Tag: Public space

  • ಯುವ ಬ್ರಿಗೇಡ್ ಬಳ್ಳಾರಿಯಿಂದ ಸ್ವಚ್ಛತಾ ಕಾರ್ಯ – ಜನರ ಮೆಚ್ಚುಗೆಗೆ ಪಾತ್ರವಾದ ಯುವಕರ ಕೆಲಸ

    ಯುವ ಬ್ರಿಗೇಡ್ ಬಳ್ಳಾರಿಯಿಂದ ಸ್ವಚ್ಛತಾ ಕಾರ್ಯ – ಜನರ ಮೆಚ್ಚುಗೆಗೆ ಪಾತ್ರವಾದ ಯುವಕರ ಕೆಲಸ

    ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಭಿತ್ತಿ ಚಿತ್ರಗಳು ಜಾಹೀರಾತು ಫಲಕಗಳದ್ದೇ ಕಾರುಬಾರು. ಈ ಭಿತ್ತಿ ಚಿತ್ರಗಳನ್ನು ಎಲ್ಲಂದರಲ್ಲಿ ಅಂಟಿಸಿ ನಗರದ ಸೌಂದರ್ಯ ಹಾಳಾಗುತಿತ್ತು.

    ಹೀಗಾಗಿ ಬಳ್ಳಾರಿಯ ಯುವ ಬ್ರಿಗೇಡ್ ಕಾರ್ಯಕರ್ತರ ವತಿಯಿಂದ ಸ್ವಚ್ಛತಾ ಕಾರ್ಯ ಹಮ್ಮಿಕೊಂಡು, ಬಳ್ಳಾರಿ ನಗರದ ತಾಲೂಕು ಕಚೇರಿ ಬಸ್ ನಿಲ್ದಾಣದ ಹೀಗೆ ಅನೇಕ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಮಾಡಿದ್ದಾರೆ. ಬ್ರಿಗೇಡ್ ಯುವಕರ ತಂಡ ಸ್ವಂತ ಖರ್ಚಿನಲ್ಲಿ ಈ ಕಲಸ ಮಾಡಿದ್ದು, ಸಾರ್ವಜನಿಕ ಬಸ್ ನಿಲ್ದಾಣಕ್ಕೆ ಪೈಂಟ್ ಮಾಡಿದ್ದಾರೆ.

    ಪ್ರತಿ ರವಿವಾರ ಈ ಯುವಕರ ಪಡೆ ಒಂದೊಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಮಾಡುತ್ತಿದ್ದಾರೆ. ಯುವ ಬ್ರಿಗೇಡ್ ನಲ್ಲಿ ಬಹುತೇಕವಾಗಿ ವಿದ್ಯಾರ್ಥಿಗಳಿದ್ದು ಭಾನುವಾರದಲ್ಲಿ ಸಿನಿಮಾ ನೋಡಿ ಕಾಲಹರಣ ಮಾಡದೇ ನಗರವನ್ನು ಕ್ಲೀನ್ ಮಾಡುವುದನ್ನು ಹವ್ಯಾಸ ಮಾಡಿಕೊಂಡಿದ್ದಾರೆ. ಯುವಕರು ಈ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸಾರ್ವಜನಿಕ ಸ್ಥಳದಲ್ಲಿ ಮೂತ್ರ- ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಅಧಿಕಾರಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ- ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಅಧಿಕಾರಿ

    ಭೋಪಾಲ್: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಇಬ್ಬರು ವ್ಯಕ್ತಿಗಳಿಗೆ ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಬಸ್ಕಿ ಹೊಡೆಸಿದ್ದಾರೆ.

    ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಅಧಿಕಾರಿ ಬಸ್ಕಿ ಹೊಡೆಸಿದ್ದಾರೆ. ಸಿಕ್ಕಿಬಿದ್ದ ತಕ್ಷಣ ಅಧಿಕಾರಿ ದಂಡ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಇಬ್ಬರೂ ತಮ್ಮ ಬಳಿ ಹಣವಿಲ್ಲ ಎಂದು ಹೇಳಿದ್ದಾರೆ. ಆಗ ಅಧಿಕಾರಿ ಹಾಗೂ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ.

    ಅಧಿಕಾರಿಯ ಮುಂದೆ ಇಬ್ಬರೂ ಬಸ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ರವಿ ಎಂದು ಗುರುತಿಸಲಾಗಿದೆ. ಆಟೋ ರೈಲ್ವೇ ನಿಲ್ದಾಣದಿಂದ ಬರುತ್ತಿತ್ತು.

    ಐಎಂಸಿ ಮುಖ್ಯ ನೈರ್ಮಲ್ಯ ಅಧಿಕಾರಿ(ವಲಯ-1) ಶೈಲೇಂದ್ರ ಪಾಲ್ ಅವರ ಪ್ರಕಾರ, ಆಟೋ ಪ್ರಯಾಣಿಕ ರವಿ ಹಾಗೂ ಚಾಲಕ ಇಬ್ಬರೂ ಮಾರಿಮಾತಾ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದನ್ನು ಕಂಡು ಅಧಿಕಾರಿ ಇಬ್ಬರನ್ನೂ ಪ್ರಶ್ನಿಸಿದ್ದಾರೆ.

    ಅಧಿಕಾರಿ ಇಬ್ಬರಿಗೆ ತಲಾ 250 ರೂ. ದಂಡ ಪಾವತಿಸುವಂತೆ ಕೇಳಿದ್ದಾರೆ. ಆಟೋ ಚಾಲಕ ತನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಾನೆ. ಪ್ರಯಾಣಿಕ ರವಿ ತನ್ನ ಬಳಿ ಕೇವಲ 100 ರೂ. ಇರುವುದಾಗಿ ಹೇಳಿದ್ದಾನೆ. ಆಗ ಅಧಿಕಾರಿ 100 ರೂ. ಪಡೆದು, ಇಬ್ಬರೂ ಸಹ ಬಸ್ಕಿ ಹೊಡೆಯುವಂತೆ ಸೂಚಿಸಿದ್ದಾರೆ. ಈ ರೀತಿ ಶಿಕ್ಷೆ ನೀಡಿದರೆ ಇಬ್ಬರೂ ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಶೈಲೇಂದ್ರ ಪಾಲ್ ಹೇಳಿದ್ದಾರೆ.