Tag: Public TV Education Expo

  • AIಯೇ ಅಂತಿಮ ಅಲ್ಲ: ಹೆಚ್‌.ಆರ್‌.ರಂಗನಾಥ್‌

    AIಯೇ ಅಂತಿಮ ಅಲ್ಲ: ಹೆಚ್‌.ಆರ್‌.ರಂಗನಾಥ್‌

    – ಭವಿಷ್ಯ ಇರುವುದು ವಿಶ್ವವಿದ್ಯಾಲಯಗಳಲ್ಲಿ

    ಬೆಂಗಳೂರು: ಎಐ ಬಂದಾಗ ಬಹಳಷ್ಟು ಜನ ಗಾಬರಿಯಲ್ಲಿದ್ದಾರೆ. ಗಾಬರಿ ಪಡದೇ ಅದಕ್ಕೆ ಹೊಂದಿಕೊಂಡು ಹೋಗುವುದನ್ನು ಕಲಿಯಬೇಕು ಎಂದು ‘ಪಬ್ಲಿಕ್‌ ಟಿವಿ’ಯ ಮುಖ್ಯಸ್ಥ ಹೆಚ್‌.ಆರ್‌.ರಂಗನಾಥ್‌ (H.R.Ranganath) ಹೇಳಿದರು.

    ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ‘ಪಬ್ಲಿಕ್‌ ಟಿವಿ’ ವಿದ್ಯಾಪೀಠ ಶೈಕ್ಷಣಿಕ ಮೇಳ (PublicTV Vidhyapeeta Education Expo) ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ರಾಜ್ಯ, ಜಿಲ್ಲೆಗಳಲ್ಲಿ ಸಣ್ಣ ಸಣ್ಣ ಪತ್ರಿಕೆಗಳು ಇದ್ದವು. ನಿಧಾನಕ್ಕೆ 4-6 ಪೇಜ್‌ನ ದೊಡ್ಡ ಪೇಪರ್‌ಗಳು ಕಾಲಿಟ್ಟವು. ಆಗ ಸಣ್ಣ ಪೇಪರ್‌ಗಳು ಸತ್ತವು ಎಂದುಕೊಂಡರು. ಪೇಪರ್‌ ಹೋದ್ಮೇಲೆ ರೇಡಿಯೋ ಬಂತು. ಆಗ ಪೇಪರ್‌ ಸತ್ತೋಗುತ್ತೆ ಅಂತ ಬಹಳಷ್ಟು ಜನ ಅಂದುಕೊಂಡರು. ಆದರೆ, ಪೇಪರ್‌ ಉಳಿದುಕೊಂಡಿತು. ರೇಡಿಯೋ ಕೂಡ ಉಳಿಯಿತು. ಆಮೇಲೆ ಟಿವಿ ಬಂತು. ಆಗ ರೇಡಿಯೋ ಸಾಯುತ್ತೆ ಎಂದಿದ್ದರು. ಈಗ ರೇಡಿಯೋ ಬದುಕಿದೆ. ಟಿವಿಯೂ ಇದೆ. ಇಂಟರ್ನೆಟ್‌ ಬಂದಾಗ ಟಿವಿ ಕಥೆ ಮುಗಿಯಿತು ಎಂಬ ಲೆಕ್ಕಾಚಾರ ಬಂತು. 4ಜಿ, 5ಜಿ ಇಂಟರ್ನೆಟ್‌ ಬಳಿ ಮೊಬೈಲ್‌ಗಳೇ ಟಿವಿಗಳಾದವು. ಆದರೆ, ಟಿವಿ, ಮೊಬೈಲ್‌ ಎಲ್ಲವೂ ಉಳಿದಿವೆ ಎಂದರು. ಇದನ್ನೂ ಓದಿ: ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

    ಕಂಪ್ಯೂಟರ್‌ ಬಂದಾಗ ನಿಮ್ಮ ಜರ್ನಲಿಸ್ಟ್‌ಗಳ ಕಥೆ ಮುಗಿಯಿತು ಅಂತ ಅನೇಕರು ನನಗೆ ಹೇಳಿದ್ದರು. ಮುಗಿದಿಲ್ಲ, ಕಂಪ್ಯೂಟರ್‌ಗಳು ಇವೆ. ನಾವು ಜರ್ನಲಿಸ್ಟ್‌ಗಳು ಇದ್ದೀವಿ. ಎಐ ಬಂದಾಗ ಬಹಳಷ್ಟು ಜನ ಗಾಬರಿಯಲ್ಲಿದ್ದಾರೆ. ಎಲ್ಲರೂ ಹೋಗಿಬಿಡುತ್ತಾರೆ ಎಂದುಕೊಂಡಿದ್ದಾರೆ. ಯಾರೂ ಎಲ್ಲೂ ಹೋಗಲ್ಲ. ಆದರೆ, ಬದಲಾಗುತ್ತದೆ. ಅದಕ್ಕೆ ನಾವು ಹೊಂದಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

    ಸ್ವರ್ಗ ಎಂದರೆ ಸಾಫ್ಟ್‌ವೇರ್‌ ಅನ್ನೋ ಲೆವೆಲ್‌ನಲ್ಲಿ ಇದ್ದೆವು. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ. ಸಾಫ್ಟ್‌ವೇರ್‌ ಮೀರಿಸಬಲ್ಲ ಶಿಕ್ಷಣ ಬಂದುಬಿಟ್ಟಿದೆ. ಅದನ್ನು ಮೀರಿಸಬಹುದಾಗಿ ಕೋರ್ಸ್‌ಗಳು ಬಂದುಬಿಟ್ಟಿವೆ. ಹಿಂದೆಲ್ಲ ಪೋಷಕರಿಗೆ ನಿಮ್ಮ ಮಗ ಏನು ಅಂತಾ ಪ್ರಶ್ನೆ ಕೇಳಿದರೆ, ಸಾಫ್ಟ್‌ವೇರ್‌ ಎಂಜಿನಿಯರ್‌ ಅನ್ನುತ್ತಿದ್ದರು. ಇನ್ನು ಸ್ವಲ್ಪ ದಿನ ಬಿಟ್ಟರೆ ನಮ್ಮ ಮಗ ಎಐ ಎಂಜಿಯಯರ್‌ ಅನ್ನಬಹುದು. ಆದರೆ, ಅದೇ ಅಂತಿಮ ಅಲ್ಲ. ಮಾನವ ಸಾಮರ್ಥ್ಯ ವಿಕಸನಗೊಂಡಿದೆ. ಮಾನವ ವಿಕಸನ ಆಗಿದ್ದೂ ಹೀಗೆ. ಎಐಗೆ ಹೆದರಿಕೊಂಡು ಪ್ರಪಂಚ ಮುಗಿದುಹೋಯಿತು ಎಂದುಕೊಳ್ಳಬೇಡಿ. ಹಾಗಾಗಲ್ಲ ಅನ್ನೋದು ನಮ್ಮ ಭಾವನೆ ಎಂದು ತಿಳಿಸಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

    ನಮ್ಮಲ್ಲಿ ಈಗಿನ ಖಾಸಗಿ ವಿವಿಗಳಲ್ಲಿ ಉನ್ನತ ಮಟ್ಟದ ಶಿಕ್ಷಣ ಇದೆ. ಅದನ್ನು ಹೆಚ್ಚಾಗಿ ಗುರುತಿಸುವ ಕೆಲಸ ಆಗಬೇಕು. ಆಗ ಹೊರದೇಶಗಳಿಗೆ ಉನ್ನತ ಶಿಕ್ಷಣಕ್ಕೆ ಹೋಗುವ ವಿದ್ಯಾರ್ಥಿಗಳನ್ನು ಆದಷ್ಟು ಕಡಿಮೆಯಾಗುವಂತೆ ನೋಡಿಕೊಳ್ಳಬಹುದು. ಅದನ್ನು ಅರ್ಥ ಮಾಡಿಕೊಳ್ಳಲು ಪೋಷಕರಿಗೆ ಇಂತಹ ಮೇಳಗಳು ಸಹಕಾರಿ ಎಂದರು.

    ಭಾರತದ ಭವಿಷ್ಯ ಇರುವುದು ವಿಶ್ವವಿದ್ಯಾಲಯಗಳಲ್ಲಿ. ಡಿಗ್ರಿ ಕಥೆ ಮುಗಿಯಿತು. ಇನ್ಮುಂದೆ ಸ್ನಾತಕೋತ್ತರ ಪದವಿ ಸ್ಟ್ಯಾಂಡರ್ಡ್‌. ಹಳೆ ಕಾಲದಲ್ಲಿ ಪೋಸ್ಟಲ್‌ ಡಿಪಾರ್ಟ್‌ಮೆಂಟ್‌ಗೆ ಸೇರಬೇಕು ಅಂದ್ರೆ ಎಸ್‌ಎಸ್‌ಎಲ್‌ಸಿ ಸಾಕಪ್ಪ ಎನ್ನುತ್ತಿದ್ದರು. ಬಳಿಕ ಪಿಯುಸಿ, ಡಿಗ್ರಿ ಆಯ್ತು. ಮುಂದೆ ಮಾಸ್ಟರ್ಸ್‌ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

    ಶಿಕ್ಷಣ ಬೆಳವಣಿಗೆ ಹಂತದಲ್ಲಿದೆ. ಎಲ್ಲರೂ ಬೆಳವಣಿಗೆ ಬಯಸುತ್ತಿದ್ದಾರೆ. ಭವಿಷ್ಯದಲ್ಲಿ ಶಿಕ್ಷಣಕ್ಕೆ ಏನಾಗುತ್ತೆ ಅನ್ನೋದರ ಬಗ್ಗೆ ಬಹಳಷ್ಟು ಚಿಂತೆ, ಮಾತುಗಳು ನಡೆಯುತ್ತಿವೆ ಎಂದು ತಿಳಿಸಿದರು.

  • ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

    ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

    – ಟೇಪ್‌ ಕಟ್‌ ಮಾಡಿ ಎಜುಕೇಷನ್‌ ಎಕ್ಸ್‌ಪೋಗೆ ಚಾಲನೆ ಕೊಟ್ಟ ಪಬ್ಲಿಕ್‌ ಟಿವಿ ಮುಖ್ಯಸ್ಥ ಹೆಚ್‌.ಆರ್‌.ರಂಗನಾಥ್‌
    – ಇಂದು, ನಾಳೆ ಅರಮನೆ ಮೈದಾನದಲ್ಲಿ ಇರಲಿದೆ ಶೈಕ್ಷಣಿಕ ಮೇಳ; ಬನ್ನಿ ಸದುಪಯೋಗಪಡಿಸಿಕೊಳ್ಳಿ

    ಬೆಂಗಳೂರು: ‘ಪಬ್ಲಿಕ್‌ ಟಿವಿ’ಯ ಅತಿದೊಡ್ಡ ಶೈಕ್ಷಣಿಕ ಮೇಳ (PublicTV Education Expo) ವಿದ್ಯಾಪೀಠ (Vidhyapeeta) 8ನೇ ಆವೃತ್ತಿಗೆ ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರ್‌ನಲ್ಲಿ ಶನಿವಾರ ಅದ್ದೂರಿ ಚಾಲನೆ ಸಿಕ್ಕಿತು.

    ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಟೇಪ್‌ ಕಟ್‌ ಮಾಡಿ ವಿದ್ಯಾಪೀಠ ಶೈಕ್ಷಣಿಕ ಮೇಳಕ್ಕೆ ಬೆಳಗ್ಗೆ 10:30ಕ್ಕೆ ಚಾಲನೆ ಕೊಟ್ಟರು. ಈ ವೇಳೆ ರೇವಾ ಯೂನಿವರ್ಸಿಟಿ ಚಾನ್ಸಲರ್‌ ಡಾ. ಪಿ.ಶ್ಯಾಮರಾಜ್‌, ಗಾರ್ಡನ್‌ ಸಿಟಿ ಯೂನಿವರ್ಸಿಟಿ ಚಾನ್ಸಲರ್‌ ಡಾ. ವಿ.ಜೆ.ಜೋಸೆಫ್‌, ಕೇಂಬ್ರಿಡ್ಜ್‌ ಶಿಕ್ಷಣ ಸಮೂಹ ಸಂಸ್ಥೆಯ ಚೇರ್ಮನ್‌ ಡಾ. ಡಿ.ಕೆ.ಮೋಹನ್‌, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸ್‌ನ ವೈಸ್‌ ಚಾನ್ಸಲರ್‌ ಡಾ. ಕುಲ್ದೀಪ್‌ ಕುಮಾರ್‌ ರೈನಾ ಸಾಥ್‌ ನೀಡಿದರು. ಇದನ್ನೂ ಓದಿ: ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

    ಬಳಿಕ ಗಣ್ಯರು ಮೇಳದಲ್ಲಿ ಪಾಲ್ಗೊಂಡಿರುವ ಸ್ಟಾಲ್‌ಗಳಿಗೆ ಭೇಟಿ ನೀಡಿ ಶುಭಹಾರೈಸಿದರು. ಗಾರ್ಡನ್‌ ಸಿಟಿ ಯೂನಿವರ್ಸಿಟಿ ವತಿಯಿಂದ ಹೆಚ್‌.ಆರ್‌.ರಂಗನಾಥ್‌ ಅವರಿಗೆ ಪುಷ್ಪ ಗುಚ್ಛ ನೀಡಿ ಅಭಿನಂದಿಸಲಾಯಿತು. ರೇವಾ ಯೂನಿವರ್ಸಿಟಿ ಚಾನ್ಸಲರ್‌ ಡಾ. ಪಿ.ಶ್ಯಾಮರಾಜ್‌ ಅವರು ಗಿಡ ನೀಡಿ ಗೌರವಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ

    ಬಳಿಕ ವೇದಿಕೆ ಕಾರ್ಯಕ್ರಮ ನಡೆಯಿತು. ಗಣ್ಯರು ದೀಪ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ವಿದ್ಯಾಪೀಠ 7 ಆವೃತ್ತಿಗಳ ಮಾಹಿತಿ ಒಳಗೊಂಡ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು. ಇದನ್ನೂ ಓದಿ: `ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

    ರಾಜ್ಯದ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳದಲ್ಲಿ ಪಾಲ್ಗೊ0ಡಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇದೆ. ಈ ಶೈಕ್ಷಣಿಕ ಮೇಳದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಕೆಸೆಟ್, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇಂದು ಮತ್ತು ನಾಳೆ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಶೈಕ್ಷಣಿಕ ಮೇಳ ನಡೆಯಲಿದೆ.

  • ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    – ಹಲವು ಕೋರ್ಸ್‌ಗಳ ಬಗ್ಗೆ ಮಾಹಿತಿ, ಗೊಂದಲಗಳಿಗೆ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು, ಪೋಷಕರು

    ಬೆಂಗಳೂರು: ʻಪಬ್ಲಿಕ್ ಟಿವಿʼ (Public TV) ಪ್ರಸ್ತುತ ಪಡಿಸುವ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಎರಡನೇ ದಿನವಾದ ಭಾನುವಾರವೂ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಮೇಳಕ್ಕೆ ಭೇಟಿ ನೀಡಿ, ಡಿಗ್ರಿ ನಂತರ ಮುಂದೇನು? ಅನ್ನೋ ಗೊಂದಲಗಳಿಗೆ ಸೂಕ್ತ ಪರಿಹಾರ ಕಂಡುಕೊಂಡಿದ್ದಾರೆ.

    ʻಪಬ್ಲಿಕ್ ಟಿವಿʼ ಪ್ರಸ್ತುತಪಡಿಸುವ 3ನೇ ಆವೃತ್ತಿಯ, ವಿದ್ಯಾಮಂದಿರ ಮೆಗಾ ಪಿಜಿ ಶೈಕ್ಷಣಿಕ ಮೇಳಕ್ಕೆ (Vidhya Mandira PG Education Expo) ಭಾನುವಾರ ಅದ್ಧೂರಿ ತೆರೆ ಬಿದ್ದಿದೆ. ಮೊದಲ ದಿನದ ಭರ್ಜರಿ ರೆಸ್ಪಾನ್ಸ್‌ನೊಂದಿಗೆ ಆರಂಭವಾದ ಶೈಕ್ಷಣಿಕ ಮೇಳದಲ್ಲಿ 2ನೇ ದಿನವೂ ಸಾವಿರಾರು ವಿದ್ಯಾರ್ಥಿಗಳು (Bengaluru Students) ಭಾಗಿಯಾಗಿದ್ದರು. ಡಿಗ್ರಿ ಬಳಿಕ ಮುಂದೇನು..? ಯಾವ ಕೋರ್ಸ್ ಭವಿಷ್ಯವನ್ನ ರೂಪಿಸುತ್ತೆ? ಅನ್ನೋ ಹಲವು ಗೊಂದಲಗಳಿಗೆ ಪೋಷಕರು, ವಿದ್ಯಾರ್ಥಿಗಳು ಪರಿಹಾರ ಕಂಡುಕೊಂಡರು. ತಮಗಿಷ್ಟದ ಕೋರ್ಸ್‌ಗಳ ಬಗ್ಗೆ ತಿಳಿದುಕೊಂಡು, ಉದ್ಯೋಗಾವಕಾಶಗಳ ಬಗ್ಗೆಯೂ ಮಾಹಿತಿ ಪಡೆದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

    ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆ ಮುಂಭಾಗದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಮೂರನೇ ಆವೃತ್ತಿಯ ಪಿಜಿ ಶೈಕ್ಷಣಿಕ ಮೇಳದಲ್ಲಿ 42ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗಿಯಾಗಿದ್ದವು. 2ನೇ ದಿನದ ಶೈಕ್ಷಣಿಕ ಮೇಳವು ಬೆಳಗ್ಗೆ 9 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆ ವೇಳೆಗೆ ಮುಕ್ತಾಯಗೊಂಡಿತು. ಭಾನುವಾರ ರಜಾದಿನದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು. ತಮಗೆ ಯಾವ ಕಾಲೇಜು ಸೂಕ್ತ? ಕೋರ್ಸ್, ಪ್ರವೇಶ ಶುಲ್ಕ ಹೇಗೆ? ಕೋರ್ಸ್ ಬಳಿಕ ಉದ್ಯೋಗಕಾವಕಾಶ ಹೇಗೆ? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪಡೆದರು. ಪೋಷಕರು ಸಹ ತಮ್ಮ ಮಕ್ಕಳಿಗೆ ಯಾವ ಶಿಕ್ಷಣ ಸಂಸ್ಥೆಗಳು ಸೂಕ್ತ? ಅನ್ನೋ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆ ಇನ್ಮುಂದೆ 24 ಗಂಟೆ ಓಪನ್

    ಅದೃಷ್ಟಶಾಲಿಗಳಿಗೆ ಲಕ್ಕಿ ಡಿಪ್‌:
    ಇದೇ ವೇಳೆ ಶೈಕ್ಷಣಿಕ ಮೇಳದಲ್ಲಿ ಭಾಗಿಯಾದ 14 ಅದೃಷ್ಟಶಾಲಿಗಳಿಗೆ ಲಕ್ಕಿ ಡಿಪ್ ಮೂಲಕ ಆಯ್ಕೆ ಮಾಡಿ ಚಿನ್ನದ ನಾಣ್ಯವಿರುವ ಗಿಫ್ಟ್‌ ಓಚರ್‌ಗಳನ್ನ ನೀಡಲಾಯಿತು. ಇ‌ನ್ನೂ ಮೇಳದಲ್ಲಿ ಭಾಗಿಯಾದ ಪೋಷಕರು ಕೂಡ ಮೇಳದ ಬಗ್ಗೆ ಸಂತಸ ಹಂಚಿಕೊಂಡರು. ಸಾಮಾನ್ಯವಾಗಿ ಡಿಗ್ರಿ ಬಳಿಕ ಸ್ನಾತಕೋತ್ತರ ಪದವಿಗಳಿಗೆ ಮಕ್ಕಳನ್ನ ಸೇರಿಸಲು ಹತ್ತಾರು ಕಾಲೇಜಗಳನ್ನ ಪೋಷಕರು ಸುತ್ತಬೇಕಾದ ಪರಿಸ್ಥಿತಿ ಇರ್ತಾ ಇತ್ತು. ಆದ್ರೆ ʻಪಬ್ಲಿಕ್ ಟಿವಿʼ ಈ ಕಷ್ಟವನ್ನ ತಪ್ಪಿಸಿ ಒಂದೇ ವೇದಿಕೆ ಅಡಿ ನೂರಾರು ಆಯ್ಕೆಗಳನ್ನ ನೀಡಿದೆ. ನಿಜಕ್ಕೂ ಇದು ಅದ್ಭುತ ಕಾರ್ಯಕ್ರಮ ಅಂತ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೌರಿ ಹಬ್ಬದಂದು ಮುಖ್ಯಮಂತ್ರಿಗಳಿಂದ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ – ಡಿಕೆಶಿ

    ಇನ್ನೂ ಎರಡು ದಿನಗಳ ಮೇಳದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಅನುಕೂಲವನ್ನ‌ ಪಡೆದುಕೊಂಡ್ರು. ಮೇಳದಲ್ಲಿ ಭಾಗಿಯಾದ ವಿದ್ಯಾಸಂಸ್ಥೆಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಇನ್ನೂ ಕಾರ್ಯಕ್ರಮದ ಆಯೋಜನೆ, ಜನರ ಪ್ರತಿಕ್ರಿಯೆಗೆ ಮೇಳದಲ್ಲಿ ಭಾಗಿಯಾದ ವಿದ್ಯಾಸಂಸ್ಥೆಗಳು ಕೂಡ ಹರ್ಷ ವ್ಯಕ್ತಪಡಿಸಿ, ಈ ರೀತಿಯ ಕಾರ್ಯಕ್ರಮ ಪೋಷಕರ ಒತ್ತಡ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನೂಕೂಲ ಆಗಲಿದೆ. ಕಾರ್ಯಕ್ರಮ ಆಯೋಜನೆ ಮಾಡಿದ ʻಪಬ್ಲಿಕ್ ಟಿವಿʼಗೆ ಧನ್ಯವಾದ ಅರ್ಪಿಸಿದರು.

    ಒಟ್ಟಾರೆ ಎರಡು ದಿನದ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಕಾರ್ಯಕ್ರಮದ ಮೂಲಕ ಸಾವಿರಾರು ಪೋಷಕರು,‌ ವಿದ್ಯಾರ್ಥಿಗಳ‌ ಭವಿಷ್ಯದ ಕನಸಿನ ಗಿಡಕ್ಕೆ ನೀರೆರೆಯುವ ಪ್ರಯತ್ನ ಮಾಡಿದೆ.

  • ಪಬ್ಲಿಕ್ ಟಿವಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳ – ಇಂದು ಕೊನೇ ದಿನ, ಬನ್ನಿ ಸದುಪಯೋಗಪಡಿಸಿಕೊಳ್ಳಿ..

    ಪಬ್ಲಿಕ್ ಟಿವಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳ – ಇಂದು ಕೊನೇ ದಿನ, ಬನ್ನಿ ಸದುಪಯೋಗಪಡಿಸಿಕೊಳ್ಳಿ..

    ಬೆಂಗಳೂರು: AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ‘ಪಬ್ಲಿಕ್‌ ಟಿವಿ’ (PUBLiC TV) ಪ್ರಸ್ತುತ ಪಡಿಸುತ್ತಿರುವ `ವಿದ್ಯಾಮಂದಿರ’ ಶೈಕ್ಷಣಿಕ ಮೇಳ (Vidhya Mandira Education Expo) 3ನೇ ಆವೃತ್ತಿಯು ಇಂದು (ಸೆ.1) ಮುಕ್ತಾಯಗೊಳ್ಳಲಿದೆ. ಆದ್ದರಿಂದ ಡಿಗ್ರಿ ಬಳಿಕ ಮುಂದೇನು ಎಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಸೂಕ್ತ ಪರಿಹಾರ ಕಂಡುಕೊಳ್ಳಲು ಇದು ಸೂಕ್ತ ಶೈಕ್ಷಣಿಕ ಮೇಳವಾಗಿದೆ.

    ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ರಾಜ್ಯದ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಪೋಷಕರು ಪದವಿ ನಂತರ ಮುಂದೇನು ಎನ್ನುವ ಗೊಂದಲಗಳಿಗೆ ಸೂಕ್ತ ಪರಿಹಾರ ಕಂಡುಕೊಂಡಿದ್ದಾರೆ. ಇಂದು ಕೊನೆಯ ದಿನವಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

    ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳ ನಡೆಯುತ್ತಿದೆ. ಭಾನುವಾರವಾದ ಇಂದು ಸಹ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಜುಕೇಷನ್‌ ಎಕ್ಸ್‌ಪೋ ನಡೆಯಲಿದ್ದು, ಉಚಿತ ಪ್ರವೇಶ ಇರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಡಿಗ್ರಿ ಕೋರ್ಸ್ ಬಳಿಕ ಮುಂದೇನು ಎಂಬ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲಗಳಿಗೆ ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಎಜುಕೇಶನ್ ಎಕ್ಸ್‌ಪೋದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

    42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗಿ:
    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಲಕ್ಕಿ ಡಿಪ್‌ ಉಡುಗೊರೆ ಪಡೆಯಿರಿ
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡಿಪ್‌ ಮೂಲಕ ಪ್ರತಿ ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

    ಪ್ಲಾಟಿನಂ ಪ್ರಾಯೋಜಕರು:
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ.

    ಸಿಲ್ವರ್‌ ಪ್ರಾಯೋಜಕರು:
    AIMS ಇನ್‌ಸ್ಟಿಟ್ಯೂಟ್ಸ್‌, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್.

    ಸ್ಟಾಲ್‌ ಪಾಲುದಾರರು:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ, BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್).

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    (ಕೊನೇ ದಿನ) ದಿನಾಂಕ: ಸೆಪ್ಟೆಂಬರ್‌ 1
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

  • ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

    ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

    – ಎಜುಕೇಶನ್‌ ಎಕ್ಸ್‌ಪೋದಲ್ಲಿ ಪಿಜಿ ಕಾಲೇಜು, ಕೋರ್ಸ್‌ಗಳ ಬಗ್ಗೆ ಮಾಹಿತಿ
    – ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ರಿಂದ ಕಾರ್ಯಕ್ರಮಕ್ಕೆ ಚಾಲನೆ
    – ರೇವಾ ವಿವಿ ಕುಲಪತಿ ಶ್ಯಾಮರಾಜು, ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಮುಖ್ಯ ಅತಿಥಿಗಳಾಗಿ ಭಾಗಿ

    ಬೆಂಗಳೂರು: ‘ಪಬ್ಲಿಕ್‌ ಟಿವಿ’ (PUBLiC TV) ಪ್ರಸ್ತುತ ಪಡಿಸುತ್ತಿರುವ AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ವಿದ್ಯಾಮಂದಿರ ಎಜುಕೇಷನ್‌ ಎಕ್ಸ್‌ಪೋ (Vidhya Mandira Education Expo) 3ನೇ ಆವೃತ್ತಿಗೆ ಇಂದು (ಶನಿವಾರ) ಚಾಲನೆ ದೊರೆಯಲಿದೆ.

    ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳ ನಡೆಯಲಿದ್ದು, ಇಂದು ಬೆಳಗ್ಗೆ 10:30 ಕ್ಕೆ ಕಾರ್ಯಕ್ರಮಕ್ಕೆ ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಶ್ಯಾಮರಾಜು ಹಾಗೂ ಮಾಜಿ ಡಿಸಿಎಂ ಮತ್ತು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ (C.N.Ashwath Narayan) ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ನಾಳೆ ಚಾಲನೆ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಎಜುಕೇಷನ್‌ ಎಕ್ಸ್‌ಪೋ ನಡೆಯಲಿದ್ದು, ಉಚಿತ ಪ್ರವೇಶ ಇರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬಹುದು.

    ಡಿಗ್ರಿ ಕೋರ್ಸ್ ಬಳಿಕ ಮುಂದೇನು ಎಂಬ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲಗಳಿಗೆ ಪಬ್ಲಿಕ್ ಟಿವಿ ವಿದ್ಯಾಮಂದಿರ ಎಜುಕೇಶನ್ ಎಕ್ಸ್‌ಪೋ ಪರಿಹಾರ ನೀಡಲಿದೆ. ಇದನ್ನೂ ಓದಿ: ಡಿಗ್ರಿ ಬಳಿಕ ಮುಂದೇನು? – ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಬನ್ನಿ

    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಉಡುಗೊರೆ ಪಡೆಯಿರಿ
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

    ಪ್ಲಾಟಿನಂ ಪ್ರಾಯೋಜಕರು:
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್‌ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ.

    ಸಿಲ್ವರ್‌ ಪ್ರಾಯೋಜಕರು:
    AIMS ಇನ್‌ಸ್ಟಿಟ್ಯೂಟ್ಸ್‌, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು,
    ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪ್ರೆಸಿಡೆನ್ಸಿ ಯೂನಿವರ್ಸಿಟಿ,

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್.

    ಸ್ಟಾಲ್‌ ಪಾರ್ಟ್‌ನರ್‌:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ, BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್).

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    ದಿನಾಂಕ: ಆಗಸ್ಟ್‌ 31, ಸೆಪ್ಟೆಂಬರ್‌ 1
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ