Tag: Public Toilet

  • ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

    ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

    ಹೈದರಾಬಾದ್: ಆಟೋ ಟ್ರಾಲಿ ಚಾಲಕನೋರ್ವ ಸಾರ್ವಜನಿಕ ಪೋರ್ಟಬಲ್ ಶೌಚಾಲಯವನ್ನು ಕದ್ದು 45 ಸಾವಿರಕ್ಕೆ ಮಾರಾಟ ಮಾಡಿದ್ದಾನೆ.

    ಆರೋಪಿಯನ್ನು ಎಂ ಜೋಗಯ್ಯ ಎಂದು ಗುರುತಿಸಲಾಗಿದ್ದು, ಈತ ಮೇದಕ್ ಜಿಲ್ಲೆಯ ದೋಮಲಗುಡ ನಿವಾಸಿಯಾಗಿದ್ದಾನೆ. ಇದೀಗ ಮಲ್ಕಾಜ್‍ಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅನ್ನೋದೊಂದು ಶಕ್ತಿ: ಬಸವರಾಜ್ ರಾಯರೆಡ್ಡಿ

    ಕೆಲ ದಿನಗಳ ಹಿಂದೆ ಜೋಗಯ್ಯ ಮತ್ತು ಆತನ ಇಬ್ಬರು ಸಹಚರರಾದ ಬುದ್ಧ ಭವನದ ಜಿಎಚ್‍ಎಂಸಿ ಕಾರ್ಯಕರ್ತ ಅರುಣ್ ಕುಮಾರ್ ಮತ್ತು ಮಲ್ಕಾಜ್‍ಗಿರಿಯ ಆನಂದಬಾಗ್‍ನಲ್ಲಿರುವ ಜೈನ್ ಕನ್‍ಸ್ಟ್ರಕ್ಷನ್‍ನ ಬಿಕ್ಷಪತಿ ಸಾರ್ವಜನಿಕ ಆಸ್ತಿಯನ್ನು ಕದ್ದು ಪರಾರಿಯಾಗಿದ್ದರು. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್

    ನಂತರ ಜೋಗಯ್ಯ ಸಾರ್ವಜನಿಕ ಶೌಚಾಲಯವನ್ನು 45,000 ರೂ.ಗೆ ಮುಶೀರಾಬಾದ್‍ನ ಸ್ಕ್ರ್ಯಾಪ್ ವ್ಯಾಪಾರಿಗೆ ಮಾರಾಟ ಮಾಡಿದ್ದಾನೆ. ಬಳಿಕ ಬಂದ ಹಣವನ್ನು ತನ್ನ ವೈಯಕ್ತಿಕ ಖರ್ಚಿಗೆ ಇಟ್ಟುಕೊಂಡಿದ್ದ. ಆದರೆ ಕಳೆದ ವಾರ ಜಿಎಚ್‍ಎಂಸಿ ಜಿಲ್ಲಾಧಿಕಾರಿ ಜಿ.ರಾಜು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದರು. ಈ ವೇಳೆ ಜೋಗಯ್ಯ ಕಂಡು ಬಂದಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿ, ಆರೋಪಿ ಬಳಿ ಇದ್ದ ಹಣ ಮತ್ತು ಆಟೋ ಟ್ರಾಲಿಯನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

  • ಸಾರ್ವಜನಿಕ ಶೌಚಾಲಯದಿಂದ ಹೊರಬಂದ ಸಿಂಹ- ವೀಡಿಯೋ ವೈರಲ್

    ಸಾರ್ವಜನಿಕ ಶೌಚಾಲಯದಿಂದ ಹೊರಬಂದ ಸಿಂಹ- ವೀಡಿಯೋ ವೈರಲ್

    ನವದೆಹಲಿ: ಸಾರ್ವಜನಿಕ ಶೌಚಾಲಯದಿಂದ ಸಿಂಹವೊಂದು ಹೊರಬಂದು ಅಚ್ಚರಿ ಮೂಡಿಸಿದೆ. ಏನಿದು ಸಾರ್ವಜನಿಕ ಶೌಚಾಲಯವನ್ನ ಕಾಡಿನ ಪ್ರಾಣಿಗಳು ಬಳಸುತ್ತಾ ಎಂದು ಪ್ರಶ್ನಿಸುವ ಮೂಲಕ ನೀವು ಭಯಭೀತರಾಗಬಹುದು. ಏನಿದು ಸ್ಟೋರಿ ಅಂತೀರಾ..? ಹಾಗಿದ್ರೆ ಈ ಸುದ್ದಿ ಓದಿ.

    ಕಾಡಿನ ರಾಜ ಸಿಂಹ ಸಾರ್ವಜನಿಕ ಶೌಚಾಲಯದಿಂದ ಹೊರಬರುತ್ತಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಜಂಗಲ್ ಸಫಾರಿ ಸಮಯದಲ್ಲಿ ಅನೇಕ ಪ್ರಾಣಿಗಳು ಮತ್ತು ಪಕ್ಷಿಗಳನ್ನು ಅವುಗಳ ಸ್ಥಳಗಳಲ್ಲಿ ಇರುತ್ತೆ. ಆದರೆ ಇಲ್ಲಿ ಸಿಂಹ ಸಾರ್ವಜನಿಕ ಶೌಚಾಲಯದಿಂದ ಹೊರಬರುತ್ತಿದ್ದು, ಆ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಟೇಕ್ ಕೇರ್ ಕಿಂಗ್’ ಎಂದ ಶಾರೂಖ್ ಅಭಿಮಾನಿಗಳು

    ಕಾಡಿನಲ್ಲಿ ಸಫಾರಿಗೆ ಕಾರಿನಲ್ಲಿ ಹೋಗುತ್ತಿರುವಾಗ, ಸಾರ್ವಜನಿಕ ಶೌಚಾಲಯವನ್ನು ಸಮೀಪಿಸುತ್ತಿದಂತೆ, ಸಿಂಹವು ಶೌಚಾಲಯದ ಬಾಗಿಲಿನಿಂದ ಹೊರಬರುತ್ತಿದೆ. ಸಫಾರಿಗೆಂದು ಬಂದಿದ್ದ ಜನರು ದೃಶ್ಯ ನೋಡಿ ಆಶ್ಚರ್ಯಗೊಂಡಿದ್ದಾರೆ. ಈ ವೀಡಿಯೋವನ್ನು ಟ್ವಿಟರ್ ನಲ್ಲಿ ವೈಲ್ಡ್ ಲೆನ್ಸ್ ಇಕೋ ಫೌಂಡೇಶನ್ ಹಂಚಿಕೊಂಡಿದ್ದು, ಶೌಚಾಲಯ ಯಾವಾಗಲೂ ಮನುಷ್ಯರಿಗೆ ಸುರಕ್ಷಿತವಲ್ಲ. ಕೆಲವೊಮ್ಮೆ ಇದನ್ನು ಇತರರು ಕೂಡ ಬಳಸಬಹುದು ಎಂದು ಬರೆದು ಟ್ವೀಟ್ ಮಾಡಿದೆ. ಇದನ್ನೂ ಓದಿ: ಚಿನ್ನದ ಪದಕ ಗೆದ್ದ ಜಮ್ಮು ಬಿಯರ್

    ಈ ವೀಡಿಯೋ 18 ಲಕ್ಷಕ್ಕೂ ಹೆಚ್ಚು ಬಾರಿ ವ್ಯೂ ಆಗಿದ್ದು, ಇದನ್ನು ನೋಡಿದವರು ಅಚ್ಚರಿಯ ಜೊತೆ ಭಯಪಟ್ಟಿದ್ದಾರೆ. ಜಂಗಲ್ ಸಫಾರಿ ಸಮಯದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಸಾರ್ವಜನಿಕ ಶೌಚಾಲಯವನ್ನು ಬಳಸುವುದನ್ನು ಖಂಡಿತವಾಗಿಯೂ ತಡೆಯುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಈ ವೀಡಿಯೋವನ್ನು ಹಲವು ಜನರು ರೀ ಟ್ವೀಟ್ ಮಾಡಿದ್ದಾರೆ.

  • ಸಾರ್ವಜನಿಕ ಶೌಚಾಲಯದಲ್ಲಿ ಮೊಟ್ಟೆ, ಮಾಂಸ ಮಾರಾಟ

    ಸಾರ್ವಜನಿಕ ಶೌಚಾಲಯದಲ್ಲಿ ಮೊಟ್ಟೆ, ಮಾಂಸ ಮಾರಾಟ

    ಇಂದೋರ್: ಮೊಟ್ಟೆ ಮತ್ತು ಮಾಂಸವನ್ನು ಮಾರಲು ಸಾರ್ವಜನಿಕ ಶೌಚಾಲಯವನ್ನು ಬಳಸುತ್ತಿರುವ ಘಟನೆ ಇಂದೋರ್‍ನ ಮಧ್ಯ ಪ್ರದೇಶದಲ್ಲಿ ನಡೆದಿದೆ. ಸುಲಭ್ ಶೌಚಾಲಯದಲ್ಲಿನ ನಡೆಸಲಾಗುತ್ತಿದ್ದ ಈ ಅಕ್ರಮ ವ್ಯಾಪಾರ ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ನಾಗರಿಕ ಸೌಲಭ್ಯ ಮತ್ತು ಅವ್ಯವಸ್ಥೆ ವಿಚಾರವಾಗಿ ಕ್ರಮ ಕೈಗೊಂಡಿದ್ದು, ಸುಲಭ್ ಇಂಟರ್ ನ್ಯಾಷನಲ್ ಎಂಬ ಎನ್‍ಜಿಒ ವಿರುದ್ಧ ದಂಡ ವಿಧಿಸಿದೆ.

    ಈ ಕುರಿತಂತೆ ಮಾತನಾಡಿದ ಈಎಂಸಿಯ ಹೆಚ್ಚುವರಿ ಆಯುಕ್ತ ಅಭಯ್ ರಾಜಂಗಾಂವ್ಕರ್, ಪರಿಶೀಲನೆ ನಡೆಸುತ್ತಿದ್ದ ವೇಳೆ ಸಾರ್ವಜನಿಕ ಶೌಚಾಲಯವನ್ನು ಮೊಟ್ಟೆ ಮತ್ತು ಮಾಂಸ ಮಾರಾಟಕ್ಕೆ ದುರ್ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಹಾಗಾಗಿ ಆರೋಪಿಗೆ ಸ್ಥಳದಲ್ಲಿಯೇ 1,000 ರೂ. ದಂಡ ವಿಧಿಸಲಾಗಿದೆ. ಜೊತೆಗೆ ಎನ್‍ಜಿಒ ಸುಲಭ್ ಇಂಟರ್ ನ್ಯಾಷನಲ್‍ಗೆ ನೋಟಿಸ್ ಕಳುಹಿಸುವ ಮೂಲಕ 20,000 ರೂ. ದಂಡ ವಿಧಿಸಲಾಗಿದೆ ಎಂದು ಹೇಳಿದರು.

    2017 ಅಂದರೆ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಇಂದೋರ್ ದೇಶದಲ್ಲಿಯೇ ಸ್ವಚ್ಛನಗರ ಎಂದು ಕೇಂದ್ರ ಸರ್ಕಾರದ ಸ್ವಚ್ಛ ಸುರಕ್ಷನ್ ಸಮೀಕ್ಷೆ ಅಡಿ ತಿಳಿಸಲಾಗಿದೆ.

  • 19 ವರ್ಷದಿಂದ ಶೌಚಾಲಯದಲ್ಲೇ ಜೀವನ ನಡೆಸ್ತಿದ್ದಾರೆ 65ರ ವೃದ್ಧೆ

    19 ವರ್ಷದಿಂದ ಶೌಚಾಲಯದಲ್ಲೇ ಜೀವನ ನಡೆಸ್ತಿದ್ದಾರೆ 65ರ ವೃದ್ಧೆ

    – ಪಿಂಚಣಿಗಾಗಿ ಜಿಲ್ಲಾಧಿಕಾರಿ ಭೇಟಿಯಾದ್ರೂ ಪ್ರಯೋಜನವಿಲ್ಲ

    ಚೆನ್ನೈ: 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.

    ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ. ಆದರೆ ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜೀವನ ನಡೆಸಲು ನನಗೆ ಬೇರೆ ಆಧಾರವಿಲ್ಲ. ಹೀಗಾಗಿ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ.

    ಸಾರ್ವಜನಿಕ ಶೌಚಾಲಯವನ್ನು ಸ್ವಚ್ಛಗೊಳಿಸಿದರೆ ಪ್ರತಿದಿನ 70ರಿಂದ 80 ರೂ. ಸಿಗುತ್ತದೆ. ಅದರಿಂದಲೇ ಜೀವನ ನಡೆಸುತ್ತಿದ್ದೇನೆ. ನನಗೆ ಒಬ್ಬಳು ಮಗಳಿದ್ದಾಳೆ. ಆದರೆ ಇಲ್ಲಿಯವರೆಗೂ ಆಕೆ ನನ್ನ ಭೇಟಿಯಾಗಲು ಬಂದಿಲ್ಲ ಎಂದು ವೃದ್ಧೆ ತನ್ನ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

  • 9ರ ಬಾಲೆಯ ಮೇಲೆ ಅತ್ಯಾಚಾರ- ಕೊಲೆಗೈದು ದೇಹವನ್ನ ಶೌಚಾಲಯದಲ್ಲಿ ಎಸೆದ ಕಾಮಿ

    9ರ ಬಾಲೆಯ ಮೇಲೆ ಅತ್ಯಾಚಾರ- ಕೊಲೆಗೈದು ದೇಹವನ್ನ ಶೌಚಾಲಯದಲ್ಲಿ ಎಸೆದ ಕಾಮಿ

    ಮುಂಬೈ: ವ್ಯಕ್ತಿಯೊಬ್ಬ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ಅಮಾನವೀಯ ಘಟನೆ ಮುಂಬೈನ ವಿಲೆ ಪಾರ್ಲೆ ಪ್ರದೇಶದಲ್ಲಿ ನಡೆದಿದೆ.

    ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಮೃತ ದೇಹವು ಶನಿವಾರ ಬೆಳಗ್ಗೆ ವಿಲೆ ಪಾರ್ಲೆ ಪ್ರದೇಶದ ಶೌಚಾಲಯದಲ್ಲಿ ಪತ್ತೆಯಾಗಿದೆ. ಈ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಓದಿ: ಅಪ್ರಾಪ್ತ ಪುತ್ರಿ ಮೇಲೆಯೇ ಅತ್ಯಾಚಾರ ಎಸಗಿದ ಅಪ್ಪ

    ಕೊಲೆಯಾದ ಬಾಲಕಿಯು ವಿಲೆ ಪಾರ್ಲೆ ಪ್ರದೇಶದಲ್ಲಿರುವ ನೆಹರು ನಗರದ ಚಾಲ್ವಾ ನಿವಾಸಿ. ಬಾಲಕಿ ನಾಪತ್ತೆಯಾಗಿರುವ ಕುರಿತು ಗುರುವಾರ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶೌಚಾಲಯದಲ್ಲಿ ಪತ್ತೆಯಾದ ಬಾಲಕಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಜುಹು ಪೊಲೀಸ್ ಠಾಣೆಯ ಮುಂದೆ ನೂರಾರು ಜನರು ಸೇರಿದ್ದು, ಆರೋಪಿಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೆಲಹೊತ್ತು ಪೊಲೀಸ್ ಠಾಣೆಯ ಮುಂದೆ ನಿಂತು ಪ್ರತಿಭಟನೆ ಮಾಡಿದು.

    ಈ ಸಂಬಂಧ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಅತ್ಯಾಚಾರ), 201 (ಸಾಕ್ಷಿ ನಾಶ) ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

  • ಸಾರ್ವಜನಿಕ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳೆಯ ಶವ!

    ಸಾರ್ವಜನಿಕ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳೆಯ ಶವ!

    ನವದೆಹಲಿ: ಸಾರ್ವಜನಿಕ ಶೌಚಾಲಯದಲ್ಲಿ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.

    ದೆಹಲಿಯ ಗೋವಿಂದರಿ ನಗರದ ಮಾ ಆನಂದಮಯಿ ಮಾರ್ಗಕ್ಕೆ ಹತ್ತಿರವಿರುವ ಸಾರ್ವಜನಿಕ ಶೌಚಾಲಯವೊಂದರಲ್ಲಿ ಮಹಿಳೆಯವ ಶವ ಪತ್ತೆಯಾಗಿದೆ. ಮೃತಪಟ್ಟಿರುವ ಮಹಿಳೆ ಸ್ಥಳೀಯ ನಿವಾಸಿಯಾಗಿದ್ದು, ಮಂಗಳವಾರ ಮನೆಯಿಂದ ಹೊರ ಹೋಗಿದ್ದ ಮಹಿಳೆ ರಾತ್ರಿಯಾದರೂ ವಾಪಸ್ ಬರದಿದ್ದ ಕಾರಣಕ್ಕೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಮಹಿಳೆಯ ಮನೆ ಬಳಿಯೇ ಇದ್ದ ಸಾರ್ವಜನಿಕ ಶೌಚಾಲಯದಲ್ಲಿ ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ನೋಡಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

    ಕಳೆದ ಎರಡು ವರ್ಷದ ಹಿಂದೆ ಈ ಮಹಿಳೆಯ ವಿವಾಹವಾಗಿತ್ತು. ಆದರೆ ಪತಿ ಹಾಗೂ ಆತನ ಮನೆಯವರು ಮಹಿಳೆಗೆ ತವರಿಂದ ವರದಕ್ಷಿಣೆ ತರುವಂತೆ ಹಿಂಸೆ ನೀಡುತ್ತಿದ್ದರು. ಆದರಿಂದ ಒಮ್ಮೆ ಮಹಿಳೆ ಗಂಡನ ಮನೆ ಬಿಟ್ಟು, ತವರಿಗೆ ಕೂಡ ಬಂದಿದ್ದಳು. ಬಳಿಕ ಪತಿಯೇ ಆಕೆಯನ್ನು ಮನೆಗೆ ವಾಪಾಸ್ ಕರೆಕೊಂಡು ಹೋಗಿದ್ದ ಎಂದು ಮಹಿಳೆಯ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

    ಅಲ್ಲದೆ ಇದು ಆತ್ಮಹತ್ಯೆಯಲ್ಲ, ಕೊಲೆ. ಪತಿ ಹಾಗೂ ಆತನ ಮನೆಯವರು ಸೇರಿಕೊಂಡು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಎಂದು ಬಿಂಬಿಸಲು ಸಾರ್ವಜನಿಕ ಶೌಚಾಲಯದಲ್ಲಿ ಶವ ಇಟ್ಟುಬಂದಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

    ಮಹಿಳೆ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದ್ದು, ಈಗಾಗಲೇ ಮಹಿಳೆಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರಿಕ್ಷೆಗೆ ಕಳುಹಿಸಿದ್ದಾರೆ. ಹಾಗೆಯೇ ಆಕೆಯ ಮೊಬೈಲ್ ಕಾಲ್ ರೆಕಾರ್ಡ್ ಗಳನ್ನು ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.

  • ಸಾರ್ವಜನಿಕ ಶೌಚಾಲಯದಲ್ಲಿ ಮದುವೆಯಾದ ಯುವಕ-ಯುವತಿ

    ಸಾರ್ವಜನಿಕ ಶೌಚಾಲಯದಲ್ಲಿ ಮದುವೆಯಾದ ಯುವಕ-ಯುವತಿ

    ರಾಯ್ಪುರ: ಯುವ ಜೋಡಿಯೊಂದು ಸಾರ್ವಜನಿಕ ಶೌಚಾಲಯದಲ್ಲಿ ಮದುವೆ ಆಗಿರುವ ಘಟನೆ ಛತ್ತೀಸ್‍ಘಢ ರಾಜ್ಯದ ಬಿಸಲಾಪುರದಲ್ಲಿ ನಡೆದಿದೆ. ಸಾರ್ವಜನಿಕ ಶೌಚಾಲಯದಲ್ಲಿ ಮದುವೆ ಆಗುವ ಮೂಲಕ ಪ್ರತಿಯೊಬ್ಬರು ತಮ್ಮ ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂಬ ಸಂದೇಶವನ್ನು ನವಜೋಡಿ ನೀಡಿದೆ.

    ಶಬಾ ನವಾಜ್ ಮತ್ತು ಸರಫರಾಜ್ ಸಾರ್ವಜನಿಕ ಶೌಚಾಲಯದಲ್ಲಿ ಮದುವೆಯಾದ ಜೋಡಿ. 2017 ಮಾರ್ಚ್ ನಲ್ಲಿ ಶಬಾ ಮತ್ತು ಸರಫರಾಜ್ ಮದುವೆ ನಿರ್ಣಯವಾಗಿತ್ತು. ಆದ್ರೆ ಶಬಾ ಪತಿ ಮನೆಯಲ್ಲಿ ಶೌಚಾಲಯ ಕಟ್ಟಿಸಿದ್ರೆ ಮಾತ್ರ ಮದುವೆ ಆಗುತ್ತೇನೆ ಎಂದು ಷರತ್ತು ವಿಧಿಸಿದ್ದರು.

    ಸರಫರಾಜ್ 2017 ಮೇ ನಲ್ಲಿ ಸರ್ಕಾರಕ್ಕೆ ಶೌಚಾಲಯ ನಿರ್ಮಾಣಕ್ಕಾಗಿ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಬಳಿಕ ಸರ್ಕಾರದ ಸಹಾಯ ಧನದಿಂದ ಸರಫರಾಜ್ ಜೂನ್‍ನಲ್ಲಿಯೇ ಶೌಚಾಲಯ ನಿರ್ಮಿಸಿದ್ದರು.

    ಸರಫರಾಜ್ ಬಾವಿ ಪತ್ನಿಗಾಗಿ ಶೌಚಾಲಯ ನಿರ್ಮಿಸಿದ ವಿಷಯ ಶಬಾ ಪೋಷಕರಿಗೆ ತಿಳಿದಿದೆ. ಎರಡು ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಇಬ್ಬರೂ ಜನವರಿ 21 ರಂದು ಮದುವೆ ಆಗಿದ್ದಾರೆ. ಜನವರಿ 24ರಂದು ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ಶಬಾ ಮತ್ತು ಸರಫರಾಜ್ ಇಬ್ರೂ ಮತೊಮ್ಮೆ ನಗರದ ಸಾರ್ವಜನಿಕ ಶೌಚಾಲಯದಲ್ಲಿ ಮದುವೆ ಆಗಿದ್ದಾರೆ. ಪ್ರತಿ ಮನೆಯಲ್ಲಿ ಶೌಚಾಲಯವಿದ್ದರೆ ಯಾವುದೇ ರೋಗಗಳು ಬರುವುದಿಲ್ಲ. ಶೌಚಾಲಯ ನಿರ್ಮಾಣ ಮಾಡುವುದರಿಂದ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಪ್ರಕರಣಗಳು ಕಡಿಮೆ ಆಗಲಿವೆ ಎಂದು ನವದಂಪತಿ ಹೇಳಿದ್ದಾರೆ.