Tag: PSI Illegal Recruitment

  • ಪಿಎಸ್‍ಐ ಹಗರಣದಲ್ಲಿ ಕೇವಲ 18-20 ಹುಡುಗರನ್ನ ಅರೆಸ್ಟ್ ಮಾಡಿದ್ರೆ ಸಾಲೋದಿಲ್ಲ: ಡಿಕೆಶಿ

    ಪಿಎಸ್‍ಐ ಹಗರಣದಲ್ಲಿ ಕೇವಲ 18-20 ಹುಡುಗರನ್ನ ಅರೆಸ್ಟ್ ಮಾಡಿದ್ರೆ ಸಾಲೋದಿಲ್ಲ: ಡಿಕೆಶಿ

    ರಾಮನಗರ: ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಕೇವಲ 18 – 20 ಜನ ಹುಡುಗರನ್ನ ಅರೆಸ್ಟ್ ಮಾಡಿದರೆ ಸಾಲುವುದಿಲ್ಲ, ನಮಗೂ ಎಲ್ಲಾ ವಿಚಾರ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಮಾಗಡಿಯ ದರ್ಶನ್ ಗೌಡ ಇಂದು ಅರೆಸ್ಟ್ ಆಗಿರುವ ವಿಚಾರವಾಗಿ ಕನಕಪುರದ ಯಡಮಾರನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನನಗೆ ಏನು ಸತ್ಯ ಗೊತ್ತಿತ್ತು ಅದರ ಆಧಾರದ ಮೇಲೆ ಹೇಳಿದ್ದೆ. ಅವತ್ತು ಸಿಐಡಿಯವರು ಕರೆದುಕೊಂಡು ಹೋಗಿದ್ದರು, ಮತ್ತೆ ಕಳುಹಿಸಿದ್ದರು. ವಿಚಾರಣೆ ಮಾಡದೇ ಹೇಗೆ ಹೇಳಲು ಸಾಧ್ಯ? ಫೋನ್ ಯಾರು ಮಾಡಿದ್ದರು? ಯಾಕೆ ಮಾಡಿದ್ದರು ಎಂಬುದು ಹೇಳಿರಲಿಲ್ಲ. ಬಹಳ ಅಬ್ಬರದಿಂದ ಸರ್ಕಾರದವರು, ಮಂತ್ರಿಗಳು ಮಾತನಾಡುತ್ತಿದ್ದರು. ಈಗ ಕರೆದುಕೊಂಡು ಹೋಗಿದ್ದಾರೆ. ನಮಗೆ ಎಲ್ಲಾ ಗೊತ್ತಿತ್ತು. ನಮ್ಮ ಜಿಲ್ಲೆಯಲ್ಲಿ ಎಷ್ಟು ಜನ ಪಾಸಾಗಿದ್ದಾರೆ ಎನ್ನುವುದನ್ನು ಮುಚ್ಚಿ ಹಾಕುವುದಕ್ಕೆ ಏನೇನು ಪ್ರಯತ್ನ ಮಾಡಿದ್ದರು. ಈಗ ಕರೆದುಕೊಂಡು ಹೋಗಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಹಗರಣ – ಆರೋಪಿ ದರ್ಶನ್ ಗೌಡ ಅರೆಸ್ಟ್

    ಪಾಪ ಆ ಹುಡುಗರು ಬಾಳೆಹಣ್ಣು ತಿನ್ನುವುದಕ್ಕೆ ಬಂದವರು, ಅಂಗಡಿ ಓಪನ್ ಇದ್ದರೆ ವ್ಯಾಪಾರಕ್ಕೆ ಬರುತ್ತಾರೆ. ಇದರಲ್ಲಿ ಯಾವ ರಾಜಕಾರಣಿ, ಆಫೀಸರ್ ಇದ್ದರೂ ಹೊರ ತರಬೇಕು. ಬರೀ 18 – 20 ಜನ ಹುಡುಗರನ್ನ ಅರೆಸ್ಟ್ ಮಾಡಿದರೆ ಸಾಲುವುದಿಲ್ಲ. ನಮಗೂ ಎಲ್ಲಾ ವಿಚಾರ ಗೊತ್ತಿದೆ. ಒಬ್ಬನಿಗೆ ಪ್ರತ್ಯೇಕವಾಗಿ ಇನ್ ಸರ್ವೀಸ್ ಆರ್ಡರ್ ಮಾಡಿದ್ದಾರೆ ಎಂಬುದು ಗೊತ್ತಿದೆ. ಬಹಳ ದೊಡ್ಡ ಭ್ರಷ್ಟಾಚಾರದ ಕೂಪ ಕರ್ನಾಟಕದಲ್ಲಿದೆ. ಇದರ ವಿರುದ್ಧ ಅಲ್ಲ. ಎಲ್ಲಾ ನೇಮಕಾತಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ನಮ್ಮ ಹೋರಾಟ ನಡೆಯಲಿದೆ. ನನ್ನ ಹೋರಾಟ ಇದೊಂದೇ ಅಲ್ಲ, ಎಲ್ಲಾ ನಿರುದ್ಯೋಗ ಯುವಕರ ಹಿತದೃಷ್ಟಿಯಿಂದ ನಾನು ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ದೇಶಕ್ಕೆ RSS-BJP ಕೊಡುಗೆ ಏನು, ತಾಕತ್ತಿದ್ರೆ ಚರ್ಚೆಗೆ ಬನ್ನಿ: ಉಗ್ರಪ್ಪ ಸವಾಲ್

    ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಬ್ರಾಂಡ್ ಎಂಬ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಭ್ರಷ್ಟಾಚಾರ ಮಾಡಿರುವವರ ಬಗ್ಗೆ ತನಿಖೆ ಮಾಡಲು ಹೇಳಿ. ನೇಮಕಾತಿ ಅಥವಾ ಅರ್ಕಾವತಿ ವಿಷಯದಲ್ಲಿ ಹಗರಣ ಮಾಡಿದರೆ ತನಿಖೆ ಮಾಡಲಿ. ಅವರ ಬಳಿ ಇನ್ನೂ ಅಧಿಕಾರ ಇದೆ. ತನಿಖೆ ಮಾಡಲು ಇಲ್ಲಿ ಯಾರೂ ಬೇಡ ಎನ್ನುವುದಿಲ್ಲ. ಇಲ್ಲಿ ಜನ ಯಾರ ಕಡೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಎಲ್ಲಾ ಸಾಕ್ಷಿ ಕಣ್ಣಲ್ಲೇ ಸಿಗುತ್ತದೆ ಎಂದು ಟಾಂಗ್ ನೀಡಿದ್ದಾರೆ.

  • ನರ್ಸ್ ಸರ್ಟಿಫಿಕೇಟ್ ದಂಧೆಯಲ್ಲಿ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ: ಕುಮಾರಸ್ವಾಮಿ

    ನರ್ಸ್ ಸರ್ಟಿಫಿಕೇಟ್ ದಂಧೆಯಲ್ಲಿ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ: ಕುಮಾರಸ್ವಾಮಿ

    ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ನರ್ಸ್ ಸರ್ಟಿಫಿಕೇಟ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ ರಾಜಕೀಯಕ್ಕೆ ಬರುವುದಕ್ಕೂ ಮೊದಲು ನರ್ಸ್ ಸರ್ಟಿಫಿಕೇಟ್ ದಂಧೆ ಮಾಡುತ್ತಿದ್ದರು ಎಂದು ನೇರ ಆರೋಪ ಮಾಡಿದರು.

    ಪಿಎಸ್‌ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಾನು ಅಶ್ವಥ್ ನಾರಾಯಣ ಪರ ಮಾತನಾಡಿಲ್ಲ. ಕಾಂಗ್ರೆಸ್ ದಾಖಲೆ ಇಟ್ಟು ಮಾತನಾಡಬೇಕು ಎಂದು ಹೇಳಿದ್ದೇನೆ ಅಷ್ಟೇ. ದಾಖಲೆ ಇದ್ದರೆ ಕಾಂಗ್ರೆಸ್ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.

    ಅಶ್ವಥ್ ನಾರಾಯಣ ಪರೀಕ್ಷೆಗಳನ್ನು ಮಾಡಿಸುವುದರಲ್ಲಿ ದೊಡ್ಡ ಅನುಭವ ಇರುವ ವ್ಯಕ್ತಿ. ಅದನ್ನು ಕಾಂಗ್ರೆಸ್‌ನವರು ಮಾತನಾಡಲಿ. ನರ್ಸ್ಗಳಿಗೆ ಸರ್ಟಿಫಿಕೇಟ್ ನೀಡುವುದಕ್ಕೆ ಒಂದು ಟೀಂ ಇತ್ತು. ಇದಕ್ಕಾಗಿಯೇ ಅಶ್ವಥ್ ನಾರಾಯಣ ಅವರಿಗೆ ಒಂದು ಹೆಸರು ಇತ್ತು ಎಂದು ಆರೋಪಿಸಿದರು. ಇದನ್ನೂ ಓದಿ: ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ಧಿಗೆ ಸಂಪೂರ್ಣ ಸಹಕಾರ: ಬೊಮ್ಮಾಯಿ

    ಅಶ್ವಥ್ ನಾರಾಯಣ ಅವರು ನಾನು ವಿಶ್ವ ಒಕ್ಕಲಿಗ ಎಂದು ಹೇಳುತ್ತಾರೆ. ಯಾವ ವಿಶ್ವ ಒಕ್ಕಲಿಗ ಎಂಬುದೇ ಗೊತ್ತಿಲ್ಲ. ರಾಜಕಾರಣಕ್ಕೆ ಬರುವುದಕ್ಕೂ ಮೊದಲು ಎಂತಹವರಿಗೆ ನರ್ಸ್ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಲ್ಲಾ ತಿಳಿದಿದೆ ಎಂದು ಬಾಂಬ್ ಹಾಕಿದರು. ಇದನ್ನೂ ಓದಿ: ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಎಕ್ಸಾಂ ಬರೆಯದವರಿಗೆ, ಎಕ್ಸಾಂಗೆ ಬಾರದೇ ಇರುವವರಿಗೂ ಸರ್ಟಿಫಿಕೇಟ್ ಕೊಟ್ಟಿರುವ ಇತಿಹಾಸ ಇದೆ. ಇಂತಹ ಸರ್ಕಾರ ಇದು. ಇಂತಹ ಮಂತ್ರಿಗಳು ಈ ಸರ್ಕಾರದಲ್ಲಿ ಇದ್ದಾರೆ. ಪಿಎಸ್‌ಐ ಅಕ್ರಮದಲ್ಲಿ ರಾಜ್ಯ ಸರ್ಕಾರ ಮೌನವಾಗಿದೆ. ಸರ್ಕಾರದ ಈ ವರ್ತನೆ ನೋಡಿದರೆ, ಆರೋಪವನ್ನು ಸರ್ಕಾರ ಒಪ್ಪಿಕೊಂಡಂತಿದೆ. ಮೌನಂ ಸಮ್ಮತಿ ಲಕ್ಷಣಂ ರೀತಿ ಸರ್ಕಾರ ವರ್ತಿಸುತ್ತಿದೆ ಎಂದು ಟೀಕಿಸಿದರು.

  • ದಿವ್ಯಾ ಹಾಗರಗಿಗೆ ಆಶ್ರಯ ಕೊಟ್ಟಿರೋದು ಕಾಂಗ್ರೆಸ್‌ನವರೇ: ಆರಗ ಜ್ಞಾನೇಂದ್ರ

    ದಿವ್ಯಾ ಹಾಗರಗಿಗೆ ಆಶ್ರಯ ಕೊಟ್ಟಿರೋದು ಕಾಂಗ್ರೆಸ್‌ನವರೇ: ಆರಗ ಜ್ಞಾನೇಂದ್ರ

    ತುಮಕೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್‌ನ ದೊಡ್ಡ ದೊಡ್ಡ ಮುಖಂಡರು ಸಿಕ್ಕಿ ಹಾಕಿಕೊಂಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅದರಲ್ಲಿ ಭಾಗಿಯಾಗಿದ್ದಾರೆ. ಪೂನಾದಲ್ಲಿ ದಿವ್ಯಾ ಹಾಗರಗಿಗೆ ಆಶ್ರಯ ಕೊಟ್ಟಿರೋದು ಕಾಂಗ್ರೆಸ್‌ನವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

    ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಪಕ್ಷ ಪಂಗಡ ನೋಡದೇ, ಮೂಗು ತೂರಿಸದೇ ತನಿಖೆ ಮಾಡಲು ಬಿಟ್ಟಿದ್ದೇವೆ. ಯಾರ ದಾಖಲಾತಿ ಸಿಗುತ್ತದೆಯೋ ಅಂತವರನ್ನು ಅರೆಸ್ಟ್ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ತಂದೆ ಆಸೆಯಂತೆ ಮುಸ್ಲಿಂ ಸಮುದಾಯಕ್ಕೆ ಭೂಮಿ ದಾನಕೊಟ್ಟ ಹಿಂದೂ ಸಹೋದರಿಯರು

    ಕಾಂಗ್ರೆಸ್‌ನ ಅನೇಕ ಮುಖಂಡರು ನನ್ನ ಬಳಿ ಆ ವೀಡಿಯೋ ಇದೆ, ಈ ವೀಡಿಯೋ ಇದೆ ಎಂದು ಹೇಳಿದರು. ಆದರೇ ಅವರ್ಯಾರೂ ಅವುಗಳನ್ನು ತನಿಖಾಧಿಕಾರಿಗಳಿಗೆ ಒಪ್ಪಿಸುತ್ತಿಲ್ಲ. ಅದರ ಬದಲಾಗಿ ಯಾರ್ಯಾರದ್ದೋ ಚಾರಿತ್ರ‍್ಯ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಪ್ರಾಮಾಣಿಕವಾದ ತನಿಖೆಯಲ್ಲಿ ನಂಬಿಕೆ ಇಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿನಾಃಕಾರಣ ಸರ್ಕಾರವನ್ನು ಟೀಕಿಸುತ್ತಿದ್ದಾರೆ: ಆರಗ ಜ್ಞಾನೇಂದ್ರ

    araga jnanendra

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತನಾಡಲು ವಿಷಯಗಳೇ ಇಲ್ಲ ಎಂದು ಯಾರ್ಯಾರದ್ದೋ ಚಾರಿತ್ರ‍್ಯ ಹರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಕಾಲದ್ದೇ ಸಿಒಡಿ ಮೇಲೆ ಅವರಿಗೆ ನಂಬಿಕೆ ಇಲ್ಲ ಅಂದರೆ ಹೇಗೆ? ನಂಬಿಕೆ ಇಲ್ಲ ಎಂದಿದ್ದರೆ ಸಿಒಡಿಯನ್ನು ಆಗಲೇ ವಿಸರ್ಜನೆ ಮಾಡಬೇಕಿತ್ತು. ಲೋಕಾಯುಕ್ತದ ಕತ್ತು ಹಿಸುಕಿದವರು ಯಾರು? ಕಾಂಗ್ರೆಸ್ ಕಾಲದಲ್ಲಿ ಪ್ರಬಲವಾಗಿದ್ದ ಲೋಕಾಯುಕ್ತದ ಕತ್ತು ಹಿಸುಕಲಾಯಿತು. ಆಮೇಲೆ ಅವರೇ ಎಸಿಬಿ ಜಾರಿಗೆ ತಂದವರು ಎಂದು ಆರಗ ಜ್ಞಾನೇಂದ್ರ ಹರಿಹಾಯ್ದರು.

  • ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

    ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

    ಉಡುಪಿ: ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಆರೋಪಗಳಿಗೆ ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಅಂದು ಬಿಟ್ ಕಾಯಿನ್, ಇಂದು ಪಿಎಸ್‌ಐ. ಪ್ರಿಯಾಂಕ್ ಖರ್ಗೆಗೆ ಕೇವಲ ಪ್ರಚಾರದ ಹುಚ್ಚು ಎಂದಿದ್ದಾರೆ.

    ಪ್ರಿಯಾಂಕ್ ಗಂಭೀರ ಆರೋಪಗಳನ್ನು ಯಾವತ್ತೂ ಮಾಡಿಲ್ಲ. ಬಿಟ್‌ಕಾಯಿನ್ ವಿಷಯದಲ್ಲೂ ಕೋಟ್ಯಂತರ ರೂ. ಅವ್ಯವಹಾರ ಆಗಿದೆ ಎಂದು ದೂರಿದ್ದಾರೆ. ಆದರೆ ಯಾವುದೇ ದಾಖಲೆಗಳನ್ನೂ ಕೊಟ್ಟಿಲ್ಲ. ಪ್ರತಿಯೊಂದು ವಿಷಯಕ್ಕೂ ಗಾಳಿಯಲ್ಲಿ ತೇಲಿಸಿ ದಾಖಲೆಗಳಿಲ್ಲದೆ ಮಾತನಾಡುತ್ತಾರೆ. ಅವರಿಗೆ ಪ್ರಚಾರದ ಹುಚ್ಚು ಇರುವುದರಿಂದ ನಿರಂತರ ಆರೋಪ ಮಾಡುತ್ತಾರೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಇಲ್ಲದಿರುವ ವಿಷಯವನ್ನು ಸೃಷ್ಟಿಸಿಲು ಪ್ರಯತ್ನಿಸ್ತಿದ್ದಾರೆ: ಡಾ.ಕೆ.ಸುಧಾಕರ್

    ಬಿಟ್‌ಕಾಯಿನ್ ವಿಚಾರದಲ್ಲಿ ಸಾಧಿಸಿದ್ದೇನು? ತನ್ನ ಮೇಲೆ ಬಂದ ಆರೋಪಗಳನ್ನು ಅಲ್ಲಗೆಳೆಯಲು ಈ ರೀತಿ ಮಾತನಾಡುತ್ತಾರೆ. ಪೊಲೀಸರಿಗೆ ಸಿಗದ ವಾಯ್ಸ್ ರೆಕಾರ್ಡ್ ಇವರಿಗೆ ಹೇಗೆ ಸಿಗುತ್ತದೆ? ಇವರ ಹುನ್ನಾರ ಇಲ್ಲದೇ ಇಷ್ಟೆಲ್ಲಾ ನಡೆಯಲು ಸಾಧ್ಯವಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    ಪ್ರಿಯಾಂಕ್ ಖರ್ಗೆಗೆ ತನಿಖೆಯಾಗಬೇಕು ಎಂದು ಹೇಳಿದ್ದೇನೆ. ನೋಟಿಸ್ ಕೊಟ್ಟರೆ ಅವರು ಉತ್ತರ ಕೊಡುವುದಿಲ್ಲ ಎನ್ನುತ್ತಾರೆ. ಇದು ಪಲಾಯನವಾದ ಅಲ್ಲದೇ ಮತ್ತೇನು? ತಲೆಮರೆಸಿಕೊಂಡ ಆರೋಪಿಗಳ ರೀತಿಯಲ್ಲೇ ಇವರೂ ವರ್ತಿಸುತ್ತಾರೆ ಎಂದು ಸುನಿಲ್ ಕುಮಾರ್ ನೇರ ಆರೋಪ ಮಾಡಿದರು.

  • PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ಪಾತ್ರವಿದೆ: ದಿನೇಶ್ ಗುಂಡೂರಾವ್

    PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ಪಾತ್ರವಿದೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇರ ಪಾತ್ರವಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ 545 ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದಿದ್ದರು. ಈಗ ಸರ್ಕಾರ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಪಡಿಸಿ ಮರು ಪರೀಕ್ಷೆಗೆ ಮುಂದಾಗಿದೆ. ಸರ್ಕಾರ ಮರು ಪರೀಕ್ಷೆಗೆ ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲರ್ ತಂತ್ರವಷ್ಟೆ. ಆದರೆ ಗೃಹ ಸಚಿವರ ಪಾತ್ರವಿಲ್ಲದೇ ಪಿಎಸ್‍ಐ ಅಕ್ರಮ ನೇಮಕಾತಿ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರೀಕ್ಷೆಗೆ ಹಿಜಬ್ ಧರಿಸಿ ಬಂದ ಡಿಗ್ರಿ ವಿದ್ಯಾರ್ಥಿನಿಗೆ ಅನುಮತಿ ನಿರಾಕರಣೆ

    ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ನೇರ ಪಾತ್ರವಿದೆ. ಪ್ರಕರಣದ ಕಿಂಗ್‍ಪಿನ್ ಬಂಧಿತೆ ದಿವ್ಯಾ ಹಾಗರಗಿ ಮನೆಗೆ ಜ್ಞಾನೇಂದ್ರರವರು ಡೀಲಿಂಗ್ ಮಾಡಲು ಹೋಗಿದ್ದು ಸತ್ಯವಲ್ಲವೆ? ಪ್ರಕರಣದ ಬಗ್ಗೆ ಮಾಹಿತಿ ಕೊಡುವವರಿಗೆ ನೋಟಿಸ್ ಕೊಡುವ ಸಿಐಡಿ ಜ್ಞಾನೇಂದ್ರರ ವಿಚಾರಣೆಯನ್ನು ಇನ್ನೂ ಯಾಕೆ ನಡೆಸಿಲ್ಲ? ಸಿಐಡಿ ಯಾರನ್ನು ರಕ್ಷಿಸುತ್ತಿದೆ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ. ಇದನ್ನೂ ಓದಿ: ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

    ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.

  • ಕೊರೊನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡೋದು ಅನಿರ್ವಾಯ : ಹಾಲಪ್ಪ ಆಚಾರ್

    ಕೊರೊನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡೋದು ಅನಿರ್ವಾಯ : ಹಾಲಪ್ಪ ಆಚಾರ್

    ಬೀದರ್: ಕೊರೋನಾ ಸಂಖ್ಯೆ ಹೆಚ್ಚಾದ್ರೆ ಕೊರೊನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡೋದು ಅನಿರ್ವಾಯ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಟಫ್ ರೂಲ್ಸ್ ಸುಳಿವು ನೀಡಿದ್ದಾರೆ.

    corona

    ಪ್ರಗತಿ ಪರಿಶೀಲನಾ ಸಭೆ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಜೀವ ರಕ್ಷಣೆ ಮಾಡೋದು ನಮ್ಮ ಜವಾಬ್ದಾರಿಯಾಗಿದ್ದು ಆ ಜವಾಬ್ದಾರಿ ನಿರ್ವಹಿಸುವ ಸಮಯದಲ್ಲಿ ಅನಿವಾರ್ಯತೆ ಬಂದರೆ ಟಫ್ ರೂಲ್ಸ್ ಜಾರಿ ಮಾಡುತ್ತೆವೆ ಎಂದರು. ಇದನ್ನೂ ಓದಿ: ಕಾನೂನು ಬಾಹಿರ ಚಟುವಟಿಕೆ ಮಾಡಿದವರನ್ನು ಕ್ಷಮಿಸಲು ಸಾಧ್ಯವಿಲ್ಲ: ಹಾಲಪ್ಪ ಆಚಾರ್

    ಸದ್ಯ ಕೊರೊನಾ ಹೋಗಿದೆ ಎಂದು ಜನ ಕೊರೊನಾವನ್ನು ಮರೆತೇ ಬಿಟ್ಟಿದ್ದು ವಿಶ್ವದಲ್ಲಿ ಹಾಗೂ ದೇಶದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ವಿದ್ಯಮಾನಗಳನ್ನು ನಾವು ನೋಡುತ್ತಿದ್ದು ಚೀನಾ 4ನೇ ಅಲೆಗೆ ಸಿಲುಕಿ ಹೇಗೆ ಒದ್ದಾಡುತ್ತಿದೆ ಎಂದು ನೀವು ನೋಡುತ್ತಿದ್ದೀರಿ ಎಂದು ಎಚ್ಚರಿಕೆ ನೀಡಿದರು.

    CORONA-VIRUS.

    ನಮ್ಮಲ್ಲಿ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ದ್ವಿಗುಣವಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡೋದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ಸರ್ಕಾರ ಪ್ರಾಥಮಿಕ ಹಂತವಾಗಿ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ ಎಂದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಅಕ್ರಮ – ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ

    ಇನ್ನೂ ಪಿಎಸ್‍ಐ ಅಕ್ರಮ ನೇಮಕಾತಿಯ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ನಾಪತ್ತೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ದಿವ್ಯ ಹಾಗರಗಿ ಎಷ್ಟು ದಿನ ತಪ್ಪಿಸಿಕೊಳ್ಳೊಕೆ ಆಗುತ್ತೆ? ಭೂಮಿ ಒಳಗಡೆ ಶಾಶ್ವತವಾಗಿ ಅಲ್ಲೆ ಇರೋಕೆ ಆಗುತ್ತಾ? ಇಂದಿನ ಅಡ್ವಾನ್ಸ್ ಯುಗದಲ್ಲಿ ಮೊಬೈಲ್ ಟ್ರಾಕ್ ಮಾಡಿ ಹಿಡಿಯುತ್ತಾರೆ ಎಂದು ಹೇಳಿದರು.