Tag: PSLV

  • ಇಸ್ರೋದ ಸ್ಪೇಡೆಕ್ಸ್‌ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ

    ಇಸ್ರೋದ ಸ್ಪೇಡೆಕ್ಸ್‌ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ

    ಚಿಕ್ಕಬಳ್ಳಾಪುರ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಸೋಮವಾರ ರಾತ್ರಿ (ಇಂದು) ಉಡಾವಣೆಯಾಗಲಿದೆ. ಈ ಉಪಗ್ರಹಕ್ಕೆ ರಾಜ್ಯದ ಪ್ರತಿಷ್ಟಿತ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ವತಿಯಿಂದ `ಅರ್ಪಿತ್’ ಪೇಲೋಡ್ ಒದಗಿಸಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ (SJCIT Engineering College) ತಂಡ ಮುಂದಾಗಿದೆ.

    ಅಂದಹಾಗೆ ಇಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 2 ಉಪಗ್ರಹಗಳು ಉಡಾವಣೆಯಾಗಲಿದೆ. ಇದಕ್ಕಾಗಿ ʻಅರ್ಪಿತ್ʼ ಹೆಸರಿನ ಪೇಲೋಡ್ ನಿರ್ಮಿಸಿರುವ ಎಸ್‌ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ ತಂಡ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ತಲುಪಿದೆ. ಇದನ್ನೂ ಓದಿ: ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?

    ಈ ಪೇಲೋಡ್‌ನ ಮುಖ್ಯ ಉದ್ದೇಶ ಎಂದರೆ ಸಾರ್ವಜನಿಕರು ಸಹ ಸ್ಯಾಟಲೈಟ್ ಜೊತೆ ಸಂಪರ್ಕ ಸಾಧಿಸುವುದು, ಸ್ಯಾಟಲೈಟ್ ನಿಂದ ರೇಡಿಯೋ ತರಂಗಾಂತರ ಮೂಲಕ ಫೋಟೋ, ವಿಡಿಯೋ, ಆಡಿಯೋ ಹಂಚಿಕೊಳ್ಳಬಹುದಾಗಿದೆ. ಇದನ್ನೂ ಓದಿ: Bihar | ಮರುಪರೀಕ್ಷೆಗೆ ಆಗ್ರಹ – ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ

    ಇನ್ನೂ ಈ ಸ್ಪೈಡೆಕ್ಸ್ ಸ್ಯಾಟಲೈಟ್ ಯೋಜನೆ ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನ ಒಂದಕ್ಕೊಂದು ಸಂಪರ್ಕ ಜೋಡಿಸುವುದಾಗಿದೆ. ಈ ಯೋಜನೆಯ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲಿಗಲ್ಲು ಸಾಧಿಸಲಿದೆ. ಈ ಯೋಜನೆಯಲ್ಲಿ ಎರಡು ಉಗ್ರಹಗಳಿದ್ದು ಒಂದಕ್ಕೊಂದು ಸಂವಹನ ಸಾಧಿಸುವ ಪ್ರಯೋಗ ನಡೆಸಲಾಗುತ್ತದೆ.

    ಇದರಲ್ಲಿ 24 ಪೇಲೋಡ್ ಗಳಿದ್ದು 14 ಪೆಲೋಡ್ ಗಳನ್ನ ಇಸ್ರೋ ಸಂಸ್ಥೆ ನಿರ್ಮಾಣ ಮಾಡಿದ್ರೆ ಉಳಿದ 10 ಪೇಲೋಡ್ ಇತರೆ ಸಂಸ್ಥೆಗಳು ತಯಾರಿ ಮಾಡಿವೆ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸ್ಥಳ ಪರಿಶೀಲನೆ

  • ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?

    ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?

    ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ.

    ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ (Docking) ಮತ್ತು ಅನ್‌ಡಾಕಿಂಗ್‌ (Undocking) ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್‌ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ.

    ಈ ಪ್ರಯೋಗದ ಭಾಗವಾಗಿ ಎಸ್‌ಡಿಎಕ್ಸ್‌01 ಮತ್ತು ಎಸ್‌ಡಿಎಕ್ಸ್02 ಹೆಸರಿನ ಎರಡು ಉಪಗ್ರಹಗಳನ್ನು ಹೊತ್ತ ಪೋಲಾರ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ (PSLV) ರಾಕೆಟ್ ಇಂದು ರಾತ್ರಿ 9:58ಕ್ಕೆ ಉಡಾವಣೆಯಾಗಲಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಉಪಗ್ರಹಗಳನ್ನು ರಾಕೆಟ್‌ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ಡಾಕಿಂಗ್‌ ಪ್ರಯೋಗ ನಡೆಯಲಿದೆ.


    ಏನಿದು ಪ್ರಯೋಗ?
    ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್‌, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.

    ಯಾಕೆ ಇಷ್ಟೊಂದು ಮಹತ್ವ?
    ಮಾನವಸಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರನ್ನು ಕಳುಹಿಸಿ, ವಾಪಸ್‌ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ತಂತ್ರಜ್ಞಾನ ತಿಳಿದಿರಬೇಕು.

     

  • 8 ವರ್ಷದ ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

    8 ವರ್ಷದ ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

    ಅಮರಾವತಿ: `ಮಂಗಳಯಾನ’ದ ಕಕ್ಷೆಗಾಮಿ (Mars Orbiter Mission) ಮಂಗಳ ಗ್ರಹದ ಕಕ್ಷೆಯಲ್ಲಿ ಪರಿಭ್ರಮಣೆ ಆರಂಭಿಸಿದ 8 ವರ್ಷಗಳ ಬಳಿಕ ಇಂಧನ ಖಾಲಿಯಾಗಿದೆ. ಅದರ ಬ್ಯಾಟರಿ ಸುರಕ್ಷಿತ ಮಿತಿಯನ್ನು ಮೀರಿದ್ದು, ದೇಶದ ಚೊಚ್ಚಲ ಉಪಗ್ರಹ ಮಿಷನ್ ಮಂಗಳಯಾನ (Mangalyan) ತನ್ನ ಸುದೀರ್ಘ ಪಯಣವನ್ನು ಪೂರ್ಣಗೊಳಿಸಿದೆ.

    ಸುಮಾರು 450 ಕೋಟಿ ರೂ. ವೆಚ್ಚದ ಮಾರ್ಸ್ ಆರ್ಬಿಟರ್ ಮಿಷನ್ (MOM) ಅನ್ನು 2013ರ ನವೆಂಬರ್ 5ರಂದು ಶ್ರೀಹರಿಕೋಟದಿಂದ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ  ಉಡಾವಣೆ ಮಾಡಲಾಗಿತ್ತು. 2014 ಸೆಪ್ಟೆಂಬರ್ 24ರಂದು ಮಿಷನ್ ಮಾರ್ಸ್ ಆರ್ಬಿಟರ್ ಮಿಷನ್ ಮಂಗಳ ಕಕ್ಷೆಗೆ ಸೇರಿತು. ಸದ್ಯ ಉಪಗ್ರಹದಲ್ಲಿ ಇಂಧನ ಹಾಗೂ ಬ್ಯಾಟರಿ ಖಾಲಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮೂಲಗಳು ತಿಳಿಸಿವೆ ಎನ್ನಲಾಗಿದೆ. ಆದರೆ ಇಸ್ರೋದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

    ISRO ROCKET

    ಭಾರತದ `ಮಂಗಳಯಾನ’ ಉಪಗ್ರಹವು 8 ವರ್ಷ ಪೂರ್ಣಗೊಳಿಸಿದೆ. ಆರು ತಿಂಗಳ ಅವಧಿಗೆ ಕಾರ್ಯ ನಿರ್ವಹಿಸಲು ಇದನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ತನ್ನ ಅವಧಿ ಮೀರಿ ಕಾರ್ಯನಿರ್ವಹಿಸಿದೆ. ಇದನ್ನೂ ಓದಿ: 2024ರಲ್ಲಿ ಶುಕ್ರಯಾನಕ್ಕೆ ISRO ಸಜ್ಜು- ಇಲ್ಲಿದೆ ಶುಕ್ರಗ್ರಹದ ಸ್ವಾರಸ್ಯಕರ ಸಂಗತಿ

    ಮಂಗಳ ಗ್ರಹದಲ್ಲಿನ ವಾತಾವರಣ, ಅದರ ಮೇಲ್ಮೈ ಲಕ್ಷಣ, ಅಲ್ಲಿ ಇರಬಹುದಾದ ಸೂಕ್ಷ್ಮ ಜೀವ ಕಣಗಳು, ಜೀವಿಗಳ ಹುಟ್ಟಿಗೆ ಕಾರಣವಾಗುವ ಮಿಥೇನ್ ಅನಿಲ ಇದೆಯೇ ಎಂಬುದನ್ನು ಪತ್ತೆ ಹಚ್ಚುವುದು ಮಾರ್ಸ್ ಆರ್ಬಿಟ್ ಮಿಷನ್ ಯೋಜನೆಯ ಮೂಲ ಉದ್ದೇಶವಾಗಿತ್ತು. ಈಗಾಗಲೇ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿದೆ. ಇಸ್ರೋ ಕೈಗೊಂಡಿದ್ದ ಅಂತರ ಗ್ರಹಯಾನ ಯೋಜನೆಗಳಲ್ಲಿ ಮಂಗಳಯಾನ ಅತ್ಯಂತ ಕಡಿಮೆ ವೆಚ್ಚದ್ದು.

    Chandrayana 02

    ಮಾರ್ಸ್ ಆರ್ಬಿಟರ್ ಮಾರ್ಸ್ ಕಲರ್ ಕ್ಯಾಮೆರಾ (MCC), ಥರ್ಮಲ್ ಇನ್ಫ್ರಾರೆಡ್ ಇಮೇಜಿಂಗ್ ಸ್ಪೆಕ್ಟ್ರೋಮೀಟರ್ (TIS), ಮೀಥೇನ್ ಸೆನ್ಸಾರ್ ಫಾರ್ ಮಾರ್ಸ್ (MSM), ಮಾರ್ಸ್ ಎಕ್ಸೋಸ್ಫಿರಿಕ್ ನ್ಯೂಟ್ರಲ್ ಕಾಂಪೋಸಿಷನ್ ವಿಶ್ಲೇಷಕ (MENCA) ಮತ್ತು ಲೈಮನ್ ಆಲ್ಫಾ ಫೋಟೋಮೀಟರ್ (LAP) ಗಳನ್ನು ಒಳಗೊಂಡಿದೆ. ಈ ಮೂಲಕ ದತ್ತಾಂಶವನ್ನು ಕಳುಹಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?

    ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆ.7 ರಂದು ಗ್ರಾಮೀಣ ಶಾಲೆಯ 750 ಹೆಣ್ಣುಮಕ್ಕಳೇ ತಯಾರಿಸಿರುವ ಅತ್ಯಂತ ಚಿಕ್ಕ ಆಜಾದಿ ಉಪಗ್ರಹಗಳನ್ನು `ಸ್ಮಾಲ್ ಸ್ಯಾಟಲೈಟ್ ಲಾಂಚ್ ವೆಹಿಕಲ್’ (SSLV) ವಾಹಕದ ಮೂಲಕ ಹಾರಿಬಿಡುತ್ತಿದೆ.

    ಭಾರತ 75ನೇ ಅಮೃತ ಮಹೋತ್ಸವ ಆಚರಿಸುತ್ತಿರುವ ನೆನಪಿನಾರ್ಥವಾಗಿ ಗ್ರಾಮೀಣ ಭಾಗದ 75 ಸರ್ಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ 8 ಕೇಜಿ ತೂಕದ `ಆಜಾದಿ ಸ್ಯಾಟ್’ ಉಪಗ್ರಹವನ್ನು ಕಕ್ಷೆಗೆ ಕೊಂಡೊಯ್ಯಲಿದೆ. ಈ ವಾಹಕವು ತ್ರಿವರ್ಣ ಧ್ವಜವನ್ನೂ ನಭಕ್ಕೆ ಹೊತ್ತೊಯ್ಯಲಿದೆ. ಈ ಹೊಸ ಪ್ರಯತ್ನದ ಮೂಲಕ ವಿಶ್ವದ ಚಿಕ್ಕ ರಾಕೆಟ್‌ಗಳ ಮಾರುಕಟ್ಟೆಗೆ ಅಡಿ ಇಡಲು ಇಸ್ರೋ ಸಜ್ಜಾಗಿದೆ. ಇದು ಎಸ್‌ಎಸ್‌ಎಲ್‌ವಿಯ ಮೊದಲ ಉಡಾವಣೆಯಾಗಿದ್ದು, 145 ಕೆಜಿ ತೂಕದ ಭೂ ಪರಿವೀಕ್ಷಣಾ ಉಪಗ್ರಹ ಹಾಗೂ `ಆಜಾದಿ ಸ್ಯಾಟ್’ಗಳನ್ನು ಹೊತ್ತೊಯ್ಯಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪಕ್ಷ ಗೆದ್ದ ಬಳಿಕವೇ ಮುಖ್ಯಮಂತ್ರಿ ವಿಚಾರ – ಮುಂದಿನ ಸಿಎಂ ಚರ್ಚೆಗೆ ರಾಹುಲ್ ಗಾಂಧಿ ಬ್ರೇಕ್

    ಅಲ್ಲದೇ ಎಸ್‌ಎಸ್‌ಎಲ್‌ವಿ ಕಡಿಮೆ ಸುತ್ತುವ ಅವಧಿಯನ್ನು ಹೊಂದಿದ್ದು, ಕಡಿಮೆ ಎತ್ತರದ ಕಕ್ಷೆಗಳಿಗೆ ಉಪಗ್ರಹವನ್ನು ಸೇರಿಸುವ ಬಾಹ್ಯಾಕಾಶ ಬೇಡಿಕೆಯನ್ನು ಯಶಸ್ವಿಯಾಗಿ ಪೂರೈಸಲಿದೆ ಎಂದು ಇಸ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದರ್ಗಾಕ್ಕೆ ತೆರಳಿ ವಾಪಸ್ಸಾಗ್ತಿದ್ದಾಗ ಅಪಘಾತ- ಒಂದೇ ಕುಟುಂಬದ 6 ಮಂದಿ ದುರ್ಮರಣ

    ಆ.7ರಂದು ಮುಂಜಾನೆ 9.18ಕ್ಕೆ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಈ ರಾಕೆಟ್ ಅನ್ನು ಉಡಾವಣೆ ಮಾಡಲಾಗುತ್ತದೆ. ಸುಮಾರು 13.2 ನಿಮಿಷಗಳ ಹಾರಾಟದ ಬಳಿಕ ಉಪಗ್ರಹಗಳನ್ನು ಈ ರಾಕೆಟ್ ಕಕ್ಷೆಗೆ ತಲುಪಿಸಲಿದೆ.

    ಆಜಾದಿ ಸ್ಯಾಟ್ ವಿಷೇಷತೆ: ಸ್ವಾತಂತ್ರ‍್ಯ ದೊರಕಿ 75 ವರ್ಷ ಆದ ಕಾರಣ ದೇಶ ಇಂದು ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ವಿಶೇಷವಾಗಿ 75 ಪೇಲೋಡ್ ಇರುವ 75 ಗ್ರಾಮೀಣ ಸರ್ಕಾರಿ ಶಾಲೆಗಳ 750 ಮಕ್ಕಳು ಆಜಾದಿ ಸ್ಯಾಟ್ ಉಪಗ್ರಹ ಸಿದ್ಧಪಡಿಸಿದ್ದಾರೆ. ಇದು `ಆಜಾದಿ ಸ್ಯಾಟ್’ ವಿಶೇಷತೆ. ಈ ಮೂಲಕ ಬಾಹ್ಯಾಕಾಶ ಅಧ್ಯಯನದಲ್ಲಿ ಬಾಲಕಿಯರಿಗೂ ಪ್ರೇರಣೆ ನೀಡುವುದು ಇದರ ಹಿಂದಿನ ಉದ್ದೇಶ.

    ಎಸ್‌ಎಸ್‌ಎಲ್‌ವಿ ವಿಶೇಷತೆ: ಇಸ್ರೋದ ವರ್ಕ್ಹಾರ್ಸ್ ಎಂದೇ ಖ್ಯಾತಿ ಪಡೆದಿರುವ ಪಿಎಸ್‌ಎಲ್‌ವಿಗಿಂತ ಬರೋಬ್ಬರಿ 10 ಮೀ. ಚಿಕ್ಕದಾಗಿರುವ ಎಸ್‌ಎಸ್‌ಎಲ್‌ವಿ ಕೇವಲ 34 ಮೀ. ಉದ್ದ ಹಾಗೂ 2 ಮೀ. ವ್ಯಾಸವನ್ನು ಹೊಂದಿದೆ. ಈ ರಾಕೆಟ್ ಒಟ್ಟು 120 ಟನ್ ತೂಕವಿದ್ದು, ಸುಮಾರು 500 ಕೇಜಿ ಪೇಲೋಡ್ ಅನ್ನು 500 ಕಿ.ಮೀ. ದೂರದಲ್ಲಿರುವ ಕಕ್ಷೆಗೆ ತಲುಪಿಸುವ ಸಾಮರ್ಥ್ಯ ಹೊಂದಿದೆ.

    Live Tv
    [brid partner=56869869 player=32851 video=960834 autoplay=true]

  • ಇಸ್ರೋ ಭೂ ವೀಕ್ಷಣಾ ಉಪಗ್ರಹ ಯಶಸ್ವಿ ಉಡಾವಣೆ

    ಇಸ್ರೋ ಭೂ ವೀಕ್ಷಣಾ ಉಪಗ್ರಹ ಯಶಸ್ವಿ ಉಡಾವಣೆ

    ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಹಾಗೂ ಸಂಶೋಧನಾ ಸಂಸ್ಥೆ(ಇಸ್ರೋ) ಸೋಮವಾರ ಮುಂಜಾನೆ ಭೂ ವೀಕ್ಷಣಾ ಉಪಗ್ರಹ ಸಿ52 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

    ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮುಂಜಾನೆ 5:59ಕ್ಕೆ ಸರಿಯಾಗಿ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಪಿಎಸ್‌ಎಲ್‌ವಿ) ರಾಕೆಟ್ ಮೂಲಕ ಉಪಗ್ರಹವನ್ನು ಹಾರಿಸಲಾಗಿದೆ. EOS-04 ಜೊತೆ 2 ಸಣ್ಣ ಉಪಗ್ರಹವನ್ನು ರಾಕೆಟ್ ಕಕ್ಷೆಗೆ ಕೊಂಡೊಯ್ದಿದೆ. ಇದು 2022ರ ಇಸ್ರೋವಿನ ಮೊದಲ ಕಾರ್ಯಾಚರಣೆಯಾಗಿದೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    EOS-04 ರೇಡಾರ್ ಇಮೇಜಿಂಗ್ ಉಪಗ್ರಹವಾಗಿದ್ದು ಕೃಷಿ, ಅರಣ್ಯ, ತೋಟಗಳು, ಮಣ್ಣಿನ ತೇವಾಂಶ, ಜಲವಿಜ್ಞಾನ ಹಾಗೂ ಪ್ರವಾಹ ಮ್ಯಾಪಿಂಗ್‌ನಂತಹ ಅಪ್ಲಿಕೇಶನ್‌ಗಳಿಗೆ ಯಾವುದೇ ಹವಾಮಾನ ಪರಿಸ್ಥಿತಿಗಳಲ್ಲಿ ಉತ್ತಮ ಗುಣಮಟ್ಟದ ಚಿತ್ರಗಳನ್ನು ತೆಗೆಯುವಂತೆ ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ: ಭಾರತೀಯ ಖಗೋಳಶಾಸ್ತ್ರಜ್ಞರಿಂದ ನೂತನ ಪ್ರಯತ್ನ – ಎಐ ತಂತ್ರಜ್ಞಾನ ಬಳಸಿ ವಾಸಯೋಗ್ಯ ಗ್ರಹಗಳ ಪತ್ತೆ

    EOS-04 ಉಪಗ್ರಹದೊಂದಿಗೆ ಎರಡು ಚಿಕ್ಕ ಉಪಗ್ರಹಗಳನ್ನು ಉಡಾಯಿಸಿದ್ದು, ಇದನ್ನು ಬಾಹ್ಯಾಕಾಶ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿದ್ದಾರೆ. INSPIREsat-1 ಎಂದು ಕರೆಯಲಾಗುವ ಉಪಗ್ರಹ 8.1 ಕೆಜಿ ತೂಕವಿದೆ. ಇದು ಸೂರ್ಯನ ಶಾಖದ ಕ್ರಿಯೆಯ ಬಗ್ಗೆ ಮಾಹಿತಿ ತಿಳಿಸಲಿದ್ದು, ಇದರ ಜೀವಿತಾವಧಿ 1 ವರ್ಷ ಇರಲಿದೆ.

  • ಬಾಹ್ಯಾಕಾಶಕ್ಕೆ ಮೋದಿ ಭಾವಚಿತ್ರ, ಭಗವದ್ಗೀತೆ – ಇಸ್ರೋದ ಉಪಗ್ರಹ ಉಡಾವಣೆ ಯಶಸ್ವಿ

    ಬಾಹ್ಯಾಕಾಶಕ್ಕೆ ಮೋದಿ ಭಾವಚಿತ್ರ, ಭಗವದ್ಗೀತೆ – ಇಸ್ರೋದ ಉಪಗ್ರಹ ಉಡಾವಣೆ ಯಶಸ್ವಿ

    ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ವರ್ಷದ ಮೊದಲ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಕಕ್ಷೆಗೆ ಸೇರಿಸಿದೆ.

    ತನ್ನ ಪಿಎಸ್‌ಎಲ್‌ವಿ 51 ರಾಕೆಟ್‌ ಮೂಲಕ ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹದೊಂದಿಗೆ ಇತರ 18 ಉಪಗ್ರಹಗಳನ್ನು ಶ್ರೀಹರಿಕೋಟದಲ್ಲಿರುವ ಡಾ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 10:30ಕ್ಕೆ ಉಡಾವಣೆ ಮಾಡಲಾಯಿತು.

    ಒಟ್ಟು 20 ಉಪಗ್ರಹಗಳನ್ನು ಇಂದು ಉಡಾವಣೆ ಮಾಡಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ 2 ಉಪಗ್ರಹಗಳ ಉಡಾವಣೆಯನ್ನು ಕಳೆದ ವಾರ ರದ್ದು ಮಾಡಲಾಗಿತ್ತು.

    ಭಾರತದ ಖಾಸಗಿ ಸಂಸ್ಥೆಗಳು ಅಭಿವೃದ್ಧಿಪಡಿಸಿದ ‘ಆನಂದ್’, ‘ಸತೀಶ್ ಧವನ್’ ಹಾಗೂ ‘ಯೂನಿಟಿಶಾಟ್’ ಉಪಗ್ರಹಗಳ ಜೊತೆ ಬ್ರೆಜಿಲ್ ದೇಶಕ್ಕೆ ಸೇರಿದ ಅಮೆಜೋನಿಯಾ-1 ಉಪಗ್ರಹವನ್ನು ಇಸ್ರೋ ರಾಕೆಟ್‌ ಕಕ್ಷೆಗೆ ಸೇರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಭಾವ ಚಿತ್ರ, ಪವಿತ್ರ ಗ್ರಂಥ ಭಗವದ್ಗೀತೆಯ ಎಲೆಕ್ಟ್ರಾನಿಕ್‌ ಪ್ರತಿ ಹಾಗೂ 25 ಸಾವಿರ ನಾಗರಿಕರ ಹೆಸರು ಇರುವ ಉಪಗ್ರಹವನ್ನು ಇಂದು ಕಳುಹಿಸಲಾಯಿತು.

    ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹ 637 ಕೆಜಿ ತೂಕವನ್ನು ಹೊಂದಿದ್ದು, ಇದು ಬ್ರೆಜಿಲ್‌ ವ್ಯಾಪ್ತಿಯಲ್ಲಿರುವ ಅಮೆಜಾನ್‌ ಪ್ರದೇಶದ ಅರಣ್ಯ ನಾಶದ ಬಗ್ಗೆ ಮಾಹಿತಿ ನೀಡಲಿದೆ.

    ಭಾರತೀಯ ಉಪಗ್ರಹಗಳಾದ ‘ಆನಂದ್’ ಅನ್ನು ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥೆ ‘ಪಿಕ್ಸೆಲ್’ ಅಭಿವೃದ್ದಿಪಡಿಸಿದೆ. ‘ಸತೀಶ್ ಧವನ್’ ಅನ್ನು ಚೆನ್ನೈ ಮೂಲದ ‘ಸ್ಪೇಸ್ ಕಿಡ್ಜ್‌ ಇಂಡಿಯಾ ಅನ್ನು ಜಿಟ್ ಶಾಟ್ (ಶ್ರೀಪೆರಂಬುದೂರ್), ಜಿಹೆಚ್ಆರ್ ಸಿ ಈ ಶಾಟ್ (ನಾಗ್ಪುರ), ಶ್ರೀ ಶಕ್ತಿ ಶಾಟ್ (ಕೊಯಮತ್ತೂರು) ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.

    ಸ್ಪೇಸ್‌ಕಿಡ್ಜ್ ಇಂಡಿಯಾ ಭಾರತದ ಪ್ರಸಿದ್ಧ ಬಾಹ್ಯಕಾಶ ವಿಜ್ಞಾನಿ ಸತೀಶ್ ಧವನ್ ಅವರ ಹೆಸರಿನಲ್ಲಿ ʼಸತೀಶ್ ಧವನ್ʼ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದೆ. ತನ್ನ ಮೊದಲ ಉಪಗ್ರಹ ಇದಾಗಿರುವ ಕಾರಣ ಇದರಲ್ಲಿ ಪ್ರಧಾನಿ ಮೋದಿಯವರ ಭಾವ ಚಿತ್ರವನ್ನು ಉಪಗ್ರಹದಲ್ಲಿ ಕಳುಹಿಸುವುದಾಗಿ ಸಂಸ್ಥೆಯ ಸಿಇಓ ಡಾ.ಶ್ರೀಮತಿ ಕೇಸನ್  ಉಡಾವಣೆಗೂ ಮೊದಲು ತಿಳಿಸಿದ್ದರು.  ಉಪಗ್ರಹದ ಪ್ಯಾನೆಲ್‌ಗೆ ಮೋದಿಯವರ ಫೋಟೋ ಇರಲಿದೆ. ಜೊತೆಗೆ ‘ಆತ್ಮನಿರ್ಭರ್ ಮಿಷನ್’ ವಾಕ್ಯಗಳ ಜೊತೆಗೆ ಧರ್ಮಗ್ರಂಥ ಭಗವದ್ಗೀತೆಯ ಎಲೆಕ್ಟ್ರಾನಿಕ್‌ ಪ್ರತಿ, 25 ಸಾವಿರ ದಿಯ ಹೆಸರುಗಳನ್ನು ಕೊಂಡೊಯ್ಯಲಿದೆ ಎಂದು ಅವರು ವಿವರಿಸಿದ್ದಾರೆ.

    ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಹೆಸರುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ನಾವು ಮನವಿ ಮಾಡಿದ್ದೆವು. ಒಂದು ವಾರದಲ್ಲಿ 25 ಸಾವಿರ ಹೆಸರುಗಳು ನೋಂದಣಿಯಾದವು. ಈ ಪೈಕಿ 1 ಸಾವಿರ ವಿದೇಶಿಯರು ನೊಂದಣಿ ಮಾಡಿದ್ದಾರೆ. ಚೆನ್ನೈನ ಒಂದು ಶಾಲೆಯ ತನ್ನ ಎಲ್ಲ ವಿದ್ಯಾರ್ಥಿಗಳ ಹೆಸರನ್ನು ಕಳುಹಿಸಿದೆ. ಈ ಹೆಸರುಗಳೊಂದಿಗೆ ನಾವು ಮೋದಿಯವರ ಫೋಟೋವನ್ನು ಕಳುಹಿಸುತ್ತಿದ್ದೇವೆ. ಕೆಲ ವಿದೇಶಿ ಪ್ರಯೋಗಗಳಲ್ಲಿ ಆಯಾ ದೇಶಗಳು ಬೈಬಲ್‌ನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದವು. ಹಾಗಾಗಿ ನಮ್ಮ ದೇಶದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ನಭಕ್ಕೆ ಕಳುಹಿಸಲು ನಾವು ಮುಂದಾಗಿದ್ದೇವೆ ಎಂದು ಡಾ. ಶ್ರೀಮತಿ ಮಾಹಿತಿ ನೀಡಿದ್ದಾರೆ.

    ಪ್ಯಾನೆಲ್‌ ಕೆಳಗಡೆ ಇಸ್ರೋ ಅಧ್ಯಕ್ಷ ಶಿವನ್‌ ಮತ್ತು ವೈಜ್ಞಾನಿಕ ಕಾರ್ಯದರ್ಶಿ ಡಾ.ಆರ್.ಉಮಾಮಹೇಶ್ವರನ್ ಅವರ ಹೆಸರು ಇರಲಿದೆ. ಉಪಗ್ರಹದಲ್ಲಿರುವ ಎಲೆಕ್ಟ್ರಾನಿಕ್ಸ್ ಮತ್ತು ಸರ್ಕ್ಯೂಟ್‌ ಸೇರಿದಂತೆ ಸೇರಿದಂತೆ ಎಲ್ಲವನ್ನೂ ಭಾರತದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

  • ಭಾರತದ 100ನೇ ಉಪಗ್ರಹ ಉಡಾಯಿಸಿದ ಬೆನ್ನಲ್ಲೇ ನರ್ವಸ್ ಆಯ್ತು ಪಾಕಿಸ್ತಾನ

    ಭಾರತದ 100ನೇ ಉಪಗ್ರಹ ಉಡಾಯಿಸಿದ ಬೆನ್ನಲ್ಲೇ ನರ್ವಸ್ ಆಯ್ತು ಪಾಕಿಸ್ತಾನ

    ನವದೆಹಲಿ: ಉಗ್ರಗಾಮಿಗಳಿಗೆ ಆರ್ಥಿಕ ಸಹಾಯ ನೀಡಿ ಭಾರತದಲ್ಲಿ ಅಶಾಂತಿ ನೆಲೆಸಲು ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನಕ್ಕೆ ಭಾರತ 100ನೇ ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ ಸೇರಿದ್ದು ತಲೆನೋವಾಗಿ ಪರಿಣಮಿಸಿದೆ.

    ಹೌದು, ಇಸ್ರೋ ಸಂಸ್ಥೆ ಇಂದು ಬೆಳಗ್ಗೆ ಭಾರತದ 100 ನೇ ಉಪಗ್ರಹವನ್ನು ಯಶಸ್ವಿಯಾಗಿ ನಭಕ್ಕೆ ಚಿಮ್ಮಿಸಿದೆ. ಆದರೆ ಭಾರತದ ಉಪಗ್ರಹ ಉಡಾವಣೆ ಯಶಸ್ವಿಯಾದ ಕೂಡಲೇ ಪಾಕಿಸ್ತಾನ ಈ ಕುರಿತು ಅಪಸ್ವರ ಎತ್ತಿದ್ದು, ಭಾರತದ ಈ ಉಪಗ್ರಹ ಯೋಜನೆಯಿಂದ ಪ್ರಾದೇಶಿಕ ವ್ಯೂಹಾತ್ಮಕ ಸ್ಥಿರತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂದು ಆರೋಪಿಸಿದೆ.

    ಈ ಆರೋಪದ ಜೊತೆ ಭಾರತದ ಈ ಉಪಗ್ರಹ ತಂತ್ರಜ್ಞಾನವನ್ನು ತನ್ನ ಮಿಲಿಟರಿ ರಕ್ಷಣಾ ವ್ಯವಸ್ಥೆಗೆ ಬಳಸಿಕೊಂಡರೆ ದಕ್ಷಿಣ ಏಷ್ಯಾ ಖಂಡದಲ್ಲಿ ಶಾಂತಿಗೆ ದಕ್ಕೆ ಉಂಟಾಗಲಿದೆ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆ ಹೇಳಿದೆ.

    ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್, ಭಾರತ ಉಡಾವಣೆ ಮಾಡಿರುವ ಉಪಗ್ರಹಗಳು ಮಿಲಿಟರಿ ಹಾಗೂ ನಾಗರಿಕ ಉದ್ದೇಶ ಎರಡಕ್ಕೂ ಬಳಕೆ ಮಾಡಿಕೊಳ್ಳಲು ಸಾಧ್ಯವಿದ್ದು, ಒಂದು ವೇಳೆ ಭಾರತ ಇದನ್ನೂ ಮಿಲಿಟರಿ ವ್ಯವಸ್ಥೆಯಲ್ಲಿ ಬಳಕೆ ಮಾಡಿಕೊಂಡರೆ ಅದು ಮಿಲಿಟರಿ ವ್ಯವಸ್ಥೆಯ ಅಸ್ಥಿರತೆಗೆ ಕಾರಣವಾಗಲಿದೆ. ಅಲ್ಲದೇ ಪ್ರಾದೇಶಿಕ ಸಂಬಂಧಗಳ ಆಸ್ಥಿರತೆಗೆ ಕಾರಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಇಸ್ರೋ ತನ್ನ 100ನೇ ಉಪಗ್ರಹವನ್ನು ಆಂಧ್ರದ ಶ್ರೀಹರಿಕೋಟಾದಲ್ಲಿರುವ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಕಳುಹಿಸಿತ್ತು. ಕಾರ್ಟೋಸ್ಯಾಟ್-2 ಸಿರೀಸ್‍ನ ಒಂದು, ಒಂದು ನ್ಯಾನೋ ಮತ್ತು ಮೈಕ್ರೋ ಸ್ಯಾಟಲೈಟ್‍ಗಳನ್ನು ಹೊತ್ತು ಪಿಎಸ್‍ಎಲ್‍ವಿ ಸಿ-40 ಉಡಾವಣಾ ನೌಕೆ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಭಾರತದ ಉಪಗ್ರಹದ ಜೊತೆಗೆ ಜೊತೆಗೆ ಅಮೆರಿಕ, ಕೆನಡಾ, ಇಂಗ್ಲೆಂಡ್, ಕೊರಿಯಾ, ಫಿನ್‍ಲ್ಯಾಂಡ್ ಹಾಗೂ ಫ್ರಾನ್ಸ್ ಗೆ ಸೇರಿದ 28 ವಿದೇಶಿ ಉಪಗ್ರಹಗಳು ಕಕ್ಷೆ ಸೇರಿದ್ದವು. ಕಾರ್ಟೋಸ್ಯಾಟ್-2 ಸ್ಯಾಟ್‍ಲೈಟ್ 710 ಕೆಜಿ ಭಾರ ಹೊಂದಿತ್ತು. ಆದರೆ ಕಳೆದ ವರ್ಷದ ಆಗಸ್ಟ್ ನಲ್ಲಿ ಉಷ್ಣ ಕವಚ ಪ್ರತ್ಯೇಕೀಕರಣದಲ್ಲಿ ತೊಂದರೆ ಉಂಟಾಗಿ ಐಆರ್ ಎನ್‍ಎಸ್‍ಎಸ್-1ಎಚ್ ಉಪಗ್ರಹ ಉಡಾವಣೆ ವಿಫಲವಾಗಿತ್ತು.

    ಸಾರ್ಕ್ ಉಪಗ್ರಹಕ್ಕೆ ಸಹಕರಿಸಲಿಲ್ಲ:
    2014ರ ಮೇನಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ, ಮಿತ್ರರಾಷ್ಟ್ರಗಳಿಗೆ ಭಾರತದ ಉಡುಗೊರೆಯಾಗಿ ಸಾರ್ಕ್ ಸ್ಯಾಟಲೈಟ್ ಅಭಿವೃದ್ಧಿಪಡಿಸಲು ಇಸ್ರೋ ವಿಜ್ಞಾನಿಗಳಿಗೆ 2014ರ ಜೂನ್ ನಲ್ಲಿ ಕೇಳಿದ್ದರು. ಮೋದಿ ಆಶಯದಂತೆ ದಕ್ಷಿಣ ಏಷ್ಯಾ ಬಾಂಧವ್ಯದ ಪ್ರತೀಕ `ಸೌತ್ ಏಷ್ಯಾ ಕಮ್ಯುನಿಕೇಷನ್ ಸ್ಯಾಟಲೈಟ್’ ಆದ ಜಿಸ್ಯಾಟ್-9(ಜಿಯೋಸ್ಟೇಷನರಿ ಕಮ್ಯುನಿಕೇಷನ್ ಸ್ಯಾಟಲೈಟ್) ಇಸ್ರೋ ತಯಾರಿಸಿ 2017ರ ಮೇ ತಿಂಗಳಿನಲ್ಲಿ ಕಕ್ಷೆಗೆ ಸೇರಿಸಿತ್ತು.

    ಈ ಮಹತ್ವದ ಯೋಜನೆಗೆ ಪಾಕಿಸ್ತಾನ ಸಹಕಾರ ನೀಡಿರಲಿಲ್ಲ. ಸಾರ್ಕ್ ರಾಷ್ಟ್ರಗಳಾದ ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಈ ಯೋಜನೆಯ ಭಾಗವಾಗಿತ್ತು. ದೂರಸಂಪರ್ಕ, ದೂರಸಂವಹನ, ಡಿಟಿಎಚ್, ವಿಸ್ಯಾಟ್, ದೂರಶಿಕ್ಷಣ ಮತ್ತು ಟೆಲಿ ಮೆಡಿಸಿನ್ ಕ್ಷೇತ್ರದಲ್ಲಿ ಈ ಉಪಗ್ರಹ ನೆರವಿಗೆ ಬರಲಿದೆ. ಅಷ್ಟೇ ಅಲ್ಲ, ಭೂಕಂಪ, ಪ್ರವಾಹ, ಚಂಡಮಾರುತ, ಸುನಾಮಿಗಳು ಹೀಗೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಹಾಟ್‍ಲೈನ್ ಸಂಪರ್ಕದ ಮೂಲಕ ಪರಿಹಾರ ಕಾರ್ಯಾಚರಣೆಗೆ ನೆರವಾಗಲಿದೆ.

    ಭಾರತಕ್ಕಿಂತಲೂ ಮೊದಲು ಅಂದರೆ 1961 ರಲ್ಲೇ ಪಾಕಿಸ್ತಾನ ಬಾಹ್ಯಾಕಾಶ ಕೇಂದ್ರವನ್ನು ಆರಂಭಿಸಿ ಸಂಶೋಧನೆಯಲ್ಲಿ ತೊಡಗಿತ್ತು. ನಂತರದಲ್ಲಿ 8 ವರ್ಷಗಳ ಬಳಿಕ ಭಾರತ ತನ್ನ ಬಾಹ್ಯಾಕಾಶ ಕೇಂದ್ರ ಇಸ್ರೋ ವನ್ನು ಸ್ಥಾಪಿಸಿತು. ಇಸ್ರೋ ತನ್ನ ಆಧುನಿಕ ಸಂಶೋಧನೆಗಳ ಮೂಲಕ ಹೊಸ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಕೀರ್ತಿ ಪಡೆದಿದೆ. ಅಲ್ಲದೇ ಅಮೆರಿಕದ ನಾಸಾ ಬಾಹ್ಯಾಕಾಶ ಸಂಸ್ಥೆಗೆ ಪೈಪೋಟಿ ನೀಡುವ ಹಂತವನ್ನು ತಲುಪಿದೆ. ಇಸ್ರೋ ಕೇವಲ ಭಾರತದ ಉಪಗ್ರಹಗಳನ್ನು ಮಾತ್ರ ಉಡಾವಣೆ ಮಾಡದೇ ಈಗ ವಿದೇಶಿ ಉಪಗ್ರಹಗಳನ್ನು ಸಹ ಕಡಿಮೆ ವೆಚ್ಚದಲ್ಲಿ ಉಡಾವಣೆ ಮಾಡುಕೊಡುತ್ತಿದೆ.

    ತಿರುಗೇಟು ಕೊಟ್ಟ ಜನ:
    ಇಸ್ರೋ ಉಪಗ್ರಹ ಅಪಸ್ವರ ಎತ್ತಿದ ಪಾಕ್ ನಡೆಯಲ್ಲಿ ಖಂಡಿಸಿದ ಭಾರತೀಯರು, ನೀವು ಕ್ಷಿಪಣಿ, ಬಾಂಬ್ ತಯಾರಿಸುವುದರ ಜೊತೆಗೆ ಉಗ್ರರಿಗೆ ಆರ್ಥಿಕ ಸಹಾಯ ನೀಡುವುದು ಹೇಗೆ ಎನ್ನುವುದರ ಬಗ್ಗೆ ತಲೆಕೆಡಿಸಿಕೊಳ್ಳಿ. ನಮ್ಮ ದೇಶದ ಸಾಧನೆ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದ್ದಾರೆ.

  • ವಿಡಿಯೋ: ಇಸ್ರೋದಿಂದ ಶತಕ ಸಾಧನೆ- 30 ಉಪಗ್ರಹಗಳು ಸೇರಿ ನಭಕ್ಕೆ ಚಿಮ್ಮಿದ ಭಾರತದ 100ನೇ ಉಪಗ್ರಹ

    ವಿಡಿಯೋ: ಇಸ್ರೋದಿಂದ ಶತಕ ಸಾಧನೆ- 30 ಉಪಗ್ರಹಗಳು ಸೇರಿ ನಭಕ್ಕೆ ಚಿಮ್ಮಿದ ಭಾರತದ 100ನೇ ಉಪಗ್ರಹ

    ನವದೆಹಲಿ: ನಮ್ಮ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

    ಇಂದು ಬೆಳಗ್ಗೆ 9.29ಕ್ಕೆ ಇಸ್ರೋ ಭಾರತದ 100ನೇ ಉಪಗ್ರಹವನ್ನು ನಭಕ್ಕೆ ಚಿಮ್ಮಿಸಿ ಇಸ್ರೋ ಶತಕ ಸಾಧನೆ ಮಾಡಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಉಡಾವಣಾ ಕೇಂದ್ರದಿಂದ ಭಾರತದ ಕಾರ್ಟೋಸ್ಯಾಟ್-2 ಸಿರೀಸ್‍ನ ಒಂದು, ಒಂದು ನ್ಯಾನೋ ಮತ್ತು ಮೈಕ್ರೋ ಸ್ಯಾಟಲೈಟ್‍ಗಳನ್ನು ಹೊತ್ತು ಪಿಎಸ್‍ಎಲ್‍ವಿ ಸಿ-40 ಉಡಾವಣಾ ನೌಕೆ ನಭಕ್ಕೆ ಚಿಮ್ಮಿದೆ. ಇದರ ಜೊತೆಗೆ ಅಮೆರಿಕ, ಕೆನಡಾ, ಇಂಗ್ಲೆಂಡ್, ಕೊರಿಯಾ, ಫಿನ್‍ಲ್ಯಾಂಡ್ ಹಾಗೂ ಫ್ರಾನ್ಸ್ ಗೆ ಸೇರಿದ 28 ವಿದೇಶಿ ಉಪಗ್ರಹಗಳು ಕಕ್ಷೆ ಸೇರಲಿವೆ. ಕಾರ್ಟೋಸ್ಯಾಟ್-2 ಸ್ಯಾಟ್‍ಲೈಟ್ 710 ಕೆಜಿ ಭಾರವಿದೆ.

    ಎರಡು ಕಕ್ಷೆಗಳಿಗೆ ಉಪಗ್ರಹಗಳನ್ನ ಸೇರಿಸುತ್ತಿರುವುದರಿಂದ ಈ ಉಡಾವಣೆ ವಿಶಿಷ್ಟವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. 30 ಉಪಗ್ರಹಗಳನ್ನ ಭೂಮಿಯಿಂದ 550 ಕಿ.ಮೀ ಎತ್ತರದ ಕಕ್ಷೆಗೆ ಉಡಾವಣೆ ಮಾಡಿದ್ದು, ಮತ್ತೊಂದನ್ನು 359 ಕಿ.ಮೀ ಎತ್ತರದ ಕಕ್ಷೆಗೆ ಸೇರಿಸಬೇಕಿದೆ. ಮಲ್ಟಿಪಲ್ ಬರ್ನ್ ಟೆಕ್ನಾಲಜಿ ಮೂಲಕ ಇದನ್ನ ಮಾಡಲಿದ್ದು, ರಾಕೆಟ್‍ನ ಎತ್ತರವನ್ನ ನಿಯಂತ್ರಿಸಲು ಅದನ್ನು ಸ್ವಿಚ್ ಆಫ್ ಮಾಡಿ ಮತ್ತೆ ಸ್ವಿಚ್ ಆನ್ ಮಾಡಲಾಗುತ್ತದೆ.

    ಉಡಾವಣೆ ಮತ್ತು ಉಪಗ್ರಹಗಳನ್ನು ಎರಡು ಕಕ್ಷೆಗೆ ಸೇರಿಸುವ ಈ ಇಡೀ ಪ್ರಕ್ರಿಯೆಗೆ ಸುಮಾರು 2 ಗಂಟೆ 21 ನಿಮಿಷ ಸಮಯ ಹಿಡಿಯುತ್ತದೆ. ಪಿಎಸ್‍ಎಲ್‍ವಿ ಉಡವಣೆಯ ಕೌಂಟ್‍ಡೌನ್ ಗುರುವಾರ ಬೆಳಗ್ಗೆ 5.29ರಿಂದ ಶುರುವಾಗಿತ್ತು.

    ಕಳೆದ ವರ್ಷದ ಆಗಸ್ಟ್ ನಲ್ಲಿ ಉಷ್ಣ ಕವಚ ಪ್ರತ್ಯೇಕೀಕರಣದಲ್ಲಿ ತೊಂದರೆ ಉಂಟಾಗಿ ಉಡಾವಣೆ ವಿಫಲವಾಗಿತ್ತು.

    https://twitter.com/DDNewsLive/status/951322170877083649

     

  • ಕೆಲವೇ ನಿಮಿಷಗಳಲ್ಲಿ ಇಸ್ರೋದಿಂದ ಶತಕ ಸಾಧನೆ- ಭಾರತದ 100ನೇ ಉಪಗ್ರಹದ ಜೊತೆ 30 ಉಪಗ್ರಹಗಳ ಉಡಾವಣೆ

    ಕೆಲವೇ ನಿಮಿಷಗಳಲ್ಲಿ ಇಸ್ರೋದಿಂದ ಶತಕ ಸಾಧನೆ- ಭಾರತದ 100ನೇ ಉಪಗ್ರಹದ ಜೊತೆ 30 ಉಪಗ್ರಹಗಳ ಉಡಾವಣೆ

    ನವದೆಹಲಿ: ಇನ್ನು ಕೆಲವೇ ನಿಮಿಷಗಳಲ್ಲಿ ನಮ್ಮ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

    ಇಂದು ಬೆಳಗ್ಗೆ 9.29ಕ್ಕೆ ಇಸ್ರೋ ಭಾರತದ 100ನೇ ಉಪಗ್ರಹವನ್ನು ನಭಕ್ಕೆ ಚಿಮ್ಮಿಸಲಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಉಡಾವಣಾ ಕೇಂದ್ರದಿಂದ ಭಾರತದ ಕಾರ್ಟೋಸ್ಯಾಟ್-2 ಸಿರೀಸ್‍ನ ಒಂದು, ಒಂದು ನ್ಯಾನೋ ಮತ್ತು ಮೈಕ್ರೋ ಸ್ಯಾಟಲೈಟ್‍ ಗಳನ್ನು ಹೊತ್ತು ಪಿಎಸ್‍ಎಲ್‍ವಿ ಸಿ-40 ಉಡಾವಣಾ ನೌಕೆ ನಭಕ್ಕೆ ಚಿಮ್ಮಲಿದೆ. ಇದರ ಜೊತೆಗೆ ಅಮೆರಿಕ, ಕೆನಡಾ, ಇಂಗ್ಲೆಂಡ್, ಕೊರಿಯಾ, ಫಿನ್‍ಲ್ಯಾಂಡ್ ಹಾಗೂ ಫ್ರಾನ್ಸ್ ಗೆ ಸೇರಿದ 28 ವಿದೇಶಿ ಉಪಗ್ರಹಗಳು ಕಕ್ಷೆ ಸೇರಲಿವೆ. ಕಾರ್ಟೋಸ್ಯಾಟ್-2 ಸ್ಯಾಟ್‍ಲೈಟ್ 710 ಕೆಜಿ ಭಾರವಿದೆ.

    ಎರಡು ಕಕ್ಷೆಗಳಿಗೆ ಉಪಗ್ರಹಗಳನ್ನ ಸೇರಿಸುತ್ತಿರುವುದರಿಂದ ಈ ಉಡಾವಣೆ ವಿಶಿಷ್ಟವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. 30 ಉಪಗ್ರಹಗಳನ್ನ ಭೂಮಿಯಿಂದ 505 ಕಿ.ಮೀ ಎತ್ತರದ ಕಕ್ಷೆಗೆ ಉಡಾವಣೆ ಮಾಡಲಿದ್ದು, ಮತ್ತೊಂದನ್ನು 359 ಕಿ.ಮೀ ಎತ್ತರದ ಕಕ್ಷೆಗೆ ಸೇರಿಸಬೇಕಿದೆ. ಮಲ್ಟಿಪಲ್ ಬರ್ನ್ ಟೆಕ್ನಾಲಜಿ ಮೂಲಕ ಇದನ್ನ ಮಾಡಲಿದ್ದು, ರಾಕೆಟ್‍ನ ಎತ್ತರವನ್ನ ನಿಯಂತ್ರಿಸಲು ಅದನ್ನು ಸ್ವಿಚ್ ಆಫ್ ಮಾಡಿ ಮತ್ತೆ ಸ್ವಿಚ್ ಆನ್ ಮಾಡಲಾಗುತ್ತದೆ.

    ಉಡಾವಣೆ ಮತ್ತು ಉಪಗ್ರಹಗಳನ್ನು ಎಡರು ಕಕ್ಷೆಗೆ ಸೇರಿಸುವ ಈ ಇಡೀ ಪ್ರಕ್ರಿಯೆಗೆ ಸುಮಾರು 2 ಗಂಟೆ 21 ನಿಮಿಷ ಸಮಯ ಹಿಡಿಯುತ್ತದೆ. ಪಿಎಸ್‍ಎಲ್‍ವಿ ಉಡವಣೆಯ ಕೌಂಟ್‍ಡೌನ್ ಗುರುವಾರ ಬೆಳಗ್ಗೆ 5.29ರಿಂದ ಶುರುವಾಗಿದೆ.

    ಕಳೆದ ವರ್ಷದ ಆಗಸ್ಟ್ ನಲ್ಲಿ ಉಷ್ಣ ಕವಚ ಪ್ರತ್ಯೇಕೀಕರಣದಲ್ಲಿ ತೊಂದರೆ ಉಂಟಾಗಿ ಉಡಾವಣೆ ವಿಫಲವಾಗಿತ್ತು.

  • 29 ವಿದೇಶಿ ಉಪಗ್ರಗಳ ಉಡಾವಣೆಯಿಂದ ಇಸ್ರೋಗೆ ಬಂದ ಆದಾಯವೆಷ್ಟು ಗೊತ್ತಾ?

    29 ವಿದೇಶಿ ಉಪಗ್ರಗಳ ಉಡಾವಣೆಯಿಂದ ಇಸ್ರೋಗೆ ಬಂದ ಆದಾಯವೆಷ್ಟು ಗೊತ್ತಾ?

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಪಿಎಸ್‍ಎಲ್‍ವಿ) ಅನೇಕ ಉಪಗ್ರಹಗಳನ್ನ ಕಕ್ಷೆಗೆ ಸೇರಿಸುವ ಮೂಲಕ ಇಸ್ರೋದ ಹಿರಿಮೆಯನ್ನು ಹೆಚ್ಚಿಸುವ ಜೊತೆ ಜೊತೆಗೆ ಕೋಟಿ ಕೋಟಿ ಆದಾಯವನ್ನೂ ತಂದುಕೊಟ್ಟಿದೆ.

    ವಿವಿಧ ದೇಶಗಳ ಅನೇಕ ಉಪಗ್ರಹಗಳನ್ನ ಒಂದೇ ರಾಕೆಟ್‍ನಲ್ಲಿ ಹೊತ್ತೊಯ್ದು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಹಿರಿಮೆ ಒಂದೆಡೆಯಾದ್ರೆ ಇದು ಇಸ್ರೋವನ್ನ ಶ್ರೀಮಂತವನ್ನಾಗಿಸುತ್ತಿರುವುದು ಮತ್ತೊಂದು ಹೆಗ್ಗಳಿಕೆ.

    ಕಳೆದ ತಿಂಗಳು 712 ಕೆಜಿಯ ಕಾರ್ಟೋಸ್ಯಾಟ್-2 ಉಪಗ್ರಹದ ಜೊತೆಗೆ 30 ಇತರೆ ಉಪಗ್ರಹಗಳನ್ನ ಇಸ್ರೋ ಉಡಾವಣೆ ಮಾಡಿತ್ತು. ಇವುಗಳಲ್ಲಿ 29 ವಿದೇಶಿ ಉಪಗ್ರಹಗಳಾಗಿದ್ದು, ಇಸ್ರೋದ ಮಾರ್ಕೆಟಿಂಗ್ ಸಂಸ್ಥೆ ಆಂಟ್ರಿಕ್ಸ್ ಕಾರ್ಪೋರೇಷನ್ ಲಿಮಿಟೆಡ್‍ಗೆ ಸುಮಾರು 45 ಕೋಟಿ ರೂ. ಆದಾಯ ತಂದುಕೊಡುವಲ್ಲಿ ನೆರವಾಗಿದೆ. ಈ ಬಗ್ಗೆ ಜುಲೈ 19ರಂದು ಸರ್ಕಾರ ಲೋಕಸಭೆಯಲ್ಲಿ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

    ಕಳೆದ ತಿಂಗಳ ಉಡಾವಣೆಗೂ ಮುಂಚೆ ಫೆಬ್ರವರಿಯಲ್ಲಿ ಇಸ್ರೋ ಒಂದೇ ಬಾರಿಗೆ 104 ಉಪಗ್ರಹಗಳನ್ನ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿತ್ತು. ಇದರಿಂದ ಇಸ್ರೋಗೆ ಕೋಟ್ಯಾಂತರ ರೂ. ಆದಾಯ ಬಂದಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಆದ್ರೆ ಎಷ್ಟು ಆದಾಯ ಬಂದಿದೆ ಎಂಬ ಬಗ್ಗೆ ನಿರ್ದಿಷ್ಟವಾದ ಮಾಹಿತಿಯನ್ನ ಇಸ್ರೋ ಬಹಿರಂಗಪಡಿಸಿಲ್ಲ.

    ಮಾರುಕಟ್ಟೆಯಲ್ಲಿ ಇತರೆ ಬಾಹ್ಯಾಕಾಶ ಸಂಸ್ಥೆಗಳಿದ್ದರೂ ಇಸ್ರೋ ಹಾಗೂ ಅದರ ವಾಣಿಜ್ಯ ಅಂಗವಾದ ಆಂಟ್ರಿಕ್ಸ್ ಬಾಹ್ಯಾಕಾಶ ಜಗತ್ತಿನಲ್ಲಿ ಭಾರತ ಹೆಸರು ಮಾಡಲು ಹಾಗೂ ಆರ್ಥಿಕವಾಗಿ ಇತರರಿಗಿಂತ ಮುಂಚೂಣಿಯಲ್ಲಿರಲು ನೆರವಾಗಿದೆ.

    ವರದಿಯ ಪ್ರಕಾರ ಆಂಟ್ರಿಕ್ಸ್ ಸಂಸ್ಥೆ 2015-16ರಲ್ಲಿ ವಿದೇಶಿ ಉಪಗ್ರಹಗಳ ಉಡಾವಣೆ ಮೂಲಕ 230 ಕೋಟಿ ರೂ. ಆದಾಯ ಗಳಿಸಿದೆ. 2013 ರಿಂದ 2015ರವರೆಗೆ ಮಾಡಲಾದ ಇತರೆ 28 ಉಪಗ್ರಹಗಳ ಉಡಾವಣೆಯಿಂದ (80.6 ಮಿಲಿಯನ್ ಯೂರೋ) 600 ಕೋಟಿ ರೂ. ಆದಾಯ ಗಳಿಸಿದೆ.