Tag: publictv

  • ಕಲ್ಯಾಣ ಕಲಾಶಿಬಿರದ ಮೂಲಕ ಯುವತಿಯ ಕೈ ಹಿಡಿದ ಚಿತ್ರಕಲಾವಿದ!

    ಕಲ್ಯಾಣ ಕಲಾಶಿಬಿರದ ಮೂಲಕ ಯುವತಿಯ ಕೈ ಹಿಡಿದ ಚಿತ್ರಕಲಾವಿದ!

    ರಾಯಚೂರು: ಮಂತ್ರಪಠಣ, ವಾಲಗಗಳ ಅಬ್ಬರವಿಲ್ಲದೇ ರಾಯಚೂರಿನಲ್ಲೊಂದು ಸಿಂಪಲ್ ಮದ್ವೆ ನಡೀತು. ಜಹಿರಬಾದ್‍ನ ಚಿತ್ರಕಲಾವಿದ ಮಲ್ಲಿಕಾರ್ಜುನ್ ಕಲ್ಯಾಣ ಕಲಾಶಿಬಿರ ನಡೆಸೋ ಮೂಲಕ ಅನಕ್ಷರಸ್ಥ ಯುವತಿ ಮಹಾಲಕ್ಷ್ಮಿಯೊಂದಿಗೆ ಸಪ್ತಪದಿ ತುಳಿದ್ರು.

    ನಗರದ ಕನ್ನಡ ಭವನದಲ್ಲಿ ನಡೆದ ಕಲಾಶಿಬಿರದಲ್ಲಿ ಕ್ಯಾನ್‍ವಾಸ್ ಮೇಲೆ ಶಿವಲಿಂಗ ಬಿಡಿಸಿ ಅದಕ್ಕೆ ಹಳದಿ ,ಕೆಂಪು ಬಣ್ಣ ಹಚ್ಚುವ ಮೂಲಕ ಹಾರಬದಲಿಸಿಕೊಂಡು ಸರಳ ಹಾಗೂ ವಿಶೇಷವಾಗಿ ಮದ್ವೆಯಾದ್ರು.

     

    ರಾಜ್ಯದ ವಿವಿಧೆಡೆಯಿಂದ ಬಂದ 20 ಕಲಾವಿದರು ಬಿಡಿಸಿದ ಕಲಾಕೃತಿಗಳನ್ನೇ ಪ್ರದರ್ಶನಕ್ಕಿಡಲಾಗಿತ್ತು. ಎರಡು ದಿನಗಳ ಕಾಲ ನಡೆದ ಕಲ್ಯಾಣ ಕಲಾ ಶಿಬಿರದಲ್ಲಿ ಒಟ್ಟು 150 ಜನ ಕಲಾವಿದರು ಭಾಗವಹಿಸಿ ವಧುವರರಿಗೆ ಹಾರೈಸಿದರು. ದುಬಾರಿ ಮದುವೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿರುವ ಹೊತ್ತಿನಲ್ಲಿ ಸರಳ ವಿವಾಹ ನಡೆದಿರೋದು ವಿಶೇಷ.

  • ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

    ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

    ಬೆಂಗಳೂರು: ಐಪಿಎಲ್ ಸೀಸನ್ 10ರ ಹರಾಜು ಪ್ರಕ್ರಿಯೆ ಇಂದು ಬೆಂಗಳೂರಿನ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 357 ಕ್ರಿಕೆಟಿಗರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ತಿದ್ದು, ಇದರಲ್ಲಿ 227 ಮಂದಿ ಭಾರತೀಯ ಆಟಗಾರರೇ ಇದ್ದಾರೆ.

    ಉಳಿದಂತೆ 130 ಮಂದಿ ವಿದೇಶಿ ಆಟಗಾರರು ಹರಾಜಿಗೆ ಲಭ್ಯ ಇದ್ದಾರೆ. ಇದರಲ್ಲಿ ಅಫ್ಘಾನಿಸ್ತಾನದ ಐವರು ಆಟಗಾರರು ಹರಾಜಿಗೆ ಇರೋದು ಈ ಬಾರಿ ವಿಶೇಷ. ಐಪಿಎಲ್ ಫ್ರಾಂಚೈಸಿಗಳಿಗೆ ಬೇಕಾಗಿರೋದು 76 ಆಟಗಾರರು ಮಾತ್ರ. ಐಪಿಎಲ್‍ನ ಒಟ್ಟು 8 ಫ್ರಾಂಚೈಸಿಗಳು ಪಾಲ್ಗೊಳ್ಳುತ್ತಿದ್ದು, ಯಾರು ಯಾವ ತಂಡದ ಪಾಲಾಗಲಿದ್ದಾರೆ ಅನ್ನೊದು ಕುತೂಹಲ ಮೂಡಿಸಿದೆ. ಎಲ್ಲರ ಕಣ್ಣು ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್, ನ್ಯೂಜಿಲೆಂಡ್‍ನ ಗ್ರಾಂಡ್‍ಹೋಮ್, ಆಫ್ರಿಕಾದ ಕಾಗಿಸೋ ರಬಾಡಾ, ಇಮ್ರಾನ್ ತಾಹೀರ್, ಲಂಕಾದ ಅಸಿಲಾ ಗುಣರತ್ನೆ, ಭಾರತದ ಇಶಾಂತ್ ಶರ್ಮಾ ಮೇಲಿದೆ.

    ಇನ್ನು ಆಟಗಾರರನ್ನು ಕೊಳ್ಳಲು ಯಾವ ಯಾವ ಫ್ರಾಂಚೈಸಿ ಬಳಿ ಎಷ್ಟೆಷ್ಟು ಹಣ ಇದೆ ಅನ್ನೋದನ್ನು ನೋಡೋದಾದ್ರೆ,

    1. ಕಿಂಗ್ಸ್ ಇಲೆವೆನ್ ಪಂಜಾಬ್ – 23.35 ಕೋಟಿ
    2. ಡೆಲ್ಲಿ ಡೇರ್ ಡೆವಿಲ್ಸ್ – 21.5 ಕೋಟಿ
    3. ಸನ್ ರೈಸರ್ಸ್ ಹೈದ್ರಾಬಾದ್ – 20.9 ಕೋಟಿ
    4. ಕೊಲ್ಕೊತಾ ನೈಟ್ ರೈಡರ್ಸ್ – 19.75 ಕೋಟಿ
    5. ಜೈಸಿಂಗ್ ಪುಣೆ ಸೂಪರ್ ಜೈಂಟ್ಸ್ – 19.01 ಕೋಟಿ
    6. ಗುಜರಾತ್ ಲಯನ್ಸ್ – 14.35 ಕೋಟಿ
    7. ರಾಯಲ್ ಚಾಲೆಂಜರ್ಸ್ ಬೆಂಗಳೂರು – 12.82 ಕೋಟಿ
    8. ಮುಂಬೈ ಇಂಡಿಯನ್ಸ್ – 11.55 ಕೋಟಿ

  • ಏರ್ ಶೋದಿಂದಾಗಿ ನಡೆಯಿತು ನಾಗರಹಾವುಗಳ ಮಾರಣ ಹೋಮ..!

    ಏರ್ ಶೋದಿಂದಾಗಿ ನಡೆಯಿತು ನಾಗರಹಾವುಗಳ ಮಾರಣ ಹೋಮ..!

    ಬೆಂಗಳೂರು: ಇಲ್ಲಿನ ಯಲಹಂಕದ ವಾಯನೆಲೆಯಲ್ಲಿ ಏರ್ ಶೋ ಕಾರ್ಯಕ್ರಮವೇನು ಅದ್ಧೂರಿಯಾಗಿ ನಡೆಯಿತು. ಆದ್ರೆ ಏರ್ ಶೋನಿಂದಾಗಿ ನಾಗರಹಾವುಗಳ ಮಾರಣ ಹೋಮವೇ ನಡೆದು ಹೋಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಹೌದು. ಏರ್ ಶೋ ನಡೆಯುವ ಸ್ಥಳ ಹಾವಿನ ವಾಸಸ್ಥಳವಾಗಿದೆ. ಏರ್ ಶೋ ಸಂದರ್ಭದಲ್ಲಿ ಭೂಮಿ ಕಂಪಿಸುತ್ತಿತ್ತು. ಈ ವೇಳೆ ಬೆದರಿ ಹಾವುಗಳು ಹೊರಬಂದಿದ್ದವು. ಜನಸಂದಣಿ ಹೆಚ್ಚಿದ್ರಿಂದ ಭೀತಿಗೊಂಡ ಜನ ಹಾವಿಗೆ ಕಲ್ಲು ಎಸೆದು ಕೊಂದಿದ್ದರು. ಕೊನೆಗೆ ವಿಷಯ ತಿಳಿದ ಸ್ನೇಕ್ ಶಿವಪ್ಪ, ಬರೋಬ್ಬರಿ ಬರೋಬ್ಬರಿ 27 ಹಾವುಗಳನ್ನು ರಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೇ ಹಾವುಗಳ ಮಾರಣಹೋಮದಿಂದ ಬೇಸತ್ತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    3 ವರ್ಷದ ಏರ್ ಶೋನಲ್ಲಿ ಐವತ್ತು ಹಾವನ್ನು ಕೊಂದು ಹಾಕಿದ್ದಾರೆ ಎಂದು ಆರೋಪ ಮಾಡಿದ ಶಿವಪ್ಪ, ನಾಗರಹಾವು ಕೊಂದ ಪಾಪ ಅವರಿಗೆ ಅಂಟಿಕೊಳ್ಳುತ್ತೆ. ಏರ್ ಶೋ ನಡೆಯೋ ಜಾಗಕ್ಕೂ ಕಂಟಕವಾಗಲಿದೆ. ಹಾವಿಗೆ ಸಂಸ್ಕಾರ ಮಾಡದೇ ಬೇಲಿ ಬದಿಯಲ್ಲಿ ಎಸೆದಿದ್ದಾರೆ. ಆ ಪಾಪ ಸುಮ್ಮನೆ ಬಿಡಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    https://www.youtube.com/watch?v=GXmywmnY7vE&feature=youtu.be

  • ಆಫ್ರಿಕಾದಲ್ಲಿ ಬಲಿಯಾದ ಕೊಪ್ಪಳ ವ್ಯಕ್ತಿಯ ಮೃತದೇಹ ಭಾರತಕ್ಕೆ ತರಲು ಸುಷ್ಮಾ ಸಹಾಯ

    ಆಫ್ರಿಕಾದಲ್ಲಿ ಬಲಿಯಾದ ಕೊಪ್ಪಳ ವ್ಯಕ್ತಿಯ ಮೃತದೇಹ ಭಾರತಕ್ಕೆ ತರಲು ಸುಷ್ಮಾ ಸಹಾಯ

    ಕೊಪ್ಪಳ: ಉತ್ತರ ಆಪ್ರಿಕಾದಲ್ಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಇದೀಗ ವ್ಯಕ್ತಿಯ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಸಹಾಯ ಮಾಡುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ಸೈಯದ್ ಫಾರೂಕ್ ಬಾಷಾ ಖಾದ್ರಿ (25) ಶನಿವಾರ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದರು. ಗಂಗಾವತಿಯ ಶಾಸಕ ಇಕ್ಬಾಲ್ ಅನ್ಸಾರಿಯವ ಆಪ್ತ ಸಹಾಯಕ ಸೈಯದ್ ಬದ್ರುದ್ದಿನ್ ಅವರ ಪುತ್ರ ಉತ್ತರ ಆಫ್ರಿಕಾದ ಸೂಡಾನ್ ನ ಸಾಫ್ಟ್‍ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿ ಕಳೆದ 2 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

    ಕಂಪೆನಿಯ ವಾಹನದಲ್ಲಿ ಕೆಲಸ ತೆರಳುತ್ತಿರುವಾಗ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಫಾರೂಖ್ ಮತ್ತು ವಾಹನದ ಚಾಲಕ ಮೃತಪಟ್ಟಿದ್ದಾರೆ. ಇದೀಗ ಮೃತದೇಹವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಫಾರೂಖ್ ಸಂಬಂಧಿಕರು ವಿದೇಶಾಂಗ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಈ ಮನವಿಗೆ ಸ್ಪಂದಿಸಿದ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟರ್ ನಲ್ಲಿ ಸಹಾಯ ಮಾಡುವುದಾಗಿ ಪ್ರತಿಕ್ರಿಯಿಸಿಸಿ, ಸಂಬಂಧಪಟ್ಟವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.

    ಸದ್ಯ ಸೈಯದ್ ಬದ್ರುದ್ದಿನ್‍ರ ಕುಟುಂಬಸ್ಥರು ಆಂಧ್ರದ ಕರ್ನೂಲ್ ನಲ್ಲಿ ವಾಸವಾಗಿದ್ದಾರೆ.

     

  • ಹುಚ್ಚು ನಾಯಿ ಕಚ್ಚಿ ಮಕ್ಕಳಿಗೆ ಗಂಭೀರ ಗಾಯ

    ಹುಚ್ಚು ನಾಯಿ ಕಚ್ಚಿ ಮಕ್ಕಳಿಗೆ ಗಂಭೀರ ಗಾಯ

    ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಇಬ್ಬರು ಮಕ್ಕಳಿಗೆ ಕಡಿದು ಗಂಭೀರ ಗಾಯಗೊಳಿಸಿದೆ.

    6 ವರ್ಷದ ಅಜಯ್ ಮತ್ತು 4 ವರ್ಷದ ಕಾವೇರಿ ಹುಚ್ಚು ನಾಯಿ ಕಡಿತಕ್ಕೊಳಗಾಗಿರುವ ಮಕ್ಕಳು. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದ ಹುಚ್ಚುನಾಯಿ ಸಿಕ್ಕಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಅಜಯ್‍ನ ಕುತ್ತಿಗೆ ಭಾಗಕ್ಕೆ ಬಲವಾಗಿದೆ ಕಚ್ಚಿದೆ. ಕಾವೇರಿಯ ತಲೆ ಹಾಗೂ ಮುಖಕ್ಕೆ ಕಚ್ಚಿದ್ದು ಮಕ್ಕಳ ಸ್ಥಿತಿ ಗಂಭೀರವಾಗಿದೆ.

    ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಇಬ್ಬರನ್ನೂ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಹುಚ್ಚುನಾಯಿ ಗ್ರಾಮದ ಸುತ್ತಮುತ್ತ ಇನ್ನೂ ಓಡಾಡಿಕೊಂಡಿದ್ದು ಗ್ರಾಮದ ಜನರು ಭಯಭೀತರಾಗಿದ್ದಾರೆ. ತಕ್ಷಣ ಸಂಬಂಧಪಟ್ಟವರು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

     

  • ವಿಮಾನದಲ್ಲಿ ಬಂದಿಳಿದ ಈ ಮಹಿಳೆ ಚಿನ್ನ ಸಾಗಾಟ ಮಾಡ್ತಿದ್ದಿದ್ದು ಹೇಗೆ ಗೊತ್ತಾ..!?

    ವಿಮಾನದಲ್ಲಿ ಬಂದಿಳಿದ ಈ ಮಹಿಳೆ ಚಿನ್ನ ಸಾಗಾಟ ಮಾಡ್ತಿದ್ದಿದ್ದು ಹೇಗೆ ಗೊತ್ತಾ..!?

    ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

    ಚೆನ್ನೈ ಮೂಲದ ಮಹಿಳೆಯೊಬ್ಬರು ಬ್ಯಾಂಕಾಂಕ್‍ನಿಂದ ಬೆಂಗಳೂರಿಗೆ ಬಂದಿಳಿದ್ದಳು. ಈ ವೇಳೆ ಕಸ್ಟಮ್ಸ್ ಹಾಗೂ ಏರ್ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮಹಿಳೆ 12.48 ಮೌಲ್ಯದ ಚಿನ್ನ ಸಾಗಾಟ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ. ಈಕೆ ತನ್ನ ಗುದದ್ವಾರದ ಮೂಲಕ ಚಿನ್ನ ಸಾಗಾಟ ಮಾಡುತ್ತಿದ್ದಳು ಎನ್ನಲಾಗಿದೆ. ಸದ್ಯ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ ಕಾರ್ ಸ್ವಚ್ಛಗೊಳಿಸುವ ಉಪಕರಣದಲ್ಲಿ ಚಿನ್ನ ತಂದಿದ್ದವನನ್ನು ಕೂಡ ಅಧಿಕಾರಿಗಳು ಬಂಧಿಸಿದ್ದಾರೆ. ಎಮಿರೇಟ್ಸ್ ಪ್ಲೈಟ್‍ನಲ್ಲಿ ದುಬೈ ನಿಂದ ಬೆಂಗಳೂರಿಗೆ ಬಂದಿದ್ದ ಅಸಾಮಿ ಕಬ್ಬಿಣದ ಉಪಕರಣದಲ್ಲಿ 14 ಲಕ್ಷದ ಚಿನ್ನದ ಬಿಸ್ಕೆಟ್ಸ್ ಇಟ್ಟು ತಂದಿದ್ದ. ಒಟ್ಟು ನಾಲ್ಕು ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 37.21 ಲಕ್ಷ ಮೌಲ್ಯದ ಚಿನ್ನವನ್ನ ಜಪ್ತಿ ಮಾಡಿದ್ದಾರೆ.

  • ಜಗತ್ತಿನಲ್ಲೇ ಜನರಿಗಿಂತ ಹೆಚ್ಚು ವಾಹನ ಹೊಂದಿರೋ ದೇಶವಿದು!

    ಜಗತ್ತಿನಲ್ಲೇ ಜನರಿಗಿಂತ ಹೆಚ್ಚು ವಾಹನ ಹೊಂದಿರೋ ದೇಶವಿದು!

    ಸಾನ್‍ಮರಿನೋ: ದೇಶದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವುದನ್ನು ಕೇಳಿದ್ದೇವೆ. ಆದ್ರೆ ಜನರಿಗಿಂತ ಹೆಚ್ಚು ವಾಹನಗಳನ್ನು ಹೊಂದಿರುವುದನ್ನು ಕೇಳಿರಲ್ಲಿಕ್ಕಿಲ್ಲ. ಅಂತಹ ಪಟ್ಟಿಗೆ ಸೇರಿದೆ ಸಾನ್ ಮರಿನೋ ರಾಷ್ಟ್ರ.

    ಹೌದು. ವಿಶ್ವದ ಅತಿ ಪುಟ್ಟ ಸ್ವತಂತ್ರ ರಾಷ್ಟ್ರಗಳಲ್ಲಿ ಒಂದಾದ ಈ ದೇಶದಲ್ಲಿ ಜನರು ಕಡಿಮೆ. ವಾಹನಗಳು ಜಾಸ್ತಿ ಇವೆ. ಈ ರಾಷ್ಟ್ರದಲ್ಲಿ ಸುಮಾರು 34 ಸಾವಿರ ಜನರಿದ್ದಾರೆ. ಅಂಕಿ ಅಂಶಗಳ ಪ್ರಕಾರ ಈ ರಾಷ್ಟ್ರದ ಸರಾಸರಿ 1 ಸಾವಿರ ಜನರಿಗೆ 1,263 ವಾಹನಗಳಿವೆ. ಮಾತ್ರವಲ್ಲದೇ ಈ ದೇಶ ಒಟ್ಟು ಜಿಡಿಪಿಯಲ್ಲೂ ಶ್ರೀಮಂತವಾಗಿದೆ.

    ಸಾನ್ ಮರಿನೋ ಹಾಗೂ ವಾಟಿಕನ್ ಸಿಟಿ ಈ ಎರಡೂ ರಾಷ್ಟ್ರಗಳು ಸಂಪೂರ್ಣವಾಗಿ ಇಟಲಿಯ ಒಳಗೆ ಹುದುಗಿಕೊಂಡಿವೆ. ಇನ್ನು ಮೂರನೇ ರಾಷ್ಟ್ರವಾದ ಲೆಸ್ತೋ ಸಂಪೂರ್ಣವಾಗಿ ದಕ್ಷಿಣ ಆಫ್ರಿಕಾದಿಂದ ಸುತ್ತುವರಿದಿದೆ.

  • ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಅಭಿನಯದ ದುನಿಯಾ2 ಚಿತ್ರದ ಆಡಿಯೋ, ಟ್ರೇಲರ್ ಬಿಡುಗಡೆ

    ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಅಭಿನಯದ ದುನಿಯಾ2 ಚಿತ್ರದ ಆಡಿಯೋ, ಟ್ರೇಲರ್ ಬಿಡುಗಡೆ

    ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ನಡೆಯುತ್ತಿರುವ ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಯೋಗೀಶ್ ಅಭಿನಯದ ದುನಿಯಾ 2 ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ ಮಾಡಲಾಯಿತು.

    ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಡಿಯೋ ಬಿಡುಗಡೆ ಮಾಡಿ, ಚಿತ್ರ ಶತದಿನ ಪ್ರದರ್ಶನ ಕಾಣಲಿ ಅಂತಾ ಹೇಳಿದ್ರು.

    10 ವರ್ಷಗಳ ಹಿಂದೆ ದುನಿಯಾ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡುವ ಮೂಲಕ ಚಿತ್ರರಂಗಕ್ಕೆ ಬಂದಿದ್ದೆ. ಇದೀಗ ದುನಿಯಾ 2 ಚಿತ್ರದಲ್ಲಿ ನಾಯಕನಾಗಿ ಮತ್ತೆ ಅಭಿನಯಿಸಿದ್ದೇನೆ. ಸಾಗರ ಮಾರಿಕಾಂಬೆ ಜಾತ್ರೆಯಲ್ಲಿ ಆಡಿಯೋ ಬಿಡುಗಡೆ ಮಾಡುತ್ತಿರುವುದು ಖುಷಿ ಕೊಟ್ಟಿದೆ. ಈ ಸಿನೆಮಾವನ್ನೂ ಗೆಲ್ಲಿಸಿ ಅಂತಾ ಯೋಗೀಶ್ ಹೇಳಿದ್ರು.

    ಬಳಿಕ ಅಭಿಮಾನಿಗಳ ಆಗ್ರಹದ ಮೇರೆಗೆ ಹುಡುಗರು ಹಾಗೂ ಸಿದ್ಲಿಂಗು ಚಿತ್ರದ ಡೈಲಾಗ್ ಹೇಳಿ ರಂಜಿಸಿದರು. ಚಿತ್ರದ ಸಂಗೀತ ನಿರ್ದೇಶಕ ಭರತ್, ನಿರ್ದೇಶಕ ಹರಿ, ನಿರ್ಮಾಪಕರಾದ ಸಿದ್ದರಾಜು, ಶೃತಿ ವೆಂಕಟೇಶ್ ಇನ್ನಿತರರು ಇದ್ದರು.

     

  • ಹಲ್ಲೆಯಲ್ಲಿ ದವಡೆ ಹಲ್ಲು ಮುರಿದು ಶ್ವಾಸಕೋಶದೊಳಗೆ ರಕ್ತ: ವ್ಯಕ್ತಿ ಸಾವು

    ಹಲ್ಲೆಯಲ್ಲಿ ದವಡೆ ಹಲ್ಲು ಮುರಿದು ಶ್ವಾಸಕೋಶದೊಳಗೆ ರಕ್ತ: ವ್ಯಕ್ತಿ ಸಾವು

    ರಾಯಚೂರು: ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್‍ನಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 12 ರಂದು ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ 35 ವರ್ಷದ ಗಂಗಾಧರ ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ರಾತ್ರಿ ವೇಳೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಮಲಗಿದ್ದ ಗಂಗಾಧರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದವಡೆ ಹಲ್ಲು ಮುರಿದು ಶಾಸ್ವಕೋಶದೊಳಗೆ ರಕ್ತ ಹರಿದ ಹಿನ್ನೆಲೆ ಗಂಗಾಧರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

    ಅವಿವಾಹಿತನಾಗಿರುವ ಗಂಗಾಧರ್ ಮನೆಯ ಪಕ್ಕದಲ್ಲೇ ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದರು. ಎಂದಿನಂತೆ ಫೆ. 12ರಂದು ಕೂಡ ಬಾಗಿಲನ್ನು ಹಾಕದೇ ಮಲಗಿದ್ದ ಗಂಗಾಧರ್ ಮೇಲೆ ಹಲ್ಲೆ ನಡೆದಿತ್ತು. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸ್ ವಿಶೇಷ ತಂಡ ರಚಿಸಲಾಗಿದ್ದು ತನಿಖೆ ಮುಂದುವರೆದಿದೆ.

  • ಶಶಿಕಲಾನ ಬೆಂಗ್ಳೂರಿಂದ ತಮಿಳುನಾಡು ಜೈಲಿಗೆ ಶಿಫ್ಟ್ ಮಾಡಲು ರಣತಂತ್ರ!

    ಶಶಿಕಲಾನ ಬೆಂಗ್ಳೂರಿಂದ ತಮಿಳುನಾಡು ಜೈಲಿಗೆ ಶಿಫ್ಟ್ ಮಾಡಲು ರಣತಂತ್ರ!

    ಬೆಂಗಳೂರು: ತಮಿಳುನಾಡಿನಲ್ಲಿ ಪಳನಿಸ್ವಾಮಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಇತ್ತ ಶಶಿಕಲಾರಲ್ಲಿ ಹೊಸ ಉತ್ಸಾಹ ಮೂಡಿಬಂದಿದ್ದು, ಬೆಂಗಳೂರು ಜೈಲಿಂದ ತಮಿಳುನಾಡಿನ ಜೈಲಿಗೆ ಶಿಫ್ಟ್ ಮಾಡಿಸಿಕೊಳ್ಳಲು ಹೊಸ ಸರ್ಕಾರ ರಣತಂತ್ರ ಹೂಡಿದೆ.

    ಶಶಿಕಲಾ ಪರವಾಗಿ ಕರ್ನಾಟಕ ಹೈಕೋರ್ಟ್‍ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲು ಕಸರತ್ತು ನಡೆದಿದೆ. ಮಧುಮೇಹ, ಮೊಣಕಾಲು ನೋವಿನ ಕಾರಣ ನೀಡಿ ಚೆನ್ನೈ ಅಥವಾ ವೇಲೂರು ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಲು ನಿರ್ಧರಿಸಲಾಗಿದೆ.

    ಬೆಂಗಳೂರು ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯ ನೀಡದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲು ತಯಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾರನ್ನು ಇಬ್ಬರು ವಕೀಲರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಅಣ್ಣಾಡಿಎಂಕೆ ಅಧಿನಾಯಕಿ ಶಶಿಕಲಾ, ಪಳನಿ ಸ್ವಾಮಿ ಸರ್ಕಾರದ ಈ ಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.