Tag: Public Prosecutor

  • 16ರ ಹುಡುಗಿ ಮೇಲೆ ಅತ್ಯಾಚಾರ- ಕಾಂಡೋಮ್ ಬಳಸಿದ್ದಕ್ಕಾಗಿ ಜಾಮೀನು ಕೊಟ್ಟ ಹೈಕೋರ್ಟ್

    16ರ ಹುಡುಗಿ ಮೇಲೆ ಅತ್ಯಾಚಾರ- ಕಾಂಡೋಮ್ ಬಳಸಿದ್ದಕ್ಕಾಗಿ ಜಾಮೀನು ಕೊಟ್ಟ ಹೈಕೋರ್ಟ್

    ಮುಂಬೈ: 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ ಪೊಲೀಸರು ಬಂಧನದಲ್ಲಿರಿಸಿದ್ದ ಆರೋಪಿಯ ಜಾಮೀನು ಅರ್ಜಿಯನ್ನು ಏಕ-ನ್ಯಾಯಾಧೀಶ ಪೀಠದ ಸಿ.ವಿ.ಭದಂಗ್ ವಿಚಾರಣೆ ನಡೆಸಿ, ಜಾಮೀನು ನೀಡಲು ಮುಂದಾಗಿದ್ದಾರೆ. ಆರೋಪಿಯು 2 ವರ್ಷಕ್ಕಿಂತ ಹೆಚ್ಚು ಕಾಲ ಪೊಲೀಸ್ ಬಂಧನದಲ್ಲಿದ್ದಾನೆ ಎಂಬುದನ್ನು ಪರಿಗಣಿಸಿ 25,000 ರೂ. ಶ್ಯೂರಿಟಿಯೊಂದಿಗೆ ಅವರಿಗೆ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    STOP RAPE

    ಸಂತ್ರಸ್ತೆಗೆ 16 ವರ್ಷ 6 ತಿಂಗಳ ವಯಸ್ಸಾಗಿದ್ದರಿಂದ ಮತ್ತು ಆಕೆಗೆ ಕ್ರಿಯೆಯ ಪರಿಣಾಮಗಳ ಬಗ್ಗೆ ಅರಿವಿದೆ ಎಂದು ಗಮನಿಸುವುದು ಅವಶ್ಯವಾಗಿದೆ. ಇದರಲ್ಲಿ ಯಾವುದೇ ಬಲವಂತದ ಅಂಶಗಳಿಲ್ಲ ಎಂದು ಸೂಚಿಸುವ ಸಂದರ್ಭಗಳಿವೆ. ಅಲ್ಲದೆ ವೈದ್ಯಕೀಯ ವರದಿಯ 15 (F)ರ ಪ್ರಕಾರ ಅರ್ಜಿದಾರರು ಸಂಭೋಗದ ವೇಳೆ ರಕ್ಷಣೆ (ಕಾಂಡೋಮ್) ಸಹ ಬಳಸಿದ್ದಾರೆಂಬುದನ್ನು ಎಂಬಿತ್ಯಾದಿ ಅಂಶಗಳನ್ನು ನ್ಯಾಯಾಲಯ ಗುರುತಿಸಿದೆ.

    ಸಂತ್ರಸ್ತೆ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಎ.ಆರ್.ಕಪಾಡ್ನಿಸ್ ಪ್ರಕಾರ, ಸಂತ್ರಸ್ತೆಯ ತಂದೆ ಎಫ್‌ಐಆರ್ ದಾಖಲಿಸಿದಾಗ ಆಕೆಗೆ 16 ವರ್ಷ 6 ತಿಂಗಳ ವಯಸ್ಸು. ಆರೋಪಿಯು ಆಕೆಗೆ ಮುಂಚೆಯೇ ಪರಿಚಯವಿದ್ದರಿಂದ 2019ರ ಮೇ ತಿಂಗಳಲ್ಲಿ ಹುಡುಗಿಯನ್ನು ತನ್ನ ಮನೆಯ ಹಿಂದೆ ಕರೆದೊಯ್ದಿದ್ದಾನೆ. ಆಕೆಯನ್ನು ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ವಾದಿಸಿದ್ದರು. ಆಕೆಯನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪ್ರಾಪ್ತೆ ಎಂದೂ ಉಲ್ಲೇಖಿಸಿದ್ದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

    crime

    ಇದು ಕೆಲವು ತಿಂಗಳ ಕಾಲ ಮುಂದುವರಿಯಿತು. ಅಂತಿಮವಾಗಿ ಸಂತ್ರಸ್ತೆಯ ತಂದೆ ಸಂಬಂಧದ ಬಗ್ಗೆ ತಿಳಿದುಕೊಂಡು ಆರೋಪಿಯ ವಿರುದ್ಧ FIR ದಾಖಲಿಸಿದರು. ಆರೋಪಿ ಪರ ವಾದ ಮಂಡಿಸಿದ ವಕೀಲ ಪರಸ್ ಯಾದವ್, ಸಂತ್ರಸ್ತೆ ಅಪ್ರಾಪ್ತ ವಯಸ್ಸಿನವಳಾಗಿದ್ದರೂ ಆಕೆಗೆ ವಯಸ್ಸಾಗಿರುವುದರಿಂದ ಕೃತ್ಯದ ಸ್ವರೂಪ ಮತ್ತು ಪರಿಣಾಮಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾಳೆ. ಈ ಸಂಬಂಧವು ಒಮ್ಮತದಿಂದ ಕೂಡಿದೆ ಎಂದು ಸೂಚಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

    ವಾದ – ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಯ ಪರ ವಾದವನ್ನು ಸ್ವೀಕರಿಸಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

  • ಕೋರ್ಟ್ ಆವರಣದಲ್ಲೇ ಲಂಚಾವತಾರ – 5 ಸಾವಿರಕ್ಕೆ ಕೈವೊಡ್ಡಿದ ಪಬ್ಲಿಕ್ ಪ್ರಾಸಿಕ್ಯೂಟರ್

    ಕೋರ್ಟ್ ಆವರಣದಲ್ಲೇ ಲಂಚಾವತಾರ – 5 ಸಾವಿರಕ್ಕೆ ಕೈವೊಡ್ಡಿದ ಪಬ್ಲಿಕ್ ಪ್ರಾಸಿಕ್ಯೂಟರ್

    ಯಾದಗಿರಿ: ನ್ಯಾಯ ದೊರಕಿಸಬೇಕಿದ್ದ ಸರ್ಕಾರಿ ವಕೀಲರೊಬ್ಬರು ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಘಟನೆ ಯಾದಗಿರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದಿದೆ.

    ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಹಿರಿಯ ವಕೀಲ ಗೋಪಾಲರಾವ್ ಅವರು ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ನ್ಯಾಯಾಲಯದ ಆವರಣದಲ್ಲಿರುವ ತನ್ನ ಕಚೇರಿಯಲ್ಲಿ, ಕಕ್ಷಿದಾರರಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಅಬ್ಬೆ ತುಮಕೂರಿನ ನಿವಾಸಿ ವಿಶಾಲಕ್ಷಿ ಅವರಿಗೆ ಸಂಬಂಧಿಸಿದ ಪ್ರಕರಣ ಸಂಬಂಧ ವಾದಿಸಲು ಜಿಲ್ಲಾ ನ್ಯಾಯಾಲಯ ಗೋಪಾಲರಾವ್ ಅವರನ್ನು ನೇಮಿಸಿತ್ತು. ಸರ್ಕಾರಿ ವಕೀಲರು ಕಕ್ಷಿದಾರರಿಂದ ಯಾವುದೇ ಹಣ ತೆಗೆದುಕೊಳ್ಳಬಾರದೆಂಬ ನಿಯಮವಿದೆ. ಹೀಗಿದ್ದರೂ ವಿಶಾಲಕ್ಷಿ ಅವರ ಪ್ರಕರಣದಲ್ಲಿ ವಾದ ಮಂಡನೆ ಮಾಡಲು ವಕೀಲ ಗೋಪಾಲರಾವ್ 50 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು.

    50 ಸಾವಿರ ರೂ. ನೀಡಲು ಇಲ್ಲದ ಕಾರಣ 10 ಸಾವಿರ ರೂ. ನೀಡಲು ವಿಶಾಲಕ್ಷಿ ಒಪ್ಪಿದ್ದರು. ವಕೀಲರಿಗೆ ನೀಡಲು ಹಣ ಇಲ್ಲದ ಸಂದರ್ಭದಲ್ಲಿ ವಿಶಾಲಕ್ಷಿ ಅವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋಪಾಲರಾವ್ ಈಗಾಗಲೇ ಮುಂಗಡವಾಗಿ 5 ಸಾವಿರ ರೂಪಾಯಿ ಪಡೆದಿದ್ದು, ಇಂದು ಬಾಕಿ ಹಣ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದನ್ನು ಓದಿ : ನ್ಯಾಯಾಲಯ ಆವರಣದಲ್ಲೇ ಭ್ರಷ್ಟಾಚಾರ – ಎಸಿಬಿಗೆ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್

  • ನ್ಯಾಯಾಲಯ ಆವರಣದಲ್ಲೇ ಭ್ರಷ್ಟಾಚಾರ – ಎಸಿಬಿಗೆ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್

    ನ್ಯಾಯಾಲಯ ಆವರಣದಲ್ಲೇ ಭ್ರಷ್ಟಾಚಾರ – ಎಸಿಬಿಗೆ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್

    ತುಮಕೂರು: ನ್ಯಾಯ ಕೊಡಿಸಬೇಕಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಲಂಚ ಪಡೆಯುತ್ತಿದ್ದಾಗ ಕೋರ್ಟ್ ಆವರಣದಲ್ಲೇ ಎಸಿಬಿ ಬಲೆಗೆ ಬಿದ್ದಿದ್ದಾರೆ.

    ಜಿಲ್ಲೆ ತಿಪಟೂರು ನ್ಯಾಯಾಲಯ ಆವರಣದಲ್ಲಿ ಕೆಇಬಿ ಎಂಜಿನಿಯರ್ ಗುರುಬಸವಸ್ವಾಮಿ ಎಂಬುವರಿಂದ 20 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಪಿಪಿ ಪೂರ್ಣಿಮಾ ಅವರು ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

    ಏನಿದು ಪ್ರಕರಣ?
    2015ರಲ್ಲಿ ಗಾಳಿಮಳೆಗೆ ಬಿದಿದ್ದ ಮರ ಮತ್ತು ವಿದ್ಯುತ್ ಕಂಬದ ತೆರವು ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಹಾಗೂ ಬೆಸ್ಕಾಂ ನಡೆಸಿತ್ತು. ಆಗ ವೃದ್ಧೆಯೊಬ್ಬರು ಗಾಯಗೊಂಡಿದ್ದರು. ಬಳಿಕ ವೃದ್ಧೆ ಸಂಬಂಧಿಕರು ಎರಡೂ ಇಲಾಖೆ ವಿರುದ್ಧ ತಿಪಟೂರು ನಗರ ಠಾಣೆಯಲ್ಲಿ ದೂರು ಕೊಟ್ಟಿದ್ದರು.

    ಈ ಪ್ರಕರಣದ ಸಂಬಂಧ 40 ಸಾವಿರ ರೂ. ಗೆ ಪೂರ್ಣಿಮಾ ಬೇಡಿಕೆ ಇಟ್ಟಿದ್ದರು. ಅದರಂತೆ 20 ಸಾವಿರ ರೂ.ಗಳನ್ನು ಅಕೌಂಟ್ ವರ್ಗಾವಣೆ ಮಾಡಿಸಿಕೊಂಡಿದ್ದರು. ಉಳಿದ 20 ಸಾವಿರ ರೂ.ಗಳನ್ನು ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ 3 ತಿಂಗಳಿಂದ ತಿಪಟೂರು ಕೋರ್ಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೂರ್ಣಿಮಾ ಅವರು ಈ ಹಿಂದೆ ಚಿಕ್ಕಮಗಳೂರು, ಕಡೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲಿ ಕೂಡಾ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.

    ಮೂಲತಃ ಪೂರ್ಣಿಮಾ ಅವರು ಭದ್ರಾವತಿಯ ಮೂಲವರಾಗಿದ್ದು, ಪ್ರಕರಣದ ಸಂಬಂಧ ಅವರನ್ನು ಎಪಿಪಿ ಕಚೇರಿಯಲ್ಲೇ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಲಂಚ ಸ್ವೀಕರಿಸುವ ವೇಳೆ ಶರಣಪ್ಪ ಎಂಬ ಡಿ ಗ್ರೂಪ್ ನೌಕರನನ್ನು ಮಧ್ಯವರ್ತಿಯಾಗಿ ಬಳಸಿಕೊಂಡಿದ್ದರು ಎಂಬ ಮಾಹಿತಿ ಲಭಿಸಿದೆ.