Tag: PU Board

  • ಕೋರ್ಟ್‌ ನೋಟಿಸ್‌ಗೆ ಥಂಡಾ – ಕರೆ ಮಾಡಿ ಹೆಚ್ಚುವರಿ ಅಂಕ ನೀಡ್ತೀವಿ ಎಂದ ಪಿಯು ಬೋರ್ಡ್‌

    ಕೋರ್ಟ್‌ ನೋಟಿಸ್‌ಗೆ ಥಂಡಾ – ಕರೆ ಮಾಡಿ ಹೆಚ್ಚುವರಿ ಅಂಕ ನೀಡ್ತೀವಿ ಎಂದ ಪಿಯು ಬೋರ್ಡ್‌

    ಕೊಪ್ಪಳ: ಮೌಲ್ಯಮಾಪನ(Valuation) ಸರಿಯಾಗಿ ಮಾಡದೇ ವಿದ್ಯಾರ್ಥಿಯ ಮನವಿಗೂ ಬೆಲೆ ನೀಡದ ಪಿಯು ಬೋರ್ಡ್‌(PU Board) ಈಗ ಕೋರ್ಟ್‌ ನೋಟಿಸ್‌ಗೆ ಎಚ್ಚೆತ್ತು ಹೆಚ್ಚುವರಿ ಅಂಕ ನೀಡಲು ಮುಂದಾಗಿದೆ.

    ಗಂಗಾವತಿ ತಾಲೂಕಿನ ಶ್ರೀರಾಮನಗರ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಚಂದ್ರಮ್ಮ ದ್ವಿತೀಯ ಪಿಯುಸಿ( Second PUC) ವಿಜ್ಞಾನ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ವಿದ್ಯಾರ್ಥಿನಿಗೆ ಶಾಕ್‌ ಆಗಿತ್ತು. ಜೀವಶಾಸ್ತ್ರ ವಿಷಯದಲ್ಲಿ ಕೇವಲ 29 ಅಂಕ ಹಾಗೂ ಇಂಗ್ಲಿಷ್‌ನಲ್ಲಿ 40 ಅಂಕಗಳನ್ನು ನೀಡಿದ್ದರಿಂದ ಒಟ್ಟು ಶೇ. 65 ರಷ್ಟು ಫಲಿತಾಂಶ ಮಾತ್ರ ಬಂದಿತ್ತು.

    ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಡಿ.ಸತ್ಯನಾರಾಯಣ ಅವರ ಪುತ್ರಿಯಾಗಿರುವ ಚಂದ್ರಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.86, ಪಿಯು ಪ್ರಥಮ ವರ್ಷದಲ್ಲಿ ಶೇ. 98 ರಷ್ಟು ಅಂಕ ಪಡೆದಿದ್ದಳು. ದ್ವಿತೀಯ ಪಿಯುಸಿಯಲ್ಲಿ ಇಷ್ಟು ಕಡಿಮೆ ಅಂಕ ಬರಲು ಸಾಧ್ಯವೇ ಇಲ್ಲ ಎಂದು ತಿಳಿದು ಕಾಲೇಜಿನ ಉಪನ್ಯಾಸಕರು, ಪಾಲಕರು ಪಿಯು ಬೋರ್ಡ್‌ಗೆ ಶುಲ್ಕವನ್ನು ಭರಿಸಿ, ಉತ್ತರ ಪರೀಕ್ಷೆಯ ಪೋಟೋ ಕಾಪಿಯನ್ನು ತರಿಸಿಕೊಂಡಿದ್ದಾರೆ. ಪೋಟೊ ಕಾಪಿಯಲ್ಲಿ ಉತ್ತರ ಸರಿ ಇದ್ದರೂ ಅಂಕ ಸರಿಯಾಗಿ ನೀಡದೇ ಇರುವ ವಿಚಾರ ಗೊತ್ತಾಗಿದೆ. ಕೂಡಲೇ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಾಳೆ.

    ಮರು ಮೌಲ್ಯಮಾಪನದಲ್ಲಿ ಜೀವಶಾಸ್ತ್ರ ವಿಷಯಕ್ಕೆ ಮಾತ್ರ 27 ಅಂಕಗಳನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಆದರೆ ಇಂಗ್ಲಿಷ್‌ವಿಷಯಕ್ಕೆ ಯಾವುದೇ ರೀತಿಯ ಅಂಕ ನೀಡಿರಲಿಲ್ಲ. ಪೋಟೋ ಕಾಪಿಯಲ್ಲಿ ಗಮನಿಸಿದಂತೆ ಇಂಗ್ಲಿಷ್‌ ವಿಷಯಕ್ಕೆ ಹೆಚ್ಚುವರಿಯಾಗಿ ಇನ್ನೂ 42 ಅಂಕಗಳನ್ನು ನೀಡಬೇಕಿತ್ತು. ಇದನ್ನೂ ಓದಿ: ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್‌ ಬೇಜವಾಬ್ದಾರಿಗೆ ಬೇಸತ್ತ ವಿದ್ಯಾರ್ಥಿನಿ ಸೆಪ್ಟೆಂಬರ್‌ನಲ್ಲಿ ಗಂಗಾವತಿ ಕೋರ್ಟ್‌(Gangavathi Court) ಮೊರೆ ಹೋಗಿದ್ದಳು. ಅರ್ಜಿ ಮಾನ್ಯವಾಗಿದ್ದು ಕೋರ್ಟ್ ಮೂಲಕ ನೋಟಿಸ್ ಹೋಗುತ್ತಿದ್ದಂತೆ ಪಿಯು ಬೋರ್ಡ್‌ ಸಿಬ್ಬಂದಿ ಈಗ ವಿದ್ಯಾರ್ಥಿನಿಯ ಪಾಲಕರಿಗೆ ಕರೆ ಮಾಡಿ ಹೆಚ್ಚುವರಿ 42 ಅಂಕಗಳನ್ನು ನೀಡುತ್ತೇವೆ. ಅರ್ಜಿಯನ್ನು ವಾಪಸ್‌ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

    ಮೌಲ್ಯಮಾಪನದ ವೇಳೆ ತಪ್ಪಾದರೆ ಮಾನವ ದೋಷ ಎಂದು ಸಣ್ಣ ಸಮರ್ಥನೆ ನೀಡಬಹುದು. ಆದರೆ ಫೋಟೋ ಕಾಪಿ ತರಿಸಿ ತಪ್ಪಾಗಿದೆ ಹೆಚ್ಚುವರಿ ಅಂಕ ನೀಡಿ ಎಂದು ದಾಖಲೆಯೊಂದಿಗೆ ವಿವರಿಸಿದರೂ ಪಿಯು ಬೋರ್ಡ್‌ ಸಿಬ್ಬಂದಿ ಬೇಜವಾಬ್ದಾರಿ ತೋರಿಸಿದ್ದು ಎಷ್ಟು ಸರಿ? ವಿದ್ಯಾರ್ಥಿನಿಯ ಪೋಷಕರಿಗೆ ಕಾನೂನು ಜ್ಞಾನ ಇದ್ದ ಕಾರಣ ಕೋರ್ಟ್‌ ಮೊರೆ ಹೋಗಿದ್ದಾರೆ. ಕಾನೂನಿನ ಜ್ಞಾನ ಇಲ್ಲದೇ ಇದ್ದರೆ ಪಿಯು ಬೋರ್ಡ್‌ ಹೇಳಿದ್ದನ್ನೇ ಕೇಳಬೇಕಿತ್ತು. ಇಂದು ಕಾಲೇಜಿನಲ್ಲಿ ಸೀಟ್‌ ಪಡೆಯಲು ಅಂಕವೇ ಮಾನದಂಡ ಆಗಿರುವ ಕಾರಣ ಇನ್ನಾದರೂ ಈ ತಪ್ಪಿನಿಂದ ಎಚ್ಚೆತ್ತು ಪಿಯು ಬೋರ್ಡ್‌ ಸಿಬ್ಬಂದಿ ಅಂಕ ಕುರಿತ ಸಮಸ್ಯೆಗೆ ಸರಿಯಾಗಿ ಸ್ಪಂದಿಸುವುದನ್ನು ಕಲಿಯಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಕೊಪ್ಪಳ: ಪರೀಕ್ಷೆ ಬರೆಯದೇ ಪಾಸ್ ಆಗುವ ಸರ್ಕಾರದ ಆಫರ್ ತಿರಸ್ಕರಿಸಿದ್ದ ವಿದ್ಯಾರ್ಥಿನಿಯ ಭವಿಷ್ಯವೇ ಈಗ ಅತಂತ್ರವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಭೂಮಿಕಾ ಪಿಯು ಬೋರ್ಡ್ ಎಡವಟ್ಟಿನಿಂದ ಫೇಲ್ ಆಗಿದ್ದಾಳೆ.

    ವಿದ್ಯಾರ್ಥಿನಿ ಭೂಮಿಕಾ 40 ಅಂಕ ಪಡೆದಿದ್ದರೂ 4 ಅಂಕ ಕೊಟ್ಟು ಅನುತ್ತೀರ್ಣ ಮಾಡಿದ್ದಾರೆ. ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಸದೇ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಪಿಯು ಬೋರ್ಡ್ ತೀರ್ಮಾನಿಸಿತ್ತು. ಆದರೆ ಸರ್ಕಾರದ ಆಫರ್ ತಿರಸ್ಕರಿಸಿದ್ದ ಗಂಗಾವತಿಯ ವೆಂಕಟೇಶ್ವರ ಪಿಯು ಕಾಲೇಜಿನ ಭೂಮಿಕಾ ಪರೀಕ್ಷೆ ಬರೆದಿದ್ದಳು. ಇದನ್ನೂ ಓದಿ: ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ

    ರಾಸಾಯನ ಶಾಸ್ತ್ರದಲ್ಲಿ ಭೂಮಿಕಾ ಪಡೆದದ್ದು 40 ಅಂಕ ಪಿಯು ಬೋರ್ಡ್ ನ ಎಡವಟ್ಟಿನಿಂದ ವಿದ್ಯಾರ್ಥಿನಿಗೆ 4 ಅಂಕ ನೀಡಿ, ಅನುತ್ತೀರ್ಣ ಮಾಡಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಮನನೊಂದು ಕೆಲ ದಿನ ಊಟ ನಿದ್ದೆ ಸಹ ಮಾಡದೆ ಹತಾಶೆಗೊಂಡಿದ್ದಳು. ಬಳಿಕ ಪಾಲಕರು ಪರೀಕ್ಷೆ ಬರೆದ ಉತ್ತರ ಪತ್ರಿಕೆ ಜೆರಾಕ್ಸ್ ಕಾಪಿ ತರಿಸಿ ನೋಡಿದಾಗ ಆಕೆ 40 ಅಂಕ ಪಡೆದಿರೋದು ಗೊತ್ತಾಗಿದೆ. ಇದನ್ನೂ ಓದಿ: ನಾವು ಸತ್ತ ಮೇಲೂ ನೀನು ನೆಮ್ಮದಿಯಾಗಿರಬಾರದು – ಶಂಕರ್‌ಗೆ ಮಗನದ್ದೇ ಖೆಡ್ಡಾ

    ಪಿಯು ಬೋರ್ಡ್ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಭೂಮಿಕಾ ತಂದೆ ಚಂದ್ರಶೇಖರಗೌಡ ತಾವರಗೇರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪಿಯು ಬೋರ್ಡ್ ಮಾಡಿರುವ ತಪ್ಪನ್ನು ತಿದ್ದುಪಡಿ ಮಾಡಿ, ವಿದ್ಯಾರ್ಥಿನಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.

  • ಪ್ರಥಮ ಪಿಯುಸಿ ದಾಖಲಾತಿ ಮಾಡಿಕೊಂಡ್ರೆ ಶಿಸ್ತು ಕ್ರಮ – ಪಿಯುಸಿ ಬೋರ್ಡ್ ಎಚ್ಚರಿಕೆ

    ಪ್ರಥಮ ಪಿಯುಸಿ ದಾಖಲಾತಿ ಮಾಡಿಕೊಂಡ್ರೆ ಶಿಸ್ತು ಕ್ರಮ – ಪಿಯುಸಿ ಬೋರ್ಡ್ ಎಚ್ಚರಿಕೆ

    ಬೆಂಗಳೂರು: 2020-21 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇನ್ನೂ ಮುಗಿದಿಲ್ಲ. ಆಗಲೇ ಪ್ರತಿಷ್ಠಿತ ಕಾಲೇಜುಗಳು ಪ್ರಥಮ ಪಿಯುಸಿಗೆ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಿವೆ. ಇಂತಹ ಪ್ರತಿಷ್ಠಿತ ಕಾಲೇಜುಗಳ ವಿರುದ್ದ ಕ್ರಮ ತೆಗೆದುಕೊಳ್ಳಲು ಪಿಯುಸಿ ಬೋರ್ಡ್ ಎಲ್ಲಾ ಕಾಲೇಜುಗಳಿಗೂ ಎಚ್ಚರಿಕೆ ಸಂದೇಶ ನೀಡಿದೆ.

    ಈ ಸಂಬಂಧ ಮಹತ್ವದ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್ ಪಿಯುಸಿ ಬೋರ್ಡ್ ಮಾರ್ಗಸೂಚಿ ಪ್ರಕಟ ಮಾಡುವವರೆಗೂ 2021-22ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಬಾರದು ಅಂತ ಆದೇಶ ಹೊರಡಿಸಿದೆ.

    ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಆಗುವವರೆಗೂ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದಾಖಲಾತಿ ಮಾರ್ಗಸೂಚಿ ಬಿಡುಗಡೆ ಮಾಡಿದ ನಂತರವಷ್ಟೇ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಬೇಕು. ಇಷ್ಟು ಮಾತ್ರವಲ್ಲ ಆನ್ ಲೈನ್ ತರಗತಿಗಳನ್ನು ಯಾವುದೇ ಕಾರಣಕ್ಕೂ ನಡೆಸಬಾರದು ಎಂದು ಎಚ್ಚರಿಕೆ ನೀಡಿದೆ.  ಇದನ್ನೂ ಓದಿ: ರೋಹಿಣಿ ಸಿಂಧೂರಿಯನ್ನು ಮೈಸೂರಿನ ಭೂ ಅಕ್ರಮದ ವಿಶೇಷ ತನಿಖಾಧಿಕಾರಿಯಾಗಿ ನೇಮಿಸಿ: ವಿಶ್ವನಾಥ್ ಆಗ್ರಹ

    ಒಂದು ವೇಳೆ ನಿಯಮ ಮೀರಿ ದಾಖಲಾತಿ ನಡೆಸಿದರೆ, ಆನ್ ಲೈನ್ ತರಗತಿ ನೀಡಿದರೆ ಕಾಲೇಜು ಮಾನ್ಯತೆ ರದ್ದು  ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಜಿಲ್ಲಾ ಡಿಡಿಪಿಯುಗಳು ಸೂಕ್ತ ನಿಗಾವಹಿಸಿ ಮಾಹಿತಿಯನ್ನು  ತಮ್ಮ ವ್ಯಾಪ್ತಿಯ ಪ್ರಾಂಶುಪಾಲರಿಗೆ ನೀಡುವಂತೆ ಪಿಯುಸಿ ಬೋರ್ಡ್ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

  • ಪ್ರಥಮ, ದ್ವಿತೀಯ ಪಿಯು ತರಗತಿಗಳು ಬಂದ್- ಪಿಯು ಬೋರ್ಡ್ ಆದೇಶ

    ಪ್ರಥಮ, ದ್ವಿತೀಯ ಪಿಯು ತರಗತಿಗಳು ಬಂದ್- ಪಿಯು ಬೋರ್ಡ್ ಆದೇಶ

    – ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ

    ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಸರ್ಕಾರದಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದ್ದು, ಹೀಗಾಗಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಬಂದ್ ಮಾಡಿ ಪಿಯು ಬೋರ್ಡ್ ಆದೇಶ ಹೊರಡಿಸಿದೆ.

    ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಪಿಯು ಬೋರ್ಡ್ ಸ್ಥಗಿತಗೊಳಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಸೂಚನೆ ನೀಡಲಾಗಿದೆ. ಆನ್‍ಲೈನ್ ಹಾಗೂ ಪ್ರೀ ರೆಕಾರ್ಡ್ ತರಗತಿಗಳನ್ನು ಮುಂದುವರೆಸಲು ತಿಳಿಸಲಾಗಿದೆ.

    ಏಪ್ರಿಲ್ 28 ರಿಂದ ಮೇ 5 ರವರೆಗೆ ನಿಗದಿಯಾಗಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಪರೀಕ್ಷೆ ವೇಳೆ ಶೇ.50ರಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಪ್ರಾಂಶುಪಾಲರು ಸೂಕ್ತ ವೇಳಾಪಟ್ಟಿ ತಯಾರಿಸುವಂತೆ ಪಿಯು ಬೋರ್ಡ್ ಆದೇಶದಲ್ಲಿ ತಿಳಿಸಲಾಗಿದೆ.

  • ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ

    ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ

    ಬೆಂಗಳೂರು: 2020-21ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ 24 ರಿಂದ ಜೂನ್ 16ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

    ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮ ಹೇಳಿಕೆ ಮೂಲಕ ವೇಳಾಪಟ್ಟಿ ಪ್ರಕಟ ಮಾಡಿದ್ದಾರೆ. ಇತ್ತೀಚೆಗೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಅವಕಾಶ ಕೊಡಲಾಗಿತ್ತು. ಆಕ್ಷೇಪಣೆ ಪರಿಶೀಲನೆ ಬಳಿಕ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ವೇಳಾಪಟ್ಟಿ ರಚನೆ ಮಾಡಲಾಗಿದೆ. ಮೇ 24 ರಿಂದ ಜೂನ್ 16ರ ವರೆಗೆ ದ್ವೀತಿಯ ಪಿಯಸಿ ಪರೀಕ್ಷೆಗಳು ನಡೆಯಲಿವೆ.

    ವೇಳಾಪಟ್ಟಿ ಹೀಗಿದೆ
    ಮೇ 24- ಇತಿಹಾಸ
    ಮೇ 25- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
    ಮೇ 26- ಭೂಗೋಳ ಶಾಸ್ತ್ರ
    ಮೇ 27- ಮನಃಶಾಸ್ತ್ರ, ಬೇಸಿಕ್ ಗಣಿತ
    ಮೇ 28- ತರ್ಕಶಾಸ್ತ್ರ
    ಮೇ 29- ಹಿಂದಿ
    ಮೇ 31- ಇಂಗ್ಲಿಷ್
    ಜೂನ್ 01- ಮಾಹಿತಿ ತಂತ್ರಜ್ಞಾನ, ಹೆಲ್ತ್‍ಕೇರ್, ವೆಲ್‍ನೆಸ್ ಬ್ಯೂಟಿ
    ಜೂನ್ 02- ರಾಜ್ಯಶಾಸ್ತ್ರ, ಗಣಕ ವಿಜ್ಞಾನ
    ಜೂನ್ 03- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
    ಜೂನ್ 04- ಅರ್ಥಶಾಸ್ತ್ರ
    ಜೂನ್ 05- ಗೃಹ ವಿಜ್ಞಾನ
    ಜೂನ್ 07- ವ್ಯವಹಾರ ಅಧ್ಯಯನ, ಭೌತಶಾಸ್ತ್ರ
    ಜೂನ್ 08- ಐಚ್ಛಿಕ ಕನ್ನಡ
    ಜೂನ್ 09- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
    ಜೂನ್ 10- ಸಮಾಜ ಶಾಸ್ತ್ರ, ರಸಾಯನಶಾಸ್ತ್ರ
    ಜೂನ್ 11- ಉರ್ದು, ಸಂಸ್ಕೃತ
    ಜೂನ್ 12- ಸಂಖ್ಯಾಶಾಸ್ತ್ರ
    ಜೂನ್ 14- ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ
    ಜೂನ್ 15- ಭೂಗರ್ಭಶಾಸ್ತ್ರ
    ಜೂನ್ 16- ಕನ್ನಡ

  • ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ

    ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

    ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.

    ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ.

    1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ.

    ಉಡುಪಿ ಶೇ.92.20, ದಕ್ಷಿಣ ಕನ್ನಡ ಶೇ.90.91, ಕೊಡಗು ಶೇ.83.31 ಫಲಿತಾಂಶ ದಾಖಲಿಸುವ ಮೂಲಕ ಅನುಕ್ರಮವಾಗಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿದೆ. ಚಿತ್ರದುರ್ಗ ಶೇ.51.42 ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.

    ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಏರಿಕೆ ಕಂಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಏ.29 ಕೊನೆಯ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನವಾಗಿದೆ.

    ಮರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂ. ದರ ನಿಗದಿಯಾಗಿದ್ದು, ಸ್ಕ್ಯಾನಿಂಗ್ ಕಾಪಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ದರ ನಿಗದಿಯಾಗಿದೆ. ಜೂನ್ ಮೊದಲ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.

    ಫಲಿತಾಂಶ ಹೇಗಿದೆ?
    ಒಟ್ಟು ಹಾಜರಾದ 6,71,653 ವಿದ್ಯಾರ್ಥಿಗಳ ಪೈಕಿ 4,14,587 ಮಂದಿ ಪಾಸ್ ಆಗುವ ಮೂಲಕ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 2,00,022 ಮಂದಿ ಹಾಜರಾಗಿದ್ದರೆ 1,01,073 ಮಂದಿ ಪಾಸ್ ಆಗಿದ್ದು ಶೇ.50.53 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 2,53,865 ಮಂದಿ ಪರೀಕ್ಷೆ ಬರೆದಿದ್ದು, 1,68,531 ಮಂದಿ ತೇರ್ಗಡೆಯಾಗಿ ಶೇ.66.58 ರಷ್ಟು ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ 2,17,766 ಮಂದಿ ಪರೀಕ್ಷೆ ಬರೆದಿದ್ದು, 1,44,983 ಮಂದಿ ತೇರ್ಗಡೆಯಾಗಿ ಶೇ.66.58 ರಷ್ಟು ಫಲಿತಾಂಶ ದಾಖಲಾಗಿದೆ.

    ಫಲಿತಾಂಶ ಲಭ್ಯವಾಗುವ ವೆಬ್ ಸೈಟ್ 
    http://pue.kar.nic.in
    www.karresults.nic.in

  • ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

    ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

    ಬೆಂಗಳೂರು: ಮಾರ್ಚ್ 1 ರಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಪಿಯುಸಿ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮುಗಿಸಿದ್ದು, ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

    ಈ ವರ್ಷ ಕಳೆದ ವರ್ಷಕ್ಕಿಂತ ಸುಮಾರು 12 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತೆ. ಪೊಲೀಸ್ ಭದ್ರತೆಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಯುತ್ತಿದೆ. ಇನ್ನೂ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ತಡೆಯಲು ಸೂಕ್ತ ಭದ್ರತೆ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪರೀಕ್ಷೆಯನ್ನ ನಿರಾತಂಕವಾಗಿ ಬರೆಯಲು ಪಿಯುಸಿ ಬೋರ್ಡ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. ಪಿಯುಸಿ ಪರೀಕ್ಷೆಯ ಡಿಟೇಲ್ಸ್ ಹೀಗಿದೆ.

    ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು:
    ಒಟ್ಟು ವಿದ್ಯಾರ್ಥಿಗಳು – 6,73,606
    ವಿದ್ಯಾರ್ಥಿಗಳು – 3,38,868
    ವಿದ್ಯಾರ್ಥಿನಿಯರು – 3,34,738
    ಪರೀಕ್ಷಾ ಕೇಂದ್ರ – 1013.

    ಭದ್ರತೆ:
    ಪರೀಕ್ಷಾ ಅಕ್ರಮ ತಡೆಯಲು 2026 ವಿಶೇಷ ಮೇಲ್ವಿಚಾರಕರ ನೇಮಕ ಮಾಡಲಾಗಿದ್ದು, ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ಕ್ವಾಡ್ ನೇಮಕ ಮಾಡಲಾಗಿದೆ. ಇನ್ನೂ 54 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಬಾರಿಗೆ ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡಿದ ಅಂಕ ಕೇಂದ್ರದಿಂದಲೇ ನೇರವಾಗಿ ಅಪ್ಲೋಡ್ ಆಗುತ್ತದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳಡಿಕೆ ಮಾಡಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರವೇಶ ಪತ್ರ ತೋರಿಸಿದರೆ ಪ್ರವೇಶ ಉಚಿತವಾಗಿರುತ್ತದೆ.

    ಅರ್ಥಶಾಸ್ತ್ರ, ವ್ಯವಹಾರ ಅಧ್ಯಾಯನ, ಲೆಕ್ಕಶಾಸ್ತ್ರ ವಿಷಯಗಳ ಪರೀಕ್ಷೆ ಎನ್‍ಸಿಇಆರ್ ಟಿ ಪಠ್ಯ ಅಳವಡಿಕೆ ಮಾಡಿಕೊಳ್ಳಲಾಗಿದ್ದು, ಈ ವರ್ಷ ಈ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧತೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲಾ ವಾಹನಗಳಿಗೂ ಜಿಪಿಎಸ್ ಟ್ರಾಕಿಂಗ್ ಸಿಸ್ಟಮ್ ಅಳವಡಿಕೆ ಮಾಡಲಾಗಿದ್ದು, ಉತ್ತರ ಪತ್ರಿಕೆ ಕೊಠಡಿಗೆ 24*7 ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಅಂಗಡಿ ಕ್ಲೋಸ್ ಮಾಡುವ ಮೂಲಕ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧ ಪ್ರದೇಶ ಮಾಡಲಾಗಿದೆ.

    ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ನಿಷೇಧಿಸಿದ್ದು, ಗೃಹ ಇಲಾಖೆಯ ಜೊತೆ ಭದ್ರತೆ ಸಂಬಂಧ ಸೂಕ್ತ ಕ್ರಮವಹಿಸಲಾಗಿದೆ. ಹಿಂದಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕಂಡು ಬಂದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ. ಅವಶ್ಯಕತೆ ಬಿದ್ದರೆ ಅಂತಹ ವ್ಯಕ್ತಿ ಮೇಲೆ ಕೋಕಾ ಕಾಯ್ದೆ ಜಾರಿಗೆ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ, ವಾಟ್ಸಪ್ ಮೆಸೇಜ್ ನಲ್ಲಿ ಪ್ರಶ್ನೆಗಳು ಸಿಕ್ಕಿದರೆ ತಕ್ಷಣ ಅವರು ದೂರು ಕೊಡಬೇಕು. ಒಂದು ವೇಳೆ ಇದನ್ನ ವಿದ್ಯಾರ್ಥಿಗಳು ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪ್ರಾಥಮಿಕ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಭದ್ರತೆಯ ಬಗ್ಗೆ ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್!

    ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್!

    ಬೆಂಗಳೂರು: ರಾಜ್ಯದ ಎಲ್ಲಾ ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಆನ್ ಲೈನ್ ನಲ್ಲಿ ಮಾರ್ಕ್ಸ್  ಕಾರ್ಡ್ ಸಿಗುವಂತೆ ಮಾಡಿದ್ದ ಪಿಯು ಮಂಡಳಿ, ಅನ್ ಸೇಫ್ ಟೆಕ್ನಾಲಜಿ ಮೊರೆ ಹೋಗಿದೆ. ಇದರಿಂದಾಗಿ ಲಕ್ಷಾಂತರ ಮಕ್ಕಳ ಭವಿಷ್ಟ ಆತಂಕಕ್ಕೆ ಸಿಲುಕಿದೆ.

    ಇತ್ತೀಚೆಗಷ್ಟೆ ರಾಜ್ಯ ಪಿಯು ಮಂಡಳಿ ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ಆನ್ ಲೈನ್ ನಲ್ಲಿ ಸಿಗುವಂತೆ ಮಾಡಿದೆ. ಡಿಜಿ ಲಾಕರ್ ಎಂಬ ನೂತನ ಟೆಕ್ನಾಲಜಿ ಬಳಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಆದರೆ ಇಲ್ಲಿ ಯಾವ ಮಾರ್ಕ್ಸ್ ಕಾರ್ಡ್ ಕೂಡ ಸೇಫ್ ಆಗಿಲ್ಲ ಎಂಬ ಆತಂಕಕಾರಿ ಸುದ್ದಿ ಹೊರಬಿದ್ದಿದೆ.

    ಡಿಜಿ ಲಾಕರ್ ಕೇಂದ್ರೀಕೃತ ಸರ್ವರ್ ಮೂಲಕ ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಹ್ಯಾಕರ್ ಬೇಕಾದರು ಸರಳವಾಗಿ ಇದನ್ನು ಕ್ರಾಕ್ ಮಾಡಬಹುದು. ನ್ಯಾಶನಲ್ ಅಕಾಡಿಮೆಕ್ ಡೆಪಾಸಿಟರಿ (ನ್ಯಾಡ್) ಎಂಬ ಸಂಟ್ರಲೈಸಡ್ ಸರ್ವರ್ ಈ ಹಿಂದೆ ಹ್ಯಾಕ್ ಮಾಡಲಾಗಿತ್ತು. ಅದೇ ರೀತಿಯ ತಂತ್ರಜ್ಞಾನವನ್ನು ಡಿಜಿಲಾಕರ್ ಬಳಸುತ್ತಿದೆ. ಹಾಗಾಗಿ ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಸೇವ್ ಮಾಡಿ ಆನ್ ಲೈನ್ ನಲ್ಲಿ ಲಭ್ಯವಾಗುವಂತೆ ಮಾಡುವ ಪಿಯು ಮಂಡಳಿ ವಿದ್ಯಾರ್ಥಿಗಳ ಭವಿಷ್ಯವನ್ನು ಆತಂತಕ್ಕೆ ಸಿಲುಕಿಸಿದೆ.

    ಪಿಯು ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರು ಕಳೆದ ತಿಂಗಳಷ್ಟೆ ಈ ತಂತ್ರಜ್ಞಾನದ ಬಳಕೆಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇವರು ಆತುರದಲ್ಲಿ ನಿರ್ಣಯ ಕೈಗೊಂಡಂತಿದೆ. ಈ ರೀತಿ ಕೇಂದ್ರೀಕೃತ ಸರ್ವರ್ ಬಳಸುದರಿಂದ ದಾಖಲೆಗಳನ್ನು ತಿರುಚುವ ಸಾಧ್ಯತೆ ಇದೆ. ಜೊತೆಗೆ ತಿದ್ದುಪಡಿ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಐಟಿ ಪರಿಣಿತ ಮಧಸೂಧನ್ ಹೇಳಿದ್ದಾರೆ.

    ಸೆಂಟ್ರಲೈಸಡ್ ಸರ್ವರ್ ಬಳಸದೆ ಆನ್ ಲೈನ್ ನಲ್ಲಿ ಡಾಕ್ಯೂಮೆಂಟ್ ಸೇವ್ ಮಾಡುವುದಕ್ಕೆ ಬೇರ ಅವಕಾಶವಿದ್ದು, ಸದ್ಯಕ್ಕೆ ಹ್ಯಾಕರ್ ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಮುಕ್ತಿ ಪಡೆಯಲು ಬ್ಲಾಕ್ ಚೈನ್ ಟೆಕ್ನಾಲಜಿ ಬಳಸಬೇಕಾಗುತ್ತದೆ.

    ಏನಿದು ಬ್ಲಾಕ್ ಚೈನ್ ಟೆಕ್ನಾಲಜಿ?
    ಇಲ್ಲಿ ದಾಖಲೆಗಳು ಲಿಂಕ್ ಮೂಲಕ ಸೇವ್ ಮಾಡಲಾಗುತ್ತದೆ. ಲಕ್ಷಗಟ್ಟಲೆ ಕಂಪ್ಯೂಟರ್ ಬಳಕೆದಾರರು ಈ ಡೇಟಾ ಅನ್ನು ನಿರ್ವಹಿಸುತ್ತಾರೆ. ಇಲ್ಲಿ ಯಾವುದೇ ಮಾರ್ಕ್ಸ್ ಕಾರ್ಡ್ ನ ಡೇಟಾ ಬದಲಾವಣೆ ಮಾಡಲು ಸಾಧ್ಯವಿಲ್ಲ. ಜೊತೆಗೆ ಯಾವುದೇ ಮೂರನೇ ವ್ಯಕ್ತಿ ಸರ್ವರ್ ಬಳಕೆ ಮಾಡುವುದಿಲ್ಲ. ಓಪನ್ ಸೋರ್ಸ್ ಡೇಟಾ ಮೈಂಟೈನೆನ್ಸ್ ತಂತ್ರಜ್ಞಾನದ ಮೂಲಕ ಮಾಹಿತಿಯನ್ನು ಕ್ರೋಢಿಕರಿಸಲಾಗುತ್ತದೆ.

    ಹ್ಯಾಕರ್ಸ್ ನಿಂದ ನಿಮ್ಮ ದಾಖಲೆಗಳನ್ನು ರಕ್ಷಿಸಿಕೊಳ್ಳಬೇಕಿದಾರೆ ಬ್ಲಾಕ್ ಚೈನ್ ತಂತ್ರಜ್ಞಾನದ ಬಳಸಬಹುದಾಗಿದೆ. ಇದರಲ್ಲಿ ಯಾರೂ ಕೂಡ ಹ್ಯಾಕ್ ಮಾಡಿ ದಾಖಲೆಗಳನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಅಲ್ಲದೆ ಇಲ್ಲಿ ಮಾಹಿತಿ ನಿರ್ವಹಣೆ ಮಾಡಲು ಲಕ್ಷಾಂತರ ಕಂಪ್ಯೂಟರ್ ಪರಿಣಿತರು ಕಾರ್ಯ ನಿರ್ವಹಿಸುತ್ತಾರೆ. ಯಾವುದೇ ಮೂರನೇ ವ್ಯಕ್ತಿಯ ಸರ್ವರ್ ಸೇವೆಗೆ ಇಲ್ಲಿ ಅವಕಾಶವಿರುವುದಿಲ್ಲ. ಹಾಗಾಗಿ ಇದು ಅತಿ ಸುರಕ್ಷಿತ ತಂತ್ರಜ್ಞಾನ ಎಂದು ಐಟಿ ಪರಿಣಿತ ರಜತ್ ತಿಳಿಸಿದ್ದಾರೆ.

    ಡಿಜಿಲಾಕರ್ ಹಾಗೂ ನ್ಯಾಡ್ ಬಳಸಿದ್ರೆ ಎದುರಾಗೋ ತೊಂದರೆಗಳೇನು?

    * ಇವುಗಳಲ್ಲಿ ಸೆಂಟ್ರಲೈಸ್ಡ್ ಸರ್ವರ್ ಮೂಲಕ ಎಲ್ಲಾ ಮಾಹಿತಿ ಕ್ರೋಢೀಕರಿಸಲಾಗುತ್ತದೆ.
    * ಥರ್ಡ್ ಪಾರ್ಟಿ ಸರ್ವರ್ ಬಳಕೆ ಮಾಡುವುದರಿಂದ ಬಳಕೆದಾರರಿಗೆ ಆತಂಕವಿರುತ್ತದೆ.
    * ಹ್ಯಾಕರ್ಸ್ ಸಹಾಯದಿಂದ ಸರ್ವರ್ ಹ್ಯಾಕ್ ಮಾಡಬಹುದು.
    * ಮೇಲಿನ ಸಂಸ್ಥೆಗಳಲ್ಲಿನ ಸಿಬ್ಬಂದಿಗಳ ಸಹಾಯದಿಂದ ಡೇಟಾ ಬದಲಾಯಿಸಬಹುದು.
    * ಮಾರ್ಕ್ಸ್ ಕಾರ್ಡ್ ಗಳನ್ನು ದುರುಪಯೋಗ ಪಡೆಸಿಕೊಳ್ಳಬಹುದು.

    ಪಿಯು ನಿರ್ದೇಶಕರು ಎಷ್ಟೇ ಒಳ್ಳೆಯ ಉದ್ದೇಶದಿಂದ ಡಿಜಿಲಾಕರ್ ನಂತ ಸೇವೆ ವಿದ್ಯಾರ್ಥಿಗಳಿಗೆ ನೀಡಿದರು ಹ್ಯಾಕರ್ಸ್ ಗಳ ಹಾವಳಿ ವಿದ್ಯಾರ್ಥಿಗಳನ್ನು ಕಾಡುತ್ತಿದೆ.

  • ಐಎಎಸ್ ಅಧಿಕಾರಿಗಳಾದ ಶಾಲಿನಿ ರಜನೀಶ್, ಶಿಖಾಗೆ ಸಿಎಂ ಬುದ್ಧಿವಾದ

    ಐಎಎಸ್ ಅಧಿಕಾರಿಗಳಾದ ಶಾಲಿನಿ ರಜನೀಶ್, ಶಿಖಾಗೆ ಸಿಎಂ ಬುದ್ಧಿವಾದ

    ಬೆಂಗಳೂರು: ಐಎಎಸ್ ಅಧಿಕಾರಿಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಶಿಖಾ ಅವರಿಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ.

    ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವ ವಿಚಾರವಾಗಿ ಮಂಗಳವಾರ ಶಿಕ್ಷಣ ಸಚಿವ ಮಹೇಶ್ ಅವರ ಮುಂದೆಯೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ಈ ವಿಚಾರ ಸುದ್ದಿಯಾದ ಹಿನ್ನೆಲೆಯಲ್ಲಿ ಇಂದು ಸಿಎಂ ಕಚೇರಿಯಲ್ಲಿ ನೂತನ ಕಾಲೇಜು ಪ್ರಾರಂಭ ಕುರಿತು ಸಭೆ ನಡೆಯಿತು. ಈ ಸಭೆಗೆ ಶಾಲಿನಿ ರಜನೀಶ್ ಹಾಗೂ ನಿರ್ದೇಶಕಿ ಶಿಖಾ ಅವರು ಆಗಮಿಸಿದರು. ಸಭೆ ಬಳಿಕ ಇಬ್ಬರಿಗೂ ಸಿಎಂ ಬುದ್ಧಿವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.

    ಮಾಧ್ಯಮಗಳ ಮುಂದೆ ಮುಂದೆ ಹೀಗೆ ಅಸಮಾಧಾನ ತೋರಿಸಿಕೊಳ್ಳಬೇಡಿ. ಏನೇ ಇದ್ದರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಅಧಿಕಾರಿಗಳು ಹೀಗೆ ಮಾಡಿದರೆ ಸರ್ಕಾರಕ್ಕೂ ಕೆಟ್ಟ ಹೆಸರು ಬರುತ್ತದೆ. ನಿಯಮದ ಪ್ರಕಾರ ಅಧಿಕಾರಿಗಳು ನಡೆದುಕೊಳ್ಳಿ ಅಂತ ಸೂಚನೆ ನೀಡಿದರು. ಇದನ್ನು ಓದಿ: ಪ್ರಾಥಮಿಕ ಶಿಕ್ಷಣ ಸಚಿವರ ಸಮ್ಮುಖದಲ್ಲೇ ಐಎಎಸ್ ಅಧಿಕಾರಿಗಳ ಕಿತ್ತಾಟ!- ವಿಡಿಯೋ ನೋಡಿ

    ಖಾಸಗಿ ಕಾಲೇಜುಗಳಿಗೆ ನಿಯಮ ಮೀರಿ ಅನುಮತಿ ನೀಡಿರುವ ಶಾಲಿನಿ ರಜನೀಶ್ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ, ನಿಯಮ ಮೀರಿ ಯಾವುದೇ ಕೆಲಸ ಮಾಡಬೇಡಿ. ಪಿಯು ಬೋರ್ಡ್ ನಿರ್ದೇಶಕರು ತಿರಸ್ಕರಿಸಿದ ಕಾಲೇಜುಗಳಿಗೆ ಹೇಗೆ ಅನುಮತಿ ನೀಡಿದ್ರಿ. ಇದು ಸರಿಯಲ್ಲ ಅಂತ ಸಿಎಂ ಶಾಲಿನಿ ರಜನೀಶ್ ಅವರಿಗೆ ಕ್ಲಾಸ್ ತಗೊಂಡಿದ್ದಾರೆ ಎಂದು ತಿಳಿದುಬಂದಿದೆ.

  • ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

    ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

    ಬೆಂಗಳೂರು: ಜೂನ್ 8 ರಿಂದ ನಡೆಯಬೇಕಿದ್ದ ಪೂರಕ ಪರೀಕ್ಷೆಗಳ ದಿನಾಂಕ ಬದಲಾವಣೆಯಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪಿಯು ಮಂಡಳಿ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ.

    ಈ ಕುರಿತು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಅವರು ಆದೇಶ ನೀಡಿದ್ದು, ಬೆಂಗಳೂರು ನಗರದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಹಾಗೂ ಪರಿಷತ್ ಚುನಾವಣೆ ಹಿನ್ನೆಲೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ಹಿಂದೆ ಜೂನ್ 8 ರಿಂದ ಪೂರಕ ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ಆದರೆ ಚುನಾವಣೆಗಳು ಹಾಗೂ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಜೂನ್ 29 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭವಾಗಲಿದೆ.

    ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://pue.kar.nic.in/