತ್ವದಲ್ಲಿ ಕಾಳಿಗ ಸೆರೆ ಹಿಡಿಯಲಾಯಿತು. ಸದ್ಯ ಸೆರೆ ಹಿಡಿರುವ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ನೇತೃತ್ವದಲ್ಲಿ ಚಾರ್ಮಾಡಿ ಕಾಡಿಗೆ ಬಿಡಲಾಗಿದೆ. ಸದ್ಯ ಸರ್ಪದ ರಕ್ಷಣೆಯಿಂದ ಮನೆಯ ಮಾಲೀಕ ಗೀರಿಶ್ ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದಾರೆ.