Tag: publictv

  • ಆರೋಗ್ಯಕರವಾದ ಮಸಾಲಾ ಟೀ ಒಮ್ಮೆ ಮಾಡಿ ನೋಡಿ

    ಆರೋಗ್ಯಕರವಾದ ಮಸಾಲಾ ಟೀ ಒಮ್ಮೆ ಮಾಡಿ ನೋಡಿ

    ಯಾವುದೇ ಮನೆಗೆ ಹೋದರೂ ಟೀ ಬೇಕಾ ಎಂದು ಕೇಳುವುದು ವಾಡಿಕೆ. ಒಂದು ಪರಿಪೂರ್ಣವಾದ ಚಹಾ ಹೇಗೆ ಮಾಡಿಕೊಳ್ಳಬೇಕು ಎಂದು ಹೇಳುತ್ತಾ ಹೋದರೆ ನಮಗೆ ಒಂದೇ, ಎರಡೇ ಅನೇಕ ವಿಧಗಳು ಸಿಗುತ್ತವೆ. ಚಹಾದ ನಿಜವಾದ ರುಚಿ ಯಾವಾಗಲೂ ಅದರಲ್ಲಿ ಸೇರಿಸುವ ಮಸಾಲೆಯಲ್ಲಿದೆ ಎಂದರೆ ತಪ್ಪಾಗುವುದಿಲ್ಲ. ಈ ಮಸಾಲೆಗಳ ಮಿಶ್ರಣವು ನಮ್ಮ ಚಹಾವನ್ನು ಇನ್ನಷ್ಟು ಪರಿಮಳ ಭರಿತ ಮತ್ತು ರುಚಿಯನ್ನಾಗಿಸುತ್ತದೆ.

    ಕುಟುಂಬದವರನ್ನೇ ಆಗಲಿ, ಅಪರಿಚಿತರನ್ನೇ ಆಗಲಿ ಅಥವಾ ಸಹೋದ್ಯೋಗಿಗಳನ್ನಿರಬಹುದು, ಒಟ್ಟಿಗೆ ತರುವ ಶಕ್ತಿ ಒಂದು ಕಪ್ ಚಹಾಕ್ಕಿದೆ. ಇಂತಹ ರುಚಿಯಾದ ಮತ್ತು ಆರೋಗುಕರವಾದ ಮಸಾಲಾ ಟೀ ಮಾಡುವ ವಿಧಾನವನ್ನು ಹೇಳಲಿದ್ದೇವೆ.

    ಬೇಕಾಗುವ ಸಾಮಗ್ರಿಗಳು:
    * ಏಲಕ್ಕಿ-2
    * ಚಕ್ಕೆ-1
    * ಕರಿಮೆಣಸು ಕಾಳು- 1 ಟೀ ಸ್ಪೂನ್
    * ಲವಂಗ- 2
    * ಟೀ ಪೌಡರ್- 2 ಚಮಚ
    * ಒಣಗಿಸಿದ ಶುಂಠಿ ಪೌಡರ್- 1 ಚಮಚ
    * ಸಕ್ಕರೆ- 4 ಚಮಚ
    * ಹಾಲು- 1 ಲೋಟ

    ಮಾಡುವ ವಿಧಾನ:
    * ಏಲಕ್ಕಿ, ಚಕ್ಕೆ, ಕರಿಮೆಣಸು ಕಾಳು, ಲವಂಗ ಎಲ್ಲ ಮಸಾಲೆ ಪದಾರ್ಥಗಳನ್ನೂ ಸೇರಿಸಿ ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಿ.
    * ನಂತರ ಪಾತ್ರೆಯಲ್ಲಿ 4 ಲೋಟ ನೀರು ಕುದಿಯಲು ಇಡಿ. ಇದನ್ನೂ ಓದಿ: ಮನೆಮಂದಿಗೆ ಇಷ್ಟವಾಗುವ ಫಿಶ್ ಫ್ರೈ ಮಾಡುವ ಸುಲಭ ವಿಧಾನ

    * ಕುದಿಯುವಾಗ ಟೀ ಪುಡಿ ಹಾಗೂ ಮಸಾಲಾ ಪುಡಿ, ಸಕ್ಕರೆ ಹಾಕಿ ಕುದಿಸಿ.
    * ನಂತರ ಶುಂಠಿ ಪೌಡರ್ ಹಾಗೂ ಹಾಲು ಹಾಕಿ ಮತ್ತೆ ಕುದಿಸಿದರೆ ಮಸಾಲಾ ಟೀ ಸವಿಯಲು ಸಿದ್ಧವಾಗುತ್ತದೆ. ದನ್ನೂ ಓದಿ: ಫಟಾಫಟ್ ಅಂತಾ ಮಾಡಿ ರುಚಿಯಾದ ಸಿಗಡಿ ಮಸಾಲ 

  • ಮೂರು ತಿಂಗಳ ಮಗುವನ್ನು ಹತ್ಯೆ ಮಾಡಿದ ಅಜ್ಜಿ

    ಮೂರು ತಿಂಗಳ ಮಗುವನ್ನು ಹತ್ಯೆ ಮಾಡಿದ ಅಜ್ಜಿ

    ಚೆನ್ನೈ: ಅಜ್ಜಿಯೋರ್ವಳು ಮೂರು ತಿಂಗಳ ಮೊಮ್ಮಕ್ಕಳನ್ನೇ ಕೊಲೆ ಮಾಡಿ ಮತ್ತೊಂದು ಮಗುವಿನ ಹತ್ಯೆಗೂ ಯತ್ನಿಸಿದ ಅಮಾನವೀಯ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

    ಕುಂದಂಪಾಳ್ಯಂ ಮೂಲದ ಭಾಸ್ಕರನ್ ಹಾಗೂ ಐಶ್ವರ್ಯ ಎಂಬ ದಂಪತಿ ಮೂರು ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಅಜ್ಜಿಯನ್ನು ಮಧುರೈಯಿಂದ ಕರೆದುಕೊಂಡು ಬಂದಿದ್ದರು. ಈ ವೇಳೆ ಅಜ್ಜಿ ತನ್ಮ ಮೊಮ್ಮಕ್ಕಳನ್ನು ಕೊಲೆ ಮಾಡಿದ್ದಾಳೆ.

    ಘಟನೆಯ ಹಿನ್ನಲೆ:
    ಅಕ್ಟೋಬರ್ 21 ರಂದು ಐಶ್ವರ್ಯ ಅಂಗಡಿಗೆ ಹೋಗಿದ್ದ ವೇಳೆ ಐಶ್ವರ್ಯ ತಾಯಿ ಶಾಂತಿ ಮೂರು ತಿಂಗಳ ಮಗುವನ್ನು ಹತ್ಯೆ ಮಾಡಿದ್ದಾಳೆ. ಮಗುವನ್ನೂ ಕೂಡ ಹತ್ಯೆ ಮಾಡಲು ಮುಂದಾದಾಗ ಆ ಕ್ಷಣಕ್ಕೆ ಯಾರೋ ಬಾಗಿಲು ಬಡಿದಂತಾಗಿದೆ. ಹೆದರಿದ ಅಜ್ಜಿ ಅಲ್ಲಿಂದ ಓಡಿಹೋಗಿದ್ದಾರೆ.

    ಪೊಲೀಸ್ ತನಿಖೆ: ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಂಡು ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆ ಮಾಡಿದ ಅಜ್ಜಿ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.

  • ಮೊದಲ ಬಾರಿಗೆ ಮಾನವನಿಗೆ ಹಂದಿ ಕಿಡ್ನಿ ಅಳವಡಿಕೆ

    ಮೊದಲ ಬಾರಿಗೆ ಮಾನವನಿಗೆ ಹಂದಿ ಕಿಡ್ನಿ ಅಳವಡಿಕೆ

    ವಾಷಿಂಗ್ಟನ್: ಇದೇ ಮೊದಲ ಬಾರಿಗೆ ಹಂದಿಯ ಮೂತ್ರಪಿಂಡ(ಕಿಡ್ನಿ)ಯನ್ನು ಮಾನವನಿಗೆ ಕಸಿ ಮಾಡಲಾಗಿದೆ. ಕಿಡ್ನಿ ಅಳವಡಿಸಿದ ರೋಗಿಗೆ ಯಾವುದೇ ಆರೋಗ್ಯ ಸಮಸ್ಯೆಗಳು ಆಗಿಲ್ಲ ಎಂದು ನ್ಯೂಯಾರ್ಕ್ ವೈದ್ಯರು ಹೇಳಿದ್ದಾರೆ.

    ನ್ಯೂಯಾರ್ಕ್ ಲಾಂಗ್‍ಒನ್ ಹೆಲ್ತ್(ಎನ್‍ವೈಎಲ್) ಸಂಸ್ಥೆಯಲ್ಲಿ ಈ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಿದುಳು ನಿಷ್ಕ್ರಿಯವಾಗಿ ಜೀವರಕ್ಷಕ ಸಾಧನದ ಮೇಲೆ ಜೀವಂತವಿರುವ ಮಹಿಳೆಗೆ ವಂಶವಾಹಿ ಪರಿವರ್ತಿಸಲಾದ ಹಂದಿ ಕಿಡ್ನಿ ಕಸಿ ಮಾಡಲಾಗಿದೆ. ಇದರಿಂದ ಹಂದಿಯ ಕಿಡ್ನಿಯನ್ನು ಮಾನವ ದೇಹ ತಕ್ಷಣಕ್ಕೆ ತಿರಸ್ಕರಿಸುವುದಿಲ್ಲ ಎಂಬುದು ಗೊತ್ತಾಗಿದೆ ಎಂದು ಎನ್‍ವೈಎಲ್ ಸಂಸ್ಥೆ ತಿಳಿಸಿವೆ.

    ಕಿಡ್ನಿ ಕಸಿಯಾದ ಮೇಲೆ ಮೂರು ದಿನ ಅದನ್ನು ಆಕೆಯ ದೇಹದ ಹೊರಗೆ ನಿರ್ವಹಿಸಲಾಯಿತು. ಆಕೆಗೆ ಮೂತ್ರ ಮಾಡಲು ಯಾವುದೇ ಕಷ್ಟವಾಗಿಲ್ಲ ಎಂಬುದನ್ನು ನಾವು ಖಚಿತ ಮಾಡಿಕೊಂಡೆವು. ಈ ಪ್ರಯೋಗಾತ್ಮಕ ಚಿಕಿತ್ಸೆ ನಡೆಸುವುದಕ್ಕೂ ಮುದಲು ಮಿದುಳು ನಿಷ್ಕ್ರಿಯವಾದ ಮಹಿಳೆಯ ಕುಟುಂಬಸ್ಥರಿಂದ ಒಪ್ಪಿಗೆ ಪಡೆದುಕೊಂಡಿದ್ದೇವೆ ಎಂದು ಎನ್‍ವೈಎಲ್ ವಿವರಿಸಿದೆ. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

    ಪ್ರಯೋಗ: ಮುದುಳು ನಿಷ್ಕ್ರಿಯವಾದ ಮಹಿಳೆಯ ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಹಂದಿ ಕಿಡ್ನಿ ಅಳವಡಿಸಿದ ನಂತರ ಕಾರ್ಯ ಸಹಜವಾಗಿ ನಡೆಸಲು ಆರಂಭವಾಯಿತ್ತು ಎಂದು ನ್ಯೂಯಾರ್ಕ್ ಲಾಂಗ್‍ಒನ್ ಹೆಲ್ತ್ ಸಂಶೋಧನಾ ತಂಡದ ಮುಖ್ಯಸ್ಥ ಡಾ. ರಾಬರ್ಟ್ ಮಾಂಟ್ಗೊಮೆರಿ ಹೇಳಿದ್ದಾರೆ. ದನ್ನೂ ಓದಿ: 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ

    ಮಾನವರಿಗೆ ಪ್ರಾಣಿಗಳ ಅಂಗಗಳನ್ನು ಜೋಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಆದರೆ ಕಸಿ ಮಾಡಿದ ತಕ್ಷಣ ಮಾನವ ದೇಹ ಸ್ಪಂದನೆ ನೀಡುತ್ತಿದೆ. ರಾಬರ್ಟ್ ಅವರ ತಂಡ ಈ ನಿಟ್ಟಿನಲ್ಲಿ ಮೊದಲ ಹಂತದ ಯಶಸ್ಸುಗಳಿಸಿದೆ. ಈ ಪ್ರಯೋಗವನ್ನು ಥೇರಪ್ಯೂಟಿಕ್ಸ್ ಕಾಪ್ರ್ಸ್ ರಿವಿವಿಕಾರ್ ಯುನಿಟ್ ಮಾಡಿದೆ.

  • ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ- ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್

    ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ- ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್

    ಯಾದಗಿರಿ: ಶಾಲೆಗೆ ಬರದೇ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ಶಾಲೆ ಓಪನ್ ಆದ್ರೂ ಶಾಲೆ ಕಡೆ ಮುಖ ಮಾಡದ ವಿದ್ಯಾರ್ಥಿಗಳು, ಶಾಲೆಗೆ ಗೈರು ಕೂಲಿಗೆ ಹೋಗುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿಗಳು ಬಾಲಕಾರ್ಮಿಕರಾಗುತ್ತಿದ್ದಾರೆ.

    ಇಡೀ ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ಆರನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ, ಏಳನೇ ತರಗತಿಯಲ್ಲಿ ನಾಲ್ಕು ಮಕ್ಕಳು ಇದ್ದರು. ಉಳಿದ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು,ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಸಂಬರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸ್ಥಿತಿಯನ್ನು,ಹೇಳೊರಿಲ್ಲ ಕೇಳೋರಿಲ್ಲ ಎಂಬುವಂತಾಗಿದೆ. ಅಮಿತ್ ಶಾಗೆ ವಿಶ್ ಮಾಡಿ ಟ್ರೋಲ್‍ಗೊಳಗಾದ ನಟಿ ಸಾರಾ ಅಲಿಖಾನ್

    ಈ ಶಾಲೆಯಲ್ಲಿ ಸುಮಾರು 250 ಮಕ್ಕಳ ದಾಖಲಾತಿದ್ದು, 6 ನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ ಶಾಲೆಗೆ ಬಂದ್ರೆ ಇನ್ನೂಳಿದ 49 ವಿದ್ಯಾರ್ಥಿಗಳು ಕೆಲಸಕ್ಕೆ ಹೋಗುತ್ತಿದ್ದಾರೆ. 7ನೇ ತರಗತಿಯಲ್ಲಿ 60 ಮಕ್ಕಳಿದ್ದು, ಇದರಲ್ಲಿ 4 ಜನ ವಿದ್ಯಾರ್ಥಿಗಳು ಶಾಲೆಗೆ ಬರ್ತಿದ್ದಾರೆ. ಹಲವಾರು ದಿನಗಳಿಂದ ಇದೆ ಪರಿಸ್ಥಿತಿ ನಡಿತೀದ್ರೂ ಶಿಕ್ಷಕರು ಫುಲ್ ಸೈಲಂಟ್ ಆಗಿದ್ದಾರೆ.

    ಮಕ್ಕಳು ಕೂಲಿಗೆ ಹೋದ್ರು ಶಿಕ್ಷಣ ಇಲಾಖೆ ಮಾತ್ರ ಕಣ್ಮುಚ್ಚಿದೆ. ಮಕ್ಕಳ ಕೂಲಿ ಕೆಲಸವೇ ನೆಪಾವಗಿಟ್ಟುಕೊಂಡ ಟೀಚರ್ಸ್, ಕಾಟಾಚಾರಕ್ಕೆ ಶಾಲೆಗೆ ಬಂದು, ಹರಟೆ ಹೊಡೆದು ಮತ್ತೆ ಸಂಜೆ ಮನೆಯ ವಾಪಸ್ ಆಗತ್ತಾರೆ.

    ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಇದು ಬಯಲಾಗಿದೆ. ಉರಿ ಬಿಸಿಲು, ಜಡಿ ಮಳೆಯನ್ನದೇ ದಿನವಿಡೀ ಮಕ್ಕಳು ಹತ್ತಿ ಹೊಲದಲ್ಲಿ ದುಡಿಯುತ್ತಿದ್ದಾರೆ. ಸ್ವತಃ ಪೋಷಕರೇ ಮಕ್ಕಳನ್ನು ಕೂಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಯಾದಗಿರಿ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರು ಹೆಚ್ಚುತ್ತಿದ್ದು, 150 ರೂ. ಕೂಲಿಗಾಗಿ ಈಡೀ ದಿನ ಶಾಲಾ ಮಕ್ಕಳು ದುಡಿವಂತಾಗಿದೆ.ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಸಂಬರ, ವಂಕಸಂಬರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.

    ಇನ್ನೂ ಪೋಷಕರ ಒತ್ತಾಯಿಂದ ಕೂಲಿಗೆ ತೆರಳುತ್ತಿರುವ ವಿದ್ಯಾರ್ಥಿಗಳು ಶಾಲೆಯನ್ನು ನೆನದು ಕಣ್ಣೀರು ಹಾಕುತ್ತಿದ್ದಾರೆ. ಸರ್ ಶಾಲೆಗೆ ಹೋಗು ಅನ್ನಸತ್ತಿದೆ ಆದರೆ ಬಡತನ ಅದಕ್ಕೆ ಕೂಲಿಗೆ ಬಂದೆ. ನಮ್ಮ ಸರ್, ಗೆಳೆಯರು ನೆನಪಾಗುತ್ತಾರೆ, ಕೂಲಿ ಮಾಡೋಕೆ ಕಷ್ಟ ಆಗುತ್ತಿದೆ ಎಂದು ಪಬ್ಲಿಕ್ ಟಿವಿ ಕ್ಯಾಮರಾ ಎದುರು ಮುಗ್ಧ ವಿದ್ಯಾರ್ಥಿಗಳ ಅಳಲು ತೋಡಿಕೊಂಡಿದ್ದಾರೆ.

  • ಫ್ರೀಯಾಗಿ ಕೋಳಿ ಕೊಡಲಿಲ್ಲ- ಹಿಗ್ಗಾಮುಗ್ಗ ಥಳಿಸಿದ್ರು

    ಫ್ರೀಯಾಗಿ ಕೋಳಿ ಕೊಡಲಿಲ್ಲ- ಹಿಗ್ಗಾಮುಗ್ಗ ಥಳಿಸಿದ್ರು

    ಬಿಹಾರ್: ಸಿಂಘು ಗಡಿಯಲ್ಲಿ ವ್ಯಕ್ತಿಯೋರ್ವನನ್ನ ನಿಹಾಂಗ್ ಸಮುದಾಯದ ಮುಖಂಡರು ಭೀಕರವಾಗಿ ಹತ್ಯೆ ನಡೆಸಿದ ಆರೋಪದ ಬೆನ್ನಲ್ಲೇ ಇದೀಗ ಮತ್ತೊಮ್ಮೆ ರೈತರು ಪ್ರತಿಭಟನೆ ನಡೆಸುತ್ತಿದ್ದ ಜಾಗದಲ್ಲೇ ಸದಸ್ಯನನ್ನ ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

    ಮನೋಜ್ ಪಾಸ್ವಾನ್ ಹಲ್ಲೆಗೊಳಗಾದವನಾಗಿದ್ದಾನೆ. ಈತ ಹೈನುಗಾರಿಕೆ ನಡೆಸುವ ರೈತ ರಿಕ್ಷಾದಲ್ಲಿ ಕೋಳಿಗಳನ್ನು ಸಾಗಿಸುತ್ತಿದ್ದನು. ಈ ವೇಳೆ ಉಚಿತವಾಗಿ ಕೋಳಿಯೊಂದನ್ನು ನೀಡುವಂತೆ ನಿಹಾಂಗ್ ಸಮುದಾಯದ ವ್ಯಕ್ತಿ ಕೇಳಿದ್ದಾನೆ. ಆಗ ಮನೋಜ್ ಪಾಸ್ವಾನ್ ಕೋಳಿ ನೀಡಲು ನಿರಾಕರಿಸಿದ್ದಾನೆ. ಆಗ ಈತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

    ಹಲ್ಲೆಗೊಳಗಾದ ಮನೋಜ್ ಪಾಸ್ವಾನ್ ಮಾತನಾಡಿ, ಅಲ್ಲೊಬ್ಬ ಸರ್ದಾರ್‌ಜೀ ಇದ್ದನು. ಅವನು ನಿಹಾಂಗ್ ಬಾಬಾ ನನ್ನ ಬಳಿ ಉಚಿತವಾಗಿ ಕೋಳಿ ನೀಡುವಂತೆ ಕೇಳಿದ. ಕೋಳಿ ಕೊಟ್ಟೆರೆ ನನ್ನ ಮೇಲೆ ಕೋಳಿ ಕಳ್ಳತನದ ಆರೋಪ ಬರುತ್ತದೆ ಎಂದು ನಾನು ನಿರಾಕರಿಸಿದೆ. ಜೇಬಿನಲ್ಲಿದ್ದ ಚೀಟಿ ತೆಗೆದು ತೋರಿಸುವಾಗ ನನ್ನ ಬಳಿ ಬೀಡಿ ಇರುವುದು ನಿಹಾಂಗ್ ಬಾಬಾನಿಗೆ ತಿಳಿಯಿತ್ತು. ಪ್ರತಿಭಟನೆ ಸ್ಥಳದಲ್ಲಿ ಬೀಡಿ ಸೇದುತ್ತೀಯಾ ಎಂದು ಹೇಳಿ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

  • ಮಹಿಳಾ ಕಾಂಗ್ರೆಸ್‍ನಿಂದ ನಳೀನ್ ಕುಮಾರ್ ಕಟೀಲ್‍ಗೆ ಫಿನಾಯಿಲ್ ರವಾನೆ

    ಮಹಿಳಾ ಕಾಂಗ್ರೆಸ್‍ನಿಂದ ನಳೀನ್ ಕುಮಾರ್ ಕಟೀಲ್‍ಗೆ ಫಿನಾಯಿಲ್ ರವಾನೆ

    ಕೊಪ್ಪಳ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ನಳೀನ್ ಕುಮಾರ್ ಕಟೀಲ್‍ಗೆ ಅಂಚೆ ಮುಖಾಂತರ ಫೆನಾಯಿಲ್ ತಲುಪಿಸುವಂತೆ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದ ಮೇರೆಗೆ ಇಂದು ಕೊಪ್ಪಳ ನಗರದ ಅಂಚೆ ಕಚೇರಿ ಮುಂಭಾಗದಲ್ಲಿ ಅರ್ಧ ಗಂಟೆ ಪ್ರತಿಭಟನಾರ್ಥ ಮೌನವಾಗಿ ಕುಳಿತು, ಸಂಸದ ನಳೀನ್ ಕುಮಾರ್‌ಗೆ ಫಿನಾಯಲ್ ಕಳಿಸುವ ಕಾರ್ಯಕ್ರಮ ನಡೆಯಿತು.ಇದನ್ನೂ ಓದಿ:  ಕೋಮುದ್ವೇಷಕ್ಕೆ ಸಂಚು ರೂಪಿಸಿದ್ದ ಲೋಕಂಡ್ವಾಲಾ ಗ್ಯಾಂಗ್ ಅಂದರ್

    ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್, ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ, ಸಂಸದ ನಳೀನ್‍ಕುಮಾರ್ ಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದು, ಡ್ರಗ್ಸ್ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿದ್ದು, ದೇಶದ ಎಲ್ಲಾ ಉನ್ನತ ತನಿಖಾ ಸಂಸ್ಥೆಯವರು ಕೂಡಲೇ ನಳೀನ್‍ಕುಮಾರ್ ಅವರನ್ನು ಬಂಧಿಸಿ, ಅವರನ್ನು ವಿಧಿವಿಜ್ಞಾನ ಪ್ರಯೋಗಾಲಯದ ಮೂಲಕ ಮಾಹಿತಿ ಪಡೆಯಬೇಕು. ಅವರ ಹಿಂದೆ ದೊಡ್ಡ ಡ್ರಗ್ಸ್ ಮಾಫಿಯಾ ಗ್ಯಾಂಗ್ ಇರುವ ಅನುಮಾನ ದಟ್ಟವಾಗಿದೆ. ಅನುಮಾನ ಹೋಗಲಾಡಿಸಲು ರಾಜ್ಯದ ಮುಖ್ಯಮಂತ್ರಿ ಮತ್ತು ಪ್ರಧಾನಿ ಅವರು ತಾವೇ ಅದಕ್ಕೆ ಮುಂದಾಗಬೇಕು ಎಂದಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

    ಈಚೆಗೆ ಗುಜರಾತ್ ಆದಾನಿ ಬಂದರಿನಲ್ಲಿ ಸಿಕ್ಕ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಪತ್ತೆಯಾದರೂ ಸಹ ಬಿಜೆಪಿ ಸರ್ಕಾರಗಳ ಮೌನ ನೋಡಿದರೆ ದೇಶದ ಜನರಿಗೆ ಬಿಜೆಪಿನೇ ಡ್ರಗ್ಸ್ ಕೊಡುತ್ತಿದೆಯಾ ಎಂಬ ಅನುಮಾನ ಬರುತ್ತದೆ. ರಾಹುಲ್ ಗಾಂಧಿ ಅವರು ಅತ್ಯಂತ ಸರಳ ಸ್ವಭಾವದ ವಿದ್ಯಾವಂತ ನಾಯಕ, ಆಪಾದನೆ ಮಾಡುವಾಗ ಮೈ ಮೇಲೆ ಎಚ್ಚರ ಇರಬೇಕು. ನಿಶೆಯಲ್ಲಿ ಮಾತನಾಡುವದನ್ನು ಬಿಡಬೇಕು. ಬಿಟ್ಟಿ ಪ್ರಚಾರದ ತೆವಲನ್ನು ಬಿಟ್ಟು, ಸಂಸದರು ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ ಪ್ರಚಾರ ಪಡೆಯಲಿ. ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ನಳೀನ್ ಚಾರಿತ್ರ್ಯದಲ್ಲಿಯೇ ಇಲ್ಲ. ಅದಕ್ಕಾಗಿ ಅವರು ತಮ್ಮ ಹೊಲಸು ನಾಲಿಗೆಯನ್ನು ತೊಳೆದುಕೊಳ್ಳಲಿ ಎಂದು ಅಂಚೆ ಸ್ಪೀಡ್ ಪೋಸ್ಟ್ ಮೂಲಕ ಮಹಿಳಾ ಕಾಂಗ್ರೆಸ್ ನಿಂದ ಉಚಿತವಾಗಿ ಫಿನಾಯಿಲ್ ಕಳಿಸಿದ್ದೇವೆ ಬಾಯಿ ತೊಳೆದುಕೊಂಡು ದೇಶದ ಜನರ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಕ್ಷಮೆ ಕೇಳಿ ಅದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಾಕಿರಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

  • ಕೋಮುದ್ವೇಷಕ್ಕೆ ಸಂಚು ರೂಪಿಸಿದ್ದ ಲೋಕಂಡ್ವಾಲಾ ಗ್ಯಾಂಗ್ ಅಂದರ್

    ಕೋಮುದ್ವೇಷಕ್ಕೆ ಸಂಚು ರೂಪಿಸಿದ್ದ ಲೋಕಂಡ್ವಾಲಾ ಗ್ಯಾಂಗ್ ಅಂದರ್

    ಮಂಗಳೂರು: ಕಡಲನಗರಿ ಮಂಗಳೂರು ಅತ್ಯಂತ ಕೋಮುಸೂಕ್ಷ್ಮ ಪ್ರದೇಶವಾಗಿದ್ದು, ಇದೀಗ ಮತ್ತೆ ಕೋಮುದ್ವೇಷಕ್ಕೆ ಸಂಚು ರೂಪಿಸಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

    ಲೋಕಂಡ್ವಾಲಾ ಗ್ಯಾಂಗ್‍ನ ಪ್ಲ್ಯಾನ್ ಪ್ಲಾಫ್ ಆಗಿದೆ. ನಗರದ ಹೊರವಲಯದ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮತ್ತೊಮ್ಮೆ ಅಂದರ್ ಆಗಿದ್ದಾನೆ. ಲೋಕಂಡ್ವಾಲಾ ಗ್ಯಾಂಗ್ ರಚಿಸಿ ಮತ್ತೆ ಕೋಮುಧ್ವೇಷಕ್ಕೆ ಸಂಚು ರೂಪಿಸಿದ್ದ ಪಿಂಕಿ ನವಾಜ್ ಗ್ಯಾಂಗ್‍ನ್ನು ಮಂಗಳೂರು ಪೊಲೀಸರು ಅಂದರ್ ಮಾಡಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

    ಪಿಂಕಿ ನವಾಜ್, ಮೊಹಮ್ಮದ್ ಸಫ್ವಾನ್, ಮೊಹಮ್ಮದ್ ನಿಯಾಝ್, ಮೊಹಮ್ಮದ್ ನವಾಝ್, ಮೊಹಮ್ಮದ್ ಫೈಝಲ್, ಮೊಹಮ್ಮದ್ ಮುಸ್ತಾಫ ಎಂಬ ಗ್ಯಾಂಗ್‍ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತಿಚೇಗೆ ಪಿಂಕಿ ನವಾಜ್ ದೀಪಕ್ ರಾವ್ ಹತ್ಯೆ ಪ್ರಕರಣದ ಸಾಕ್ಷಿಗಳಿಗೆ ಆಡಿಯೋ ಮೂಲಕ ಬೆದರಿಕೆ ಹಾಕಿದ್ದ. ಸಾಕ್ಷಿದಾರರೇ ಮುಂದಿನ ಟಾರ್ಗೆಟ್ ಎಂದು ಹೇಳಿಕೊಂಡಿದ್ದ. ಈ ಆಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಈ ಗ್ಯಾಂಗ್‍ನ್ನು ಬಂಧಿನ ಮಾಡಿದ್ದಾರೆ. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

    ಬಿ.ಜೆ.ಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಸಾಕಷ್ಟು ಸುದ್ದಿಯಾಗಿತ್ತು. ಇತ್ತಿಚೇಗೆ ದೀಪಕ್ ರಾವ್ ಸ್ಮರಣಾರ್ಥ ಕಾಟಿಪಳ್ಳದಲ್ಲಿ ಬಸ್‍ಸ್ಟ್ಯಾಂಡ್‍ನ್ನು ಸ್ಥಳೀಯ ಶಾಸಕ ಭರತ್ ಶೆಟ್ಟಿ ಲೋಕಾರ್ಪಣೆಗೊಳಿಸಿದ್ದರು. ಈ ಕುರಿತು ಲೋಕಂಡ್ವಾಲಾ ವಾಟ್ಸಪ್ ಗ್ರೂಪ್‍ನಲ್ಲಿ ಪಿಂಕಿ ನವಾಜ್ ತಂಡ ಚರ್ಚೆ ನಡೆಸಿ ಇದಕ್ಕೂ ಸಹ ಈ ಗ್ಯಾಂಗ್ ವಿರೋಧ ವ್ಯಕ್ತಪಡಿಸಿತ್ತು. ಇದರ ಜೊತೆ ಸುಪಾರಿ ಹತ್ಯೆ ಮಾಡುವುದಕ್ಕೂ ಈ ತಂಡ ರೆಡಿಯಾಗಿ ಇತ್ತು. ಸುರತ್ಕಲ್ ಪರಿಸರದಲ್ಲಿ ನಮ್ಮ ಹವಾ ಇನ್ಮುಂದೆಯು ಇರಬೇಕು ಜನ ಹೆದರಿಕೊಳ್ಳುವಂತೆ ಇರಬೇಕು ಎಂದು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ ಈ ಎಲ್ಲಾ ಮಾಹಿತಿ ಪಡೆದ ಪೊಲೀಸರು ಗ್ಯಾಂಗ್‍ನ ಪ್ರಮುಖರನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಹೊಸ IPL ತಂಡ ಖರೀದಿಸಲು ಮುಂದಾದ ರಣವೀರ್, ದೀಪಿಕಾ

    ಈ ಗ್ಯಾಂಗ್‍ನಲ್ಲಿ ಇನ್ನಷ್ಟು ಕ್ರಿಮಿನಲ್‍ಗಳು ಇರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಸದ್ಯ ಬಂಧನ ಆಗಿರುವವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ರೆಡಿಯಾಗಿದ್ದ ಗ್ಯಾಂಗ್ ಅಂದರ್ ಆಗಿರುವುದು ಜನರಿಗೆ ನೆಮ್ಮದಿಗೆ ತಂದಿದೆ.

  • ಹೊಸ IPL ತಂಡ ಖರೀದಿಸಲು ಮುಂದಾದ ರಣವೀರ್, ದೀಪಿಕಾ

    ಹೊಸ IPL ತಂಡ ಖರೀದಿಸಲು ಮುಂದಾದ ರಣವೀರ್, ದೀಪಿಕಾ

    ಮುಂಬೈ: ಬಾಲಿವುಡ್ ಸೆಲೆಬ್ರಿಟಿ ಸ್ಟಾರ್ ಆಗಿರುವ ರಣವೀರ್, ದೀಪಿಕಾ ಜೋಡಿ ಐಪಿಎಲ್ ತಂಡ ಖರೀದಿಸಲು ಮುಂದಾಗಿದ್ದಾರೆ. 2022ರ ಐಪಿಎಲ್‍ಗೆ 2 ಹೊಸ ಫ್ರಾಂಚೈಸಿಗಳು ಸೇರ್ಪಡೆಗೊಳ್ಳಲಿದ್ದು, ರಣವೀರ್ ಐಪಿಎಲ್ ತಂಡ ಖರೀದಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಅದಾನಿ ಗ್ರೂಪ್, ಆರ್‌ಪಿಜಿ ಸಂಜೀವ್ ಗೋಯೆಂಕಾ ಗ್ರೂಪ್ ಸೇರಿದಂತೆ ವಿದೇಶಿ ಕಾರ್ಪೋರೇಟ್ ಕಂಪೆನಿಗಳು ಬಿಡ್ ಸಲ್ಲಿಸಲು ಮುಂದಾಗಿವೆ. ಆದರೆ ಈ ನಡುವೆ ಬಾಲಿವುಡ್ ಸೂಪರ್ ಸ್ಟಾರ್ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಐಪಿಎಲ್ ಫ್ರಾಂಚೈಸಿ ಖರೀದಿಗೆ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

     

    ಐಪಿಎಲ್ ಹಾಗೂ ಬಾಲಿವುಡ್ ನಡುವೆ ವಿಶೇಷ ಸಂಬಂಧ ಹೊಂದಿದ್ದು, ಈಗಾಗಲೇ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಮತ್ತು ಜೂಹಿ ಚಾವ್ಲಾ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ಪ್ರೀತಿ ಝಿಂಟಾ ಒಡೆತನದ ಪಂಜಾಬ್ ಕಿಂಗ್ಸ್ ತಂಡಗಳನ್ನು ನೋಡಬಹುದಾಗಿದೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

    ದೀಪಿಕಾ ಕ್ರೀಡೆ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು, ಆಕೆಯ ತಂದೆ ಪ್ರಕಾಶ್ ಪಡುಕೋಣೆ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಮಾಜಿ ಚಾಂಪಿಯನ್ ಆಗಿದ್ದಾರೆ. ರಣವೀರ್ ಇಂಗ್ಲಿಷ್ ಪ್ರೀಮಿಯರ್ ಲೀಗ್‍ನಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಪ್ರಸ್ತುತ ವಿಶ್ವದ ಅತ್ಯಂತ ಜನಪ್ರಿಯ ಬ್ಯಾಸ್ಕೆಟ್‍ಬಾಲ್ ಲೀಗ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ.