Tag: Public TVb

  • 100 ಟನ್, 20 ಅಡಿ ಉದ್ದದ ರೇಣುಕಾಚಾರ್ಯರ ಪ್ರತಿಮೆಯ ಶಿಲೆ 100 ಚಕ್ರದ ಲಾರಿಯಲ್ಲಿ ರಂಭಾಪುರಿ ಮಠಕ್ಕೆ ಆಗಮನ

    100 ಟನ್, 20 ಅಡಿ ಉದ್ದದ ರೇಣುಕಾಚಾರ್ಯರ ಪ್ರತಿಮೆಯ ಶಿಲೆ 100 ಚಕ್ರದ ಲಾರಿಯಲ್ಲಿ ರಂಭಾಪುರಿ ಮಠಕ್ಕೆ ಆಗಮನ

    ಚಿಕ್ಕಮಗಳೂರು: 100 ಟನ್ ತೂಕವುಳ್ಳ 20 ಅಡಿ ಉದ್ದವಿರುವ ಬೃಹತ್ ಶಿಲೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಆವರಣ ತಲುಪಿದೆ.

    ಪಂಚಪೀಠಗಳಲ್ಲೇ ಮೊದಲ ಪೀಠವಾಗಿರುವ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಪ್ರತಿಮೆ ನಿರ್ಮಾಣಗೊಳ್ಳುತ್ತಿದೆ. ಈ ಪ್ರತಿಮೆ ನಿರ್ಮಾಣಕ್ಕೆ ಆಂಧ್ರಪ್ರದೇಶದ ಮಡಕಶಿರಾ ಕಲ್ಲು ಕ್ವಾರಿಯಿಂದ ಬಹೃತ್ ಶಿಲೆ ಮಠದ ಆವರಣಕ್ಕೆ ಆಗಮಿಸಿದೆ. ಸೆಪ್ಟೆಂಬರ್ 10 ರಂದು ಆಂಧ್ರಪ್ರದೇಶದ ಮಡಕಶಿರಾದಿಂದ 100 ಚಕ್ರದ ಲಾರಿಯಲ್ಲಿ ಹೊರಟ ಈ ಶಿಲೆ ಐದು ದಿನಗಳ ಬಳಿಕ ಮಠಕ್ಕೆ ಆಗಮಿಸಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಮೆಗಾ ಶೈಕ್ಷಣಿಕ ಉತ್ಸವ ವಿದ್ಯಾಪೀಠಕ್ಕೆ ನಾಳೆ ಚಾಲನೆ

    ಒಟ್ಟು 350 ಕಿ.ಮೀ. ದೂರದ ಆಂಧ್ರಪ್ರದೇಶದ ಮಡಕಶಿರಾದಿಂದ ಬಾಳೆಹೊನ್ನೂರಿಗೆ ಕಲ್ಲನ್ನು ತರಲಾಗಿದೆ. ಇದರ ತೂಕ ಸುಮಾರು 100 ಟನ್ ಇದ್ದು, 20 ಅಡಿ ಉದ್ದವಿದೆ. ಸಾಗಾಣೆ ಕಾರ್ಯದಲ್ಲಿ 12 ಕಾರ್ಮಿಕರು ತೊಡಗಿದ್ದಾರೆ ಎಂದು ಕಲ್ಲು ಸಾಗಾಟದ ಜವಾಬ್ದಾರಿ ಹೊತ್ತಿದ್ದ ಬೆಂಗಳೂರು ಮೂಲದ ಶ್ರೀಧರಬಾಬು ತಿಳಿಸಿದ್ದಾರೆ.

    ಆಂಧ್ರದ ಮಡಕಶಿರಾದಿಂದ ಹೊರಟ ಕಲ್ಲು ಐದು ದಿನಗಳ ನಿರಂತರ ಪ್ರಯಾಣದ ವೇಳೆ ಪಾವಗಡ, ಮಧುಗಿರಿ, ತುಮಕೂರು, ತಿಪಟೂರು, ಶಿವಮೊಗ್ಗ, ಎನ್.ಆರ್.ಪುರ ಮಾರ್ಗವಾಗಿ ಬಂದು ಬಾಳೆಹೊನ್ನೂರು ತಲುಪಿದೆ. ಶಿಲಾಮೂರ್ತಿ ನಿರ್ಮಾಣಕ್ಕೆ ಬೇಕಾಗಿರುವ ಇನ್ನೂ ಎರಡೂ ಶಿಲೆಗಳು ಶೀಘ್ರವೇ ಮಠಕ್ಕೆ ಬರಲಿವೆ. ಯಂತ್ರಗಳ ಬಳಕೆಯಿಂದ ಕಲ್ಲನ್ನು ಅನ್ ಲೋಡ್ ಮಾಡಲು ಮುಂದಾಗುವುದರಿಂದ ಕಲ್ಲಿಗೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ 16 ಕಾರ್ಮಿಕರು ಬಳಸಿ ಲಾರಿಯಿಂದ ಅನ್ ಲೋಡ್ ಮಾಡಲಾಗುವುದು ಎಂದು ಶ್ರೀಧರಬಾಬು ಮಾಹಿತಿ ನೀಡಿದ್ದಾರೆ.

    ಬರೋಬ್ಬರಿ 100 ಚಕ್ರದ ಲಾರಿಯಲ್ಲಿ 100 ಟನ್ ತೂಕದ 20 ಅಡಿ ಉದ್ದದ ಈ ಶಿಲೆ ಐದು ದಿನಗಳ ನಿರಂತರ ಪ್ರಯಾಣದಿಂದ ಬಂದಿದ್ದು, ಈ ಶಿಲೆಯನ್ನು ನೋಡಲು ಜನ ಕೂಡ ದೇವಾಲದಯದ ಆವರಣದಲ್ಲಿ ಜಮಾಯಿಸಿದರು. ರಂಭಾಪುರಿ ಮಠದ ಆವರಣದಲ್ಲಿ 8 ಕೋಟಿಗೂ ಅಧಿಕ ವೆಚ್ಚದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಮೂರ್ತಿ ನಿರ್ಮಾಣಗೊಳ್ಳಲಿದೆ.

  • ಕೋವಿಡ್ ಕರ್ಫ್ಯೂ ವಿಸ್ತರಿಸಿದ ಉತ್ತರಾಖಂಡ್ – ಮದ್ವೆಯಲ್ಲಿ ಭಾಗಿಯಾಗಲು ರಿಪೋರ್ಟ್ ಕಡ್ಡಾಯ

    ಕೋವಿಡ್ ಕರ್ಫ್ಯೂ ವಿಸ್ತರಿಸಿದ ಉತ್ತರಾಖಂಡ್ – ಮದ್ವೆಯಲ್ಲಿ ಭಾಗಿಯಾಗಲು ರಿಪೋರ್ಟ್ ಕಡ್ಡಾಯ

    ದೆಹ್ರಾಡೂನ್: ಉತ್ತರಾಖಂಡ್ ಸರ್ಕಾರ ರಾಜ್ಯದಲ್ಲಿ ಕೊರೊನಾ ಕರ್ಫ್ಯೂವನ್ನು ಸೋಮವಾರದಿಂದ ವಿಸ್ತರಿಸಿದ್ದು, ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳವವರಿಗೆ ಕೋವಿಡ್-19 ನೆಗೆಟಿವ್ ವರದಿಯನ್ನು ತರಲು ಕಡ್ಡಾಯಗೊಳಿಸಿದೆ.

    ಮೇ 18ರ ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಬೇಕಿದ್ದ ಕೋವಿಡ್-19 ಕರ್ಫ್ಯೂ ಮೇ 25ರ ಬೆಳಗ್ಗೆ 6 ಗಂಟೆಯವರೆಗೂ ವಿಸ್ತರಿಸಲಾಗಿದೆ ಎಂದು ಕ್ಯಾಬಿನೆಟ್ ಸಚಿವರು ಮತ್ತು ರಾಜ್ಯ ಸರ್ಕಾರದ ಅಧಿಕೃತ ವಕ್ತಾರ ಸುಬೋಧ್ ಯುನಿಯಲ್ ತಿಳಿಸಿದ್ದಾರೆ.

    ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಜನರು ತಮ್ಮ ಕೋವಿಡ್-19 ನೆಗೆಟಿವ್ ಪರೀಕ್ಷಾ ವರದಿಯನ್ನು ತೆಗೆದುಕೊಂಡು ಬರಬೇಕು. ಅದು 72 ಗಂಟೆಗಳಿಗಿಂತ ಒಳಗಿನದ್ದಾಗಿರಬೇಕು ಹಾಗೂ ಮದುವೆ ಸಮಾರಂಭಗಳಿಗೆ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 20 ಮಂದಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಅಲ್ಲದೇ ಶವಸಂಸ್ಕಾರಕ್ಕೆ ಹೋಗುವವರಿಗೆ ಆಡಳಿತವು ಕರ್ಫ್ಯೂ ಪಾಸ್ ನೀಡುವುದು ಅಗತ್ಯವಾಗಿದೆ. ಒಟ್ಟಾರೆ ಕೊರೊನಾ ಸೋಂಕನ್ನು ತಡೆಗಟ್ಟಲು ಕರ್ಫ್ಯೂ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

  • ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್

    ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್

    ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮೊದಲ ಹಂತದ ಕೊರೊನಾ ಲಸಿಕೆಯನ್ನು ಮನೆಯಲ್ಲಿಯೇ ಪಡೆದುಕೊಂಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಇದೀಗ ಎಚ್ಚೆತ್ತು ಬಿ.ಸಿ.ಪಾಟೀಲ್ ಎರಡನೇ ಹಂತದ ಲಸಿಕೆಯನ್ನು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ.

    ಮಾರ್ಚ್ 2 ರಂದು ಮೊದಲನೇ ಹಂತದ ಲಸಿಕೆಯನ್ನು ಬಿ.ಸಿ.ಪಾಟೀಲ್ ಹಾಗೂ ಪತ್ನಿ ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಮನೆಯಲ್ಲಿಯೇ ವ್ಯಾಕ್ಸಿನ್ ನೀಡಿದ ತಾಲೂಕು ಆರೋಗ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ನೋಟೀಸ್ ನೀಡಿದ ಆರೋಗ್ಯ ಇಲಾಖೆ, ಈಗ ವೈದ್ಯಾಧಿಕಾರಿ ಡಾ.ಝಡ್. ಆರ್. ಮಕಾಂದಾರ್ ಅಮಾನತು ಮಾಡಿ ಆದೇಶ ನೀಡಿದೆ.

     

    ಇಂದು ಹಿರೇಕೆರೂರಿನ ಸರ್ಕಾರಿ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆಯನ್ನು ಪಡೆದೆನು.

    45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕೊರೊನಾ…

    Posted by B.C.Patil on Friday, April 2, 2021

    ವಿವಾದದ ನಂತರ ಆಸ್ಪತ್ರೆಗೆ ಹೋಗಿ ಆಸ್ಪತ್ರೆಯಲ್ಲಿ ಎರಡನೇ ಹಂತದ ಲಸಿಕೆಯನ್ನು ಸಚಿವ ಬಿ.ಸಿ. ಪಾಟೀಲ್ ಹಾಕಿಸಿಕೊಂಡಿದ್ದಾರೆ. ಎರಡನೇ ಹಂತದ ಲಸಿಕೆ ಹಾಕಿಸಿಕೊಂಡದ್ದನ್ನು ಫೇಸ್ ಬುಕ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಸ್ವಯಂ ಪ್ರೇರಿತವಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಿ, ಲಸಿಕೆ ಪಡೆದುಕೊಂಡು ಕೊರೊನಾ ಸೋಂಕಿನಿಂದ ದೂರವಿರಿ ಎಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.