Tag: Pub

  • ಮಾಜಿ ಸಿಎಂ ಸೊಸೆ ಮಾಲೀಕತ್ವದ ಪಬ್ ಮೇಲೆ ಸಿಸಿಬಿ ದಾಳಿ

    ಮಾಜಿ ಸಿಎಂ ಸೊಸೆ ಮಾಲೀಕತ್ವದ ಪಬ್ ಮೇಲೆ ಸಿಸಿಬಿ ದಾಳಿ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ಮಾಲೀಕತ್ವದ ಪಬ್ ಮೇಲೆ ಶುಕ್ರವಾರ ರಾತ್ರಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸ್ಥಳದಲ್ಲಿದ್ದ ಮತ್ತೊಬ್ಬ ಮಾಲೀಕನನ್ನು ಬಂಧಿಸಿದ್ದಾರೆ.

    ನಗರದ ಲಿಮೆರಿಡಿಯನ್ ಹೋಟೆಲಿನಲ್ಲಿರುವ ಶುಗರ್ ಕೇನ್ ಪಬ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪಬ್‍ನಲ್ಲಿ ಅನಧಿಕೃತವಾಗಿ ಕೆಲಸಗಳು ನಡೆಯುತ್ತಿದ್ದು, ಇಡೀ ರಾತ್ರಿ ಪಬ್‍ನಲ್ಲಿ ಡಿಸ್ಕೋ ನಡೆಯುತ್ತದೆ ಎಂಬ ಖಚಿತ ಮಾಹಿತಿ ಮೇಲೆ ರಾತ್ರಿ ಅಧಿಕಾರಿಗಳು ದಾಳಿ ನಡೆಸಿದ್ದರು.

    ಡಿಸ್ಕೊಟೆಕ್ ಲೈಸೆನ್ಸ್ ಮುಗಿದಿತ್ತು. ಆದರೂ ರಿನೀವಲ್ ಮಾಡಿರಲಿಲ್ಲ. ಜೊತೆಗೆ ಸಿಬ್ಬಂದಿ ಅಕ್ರಮವಾಗಿ ಬೆಳಗ್ಗಿನ ಜಾವ 3 ಗಂಟೆವರೆಗೆ ಪಬ್ ಮತ್ತು ಡಿಸ್ಕೊಟೆಕ್ ನಡೆಸುತ್ತಿದ್ದರು. ಇಂದು ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ದಾಳಿ ನಡೆಸಿದಾಗ 300 ಜನರು ಪಬ್‍ನಲ್ಲಿದ್ದರು. ಅವರನ್ನು ಸಿಸಿಬಿ ಅಧಿಕಾರಿಗಳು ಹೊರಗೆ ಕಳುಹಿಸಿದ್ದಾರೆ.

    ದಾಳಿ ವೇಳೆ ಸ್ಥಳದಲ್ಲಿದ್ದ ಮತ್ತೊಬ್ಬ ಮಾಲೀಕ ರೋಹನ್ ಗೌಡ ಅಲಿಯಾಸ್ ಮಂಜುನಾಥ್‍ನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಜೊತೆಗೆ ಮ್ಯಾನೇಜರ್ ಶಶಿಕುಮಾರ್ ನನ್ನೂ ಬಂಧಿಸಿದ್ದಾರೆ.

  • ಯುವತಿ ಹಾರಿದ ಕಟ್ಟಡದ ಮೇಲೆ ದಾಳಿ ನಡೆದಿಲ್ಲ – ಸಿಸಿಬಿ ಸ್ಪಷ್ಟನೆ

    ಯುವತಿ ಹಾರಿದ ಕಟ್ಟಡದ ಮೇಲೆ ದಾಳಿ ನಡೆದಿಲ್ಲ – ಸಿಸಿಬಿ ಸ್ಪಷ್ಟನೆ

    ಬೆಂಗಳೂರು: ಸಿಸಿಬಿ ಪೊಲೀಸರ ದಾಳಿಗೆ ಹೆದರಿ ಪಬ್ ಬಿಲ್ಡಿಂಗ್‍ನಿಂದ ಯುವತಿ ಹಾರಿದ್ದಾಳೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಪಷ್ಟನೆ ನೀಡಿದ್ದು, ಯುವತಿ ಬಿದ್ದ ಡ್ಯಾನ್ಸ್ ಬಾರ್ ಮೇಲೆ ನಮ್ಮ ತಂಡ ದಾಳಿ ಮಾಡಿಲ್ಲ ಎಂದು ಸಿಸಿಬಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಜುಲೈ 25ರ ರಾತ್ರಿ ನಗರದಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು, ಎನ್.ಆರ್ ರಸ್ತೆಯ ಲವ್ವರ್ಸ್ ನೈಟ್ ಡ್ಯಾನ್ಸ್ ಬಾರ್, ಅಶೋಕ ನಗರದ ಪೇಜ್ 3 ಲೈವ್ ಬ್ಯಾಂಡ್ ಮೇಲೆ ದಾಳಿ ಮಾಡಿದ್ದರು. ಅಂದೇ ಮಹಾರಾಜ ಕಾಂಪ್ಲೆಕ್ಸ್ ನ ಬ್ರಿಗೇಡ್ ಗಾರ್ಡನ್ ಡ್ಯಾನ್ಸ್ ಬಾರ್ ನಿಂದ ಯುವತಿ ಹಾರಿದ್ದಳು.

    ಈ ವೇಳೆ ಸಿಸಿಬಿ ಪೊಲೀಸರ ದಾಳಿಗೆ ಹೆದರಿದ ಯುವತಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದಳು ಎಂಬ ಮಾಹಿತಿ ಲಭಿಸಿತ್ತು. ಆದರೆ ಸಿಸಿಬಿ ದಾಳಿಗೂ, ಯುವತಿ ಕಟ್ಟಡದಿಂದ ಬಿದ್ದಿರುವುದಕ್ಕೂ ಸಂಬಂಧವಿಲ್ಲ ಎಂದು ಅಧಿಕಾರಿಗಳು ಅಧಿಕೃತವಾಗಿ ಸ್ಪಷ್ಟನೆ ನೀಡಿದ್ದಾರೆ.

    ಇತ್ತ ಕಟ್ಟಡ 4ನೇ ಮಹಡಿಯಿಂದ ಬಿದ್ದ ಯುವತಿ ಗಂಭೀರವಾಗಿ ಗಾಯಗೊಂಡು ಕೋಮಾಗೆ ಜಾರಿದ್ದಾಳೆ. ಘಟನೆ ಬಗ್ಗೆ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

  • ನೂತನ ಆಯುಕ್ತರಿಂದ ಮಿಡ್‍ನೈಟ್ ರೌಂಡ್ಸ್ – ಮೆಜೆಸ್ಟಿಕ್‍ನಲ್ಲಿ ಲೇಡಿಸ್ ಬಾರ್ ಮೇಲೆ ದಾಳಿ

    ನೂತನ ಆಯುಕ್ತರಿಂದ ಮಿಡ್‍ನೈಟ್ ರೌಂಡ್ಸ್ – ಮೆಜೆಸ್ಟಿಕ್‍ನಲ್ಲಿ ಲೇಡಿಸ್ ಬಾರ್ ಮೇಲೆ ದಾಳಿ

    ಬೆಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೈಟ್ ರೌಂಡ್ಸ್ ಹಾಕಿದ್ದಾರೆ. ಇತ್ತ ರಾತ್ರೋರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

    ಪಬ್ ಮತ್ತು ಬಾರ್‌ಗಳಿಂದ ಶಬ್ಧ ಮಾಲಿನ್ಯ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಶಬ್ಧ ಮಾಲಿನ್ಯ ಮಾಪನದ ವಿಧಾನದಲ್ಲೇ ದೋಷ ಎಂದು ಹೈಕೋರ್ಟ್ ಕಿಡಿಕಾರಿತ್ತು. ಈ ಹಿನ್ನೆಲೆಯಲ್ಲಿ ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಚರ್ಚ್ ಸ್ಟ್ರೀಟ್ ಗೆ ದಿಢೀರ್ ಭೇಟಿ ಕೊಟ್ಟು, ಪಬ್ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ.

    ಪರವಾನಿಗೆ ಪಡೆಯದೆ ಡಿ.ಜೆ ಬಳಸುತ್ತಿದ್ದ ಪಬ್‍ಗಳಿಗೆ ನೋಟಿಸ್ ನೀಡಿದ್ದಾರೆ. ಜೂನ್ 26ರೊಳಗೆ ಹೈಕೋರ್ಟ್ ಗೆ ವರದಿ ಸಲ್ಲಿಸಲು ಗಡುವು ಇರುವ ಕಾರಣದಿಂದ ದಿಢೀರ್ ಭೇಟಿ ನೀಡಿ ಪಬ್‍ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಇತ್ತ ರಾತ್ರೋರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೆಜೆಸ್ಟಿಕ್‍ನ ಸಿಟಿ ಸೆಂಟರ್ ಬಳಿ ನಿಯಮಬಾಹೀರವಾಗಿ ನಡೆಯುತ್ತಿದ್ದ ಲೇಡಿಸ್ ಬಾರ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

    ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ಮಾಲೀಕ ಲೇಡಿಸ್ ಬಾರ್ ನಡೆಸುತ್ತಿದ್ದನು. ನಿಯಮ ಉಲ್ಲಂಘಿಸಿ ಹೆಚ್ಚಿನ ಯುವತಿಯರಿಂದ ಸಮವಸ್ತ್ರ ಧರಿಸದೇ ಸರ್ವ್ ಮಾಡಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ, ಎಸಿಪಿ ರಾಮಚಂದ್ರಯ್ಯ, ಶೋಭಾ ಕಟವಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.

    36 ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ. ಅಲ್ಲದೆ 28 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಒಂದು ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಈ ಕುರಿತು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕುಡಿದ ಮತ್ತಲ್ಲಿ ಮಹಡಿಯಿಂದ ಬಿದ್ದ ಲವರ್ಸ್

    ಕುಡಿದ ಮತ್ತಲ್ಲಿ ಮಹಡಿಯಿಂದ ಬಿದ್ದ ಲವರ್ಸ್

    ಬೆಂಗಳೂರು: ಪಬ್‍ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಜೋಡಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ನಡೆದಿದೆ.

    ಪವನ್ ಅತ್ತಾವರ್ ಹಾಗೂ ವೇದಾ ಆರ್ ಮೃತ ಜೋಡಿ. ಶುಕ್ರವಾರ ರಾತ್ರಿ ಸುಮಾರು 11:30ಕ್ಕೆ ಪವನ್ ಅತ್ತಾವರ್ ಹಾಗೂ ವೇದಾ ಆರ್ ಎಂಬವರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿರುವ ಆಶ್ ಬೀರ್ ಪಬ್‍ಗೆ ಬಂದಿದ್ದರು. ಪಬ್‍ನ ಕೊನೆಯ ರೂಫ್ ಫ್ಲೋರ್‌ನಲ್ಲಿ ಕುಳಿತು ಪಾರ್ಟಿ ಮಾಡಿದ್ದ ಪವನ್ ಹಾಗೂ ವೇದಾ ರೂಫಿನ ತುದಿಯಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಮೂರನೇ ಮಹಡಿಯಿಂದ ನೆಲಕ್ಕೆ ಬಿದ್ದಿದ್ದಾರೆ.

    ಘಟನೆಯಲ್ಲಿ ಪವನ್ ಹಾಗೂ ವೇದಾ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಇದೇ ವೇಳೆ ನೂತನ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರು ಚರ್ಚ್ ಸ್ಟ್ರೀಟ್ ರೋಡಲ್ಲಿ ನೈಟ್ ರೌಂಡ್ಸ್ ನಲ್ಲಿದ್ದರು. ಇದೇ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಹೋಗಿ ನೋಡಿದಾಗ ಇಬ್ಬರ ಪರಸ್ಥಿತಿ ಚಿಂತಾಜನಕವಾಗಿತ್ತು. ಇಬ್ಬರನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಅಷ್ಟರಲ್ಲಿ ಮೃತಪಟ್ಟಿದ್ದರು.

    ಪವನ್ ಅತ್ತಾವರ್ ರಾಷ್ಟ್ರೀಯ ಪತ್ರಿಕೆಯಲ್ಲಿ ಹಾಗೂ ವೇದಾ ಆರ್ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಬ್ ಮಾಲೀಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಪೊಲೀಸರ ಮೇಲೆ ಲೈಂಗಿಕ ಕಿರುಕುಳ ಆರೋಪ!

    ಪೊಲೀಸರ ಮೇಲೆ ಲೈಂಗಿಕ ಕಿರುಕುಳ ಆರೋಪ!

    ಬೆಂಗಳೂರು: ಯುವತಿಯೊಬ್ಬಳು ಪೊಲೀಸರ ಮೇಲೆಯೇ ಲೈಂಗಿಕ ಆರೋಪ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಕೋರಮಂಗಲ ನಿವಾಸಿ ಅಪೇಕ್ಷಾ (ಹೆಸರು ಬದಲಾಯಿಸಲಾಗಿದೆ). ಅಪೇಕ್ಷಾ ಪೊಲೀಸರ ಮೇಲೆಯೇ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾಳೆ. ಇದೇ ತಿಂಗಳ ದಿನಾಂಕ 6ರಂದು ಅಪೇಕ್ಷಾ ತನ್ನ ಸ್ನೇಹಿತೆ ಜೊತೆ ಕೋರಮಂಗಲದಲ್ಲಿರೋ ಬೋಹೋ ಪಬ್‍ಗೆ ತೆರಳಿದ್ದರು. ಪಾರ್ಟಿ ಮುಗಿಸಿ ವಾಪಸ್ ಸಹ ಆಗಿದ್ದರು.

    ಆದರೆ ಮತ್ತದೇ ಪಬ್‍ಗೆ ಬಂದ ಯುವತಿ ತನ್ನ ಮೊಬೈಲ್ ಒಳಗೆ ಇದೆ ಬಿಡಿ ಅಂತ ಕೇಳಿದ್ದಾಳೆ. ಅಷ್ಟೊತ್ತಿಗೆ ಪಬ್ ಕ್ಲೋಸ್ ಆಗಿತ್ತು. ಕೋಪಗೊಂಡ ಅಪೇಕ್ಷಾ ಏಕಾಏಕಿ ಸಿಬ್ಬಂದಿ ಜೊತೆ ಜಗಳ ಮಾಡಿ, ಹೊರಗಡೆ ಇಟ್ಟಿದ್ದ ಹೂವಿನ ಪಾಟ್‍ಗಳನ್ನ ಡ್ಯಾಮೇಜ್ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಶೆಟರ್ ನ್ನ ಮುರಿಯೋದಕ್ಕೆ ಯತ್ನಿಸಿದ್ದಾಳೆ. ಈ ವೇಳೆ ಭಯಗೊಂಡ ಕೆಲಸಗಾರರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ ಎಂದು ಆಗ್ನೇಯ ವಿಭಾಗ ಡಿಸಿಪಿ ಇಷಾಪಂತ್ ತಿಳಿಸಿದ್ದಾರೆ.

    ಸ್ಥಳಕ್ಕೆ ಬಂದ ಹೊಯ್ಸಳ ಸಿಬ್ಬಂದಿ ಯುವತಿಯನ್ನ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿದ್ದಾರೆ. ಆದರೆ ಕುಡಿದ ಮತ್ತಿನಲ್ಲಿದ್ದ ಆಕೆ ಯಾವುದೇ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡಿಲ್ಲ. ನಂತರ ಸ್ವತಃ ಪೊಲೀಸರೇ ದುಡ್ಡು ಕೊಟ್ಟು ಮನೆಗೆ ಕಳುಹಿಸಿದ್ದರು. ಆದರೆ ಯುವತಿ ಮಾತ್ರ ಪೊಲೀಸರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿ ನನ್ನ ಕಾಲನ್ನ ಮುರಿದು ಹಾಕಿದ್ದಾರೆ ಅಂತ ಫೇಸ್‍ಬುಕ್‍ನಲ್ಲಿ ರಾಷ್ಟ್ರಪತಿ ಸೇರಿದಂತೆ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ ಎಂದು ನಡೆದ ಘಟನೆ ಬಗ್ಗೆ ಡಿಸಿಪಿ ಅವರು ತಿಳಿಸಿದ್ದಾರೆ.

    ಸದ್ಯಕ್ಕೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಆಗ್ನೇಯ ವಿಭಾಗದ ಡಿಸಿಪಿ ಇಷಾಪಂತ್ ಯುವತಿಯನ್ನ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

  • ಬೆಂಗ್ಳೂರಿನ ಯುವತಿ ಜೊತೆ ರಾತ್ರಿಯಿಡಿ ಅಸಭ್ಯವಾಗಿ ವರ್ತಿಸಿದ ಸ್ನೇಹಿತ

    ಬೆಂಗ್ಳೂರಿನ ಯುವತಿ ಜೊತೆ ರಾತ್ರಿಯಿಡಿ ಅಸಭ್ಯವಾಗಿ ವರ್ತಿಸಿದ ಸ್ನೇಹಿತ

    ಬೆಂಗಳೂರು: ಕುಡಿದ ನಶೆಯಲ್ಲಿ ಇದ್ದ ಯುವತಿ ಜೊತೆ ಆಕೆಯ ಸ್ನೇಹಿತನೇ ಇಡೀ ರಾತ್ರಿ ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ.

    ಜಯಂತ್ ಅಸಭ್ಯವಾಗಿ ವರ್ತಿಸಿದ ಸ್ನೇಹಿತ. ಜಯಂತ್ ತನ್ನ ಸ್ನೇಹಿತೆ ರಮ್ಯಾ(ಹೆಸರು ಬದಲಾಯಿಸಲಾಗಿದೆ) ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ರಮ್ಯಾ ಭಾನುವಾರ ಅಶೋಕ್‍ನಗರ ಪಬ್‍ನಲ್ಲಿ ಎರಡು ಬಿಯರ್ ಕುಡಿದು ನಶೆ ಏರಿಸಿಕೊಂಡಿದ್ದಳು. ಬಳಿಕ ಕುಡಿದ ಮತ್ತಿನಲ್ಲಿ ಮನೆಗೆ ಹೋಗಲು ಆಗದೆ ಒಯೋ ರೂಂ ಬುಕ್ ಮಾಡಿದಳು.

    ಒಯೋ ರೂಂಗೆ ಬಂದು ಕಾಮುಕ ಜಯಂತ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಕಾಮುಕ ಜಯಂತ್ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕುಡಿದ ನಶೆಯಲಿದ್ದ ರಮ್ಯಾ ಜೊತೆ ಜಯಂತ್ ರಾತ್ರಿಯಿಡೀ ಕಾಲ ಕಳೆದಿದ್ದಾನೆ.

    ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • EXCLUSIVE: ರೆಡ್ಡಿ ಆಯ್ತು, ಈಗ ಮತ್ತೋರ್ವ ರಾಜಕಾರಣಿ ಕುಟುಂಬದ ಮೇಲೆ ಸಿಸಿಬಿ ಕಣ್ಣು

    EXCLUSIVE: ರೆಡ್ಡಿ ಆಯ್ತು, ಈಗ ಮತ್ತೋರ್ವ ರಾಜಕಾರಣಿ ಕುಟುಂಬದ ಮೇಲೆ ಸಿಸಿಬಿ ಕಣ್ಣು

    -ಸದ್ದು ಗದ್ದಲವಿಲ್ಲದೇ ನಡೆದಿದೆ ದಾಳಿ

    ಬೆಂಗಳೂರು: ಉಪಚುನಾವಣೆ ಬಳಿಕ ಮಾಜಿ ಸಚಿವ ಜನಾರ್ದನ ರೆಡ್ಡಿ ಅಕ್ರಮ ಹಣ ವರ್ಗಾವಣೆ ಮತ್ತು ಡೀಲ್ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಿಸಿಬಿ ರಾಜ್ಯದ ಪ್ರಭಾವಿ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಂಬದ ಮೇಲೆ ಕಣ್ಣಿಟ್ಟಿದ್ದು ಈಗಾಗಲೇ ನೋಟಿಸ್ ಕೂಡ ಜಾರಿ ಮಾಡಿದೆ.

    ಸಿದ್ದರಾಮಯ್ಯರ ಸೊಸೆ ಸ್ಮಿತಾ ರಾಕೇಶ್ ಪಾಲುದಾರಿಕೆಯ ಪಬ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸುವ ಚಿಂತನೆ ನಡೆಸಿದ್ದಾರೆ. ಲಿ ಮೆರಿಡಿಯನ್ ಹೋಟೆಲ್ ನಲ್ಲಿ ಸ್ಮಿತಾ ರಾಕೇಶ್ ‘ಶುಗರ್ ಫ್ಯಾಕ್ಟರಿ’ ಎಂಬ ಹೆಸರಿನ ಪಬ್ ನಡೆಸುತ್ತಿದ್ದಾರೆ. ಈ ಪಬ್ ನ್ನು ಕಿರುತೆರೆ ನಟ ರೋಹನ್ ಗೌಡ ಸಹಪಾಲುದಾರಿಕೆಯನ್ನು ಹೊಂದಿದ್ದಾರೆ. ಸ್ಮಿತಾ ರಾಕೇಶ್ ಒಡೆತನದ ಪಬ್ ಹಲವು ಅಬಕಾರಿ ಕಾಯ್ದೆಯನ್ನು ಉಲ್ಲಂಘನೆ ಮಾಡಿದೆ ಎಂಬ ಆರೋಪಗಳು ಕೇಳಿ ಬಂದಿವೆ.

    ಅಬಕಾರಿ ನಿಯಮ ಉಲ್ಲಂಘಿಸಿ ಬೆಳಗಿನ ಜಾವ ನಾಲ್ಕು ಗಂಟೆಯವರೆಗೂ ಪಬ್ ತೆರೆದಿರೋದಕ್ಕೆ ಡಿಸಿಪಿ ಗಿರೀಶ್ ನೇತೃತ್ವದ ಟೀಂ ರೇಡ್ ಮಾಡಿ ಅಬಕಾರಿ ಅಧಿಕಾರಿಗಳಿಗೆ ಪಬ್ ಮುಚ್ಚಿಸಿ ಅಂತಾನೂ ಸೂಚನೆ ಕೊಟ್ಟಿದ್ದಾರಂತೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತಾನಾಡಿರುವ ಅಬಕಾರಿ ವೆಸ್ಟ್ ಡಿಸಿ ಶಿವನೇಗೌಡ, ನಾವು ನೋಟಿಸ್ ನೀಡಿದ್ದೇವೆ 10 ದಿನದೊಳಗೆ ಉತ್ತರ ಬಾರದೇ ಇದ್ದರೆ ಪಬ್‍ನ್ನು ಮುಚ್ಚುತ್ತೇವೆ ಅಂತಾ ಹೇಳಿದ್ದಾರೆ.

    ಅನೇಕ ಪಬ್‍ಗಳು ಸಮಯ ಉಲ್ಲಂಘನೆ ಮಾಡಿ ತೆರೆದಿದ್ದರೂ ತಲೆಕೆಡಿಸಿಕೊಳ್ಳದ ಸಿಸಿಬಿ ಸಿದ್ದರಾಮಯ್ಯನವರ ಸೊಸೆಯ ಪಬ್ ಮೇಲೆ ದಾಳಿ ಮಾಡಿರುವ ಹಿಂದೆ ಪ್ರಭಾವಿಗಳು ಇದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ. ಅಬಕಾರಿಯಲ್ಲಿ ಸಿಎಂ ಕುಮಾರಸ್ವಾಮಿ ಆದೇಶವಿಲ್ಲದೇ ಹುಲ್ಲು ಕಡ್ಡಿಯೂ ಅಲ್ಲಾಡಲ್ಲ, ಅಂತಹದರಲ್ಲಿ ಮಾಜಿ ಸಿಎಂ ಸೊಸೆಯ ಪಬ್‍ನ್ನು ಮುಚ್ಚಿಸುವ ಹಿಂದೆ ರಾಜಕೀಯ ಹುನ್ನಾರವಿರಬಹುದೇ ಅನ್ನುವ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

    ಸಿದ್ದರಾಮಯ್ಯನವರನ್ನು ಕಂಟ್ರೋಲ್ ಮಾಡೋದಕ್ಕೆ ಸಿಸಿಬಿಯನ್ನು ಬಳಸಿಕೊಳ್ಳಲಾಗಿದೆ ಅನ್ನೋ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಜೋರಾಗಿದೆ. ಸ್ಮಿತಾ ಸೇರಿದಂತೆ ಕಿರುತೆರೆ ನಟ ಬಿಗ್ ಬಾಸ್ ಖ್ಯಾತಿಯ ರೋಹನ್ ಗೌಡ ಕೂಡ ಈ ಶುಗರ್ ಫ್ಯಾಕ್ಟರಿಯ ಪಾಲುದಾರರಾಗಿದ್ದಾರೆ. ಒಂದು ವೇಳೆ ನೋಟಿಸ್‍ಗೆ ಸ್ಮಿತಾ ರಾಕೇಶ್ ಉತ್ತರ ನೀಡದೇ ಇದ್ದಲ್ಲಿ ಪಬ್ ಮುಚ್ಚಿಸುವ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಿರುತೆರೆ ನಟ ಸುನಾಮಿ ಕಿಟ್ಟಿ ಬಂಧನ, ಬಿಡುಗಡೆ

    ಕಿರುತೆರೆ ನಟ ಸುನಾಮಿ ಕಿಟ್ಟಿ ಬಂಧನ, ಬಿಡುಗಡೆ

    ಬೆಂಗಳೂರು: ಪಬ್‍ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಸುನಾಮಿ ಕಿಟ್ಟಿಯನ್ನು ಪೊಲೀಸರು ಬಂಧಿಸಿದ್ದು, ತದನಂತರ ಬಿಡುಗಡೆ ಮಾಡಿದ್ದಾರೆ.

    ಸಿಗರೇಟ್ ವಿಚಾರವಾಗಿ ಪಂಬ್ ಸಿಬ್ಬಂದಿಯ ಮೇಲೆ ಸುನಾಮಿ ಕಿಟ್ಟಿ ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ಈಗ ಕಿಟ್ಟಿಯನ್ನು ಬಂಧಿಸಿದ್ದರು.

    ನಡೆದಿದ್ದೇನು?
    ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ಪಬ್‍ಗೆ ಹೋಗಿದ್ದರು. ಈ ವೇಳೆ ಸುನಾಮಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದಾರೆ. ಆಗ ಸಿಂಗಲ್ ಸಿಗರೇಟ್ ಸಿಗಲ್ಲ, ಪ್ಯಾಕ್ ತೆಗೆದುಕೊಳ್ಳುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವಿಚಾರವಾಗಿ ಸುನಾಮಿ ಕಿಟ್ಟಿ ಹಾಗೂ ಪಬ್ ಸಿಬ್ಬಂದಿ ನಡುವೆ ಗಲಾಟೆ ನಡೆದಿತ್ತು.

    ಅಲ್ಲದೇ ಇದರಿಂದ ಕೋಪಗೊಂಡ ಸುನಾಮಿ ಕಿಟ್ಟಿ, ಹೈಲಾಂಚ್ ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪಬ್ ಸಿಬ್ಬಂದಿ ಯಾವುದೇ ದೂರು ನೀಡಿರಲಿಲ್ಲ. ಸದ್ಯ ಪಬ್ ಸಿಬ್ಬಂದಿ, ಸುನಾಮಿ ಕಿಟ್ಟಿ ಜೊತೆ ರಾಜಿ ಸಂಧಾನ ಮಾಡಿಕೊಂಡು ಸುಮ್ಮನಾಗಿದ್ದಾರೆ ಎಂದು ತಿಳಿದುಬಂದಿತ್ತು. ಆದರೆ ಸುಬ್ರಹ್ಮಣ್ಯನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಸುನಾಮಿ ಕಿಟ್ಟಿಯನ್ನು ಇಂದು ಬಂಧಿಸಿದ್ದು, ಬಳಿಕ ಬಿಡುಗಡೆ ಮಾಡಿದ್ದಾರೆ.

    ಈ ಹಿಂದೆ ಸುನಾಮಿ ಕಿಟ್ಟಿ ಕಿಡ್ನಾಪ್ ಕೇಸ್ ನಲ್ಲಿ ಜ್ಞಾನ ಭಾರತಿ ಠಾಣೆಯಲ್ಲಿ ಅರೆಸ್ಟ್ ಆಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತೆ ಪುಂಡಾಟ ಶುರು

    ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತೆ ಪುಂಡಾಟ ಶುರು

    ಬೆಂಗಳೂರು: ಕಿರುತೆರೆ ನಟ ಸುನಾಮಿ ಕಿಟ್ಟಿ ನಗರದ ಪ್ರತಿಷ್ಠಿತ ಒರಾಯನ್ ಮಾಲ್‍ನ ಹೈ ಲಾಂಚ್ ಪಬ್‍ನಲ್ಲಿ ಮತ್ತೆ ತನ್ನ ಪುಂಡಾಟವನ್ನು ಮುಂದುವರಿಸಿ ಸುದ್ದಿಯಾಗಿದ್ದಾರೆ.

    ಸುನಾಮಿ ಕಿಟ್ಟಿ ಸಿಗರೇಟ್ ವಿಚಾರವಾಗಿ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ಪಬ್‍ಗೆ ಹೋಗಿದ್ದಾರೆ. ಈ ವೇಳೆ ಸುನಾಮಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದು, ಸಿಂಗಲ್ ಸಿಗರೇಟ್ ಸಿಗಲ್ಲ, ಪ್ಯಾಕ್ ತೆಗೆದುಕೊಳ್ಳುವಂತೆ ಸಿಬ್ಬಂದಿ ಹೇಳಿದ್ದಾರೆ.

    ಈ ವಿಚಾರವಾಗಿ ಸುನಾಮಿ ಕಿಟ್ಟಿ ಹಾಗೂ ಪಬ್ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ. ಅಲ್ಲದೇ ಇದರಿಂದ ಕೋಪಗೊಂಡು ಸುನಾಮಿ ಕಿಟ್ಟಿ ಹೈಲಾಂಚ್ ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪಬ್ ಸಿಬ್ಬಂದಿ ಯಾವುದೇ ದೂರು ನೀಡಿಲ್ಲ. ಸದ್ಯ ಪಬ್ ಸಿಬ್ಬಂದಿ, ಸುನಾಮಿ ಕಿಟ್ಟಿ ಜೊತೆ ರಾಜಿ ಸಂಧಾನ ಮಾಡಿಕೊಂಡು ಸುಮ್ಮನಾಗಿದ್ದಾರೆ ಎಂದು ತಿಳಿದು ಬಂದಿದೆ.

    ಈ ಹಿಂದೆ ಸುನಾಮಿ ಕಿಟ್ಟಿ ಕಿಡ್ನಾಪ್ ಕೇಸ್ ನಲ್ಲಿ ಜ್ಞಾನ ಭಾರತಿ ಠಾಣೆಯಲ್ಲಿ ಅರೆಸ್ಟ್ ಆಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಡರಾತ್ರಿ ಪಬ್, ಬಾರ್&ರೆಸ್ಟೋರೆಂಟ್ ಗಳ ಮೇಲೆ ಸಿಸಿಬಿ ದಾಳಿ- ಮಾಲೀಕರಿಗೆ ನೋಟಿಸ್

    ತಡರಾತ್ರಿ ಪಬ್, ಬಾರ್&ರೆಸ್ಟೋರೆಂಟ್ ಗಳ ಮೇಲೆ ಸಿಸಿಬಿ ದಾಳಿ- ಮಾಲೀಕರಿಗೆ ನೋಟಿಸ್

    ಬೆಂಗಳೂರು: ನಿನ್ನೆ ತಡ ರಾತ್ರಿ ಸಿಸಿಬಿ ಪೊಲೀಸರು ಅನಧಿಕೃತ ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ.

    ನಗರದ ಮೆಜೆಸ್ಟಿಕ್, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇಂದಿರಾನಗರದಲ್ಲಿ ದಾಳಿ ನಡೆಸಲಾಗಿದೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಸಿಸಿಬಿ ಡಿಸಿಪಿ ಗಿರೀಶ್ ನೇತೃತ್ವದಲ್ಲಿ ಒಟ್ಟು 100ಕ್ಕೂ ಹೆಚ್ಚು ಸಿಸಿಬಿ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿದ್ದರು.

    ಒಟ್ಟು 20ಕ್ಕೂ ಹೆಚ್ಚು ಕಡೆ ನಡೆದ ದಾಳಿಯಲ್ಲಿ ಕೆಲವೆಡೆ ಯುವತಿಯರನ್ನು ಅಕ್ರಮವಾಗಿ ಕೂಡಿಟ್ಟುಕೊಂಡು ಬಾರ್ ಗರ್ಲ್ಸ್ ಆಗಿ ಕೆಲಸ ಮಾಡಿಸುತ್ತಿರುವುದು ಕಂಡು ಬಂದಿದೆ. ದಾಳಿ ವೇಳೆ ಅಕ್ರಮವಾಗಿ ಪಬ್ ಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಪಬ್ ಗಳ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಶಂಕೆ ಹಿನ್ನೆಲೆಯಲ್ಲಿ ಆಯಾ ಪಬ್ ಗಳ ಸಿಬ್ಬಂದಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗ್ತಿದೆ.

    ಕೆಲ ಯುವತಿಯರನ್ನು ರಕ್ಷಿಸಿ ಅವರಿಂದಲೂ ಸಿಸಿಬಿ ಪೊಲೀಸರು ಹೇಳಿಕೆ ಪಡೆಯುತ್ತಿದ್ದಾರೆ. ಅಕ್ರಮವೆಸಗಿದ ಆಯಾ ಪಬ್ ಗಳು ಹಾಗೂ ಬಾರ್ ಆಂಡ್ ರೆಸ್ಟೋರೆಂಟ್ ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv