Tag: PT Parameshwar Naik

  • ಮಾಜಿ ಸಚಿವರಿಂದ ಮತ್ತೆ ಅಧಿಕಾರ ದುರ್ಬಳಕೆ

    ಮಾಜಿ ಸಚಿವರಿಂದ ಮತ್ತೆ ಅಧಿಕಾರ ದುರ್ಬಳಕೆ

    ವಿಜಯನಗರ: ಸರ್ಕಾರದ ಆದೇಶಕ್ಕೆ ಬೆಲೆ ಕೊಡದೇ ಸರ್ಕಾರಿ ಕಚೇರಿ ಆವರಣದಲ್ಲಿಯೇ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.

    ಸರ್ಕಾರಿ ಕಚೇರಿಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬಾರದು ಎಂದು ಸರ್ಕಾರದ ಆದೇಶವಿದ್ದರೂ, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರು ತಮ್ಮ ಹುಟ್ಟುಹಬ್ಬವನ್ನು ಹೂವಿನಹಡಗಲಿ ಪುರಸಭೆ ಆವರಣದಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

    ನಿನ್ನೆ ಅವರು 58ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಅವರ ಬೆಂಬಲಿಗರು, ಸರ್ಕಾರದ ಆದೇಶಕ್ಕೆ ಡೊಂಟಕೇರ್ ಎಂದ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಇದನ್ನೂ ಓದಿ: ನಾನು ಇನ್ನೆರಡು ತಿಂಗಳು ಇರೋದಿಲ್ಲ, ನಾನು ಎಲ್ಲದಕ್ಕೂ ರೆಡಿ ಇದ್ದೀನಿ: ಶಂಕಿತ ಉಗ್ರ

    ಸರ್ಕಾರಿ ಅಧಿಕಾರಿಗಳು ಶಾಸಕ ಪರಮೇಶ್ವರ ನಾಯ್ಕಗೆ ಶಾಲು ಹೊಂದಿಸಿ ಸನ್ಮಾನ ಮಾಡಿ ಸತ್ಕರಿಸಿದ್ದಾರೆ. ಸರ್ಕಾರಿ ಅಧಿಕಾರಿಗಳಿಂದಲೂ ಸರ್ಕಾರದ ಆದೇಶ ಉಲ್ಲಂಘನೆಯಾಗಿದೆ. ಪರಮೇಶ್ವರ್ ನಾಯ್ಕ ಹಾಗೂ ಪುರಸಭೆ ಅಧಿಕಾರಿಗಳ ವರ್ತನೆಗೆ ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಎಸಿ ರೈಲಿನ ಒಳಗಡೆಯೇ ಛತ್ರಿ ಹಿಡಿದು ಕುಳಿತ ಪ್ರಯಾಣಿಕರು

    Live Tv
    [brid partner=56869869 player=32851 video=960834 autoplay=true]

  • ಶಾಸಕ ಪರಮೇಶ್ವರ್ ನಾಯ್ಕ್ ಸೋದರನಿಂದ ವೃದ್ಧನ ಮೇಲೆ ಹಲ್ಲೆಗೆ ಯತ್ನ

    ಶಾಸಕ ಪರಮೇಶ್ವರ್ ನಾಯ್ಕ್ ಸೋದರನಿಂದ ವೃದ್ಧನ ಮೇಲೆ ಹಲ್ಲೆಗೆ ಯತ್ನ

    ದಾವಣಗೆರೆ: ಮಾಜಿ ಸಚಿವ, ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಸೋದರ ಶಿವಾಜಿ ನಾಯ್ಕ್ ವೃದ್ಧನೋರ್ವನ ಮೇಲೆ ಹಲ್ಲೆಗೆ ಯತ್ನಿಸಿರುವ ನಡೆಸಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ನಡೆದಿದೆ.

    ಶರಣ್ ನಾಯ್ಕ್ ಹಲ್ಲೆಗೊಳಗಾದ ವೃದ್ಧ. ಶಿವಾಜಿ ನಾಯ್ಕ್ ಮನೆಯ ಪಕ್ಕದಲ್ಲಿಯೇ ಶರಣ್ ನಾಯ್ಕ್ ವಾಸವಾಗಿದ್ದಾರೆ. ಶರಣ್ ನಾಯ್ಕ್ ಮತ್ತು ಶಿವಾಜಿ ನಾಯ್ಕ್ ಮಧ್ಯೆ ಮನೆಯ ಜಾಗದ ವಿಚಾರವಾಗಿ ವಿವಾದ ಇತ್ತು. ಈ ಹಿಂದೆಯೂ ಹಲವು ಬಾರಿ ಎರಡೂ ಕುಟುಂಬಗಳ ಗಲಾಟೆ ನಡೆದಿದೆ.

    ಇದೇ ವಿಚಾರಕ್ಕೆ ಇಂದು ಬೆಳಗ್ಗೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಶಿವಾಜಿ ನಾಯ್ಕ್ ಕಬ್ಬಿಣದ ಹಾರೆಯಿಂದ ಹಲ್ಲೆಗೆ ಯತ್ನ ನಡೆಸಿದ್ದು, ತಳ್ಳಾಟ ನೂಕಾಟ ನಡೆದಿದೆ. ಸದ್ಯ ವೃದ್ಧನನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ವೃದ್ಧನ ಕುಟುಂಬಸ್ಥರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ನೆಟ್‍ವರ್ಕ್ ಸಮಸ್ಯೆ – ಆನ್‍ಲೈನ್ ಶಿಕ್ಷಣ ಪಡೆಯಲಾಗದೇ ವಿದ್ಯಾರ್ಥಿಗಳ ಪರದಾ

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ನಾಯ್ಕ್ ಮೇಲೆ ಎಫ್‍ಐಆರ್ ದಾಖಲು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ನಾಯ್ಕ್ ಮೇಲೆ ಎಫ್‍ಐಆರ್ ದಾಖಲು

    ಬಳ್ಳಾರಿ: ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯಕ್ ಮೇಲೆ ಪ್ರಕರಣ ದಾಖಲಾಗಿದೆ.

    ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯಕ್ ಅವರ ಪುತ್ರನ ಮದುವೆಯ ಹಿನ್ನೆಲೆಯಲ್ಲಿ ಕೋವಿಡ್ 19 ಮಾರ್ಗದರ್ಶಿ ನಿಯಮಗಳ ಉಲ್ಲಂಘನೆ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

    50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಪರಮೇಶ್ವರ್ ನಾಯ್ಕ್ ಮಗನ ಆರತಕ್ಷತಾ ಕಾರ್ಯಕ್ರಮದಲ್ಲಿ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮದುವೆಯಲ್ಲಿ ಕಾನೂನು ಉಲ್ಲಂಘನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಶಾಸಕರು, ನನ್ನ ಮಗನ ಮದುವೆಗೆ ಕಡಿಮೆ ಜನ ಬನ್ನಿ ಎಂದು ಮನವಿ ಮಾಡಿದ್ದೆ. ಆದರೆ ನನ್ನ ಮೇಲಿನ ಪ್ರೀತಿಯಿಂದ ಜನರು ಜಾಸ್ತಿ ಬಂದಿದ್ದಾರೆ. ಹಾಗಂತ ಜನರು ಬರುವುದನ್ನು ತಡೆಯಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದ್ದಾರೆ.

    ಎಲ್ಲರಿಗೂ ಮಾಸ್ಕ್ ಸ್ಯಾನಿಟೈಜರ್, ಥರ್ಮಲ್ ಸ್ಕಾನಿಂಗ್ ಮಾಡಲು ಹೇಳಿದ್ದೆ. ಆದರೆ ಜನ ಜಾಸ್ತಿಯಾದ ಹಿನ್ನೆಲೆ ಏನು ಮಾಡಲು ಸಾಧ್ಯವಾಗಲಿಲ್ಲ. ಕೋವಿಡ್ ಸಮಯದಲ್ಲಿ ಇಷ್ಟೊಂದು ಜನ ಸೇರಬಾರದು ಎಂದು ಮನವಿ ಮಾಡಿಕೊಂಡಿದ್ದೆ ಎಂದರು.

    ಇದೇ ವೇಳೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಇಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರು, ನನಗೂ ಪೊಲೀಸರು ನೋಟಿಸ್ ನೀಡಿದ್ದಾರೆ. ನಾನು ಯಾರ ಮೇಲೆ ಏನು ಹೇಳೋಲ್ಲ, ಯಾರ ಮೇಲೂ ಆರೋಪ ಕೂಡ ಮಾಡಲ್ಲ ಎಂದು ಅವರು ತಿಳಿಸಿದರು.

  • ಜಾತ್ರೆಯಂತಾದ ಪಿ.ಟಿ.ಪರಮೇಶ್ವರ್ ನಾಯ್ಕ್ ಮಗನ ಮದ್ವೆ- ಸಾಮಾಜಿಕ ಅಂತರ ಮರೆತು ಸಚಿವ ಶ್ರೀರಾಮುಲು ಭಾಗಿ

    ಜಾತ್ರೆಯಂತಾದ ಪಿ.ಟಿ.ಪರಮೇಶ್ವರ್ ನಾಯ್ಕ್ ಮಗನ ಮದ್ವೆ- ಸಾಮಾಜಿಕ ಅಂತರ ಮರೆತು ಸಚಿವ ಶ್ರೀರಾಮುಲು ಭಾಗಿ

    – ಸಿದ್ದರಾಮಯ್ಯ, ಪರಮೇಶ್ವರ್ ಸಹ ಭಾಗಿ

    ಬಳ್ಳಾರಿ: ಕೊರೊನಾ ಅಟ್ಟಹಾಸದ ನಡುವೆಯೂ ರಾಜಕಾರಣಿಗಳು ಅದ್ಧೂರಿ ವಿವಾಹ ಮಾಡುತ್ತಿದ್ದು, ಇದರಿಂದಾಗಿ ರಾಜಕಾರಣಿಗಳಿಗೊಂದು ನಿಯಮ, ಜನಸಾಮಾನ್ಯರಿಗೊಂದು ನಿಯಮವೇ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ವಿಶೇಷವೆಂದರೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಹ ವಿವಾಹದಲ್ಲಿ ಭಾಗಿಯಾಗಿದ್ದಾರೆ.

    ಜಿಲ್ಲೆಯ ಲಕ್ಷ್ಮೀಪುರದಲ್ಲಿ ನಡೆಯುತ್ತಿರುವ ಮಾಜಿ ಸಚಿವ, ಹಾಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಪುತ್ರ ಅವಿನಾಶ್ ಮದುವೆಗೆ ಗಣ್ಯರ ದಂಡೇ ಆಗಮಿಸಿದ್ದು, ಅದ್ಧೂರಿಯಾಗಿ ಜಾತ್ರೆಯಂತೆ ವಿವಾಹ ಮಾಡಿದ್ದಾರೆ. ನೂನಾರು ಜನ ವಿವಾಹದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಸಚಿವ ಶ್ರೀರಾಮುಲು ಅವರು ಸ್ಟೇಜ್ ಮೇಲೆ ಹೋಗಿ ಕೈ ಕುಲುಕಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಯಾವುದೂ ಇಲ್ಲದೆ ನೂರಾರು ಜನ ಸೇರಿದ ವಿವಾಹದಲ್ಲಿ ಪಾಲ್ಗೊಂಡಿದ್ದಾರೆ.

    ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೆಲಿಕಾಪ್ಟರ್ ನಲ್ಲಿ ಮದುವೆಗೆ ಆಗಮಿಸಿದ್ದು, ಇದೇ ವೇಳೆ ಹೆಲಿಕಾಪ್ಟರ್ ನೋಡಲು ಜನ ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರವಿಲ್ಲದೆ ಜನ ಜಾತ್ರೆಯಂತೆ ಸೇರಿದ್ದಾರೆ. ಕಾಂಗ್ರೆಸ್ ಮುಖಂಡರು ಸಹ ಸಾಮಾಜಿಕ ಅಂತರವಿಲ್ಲದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೊರೊನೊಗೆ ಡೋಂಟ್ ಕೇರ್ ಎಂದು ಮದುವೆ ಕಾರ್ಯಕ್ರಮದಲ್ಲಿ ಜನಸ್ತೋಮವೇ ಸೇರಿದೆ.

    ನೂರಾರು ಜನ ಸೇರಿದ ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ಸಚಿವ ಶ್ರೀ ರಾಮುಲು, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.

  • ಸಿದ್ದರಾಮಯ್ಯ ಬಣದಿಂದ ಸಚಿವ ಸ್ಥಾನಕ್ಕೆ ಲಾಬಿ

    ಸಿದ್ದರಾಮಯ್ಯ ಬಣದಿಂದ ಸಚಿವ ಸ್ಥಾನಕ್ಕೆ ಲಾಬಿ

    – ಪರಮೇಶ್ವರ್ ನಾಯ್ಕ್, ಅಜೇಯ ಸಿಂಗ್, ಪ್ರಸಾದ ಅಬ್ಬಯ್ಯ ಕಾವೇರಿ ನಿವಾಸಕ್ಕೆ ಭೇಟಿ

    ಬೆಂಗಳೂರು/ರಾಯಚೂರು: ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿರುವ ಬೆನ್ನಲ್ಲೇ ಶಾಸಕರು ಮಂತ್ರಿಗಿರಿಗೆ ಲಾಬಿ ನಡೆಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ನೀಡುತ್ತಿದ್ದಾರೆ.

    ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್, ಜೇವರ್ಗಿಯ ಅಜೇಯ ಸಿಂಗ್ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ಅವರು ಭೇಟಿ ನೀಡಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಮೂಲಕ ಮಂತ್ರಿಗಿರಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಲಾಬಿಗೆ ಮುಂದಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಇತ್ತೀಚೆಗೆ ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ಯಾವುದೇ ಶಾಸಕರು ಅಸಮಾಧಾನಗೊಂಡಿಲ್ಲ. ಅಲ್ಲದೇ ಸಂಪುಟ ವಿಸ್ತರಣೆಯಲ್ಲಿ ಬಾಗಲಕೋಟೆ ನಾಯಕರಿಗೆ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದ ಪರೋಕ್ಷವಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಟಾಂಗ್ ಕೊಟ್ಟಿದ್ದರು.

    ಮಂತ್ರಿಗಿರಿಯಿಂದ ಎಂ.ಬಿ.ಪಾಟೀಲ್ ಅವರನ್ನು ಕೈಬಿಟ್ಟರೆ ನಮಗೆ ಅವಕಾಶ ಸಿಗಬಹುದು ಎನ್ನುವ ಲೆಕ್ಕಾಚಾರ ಉಳಿದ ಶಾಸಕರಲ್ಲಿ ಮೂಡಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನಕ್ಕೆ ಏರುವ ತವಕದಲ್ಲಿ ಅನೇಕ ನಾಯಕರು ಮುಂದಾಗುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಿ.ಸಿ.ಪಾಟೀಲ್ ಹಾಗೂ ಎಂ.ಬಿ.ಪಾಟೀಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದರು.

    ನಾನು ಆಕಾಂಕ್ಷಿ:
    ಸಂಪುಟ ವಿಸ್ತರಣೆಯಲ್ಲಿ ನಾನೂ ಪ್ರಬಲ ಆಕಾಂಕ್ಷಿಯಾಗಿದ್ದು, ನನಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಪಕ್ಷದ ವರಿಷ್ಠರು ನೀಡಿದ್ದಾರೆ ಎಂದು ಮಾನ್ವಿಯ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್ ಹೇಳಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ವಾಲ್ಮಿಕಿ ನಾಯಕ ಸಮಾಜದಿಂದ ನಾನೊಬ್ಬನೇ ಗೆದ್ದಿರುವುದು. ಹೀಗಾಗಿ ನನಗೆ ಸಚಿವ ಸ್ಥಾನ ನೀಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಎರಡು ಸಚಿವ ಸ್ಥಾನಗಳಲ್ಲಿ ಈಗಾಗಲೇ ಒಂದು ಸ್ಥಾನವನ್ನು ಅಲ್ಪಸಂಖ್ಯಾತ ಶಾಸಕರಿಗೆಂದು ನಿರ್ಧರಿಸಲಾಗಿದೆ. ಎನ್.ಮಹೇಶ್ ರಾಜಿನಾಮೆಯಿಂದ ತೆರವಾದ ಸ್ಥಾನವನ್ನು ನನಗೆ ನೀಡಬೇಕು. ರಾಜ್ಯದ ನಾಯಕ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಲು ಮಂತ್ರಿಗಿರಿ ನನಗೇ ನೀಡಬೇಕು ಅಂತ ವೆಂಕಟಪ್ಪ ನಾಯಕ್ ಪಟ್ಟುಹಿಡಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv