Tag: pubictv

  • ಅಮಿತ್ ಶಾ ಹೆಲಿಪ್ಯಾಡ್ ಗಾಗಿ ಅಮಾಯಕನ ಹೊಲ ನಾಶಗೊಳಿಸಿದ ಬಿಜೆಪಿಗರು!

    ಅಮಿತ್ ಶಾ ಹೆಲಿಪ್ಯಾಡ್ ಗಾಗಿ ಅಮಾಯಕನ ಹೊಲ ನಾಶಗೊಳಿಸಿದ ಬಿಜೆಪಿಗರು!

    ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೆಲಿಪ್ಯಾಡ್ ಗಾಗಿ ಅಮಾಯಕ ರೈತರೊಬ್ಬರ ಹೊಲ ನಾಶ ಮಾಡಿರೋ ಆರೋಪವೊಂದು ಕೇಳಿ ಬಂದಿದೆ.

    ಬಿಜೆಪಿಯವರು ಜಗದೀಶ್ ಕರಡಿ ಎಂಬ ರೈತರ ಹೊಲದ ಬದುಗಳನ್ನು ಒಡೆದು ಜಾಗ ಸಮ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ರೈತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್ ನಗರದ ನಾಗೂರು ರಸ್ತೆ ಬಳಿಯ ಹೆಲಿಪ್ಯಾಡ್ ಬಳಿ ಸರ್ವೆ ನಂಬರ್ 111 ರ ಹೊಲವನ್ನು ಬಿಜೆಪಿಯವರು ನಾಶ ಮಾಡಿದ್ದಾರೆ.

    ಹುನಗುಂದ ಶಾಸಕ ದೊಡ್ಡನಗೌಡ ಪಾಟಿಲ್, ಮಂಜು ಶೆಟ್ಟರ್, ಮಲ್ಲಯ್ಯ ಮೂಗನೂರಮಠ, ಸುಗೂರೇಶ್ ನಾಗಲೋಟಿ, ಶ್ಯಾಮಸುಂದರ ಎಂಬವರ ವಿರುದ್ಧ ರೈತ ಇಳಕಲ್ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

    ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಇಂದು ಬಾಗಲಕೋಟೆಗೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಮಂಟಪಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಾ ಅವರಿಗೆ ಶಾಸಕ ಲಕ್ಷ್ಮಣ ಸವದಿ ಹಾಗೂ ಹುನಗುಂದ ಮುಖಂಡರು ಸಾಥ್ ನಿಡಿದ್ರು. ನಂತರ ಆರ್. ವೀರಮಣಿ ಕ್ರೀಡಾಂಗಣಕ್ಕೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಉರಿಬಿಸಿಲಿನಲ್ಲಿಯೇ ಅಭ್ಯರ್ಥಿ ದೊಡ್ಡಣಗೌಡ ಜಿ ಪಾಟೀಲ್ ಪರ ಪ್ರಚಾರ ಕಾರ್ಯದಲ್ಲಿ ತೊಡಿಗಿದ್ರು.

  • ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

    ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ 407 ಟೆಂಪೊಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನವರಂಗ್ ಸಿಗ್ನಲ್ ಬಳಿ ನಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೊ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಬಸ್ ಮಲ್ಲೇಶ್ವರಂನಿಂದ ವಿಜಯನಗರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

    ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಕಾರಣ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

    ಈ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಹಿಳೆಯೊಂದಿಗೆ ಕಾಮದಾಟ ನಡೆಸಿದ್ದ ಮೌಲ್ವಿಗೆ ಜಮಾತ್ ಸದಸ್ಯರಿಂದ ಧರ್ಮದೇಟು..!

    ಮಹಿಳೆಯೊಂದಿಗೆ ಕಾಮದಾಟ ನಡೆಸಿದ್ದ ಮೌಲ್ವಿಗೆ ಜಮಾತ್ ಸದಸ್ಯರಿಂದ ಧರ್ಮದೇಟು..!

    ಉಡುಪಿ: ಮೌಲ್ವಿಯೊಬ್ಬನ ಕಾಮಪ್ರಸಂಗ ಬೀದಿಗೆ ಬಂದಿದೆ. ಊರಿಗೆಲ್ಲಾ ಬುದ್ಧಿ ಹೇಳುತ್ತಿದ್ದ ಮೌಲ್ವಿಯೊಬ್ಬ ಪರಸ್ತ್ರೀ ಸಂಗ ನಡೆಸಲು ಹೋಗಿ ಊರ ಮಂದಿಯಿಂದ ಧರ್ಮದೇಟಿಗೆ ಒಳಗಾಗಿದ್ದಾನೆ.

    ಜಮಾತ್ ಸದಸ್ಯರೇ ಸೇರಿ ಮೌಲ್ವಿ ಖತೀಬ್ ನ ಚಳಿ ಬಿಡಿಸಿದ್ದಾರೆ. ಈ ವಿಡಿಯೋ ತುಣುಕು ಇದೀಗ ವಾಟ್ಸಪ್, ಫೇಸ್ ಬುಕ್ ನಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

    ಉಡುಪಿಯ ಕಾಪು ತಾಲೂಕಿನ ಬೆಳಪು ಮಸೀದಿಯಲ್ಲಿ ಈ ಘಟನೆ ನಡೆದಿದೆ. ಕೆಲವು ತಿಂಗಳ ಹಿಂದಷ್ಟೇ ಬೆಳಪು ಮಸೀದಿಗೆ ಖತೀಬ್ ಮುಖ್ಯ ಧರ್ಮಗುರುವಾಗಿ ನೇಮಕಗೊಂಡಿದ್ದ. ನಂತರ ಈತ ವಿವಾಹಿತ ಮಹಿಳೆಯೊಬ್ಬರ ಜೊತೆ ಸಖ್ಯ ಬೆಳೆಸಿದ್ದ. ಧಾರ್ಮಿಕ ವಿಚಾರ ಹೇಳುತ್ತಲೇ ಆಕೆಯನ್ನು ಪುಸಲಾಯಿಸಿ ಮಂಗಳೂರಿನ ಲಾಡ್ಜ್ ವೊಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ದುರಾದೃಷ್ಟಕ್ಕೆ ಆ ಮಹಿಳೆಯ ಸಂಬಂಧಿಕರೊಬ್ಬರು ಇವರನ್ನು ಕಂಡಿದ್ದು ತಕ್ಷಣ ಬೆಳಪು ಮಸೀದಿಯ ಆಡಳಿತ ಮಂಡಳಿಯವ್ರಿಗೆ ತಿಳಿಸಿದ್ದಾರೆ.

    ಹೆಣ್ಣು ಮಕ್ಕಳಿಗೆ ಮೊಬೈಲ್ ಕೊಡಬಾರದು, ಹೆಣ್ಣು ಮಕ್ಕಳು ಹೇರ್ ಸ್ಟ್ರೈಟ್ನಿಂಗ್ ಮಾಡಬಾರದು, ಮೇಕಪ್ ಮಾಡಬಾರದೆಂದು ಈತ ಉಪದೇಶ ಮಾಡುತ್ತಿದ್ದ. ಬಾಯಲ್ಲಿ ಉಪದೇಶ ಮಾಡುವ ನಿಮ್ಗೆ ಪರಸ್ತ್ರೀ ಜೊತೆ ಕಾಮದಾಟ ನಡೆಸಲು ನಾಚಿಕೆಯಾಗೋದಿಲ್ವೇ ಅಂತ ಪ್ರಶ್ನಿಸಿ ಜಮಾತ್ ಸದಸ್ಯರು ಧರ್ಮದೇಟು ನೀಡಿದ್ದಾರೆ.

    ಸದ್ಯ ಬೆಳಪು ಮಸೀದಿಯಿಂದ ಮೌಲ್ವಿಯನ್ನು ಹೊರದಬ್ಬಲಾಗಿದೆ. ಈ ಕುರಿತು ಇಲ್ಲಿಯವರೆಗೆ ಯಾವುದೇ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

  • ವ್ಯಕ್ತಿಯ ರುಂಡ, ಗುಪ್ತಾಂಗ ಕತ್ತರಿಸಿ ಕೊಲೆ: ಕೇಸ್ ಬೇಧಿಸಿದ ಬುದ್ಧಿವಂತ ಶ್ವಾನ ಜಿಮ್ಮಿ

    ವ್ಯಕ್ತಿಯ ರುಂಡ, ಗುಪ್ತಾಂಗ ಕತ್ತರಿಸಿ ಕೊಲೆ: ಕೇಸ್ ಬೇಧಿಸಿದ ಬುದ್ಧಿವಂತ ಶ್ವಾನ ಜಿಮ್ಮಿ

    ಬೆಂಗಳೂರು: ಇತ್ತೀಚೆಗಷ್ಟೇ ನಗರದಲ್ಲಿ ರುಂಡ ಮತ್ತು ಗುಪ್ತಾಂಗವನ್ನು ಕತ್ತರಿಸಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ಶ್ವಾನ ಜಿಮ್ಮಿ ಪತ್ತೆಹಚ್ಚಿದ್ದು, ಇದೀಗ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

    ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಒಡಿಶಾ ಮೂಲದ ಗಾಂಧಿ ಜೆರಾಯ್ ಮತ್ತು ಮಧು ಜೆರಾಯ್ ಬಂಧಿತರು.

    ಏನಿದು ಘಟನೆ?: ಇದೇ ತಿಂಗಳ 11 ರಂದು ಎಲೆಕ್ಟ್ರಾನಿಕ್ ಸಿಟಿಯ ದೊಡ್ಡ ತೋಗೂರಿನ ನೈಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿತ್ತು. ಕೊಲೆಯ ಬಳಿಕ ದುಷ್ಕರ್ಮಿಗಳು ಮೃತ ವ್ಯಕ್ತಿಯ ರುಂಡ ಮತ್ತು ಗುಪ್ತಾಂಗವನ್ನ ಕತ್ತರಿಸಿಕೊಂಡು ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದು, ಇದೀಗ ಸ್ಥಳಕ್ಕೆ ಬಂದ ಶ್ವಾನ ಜಿಮ್ಮಿ ಸಹಾಯದಿಂದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

    ಶ್ವಾನ ಪತ್ತೆ ಹಚ್ಚಿದ್ದು ಹೇಗೆ?: ಆರೋಪಿಗಳು ಮೊದಲು ಕಬ್ಬಿಣದ ರಾಡ್ ನಿಂದ ಮಾಂಜಿಯ ತಲೆಗೆ ಹೊಡೆದಿದ್ರು. ಈ ವೇಳೆ ಹುಲ್ಲಿನೊಳಗೆ ಮರೆಯಾಗಿದ್ದ ತಲೆಯ ಚಿಪ್ಪನ್ನು ಶ್ವಾನ ಜಿಮ್ಮಿ ಪತ್ತೆ ಹಚ್ಚಿದೆ. ಮಾಂಜಿಯ ಕತ್ತು ಕೊಯ್ಯುವ ಮುನ್ನ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾರೆ ಅನ್ನೋದು ಕನ್ಫರ್ಮ್ ಆಗುತ್ತಿದ್ದಂತೆಯೇ ಜಿಮ್ಮಿ ಆರೋಪಿಗಳ ಮನೆಯ ಬೀದಿಯನ್ನ ತೋರಿಸಿತ್ತು. ಹೀಗಾಗಿ ಕೊಲೆ ಆರೋಪಿಗಳನ್ನ ಶೀಘ್ರದಲ್ಲಿ ಪತ್ತೆಹಚ್ಚಲು ಜಿಮ್ಮಿ ನೆರವಾಯ್ತು.

    ಕೊಲೆ ರಹಸ್ಯ ಬಯಲು: ಆರೋಪಿಗಳು ಬಿರಾಂಚಿ ಮಾಂಜಿ ಎಂಬವನ ಜೊತೆಯಲ್ಲಿ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ರು. ಮೂವರು ಹೊಸೂರು ರಸ್ತೆಯ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಿದ್ರು. ಆರೋಪಿಗಳ ಸಹೋದರಿಯರಿಬ್ಬರು ಸಹ ಒಡಿಶಾದಿಂದ ಬಂದು ಪಿಜಿಯಲ್ಲಿದ್ದುಕೊಂಡು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಿದ್ರು. ಕಳೆದ ಜುಲೈನಲ್ಲಿ ಆರೋಪಿಗಳ ಸಹೋದರಿ ಸಾವಿತ್ರಿ ಜೆರಾಯ್ ಹೊಟ್ಟೆ ನೋವು ಅಂತಾ ಒರಿಸ್ಸಾಗೆ ವಾಪಸ್ ಹೋಗಿದ್ದಳು. ಎರಡು ತಿಂಗಳ ನಂತರ ಆಕೆಗೆ ಹೊಟ್ಟೆ ನೋವು ಜಾಸ್ತಿಯಾದಾಗ ಆಸ್ಪತ್ರೆಗೆ ತೋರಿಸಲಾಗಿತ್ತು. ಈ ವೇಳೆ ಮದುವೆಗೂ ಮುಂಚೆಯೇ ಸಾವಿತ್ರಿ ಜೆರಾಯ್ ಗರ್ಭಿಣಿಯಾಗಿರೋದು ತಿಳಿದುಬಂತು.

     

    ಇಡೀ ಊರಿಗೆ ಸುದ್ದಿ ಗೊತ್ತಾಗಿ ಕುಟುಂಬದ ಮಾನ ಮರ್ಯಾದೆ ಹೋಗಿರುತ್ತೆ. ಇದಕ್ಕೆಲ್ಲಾ ಕಾರಣ ಜೊತೆಯಲ್ಲಿದ್ದ ಸ್ನೇಹಿತ ಬಿರಾಂಚಿ ಮಾಂಜಿ ಅಂತ ಆರೋಪಿಗಳಿಗೆ ಗೊತ್ತಾಗುತ್ತದೆ. ಹೀಗಾಗಿ ಒಡಿಶಾ ಆರೋಪಿಗಳ ಸಂಬಂಧಿ ಕಾಶೀರಾಮ್ ಬೆಂಗಳೂರಿಗೆ ಬಂದು ಬಿರಾಂಚಿ ಮಾಂಜಿಯನ್ನ ಕೊಲೆ ಮಾಡಲು ಸ್ಕೆಚ್ ಹಾಕ್ತಾರೆ. ಅದರಂತೆ ಇದೇ ತಿಂಗಳ 11ರಂದು ಎಣ್ಣೆ ಹೊಡಿಯೋಕೆ ಅಂತಾ ಮಾಂಜಿಯನ್ನ ಹೊರಗೆ ಕರೆದುಕೊಂಡು ಹೋಗ್ತಾರೆ. ಬಾರ್ ನಲ್ಲಿ ಸ್ವಲ್ಪ ಹೊತ್ತು ಕುಡಿದ ನಂತರ ಬಯಲಿನಲ್ಲಿ ಕುಡಿಯೋಣವೆಂದು ಮಾಂಜಿಯನ್ನ ಕರೆದೊಯ್ತಾರೆ. ಈ ವೇಳೆ ಮಾಂಜಿ ಕುಡಿಯೋದಕ್ಕೆ ತಲೆ ಬಗ್ಗಿಸಿದಾಗ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡ್ತಾರೆ. ನಂತರ ಹುಲ್ಲಿನ ಮೇಲೆ ಶವವನ್ನು ಎಳೆದೊಯ್ದು ಕತ್ತು ಕತ್ತರಿಸ್ತಾರೆ. ತಮ್ಮ ಅಕ್ಕನನ್ನು ಗರ್ಭಿಣಿ ಮಾಡಿ ಊರಿನಲ್ಲಿ ಮಾನ ಮರ್ಯಾದೆ ಕಳೆದರು ಅಂತಾ ಮರ್ಮಾಂಗ ಕತ್ತರಿಸಿರುವುದಾಗಿ ತನಿಖೆಯ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

    ಸದ್ಯ ಆರೋಪಿಗಳಿಂದ ಕೊಲೆಯಾದ ಮಾಂಜಿಯ ರುಂಡವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಕಾಶೀರಾಮ್ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ.

  • Big Bulletin | Sep 13th, 2017

    Big Bulletin | Sep 13th, 2017

    https://www.youtube.com/watch?v=9gmvDB7hBpY

  • ಪ್ರತಿಪಕ್ಷಗಳು ಶಾಂತ ರೀತಿಯಲ್ಲಿ ಹೋರಾಟ ಮಾಡುವುದು ತಪ್ಪೇ: ಸರ್ಕಾರಕ್ಕೆ ಬಿಎಸ್‍ವೈ ಪ್ರಶ್ನೆ

    ಪ್ರತಿಪಕ್ಷಗಳು ಶಾಂತ ರೀತಿಯಲ್ಲಿ ಹೋರಾಟ ಮಾಡುವುದು ತಪ್ಪೇ: ಸರ್ಕಾರಕ್ಕೆ ಬಿಎಸ್‍ವೈ ಪ್ರಶ್ನೆ

    ಮಂಗಳೂರು: ನಗರದಲ್ಲಿ ಸಮಾವೇಶ ಬೇಕಾದ್ರೆ ನಡೆಸಲಿ. ಆದ್ರೆ ಬೈಕ್ ರ‍್ಯಾಲಿ ನಡೆಸಬಾರದು ಅಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಬಂದೂಕುಗಳನ್ನಿಟ್ಟುಕೊಂಡು ಮಂಗಳೂರಿಗೆ ಬರ್ತಾ ಇದ್ದೇವಾ ಎಂದು ಪ್ರಶ್ನಿಸಿದ್ರು. ಮೋಟಾರ್ ಬೈಕ್ ನಲ್ಲಿ ಬಂದ್ದೇವೆ. ಯಾಕಂದ್ರೆ ರಾಜ್ಯದಲ್ಲಿ ಹಲವಾರು ಹಿಂದೂಗಳ ಕೊಲೆಯಾಗಿದೆ. ಆದ್ರೆ ಸರ್ಕಾರ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿದ್ದು, ಮನಬಂದಂತೆ ಆಡಳಿತ ನಡೆಸುತ್ತಿದೆ. ಈ ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮೋಟಾರ್ ಬೈಕಿನಲ್ಲಿ ಬರುತ್ತೇವೆ ಅಂದಾಗ ಅದನ್ನು ತಡೆಯುತ್ತಾರೆ. ಇಲ್ಲಿ ಮೆರವಣಿಗೆ ಮಾಡ್ತೀವಿ ಅಂದ್ರೆ ಸೆಕ್ಷನ್ ಹಾಕಿದ್ದೀವಿ ಅಂತಾರೆ. ಹಾಗಾದ್ರೆ ಪ್ರತಿಪಕ್ಷಗಳ ಕರ್ತವ್ಯವೇನು? ನಾವು ನಮ್ಮ ಹೋರಾಟ ಮಾಡುವುದು ಬೇಡ್ವಾ? ಕಾನೂನು ಸುವ್ಯವಸ್ಥೆಯನನ್ನು ಹೋರಾಟ ಮಾಡಿದಾಗ ಅಥವಾ ಅದನ್ನು ಅಡ್ಡಿ ಮಾಡಿದಾಗ ಈ ರೀತಿ ಸರ್ಕಾರ ವರ್ತಿಸುವುದು ಸರಿಯಲ್ಲ. ಇಲ್ಲಿ ನಾವು ಅದನ್ನು ಮಾಡಲು ಹೊರಟಿಲ್ಲವಲ್ಲ. ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಅಂದ್ರೆ ಸರ್ಕಾರ ಬದುಕಿದೆಯೋ ಸತ್ತಿದೆಯೋ? ಪೊಲೀಸ್ ಇಲಾಖೆ ಇದೆಯೋ ಇಲ್ಲವೋ? ಅಂತ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಒಂದು ಮಾತನ್ನು ಮಾನ್ಯ ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಲು ಇಚ್ಚಿಸುತ್ತೇನೆ. ಅದೇನಂದ್ರೆ ನೀವು ವಿರೋಧ ಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಬಹಳ ದಿನ ನಡೆಯಲ್ಲ. ಕಾನೂನು ಚೌಕಟ್ಟಿನಲ್ಲಿ ಯಾರನ್ನು ಬೇಕಾದ್ರೂ ಬಂಧಿಸಬಹುದು. ಯಾರ ಮೇಲೆ ಬೇಕಾದ್ರೂ ಕ್ರಮ ತೆಗೆದುಕೊಳ್ಳಬಹುದು. ಅದಕ್ಕೆ ಅಡ್ಡಿ ಮಾಡಿ ಅಂತ ನಾನು ಹೇಳುವುದಿಲ್ಲ. ಅದು ನಿಮಗೆ ಬಿಟ್ಟ ವಿಚಾರ. ನಾಡಿನ ಆರೂವರೆ ಕೋಟಿ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಅಂದ್ರು.

    ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಿತೂರಿಯಿಂದ ಈ ಘಟನಾವಳಿಗಳು ನಡೆಯುತ್ತಿವೆ. ಈ ರೀತಿಯ ಕೊಲೆಗಳು ಮುಂದುವರೆಯಬಾರದು. ಹೀಗಾಗಿ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈ ಬಿಡಬೇಕು ಅನ್ನೋದು ನಮ್ಮ ಉದ್ದೇಶ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯಾಯ್ತು ಯಾರು ಹೊಣೆ ಇದಕ್ಕೆ? ಈ ಸರ್ಕಾರದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟಿದೆ ಎನ್ನುವುದಕ್ಕೆ ಕಲಬುರ್ಗಿ ಹತ್ಯೆಯ ಬಳಿಕ ಇದೀಗ ಗೌರಿ ಹತ್ಯೆ ಪ್ರತ್ಯಕ್ಷ ಸಾಕ್ಷಿ. ಗಣಪತಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಮತ್ತೊಮ್ಮೆ ನೀಡಿದ್ದಾರೆ. ಅಲ್ಲಿ ಸುಪ್ರೀಂ ಕೋರ್ಟ್ ಕೂಡಾ ಛೀಮಾರಿ ಹಾಕಿದೆ. ನೀವು ಈ ಸಂದರ್ಭಗಳಲ್ಲಿ ಸರಿಯಾಗಿ ನಡೆದುಕೊಂಡಿಲ್ಲ. ಸಿಐಡಿ ತನಿಖೆ ಸರಿಯಾದ ರೀತಿಯಲ್ಲಿ ಆಗಿಲ್ಲ. ಅದಕ್ಕೊಸ್ಕರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರಿಸವುದಾಗಿ ಹೇಳಿದೆ ಅಂತ ಸರ್ಕಾರದ ವಿರುದ್ಧ ಗುಡುಗಿದ್ರು.

    ಭ್ರಷ್ಟ ಸಿಎಂ ಸರ್ಕಾರವನ್ನು ಹಾಗೂ ತೂಘಲಕ್ ದರ್ಬಾರನ್ನು ಕೊನೆಗೊಳಿಸುವವರೆಗೆ ನಮ್ಮ ಹೋರಾಟ ನಡೆಯುತ್ತದೆ ಅಂತ ಬಿಎಸ್ ವೈ ಎಚ್ಚರಿಸಿದರು.

    https://twitter.com/ShobhaBJP/status/905737124699193344

  • ಶೌಚಾಲಯ ನಿರ್ಮಿಸಲು ವಿರೋಧ- ತಾನೇ ಸಲಿಕೆ ಹಿಡಿದು ಗುಂಡಿ ತೆಗೆಯಲು ಮುಂದಾದ ದಾವಣಗೆರೆ ಸಿಇಓ

    ಶೌಚಾಲಯ ನಿರ್ಮಿಸಲು ವಿರೋಧ- ತಾನೇ ಸಲಿಕೆ ಹಿಡಿದು ಗುಂಡಿ ತೆಗೆಯಲು ಮುಂದಾದ ದಾವಣಗೆರೆ ಸಿಇಓ

    ದಾವಣಗೆರೆ: ಗ್ರಾಮದಲ್ಲಿ ಶೌಚಾಲಯ ಕಟ್ಟಿಕೊಳ್ಳಲು ವಿರೋಧ ವ್ಯಕ್ತಪಡಿಸುತ್ತಿದ್ದರಿಂದ ಸ್ವತಃ ಸಿಇಓ ಅವರೇ ಸಲಿಕೆ ಹಿಡಿದು ಶೌಚಾಲಯ ಗುಂಡಿ ತೆಗೆಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಅಕ್ಟೋಬರ್ 2ರ ಒಳಗೆ ಬಯಲು ಬಹಿರ್ದೆಸೆ ಜಿಲ್ಲೆಯನ್ನಾಗಿ ಮಾಡಬೇಕೆಂದು ಪಣತೊಟ್ಟಿದ್ದರಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಅಶ್ವಥಿ, ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಜನರಲ್ಲಿ ಶೌಚಾಲಯದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಅದೇ ರೀತಿ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಆದ್ರೆ ಗ್ರಾಮದ ಕುಟುಂಬವೊಂದು ಶೌಚಾಲಯ ಕಟ್ಟಲು ವಿರೋಧ ವ್ಯಕ್ತಪಡಿಸಿತ್ತು. ಈ ವೇಳೆ ಸಿಇಓ ಆ ಕುಟುಂಬವನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಇದು ಫಲಪ್ರದವಾಗದಾಗ ಸ್ವತಃ ತಾವೇ ಸಲಿಕೆ ಹಿಡಿದು ಮಣ್ಣನ್ನು ಬಗೆದು ಪಕ್ಕಕ್ಕೆ ಹಾಕಲು ಶುರು ಮಾಡಿದ್ರು.

    ಉನ್ನತ ಮಟ್ಟದ ಮಹಿಳಾ ಉದ್ಯೋಗಿಯೊಬ್ಬರು ಸಲಿಕೆ ಹಿಡಿದು ಕೆಲಸ ಪ್ರಾರಂಭಿಸಿದ್ದನ್ನು ನೋಡಿ ಸ್ಥಳೀಯರಿಗೆ ಮುಜುಗರ ಉಂಟಾಯಿತು. ಅಲ್ಲದೇ ನೆರೆದಿದ್ದವರು ಸಿಇಓ ಅವರನ್ನು ಪರಿಪರಿಯಾಗಿ ಬೇಡಿಕೊಂಡರು. ಆದ್ರೆ ಅಶ್ವಥಿ ಮಾತ್ರ ತಮ್ಮ ಕೆಲಸ ನಿಲ್ಲಿಸಿಲ್ಲ. ಇದರಿಂದ ಮುಜುಗರಗೊಂಡ ಕುಟುಂಬದ ಯಜಮಾನ ತಾವೇ ಶೌಚಾಲಯಕ್ಕೆ ಗುಂಡಿ ತೋಡುವುದಾಗಿ ಭರವಸೆ ನೀಡಿದ್ರು. ಆದ್ರೆ ಇದರಿಂದ ಅನುಮಾನಗೊಂಡ ಸಿಇಓ ಶೌಚಾಲಯ ನಿರ್ಮಾಣ ಹಂತದ ಪ್ರತಿ ಫೋಟೋಗಳನ್ನು ಕಳುಹಿಸುವಂತೆ ಹೇಳಿ ಅಲ್ಲಿಂದ ತೆರಳಿದ್ರು.

  • 2 ಹೆಣ್ಣುಮಕ್ಕಳ ಜೊತೆ ತನ್ನನ್ನು ಬೀದಿಪಾಲು ಮಾಡಿದ್ರೂ ಪತಿ ಬೇಕೆಂದು ಪತ್ನಿ ಕಣ್ಣೀರು!

    2 ಹೆಣ್ಣುಮಕ್ಕಳ ಜೊತೆ ತನ್ನನ್ನು ಬೀದಿಪಾಲು ಮಾಡಿದ್ರೂ ಪತಿ ಬೇಕೆಂದು ಪತ್ನಿ ಕಣ್ಣೀರು!

    ವಿಜಯಪುರ: ಗಂಡು ಮಗು ಆಗಲಿಲ್ಲ ಎಂದು ವ್ಯಕ್ತಿಯೊಬ್ಬ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬೀದಿ ಪಾಲು ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರದ ಭಜಂತ್ರಿ ಕಾಲೋನಿ ನಿವಾಸಿಯಾದ ಕಾವ್ಯ ಮತ್ತು ಪ್ರಭು 2011 ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಇವರಿಗೆ ಎರಡು ಮುದ್ದಾದ ಹೆಣ್ಣು ಮಕ್ಕಳು ಇದ್ದಾರೆ.

    ಆದ್ರೆ ಗಂಡು ಮಗು ಆಗದ ಕಾರಣ ಪ್ರಭು ತಾಯಿ ಮಾತು ಕೇಳಿ ಊಟದಲ್ಲಿ ವಿಷದ ಮಾತ್ರೆ ಬೆರಸಿ ಕಾವ್ಯಾಗೆ ಕೊಟ್ಟಿದ್ದಾರೆ ಎನ್ನುವ ಆರೋಪವೊಂದು ಕೇಳಿಬಂದಿದೆ. ಘಟನೆಯಿಂದ ಕಾವ್ಯ ಅದೃಷ್ಟವಶಾತ್ ಬದುಕುಳಿದಿದ್ದು, ಆಕೆಯ ಹೊಟ್ಟೆಯಲ್ಲಿ ಭ್ರೂಣ ಮಾತ್ರ ಉಳಿಯಲಿಲ್ಲವಂತೆ. ಇಷ್ಟಕ್ಕೆ ಸುಮ್ಮನಾಗದ ಪಾಪಿ ಗಂಡ ಪ್ರಭು ಕಾವ್ಯಾ ಮತ್ತು ಎರಡು ಹೆಣ್ಣು ಮಕ್ಕಳನ್ನು ಬೀದಿಪಾಲು ಮಾಡಿ ಪರಾರಿಯಾಗಿದ್ದಾನೆ.

    ಸದ್ಯ ಆಶ್ರಯ ಇಲ್ಲದೆ ಕಾವ್ಯ ಮತ್ತು ಎರಡು ಮಕ್ಕಳು ಬೀದಿ ಬೀದಿ ಅಲೆದಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಇಷ್ಟಾದ್ರು ಕಾವ್ಯ ಮಾತ್ರ ಗಂಡ ಬೇಕು, ಗಂಡ ಬೇಕು ಅಂತಾ ಅಂತ ಕಣ್ಣೀರು ಸುರಿಸುತ್ತಿದ್ದಾರೆ.

  • ದೇಶ ಕಟ್ಟಿದ್ದು, ಬೆಳೆಸಿದ್ದು ಕಾಂಗ್ರೆಸ್, ಸರ್ಕಾರದ ಅಭಿವೃದ್ಧಿಗೆ ಜನ್ರ ಮತ: ಆಂಜನೇಯ

    ದೇಶ ಕಟ್ಟಿದ್ದು, ಬೆಳೆಸಿದ್ದು ಕಾಂಗ್ರೆಸ್, ಸರ್ಕಾರದ ಅಭಿವೃದ್ಧಿಗೆ ಜನ್ರ ಮತ: ಆಂಜನೇಯ

    ಬೆಂಗಳೂರು: ವಿಧಾನಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಕಾಂಗ್ರೆಸ್ ಮೇಲೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಜನರು ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಜನ ಯಾವುದಕ್ಕೂ ಕಿವಿಗೊಡದೆ ಕಾಂಗ್ರೆಸ್‍ಗೆ ಮತಹಾಕಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಗೆ ಮತದಾರರು ಮಣೆ ಹಾಕಿದ್ದಾರೆ ಅಂತಾ ಸಚಿವ ಆಂಜನೇಯ ಹೇಳಿದ್ದಾರೆ.

    ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಂಜನಗೂಡು, ಗುಂಡ್ಲುಪೇಟೆ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳನ್ನ ಜನರು ಒಪ್ಪಿ ಕಾಂಗ್ರೆಸ್ ಗೆಲ್ಲಿಸಿದ್ದಾರೆ. ದೇಶ ಕಟ್ಟಿದ್ದು, ಬೆಳೆಸಿದ್ದು ಕಾಂಗ್ರೆಸ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಈ ಫಲಿತಾಂಶದಿಂದ ಇದನ್ನ ಅರ್ಥ ಮಾಡಿಕೊಳ್ಳಬೇಕು ಅಂತಾ ಹೇಳಿದ್ರು.

    ಸಂಭ್ರಮಾಚರಣೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಿಎಂ ಮನೆ ಮುಂದೆ ಸಿಹಿ ಹಂಚಿ ಸಂಭ್ರಮಿಸಿದ್ರು. ಅಲ್ಲದೇ ಕಾವೇರಿ ನಿವಾಸದ ಮುಂದೆ ಪಟಾಕಿ ಸಿಡಿಸಿ ಗೆಲುವನ್ನು ಆಚರಿಸಲು ಮುಂದಾದಗ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಹೀಗಾಗಿ ಘೋಷಣೆ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದ್ರು.

  • ಸುಡುಬಿಸಿಲಿನಿಂದ ಪಾರಾಗಲು ರಾಯಚೂರಿನ ವೈದ್ಯಾಧಿಕಾರಿ ಮಾಡಿರೋ ಐಡಿಯಾ ಇದು

    ಸುಡುಬಿಸಿಲಿನಿಂದ ಪಾರಾಗಲು ರಾಯಚೂರಿನ ವೈದ್ಯಾಧಿಕಾರಿ ಮಾಡಿರೋ ಐಡಿಯಾ ಇದು

    ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನ ನಾನಾ ದಾರಿಗಳನ್ನ ಹುಡುಕಿಕೊಳ್ಳುತ್ತಿದ್ದಾರೆ. ತಲೆಗೆ ಟೋಪಿ ಹಾಕಿಕೊಳ್ಳುವ ಜೊತೆಗೆ ತಮ್ಮ ವಾಹನಗಳಿಗೂ ಟೋಪಿ ಹಾಕಿ ಸವಾರಿ ಮಾಡುತ್ತಿದ್ದಾರೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಿಸುತ್ತಿದ್ದಾರೆ.

    ರಾಯಚೂರು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ರೂಪ ತಮ್ಮ ಮೊಪೆಡ್‍ಗೆ ಕ್ಯಾಪ್ ಹಾಕಿ ಗಾಡಿ ಓಡಿಸ್ತಿದ್ದಾರೆ. ಜವಾಹರ್ ನಗರದ ನಿವಾಸಿಯಾಗಿರುವ ಡಾ.ರೂಪ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ತಮ್ಮ ಮೊಪೆಡ್‍ಗೆ ಸಮ್ಮರ್ ಪ್ರೂಫ್ ಕ್ಯಾಪ್ ಹಾಕಿಸಿದ್ದಾರೆ. ಇದರಿಂದ ಬಿಸಿಲಿನ ಝಳದಿಂದ ರಕ್ಷಣೆ ಸಿಗುತ್ತಿದೆ. ಜೊತೆಗೆ ಎರಡು ಕಡೆ ತೆರೆದಿರುವುದರಿಂದ ಗಾಳಿಯೂ ಸಿಗುತ್ತಿದೆ. ಸನ್ ಸ್ಟ್ರೋಕ್, ಸ್ಕಿನ್ ಟ್ಯಾನಿಂಗ್, ಡಿಹೈಡ್ರೇಷನ್, ಗ್ಲೂಕೋಸ್ ಕೊರತೆ ಹಾಗೂ ವಾಹನಕ್ಕೂ ಬಿಸಿಲು ತಟ್ಟದಂತೆ ತಡೆಯಲು ರೂಪಾ ಈ ಮಾರ್ಗವನ್ನ ಕಂಡುಕೊಂಡಿದ್ದು, ಇತರರಲ್ಲೂ ಜಾಗೃತಿ ಮೂಡಿಸುತ್ತಿದ್ದಾರೆ. ಈ ಕ್ಯಾಪ್‍ಗಾಗಿ ಅವರು ಕೇವಲ 1700 ರೂಪಾಯಿ ಖರ್ಚು ಮಾಡಿದ್ದಾರಂತೆ.

    ರಾಯಚೂರಿನಲ್ಲಿ ತಾಪಮಾನ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಸಂಜೆಯಾದ್ರೂ ಬಿಸಿಗಾಳಿ ಬೀಸುತ್ತಿದೆ. ಬೆಳಿಗ್ಗೆ 8 ಗಂಟೆಗೆ ಬಿಸಿಲಿನ ಝಳ ಆರಂಭವಾಗುತ್ತಿದೆ. ಹೀಗಾಗಿ ಮಣ್ಣಿನ ಗಡಿಗೆ, ಕಬ್ಬಿನ ಹಾಲು, ತೆಂಗಿನ ಎಳೆನೀರಿನ ವ್ಯಾಪಾರ ಜೋರಾಗಿದೆ. ಜನ ಬಿಸಿಲಿನಿಂದ ಉಂಟಾಗುವ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆಲವರು ಕೊಡೆಗಳನ್ನ ಹಿಡಿದು ಮನೆಯಿಂದ ಹೊರಬಂದ್ರೆ ಬಹುತೇಕರು ಟೋಪಿ ಹಾಕಿಕೊಂಡು ಹೊರಬರುತ್ತಿದ್ದಾರೆ.

    ಒಟ್ಟಿನಲ್ಲಿ, ಕನಿಷ್ಠವೆಂದರೂ 6 ತಿಂಗಳು ಬೇಸಿಗೆ ಕಾಲದ ವಾತಾರವಣವನ್ನೇ ಹೊಂದಿರುವ ರಾಯಚೂರು ಜನ ಈ ಬಾರಿಯ ಬಿರು ಬಿಸಿಲಿಗೆ ತತ್ತರಿಸಿದ್ದಾರೆ. ಗಿಡ ಮರಗಳು ವಿರಳವಾಗಿರುವುದು ಸಹ ಇಲ್ಲಿನ ತಾಪಮಾನದ ಏರಿಕೆಗೆ ಕಾರಣವಾಗಿದೆ. ಅಂತೂ-ಇಂತೂ ಯಾವಾಗ ಬೇಸಿಗೆ ಮುಗಿಯುತ್ತೋ ಅಂತ ಜನ ಕಾಯುತ್ತಿದ್ದಾರೆ.