Tag: Pub

  • ಮಂಗಳೂರಿನ ಪಬ್‍ನಲ್ಲಿ ವಿದ್ಯಾರ್ಥಿಗಳ ಮೋಜು – ಪಾರ್ಟಿಗೆ ಭಜರಂಗದಳದಿಂದ ತಡೆ

    ಮಂಗಳೂರಿನ ಪಬ್‍ನಲ್ಲಿ ವಿದ್ಯಾರ್ಥಿಗಳ ಮೋಜು – ಪಾರ್ಟಿಗೆ ಭಜರಂಗದಳದಿಂದ ತಡೆ

    ಮಂಗಳೂರು: ಭಜರಂಗ ದಳದ ಕಾರ್ಯಕರ್ತರು ಪಬ್ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳ ಫೇರ್‌ವೆಲ್ ಪಾರ್ಟಿಗೆ ತಡೆ ಒಡ್ಡಿದ್ದಾರೆ.

    ಸೋಮವಾರ ರಾತ್ರಿ ಕಾಲೇಜು ಫೇರ್‌ವೆಲ್ ನೆಪದಲ್ಲಿ ಮಂಗಳೂರಿನ ಪ್ರತಿಷ್ಠಿತ ರಿ-ಸೈಕಲ್ ದಿ ಲಾಂಜ್ ಪಬ್‍ನಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಒರಾಯನ್ ಮಾಲ್ ಮುಂಭಾಗ ನಡೆಯಿತು ಅಚಾತುರ್ಯ: ಅಮಲಿನ ಶೋಕಿಗೆ ಬಡಜೀವ ಬಲಿ

    ಪಬ್‍ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳೊಂದಿಗೆ ತುಂಡುಡುಗೆ ತೊಟ್ಟು ಫೇರ್‌ವೆಲ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಏಕಾಏಕಿ ಪಬ್‍ಗೆ ನುಗ್ಗಿದ ಭಜರಂಗದಳ ಕಾರ್ಯಕರ್ತರು ಕೆಲ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಬುದ್ಧಿ ಹೇಳಿ ಪಬ್‍ನಿಂದ ಹೊರಗೆ ಕಳುಹಿಸಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಲಿಪ್ ಲಾಕ್ ವಿಡಿಯೋ ಮೂಲಕ ಮಂಗಳೂರಿನ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿಯಾಗಿದ್ದರು. ಈಗ ಪದವಿ ವಿದ್ಯಾರ್ಥಿಗಳಿಂದ ಪಬ್‍ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಕಾರ್ಯಕರ್ತರು ಪಬ್‍ಗೆ ನುಗ್ಗಿದ್ದರು.

    ನಂತರ ಘಟನೆ ಕುರಿತಂತೆ ಮಾಹಿತಿ ದೊರೆತ ಪೊಲೀಸರು, ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ. ಬಳಿಕ ಅರ್ಧದಲ್ಲಿಯೇ ಪಾರ್ಟಿಯನ್ನು ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಪಬ್‍ನಿಂದ ಹೊರನಡೆದಿದ್ದಾರೆ. ಇದನ್ನೂ ಓದಿ: ಹಿಂದೂಗಳಿಂದ ನೆಮ್ಮದಿ ಹಾಳಾಗಿದ್ದಕ್ಕೆ ಉಗ್ರ ಸಂಘಟನೆ ಸೇರಲು ಮುಂದಾಗಿದ್ದೆ: ಶಂಕಿತ ಉಗ್ರ

    ಮತ್ತೊಂದೆಡೆ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಬ್ಬರು ನಟೋರಿಯಸ್ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ. ಧೀರಜ್ ಕುಮಾರ್, ಪ್ರೀತಂ ಪೂಜಾರಿ ಎಂಬ ಇಬ್ಬರನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ. ಕೊಲೆ ಯತ್ನ, ಸುಲಿಗೆ, ದರೋಡೆಗೆ ಯತ್ನ, ಹಲ್ಲೆ, ಅಪರಾಧಕ್ಕೆ ಒಳಸಂಚು ಪ್ರಕರಣಗಳಲ್ಲಿ ಇವರಿಬ್ಬರು ಪದೇ ಪದೇ ಭಾಗಿಯಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕುಡಿದ ಅಮಲಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು – ವೀಡಿಯೋ ವೈರಲ್

    ಕುಡಿದ ಅಮಲಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು – ವೀಡಿಯೋ ವೈರಲ್

    ಲಕ್ನೋ: ಕುಡಿದ ಅಮಲಿನಲ್ಲಿದ್ದ ಯುವತಿಯರಿಬ್ಬರು ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಗುರುವಾರ ತಡರಾತ್ರಿ ಉತ್ತರ ಪ್ರದೇಶದ ಲಕ್ನೋದ ಅನ್‍ಪ್ಲಗ್ಡ್ ಕೆಫೆಯ ಹೊರಗೆ ಈ ಘಟನೆ ನಡೆದಿದ್ದು, ವ್ಯಕ್ತಿ ಮೇಲೆ ಯುವತಿಯರಿಬ್ಬರು ಹಲ್ಲೆ ನಡೆಸಿರುವ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಇದನ್ನೂ ಓದಿ: ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಬಿದ್ದು ಬೆಂಕಿ – ಇಬ್ಬರು ಸುಟ್ಟು ಕರಕಲು, ಚಾಲಕ ಗಂಭೀರ

    33 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ಪಬ್ ಹೊರಗೆ ಯುವತಿ ವ್ಯಕ್ತಿಗೆ ಮುಷ್ಟಿ ಮಾಡಿ ಹೊಡೆಯುತ್ತಿದ್ದರೆ, ಜನರು ತಮ್ಮ ಫೋನ್‍ಗಳಲ್ಲಿ ಗಲಾಟೆ ವೀಡಿಯೋವನ್ನು ರೆಕಾರ್ಡ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಪಬ್‍ನ ಪ್ರವೇಶ ದ್ವಾರದಲ್ಲಿ ಇರಿಸಲಾಗಿದ್ದ ಫ್ಲವರ್ ಪಾಟ್‍ನಿಂದಲೂ ವ್ಯಕ್ತಿ ಮೇಲೆ ಯುವತಿ ಹಲ್ಲೆ ನಡೆಸಿದ್ದಾಳೆ.

    ವಿಭೂತಿ ಖಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮ್ಮಿಟ್ ಬಿಲ್ಡಿಂಗ್‍ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಗಲಾಟೆ ಜೊತೆಗೆ ಕೆಲಕಾಲ ಮಾತಿನ ಚಕಮಕಿ ಮುಂದುವರಿದಿದ್ದರಿಂದ ಕೊನೆಗೆ ಬೌನ್ಸರ್‌ಗಳು ಮತ್ತು ಪಬ್‍ನ ಇತರ ನಿರ್ವಾಹಕರು ಯುವತಿಯರನ್ನು ತಡೆದಿದ್ದಾರೆ. ಇದೀಗ ವೀಡಿಯೋದಲ್ಲಿದ್ದ ಇಬ್ಬರು ಯುವತಿಯರನ್ನು ಗುರುತಿಸಿ ಪೊಲೀಸರು ಬಂಧಿಸಿದ್ದಾರೆ ಮತ್ತು ಇಬ್ಬರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಆದರೆ ಹಲ್ಲೆಗೊಳಗಾದ ವ್ಯಕ್ತಿ ಈ ಬಗ್ಗೆ ಯಾವುದೇ ದೂರು ದಾಖಲಿಸಲು ಬಂದಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಪಬ್‍ನಲ್ಲಿ ಕನ್ನಡ ಹಾಡು ಗಲಾಟೆ- ಕ್ಷಮೆಯಾಚಿಸಿದ ಡಿಜೆ ಸಿದ್ದಾರ್ಥ್

    ಪಬ್‍ನಲ್ಲಿ ಕನ್ನಡ ಹಾಡು ಗಲಾಟೆ- ಕ್ಷಮೆಯಾಚಿಸಿದ ಡಿಜೆ ಸಿದ್ದಾರ್ಥ್

    – ಅತಿ ಹೆಚ್ಚು ಇಷ್ಟವಾಗುವ ಭಾಷೆ ಕನ್ನಡ
    – ಪುನೀತ್ ರಾಜ್ ಕುಮಾರ್ ಅಂದ್ರೆ ತುಂಬಾ ಇಷ್ಟ

    ಬೆಂಗಳೂರು: ಕನ್ನಡ ಹಾಡು ಹಾಕಲ್ಲ ಎಂದು ಹಲ್ಲೆಗೆ ಮುಂದಾಗಿ ಸುದ್ದಿಯಾಗಿದ್ದ ಕೋರಮಂಗಲದ ಬದ್ಮಾಶ್ ಪಬ್ ಡಿಜೆ ಸಿದ್ದಾರ್ಥ್ ಇದೀಗ ಕ್ಷಮೆಯಾಚಿಸಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಸಿದ್ದಾರ್ಥ್, ನಾನು ಪುನೀತ್ ರಾಜ್ ಕುಮಾರ್ ಅಭಿಮಾನಿ. ಪ್ರತಿ ದಿನ ಗೊಂಬೆ ಹೇಳುತೈತೆ ಹಾಡು ಪ್ಲೇ ಮಾಡ್ತಾ ಇದ್ದೆ. ಆದರೆ ಕಾರಣಾಂತರಗಳಿಂದ ಶನಿವಾರ ರಾತ್ರಿ ಕನ್ನಡ ಹಾಡು ಪ್ಲೇ ಮಾಡೋದಕ್ಕೆ ಸಾಧ್ಯವಾಗಲಿಲ್ಲ. ಅದಕ್ಕೆ ನಾನು ಕ್ಷೇಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಮಾತ್ರವಲ್ಲ, ಬೆಂಗ್ಳೂರಲ್ಲೂ ಅನ್ಯಭಾಷಿಕರ ದರ್ಬಾರ್ – ಪಬ್‍ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆ ಯತ್ನ

    ಸಿದ್ದಾರ್ಥ್ ಕ್ಷಮೆ:
    ಕಾರಣಾಂತರದಿಂದ ಶನಿವಾರ ರಾತ್ರಿ ಕನ್ನಡ ಹಾಡನ್ನು ಪ್ಲೇ ಮಾಡಿಲ್ಲ ಎಂದು ಒಪ್ಪಿಕೊಂಡ ಡಿಜೆ, ನಾನು ಹುಟ್ಟಿ ಬೆಳೆದಿದ್ದು ಕರ್ನಾಟಕದಲ್ಲಿಯೇ. ಕಾವೇರಿ ನೀರು ಕುಡಿದು ಬೆಳೆದಿದ್ದೇನೆ. ನನಗೆ ಅತಿ ಹೆಚ್ಚು ಇಷ್ಟವಾಗುವ ಭಾಷೆ ಅಂದರೆ ಕನ್ನಡ. ನಾನು ಪ್ರತಿ ಬಾರಿಯೂ ಕನ್ನಡ ಹಾಡನ್ನು ಪ್ಲೇ ಮಾಡ್ತೇನೆ. ಪುನೀತ್ ರಾಜ್ ಕುಮಾರ್ ಎಂದರೆ ನನಗೆ ತುಂಬಾ ಇಷ್ಟ. ಬೊಂಬೆ ಹೇಳುತೈತೆ ಹಾಡನ್ನು ಪ್ರತಿ ಬಾರಿಯೂ ಪ್ಲೇ ಮಾಡ್ತೇನೆ. ನಿನ್ನೆ ತಡವಾಗಿದ್ದರಿಂದ ಕನ್ನಡ ಹಾಡು ಹಾಕಲು ಸಾಧ್ಯವಾಗಿಲ್ಲ.

    ಸಡನ್ ಆಗಿ 12.30ಕ್ಕೆ ಪಬ್ ಕ್ಲೋಸ್ ಮಾಡಲು ಹೇಳಿದ್ರು. ಹಾಗಾಗಿ ಕನ್ನಡ ಹಾಡು ಹಾಕಲು ಸಾಧ್ಯವಾಗಿಲ್ಲ. ಕನ್ನಡ ಹಾಡು ಪ್ಲೇ ಮಾಡದಿದ್ದಕ್ಕೆ ನಾನು ಕ್ಷಮೆ ಕೇಳ್ತೇನೆ. ಆದರೆ ಸುಮಿತಾ ಹಾಗೂ ಸ್ನೇಹಿತರು ಮಾಡುತ್ತಿರುವ ಆರೋಪ ಸುಳ್ಳು. ಮ್ಯೂಸಿಕ್ ಸಿಸ್ಟಂ ಆಫ್ ಮಾಡಿದ ಮೇಲೆ ಕನ್ನಡ ಹಾಡು ಯಾಕೆ ಹಾಕಿಲ್ಲ ಅಂದ್ರು. ಮೊದಲು ಅವರು ಕನ್ನಡ ಹಾಡು ಹಾಕಲು ಕೇಳಿಲ್ಲ. ಸಿಸ್ಟಂ ಆಫ್ ಆಗಿದ್ರಿಂದ ಮತ್ತೆ ಪ್ಲೇ ಮಾಡಲು ಕಷ್ಟ ಎಂದೆ. ಅವರು 10 ಜನ ನಿರಂತರವಾಗಿ ಬೈಯುತ್ತಲೇ ಇದ್ರು.

    ಕೆಟ್ಟದಾಗಿ ಬೈದಾಗ ನಾನು ಒಂದೆರಡು ಮಾತು ಬೈದಿದ್ದೇನೆ. ಡಿಜೆ ಗೆ ಕನ್ನಡ ಬರಲ್ಲ ಎಂದು ಅವರು ಹೇಳಿದ್ದಾರೆ. ನಾನು ಕನ್ನಡದಲ್ಲೇ ಅವರ ಹತ್ತಿರ ಮಾತಾಡಿದ್ದೇನೆ. ಸಮಯ ಬಂದಾಗ ನಾನು ಮಾಧ್ಯಮಕ್ಕೆ ಬಂದು ಮಾತಾಡ್ತೇನೆ ಎಂದು ಡಿಜೆ ತಿಳಿಸಿದ್ದಾರೆ. ಅಲ್ಲದೆ ಫೇಸ್ ಬುಕ್ ನಲ್ಲಿ ಬೊಂಬೆ ಹೇಳುತೈತೆ ಹಾಡು ಹಾಕಿದ್ದ ವೀಡಿಯೋ ಕೂಡ ಶೇರ್ ಮಾಡಿದ್ದಾರೆ.

  • ಬೆಳಗಾವಿ ಮಾತ್ರವಲ್ಲ, ಬೆಂಗ್ಳೂರಲ್ಲೂ ಅನ್ಯಭಾಷಿಕರ ದರ್ಬಾರ್ – ಪಬ್‍ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆ ಯತ್ನ

    ಬೆಳಗಾವಿ ಮಾತ್ರವಲ್ಲ, ಬೆಂಗ್ಳೂರಲ್ಲೂ ಅನ್ಯಭಾಷಿಕರ ದರ್ಬಾರ್ – ಪಬ್‍ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆ ಯತ್ನ

    ಬೆಂಗಳೂರು: ಬೆಳಗಾವಿ ಮಾತ್ರವಲ್ಲ ಬೆಂಗಳೂರಿನಲ್ಲೂ ಅನ್ಯಭಾಷಿಕರ ದರ್ಬಾರ್ ಆರಂಭವಾಗಿದೆ. ಪಬ್‍ನಲ್ಲಿ ಕನ್ನಡ ಹಾಡು ಕೇಳೋದೇ ತಪ್ಪಾ ಅನ್ನೋ ಪ್ರಶ್ನೆ ಎದ್ದಿದೆ. ಕನ್ನಡ ಹಾಡು ಕೇಳಿದ್ದಕ್ಕೆ ಡಿಜೆ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಕೋರಮಂಗಲದ ಬದ್ಮಾಶ್ ಹ್ಯಾಂಗೋವರ್ ಪಬ್‍ನಲ್ಲಿ ಈ ಘಟನೆ ನಡೆದಿದೆ. ವಿವೇಕನಗರದ ನಿವಾಸಿ ಸುಮಿತಾ ಫ್ಯಾಮಿಲಿ ನಿನ್ನೆ ರಾತ್ರಿ ಬದ್ಮಾಶ್ ಪಬ್‍ನಲ್ಲಿ ಸಹೋದರ ನಂದಕಿಶೋರ್ ಬರ್ತ್ ಡೇ ಪಾರ್ಟಿಗೆ ಬಂದಿತ್ತು. ಬರೀ ಅನ್ಯಭಾಷೆ ಹಾಡುಗಳನ್ನೇ ಪ್ಲೇ ಮಾಡ್ತಿದ್ದ ಡಿಜೆಗೆ ಕನ್ನಡ ಹಾಡು ಹಾಕಿ ಅಂತ ಸುಮಿತಾ ಕುಟುಂಬ ಕೇಳಿಕೊಂಡಿದೆ. ಈ ವೇಳೆ ಡಿಜೆ, ಕನ್ನಡ ಗಿನ್ನಡ ಇಲ್ಲ, ಕನ್ನಡ ಬೇಕು ಅಂದ್ರೇ ಈ ಪಬ್ ಗೆ ಬರಬೇಡಿ ಎಂದು ಆವಾಜ್ ಹಾಕಿದ್ದಾನೆ. ಇದನ್ನೂ ಓದಿ: 40 ವರ್ಷಗಳ ನಂತರ ತನ್ನ ಮೂಲ ಹುಡುಕುತ್ತಾ ಬಂದ ಸ್ವೀಡನ್ ಪ್ರಜೆ!

    ಆವಾಜ್ ಮಾತ್ರವಲ್ಲ ಡಿಜೆ ಸಿದ್ದಾರ್ಥ ಅಲಿಯಾಸ್ ಡಿಜೆ ಅಪೋಸಿಟ್ ಹಲ್ಲೆ ಮಾಡಲು ಸಹ ಮುಂದಾಗಿದ್ದ. ರಾತ್ರಿ 8:30 ರಿಂದ 12:30ರ ವರೆಗೂ ಕೇಳಿಕೊಂಡ್ರು ಕನ್ನಡ ಸಾಂಗ್ ಪ್ಲೇ ಮಾಡಲೇ ಇಲ್ಲ ಎಂದು ಕುಟುಂಬ ಆರೋಪಿಸಿದೆ. ಇದರಿಂದ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಹಾಗೂ ಕನ್ನಡಕ್ಕೆ ಕವಡೆ ಕಾಸಿನ ಕಿಮ್ಮತ್ತು ಎಂಬುದು ಸ್ಪಷ್ಟವಾಗಿದೆ. ಕನ್ನಡಿಗರು ಬೆಂಗಳೂರಿನ ಪಬ್ ಗೆ ಹೋಗೊ ಹಾಗೇ ಇಲ್ವಾ, ಪಬ್ ಗೆ ಹೋದ್ರೆ ಕನ್ನಡ ಸಾಂಗ್ ಹಾಕಿ ಅಂತ ಕೇಳಲೇಬಾರದಾ ಎಂಬ ಅನುಮಾನ ಮೂಡಿದೆ.

  • 9 ಗಂಟೆಯಲ್ಲಿ 51 ಪಬ್ ಸುತ್ತಾಡಿದ ವ್ಯಕ್ತಿ – ಹೊಸ ಗಿನ್ನೆಸ್ ರೆಕಾರ್ಡ್

    9 ಗಂಟೆಯಲ್ಲಿ 51 ಪಬ್ ಸುತ್ತಾಡಿದ ವ್ಯಕ್ತಿ – ಹೊಸ ಗಿನ್ನೆಸ್ ರೆಕಾರ್ಡ್

    ಲಂಡನ್: ಬ್ರಿಟಿಷ್ ವ್ಯಕ್ತಿಯೋರ್ವ 9 ಗಂಟೆಯಲ್ಲಿ 51 ಪಬ್ ಸುತ್ತಾಡುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

    ಹೌದು ಸಾಮಾನ್ಯವಾಗಿ ಒಬ್ಬ ವ್ಯಕ್ತಿ ದಿನವೆಲ್ಲ ಪ್ರಯತ್ನಿಸಿದರೂ 7-8 ಪಬ್‍ಗಳಿಗೆ ಹೋಗಿ ಬರಬಹುದು. ಆದರೆ ಕೇಂಬ್ರಿಡ್ಜ್ ಶೈರ್‍ನ ಸೇಂಟ್ ನಿಯೋಟ್ಸ್‌ನ ಮ್ಯಾಟಿ ಎಲ್ಲಿಸ್, 8 ಗಂಟೆ, 52 ನಿಮಿಷ ಮತ್ತು 37 ಸೆಕೆಂಡುಗಳಲ್ಲಿ ಒಟ್ಟು 51 ಪಬ್‍ಗಳಿಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಗಿನ್ನೆಸ್ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶವನ್ನು ಪಡೆಯಲು ಪ್ರತಿ ಪಬ್‍ನಲ್ಲಿಯೂ ಕನಿಷ್ಠ 125 ಮಿಲಿ ಕುಡಿದಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ಕಿತ್ತಳೆ ರಸ ಮತ್ತು ಡಯಟ್ ಕೋಕ್ ಅನ್ನು ಅವರ ಆರೋಗ್ಯಕ್ಕೆ ಉತ್ತಮ ಎಂದು ನಾಲ್ಕು ಪಿಂಟ್ ಬಿಯರ್ ಜೊತೆಗೆ ಸೇವಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

     

    View this post on Instagram

     

    A post shared by Matt Ellis (@smilinggrape)

    ಈ ಕುರಿತಂತೆ ಮಾತನಾಡಿದ ಅವರು, ನನ್ನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಾಗಿ ಕುಡಿಯುವುಲ್ಲ. ಬಹುಶಃ ಹಲವು ವರ್ಷಗಳ ಹಿಂದೆ ನಾನು ಆಲ್ಕೋಹಾಲ್ ಯುಕ್ತಪಾನೀಯಗಳನ್ನು ಸೇವಿಸುತ್ತಿದ್ದೆ. ಆದರೆ ಈಗ ಅಲ್ಲ “ಎಂದು ಹೇಳಿದ್ದಾರೆ. ಅಲ್ಲದೇ 24 ಗಂಟೆಯೊಳಗೆ ಅತೀ ಹೆಚ್ಚು ಪಬ್ ಮತ್ತು ನೈಟ್ ಕ್ಲಬ್‍ಗಳಿಗೆ ಭೇಟಿ ನೀಡಲು ಪ್ರಯತ್ನಿಸಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನ ವಾಹನದ ಮೇಲೆ ಬಾಂಬ್ ಎಸೆಯಲೆತ್ನಿಸಿದ ಐವರ ಬಂಧನ

  • ಬಲವಂತವಾಗಿ ಪತ್ನಿಗೆ ಮದ್ಯ ಕುಡಿಸಿ ಫೋಟೋ ಕ್ಲಿಕ್ – ಬ್ಲ್ಯಾಕ್‍ಮೇಲ್

    ಬಲವಂತವಾಗಿ ಪತ್ನಿಗೆ ಮದ್ಯ ಕುಡಿಸಿ ಫೋಟೋ ಕ್ಲಿಕ್ – ಬ್ಲ್ಯಾಕ್‍ಮೇಲ್

    – ಪಬ್, ಬಾರ್‌ಗೆ ಕರ್ಕೊಂಡು ಹೋಗ್ತಿದ್ದ
    – ದಪ್ಪ ಇದ್ದೀಯಾ ಎಂದು ಹಿಂಸೆ

    ಬೆಂಗಳೂರು: ಪತಿ ಪ್ರತಿದಿನ ಮದ್ಯಪಾನ ಮಾಡುವಂತೆ ಒತ್ತಾಯಿಸುತ್ತಿದ್ದು, ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಗಂಡನ ವಿರುದ್ಧ ದೂರು ದಾಖಲಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

    27 ವರ್ಷದ ಮಹಿಳೆ ಪತಿಯ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಪತಿಯನ್ನು ರವೀಂದ್ರನಾಥನ್ ಎಂದು ಗುರುತಿಸಲಾಗಿದೆ. 2 ವರ್ಷದ ಹಿಂದೆ ಮಹಿಳೆ ರವೀಂದ್ರನಾಥನ್ ಜೊತೆ ಮದುವೆಯಾಗಿದ್ದು, ಬೆಂಗಳೂರಿನ ಚಿಕ್ಕಮಾವಳ್ಳಿಯಲ್ಲಿ ವಾಸಿಸುತ್ತಿದ್ದಾರೆ.

    ಮದುವೆ ನಂತರ ನಾವು ಅನ್ಯೋನ್ಯವಾಗಿದ್ದೆವು. ಆದರೆ ದಿನ ಕಳೆದಂತೆ ಪತಿ ಸಣ್ಣ ಪುಟ್ಟ ವಿಚಾರಕ್ಕೂ ಜಗಳ ಮಾಡುತ್ತಿದ್ದನು. ಮನೆಯಲ್ಲಿಯೇ ಪ್ರತಿದಿನ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದನು. ಒಂದು ವೇಳೆ ನಾನು ಮದ್ಯಪಾನ ಮಾಡಲು ನಿರಾಕರಿಸಿದರೆ ಥಳಿಸುತ್ತಿದ್ದನು. ಅಷ್ಟೇ ಅಲ್ಲದೇ ಪತಿ ಆಗಾಗ ನನ್ನನ್ನು ಬಾರ್ ಮತ್ತು ಪಬ್‍ಗಳಿಗೆ ಕರೆದುಕೊಂಡು ಹೋಗುತ್ತಿದ್ದನು. ಅಲ್ಲಿಯೂ ಸಹ ಬಲವಂತವಾಗಿ ಮದ್ಯಪಾನ ಮಾಡಿಸುತ್ತಿದ್ದನು ಎಂದು ನೊಂದ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಪತಿ ನನ್ನ ಫೋಟೋಗಳನ್ನು ತನ್ನ ಫೋನಿನಲ್ಲಿ ತೆಗೆದುಕೊಳ್ಳುತ್ತಿದ್ದನು. ನಂತರ ಹೆಚ್ಚಿನ ವರದಕ್ಷಿಣೆ ತೆಗೆದುಕೊಂಡು ಬರದಿದ್ದರೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದಕರಿಗೆ ಹಾಕಿದ್ದಾನೆ. ಅಲ್ಲದೇ ಕೆಲಸಕ್ಕೆ ಹೋಗಿ ಮನೆಯ ಖರ್ಚುಗಳನ್ನು ನೀನೆ ನೋಡಿಕೊಳ್ಳಬೇಕು ಎಂದು ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

    ಆರೋಪಿ ರವೀಂದ್ರನಾಥನ್ ಮಹಿಳೆಗೆ ನೀನು ದಪ್ಪಗಿದ್ದೀಯಾ, ನೋಡಲು ಚೆನ್ನಾಗಿಲ್ಲ ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಸದ್ಯಕ್ಕೆ ಮಹಿಳೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಆರೋಪಿ ರವೀಂದ್ರನಾಥನ್ ವಿರುದ್ಧ ದೂರು ದಾಖಲಾಗಿದ್ದು, ಬಸವನಗುಡಿ ಪೊಲೀಸರು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

  • ಪಬ್‍ನಲ್ಲಿ ಬಿಗ್‍ಬಾಸ್ ವಿನ್ನರ್ ಮೇಲೆ ದಾಳಿ – ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ

    ಪಬ್‍ನಲ್ಲಿ ಬಿಗ್‍ಬಾಸ್ ವಿನ್ನರ್ ಮೇಲೆ ದಾಳಿ – ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ

    ಹೈದರಾಬಾದ್: ತೆಲುಗು ‘ಬಿಗ್‍ಬಾಸ್ ಸೀಸನ್ 3’ ನೇ ವಿಜೇತರಾಗಿರುವ ಗಾಯಕ ರಾಹುಲ್ ಸಿಪ್ಲಿಗುಂಜ್ ಮೇಲೆ ಪಂಬ್‍ವೊಂದರಲ್ಲಿ ದಾಳಿ ನಡೆದಿದೆ.

    ಬುಧವಾರ ರಾಹುಲ್ ಪಬ್‍ಗೆ ತೆರಳಿದ್ದರು. ಈ ವೇಳೆ ಕೆಲವು ಯುವಕರ ಗುಂಪು ರಾಹುಲ್ ಮೇಲೆ ದಾಳಿ ನಡೆಸಿದೆ. ಈ ವೇಳೆ ವ್ಯಕ್ತಿಯೊಬ್ಬ ರಾಹುಲ್ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದಿದ್ದಾನೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಬ್‍ನಲ್ಲಿ ಕೆಲವರು ರಾಹುಲ್ ಅವರ ಗೆಳತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ವಿಚಾರಕ್ಕೆ ಗಲಾಟೆ ನಡೆದು ಹಲ್ಲೆ ಮಾಡಲಾಗಿದೆ. ಈ ಘಟನೆಯಲ್ಲಿ ರಾಹುಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್‌-ಇನ್ಸ್‌ಪೆಕ್ಟರ್ ವೈ ಸುರೇಂದರ್ ರೆಡ್ಡಿ ತಿಳಿಸಿದ್ದಾರೆ.

    ಬುಧವಾರ ರಾತ್ರಿ ಈ ಗಲಾಟೆ ನಡೆದಿದೆ. ಗುಂಪಿನಲ್ಲಿದ್ದರಲ್ಲಿ ಒಬ್ಬರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪಬ್‍ನಲ್ಲಿ ಹಲ್ಲೆ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾಲ್ಲಿ ವೈರಲ್ ಆಗುತ್ತಿದೆ.

    ರಾಹುಲ್ ಹಿನ್ನೆಲೆ ಗಾಯಕ ಮತ್ತು ಸಂಗೀತಗಾರರಾಗಿದ್ದು, ಕೆಲವು ಟಾಲಿವುಡ್ ಚಿತ್ರಗಳಲ್ಲೂ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೇ ರಾಹುಲ್ ಸಿಪ್ಲಿಗುಂಜ್ ‘ಬಿಗ್‍ಬಾಸ್ ಸೀಸನ್ 2’ ರಲ್ಲಿ ವಿನ್ನರ್ ಆಗುವ ಮೂಲಕ 50 ಲಕ್ಷ ಬಹುಮಾನವನ್ನು ಗೆದ್ದಿದ್ದಾರೆ.

  • ಇಂಗ್ಲೆಂಡ್‍ ಪಬ್‍ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು

    ಇಂಗ್ಲೆಂಡ್‍ ಪಬ್‍ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು

    ಲಂಡನ್: ಇಂಗ್ಲೆಂಡ್‍ ಮಿಡ್‍ಲ್ಯಾಂಡ್ಸ್ ನ ನಾಟಿಂಗ್‍ಹ್ಯಾಮ್ ಪಬ್‍ವೊಂದರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಈಗ ಆತ ಸಾವನ್ನಪ್ಪಿದ್ದಾನೆ.

    ಅರ್ಜುನ್ ಸಿಂಗ್ (20) ಮೃತಪಟ್ಟ ಯುವಕ. ಈ ಬಗ್ಗೆ ಪ್ರತಿಕ್ರಿಯಿಸಿದ ನಾಟಿಂಗ್‍ಹ್ಯಾಮ್ ಪೊಲೀಸರು, 20 ವರ್ಷದ ಯುವಕನೊಬ್ಬ ಅರ್ಜುನನ್ನು ಕೊಲೆ ಮಾಡಿದ್ದಾನೆ. ವಿಚಾರಣೆ ನಡೆಸಲು ನಾವು ಯುವಕನನ್ನು ಬಂಧಿಸಿದ್ದೆವೆ. ಶನಿವಾರ ಸಂಜೆ ಅರ್ಜುನ್ ಮೇಲೆ ಹಲ್ಲೆ ಆಗಿದ್ದು, ಭಾನುವಾರ ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

    ನಾಟಿಂಗ್‍ಹ್ಯಾಮ್ ಪೊಲೀಸ್‍ನ ಡಿಟೆಕ್ಟಿವ್ ಇನ್ಸ್ ಪೆಕ್ಟರ್ ರಿಚರ್ಡ್ ಮಾಂಕ್ ಪ್ರತಿಕ್ರಿಯಿಸಿ, ಪತ್ತೆದಾರರ ತಂಡ ನಿರಂತರವಾಗಿ ತನಿಖೆ ನಡೆಸುತ್ತಿದೆ ಮತ್ತು ಕೊಲೆಯ ಅನುಮಾನದ ಮೇಲೆ ಬಂಧನಕ್ಕೊಳಗಾದ ಯುವಕನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದರು.

    ಅರ್ಜುನ್ ಸಿಂಗ್ ಅವರ ಕುಟುಂಬಸ್ಥರು ಈ ಘಟನೆಯ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ವಿನಂತಿಸಿದ್ದಾರೆ. ನಾವು ಸಾಕ್ಷಿಗಾಗಿ, ಜನರ ಬಳಿಯಿರುವ ದೃಶ್ಯಗಳಿಗಾಗಿ ಹಾಗೂ ಘಟನೆ ಬಗ್ಗೆ ಮಾಹಿತಿ ನೀಡುವ ವ್ಯಕ್ತಿಗಾಗಿ ಕಾಯುತ್ತಿದ್ದೆವೆ ಎಂದು ರಿಚರ್ಡ್ ಮಾಂಕ್ ಹೇಳಿದ್ದಾರೆ.

    ನಾಟಿಂಗ್‍ಹ್ಯಾಮ್ ಟ್ರೆಂಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಅರ್ಜುನ್ ಸಿಂಗ್ ಮೇಲೆ ನಾಟಿಂಗ್‍ಹ್ಯಾಮ್‍ನ ಲಾಂಗ್ ರೋ ಬಳಿಯಿರುವ ಪಬ್‍ನಲ್ಲಿ ಹಲ್ಲೆ ನಡೆಸಲಾಗಿತ್ತು. ತಕ್ಷಣ ಆತನನ್ನು ನಿಕಟವರ್ತಿ ಕ್ವೀನ್ಸ್ ಮೆಡಿಕಲ್ ಸೆಂಟರ್ ಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆಗೆ ದಾಖಲಾದ ಮರುದಿನವೇ ಅರ್ಜುನ್ ಮೃತಪಟ್ಟಿದ್ದಾನೆ.

  • ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಪ್ರಶ್ನಿಸಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

    ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಪ್ರಶ್ನಿಸಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

    ಬೆಂಗಳೂರು: ಹೊಸ ವರ್ಷಾಚರಣೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಒಂದೊಂದೇ ಅವಘಡಗಳು ಬೆಳಕಿಗೆ ಬರುತ್ತಿದೆ. ನ್ಯೂ ಇಯರ್ ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನ್ನು ಪ್ರಶ್ನೆ ಮಾಡಿದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ.

    ಕೋರಮಂಗಲದ ಐದನೇ ಹಂತದಲ್ಲಿರುವ ಮ್ಯಾಡ್ ಸೈನಟಿಸ್ಟ್ ಪಬ್ ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಎಂಜಿನಿಯರ್ ವಿದ್ಯಾರ್ಥಿ ಅರ್ಜುನ್ ಎಂಬುವವರಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದಕ್ಕೆ ಅರ್ಜುನ್ ಸೇರಿದಂತೆ ಇಬ್ಬರು ಯುವಕ ಯುವತಿಯರು ಪಬ್ ಗೆ ಹೋಗಿದ್ದಾರೆ.

    ಈ ವೇಳೆ ಪಾರ್ಟಿಯಲ್ಲಿ ಡಾನ್ಸ್ ಮಾಡುವ ವೇಳೆ ಯುವಕರ ಗುಂಪೊಂದು ಡಾನ್ಸ್ ಮಾಡುವ ನೆಪದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರು. ಇದನ್ನು ನೋಡಿದ ಅರ್ಜುನ್ ಯುವಕರನ್ನು ಪ್ರಶ್ನೆ ಮಾಡಿದ್ದ, ಇದರಿಂದ ಕೋಪಗೊಂಡ ಯುವಕರ ಗುಂಪು ಪಬ್ ಒಳಗಡೆಯೇ ವಿದ್ಯಾರ್ಥಿ ಅರ್ಜುನ್ ನನ್ನ ಹಿಗ್ಗಾಮುಗ್ಗಾ ಥಳಿಸಿದೆ. ಅರ್ಜುನ್ ಬಲಕಣ್ಣು, ಮುಖ ಸೇರಿದಂತೆ ದೇಹದ ಕೆಲ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಜಡೆ ಜಗಳಕ್ಕೆ ಬ್ರೇಕ್ – ಸಂಜನಾ, ವಂದನಾ ಫುಲ್ ಸೈಲೆಂಟ್

    ಜಡೆ ಜಗಳಕ್ಕೆ ಬ್ರೇಕ್ – ಸಂಜನಾ, ವಂದನಾ ಫುಲ್ ಸೈಲೆಂಟ್

    ಬೆಂಗಳೂರು: ನಟಿ ಸಂಜನಾ ಮತ್ತು ನಿರ್ಮಾಪಕಿ ವಂದನಾ ಇಬ್ಬರು ಕೂಡ ಪಬ್ ಒಂದರಲ್ಲಿ ಕುಡಿದು ಪರಸ್ಪರ ಕಿತ್ತಾಡಿಕೊಂಡಿದ್ದರು. ಒಬ್ಬರ ನಡೆತೆ ಮೇಲೆ ಮತ್ತೊಬ್ಬರು ಆರೋಪವನ್ನು ಮಾಡಿಕೊಂಡಿದ್ದರು. ಆದರೆ ಈಗ ಆ ಜಗಳಕ್ಕೆ ಇಬ್ಬರು ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.

    ಯುಬಿ ಸಿಟಿ ಬಳಿಯ ಪಬ್ ಒಂದರಲ್ಲಿ ಸ್ಯಾಂಡಲ್‍ವುಡ್ ನಟಿ ಸಂಜನಾ, ನಿರ್ಮಾಪಕಿ ವಂದನಾ ಮೇಲೆ ವಿಸ್ಕಿ ಗ್ಲಾಸ್ ಅನ್ನು ಬಿಸಾಡಿದ್ದಕ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾದ ಬಳಿಕ ಸಂಜನಾ ಕೂಡ ವಂದನಾ ಮೇಲೆ ದೂರು ನೀಡಿದ್ದರು.  ಇದನ್ನು ಓದಿ: ರಾಜಿಗೆ ಒಂದೆಜ್ಜೆ ಮುಂದೆ ಇಟ್ಟ ಸಂಜನಾ ಗಲ್ರಾನಿ?

    ಇಬ್ಬರು ಜಿದ್ದಿಗೆ ನಿಂತವರಂತೆ ಇದ್ದರೂ ಕೊನೆಗೆ ಪ್ರಕರಣದಿಂದ ಇಬ್ಬರೂ ಹಿಂದೆ ಸರಿಯುತ್ತಿದ್ದಾರೆ. ಸಂಜನಾ ದೂರು ನೀಡಿದ ಕೆಲವೇ ಗಂಟೆಗಳಲ್ಲಿ ತಮ್ಮ ಟ್ವಿಟ್ಟರ್ ಅಕೌಂಟ್‍ನಲ್ಲಿ ನಾನು ಪ್ರಕರಣಕ್ಕೆ ಇತ್ಯರ್ಥ ಹಾಡುತ್ತೇನೆ ಎಂದಿದ್ದರು. ಬಳಿಕ ವಂದನಾ ಕೂಡ ಸುದ್ದಿಗೋಷ್ಟಿ ನಡೆಸುತ್ತೇನೆ. ಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಹೇಳಿ ಈಗ ಸೈಲೆಂಟ್ ಆಗಿದ್ದಾರೆ.

    ಇಬ್ಬರೂ ಬಾಟಲಿಯಲ್ಲಿ ಬಡಿದಾಡಿಕೊಂಡು ಈಗ ಫುಲ್ ಸೈಲೆಂಟ್ ಆಗಿದ್ದಾರೆ. ಸದ್ಯಕ್ಕೆ ಜಡೆ ಜಗಳಕ್ಕೆ ಬ್ರೇಕ್ ಬಿದ್ದಿದೆ.