Tag: publictv

  • ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್

    ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್

    ಮುಂಬೈ: ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆನನ್ನು ಪೊಲೀಸರು ಬಂಧಿಸಿದ್ದಾರೆ.

    ಪೂನಂ ಪಾಂಡೆ ಅವರ ತಲೆ, ಕಣ್ಣು ಮತ್ತು ಮುಖದ ಮೇಲೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಯಾಮ್ ಬಾಂಬೆ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

    ಈ ಹಿಂದೆ ಪತಿ, ನಿರ್ಮಾಪಕ ಸ್ಯಾಮ್ ಬಾಂಬೆ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿ ನಟಿ ಜೈಲಿಗಟ್ಟಿದ್ದರು. ಇದೀಗ ಜೈಲಿನಿಂದ ಹೊರಬರುತ್ತಿದ್ದಂತೆಯೇ ಪೂನಂ ಮೇಲೆ ಮತ್ತೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

    2020ರ ಸೆಪ್ಟೆಂಬರ್ 11ರಂದು ಪೂನಂ ಪಾಂಡೆ ತನ್ನ ಗೆಳೆಯ ಸ್ಯಾಮ್ ಬಾಂಬೆ ಅವರನ್ನು ವಿವಾಹವಾಗಿದ್ದರು. ಮದುವೆಯಾಗಿ ಎರಡು ವಾರದಲ್ಲೇ ನನಗೆ ಕಿರುಕುಳ ನೀಡುತ್ತಿದ್ದಾನೆ, ಹಲ್ಲೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ನಟಿ ಪತಿ ವಿರುದ್ಧ ಗೋವಾದಲ್ಲಿ ದೂರು ನೀಡಿದ್ದರು. ಇದನ್ನೂ ಓದಿ: ಕಮಲಾ ನೆಹರು ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ನಾಲ್ವರು ಮಕ್ಕಳ ದಾರುಣ ಸಾವು

    ನಟಿ ಗೋವಾದ ಕೆನಕೋನಾದಲ್ಲಿ ಚಿತ್ರೀಕರಣದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಸ್ಯಾಮ್ ಬಾಂಬೆ, ಪಾಂಡೆ ಮೇಲೆ ಹಲ್ಲೆ ಮಾಡಿ, ದೈಹಿಕ ಕಿರುಕುಳ ನೀಡಿ ಬೆದರಿಕೆ ಹಾಕಿರುವುದಾಗಿ ಪೂನಂ ಕೆನಕೋನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಪೂನಂ ಪತಿ ಸ್ಯಾಮ್ ಬಾಂಬೆಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಹೀಗೆ ಬಂಧಿತನಾಗಿದ್ದ ಸ್ಯಾಮ್ ಹೈಕೋರ್ಟಿನಿಂದ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಮತ್ತೆ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

    ಈ ಬಾರಿ ಆತ ಕೆಟ್ಟದಾಗಿ ಹೊಡೆದಿದ್ದಾನೆ. ಪ್ರತಿ ಬಾರಿ ಅವನು ನನ್ನನ್ನು ಹೊಡೆದು ನಂತರ ಕ್ಷಮಿಸಿ ಎಂದು ಅಳಲು ಪ್ರಾರಂಭಿಸುತ್ತಾನೆ. ಈ ಬಾರಿಯೂ ಸ್ಯಾಮ್ ಅದೇ ರೀತಿ ಮಾಡಿದ್ದಾನೆ. ಇನ್ಮುಂದೆ ಹೀಗಾಗುವುದಿಲ್ಲ ಎಂದು ಭರವಸೆ ನೀಡಿದ. ಆದರೆ ಮತ್ತೆ ಅವರು ಹೀಗೆ ಮಾಡುತ್ತಾನೆ. ಅವನಿಂದಾಗಿ ನನಗೆ ಮೆದುಳಿನ ರಕ್ತಸ್ರಾವವಾಗಿದೆ ಎಂದು ಪೂನಂ ಹೇಳಿದ್ದಾರೆ.

  • ಅಪ್ಪುನಂತ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ: ಶಿವಣ್ಣ ಭಾವುಕ

    ಅಪ್ಪುನಂತ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ: ಶಿವಣ್ಣ ಭಾವುಕ

    – ಅಪ್ಪು ಸಮಾಜ ಸೇವೆಯಲ್ಲಿ ತೊಡಿಗಿದ್ದು ನನಗೆ ಗೊತ್ತಿರಲಿಲ್ಲ
    – ಯಾರೂ ಆತುರಪಡಬೇಡಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಸ್ಮರಣಾರ್ಥಕವಾಗಿ ಅನ್ನಸಂತರ್ಪಣೆಯನ್ನು ಅರಮನೆ ಮೈದಾನದಲ್ಲಿ ಮಾಡಲಾಗುತ್ತಿದೆ. ಲಕ್ಷಾಂತರ ಅಭಿಮಾನಿಗಳು ಅನ್ನಸಂತರ್ಪಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಶಿವರಾಜ್‍ಕುಮಾರ್ ಅವರು ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಷಾರಾಗಿ ಊಟ ಮಾಡಿ ಮನೆಗೆ ಹೋಗಿ. ಯಾರೂ ಆತುರಪಡಬೇಡಿ. ನಿಮ್ಮ ಆಶೀರ್ವಾದ ಪ್ರೀತಿ ಬೇಕು ನಮಗೆ. ಅಪ್ಪು ಹೆಸರಿನಲ್ಲಿ ಒಳ್ಳೆಯ ಕೆಲವನ್ನು ಮಾಡಿ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅಭಿಮಾನಿಗಳಿಗೆ ಕೈ ಮುಗಿದು ಶಿವರಾಜ್‍ಕುಮಾರ್ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಆತ್ಮದ ಜೊತೆ ಮಾತಾಡಿದ್ದಾಗಿ ವೀಡಿಯೋ ಅಪ್ಲೋಡ್- ಚಾರ್ಲಿಗೆ ಅಭಿಮಾನಿಗಳು ಕ್ಲಾಸ್

    ಅಪ್ಪು ಆಸೆ ನೆರವೇರುತ್ತಿದೆ. ಹೀಗೆ ಅವನ ಆಸೆ ನೆರವೇರಬೇಕು ಎಂದು ದೇವರ ಇಚ್ಛೆ ಇತ್ತು ಅನ್ನಿಸುತ್ತಿದೆ. ಅಭಿಮಾನಿಗಳಿಂದ ನಾವು ಈ ಸ್ಥಾನದಲ್ಲಿ ಇದ್ದೇವೆ. ಅವರಿಂದ ಪಡೆದಿದ್ದನ್ನು ಅವರಿಗೆ ಕೊಡುತ್ತಿದ್ದೇವೆ. ಅಪ್ಪು ಸಮಾಜ ಸೇವೆ ಕಾರ್ಯಗಳಲ್ಲಿ ತೊಡಿದ್ದು, ನನಗೆ ಗೊತ್ತಿರಲಿಲ್ಲ. ನಾವು ಇಂಥಹ ವಿಚಾರಗಳನ್ನು ಮಾತನಾಡುತ್ತಿರಲಿಲ್ಲ. ಕುಟುಂಬದ ಸದಸ್ಯರಿಗೆ ಈ ವಿಚಾರ ಗೊತ್ತಿಲ್ಲ ಎಂದರೆ ಅಪ್ಪು ಈ ವಿಚಾರವಾನ್ನು ಎಷ್ಟು ಸಿಕ್ರೇಟ್ ಆಗಿ ಇಟ್ಟಿರಬೇಕು ಎಂದು ತಿಳಿಯುತ್ತದೆ. ನನಗೆ ಹೆಮ್ಮೆ ಆಗುತ್ತದೆ. ಅಪ್ಪುನಂತ ತಮ್ಮನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್

    ಎಡಗೈಯಲ್ಲಿ ಮಾಡುವ ಸಹಾಯ ಬಲಗೈಗೆ ಗೊತ್ತಾಗಬಾರದು ಎಂದು ಅಪ್ಪಾಜಿ ಹೇಳುತ್ತಿದ್ದರು. ನಾವು ಅದನ್ನು ಫಾಲೋ ಮಾಡುತ್ತಿದ್ದೇವೆ. ಸಮಾಧಾನವಾಗಿ ಅನ್ನಸಂತರ್ಪಣೆಯಲ್ಲಿ ಭಾಗಿಯಾಗಿ, ಮಾಡುವ ಕಾರ್ಯ ಯಾವುದು ಎಂದು ಮನೆಗ ತಿಳಿದಿದೆ. ಪ್ರತಿಯೊಬ್ಬ ಅಭಿಮಾನಿಗಳಿಗೂ ವ್ಯವಸ್ಥೆ ಮಾಡಲಾಗಿದೆ. ನಮ್ಮ ಕೈಲಾದಷ್ಟು ಅನ್ನಸಂತರ್ಪಣೆ ಮಾಡುತ್ತಿದ್ದೇವೆ. ಎಂದು ಹೇಳಿದ್ದಾರೆ.

  • ‘ಟಾಮ್ ಅಂಡ್ ಜೆರ್ರಿ’ ಟ್ರೇಲರ್‌ಗೆ ಸಿಕ್ತು ಒಂದು ಮಿಲಿಯನ್‍ಗೂ ಹೆಚ್ಚಿನ ಜನರ ಪ್ರೀತಿ

    ‘ಟಾಮ್ ಅಂಡ್ ಜೆರ್ರಿ’ ಟ್ರೇಲರ್‌ಗೆ ಸಿಕ್ತು ಒಂದು ಮಿಲಿಯನ್‍ಗೂ ಹೆಚ್ಚಿನ ಜನರ ಪ್ರೀತಿ

    `ಹಾಯಾಗಿದೆ ಎದೆಯೊಳಗೆ’ ಎಂಬ ಹಾಡಿನ ಮೂಲಕವೇ ಚಿತ್ರರಸಿಕರಿಗೆ ಸಿನಿಮಾದ ಆಮಂತ್ರಣ ನೀಡಿ ಭರವಸೆಯ ಅಚ್ಚೊತ್ತಿದ್ದ ಚಿತ್ರತಂಡ ಟಾಮ್ ಅಂಡ್ ಜೆರ್ರಿ. ಹಾಡುಗಳ ಮೂಲಕವೇ ಮೋಡಿ ಮಾಡಿ ಈಗ ಮತ್ತಷ್ಟು ಅಚ್ಚರಿ ಹೊತ್ತ ಟ್ರೇಲರ್ ಬಿಡುಗಡೆ ಮಾಡಿ ಮಗದಷ್ಟು ನಿರೀಕ್ಷೆ ಹೆಚ್ಚಿಸಿದೆ. ಟ್ರೇಲರ್ ಕಂಡ ಪ್ರೇಕ್ಷಕರ ಮನದಲ್ಲೀಗ ಒಂದೇ ಆಸೆ ಅದು ಸಿನಿಮಾ ಕಣ್ತುಂಬಿಕೊಳ್ಳಲೇಬೇಕೆಂದು.

    ರಾಘವ್ ವಿನಯ್ ಶಿವಗಂಗೆ ಮೊದಲ ಬಾರಿ ನಿರ್ದೇಶಕನಾಗಿ ಬಡ್ತಿ ಹೊಂದಿರುವ ಸಿನಿಮಾ ಟಾಮ್ ಅಂಡ್ ಜೆರ್ರಿ. ಚಿತ್ರದ ಎರಡು ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ಸಿನಿಮಾ ನೋಡುವ ಬಯಕೆ ಸೃಷ್ಟಿಸಿದ್ದ ಈ ಚಿತ್ರತಂಡವೀಗ ಭರವಸೆಯ ಹಾಗೂ ಫ್ರೆಶ್ ಎನಿಸುವ ಟ್ರೇಲರ್ ತುಣುಕನ್ನು ಬಿಡುಗಡೆ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಏನೋ ಹೊತನವಿದೆ, ಚಿತ್ರತಂಡ ಹೊಸತೇನೋ ಪ್ರಯತ್ನ ಪಟ್ಟಿದೆ ಎಂಬುದನ್ನು ಟ್ರೇಲರ್ ನೋಡಿದ ಮೊದಲ ಬಾರಿಗೆ ಅನ್ನಿಸದೇ ಇರದು. ಅದಕ್ಕೆ ಸಾಕ್ಷಿ ಎನ್ನುವಂತೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ಗೂ ಅಧಿಕ ವೀವ್ಸ್ ಪಡೆದುಕೊಂಡಿದೆ. ಅಷ್ಟೇ ಅಲ್ಲ ಕಮೆಂಟ್ ಸೆಕ್ಷನ್ ನಲ್ಲಿ ಚಿತ್ರದ ಮೇಕಿಂಗ್, ಹೊಸತನದ ಬಗ್ಗೆ ಮೆಚ್ಚುಗೆ ಮಾತುಗಳು ಕೇಳಿ ಬರ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಟ್ರೇಲರ್ ತುಣುಕಿನಲ್ಲಿರುವ ಡೈಲಾಗ್? ಗಳು ಸಖತ್ ವೈರಲ್ ಆಗುತ್ತಿವೆ, ಮೆಚ್ಚುಗೆ ಗಳಿಸಿಕೊಳ್ಳುತ್ತಿವೆ. ಟಾಮ್ ಅಂಡ್ ಜೆರ್ರಿಯಂತೆ ಕಿತ್ತಾಡೋ ಸ್ನೇಹಿತರ ತರಲೆ ತುಂಟಾಟ ಒಂದು ಕಡೆಯಾದ್ರೆ, ಬದುಕಿನ ಬಗ್ಗೆ ಸ್ವಾರಸ್ಯಕರವಾದ ಸತ್ಯಾಸತ್ಯತೆಯನ್ನೇನೋ ಹೇಳ ಹೊರಟಿದೆ ಎನ್ನುವುದರ ಸುಳಿವನ್ನೂ ಟ್ರೇಲರ್ ನೀಡಿದೆ. ಒಟ್ಟಿನಲ್ಲಿ, ಟಾಮ್ ಅಂಡ್ ಜೆರ್ರಿ ಟ್ರೇಲರ್ ಹೊಸ ಬಝ್ ಕ್ರಿಯೇಟ್ ಮಾಡಿರೋದಂತೂ ಸುಳ್ಳಲ್ಲ.

    ನವೆಂಬರ್ 12ಕ್ಕೆ ಬಿಡುಗಡೆಯಾಗಲು ಸಕಲ ಸಿದ್ಧವಾಗಿ ನಿಂತಿರುವ ಸಿನಿಮಾ ನಿರ್ದೇಶಕ ರಾಘವ್ ವಿನಯ್ ಶಿವಗಂಗೆ ಕನಸಿನ ಸಿನಿಮಾವಾಗಿದೆ. ಚಿತ್ರಕ್ಕೆ ಗಂಟುಮೂಟೆ ಖ್ಯಾತಿಯ ನಿಶ್ಚಿತ್ ಕೊರೋಡಿ, ಜೋಡಿಹಕ್ಕಿ ಖ್ಯಾತಿಯ ಚೈತ್ರಾ ರಾವ್ ನಾಯಕ ಹಾಗೂ ನಾಯಕಿ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈ ಇಬ್ಬರ ಕಾಂಬಿನೇಶನ್ ಸಖತ್ ಮೋಡಿ ಮಾಡಿದ್ದು, ಪೂರ್ಣ ಪ್ರಮಾಣದಲ್ಲಿ ಈ ಜೋಡಿಯನ್ನು ಸ್ಕ್ರೀನ್ ಮೇಲೆ ಕಾಣಲು ಕಾತರರಾಗಿದ್ದಾರೆ ಚಿತ್ರ ಪ್ರೇಮಿಗಳು.

    ಚಿತ್ರಕ್ಕೆ ರಿದ್ಧಿ ಸಿದ್ಧಿ ಫಿಲಂಸ್ ಬ್ಯಾನರ್ ನಡಿ ನಿರ್ಮಾಪಕ ರಾಜು ಶೇರಿಗಾರ್ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ವಿನಯ್ ಚಂದ್ರ ಬಂಡವಾಳ ಹಾಕಿ ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕರ ಮೊದಲ ಸಿನಿಮಾ ಇದಾಗಿದ್ದು ತಮ್ಮದೇ ಬ್ಯಾನರ್ ನಡಿ ಚೊಚ್ಚಲ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದು, ಮೊದಲ ಸಿನಿಮಾ ಬಿಡುಗಡೆಯ ಸಂತಸ ಅವರಲ್ಲಿಯೂ ಮನೆ ಮಾಡಿದೆ.

    ಟಾಮ್ ಅಂಡ್ ಜೆರ್ರಿ ಚಿತ್ರದ ತಾರಾಬಳಗವೂ ದೊಡ್ಡಿದಿದೆ. ಹಿರಿಯ ಹಾಗೂ ಅನುಭವಿ ಕಲಾವಿದರ ದಂಡು ಸಿನಿಮಾದಲ್ಲಿದ್ದು, ಸೂರ್ಯ ಶೇಖರ್, ತಾರ ಅನುರಾಧ, ಜೈ ಜಗದೀಶ್, ಕೋಟೆ ಪ್ರಭಾಕರ್, ಕಡ್ಡಿಪುಡಿ ಚಂದ್ರು, ರಾಕ್ಲೈನ್ ಸುಧಾಕರ್, ಸಂಪತ್ ಮೈತ್ರೇಯ, ಪದ್ಮಜಾ ರಾವ್, ಪ್ರಕಾಶ್ ತುಮ್ಮಿನಾಡು, ಪ್ರಶಾಂತ್ ನಟನ, ಮೈತ್ರಿ ಜಗ್ಗಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

    ಮ್ಯಾಥೂಸ್ ಮನು ಸಂಗೀತದಲ್ಲಿ ಈಗಾಗಲೇ ಎರಡು ಹಾಡುಗಳು ಮನಸೂರೆಗೊಂಡಿದ್ದು, ಉಳಿದ ಹಾಡುಗಳ ಮೇಲೂ ಅಪಾರ ನಿರೀಕ್ಷೆ ಇದೆ. ಉಳಿದಂತೆ ಸಂಕೇತ್ ಎಂವೈಎಸ್ ಛಾಯಾಗ್ರಹಣ, ಸೂರಜ್ ಅಂಕೋಲೆಕರ್ ಸಂಕಲನ ಚಿತ್ರಕ್ಕಿದೆ. ಸೆನ್ಸಾರ್ ನಲ್ಲಿ ಯು/ಎ ಸರ್ಟಿಫೀಕೇಟ್ ಪಡೆದಿರುವ ಟಾಮ್ ಅಂಡ್ ಜೆರ್ರಿ ನವೆಂಬರ್ 12ಕ್ಕೆ ಅದ್ದೂರಿಯಾಗಿ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ.

  • ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಪುತ್ರ

    ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಪುತ್ರ

    ಮುಂಬೈ: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಮತ್ತು ಶ್ರೀರಾಮ್ ನೆನೆ ಅವರ ಕಿರಿಯ ಪುತ್ರ ರಿಯಾನ್ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದಂದು (ನವೆಂಬರ್ 7) ತಮ್ಮ ತಲೆ ಕೂದಲನ್ನು ದಾನ ಮಾಡಿದ್ದಾರೆ.

    ರಿಯಾನ್ ತಲೆ ಕೂದಲು ಕ್ಷೌರ ಮಾಡುತ್ತಿರುವ ವೀಡಿಯೋವನ್ನು ತಾಯಿ ಮಾಧುರಿ ದೀಕ್ಷತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಅವಶ್ಯಕವಾದ ಉದ್ದದ ತಲೆ ಕೂದಲನ್ನು ದಾನ ಮಾಡಲು 2 ವರ್ಷಗಳಿಂದ ತಮ್ಮ ಮಗ ರಾಯನ್ ತಲೆ ಕೂದಲು ಕತ್ತರಿಸಿಲ್ಲ. ರಿಯಾನ್ ಈ ನಿರ್ಧಾರ ನಮಗೆ ಆಶ್ಚರ್ಯವನ್ನುಂಟು ಮಾಡಿದೆ. ಅಲ್ಲದೆ ಅತಿ ಹೆಚ್ಚು ಹೆಮ್ಮೆ ಉಂಟು ಮಾಡಿದೆ ಎಂದು ಮಾಧುರಿ ದೀಕ್ಷಿತ್ ತಮ್ಮ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ರಾಯನ್ ಈ ಕಾರ್ಯಕ್ಕೆ ಸೋಶಿಯಲ್ ಮೀಡಿಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:  ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

     

    View this post on Instagram

     

    A post shared by Madhuri Dixit (@madhuridixitnene)

    ನೆಟ್ಟಿಗರು ಕೂಡ ಕಮೆಂಟ್ ಮೂಲಕ ಶ್ಲಾಫಿಸಿದ್ದು, ಅದರಲ್ಲಿ ಒಬ್ಬರು, ಉತ್ತಮ ಚಿಂತನೆ ಮತ್ತು ಕೊಡುಗೆ, ರಿಯಾನ್‍ಗೆ ಆಲ್ ದಿ ಬೆಸ್ಟ್ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ನಿಮ್ಮ ಮಗನ ಬಗ್ಗೆ ಹೆಮ್ಮೆಯಾಗುತ್ತದೆ ಮತ್ತು ಉತ್ತಮ ಪೋಷಕರಿಗೆ ಅಭಿನಂದನೆಗಳು ಎಂದು ಕಮೆಂಟ್ ಮಾಡಿ ಶ್ಲಾಫಿಸಿದ್ದಾರೆ. ಇದನ್ನೂ ಓದಿ:  ಆರೋಗ್ಯಕರವಾದ ಸೌತೆಕಾಯಿ ತಂಬುಳಿ ಮಾಡುವ ವಿಧಾನ

  • ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

    ಭೂಪಾಲ್: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಪುಷ್ಪಾ ಬಾಯಿ (45) ಮೃತಳು, ಈಕೆ ಪತಿ ರಾಜಕುಮಾರ್ ಬಹೆ (50) ಕೊಲೆ ಮಾಡಿದ್ದಾನೆ. ಈತ ಅರಣ್ಯ ಇಲಾಖೆಯ ದಿನಗೂಲಿ ನೌಕರನಾಗಿದ್ದನು. ಸ್ನಾನಕ್ಕೆ ಹೋದಾಗ ತನ್ನ ಹೆಂಡತಿಯನ್ನು ಕರೆದು ಟವೆಲ್ ಕೊಡಲು ಹೇಳಿದ್ದ. ಆದರೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಳು. ಆತನ ಸ್ನಾನ ಮುಗಿದರೂ ಆಕೆ ಟವೆಲ್ ಕೊಡದಿದ್ದರಿಂದ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಡೆದಿದ್ದೇನು?: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಕಿರ್ನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೀರಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ:  ಆರೋಗ್ಯಕರವಾದ ಸೌತೆಕಾಯಿ ತಂಬುಳಿ ಮಾಡುವ ವಿಧಾನ

    ರಾಜಕುಮಾರ್ ಬಹೆ ಸ್ನಾನದ ನಂತರ ಟವೆಲ್ ನೀಡುವಂತೆ ಕೇಳಿದ್ದ. ಪುಷ್ಪ ಅಡುಗೆ ಮನೆಯಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದುದರಿಂದ ಸ್ವಲ್ಪ ಸಮಯ ಕಾಯುವಂತೆ ಹೇಳಿದ್ದಳು. ಇದರಿಂದ ಕೋಪಗೊಂಡ ವ್ಯಕ್ತಿ ಸ್ನಾನ ಮುಗಿಸಿ ಹೊರಗೆ ಬಂದ ನಂತರ ಕಬ್ಬಿಣದ ರಾಡಿನಿಂದ ಪತ್ನಿಯ ತಲೆಗೆ ಪದೇ ಪದೇ ಹೊಡೆದಿದ್ದಾನೆ. ಇದರಿಂದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಅಪ್ಪನನ್ನು 23 ವರ್ಷದ ಮಗಳನ್ನು ತಡೆಯಲು ಪ್ರಯತ್ನಿಸಿದಾಗ ಆಕೆಗೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಕೋವಿಡ್-19 ಲಸಿಕೆ ಪಡೆದು 7.4 ಕೋಟಿ ರೂ. ಗೆದ್ದ ಯುವತಿ

    ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಭಾನುವಾರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

  • ಆರೋಗ್ಯಕರವಾದ ಸೌತೆಕಾಯಿ ತಂಬುಳಿ ಮಾಡುವ ವಿಧಾನ

    ಆರೋಗ್ಯಕರವಾದ ಸೌತೆಕಾಯಿ ತಂಬುಳಿ ಮಾಡುವ ವಿಧಾನ

    ತಂಬುಳಿ ಊಟ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹಿರಿಯರು ಮನೆಯಲ್ಲಿ ಹೇಳುವುದನ್ನು ನಾವು ಕೇಳಿದ್ದೇವೆ. ಯಾವುದೇ ತಂಬುಳಿ ಮಾಡುವಾಗ ಹೆಚ್ಚು ಮಸಾಲೆ ಪದಾರ್ಥವನ್ನು ಬಳಕೆ ಮಾಡುವುದಿಲ್ಲ. ಹೀಗಾಗಿ ಆರೋಗ್ಯಕ್ಕೆ ಒಳ್ಳೆಯದಾಗಿದೆ. ಸೌತೆಕಾಯಿಂದ ತಯಾರಿಸುವ ಈ ತಂಬುಳಿ ನಾಲಗೆಗೆ ರುಚಿ ಮಾತ್ರವಲ್ಲ ನಿಮ್ಮ ಆರೋಗ್ಯಕ್ಕೂ ಹಿತವಾದ ಅಡುಗೆಯಾಗಿದೆ. ಕುಡಿಯಲೂ ಸೂಪರ್ ಅಷ್ಟೇ ಅಲ್ಲ ಅನ್ನಕ್ಕೆ ಕಲಸಿಕೊಂಡು ಊಟ ಮಾಡಲು ಕೂಡ ಟೇಸ್ಟಿಯಾಗಿರುತ್ತೆ. ಹಾಗಿದ್ದರೆ ಇನ್ಯಾಕೆ ತಡ ಸೌತೆಕಾಯಿ ತಂಬುಳಿ ಮಾಡು ವಿಧಾನವನ್ನು ನೋಡೋಣ.


    ಬೇಕಾಗುವ ಸಾಮಗ್ರಿಗಳು:
    * ಸೌತೆಕಾಯಿ – 2
    * ಜೀರಿಗೆ – 1 ಚಮಚ
    * ತೆಂಗಿನ ತುರಿ – ಅರ್ಧ ಕಪ್
    * ರುಚಿಗೆ ತಕ್ಕಷ್ಟು ಉಪ್ಪು
    * ಮಜ್ಜಿಗೆ – 2ಕಪ್
    * ಅಡುಗೆಎಣ್ಣೆ ಅಥವಾ ತುಪ್ಪ – 4 ಚಮಚ
    * ಕೆಂಪು ಬ್ಯಾಡಗಿ ಮೆಣಸು – 4


    ಮಾಡುವ ವಿಧಾನ:
    * ಮೊದಲು ಸೌತೆಕಾಯಿಯನ್ನು ಸಣ್ಣದಾಕಿ ಕಟ್ ಮಾಡಿಕೊಳ್ಳಬೇಕು.
    * ಸೌತೆಕಾಯಿ, ಜೀರಿಗೆ, ತೆಂಗಿನತುರಿ ಹಾಕಿ ಮಿಕ್ಸಿ ಮಾಡ್ಕೊಳ್ಳಿ. ರುಬ್ಬಿದ ಮಿಶ್ರಣದಿಂದ ಹಾಲನ್ನು ಬೇರ್ಪಡಿಸಿಕೊಂಡ್ರೆ ತಂಬುಳಿ ರುಚಿ ಅನ್ನಿಸುತ್ತೆ.


    * ನಂತ್ರ ಆ ಮಿಶ್ರಣಕ್ಕೆ ಮಜ್ಜಿಗೆ ಮತ್ತು ಉಪ್ಪು ಸೇರಿಸಿ. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

    * ಎಣ್ಣೆ ಕಾದ ಬಳಿಗೆ ಜೀರಿಗೆ, ಕೆಂಪುಬ್ಯಾಡಗಿ ಮೆಣಸನ್ನು ಹಾಕಿ ಚಟಿಪಟಿ ಮಾಡಿ ತಂಬುಳಿಗೆ ಹಾಕಿ ಒಗ್ಗರಣೆ ನೀಡಿದರೆ ರುಚಿರುಚಿಯಾದ ತಂಬುಳಿ ಸಿದ್ಧವಾಗುತ್ತೆ. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

  • ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್

    ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್

    ಬೆಂಗಳೂರು: ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವುದಾಗಿ ಹೇಳುತ್ತಿದ್ದಾರೆ ಅಲ್ಪಸಂಖ್ಯಾತರಲ್ಲೇ ಹಲವು ಗುಂಪುಗಳಾಗಿವೆ ಅನ್ನೋದೆಲ್ಲಾ ಸುಳ್ಳು. ಇಬ್ರಾಹಿಂ ಅವರು ಕಾಲು ಹೊರಗಿಟ್ಟಿದ್ದಾರೋ, ಇಲ್ಲವೋ ಅದು ಅವರ ವೈಯಕ್ತಿಕ ನಿರ್ಧಾರ. ನಾವು ಅದನ್ನು ಪ್ರಶ್ನಿಸುವುದಿಲ್ಲ. ಅವರ ಕೈ, ಅವರ ಕಾಲು ಎಲ್ಲಾದರೂ ಇಟ್ಟುಕೊಳ್ಳಲಿ ಎಂದು ಎಂದ ಶಾಸಕ ಹ್ಯಾರಿಸ್ ಹೇಳಿದ್ದಾರೆ.

    ನಾವು ಎಲ್ಲರನ್ನು ಜೊತೆಗೂಡಿಸುವ ಕೆಲಸ ಮಾಡುತ್ತೇವೆ. ಸದ್ಯ ಪಕ್ಷದಲ್ಲಿ ನಾವು ಎಲ್ಲರೂ ಜೊತೆಯಾಗಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ತಮ್ಮ ಅಭಿಪ್ರಾಯ, ಅಸಮಾಧಾನ ಹೊರಹಾಕಬಹುದು. ಪಕ್ಷದಲ್ಲಿ ಅಲ್ಪಸಂಖ್ಯಾತರ ವಿಚಾರವಾಗಿ ತಿರ್ಮಾನ ಕೈಗೊಳ್ಳಲು ಅದಕ್ಕೆ ಘಟಕವಿದೆ. ನಾವು ಇಬ್ರಾಹಿಂ ಅವರ ಜೊತೆ ಮಾತನಾಡುತ್ತಿದ್ದೇವೆ. ಜಬ್ಬಾರ್ ಅವರು ಕೂಡ ಅವರ ಜೊತೆ ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಸಿ.ಎಂ ಇಬ್ರಾಹಿಂ ಅವರು ಕೂಡ ನಮ್ಮ ನಾಯಕರು. ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯವಾಗಿಲ್ಲ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಎಲ್ಲ ನ್ಯಾಯ ಸಿಗುತ್ತಿದೆ. ಅಲ್ಪಸಂಖ್ಯಾತರಿಗೆ ಸರಿಯಾಗಿ ನ್ಯಾಯ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ನಾನು ಇಲ್ಲಿ ಶಾಸಕನಾಗಿ ಕೂತಿರುವುದಕ್ಕೆ ಕಾರಣ ಕಾಂಗ್ರೆಸ್. ಒಬ್ಬೊಬ್ಬ ನಾಯಕರು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು. ಪಕ್ಷದ ವಿಚಾರ ಬಂದರೆ ನಾವೆಲ್ಲರೂ ಜೊತೆಯಾಗಿದ್ದೇವೆ ಎಂದರು. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ನಾಯಕರನ್ನು ಹಂತ ಹಂತವಾಗಿ ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತ ನಾಯಕರನ್ನು ಯಾರು ಮುಗಿಸಿದ್ದಾರೆ ಎಂದು ಜನ ನೋಡಿದ್ದಾರೆ. ತಮ್ಮ ಪಕ್ಷದಲ್ಲಿದ್ದ ಅಲ್ಪಸಂಖ್ಯಾತರಿಗೆ ಅವರು ಯಾವ ಸ್ಥಾನಮಾನ ಕೊಟ್ಟಿದ್ದರು ಎಂದು ಆ ಪಕ್ಷದಲ್ಲಿದ್ದ ನಾಯಕರೇ ಹೇಳಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:   ಅಪ್ಪು ಸರ್ ಎಂದರೆ ನನಗೆ ಹುಚ್ಚು ಅಭಿಮಾನ: ಅನುಶ್ರೀ

    ಕಳೆದ ಉಪಚುನಾವಣೆಯಲ್ಲಿ ಏನಾಯಿತು ಎಂದು ನಾವೆಲ್ಲರೂ ನೋಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದೆ. ಅದಕ್ಕಾಗಿ ಮುಕ್ತವಾಗಿ ಮಾತನಾಡುತ್ತಾರೆ. ಇದೇ ರೀತಿ ಬಿಜೆಪಿಯಲ್ಲಿ ಮಾತನಾಡಲು ಸಾಧ್ಯವೇ? ಇಲ್ಲಿ ನಮಗೆ ಸಿಗುವ ಹಕ್ಕು, ಬೇರೆಲ್ಲೂ ಸಿಗುವುದಿಲ್ಲ ಎಂಬುದು ನಮ್ಮ ಅಭಿಪ್ರಾಯ. ಸ್ಥಾನಮಾನದ ವಿಚಾರವಾಗಿ ನಾವು ಪಕ್ಷದ ಒಳಗೆ ಕೂತು ಚರ್ಚೆ ಮಾಡುತ್ತೇವೆ. ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಸ್ಥಾನಮಾನ ಅಷ್ಟೇ ಅಲ್ಲ ಅವರಿಗಾಗಿ ಸರ್ಕಾರ ಇದ್ದಾಗ ಎಷ್ಟು ಅನುದಾನ ನೀಡಿ ಯಾವ ರೀತಿ ಕಾರ್ಯಕ್ರಮ ನೀಡಲಾಗಿದೆ ಎಂಬುದು ಮುಖ್ಯ. ನಮ್ಮ ಸರ್ಕಾರ ಇದ್ದಾಗ ನೀಡಲಾದ ಅನುದಾನ, ಈಗ ಯಾವ ರೀತಿ ಕಡಿಮೆಯಾಗಿದೆ. ಯೋಜನೆಗಳು ಯಾವ ರೀತಿ ಹಳ್ಳ ಹಿಡಿದಿವೆ, ವಿದ್ಯಾರ್ಥಿ ವೇತನ ನಿಂತಿದೆ ಎಂಬುದನ್ನು ಗಮನಿಸಬೇಕು. ಈ ಅನ್ಯಾಯವನ್ನು ಕೇಳುವ ಕೆಲಸ ಮಾಡಬೇಕಿದೆ. ವಿರೋಧ ಪಕ್ಷವಾಗಿ ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜಬ್ಬಾರ್, ಶಾಸಕರಾದ ಎನ್.ಎ ಹ್ಯಾರಿಸ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವಾ, ಕೆಪಿಸಿಸಿ ಕಾರ್ಯದರ್ಶಿ, ಮೆಹ್ರೊಜ್ ಖಾನ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

  • ಅಪ್ಪು ಸರ್ ಎಂದರೆ ನನಗೆ ಹುಚ್ಚು ಅಭಿಮಾನ: ಅನುಶ್ರೀ

    ಅಪ್ಪು ಸರ್ ಎಂದರೆ ನನಗೆ ಹುಚ್ಚು ಅಭಿಮಾನ: ಅನುಶ್ರೀ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ನಮ್ಮನ್ನು ಅಗಲಿರುವುದುನ್ನು ನೆನಪಿಸಿಕೊಂಡು ನಿರೂಪಕಿ ಅನುಶ್ರೀ ಕಣ್ಣೀರು ಹಾಕಿದ್ದಾರೆ.

    ಖಾಸಗಿವಾಹಿಯ ಕಾರ್ಯಕ್ರಮದಲ್ಲಿ ಅನುಶ್ರೀ ಅಪ್ಪು ಜೊತೆಗೆ ಕಳೆದ ಸುಂದರ ಕ್ಷಣ, ಅವರ ವ್ಯಕ್ತಿತ್ವದ ಕುರಿತಾಗಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್ ಆಗಿದ್ದರು. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹೇಳುತ್ತಾ ಕಣ್ಣಂಚಲಿ ನೀರು ತುಂಬಿಕೊಂಡಿದ್ದಾರೆ.

    ಕಳೆದ ವರ್ಷ ಹುಟ್ಟುಹಬ್ಬದ ದಿನ ಅವರ ಮನೆಗೆ ಕೇಕ್ ತೆಗೆದುಕೊಂಡು ಹೋಗಿದ್ದೇನು. ಆಗ ಅನುಶ್ರೀ ಬಂದಿದ್ದಾರೆ ಎಂದು ಅವರು ಕೊಡುವ ಅಪ್ಪುಗೆ ಇದ್ಯಲ್ಲ ಮರೆಯಲು ಸಾಧ್ಯವಾಗಲ್ಲ. ಮನೆಗೆ ಎಲ್ಲರು ಸ್ವಾಗತ ಮಾಡುತ್ತಾರೆ. ಆದರೆ ಮನೆಯಿಂದ ಹೊರಡುವಾಗ ಬೀಳ್ಕೊಡುವವರು ಕೆಲರು ಮಾತ್ರ ಆಗಿದ್ದಾರೆ. ಆ ಕೆಲವರಲ್ಲಿ ಅಪ್ಪು ಪ್ರಮುಖರಾಗಿದ್ದಾರೆ. ಅವರ ಮನೆಗೆ ಹೇಗೆ ಸ್ವಾಗತ ಇರುತ್ತೋ ಹಾಗೆ ಕಳುಹಿಸಿಕೊಡುತ್ತಾರೆ. ಆದರೆ ನಾನು ಅವರ ಮನೆಗೆ ಹೋದ್ರೆ ಸ್ವಾಗತವೂ ಇಲ್ಲ, ಅಪ್ಪು ಸರ್ ಮಲಗಿದ್ದರು ಎಂದು ಹೇಳುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದನ್ನೂ ಓದಿ: ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

    ನನಗೆ ಅವರು ಎಂದರೆ ಹುಚ್ಚು ಅಭಿಮಾನ ಇದೆ. ಅವರು ಎಂದರೆ ಪ್ರಾಣವಾಗಿದೆ. ಯಾವುದೇ ಕಾರ್ಯಕ್ರಮ ಇದ್ದರು ಸಿನಿಮಾ ಟೀಮ್ ಕಾಲ್ ಮಾಡುವುದು ನನಗೆ ಆಗಿತ್ತು. ಎಲ್ಲರೂ ಹೇಳುತ್ತಾರೆ ಅನುಶ್ರೀ ಅವರು ಅಪ್ಪು ಅವರನ್ನು ವೆಲ್ ಕಮ್ ಮಾಡುವಂತೆ ಯಾರು ಮಾಡುವುದಿಲ್ಲ ಎಂದು. 15 ವರ್ಷದ ನನ್ನ ನಿರೂಪಣಾ ದಿನದಲ್ಲಿ ನನ್ನ ಅತ್ಯಂತ ಕೆಟ್ಟ ದಿನ ಇವತ್ತೆ ಆಗಿದೆ. ಈ ರೀತಿ ಅವರನ್ನು ನೆನಪು ಮಾಡಿಕೊಳ್ಳವ ನತದೃಷ್ಟ ಅಭಿಮಾನಿ ನಾನೆ ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ನಾನು ಊರಲ್ಲಿ ಇರಲಿಲ್ಲ. ಮೊಬೈಲ್ ಆಫ್ ಮಡಿಕೊಂಡು ಬಿಟ್ಟೆ. ನನಗೆ ಆ ವಾಸ್ತವವನ್ನು ಎದುರಿಸಲು ಶಕ್ತಿ ನನಗೆ ಇರಲಿಲ್ಲ. ಅವರಿಗೋಸ್ಕರ ಪ್ರಾರ್ಥನೆ ಮಾಡುವ ಕೋಟ್ಯಂತರ ಹೃದಯಗಳಿವೆ. ಅವರಿಗೆ ಒಂದು ಅವಕಾಶ ಕೊಡಬೇಕಿತ್ತು ಎಂದು ಹೇಳುತ್ತಾ ಅನುಶ್ರೀ ಭಾವುಕರಾದರು.

  • ಪ್ರಶಸ್ತಿಗಳಿಗಿಂತ ಅಪ್ಪು ವ್ಯಕ್ತಿತ್ವ ದೊಡ್ಡದು: ಚೇತನ್

    ಪ್ರಶಸ್ತಿಗಳಿಗಿಂತ ಅಪ್ಪು ವ್ಯಕ್ತಿತ್ವ ದೊಡ್ಡದು: ಚೇತನ್

    ರಾಯಚೂರು: ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ಸಿಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ಅಪ್ಪು ಅವರ ಸಾಮಾಜಿಕ ಕಾಳಜಿ, ಒಳ್ಳೆಯತನ ದೊಡ್ಡದು ಎಂದು ನಟ ಚೇತನ್ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದವರು, ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ಸಿಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ಅಪ್ಪು ಅವರ ಸಾಮಾಜಿಕ ಕಾಳಜಿ, ಒಳ್ಳೆಯತನ ದೊಡ್ಡದು. ಪ್ರಶಸ್ತಿಯಿಂದ ಅಪ್ಪು ಅವರ ವಿಚಾರಗಳು ಹೆಚ್ಚು ಆಗಲ್ಲ , ಸಿಗದಿದ್ರೆ ಕಡಿಮೆಯೂ ಆಗಲ್ಲ ಪ್ರಶಸ್ತಿಗಿಂತ ಅಪ್ಪು ವ್ಯಕ್ತಿತ್ವವೇ ಮುಖ್ಯ. ಅಪ್ಪು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾವಾದದ್ದು ಎಂದಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಅಪ್ಪು ಮತ್ತು ನಮ್ಮ ಸ್ನೇಹ 13 ವರ್ಷದ್ದು, ಒಟ್ಟಿಗೆ ಒಂದೇ ಕಡೆ ಜಿಮ್ ಮತ್ತು ಯೋಗ ಮಾಡುತ್ತಿದ್ದೇವು. 2012 ರ ಬಳಿಕ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು. ಅಪ್ಪು ಸಾವಿನ ಬಳಿಕ ಕಣ್ಣು ದಾನ ಮಾಡಿ ನಾಲ್ಕು ಜನರ ಬದುಕಿಗೆ ಬೆಳಕಾಗಿದ್ದಾರೆ. ನಾವು ಕೂಡ ಅಪ್ಪು ಅವರ ಆದರ್ಶದಂತೆ ದೇಹ ಮತ್ತು ಅಂಗಾಂಗಗಳ ದಾನ ಮಾಡಬೇಕು ಅಂತ ನಟ, ಹೊರಾಟಗಾರ ಚೇತನ್ ಹೇಳಿದ್ದಾರೆ. ಇದನ್ನೂ ಓದಿ: ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

    ಸಿದ್ದರಾಮಯ್ಯ ತನ್ನ ಜಾತಿಗೆ ಹೆಚ್ಚು ಸೌಲಭ್ಯ ನೀಡಿದ್ದಾರೆ: ದೇವದಾಸಿ ಪದ್ದತಿ ನಿರ್ಮೂಲನೆ ಹಾಗೂ ಅಲೆಮಾರಿ ಜನಾಂಗಕ್ಕೆ ಸೂರು ಒದಗಿಸಲು ಹೋರಾಟ ನಡೆಸಿದ್ದೇವೆ. ಜನಪ್ರತಿನಿಧಿಗಳು ಬಣ್ಣದ ಮಾತನಾಡದೆ ಕೆಲಸ ಮಾಡಬೇಕು. ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಮೂರು ಪಕ್ಷಗಳು ಬ್ರಾಹ್ಮಣ್ಯದ ಪರವಾಗೇ ಇವೆ. ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಅಲೆಮಾರಿಗಳನ್ನ ಕಡೆಗಣಿಸಲಾಗಿದೆ. ಸಿದ್ದರಾಮಯ್ಯ ತಾವು ಹುಟ್ಟಿದ ಜಾತಿಗೆ ಹೆಚ್ಚು ಸೌಲಭ್ಯ ಕೊಟ್ಟಿದ್ದಾರೆ, ದಲಿತರಿಗೆ ಹೆಚ್ಚು ಸೌಲಭ್ಯ ನೀಡಿಲ್ಲ. ಜನಪ್ರತಿನಿಧಿಗಳು ಬಣ್ಣಬಣ್ಣದ ಮಾತುಗಳನ್ನ ಹೇಳಿ ತಮ್ಮ ಮತಗಳಿಗೆ ಮಾತ್ರ ಬಡ ಜನರನ್ನ ಬಳಸಿಕೊಳ್ಳುತ್ತಿದ್ದಾರೆ ಅಂತ ಚೇತನ್ ಆರೋಪಿಸಿದ್ದಾರೆ.

  • 119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ನವದೆಹಲಿ: 2021ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ಗೌರವ ಸಲ್ಲಿಸಿದ್ದಾರೆ.

    7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.

    ಕರ್ನಾಟಕದ ಅಕ್ಷರ ಸಂತ ಹರೇಕಳ ಹಾಜಬ್ಬ, ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು, ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಮ್‍ಪಾಲ್, ನಿವೃತ್ತ ಏರ್ ಮಾರ್ಷಲ್ ಡಾ. ಪದ್ಮಾ ಬಂಡೋಪಾದ್ಯಾಯ, ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಚಾನುಲಾಲ್ ಮಿಶ್ರಾ, ಬಾಲಿವುಡ್ ತಾರೆ ಕಂಗನಾ ರನಾವತ್, ಗಾಯಕ ಅದ್ನಾನ್ ಸಾಮಿ ಸೇರಿದಂತೆ ಹಲವರು ಇಂದು ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ:   ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

    ಕೇಂದ್ರದ ಮಾಜಿ ಸಚಿವೆ ದಿ.ಸುಷ್ಮಾ ಸ್ವರಾಜ್, ದಿ.ಜಾರ್ಜ್ ಫರ್ನಾಂಡಿಸ್, ದಿ.ಅರುಣ್ ಜೇಟ್ಲಿ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಷ್ಮಾ ಅವರ ಪುತ್ರಿ ಬಾನುಶ್ರೀ ಸ್ವರಾಜ್ ಅವರು ರಾಷ್ಟ್ರಪತಿಗಳಿಂದ ಪಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ:  ಕಳಪೆ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯಿರಿ: ಶ್ರೀಮಂತ್ ಪಾಟೀಲ್

    ಐಸಿಎಂಆರ್ ಮಾಜಿ ಮುಖ್ಯ ವಿಜ್ಷಾಣಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ, ಗಾಯಕ ಅದ್ನಾನ್ ಸಾಮಿ, ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳಾ ಹಾಕಿ ತಂಡವನ್ನು ಮುನ್ನೆಡೆಸಿದ್ದ ರಾಣಿ ರಾಂಪಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.