Tag: Public T

  • ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಬೆಂಕಿ ಹಚ್ಚಿಕೊಂಡ ಮಹಿಳೆ!

    ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಬೆಂಕಿ ಹಚ್ಚಿಕೊಂಡ ಮಹಿಳೆ!

    ಚೆನ್ನೈ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.

    ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ರಜನಿ ಫ್ಯಾನ್ಸ್ ಪ್ರತಿಭಟನೆ – ನೋವುಂಟು ಮಾಡ್ಬೇಡಿ ಅಂದ್ರು ತಲೈವಾ

    ರಜನಿ ಫ್ಯಾನ್ಸ್ ಪ್ರತಿಭಟನೆ – ನೋವುಂಟು ಮಾಡ್ಬೇಡಿ ಅಂದ್ರು ತಲೈವಾ

    ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡಿನ ರಾಜಕೀಯಕ್ಕೆ ಪ್ರವೇಶಿಸದಿರುವ ನಿರ್ಧಾರ ವಿಚಾರವಾಗಿ ಸೋಮವಾರ ಚೆನ್ನೈನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ಮಾಡಿ ನೋವುಂಟು ಮಾಡಬೇಡಿ ಎಂದು ತಲೈವಾ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ರಜನಿಕಾಂತ್, ನಾನು ರಾಜಕೀಯಕ್ಕೆ ಏಕೆ ಪ್ರವೇಶಿಸುತ್ತಿಲ್ಲ ಎಂಬುವುದಕ್ಕೆ ಕಾರಣವನ್ನು ಈಗಾಗಲೇ ತಿಳಿಸಿದ್ದೇನೆ. ಆದರೂ ರಜನಿ ಮಕ್ಕಳ್ ಮಂದ್ರಂ ಅನುಮತಿ ಪಡೆಯದೇ ಚೆನ್ನೈನಲ್ಲಿ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸದ ಕೆಲವು ಅಭಿಮಾನಿಗಳನ್ನು ನಾನು ಪ್ರಶಂಸಿಸುತ್ತೇನೆ. ನನ್ನ ನಿರ್ಧಾರದ ಬಗ್ಗೆ ದಯವಿಟ್ಟು ನನಗೆ ನೋವುಂಟು ಮಾಡುವಂತಹ ವಿಷಯ(ಪ್ರತಿಭಟನೆ)ಗಳಲ್ಲಿ ಪಾಲ್ಗೊಳ್ಳದಂತೆ ಪ್ರತಿಯೊಬ್ಬರಿಗೂ ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ಜನವರಿ 5ರಂದು ಮಕ್ಕಳ್ ಮಂದ್ರಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ರಾಜಕೀಯದಿಂದ ನಿರ್ಗಮಿಸುತ್ತಿರುವ ರಜನಿಕಾಂತ್ ಅವರ ನಿರ್ಧಾರವನ್ನು ವಿರೋಧಿಸಿ ಜನವರಿ 10ರಂದು ಚೆನ್ನೈನಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿಕೆ ನೀಡಿದ್ದರು. ರಜನಿಕಾಂತ್ ನಿರ್ಧಾರ ವಿಚಾರ ಕೆಲವು ಅಭಿಮಾನಿಗಳಿಗೆ ನಿರಾಶೆ ಉಂಟಾಗಿ ರಜನಿಕಾಂತ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

    ಈ ಕುರಿತಂತೆ ಉತ್ತರ ಚೆನ್ನೈ ಜಿಲ್ಲಾಕಾರ್ಯದರ್ಶಿ ನಿಜವಾದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ. ಹಾಗೇನಾದರೂ ಭಾಗವಹಿಸದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು. ದಕ್ಷಿಣ ಚೆನ್ನೈ ಜಿಲ್ಲಾಕಾರ್ಯದರ್ಶಿ ರವಿಚಂದ್ರನ್ ರಜನಿಯವರು ಅನಾರೋಗ್ಯದ ಕಾರಣದಿಂದ ರಾಜಕೀಯದಿಂದ ದೂರಸರಿದಿದ್ದಾರೆ ಎಂದು ತಿಳಿಸಿದರು.

    ಕಳೆದ ತಿಂಗಳು ರಜನಿಕಾಂತ್ ತಮ್ಮ ಆರೋಗ್ಯದ ದೃಷ್ಟಿಯಿಂದ ರಾಜಕೀಯಕ್ಕೆ ಪ್ರವೇಶಿಸುತ್ತಿಲ್ಲ ಎಂದು ತಿಳಿಸಿದ್ದರು. ಅಲ್ಲದೆ ಇತ್ತೀಚೆಗೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಿದ್ದು ದೇವರು ನನಗೆ ನೀಡಿದ ಎಚ್ಚರಿಕೆ ಗಂಟೆ ಎಂದು ಹೇಳಿದರು.

  • ಉಡುಪಿಯಲ್ಲಿ ಓರ್ವ ಶಿಕ್ಷಕಿ, ಅಡುಗೆ ಸಿಬ್ಬಂದಿಗೆ ಕೊರೊನಾ- ಡಿಡಿಪಿಐ ಸ್ಪಷ್ಟನೆ

    ಉಡುಪಿಯಲ್ಲಿ ಓರ್ವ ಶಿಕ್ಷಕಿ, ಅಡುಗೆ ಸಿಬ್ಬಂದಿಗೆ ಕೊರೊನಾ- ಡಿಡಿಪಿಐ ಸ್ಪಷ್ಟನೆ

    ಉಡುಪಿ: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ತರಗತಿಗಳು ಆರಂಭಗೊಂಡಿವೆ. ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ವಿದ್ಯಾಗಮದ ಮೂಲಕ ಪಾಠಗಳು ನಡೆದಿವೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನ 2 ಶಾಲೆಗಳಲ್ಲಿ ಶಿಕ್ಷಕಿ ಹಾಗೂ ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಸೃಷ್ಟಿಸಿದೆ. ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆ ಶಾಲೆ ತೆರೆಯುವುದಿಲ್ಲ ಎಂದು ಡಿಡಿಪಿಐ ಎಚ್.ಎನ್.ನಾಗೂರ ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಬ್ರಿ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕೇತರ ಸಿಬ್ಬಂದಿಗೆ ಪಾಸಿಟಿವ್ ಬಂದಿದೆ. ಸಿಬ್ಬಂದಿಯ ಪ್ರಥಮ ಸಂಪರ್ಕದಲ್ಲಿ ಏಳು ಶಿಕ್ಷಕರಿದ್ದಾರೆ. ಹೀಗಾಗಿ ಶಾಲೆಗೆ ಮಕ್ಕಳನ್ನು ಇಂದು ಆಹ್ವಾನಿಸಿಲ್ಲ. ಪ್ರಾಥಮಿಕ ಸಂಪರ್ಕದ ಶಿಕ್ಷಕರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದರು.

    ಬ್ರಹ್ಮಾವರ ತಾಲೂಕಿನಲ್ಲಿ ಓರ್ವ ಶಿಕ್ಷಕಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ಇತರ ಶಿಕ್ಷಕರು ಅವರ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಬ್ರಹ್ಮಾವರದ ಶಾಲೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಇದೆಲ್ಲದರ ಮಧ್ಯೆ ಜಿಲ್ಲೆಯಾದ್ಯಂತ ಇಂದು ಶಾಲಾ ಪ್ರಾರಂಭೋತ್ಸವದ ಸಂಭ್ರಮ ಶಿಕ್ಷಕರಲ್ಲಿ ಮತ್ತು ಮಕ್ಕಳಲ್ಲಿ ಕಂಡುಬಂತು. ಕೊರೊನಾ ಆತಂಕ ಕೊಂಚ ಕಡಿಮೆಯಾಗುತ್ತಿದ್ದಂತೆ ಶಾಲೆಗಳನ್ನು ತೆರೆಯಲಾಗಿದೆ. ಮಕ್ಕಳ ಆರೋಗ್ಯದ ಜೊತೆಗೆ ಅವರ ಮುಂದಿನ ಭವಿಷ್ಯ ಮುಖ್ಯ ಎಂಬ ಉದ್ದೇಶದಿಂದ ಸರ್ಕಾರ ಶಾಲೆಗಳನ್ನು ತೆರೆದಿದೆ ಎಂದು ಡಿಡಿಪಿಐ ನಾಗೂರ ಹೇಳಿದರು.

    ಪ್ರತಿ ಶಾಲೆಯಲ್ಲೂ ಸ್ಯಾನಿಟೈಸರ್, ಸಾಮಾಜಿಕ ಅಂತರದ ಜೊತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡು ಶಿಕ್ಷಕರು ಪಾಠ ಮಾಡುತ್ತಾರೆ. ಜಿಲ್ಲೆಯ ಕೆಲ ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಮಾಸ್ಕ್ ವಿತರಣೆ ಮಾಡಿದ್ದೇವೆ. ತರಗತಿಗಳನ್ನು ಕಡ್ಡಾಯ ಮಾಡಿಲ್ಲ. ಚಂದನ ವಾಹಿನಿ ಮೂಲಕವೂ ಶಿಕ್ಷಣ ಪಡೆಯಬಹುದು ಎಂದು ನಾಗೂರ ಹೇಳಿದರು.

  • ಕಾಫಿ ತೋಟದೊಳಗೆ ನುಗ್ಗಿ ಪಲ್ಟಿಯಾದ ಕಾರು

    ಕಾಫಿ ತೋಟದೊಳಗೆ ನುಗ್ಗಿ ಪಲ್ಟಿಯಾದ ಕಾರು

    ಚಿಕ್ಕಮಗಳೂರು: ಸಂಬಂಧಿಯನ್ನ ಬ್ಯಾಂಕಿಗೆ ಡ್ರಾಪ್ ಮಾಡಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ  ಕಾರು ಕಾಫಿತೋಟದೊಳಕ್ಕೆ ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಎಸ್ಟೇಟ್ ಸಮೀಪ ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಜಾವಳಿ ಗ್ರಾಮದ ಗಿರೀಶ್ ಎಂಬವರು ತಮ್ಮ ಸಂಬಂಧಿಯನ್ನ ಮೂಡಿಗೆರೆಯ ಬ್ಯಾಂಕಿಗೆ ಡ್ರಾಪ್ ಮಾಡಿ ಹಿಂದಿರುಗಿ ಹೋಗುವಾಗ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿ ತಡೆಗೋಡೆಗಳು ಇಲ್ಲದ್ದಕ್ಕೆ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರು ಕಾಫಿತೋಟದಲ್ಲಿ ಪಲ್ಟಿಯಾಗಿದ್ದರಿಂದ ಚಾಲಕ ಗಿರೀಶ್ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲೆನಾಡಲ್ಲಿ ಇಡೀ ದಿನ ಸಾಧಾರಣ ಮಳೆ ಸುರಿಯುತ್ತಿದೆ. ಮಲೆನಾಡಿನ ರಸ್ತೆಗಳು ಅತಿಯಾದ ತಿರುವಿನಿಂದ ಕೂಡಿದ್ದು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿ ತೋಟದೊಳಕ್ಕೆ ಪಲ್ಟಿಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

    ಸ್ಥಳೀಯರು ರಸ್ತೆಗಳಿಗೆ ತಡೆಗೋಡೆಗಳು ಇಲ್ಲದ್ದಕ್ಕೆ ಈ ಅಪಘಾತಕ್ಕೆ ಕಾರಣ ಎಂದು ಅಸಮಾಧಾನ ಹೊರಹಾಕಿ, ಕೂಡಲೇ ಅಪಾಯಕಾರಿ ತಿರುವುಗಳಿಗೆ ತಡೆಗೋಡೆ ನಿರ್ಮಿಸಬೇಕೆಂದು ಆಗ್ರಹಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಈ ಭಾಗದಲ್ಲಿ ಕಳೆದೊಂದು ತಿಂಗಳಲ್ಲಿ ಸುಮಾರು ಏಳೆಂಟು ಸ್ಥಳೀಯ ಹಾಗೂ ಪ್ರವಾಸಿ ಕಾರುಗಳು ಪಲ್ಟಿಯಾಗಿವೆ. ಅದೃಷ್ಟವಶಾತ್ ಎಲ್ಲೂ ಕೂಡ ಸಾವು ಸಂಭವಿಸಿಲ್ಲ. ಹಾಗಾಗಿ ಸ್ಥಳೀಯರು ಈ ಭಾಗದಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ಸರ್ಕಾರ ಅಪಾಯಕಾರಿ ತಿರುವುಗಳಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಆಗ್ರಹಿಸಿದ್ದಾರೆ.

  • ನನ್ನದು ಒನ್ ಸೈಡ್ ಲವ್, ಒಪ್ಪದಕ್ಕೆ ಕೊಂದೆ-ತಪ್ಪೊಪ್ಪಿಕೊಂಡ ವೈದ್ಯ

    ನನ್ನದು ಒನ್ ಸೈಡ್ ಲವ್, ಒಪ್ಪದಕ್ಕೆ ಕೊಂದೆ-ತಪ್ಪೊಪ್ಪಿಕೊಂಡ ವೈದ್ಯ

    -ಮನೆಯ ಬಳಿ ಪಿಕ್ ಮಾಡಿದ್ದ

    ಲಕ್ನೋ: ಆಗ್ರಾದ ಮೆಡಿಕಲ್ ವಿದ್ಯಾರ್ಥಿನಿ ಡಾ.ಯೋಗಿತಾ ಗೌತಮ್ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

    ಡಾ. ವಿವೇಕ್ ತಿವಾರಿ ಬಂಧಿತ ಆರೋಪಿ. ಮೊರದಾಬಾದ್ ವಿಶ್ವವಿದ್ಯಾಲಯದಲ್ಲಿ ವಿವೇಕ್ ತಿವಾರಿ ಮತ್ತು ಯೋಗಿತಾ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಲ್ಲಿ ಸೀನಿಯರ್ ಆಗಿದ್ದ ವಿವೇಕ್ ಎರಡು ವರ್ಷಗಳ ಹಿಂದೆ ಯೋಗಿತಾ ಮುಂದೆ ಮದುವೆ ಪ್ರಸ್ತಾಪ ಇರಿಸಿದ್ದ. ಆದ್ರೆ ಯೋಗಿತಾ ಪ್ರಪೋಸಲ್ ತಿರಸ್ಕರಿಸಿದ್ದು. ತದನಂತರ ಯೋಗಿತಾ ಆಗ್ರಾದ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಸ್ತ್ರೀರೋಗ ವಿಭಾಗದಲ್ಲಿ ಜೂನಿಯರ್ ಡಾಕ್ಟರ್ ಆಗಿ ಕೆಲಸ ಮಾಡಿಕೊಂಡಿದ್ದರು.

    ಆಗ್ರಾದ ಜಲೌನ್ ಗೆ ಮೆಡಿಕಲ್ ಆಫಿಸರ್ ಆಗಿ ವಿವೇಕ್ ವರ್ಗಾವಣೆಗೊಂಡಿದ್ದನು. ಆಗಸ್ಟ್ 18ರಂದು ಮಾತನಾಡುವ ನೆಪದಲ್ಲಿ ಯೋಗಿತಾರನ್ನ ಕರೆದಿದ್ದಾನೆ. ತನ್ನ ಕಾರಿನಲ್ಲಿಯೇ ಯೋಗಿತಾ ವಾಸವಾಗಿದ್ದ ಬಾಡಿಗೆ ಮನೆಯಿಂದ ಪಿಕ್ ಮಾಡಿದ್ದಾನೆ. ಈ ವೇಳೆ ಕಾರ್ ನಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ವಿವೇಕ್ ಬಲವಾಗಿ ಯೋಗಿತಾ ತಲೆಗೆ ಹೊಡೆದಿದ್ದಾನೆ. ಪರಿಣಾಮ ಯೋಗಿತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಯೋಗಿತಾ ಶವವನ್ನು ದೌಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಮ್ರೌಲಿ ಕತ್ರಾ ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾನೆ.

    ಆಗಸ್ಟ್ 18 ಮಂಗಳವಾರ ರಾತ್ರಿ ಯೋಗಿತಾ ಪೋಷಕರು ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಡಾ.ವಿವೇಕ್ ತಿವಾರಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸ್ ವಿಚಾರಣೆ ವೇಳೆ ಆರೋಪಿ ವಿವೇಕ್, ತನ್ನದು ಒನ್ ಸೈಡ್ ಲವ್, ಪ್ರೀತಿ ಒಪ್ಪಿಕೊಳ್ಳದಕ್ಕೆ ಜಗಳ ನಡೆದಾಗ ತಲೆ ಭಾಗಕ್ಕೆ ಬಲವಾಗಿ ಹೊಡೆದಿದ್ದರಿಂದ ಸಾವನ್ನಪ್ಪಿದಳು ಎಂದು ವಿವೇಕ್ ಒಪ್ಪಿಕೊಂಡಿದ್ದಾನೆ.

  • ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ: ಶಿವಣ್ಣ

    ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ: ಶಿವಣ್ಣ

    ಬೆಂಗಳೂರು: ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಆಗಲೇ ನಾಯಕ ಆಗಲು ಸಾಧ್ಯ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

    ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಶಿವರಾಜ್ ಕುಮಾರ್ ಮನೆಯಲ್ಲಿ ಸಭೆ ನಡೆಸಲಾಯಿತು. ನಾಗಾವರದ ಶಿವರಾಜ್ ಕುಮಾರ್ ಮನೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ, ಅದರ ಸಂಸ್ಥೆಗಳು ಹಾಗೂ ಅದರ ಅಂಗ ಸಂಸ್ಥೆಗಳು ಭಾಗಿಯಾಗಿದ್ದವು.

    ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಚಿತ್ರರಂಗದ ಎಲ್ಲ ವಿಭಾಗಗಳಿಂದ ಒಗ್ಗಟ್ಟಾಗಿ ಬಂದಿರುವುದು ಖುಷಿ ತಂದಿದೆ. ಇಂಡಸ್ಟ್ರಿಯ ಸಾಕಷ್ಟು ಸಮಸ್ಯೆಗಳನ್ನು ನನ್ನ ಜೊತೆ ಹಂಚಿಕೊಂಡಿದ್ದಾರೆ. ನನ್ನನ್ನು ಕಂಡರೆ ಎಲ್ಲರೂ ಇಷ್ಟಪಡುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿ ಹೋಗೋಣ. ಮಾದರಿ ಇಂಡಸ್ಟ್ರಿಯಾಗಿ ಬಾಳೋಣ ಎಂದರು ಕರೆ ನೀಡಿದರು.

    ಕೊರೊನಾ ಏನೂ ದೊಡ್ಡ ವಿಷಯವಲ್ಲ, ಅದನ್ನು ಹೋಗಲಾಡಿಸಬಹುದು. ಮೂರು, ನಾಲ್ಕು ದಿನಗಳಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಿ, ಅದರಲ್ಲಿ ರಾಜ್ಯ ಸರ್ಕಾರಕ್ಕೆ ಯಾವ ರೀತಿ ಮನವಿ ಸಲ್ಲಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

    ನನಗೆ ಯಾವ ನಾಯಕತ್ವವೂ ಮುಖ್ಯವಲ್ಲ, ಎಲ್ಲರ ಜೊತೆಯಲ್ಲಿ ಹೋಗುತ್ತೇನೆ. ಸರ್ಕಾರದ ಬಳಿ ಹೋಗಲು ಎಲ್ಲರೂ ತೀರ್ಮಾನ ಮಾಡಿದ್ದಾರೆ. ಸರ್ಕಾರದ ಮುಂದೆ ಹೋಗುವ ಮುನ್ನ ನಾವು ಏನು ಮಾಡಿದ್ದೇವೆ ಎಂಬುದನ್ನು ತಿಳಿಯಬೇಕಿದೆ. ಸರ್ಕಾರದ ಮುಂದೆ ಹೋಗೋದು ಮುಖ್ಯವಲ್ಲ, ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ. ಟೀಮ್ ಕೆಲಸ ಆದ ಮೇಲೆ ಮುಂದುವರಿಯುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.

    ಯಾರೂ ಧೈರ್ಯ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರಿಗೂ ಸೂಕ್ತ ಪರಿಹಾರ ಮಾಡಲಾಗುತ್ತದೆ. ತಕ್ಷಣವೇ ಎಲ್ಲವೂ ಸರಿ ಹೋಗುತ್ತೆ ಅಂತ ಹೇಳಲು ಆಗುವುದಿಲ್ಲ. ಅದಕ್ಕೆ ಸಮಯ ಬೇಕು, ನಿಮ್ಮ ಜೊತೆ ನಾನು ಇದ್ದೇನೆ. ಎಲ್ಲರೂ ಧೈರ್ಯವಾಗಿರಿ ಎಂದು ಕಾರ್ಮಿಕರಿಗೆ ಶಿವರಾಜ್ ಕುಮಾರ್ ಧೈರ್ಯ ತುಂಬಿದರು.

    ನಿರ್ಮಾಪಕ ಸಾ.ರಾ.ಗೋವಿಂದು ಮಾತನಾಡಿ, ಸಧ್ಯದಲ್ಲೇ ಮುಖ್ಯಮಂತ್ರಿಗಳ ಭೇಟಿಯಾಗುವ ಬಗ್ಗೆ ನಿರ್ಧಾರ ಮಾಡಿದ್ದೇವೆ. ಚಿತ್ರರಂಗದ ಉಳಿವಿಗಾಗಿ ಮುಖ್ಯಮಂತ್ರಿ ಬಳಿ ಮನವಿ ಮಾಡುತ್ತೇವೆ ಎಂದರು.

    ಕೊರೊನಾ ಸಮಯದಲ್ಲಿ ಚಿತ್ರರಂಗ ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ. ಎಲ್ಲ ರಂಗಕ್ಕೂ ಪ್ಯಾಕೆಜ್ ಘೋಷಿಸಿರೋ ಸರ್ಕಾರ, ಚಿತ್ರರಂಗದ ಬಗ್ಗೆ ನಿರ್ಲಕ್ಷ ವಹಿಸಿದೆ. ಹೀಗಾಗಿ ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನಿಡಲು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

    ಸಭೆಯಲ್ಲಿ ಸಾಧುಕೋಕಿಲ, ಜಯಣ್ಣ, ಸೂರಪ್ಪ ಬಾಬು, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಸಾರಾ ಗೋವಿಂದು, ಕೆ.ಮಂಜು, ಗುರುಕಿರಣ್, ಭೋಗೇಂದ್ರ, ಸುರೇಶ್ ಕುಮಾರ್, ಭಾಮ ಹರೀಶ್, ಎ.ಗಣೇಶ್, ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಕೋಟಿ ರಾಮು, ನಿರ್ಮಾಪಕ ವಿತರಕ ಚಿನ್ನೇಗೌಡ, ಕಾರ್ತಿಕ್ ಗೌಡ, ಛಾಯಾಗ್ರಾಹಕ ಸಂಘದ ಅದ್ಯಕ್ಷ ಜೆ.ಜೆ.ಕೃಷ್ಣ, ನಿರ್ಮಾಪಕ ಕೆಪಿ ಹಾಗೂ ಇತರರು ಇದ್ದರು.

  • ಆರ್ಥಿಕ ಸಂಕಷ್ಟ – ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡ ಅಮ್ಮ, ಮಗ

    ಆರ್ಥಿಕ ಸಂಕಷ್ಟ – ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡ ಅಮ್ಮ, ಮಗ

    ಚಂಡೀಗಢ: ಲಾಕ್‍ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಅಮ್ಮ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್‍ನ ಲುಧಿಯಾನದಲ್ಲಿ ನಡೆದಿದೆ.

    ಮೃತರನ್ನು ಕೃಷ್ಣದೇವಿ (65) ಮತ್ತು ಆಕೆಯ ಮಗ ಮನೀಶ್ ವರ್ಮಾ (35) ಎಂದು ಗುರುತಿಸಲಾಗಿದೆ. ಇಬ್ಬರೂ ದಾಬಾದ ಸದ್ಗುರ ನಗರದ ತಮ್ಮ ನಿವಾಸದಲ್ಲಿ ಒಂದೇ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮೃತ ಮನೀಶ್ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು.

    ಮನೀಶ್‍ಗೆ ಮನೆ ಬಾಡಿಗೆ ಕೊಟ್ಟ ಮಾಲೀಕರು ಕಿಟಕಿ ತೆಗೆದು ನೋಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮನೆಯಿಂದ ಯಾರೂ ಹೊರಗೆ ಬರುತ್ತಿಲ್ಲ. ಬಾಗಿಲೂ ತೆರೆದಿಲ್ಲ ಎಂಬ ಕಾರಣಕ್ಕೆ ಅನುಮಾನಗೊಂಡ ಮನೆಯ ಮಾಲೀಕ ಮನೆಯ ಕಿಟಕಿಯನ್ನು ತೆರೆದು ನೋಡಿದ್ದಾರೆ. ಈ ವೇಳೆ ಅಮ್ಮ ಮತ್ತು ಮಗ ಇಬ್ಬರು ಒಂದೇ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡಿದೆ. ಆಗ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಪೊಲೀಸ್ ಅಧಿಕಾರಿ ಪವಿತರ್ ಸಿಂಗ್, ಆತ್ಯಹತ್ಯೆ ಮಾಡಿಕೊಂಡ ಜಾಗದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಮೃತ ಅಮ್ಮ-ಮಗ ಕಳೆದ ಎರಡು ವರ್ಷಗಳಿಂದ ಇದೇ ಮನೆಯಲ್ಲಿ ಬಾಡಿಗೆಗೆ ಇದ್ದರು ಎಂದು ತಿಳಿದು ಬಂದಿದೆ. ಮನೀಶ್ ಅವರ ಪತಿ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ನಂತರ ಅವರು ತಮ್ಮ ಪೋಷಕರ ಮನೆಗೆ ಹೋಗಿ ಅಲ್ಲೇ ತೀರಿಹೋಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

    ಲಾಕ್‍ಡೌನ್ ವೇಳೆ ಕೆಲಸವನ್ನು ಕಳೆದುಕೊಂಡ ಮನೀಶ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಜೊತೆಗೆ ಇತ್ತೀಚೆಗೆ ಹೆಂಡತಿ ಕೂಡ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದರಿಂದ ಮನೀಶ್ ಖಿನ್ನತೆಗೆ ಒಳಾಗಿದ್ದ ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

  • ದೆಹಲಿ ವಿಮಾನ ನಿಲ್ದಾಣದಲ್ಲಿ RDX ಪತ್ತೆ

    ದೆಹಲಿ ವಿಮಾನ ನಿಲ್ದಾಣದಲ್ಲಿ RDX ಪತ್ತೆ

    ನವದೆಹಲಿ: ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ಇಂದು ಬೆಳಗ್ಗೆ ಟರ್ಮಿನಲ್ ಮೂರರಲ್ಲಿ ಆರ್‌ಡಿಎಕ್ಸ್ ಸ್ಫೋಟಕ ವಸ್ತುಗಳಿಂದ ತುಂಬಿದ ಬ್ಯಾಗ್ ಪತ್ತೆಯಾಗಿದೆ.

    ಶುಕ್ರವಾರ ಬೆಳಗಿನ ಜಾವ 1 ಗಂಟೆಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ ಎಂಬ ಮಾಹಿತಿ ಬಂತು. ಪ್ರಯಾಣಿಕರು ಆಗಮಿಸುವ ಗೇಟ್ ಬಳಿಯೇಪತ್ತೆಯಾಗಿದ್ದರಿಂದ ಭದ್ರತಾ ಸಿಬ್ಬಂದಿ ಮುಂಜಾಗ್ರತ ಕ್ರಮವಾಗಿ ಬ್ಯಾಗ್ ನ್ನು ಸ್ಥಳಾಂತರಿಸಿದ್ದರು.

    ಎಚ್ಚೆತ್ತ ಏರ್ ಪೋರ್ಟ್ ಸಿಬ್ಬಂದಿ ಬ್ಯಾಗ್ ಬೇರೆ ಕಡೆ ಸ್ಥಳಾಂತರಿಸಿ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರ್ಯಪ್ರವೃತ್ತರಾದ ಪೊಲೀಸರು ಟರ್ಮಿನಲ್ 2 ಮತ್ತು 3ರ ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದಾರೆ.

  • 575 ಯುವಕರು ಸೇನೆಗೆ ಸೇರ್ಪಡೆ- ಯುನಿಫಾರ್ಮ್ ನಿಂದ ಸಿಕ್ತು ಪ್ರೇರಣೆ ಎಂದ ಕಾಶ್ಮೀರಿ ಸೈನಿಕ

    575 ಯುವಕರು ಸೇನೆಗೆ ಸೇರ್ಪಡೆ- ಯುನಿಫಾರ್ಮ್ ನಿಂದ ಸಿಕ್ತು ಪ್ರೇರಣೆ ಎಂದ ಕಾಶ್ಮೀರಿ ಸೈನಿಕ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದು ವಿಶೇಷ ಸ್ಥಾನಮಾನ ಅನುಚ್ಛೇದ 370ನ್ನು ತೆಗೆದು ಹಾಕಲಾಗಿದೆ. ಮುಂಜಾಗ್ರತ ಕ್ರಮವಾಗಿ ಕಾಶ್ಮೀರದಲ್ಲಿ ವಿಶೇಷ ಬಂದೋಬಸ್ತ್, ಕರ್ಪ್ಯೂ ವಿಧಿಸಲಾಗಿತ್ತು. ಸದ್ಯ ಕಾಶ್ಮೀರಿಗರು ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ. ಆರ್ಟಿಕಲ್ 370ರ ರದ್ದು ಬಳಿಕ ಕಾಶ್ಮೀರದ 575 ಯುವಕರು ಭಾರತೀಯ ಸೇನೆ ಸೇರ್ಪಡೆಗೊಂಡಿದ್ದಾರೆ.

    ಶುಕ್ರವಾರ ರೆಜಿಮೆಂಟ್ ಸೆಂಟರ್ ನಲ್ಲಿ ಪಾಸಿಂಗ್ ಔಟ್ ಪರೇಡ್ ಅಯೋಜಿಸಲಾಗಿತ್ತು. ಈ ಪರೇಡ್‍ನಲ್ಲಿ 575 ಯುವಕರು ಭಾಗಿಯಾಗಿದ್ದು, ಎಲ್ಲರೂ ಸೆಂಟರ್ ಸೇರ್ಪಡೆಯಾಗಿದ್ದಾರೆ. ಪರೇಡ್ ನಲ್ಲಿ ಭಾಗಿಯಾಗಿದ್ದ ಕಾಶ್ಮೀರದ ವಸೀಮ್ ಅಹ್ಮದ್ ಮಾತನಾಡಿ, ನನ್ನ ತಂದೆ ಸೇನೆಯಲ್ಲಿದ್ದರು. ತಂದೆಯ ಸಮವಸ್ತ್ರದಿಂದ ಸಿಕ್ಕ ಪ್ರೇರಣೆಯಿಂದಾಗಿ ನಾನು ಸೇನೆ ಸೇರುವ ನಿರ್ಧಾರಕ್ಕೆ ಬಂದೆ. ಇಂದು ತುಂಬಾ ಖುಷಿಯಾಗಿದ್ದೇನೆ ಎಂದು ತಮ್ಮ ಸಂತೋಷವನ್ನು ಹಂಚಿಕೊಂಡರು.

    ಮಿರ್ ಎಂಬವರು ಮಾತನಾಡಿ, ನನ್ನ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ತಂದೆಯ ಪ್ರೇರಣೆಯಿಂದಾಗಿ ಸೇನೆ ಸೇರಿದ್ದೇನೆ. ಸೇನೆಯಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಕಲಿಯುವ ಅವಕಾಶ ಸಿಗುತ್ತದೆ. ನಾನು ಸೇನೆ ಸೇರಿದ್ದರಿಂದ ಪೋಷಕರು ಹೆಮ್ಮೆ ಪಡುತ್ತಿದ್ದಾರೆ ಎಂದು ತಿಳಿಸಿದರು.

  • ರಾಜಕಾರಣ ಬದಲು ಮೋದಿ ಬಾಲಿವುಡ್ ಸೇರಬೇಕಿತ್ತು: ಗೆಹ್ಲೋಟ್ ವ್ಯಂಗ್ಯ

    ರಾಜಕಾರಣ ಬದಲು ಮೋದಿ ಬಾಲಿವುಡ್ ಸೇರಬೇಕಿತ್ತು: ಗೆಹ್ಲೋಟ್ ವ್ಯಂಗ್ಯ

    ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ನಟನೆಯನ್ನು ಬಹಳ ಚೆನ್ನಾಗಿ ಮಾಡುತ್ತಾರೆ. ಅವರು ರಾಜಕೀಯವಲ್ಲ ಬಾಲಿವುಡ್ ಸೇರಬಹುದಿತ್ತು ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ.

    ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಗೆಹ್ಲೋಟ್, “ಜುಂಬ್ಲೆಬಾಜಿ (ವಾಕ್ಚಾತುರ್ಯ), ಡ್ರಾಮಾಬಾಜಿ (ನಟನೆ) ಮೋದಿ ಅವರ ಸ್ವಭಾವದಲ್ಲಿಯೇ ಇದೆ. ಅವರು ಬಾಲಿವುಡ್ ಸೇರಿ ಒಳ್ಳೆಯ ನಟರಾಗಬಹುದಿತ್ತು” ಎಂದು ಟಾಂಗ್ ಕೊಟ್ಟಿದ್ದಾರೆ.

    ನಟನೆಯಲ್ಲಿ ಸತ್ಯ, ವಾಸ್ತವವಿರುವುದಿಲ್ಲ. ಹಾಗೆಯೇ ಮೋದಿ ಅವರು ಸತ್ಯವನ್ನು ಹೇಳುವುದನ್ನು ಬಿಟ್ಟು, ಸುಳ್ಳಿನ ಆಸರೆಯಲ್ಲಿ ನಟಿಸುತ್ತಾರೆ. ನಟನೆ ದೇಶಕ್ಕೇನೂ ಒಳ್ಳೆಯದನ್ನು ಮಾಡಿಲ್ಲ. ಬರೀ ನಟನೆಯಿಂದ ಅಭಿವೃದ್ಧಿಯೂ ಆಗಲ್ಲ, ಯಾರ ಹಸಿವು ಕೂಡ ನೀಗಲ್ಲ ಎಂದು ಕಿಡಿಕಾರಿದರು.

    ದೇಶ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಇಂದು ಅಪಾಯದಲ್ಲಿದೆ. ನಾವು ಸಂಪೂರ್ಣ ಬಲ ಮತ್ತು ಸಾಮಥ್ರ್ಯದೊಂದಿಗೆ ಚುನಾವಣೆಯನ್ನು ಎದುರಿಸದಿದ್ದರೆ ಬಿಜೆಪಿ ನಮ್ಮ ದೇಶವನ್ನು ನಿರ್ನಾಮ ಮಾಡುತ್ತಾರೆ ಅಂತ ಆತಂಕ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ರಾಜಸ್ಥಾನ ಡಿಸಿಎಂ ಸಚಿನ್ ಪೈಲಟ್ ಬಿಜೆಪಿ ಸರ್ಕಾರ ರಾಜ್ಯದ ಮತ್ತು ದೇಶದ ಆರ್ಥಿಕತೆಯನ್ನು ನಾಶಮಾಡುತ್ತಿದೆ ಎಂದು ಆರೋಪಿಸಿದರು.

    ಅಲ್ಲದೆ 2019 ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಒಂದು ಅವಕಾಶ. ಹಾಗೆಯೇ ಈಗಾಗಲೇ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸಿಬಿಐ ಅಂತಹ ಸಂಸ್ಥೆಯನ್ನು ದುರ್ಬಲಗೊಳಿಸಿದೆ. ಆದರಿಂದ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಎಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.