https://youtu.be/8zc9rY26HzM
Tag: protest
-

ಕೆಲಸದಿಂದ ವಜಾ, ಉದ್ಯೋಗದಲ್ಲಿ ಅಭದ್ರತೆ ವಿರೋಧಿಸಿ ಮೊದಲ ಬಾರಿಗೆ ಬೀದಿಗಿಳಿದ ಟೆಕ್ಕಿಗಳು
ಬೆಂಗಳೂರು: ಇಂದು ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಐಟಿ ಉದ್ಯೋಗಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾರಣವಿಲ್ಲದೆ ಟೆಕ್ಕಿಗಳನ್ನು ಕೆಲಸದಿಂದ ವಜಾ ಮಾಡುವುದು ಹಾಗೂ ಉದ್ಯೋಗದಲ್ಲಿ ಅಭದ್ರತೆ ವಿರೋಧಿಸಿ ಟೆಕ್ಕಿಗಳು ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅಮೆರಿಕ ಹಾಗೂ ಬೇರೆ ದೇಶದಿಂದ ಬಂದ ಐಟಿ ಇಂಡಸ್ಟ್ರಿಗಳು ಚೆನ್ನಾಗಿ ದುಡ್ಡು ಮಾಡಿಕೊಡಂವು. ಈಗ ಟಾರ್ಗೆಟ್ ರೀಚ್ ಆಗಿಲ್ಲ ಅನ್ನುವ ಕಾರಣ ಮುಂದಿಟ್ಟು ಕೆಲಸದಿಂದ ವಜಾ ಮಾಡುತ್ತಿದ್ದಾರೆ ಅಂತಾ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಕಾರ್ಮಿಕ ಸಚಿವ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಪ್ರೋ, ಐಬಿಎಂ, ಇನ್ಫೋಸಿಸ್, ಟೆಕ್ ಮಹೀಂದ್ರ, ಎಲ್ಎನ್ಎಟಿ ಸೇರಿದಂತೆ ನಾನಾ ಐಟಿ ಇಂಡಸ್ಟ್ರಿಯ ಉದ್ಯೋಗಿಗಳು ಭಾಗಿಯಾಗಿದ್ದರು.
ಈಗಾಗಲೇ ಬೆಂಗಳೂರಿನಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕಿಂತಲೂ ಅಧಿಕ ಐಟಿ ಉದ್ಯೋಗಿಗಳನ್ನು ಕೆಲ್ಸದಿಂದ ವಜಾ ಮಾಡಲಾಗಿದೆ.



-

ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್ನ ಸಿಸಿಟಿವಿ ದೃಶ್ಯ ಬಿಡುಗಡೆ
ಮಂಗಳೂರು: ಕೋಮು ಗಲಭೆಯಿಂದ ಹೊತ್ತಿ ಉರಿದಿದ್ದ ಮಂಗಳೂರಿನಲ್ಲಿ ಮತ್ತೊಂದು ನಿಗೂಢ ಸಾವು ಹಲವು ಅನುಮಾನ, ವಿವಾದಗಳಿಗೆ ಕಾರಣವಾಗಿದೆ. ಶಿಕ್ಷಣಕ್ಕೆ ಹೆಸರಾದ ಆಳ್ವಾಸ್ ಸಂಸ್ಥೆಯಲ್ಲಿ ಬ್ಯಾಡ್ಮಿಂಟನ್ ವಿದ್ಯಾರ್ಥಿನಿ ಕಾವ್ಯಶ್ರೀ ಸಾವು ಹತ್ತು ಹಲವು ಪ್ರಶ್ನೆಗಳನ್ನು ಎತ್ತಿದೆ.
ಈ ನಡುವೆ ವಿದ್ಯಾರ್ಥಿನಿ ಸಾವಿನ ನ್ಯಾಯಾಕ್ಕಾಗಿ ಇದೀಗ ಪ್ರತಿಭಟನೆಗಳು ಆರಂಭಗೊಂಡಿವೆ. ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರಿನ ನೆಹರೂ ಮೈದಾನದಲ್ಲಿ ಮೊಂಬತ್ತಿ ಉರಿಸಿ ಮೌನ ಪ್ರತಿಭಟನೆ ನಡೆಸಿತು. ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ, ಸಾವಿನ ತನಿಖೆಯನ್ನು ಸರಿಯಾಗಿ ನಡೆಸಬೇಕೆಂದು ಒತ್ತಾಯಿಸಿದ್ರು.

ಅಲ್ಲದೇ ಕಾವ್ಯಾ ಸಾವಿನಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಕೈವಾಡ ಇರೋ ಆರೋಪ ಕೇಳಿಬಂದಿದ್ರಿಂದ ಮಂಪರು ಪರೀಕ್ಷೆ ಮಾಡಬೇಕೆಂದು ಒತ್ತಾಯಿಸಿದ್ರು. ಇನ್ನು ಕಾವ್ಯಾ ನಿಗೂಢ ಸಾವಿನ ತನಿಖೆಯನ್ನು ಸೂಕ್ತವಾಗಿ ನಡೆಸಬೇಕೆಂದು ಪಿಎಫ್ಐ ಕಾರ್ಯಕರ್ತರು ಮೂಡಬಿದ್ರೆಯಲ್ಲಿ ಪ್ರತಿಭಟನೆ ನಡೆಸಿದ್ರು. ಇಷ್ಟೇ ಅಲ್ಲ ದೂರದ ಬಹರೈನ್ನಲ್ಲೂ ಪ್ರತಿಭಟನೆ ನಡೆದಿದ್ದು, ಇಂಡಿಯನ್ ಸೋಷಿಯಲ್ ಫೋರಂ ಕರ್ನಾಟಕ ರಿಫಾ ಘಟಕ ಪ್ರಕರಣದ ಸೂಕ್ತ ತನಿಖೆಗೆ ಒತ್ತಾಯಿಸಿದೆ.

ಕಾವ್ಯ ಸಾವು ಸಹಜವೋ? ಕೊಲೆಯೋ? ಎಂಬ ಪ್ರಶ್ನೆ ಮೂಡಿದ್ದು, ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆನ್ನಲ್ಲೇ ಆಳ್ವಾಸ್ ಶಿಕ್ಷಣ ಸಂಸ್ಥೆ ಜುಲೈ 20ರ ಹಾಸ್ಟೆಲ್ನ ಸಿಸಿಟಿವಿ ದೃಶ್ಯವನ್ನ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?
ದೃಶ್ಯ 1: ಬೆಳಗ್ಗೆ 6.03ಕ್ಕೆ ಕಾಲೇಜಿನ ಆವರಣದಲ್ಲಿ ಓಡಾಟ

ದೃಶ್ಯ 2: ಬೆಳಗ್ಗೆ 6.42ಕ್ಕೆ ಮೈದಾನದಲ್ಲಿ ಬ್ಯಾಡ್ಮಿಂಟನ್ ಆಟ

ದೃಶ್ಯ 3: ಬೆಳಗ್ಗೆ 9.48ಕ್ಕೆ ಶಾಲೆಗೆ ಬಂದಿದ್ದು

ಮಧ್ಯಾಹ್ನ 3.34ಕ್ಕೆ ಶಾಲೆಯಿಂದ ಹೋಗುತ್ತಿರುವುದು

https://www.youtube.com/watch?v=RoCUPTp54LM
ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರೋ ಮೂಡಬಿದಿರೆಯ ಆಳ್ವಾಸ್ನ 10 ತರಗತಿ ವಿದ್ಯಾರ್ಥಿನಿ ಕಾವ್ಯಶ್ರೀ ಜುಲೈ 20ರಂದು ನಿಗೂಢವಾಗಿ ಸಾವನ್ನಪ್ಪಿದ್ರು. ಸ್ಪೋಟ್ರ್ಸ್ ಕೋಟಾದಲ್ಲಿ ಸೀಟ್ ಪಡೆದಿದಿದ್ದ ಕಾವ್ಯ, ಬ್ಯಾಡ್ಮಿಂಟನ್ನಲ್ಲಿ ನ್ಯಾಷನಲ್ ಲೆವೆಲ್ ಚಾಂಪಿಯನ್ ಆಗಿದ್ರು. ಮಗಳು ಕಾವ್ಯ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ ಆಳ್ವಾಸ್ ಮಾತ್ರ ದನ್ನ ಅಲ್ಲಗಳೀತಿದೆ. ಇದರ ಮಧ್ಯೆ ಜುಲೈ 20ರಂದು ಶಾಲೆಗೆ ಬಂದಿದ್ದ ಕಾವ್ಯ, ಬ್ಯಾಡ್ಮಿಂಟನ್ ಆಡಿರೋದೆಲ್ಲಾ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಕಟೀಲು ನಿವಾಸಿಯಾಗಿರೋ ಕಾವ್ಯ ಪೋಷಕರು ಕಾಲೇಜಿನಲ್ಲೇ ಕೊಲೆ ಮಾಡಲಾಗಿದೆ ಅಂತ ಆರೋಪಿಸಿದ್ರು.
ಸಾಯುವ ಮೊದಲ ದಿನ ಸಂತೋಷದಿಂದ ಮಾತನಾಡಿದವಳು, ನಾಳೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಟ್ರೈನಿಂಗ್ ಬರಲು ಪಿಟಿ ಮೇಷ್ಟ್ರು ಪ್ರವೀಣ್ ತಿಳಿಸಿದ್ದಾರೆ ಅಂತ ಹೇಳಿದ್ದಳು. ಆದ್ರೆ ಆತ್ಮಹತ್ಯೆ ಮಾಡಿಕೊಂಡಳು ಅಂದ್ರೆ ನಂಬೋದಿಕ್ಕೆ ಆಗತ್ತಾ ಅಂತ ಕಾವ್ಯಾ ತಾಯಿ ಬೇಬಿ ಮತ್ತು ತಂದೆ ಲೋಕೇಶ್ ಪ್ರಶ್ನೆ ಮಾಡ್ತಿದ್ದಾರೆ. ಮಂಗಳೂರು ಕಮಿಷನರ್ಗೂ ಕಂಪ್ಲೆಂಟ್ ಕೊಟ್ಟಿದ್ದಾರೆ.
ಈ ನಡುವೆ ಕಾವ್ಯ ಸಾವು ಹಲವು ಪ್ರಶ್ನೆ ಹುಟ್ಟಿಹಾಕಿದೆ:
* ಹಾಸ್ಟೆಲ್ನೊಳಗೆ ನೇಣು ಹಾಕಲು ಸೀರೆ ಸಿಕ್ಕಿದ್ದು ಹೇಗೆ..?
* ಹೆತ್ತವರು ಬರುವ ಮೊದಲೇ ಮೃತದೇಹವನ್ನ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು ಯಾಕೆ..?
* ಟ್ರಾಕ್ ಸೂಟ್ನಲ್ಲೇ ಮೃತದೇಹ ಇದ್ದದ್ದು ಯಾಕೆ..?
* ಮುಂಜಾನೆ 4 ಗಂಟೆಗೆ ದೈಹಿಕ ಶಿಕ್ಷಕ ತರಬೇತಿಗೆ ಕರೆದದ್ದು ಯಾಕೆ..?ಈ ನಡುವೆ ಆಳ್ವಾಸ್ ಸಂಸ್ಥೆ, ಜುಲೈ 20ರಂದು ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದೆ. ಆಕೆಯದ್ದು ಕೊಲೆಯಲ್ಲ ಎಂದು ಹೇಳುತ್ತಿದೆ.










-

ರಂಭಾಪುರಿ ಶ್ರೀಗಳ ವಿರುದ್ಧ ಭುಗಿಲೆದ್ದ ಆಕ್ರೋಶ – ಬೆಂಗ್ಳೂರಲ್ಲಿ ರಾತ್ರೋರಾತ್ರಿ ಪ್ರತಿಭಟನೆ
– ಇತ್ತ ರಂಭಾಪುರಿ ಶ್ರೀಗಳ ಬೆಂಬಲಿಗರಿಂದಲೂ ಹೋರಾಟ
ಬೆಂಗಳೂರು: ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅನೈತಿಕತೆ ಪ್ರಶ್ನೆ ಮಾಡಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿರುವ ರಂಭಾಪುರಿ ಶ್ರೀಗಳ ವಿರುದ್ಧ ಮಾತೆಯ ಭಕ್ತರು ಬೆಂಗಳೂರಿನ ಬಸವ ಮಂಟಪದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಮಾತೆ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿ ಅವರ ತೇಜೋವಧೆಗೆ ರಂಭಾಪುರಿ ಶ್ರೀಗಳು ಯತ್ನಿಸುತ್ತಿದ್ದಾರೆ ಅಂತ ಮಾತೆ ಭಕ್ತರು ಕಿಡಿಕಾರಿದ್ರು. ರಂಭಾಪುರಿ ಶ್ರೀಗಳಿಗೆ ಧಿಕ್ಕಾರ ಕೂಗಿ, ಮೊಬೈಲ್ನಲ್ಲಿದ್ದ ರಂಭಾಪುರಿ ಶ್ರೀಗಳ ಫೋಟೋಗೆ ಚಪ್ಪಲಿಯಿಂದ ಹೊಡೆದು, ರಸ್ತೆ ಮಧ್ಯೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.

ಅಲ್ಲದೇ ರಂಭಾಪುರಿ ಶ್ರೀಗಳು ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ರು. ಇಂದು ಬೆಳಗ್ಗೆ 10.30ಕ್ಕೆ ಮೌರ್ಯ ಸರ್ಕಲ್ನಲ್ಲಿ ಪ್ರತಿಭಟಿಸಲಿದ್ದಾರೆ.

ಇತ್ತ ಮಾತೆ ಮಹಾದೇವಿ ಮತ್ತು ಬಸವ ಪೀಠದ ಸದಸ್ಯರು ರಂಭಾಪುರಿ ಶ್ರೀಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಅಂತಾ ಆರೋಪಿಸಿ ಬೆಂಗಳೂರಲ್ಲಿ ರಂಭಾಪುರಿ ಶ್ರೀಗಳ ಬೆಂಬಲಿಗರು ಪ್ರತಿಭಟಿಸಿದ್ದಾರೆ. ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ವೃತ್ತದಲ್ಲಿ ಪ್ರತಿಭಟಿಸಿ ಮಾತೆ ಮಹಾದೇವಿ ವಿರುದ್ಧ ಧಿಕ್ಕಾರ ಕೂಗಿದ್ರು.

ಮಾತೆ ಮಹಾದೇವಿ ಹಾಗೂ ಲಿಂಗಾನಂದರ ನಡುವಿನ ಸಂಬಂಧವನ್ನು ರಂಭಾಪುರಿ ಶ್ರೀಗಳು ಅನುಮಾನದ ದೃಷ್ಟಿಯಿಂದ ನೋಡಿದ್ದಾರೆ. ಅಲ್ಲದೆ, ಈ ಸಂಬಂಧ ಪೂರಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಮಾತೆ ಮಹಾದೇವಿ ಹಾಗೂ ಲಿಂಗಾನಂದ ನಡುವಿನ ಸಂಬಂಧ ಎಷ್ಟು ಅನೈತಿಕಯಿಂದ ಕೂಡಿದೆ ಎಂಬುದಕ್ಕೆ ಸ್ವತಃ ಲಿಂಗಾನಂದರೇ ಶಿಷ್ಯರೊಬ್ಬರಿಗೆ ಬರೆದ ರಹಸ್ಯ ಪತ್ರವನ್ನು ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, ಮಾತೆ ಮಹಾದೇವಿ ಚಾರಿತ್ರ್ಯಧ ಬಗ್ಗೆ ಪ್ರಸ್ತಾಪಿಸಲಾಗಿದೆ. ಪಬ್ಲಿಕ್ ಟಿವಿಗೆ ಈ ಪತ್ರಗಳು ಸಿಕ್ಕಿದ್ದು ಅವುಗಳನ್ನು ಇಲ್ಲಿ ನೀಡಲಾಗಿದೆ.











-

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು- ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ
ಹಾಸನ: ಬೈಕ್ ಸವಾರನಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನದಲ್ಲಿ ನಡೆದಿದೆ.
25 ವರ್ಷದ ಮಹೇಶ್ ಮೃತ ಬೈಕ್ ಸವಾರ. ಚನ್ನರಾಯಪಟ್ಟಣ ಹೊರವಲಯ ಬೆಲಸಿಂದ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವ ಮತ್ತೊಬ್ಬರನ್ನು ಸದ್ಯ ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಬಳಿಕ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆಗೆ ಮುಂದಾಗಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ರಸ್ತೆ ಮಧ್ಯೆ ಕಲ್ಲು ಇಟ್ಟು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಹೆದ್ದಾರಿ ಬಳಿ ಅಧಿಕಾರಿಗಳ ಬರಬೇಕೆಂದು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಗೆ ಮುಂದಾಗಿದ್ದಾರೆ.
ಪದೇಪದೇ ಇಲ್ಲಿ ಅಪಘಾತಗಳು ನಡೆಯುತಿದ್ದು, ಸಾಕಷ್ಟು ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗಿರೋ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೇ ಕಾರಣ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.




-

2 ವರ್ಷವಾದ್ರೂ ರೈತರ ಹೋರಾಟಕ್ಕೆ ಬೆಲೆಯಿಲ್ಲ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ `ಮಾಡು ಇಲ್ಲವೇ ಮಡಿ’ ಹೋರಾಟ
ಗದಗ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ ರೈತರ ಹೋರಾಟ 2 ವರ್ಷ ಪೂರೈಸಿದ ಹಿನ್ನಲೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ “ಮಾಡು ಇಲ್ಲವೇ ಮಡಿ” ಹೋರಾಟ ಆರಂಭವಾಗಿದೆ.
ಹೋರಾಟ ಸಮಿತಿ ಅಧ್ಯಕ್ಷ ವೀರೇಶ ಸೊಬರದಮಠ ಅವರು ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಉಪವಾಸ ಸತ್ಯಾಗ್ರಹವನ್ನು ಹಿಂಪಡೆದುಕೊಳ್ಳುವಂತೆ ನರಗುಂದ ತಾಲೂಕ ಅಧಿಕಾರಿಗಳಾದ ತಹಶೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ಡಿ.ವೈ.ಎಸ್.ಪಿ, ಸಿಪಿಐ ಸೇರಿದಂತೆ ಅನೇಕ ಅಧಿಕಾರಿಗಳು ರಾತ್ರಿ ವೇಳೆ ಹೋರಾಟ ವೇದಿಕೆ ಬಳಿ ಆಗಮಿಸಿ ಮನವೊಲಿಸಿ ಮನವಿ ಮಾಡಿಕೊಂಡ್ರು. ಆದ್ರೆ ಇದಕ್ಕೆ ರೈತ ಹೋರಾಟ ಮುಖಂಡ ವಿರೇಶ್ ಸೊಬರದಮಠ ಹಿಂದೆ ಸರಿಯಲಿಲ್ಲ.
ಹೋರಾಟ ಯಶಸ್ವಿಯಾಗೊವರೆಗೂ ಉಪವಾಸ ಸತ್ಯಾಗ್ರಹ ಮಾಡಲು ತಿರ್ಮಾನ ತೆಗೆದುಕೊಂಡಿದ್ದೆನೆ. ಕಠಿಣ ನಿರ್ಧಾರ ಮೂಲಕ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ ಮಾಡ್ತೆನೆ. ಪ್ರಾಣ ಹೊದ್ರೂ ಚಿಂತೆ ಇಲ್ಲ ಉಪವಾಸ ಹಿಂಪಡೆಯುವುದಿಲ್ಲ. ಯೋಜನೆ ಇತ್ಯರ್ಥವಾಗಲಿ, ಇಲ್ಲವೇ ಪ್ರಾಣ ಹೋಗಲಿ ಎಂದು ಹೋರಾಟದ ಮುಖಂಡ ಸೊಬರದಮಠ ಹೇಳಿದರು.
ಹೋರಾಟ ಮುಖಂಡರ ದೃಢ ನಿರ್ಧಾರದಿಂದ ಅಲ್ಲಿ ನೆರೆದಿದ್ದ ಅನೇಕ ಹೋರಾಟಗಾರರು ಕಣ್ಣಿರಿಟ್ಟರು. ಉಪವಾಸ ಕೈ ಬಿಡುವಂತೆ ಅವರೂ ಮನವೊಲಿಸಿದ್ರೂ ಸೊಬರದಮಠ ಉಪವಾಸದಿಂದ ಹಿಂದೆ ಸರಿಯದೆ ಹಠಹಿಡಿದು ಕುಳಿತಿದ್ದಾರೆ.
ಆರೋಗ್ಯದಲ್ಲಿ ವ್ಯಥೆಯುಂಟಾದ್ರೆ ನೋಡಿಕೊಳ್ಳಲು ಆರೋಗ್ಯ ಅಧಿಕಾರಿ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೇರಿಕೊಂಡು ನೀರು ಕೊಟ್ಟು ಜನ್ರ ಪ್ರಾಣ ಉಳಿಸುತ್ತಾ ಅಥವಾ ಹೋರಾಟಗಾರರ ಪ್ರಾಣ ತೆಗೆದುಕೊಳ್ಳುತ್ತವಯಾ ಎಂದು ಕಾದು ನೋಡಬೇಕಿದೆ.
-

ಗ್ರಾಮದಲ್ಲಿ ಬಸ್ ನಿಲ್ಲಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಚಾಲಕನಿಗೆ ಥಳಿತ
ರಾಯಚೂರು: ಗ್ರಾಮದಲ್ಲಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದು ಪ್ರತಿಭಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರಿನ ಹೊಸಳ್ಳಿ ಕ್ಯಾಂಪ್ನಲ್ಲಿ ನಡೆದಿದೆ.

ಸಿಂಧನೂರಿನಿಂದ 5 ಕಿ.ಮೀ ದೂರದಲ್ಲಿರುವ ಹೊಸಳ್ಳಿ ಕ್ಯಾಂಪ್ನಲ್ಲಿ ಸಾಮಾನ್ಯ ಬಸ್ಗಳನ್ನೂ ಸಹ ನಿಲ್ಲಿಸಲ್ಲ. ನಿಲ್ಲಿಸಿದರೂ ಪಾಸ್ ಇರುವ ವಿದ್ಯಾರ್ಥಿಗಳನ್ನು ಬಸ್ ಹತ್ತಲು ಚಾಲಕ ಹಾಗೂ ನಿರ್ವಾಹಕರು ಬಿಡುತ್ತಿರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದರು. ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.
ಬೆಳಿಗ್ಗೆ 7:30 ರಿಂದ 8:30ರ ಸಮಯದಲ್ಲಿ ಬಸ್ ವ್ಯವಸ್ಥೆ ಮಾಡಲು ಆಗ್ರಹಿಸಿದ್ದಾರೆ. ಚಾಲಕನ ಜೊತೆ ವಿದ್ಯಾರ್ಥಿಗಳು ಮಾತಿನ ಚಕಮಕಿ ನಡೆಸಿ ಥಳಿಸಿದ್ದಾರೆ. ಚಾಲಕ ಸಹ ವಿದ್ಯಾರ್ಥಿಗಳ ಮೇಲೆ ಕೈಮಾಡಿದ್ದಾನೆ. ಬಸ್ ತಡೆದಿದ್ದರಿಂದ ಪ್ರಯಾಣಿಕರು ಪರದಾಡಿದ್ದು ಪ್ರತ್ಯೇಕ ವ್ಯವಸ್ಥೆಯಲ್ಲಿ ತೆರಳಿದ್ದಾರೆ.

-

ಮೈಸೂರಿನಲ್ಲಿ ಚೀನಾ ಮೊಬೈಲ್ಗಳನ್ನ ಪುಡಿ ಪುಡಿ ಮಾಡಿ ಪ್ರತಿಭಟನೆ
ಮೈಸೂರು: ಸಿಕ್ಕಿಂ ಗಡಿಯಲ್ಲಿ ಚೀನಾ ಭಾರತದ ಜೊತೆ ಕ್ಯಾತೆ ತೆಗೆದಿರುವುದನ್ನು ವಿರೋಧಿಸಿ ಇವತ್ತು ಮೈಸೂರಿನಲ್ಲಿ ಚೀನಾ ಮೊಬೈಲ್ಗಳನ್ನು ಪುಡಿ ಪುಡಿ ಮಾಡಿ ಪ್ರತಿಭಟಿಸಲಾಯಿತು.
ಮೈಸೂರಿನ ಕೆಟಿ ಸ್ಟ್ರೀಟ್ನಲ್ಲಿ ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಹತ್ತಾರು ಚೀನಾ ಮೊಬೈಲ್ಗಳನ್ನು ರಸ್ತೆಗೆ ಹಾಕಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಕೆಟಿ ಸ್ಟ್ರೀಟ್ನಲ್ಲಿನ ಅಂಗಡಿ ಮಾಲೀಕರಲ್ಲಿ ಚೀನಾ ದೇಶದ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಹಾಗೂ ಜನರು ಕೂಡ ಚೀನಾ ಉತ್ಪನ್ನಗಳನ್ನು ಬಳಕೆ ಮಾಡದಂತೆ ಮನವಿ ಮಾಡಿದರು.





-

RSS ಕಾರ್ಯಕರ್ತನ ಮೇಲೆ ಹಲ್ಲೆ: ಬಂಟ್ವಾಳ ಮತ್ತೆ ಉದ್ವಿಗ್ನ – ವಾಹನ ಸಂಚಾರ ಅಸ್ತವ್ಯಸ್ಥ
ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮೇಲಿನ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ನಗರದ ಬಿ.ಸಿ.ರೋಡಿನಲ್ಲಿ ಸಂಘ ಪರಿವಾರ ಹಾಗು ಬಿಜೆಪಿ ಮುಖಂಡ ಮುಂದಾಳತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಜಮಾಯಿಸುತ್ತಿದ್ದಂತೆ ಸ್ಥಳದಲ್ಲಿದ್ದ ಸಾವಿರಕ್ಕೂ ಅಧಿಕ ಪೊಲೀಸರು ಅವರನ್ನು ಸುತ್ತುವರಿದರು.

ಮುಂದಾಳತ್ವ ವಹಿಸಿದ್ದ ಮುಖಂಡರಾದ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಸಂಘ ಪರಿವಾರದ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ವಾಹನ ಸಂಚಾರಕ್ಕೆ ತಡೆ: ಈ ನಡುವೆಯ ಬಿ.ಸಿ.ರೋಡ್ ರಸ್ತೆಯಾಗಿ ವಾಹನ ಸಂಚಾರವನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಮಂಗಳೂರಿನಿಂದ ಬಿ.ಸಿ.ರೋಡ್ನತ್ತ ತೆರಳುವ ವಾಹನಗಳನ್ನು ಫರಂಗಿಪೇಟೆಯಲ್ಲಿ ತಡೆ ಹಿಡಿಯಲಾಗಿದೆ. ಅದೇ ರೀತಿ ಕಲ್ಲಡ್ಕ ಕಡೆಯಿಂದ ಬರುವ ವಾಹನಗಳನ್ನು ಮೆಲ್ಕಾರ್ನಲ್ಲಿ ಪೊಲೀಸರು ತಡೆಹಿಡಿದಿದ್ದಾರೆ. ಈ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ ಪರ್ಯಾಯ ರಸ್ತೆಯ ಮೂಲಕ ಸಂಚರಿಸುವಂತೆ ಪೊಲೀಸರು ನಿರ್ದೇಶಿಸುತ್ತಿದ್ದಾರೆ.

ಪೊಲೀಸರ ಈ ಕ್ರಮದಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ವಾಹನಗಳ ಭಾರೀ ಸಾಲುಗಳು ಹೆದ್ದಾರಿಯಲ್ಲಿ ಕಂಡುಬರುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.

ಹಲ್ಲೆಗೆ ಸಂಬಂಧಿಸಿದ ಆರೋಪಿಗಳ ಪತ್ತೆಗೆ ಆರು ತಂಡ ರಚಿಸಲಾಗಿದ್ದು, ಹಲವರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.




