Tag: publictv

  • ವಿದ್ಯಾಪೀಠ 5ನೇ ಆವೃತ್ತಿ – ಇಂದು ಕೊನೆಯ ದಿನ

    ವಿದ್ಯಾಪೀಠ 5ನೇ ಆವೃತ್ತಿ – ಇಂದು ಕೊನೆಯ ದಿನ

    ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತಪಡಿಸುತ್ತಿರುವ ವಿದ್ಯಾಪೀಠ 5ನೇ ಆವೃತ್ತಿ ಎಜುಕೇಶನ್ ಎಕ್ಸ್ ಪೋಗೆ ಇಂದು ಕೊನೆಯ ದಿನ. ಇಂದು ಕೂಡಾ ಅನೇಕ ವಿಶೇಷ ಕಾರ್ಯಕ್ರಮಗಳು, ಉಪನ್ಯಾಸಗಳು, ಮಾಹಿತಿಗಳು ಎಕ್ಸ್ ಪೋದಲ್ಲಿ ಇರಲಿದೆ. 80ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಒಂದೇ ಸೂರಿನಡಿ ಸಿಗಲಿವೆ.

    ಬೆಳಗ್ಗೆ 10:30 ರಿಂದ 12 ಗಂಟೆವರೆಗೆ ಡಾ. ರಫೀವುಲ್ಲಾ ಬೇಗ್, Handwriting and Memory Expert ಅವರಿಂದ ‘Accelerate Your Career With Super Power Memory’ ಉಪನ್ಯಾಸ ಇರಲಿದೆ. ಮಧ್ಯಾಹ್ನ 12:00 ರಿಂದ 1 ಗಂಟೆವರೆಗೆ ಡಾ. ಸುಜಾತ ರಾಥೋಡ್ ರಿಂದ ನೀಟ್ ಕುರಿತು ಸೆಮಿನಾರ್ ಇರಲಿದೆ. ಮಧ್ಯಾಹ್ನ 02:30 ರಿಂದ 04:00ವರೆಗೆ Global Education Forum- Insights From NEX GEN Educationalist ಕುರಿತು ಉಪನ್ಯಾಸ ಕಾರ್ಯಕ್ರಮ ಇರಲಿದೆ.

    ಶೈಕ್ಷಣಿಕ ಮಾಹಿತಿಗಳ ಜೊತೆಗೆ ಆಕರ್ಷಕ ಬಂಪರ್ ಬಹುಮಾನಗಳು ಇರಲಿದ್ದು, ವಿದ್ಯಾರ್ಥಿಗಳು 3 ಎಲೆಕ್ಟ್ರಿಕ್ ಬೈಕ್‌ಗಳನ್ನು ಬಂಪರ್ ಬಹುಮಾನವಾಗಿ ಗೆಲ್ಲುವ ಅವಕಾಶ ಇರಲಿದೆ. ಇದರೊಂದಿಗೆ 10 ಸೈಕಲ್‌ಗಳನ್ನು ಲಕ್ಕಿ ವಿದ್ಯಾರ್ಥಿಗಳು ಗೆಲ್ಲಲು ಅವಕಾಶ ಇದೆ. 

    ಇಷ್ಟೇ ಅಲ್ಲದೆ, ಸ್ಲೋ ಸೈಕ್ಲಿಂಗ್ ಕಾಂಪಿಟೇಷನ್, ಕ್ವಿಜ್ ಕಾರ್ಯಕ್ರಮ ಸೇರಿದಂತೆ ಫನ್ ಗೇಮ್ಸ್ ಇರಲಿವೆ. ಪ್ರತಿ ಅರ್ಧ ಗಂಟೆಗೆ ಒಮ್ಮೆ ವಿದ್ಯಾರ್ಥಿಗಳಿಗೆ ಲಕ್ಕಿ ಡಿಪ್ ಮೂಲಕ ವಿಶೇಷ ಆಕರ್ಷಕ ಬಹುಮಾನ ಸಿಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೂ ಎಕ್ಸ್ ಪೋ ನಡೆಯಲಿದ್ದು, ಪ್ರವೇಶ ಉಚಿತ ಇರಲಿದೆ.

    Live Tv

  • ಪಬ್ಲಿಕ್ ಟಿವಿಯ ವಿದ್ಯಾಪೀಠ 5ನೇ ಆವೃತ್ತಿ – 2ನೇ ದಿನವೂ ಸಕ್ಸಸ್

    ಪಬ್ಲಿಕ್ ಟಿವಿಯ ವಿದ್ಯಾಪೀಠ 5ನೇ ಆವೃತ್ತಿ – 2ನೇ ದಿನವೂ ಸಕ್ಸಸ್

    ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತಪಡಿಸಿರುವ ವಿದ್ಯಾಪೀಠ 5ನೇ ಆವೃತ್ತಿ ಎಜುಕೇಶನ್ ಎಕ್ಸ್‌ಪೋಗೆ 2ನೇ ದಿನವಾದ ಶನಿವಾರವೂ ಉತ್ತಮ ಸ್ಪಂದನೆ ದೊರೆಯಿತು.

    2ನೇ ದಿನವೂ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿ ಶೈಕ್ಷಣಿಕ ಮಾಹಿತಿ ಪಡೆದುಕೊಂಡಿದ್ದಾರೆ. 500-600 ಕಿ.ಮೀ. ದೂರದಲ್ಲಿರುವ ಬೆಳಗಾವಿ, ವಿಜಯಪುರ ಜಿಲ್ಲೆಗಳಿಂದಲೂ ಬಂದು ವಿದ್ಯಾರ್ಥಿಗಳು, ಪೋಷಕರು ಮಾಹಿತಿ ಪಡೆದುಕೊಂಡಿದ್ದು ವಿಶೇಷ.  ಇದನ್ನೂ ಓದಿ: ಭಾರತದ ಆಟಗಾರರಿಗೆ ಸಿಗುವ ಪ್ರೋತ್ಸಾಹ ಪಾಕಿಸ್ತಾನದಲ್ಲಿ ಸಿಗಲ್ಲ: ಪಾಕ್ ಕ್ರಿಕೆಟಿಗ ಶೆಹ್‌ಝಾದ್

    ಏನೇನು ವಿಶೇಷತೆ?
    ಎಕ್ಸೋನಲ್ಲಿ ಮೊದಲ ದಿನದಂತೆ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗಿತ್ತು. ಬೆಳಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಇದಾದ ಬಳಿಕ ಸಿಇಟಿ ಹಾಗೂ ಕಾಮೆಡ್-ಕೆ ಕುರಿತು ಕುಮಾರ್ ಹಾಗೂ ರವಿ ಮಾಹಿತಿ ತಿಳಿಸಿಕೊಟ್ಟರು. ಮಧ್ಯಾಹ್ನ ಚಿಂತಕ ಹಾಗೂ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ಯಾನಲ್ ಚರ್ಚೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಇದೇ ವೇಳೆ ಭಾರತದ ಸ್ಟಾರ್ಟ್ಅಪ್ ಉದ್ಯಮದ ಬಗ್ಗೆ ತಿಳಿಸಿಕೊಟ್ಟರು. ಬಳಿಕ ಯುವ ಸಾಧಕರನ್ನ ಪರಿಚಯಿಸಿದರು. ಸಂಗೀತ ನಿರ್ದೇಶಕ ಮತ್ತು ಎರಡು ಬಾರಿ ಗ್ರ್ಯಾಮಿ ಅವಾರ್ಡ್ ವಿನ್ನರ್ ರಿಕ್ಕಿ ಕೇಜ್ ಕೂಡ ವಿದ್ಯಾಪೀಠದ ಹೈಲೈಟ್ ಆಗಿದ್ದರು.

    ಲಕ್ಕಿ ಡಿಪ್ ವಿದ್ಯಾರ್ಥಿಗಳ ಆಕರ್ಷಣೆ: ವಿದ್ಯಾರ್ಥಿಗಳ ಕಲರವದಿಂದ ಕೂಡಿದ್ದ ಎಕ್ಸ್‌ಪೋನಲ್ಲಿ ಸ್ಲೋ ಸೈಕ್ಲಿಂಗ್, ರಸಪ್ರಶ್ನೆ ಕಾರ್ಯಕ್ರಮಗಳನ್ನೂ ನಡೆಸಿಕೊಡಲಾಯಿತು. ಫನ್ ಗೇಮ್ಸ್ನಲ್ಲಿ ಉತ್ಸಾಹದಿಂದಲೇ ಭಾಗವಹಿಸಿದ್ದ ವಿದ್ಯಾರ್ಥಿಗಳು ಬಹುಮಾನ ಗೆದ್ದು ಬೀಗಿದರು. ಮುಖ್ಯವಾಗಿ ಪ್ರತಿ ಅರ್ಧ ಗಂಟೆಗೊಮ್ಮೆ ಲಕ್ಕಿ ಡಿಪ್ ಮೂಲಕ ಬಹುಮಾನ ನೀಡುತ್ತಿದ್ದ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರಮುಖ ಆಕರ್ಷಣೆಯಾಗಿತ್ತು.

    ಕೊನೆ ದಿನವಾದ ಭಾನುವಾರ 10:30ರಿಂದ 12 ಗಂಟೆ ವರೆಗೆ ಡಾ.ರಫೀವುಲ್ಲಾ ಬೇಗ್ ಹ್ಯಾಂಡ್ ರೈಟಿಂಗ್ ಅಂಡ್ ಮೆಮೊರಿ ಮಾಹಿತಿ, ಡಾ. ಸುಜಾತ ರಾಥೋಡ್ ರಿಂದ ನೀಟ್ ಕುರಿತು ಸೆಮಿನಾರ್ ಇರಲಿದೆ.

    Live Tv

  • ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಯಾವೆಲ್ಲ ಸ್ಟಾಲ್‍ಗಳು ಇರಲಿವೆ – ಮೂರು ದಿನಗಳ ಶೈಕ್ಷಣಿಕ ಉತ್ಸವಕ್ಕೆ ಬನ್ನಿ

    ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಯಾವೆಲ್ಲ ಸ್ಟಾಲ್‍ಗಳು ಇರಲಿವೆ – ಮೂರು ದಿನಗಳ ಶೈಕ್ಷಣಿಕ ಉತ್ಸವಕ್ಕೆ ಬನ್ನಿ

    – ಅರಮನೆ ಮೈದಾನದಲ್ಲಿ ಜೂನ್ 24 ರಿಂದ ಆರಂಭ
    – ಮೂರು ದಿನಗಳ ಕಾಲ ನಡೆಯಲಿದೆ ವಿದ್ಯಾಪೀಠ

    ಬೆಂಗಳೂರು: ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? ಎಸ್‍ಎಸ್‍ಎಲ್‍ಸಿ, ಪಿಯುಸಿಯ ನಂತರ ಯಾವ ಕಾಲೇಜ್‍ನಲ್ಲಿ ಯಾವ ಕೋರ್ಸ್ ಇದೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜ್‍ಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ? ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ 5ನೇ ಆವೃತ್ತಿ ‘ವಿದ್ಯಾಪೀಠ’ದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

    ಪಬ್ಲಿಕ್ ಟಿವಿ ಮೂರು ದಿನ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಗಾ ಶೈಕ್ಷಣಿಕ ಉತ್ಸವವನ್ನು ಆಯೋಜಿಸಿದೆ. ಈ ಹಿಂದೆ ಆಯೋಜಿಸಿದ ನಾಲ್ಕು ಮೆಗಾ ಶೈಕ್ಷಣಿಕ ಉತ್ಸವಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 24, 25, 26 ರಂದು ಐದನೇ ಆವೃತ್ತಿಯ ವಿದ್ಯಾಪೀಠ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ‘ವಿದ್ಯಾಪೀಠ’ದಲ್ಲಿ ಯಾರೆಲ್ಲ ಭಾಗವಹಿಸುತ್ತಿದ್ದಾರೆ? – ಉಚಿತ ಪ್ರವೇಶದ ಕಾರ್ಯಕ್ರಮಕ್ಕೆ ಬನ್ನಿ

    ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್‍ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ವೇಳೆ ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ ಪರೀಕ್ಷೆಗಳಿಗಾಗಿ ಕೆಇಎ ಅಧಿಕಾರಿಗಳಿಂದ ಆಪ್ತ ಸಮಾಲೋಚನೆ, ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಅಷ್ಟೇ ಅಲ್ಲದೇ ಮೂರು ದಿನ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅರ್ಧಗಂಟೆ ಉಪನ್ಯಾಸ ನಡೆದ ಬಳಿಕ 15 ನಿಮಿಷ ಪ್ರಶ್ನೋತ್ತರಕ್ಕೂ ಅವಕಾಶವಿದೆ.

    ಯಾರೆಲ್ಲ ಭಾಗವಹಿಸುತ್ತಾರೆ?
    ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜ್‍ಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜ್‍ಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

    ಯಾರೆಲ್ಲ ಆಗಮಿಸಬಹುದು?
    ಕೌನ್ಸೆಲರ್‍ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

    ಪ್ಲಾಟಿನಂ ಪ್ರಾಯೋಜಕರು:
    ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ರಾಮಯ್ಯ ವಿಶ್ವವಿದ್ಯಾಲಯ, ಆಚಾರ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್ ಪ್ರಾಯೋಜಕರು:
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಕೇಬ್ರಿಡ್ಜ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಎಂಆರ್ ವಿಶ್ವವಿದ್ಯಾಲಯ, ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕ್ಸ್‌ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್, ನ್ಯೂ ಬಾಲ್ಡ್‌ವಿನ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಸಪ್ತಗಿರಿ ಕಾಲೇಜ್ ಆಫ್ ಎಂಜಿನಿಯರಿಂಗ್. ಕೆನರಾ ಬ್ಯಾಂಕ್

    ಸಿಲ್ವರ್ ಪ್ರಾಯೋಜಕರು:
    ಕೃಪಾನಿಧಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಎಬಿಬಿಎಸ್, ಪಿಇಎಸ್ ವಿಶ್ವವಿದ್ಯಾಲಯ, ದಯಾನಂದ ಸಾಗರ್, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ನಾಗಾರ್ಜುನ ಎಂಜಿನಿಯರಿಂಗ್, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಎಕ್ಸೆಲ್ ಅಕಾಡೆಮಿಕ್ಸ್, ಏಮ್ಸ್ ಇನ್‍ಸ್ಟಿಟ್ಯೂಷನ್.

    ಯಾವೆಲ್ಲ ಸ್ಟಾಲ್‍ಗಳು ಇರಲಿವೆ?
    ಆರ್‌ಆರ್ ಇನ್‍ಸ್ಟಿಟ್ಯೂಷನ್ಸ್, ನಿಟ್ಟೆ ಮೀನಾಕ್ಷಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಎಸ್ ಎಂಜಿನಿಯರಿಂಗ್ ಕಾಲೇಜ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್, ಅಂಬೇಡ್ಕರ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಸಿಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್, ರಾಜರಾಜೇಶ್ವರಿ ಕಾಲೇಜ್ ಆಫ್ ನಸಿರ್ಂಗ್, ಗೌತಮ್ ಕಾಲೇಜ್, ಐಎಫ್‍ಐಎಂ – ಜಗದೀಶ್ ಶೇಠ್ ಸ್ಕೂಲ್ ಆಫ್ ಮ್ಯಾನೇಜ್‍ಮೆಂಟ್, ಕೆಎಸ್‍ಐಟಿ, ಬಿಐಟಿ, ಕ್ರಿಸ್ ಕೆನಾಡಿಯನ್, ಜ್ಯೋತಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾವಿಕ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಕರ್ನಾಟಕ ಕಾಲೇಜ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್, ಇಂಡಿಯನ್ ಅಕಾಡೆಮಿ, ಕಲ್ಪತರು ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆದಿತ್ಯ ಗ್ರೂಪ್ ಆಫ್ ಇನ್‍ಸ್ಟಿಟ್ಯೂಟ್, ಲರ್ನ್ ಟೆಕ್, ವಿಷನ್ ಪಿಯು ಕಾಲೇಜ್, ಡಾನ್ ಬಾಸ್ಕೋ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೇಮನ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶೇಷಾದ್ರಿಪುರಂ ಕಾಲೇಜ್, ಬಿವಿವಿಎಸ್ ಕಾಲೇಜ್ ಬಾಗಲಕೋಟೆ, ಐಸಿಎಫ್‍ಐ(ಬ್ಯುಸಿನೆಸ್ ಸ್ಕೋಲ್), ಐಬಿಎಸ್, ಸರ್ ಎಂವಿಐಟಿ, ಸಂಭ್ರಮ್ ಇನ್‍ಸ್ಟಿಟ್ಯೂಷನ್, ಆಟ್ರಿಯಾ, ರಾಮಯ್ಯ, ಕೆಎಸ್‍ಒಯು, ಸೈಂಟ್, ವಿಬಿಆರ್ ಸಮೂಹ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕ್ಸೇವಿಯರ್ಸ್ ಕಾಲೇಜ್.

    ದಿನಾಂಕ: ಜೂನ್ 24, 25, 26
    ಸ್ಥಳ: ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
    ಸಮಯ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ

    ಸಂಪರ್ಕಿಸಿ: ಪ್ರಭು 99000 60811, ಶಿವಕುಮಾರ್ 99000 60813

    Live Tv

  • ಈಗಿನ ಶಿಕ್ಷಣದ ಹೊಸ ಟ್ರೆಂಡ್‌ ಏನು? – ಪಬ್ಲಿಕ್‌ ಟಿವಿ ʼವಿದ್ಯಾಪೀಠʼಕ್ಕೆ ಬನ್ನಿ ಮಾಹಿತಿ ಪಡೆಯಿರಿ

    ಈಗಿನ ಶಿಕ್ಷಣದ ಹೊಸ ಟ್ರೆಂಡ್‌ ಏನು? – ಪಬ್ಲಿಕ್‌ ಟಿವಿ ʼವಿದ್ಯಾಪೀಠʼಕ್ಕೆ ಬನ್ನಿ ಮಾಹಿತಿ ಪಡೆಯಿರಿ

    – ಅರಮನೆ ಮೈದಾನದಲ್ಲಿ ಜೂನ್‌ 24 ರಿಂದ ಆರಂಭ
    – ಮೂರು ದಿನಗಳ ಕಾಲ ನಡೆಯಲಿದೆ ವಿದ್ಯಾಪೀಠ

    ಬೆಂಗಳೂರು: ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? ಎಸ್‍ಎಸ್‍ಎಲ್‍ಸಿ, ಪಿಯುಸಿಯ ನಂತರ ಯಾವ ಕಾಲೇಜ್‍ನಲ್ಲಿ ಯಾವ ಕೋರ್ಸ್ ಇದೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜ್‍ಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ? ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ 5ನೇ ಆವೃತ್ತಿ ‘ವಿದ್ಯಾಪೀಠ’ದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

    ಪಬ್ಲಿಕ್ ಟಿವಿ ಮೂರು ದಿನ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಗಾ ಶೈಕ್ಷಣಿಕ ಉತ್ಸವವನ್ನು ಆಯೋಜಿಸಿದೆ. ಈ ಹಿಂದೆ ಆಯೋಜಿಸಿದ ನಾಲ್ಕು ಮೆಗಾ ಶೈಕ್ಷಣಿಕ ಉತ್ಸವಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 24, 25, 26 ರಂದು ಐದನೇ ಆವೃತ್ತಿಯ ವಿದ್ಯಾಪೀಠ ಕಾರ್ಯಕ್ರಮ ನಡೆಯುಲಿದೆ.

    ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್‍ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ವೇಳೆ ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ ಪರೀಕ್ಷೆಗಳಿಗಾಗಿ ಕೆಇಎ ಅಧಿಕಾರಿಗಳಿಂದ ಆಪ್ತ ಸಮಾಲೋಚನೆ, ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಅಷ್ಟೇ ಅಲ್ಲದೇ ಮೂರು ದಿನ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅರ್ಧಗಂಟೆ ಉಪನ್ಯಾಸ ನಡೆದ ಬಳಿಕ 15 ನಿಮಿಷ ಪ್ರಶ್ನೋತ್ತರಕ್ಕೂ ಅವಕಾಶವಿದೆ.

    ಯಾರೆಲ್ಲ ಭಾಗವಹಿಸುತ್ತಾರೆ?
    ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜ್‍ಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜ್‍ಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

    ಯಾರೆಲ್ಲ ಆಗಮಿಸಬಹುದು?
    ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

    ದಿನಾಂಕ: ಜೂನ್ 24, 25, 26
    ಸ್ಥಳ: ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
    ಸಮಯ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ

  • ರಾಮನವಮಿ ಸ್ಪೆಷಲ್- ಹೆಸರುಬೇಳೆ ಕೋಸಂಬರಿ ಮಾಡೋದು ಹೇಗೆ?

    ರಾಮನವಮಿ ಸ್ಪೆಷಲ್- ಹೆಸರುಬೇಳೆ ಕೋಸಂಬರಿ ಮಾಡೋದು ಹೇಗೆ?

    ರ್ನಾಟಕ ಶೈಲಿಯ ಪ್ರಮುಖ ಪಾಕವಿಧಾನಗಳಲ್ಲಿ ಹೆಸರು ಬೇಳೆ ಕೋಸಂಬರಿಯೂ ಒಂದಾಗಿದೆ. ಇದನ್ನು ಉತ್ಸವ ಹಾಗೂ ಹಬ್ಬಗಳಲ್ಲಿ ಪ್ರಸಾದದ ರೂಪದಲ್ಲಿ ವಿತರಿಸಲಾಗುತ್ತಿದೆ. ಹೀಗಾಗಿ ಹೆಸರು ಬೇಳೆ ಕೋಸಂಬರಿ ಮಾಡೋ ಸುಲಭ ವಿಧಾನ ಇಲ್ಲಿದೆ.

    ಬೇಕಾಗುವ ಸಾಮಾಗ್ರಿಗಳು
    * ಹೆಸರು ಬೇಳೆ – 50 ಗ್ರಾಂ
    * ಬಿಡಿಸಿದ ದಾಳಿಂಬೆ ಕಾಳು – 1/4 ಕಪ್
    * ಸೌತೆಕಾಯಿ- 1
    * ಕೊತ್ತಂಬರಿ – ಸ್ವಲ್ಪ
    * ಕಾಯಿ ತುರಿ – ಸ್ವಲ್ಪ
    * ಕ್ಯಾರೆಟ್ ತುರಿ – ಸ್ವಲ್ಪ
    * ಈರುಳ್ಳಿ – ಚಿಕ್ಕದು, ಸಣ್ಣಗೆ ಹೆಚ್ಚಿದ್ದು
    * ನಿಂಬೆಹಣ್ಣು – ಮೀಡಿಯಂ ಸೈಜ್

    ಒಗ್ಗರಣೆಗೆ ಬೇಕಾಗುವ ಸಾಮಾಗ್ರಿಗಳು
    * ಕಡ್ಲೆಬೇಳೆ – 1 ಟಿಎಸ್‍ಪಿ
    * ಉದ್ದಿನ ಬೇಳೆ – 1 ಟಿಎಸ್‍ಪಿ
    * ಎಣ್ಣೆ – 2 ಟಿಎಸ್‍ಪಿ
    * ಕೆಂಪು ಮೆಣಸಿನಕಾಯಿ – 3-4
    * ಸಾಸಿವೆ – ಚಿಟಿಕೆ
    * ಇಂಗು – ಚಿಟಿಕೆ
    * ಜೀರಿಗೆ – ಚಿಟಿಕೆ
    * ಕರಿಬೇವು – ಸ್ವಲ್ಪ ಇದನ್ನೂ ಓದಿ: ರಾಜ್ಯದಲ್ಲಿಂದು ಶ್ರೀರಾಮನವಮಿ ಆಚರಣೆ – ಆಂಜನೇಯನ ದೇಗುಲಗಳಲ್ಲಿ ರಾಮನ ಆರಾಧನೆ

    ಮಾಡುವ ವಿಧಾನ
    * ಮೊದಲು ಹೆಸರುಬೇಳೆಯನ್ನು ಅರ್ಧಗಂಟೆ ನೆನೆಸಿ, ಸೋಸಿಡಿ.
    * ಒಂದು ಮಿಕ್ಸಿಂಗ್ ಬೌಲ್‍ಗೆ ಸಣ್ಣಗೆ ಹೆಚ್ಚಿ ನೀರು ಹಿಂಡಿದ ಸೌತೆಕಾಯಿ, ನೆನೆಸಿ ಸೋಸಿದ ಹೆಸರುಬೇಳೆ, ಬಿಡಿಸಿದ ದಾಳಿಂಬೆ, ಕ್ಯಾರೆಟ್ ತುರಿ, ಕಾಯಿ ತುರಿ, ಸಣ್ಣಗೆ ಕಟ್ ಮಾಡಿದ ಕೊತ್ತಂಬರಿಸೊಪ್ಪು, ಈರುಳ್ಳಿ, ನಿಂಬೆ ಹಣ್ಣಿನ ರಸ ಹಿಂಡಿ ಮಿಕ್ಸ್ ಮಾಡಿ.
    * ಒಂದು ಪ್ಯಾನ್‍ಗೆ ಎಣ್ಣೆ ಹಾಕಿ, ಎಣ್ಣೆ ಕಾದ ಮೇಲೆ ಸಾಸಿವೆ, ಜೀರಿಗೆ, ಇಂಗು, ಹಾಕಿ ಸಿಡಿದ ಮೇಲೆ, ಕಡ್ಲೆಬೇಳೆ, ಉದ್ದಿನಬೇಳೆ ಹಾಕಿ ಫ್ರೈ ಮಾಡಿ. ಆಮೇಲೆ ಕರಿಬೇವು, ಕೆಂಪು ಮೆಣಸಿನಕಾಯಿ ಹಾಕಿ ಫ್ರೈ ಮಾಡಿಡಿ.
    * ಬಳಿಕ ಫ್ರೈ ಮಾಡಿಟ್ಟ ಒಗ್ಗರಣೆಯನ್ನು ಮಿಕ್ಸಿಂಗ್ ಬೌಲ್‍ನಲ್ಲಿರುವ ಹೆಸರುಬೇಳೆ ಮಿಕ್ಸ್‍ಗೆ ಸೇರಿಸಿ ಕಲಸಿ ಸವಿಯಿರಿ.

  • ಯುಗಾದಿ ಹಬ್ಬಕ್ಕೆ ವಿಶೇಷ ಪಾನಕ

    ಯುಗಾದಿ ಹಬ್ಬಕ್ಕೆ ವಿಶೇಷ ಪಾನಕ

    ವಸಂತ ಋತುವಿನ ಆಗಮನ ಕಾಲದಲ್ಲಿ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಯುಗಾದಿ ಹಬ್ಬ ಸಮೃದ್ಧಿಯನ್ನು ಸೂಚಿಸುತ್ತದೆ. ಈ ಹಬ್ಬಕ್ಕೆ ವಿಶೇಷವೆಂದು ರುಚಿಯಾದ ಸ್ವೀಟ್‍ಗಳನ್ನು ಮಾಡಲಾಗುತ್ತದೆ. ಹಬ್ಬದ ವಿಶೇಷವಾಗಿ ಸಾಂಪ್ರದಾಯಿಕ ಖಾದ್ಯವನ್ನು ತಯಾರಿಸಲಾಗುತ್ತದೆ. ಯುಗಾದಿ ಹಬ್ಬದಂದು ಬೇವು-ಬೆಲ್ಲವನ್ನು ತಿನ್ನುವುದು ಆಚರಣೆ. ಇದೇ ಬೇವು-ಬೆಲ್ಲದಿಂದ ಸ್ಪೆಷಲ್ ಪಾನಕ ತಯಾರಿಸುವ ವಿಧಾನ ಇಲ್ಲಿದೆ.

    ಬೇಕಾಗುವ ಸಾಮಾಗ್ರಿಗಳು:
    1. ಬೇವಿನ ಹೂವು – ಸ್ವಲ್ಪ
    2. ದ್ರಾಕ್ಷಿ – 4-5
    3. ಮಾವಿನ ಕಾಯಿ – 3 ಚಮಚ
    4. ಬೆಲ್ಲ – ಅರ್ಧ ಕಪ್
    5. ಬಾಳೆಹಣ್ಣು – ಒಂದು
    6. ಹುರಿಗಡಲೆ ಹಿಟ್ಟು – ಅರ್ಧ ಪಕ್
    7. ಹುಣಸೆ ಹಣ್ಣಿನ ರಸ – 1 ಕಪ್
    8. ಕತ್ತರಿಸಿದ ಕಲ್ಲಂಗಡಿ- 4, 5 ಪೀಸ್
    9. ಶುಂಠಿ ಪೌಡರ್ – ಚಿಟಿಕೆ
    10. ಉಪ್ಪು – ರುಚಿಗೆ ತಕ್ಕಷ್ಟು
    11. ಬಾದಾಮಿ, ಗೋಡಂಬಿ ಮತ್ತು ಕಲ್ಲು ಸಕ್ಕರೆ -ಸ್ವಲ್ಪ

    ಬೇವು ಬೆಲ್ಲದ ಪಾನಕ ಮಾಡುವ ವಿಧಾನ:
    * ಒಂದು ಕಪ್ ಹುಣಸೆ ಹಣ್ಣಿನ ರಸವನ್ನು ದೊಡ್ಡ ಪಾತ್ರೆಗೆ ಹಾಕಿ, ಅದಕ್ಕೆ ಬೆಲ್ಲ ಮತ್ತು ಕಲ್ಲು ಸಕ್ಕರೆ ಹಾಕಿ ನೆನೆಯಲು ಬಿಡಿ.
    * ಹುಣಸೆ ಹಣ್ಣು, ಬೆಲ್ಲ ಮತ್ತು ಕಲ್ಲು ಸಕ್ಕರೆಯ ಮಿಶ್ರಣಕ್ಕೆ 2 ಚಮಚ ಹುರಿಗಡಲೆ ಹಿಟ್ಟು ಹಾಕಿ ಗಂಟು ಬರದಂತೆ ಬೆರೆಸಿ.
    * ಇತ್ತ ಮಾವಿನ ಕಾಯಿ, ದ್ರಾಕ್ಷಿ, ಕಲ್ಲಂಗಡಿ, ಬಾಳೆಹಣ್ಣು, ಬಾದಾಮಿ, ಗೋಡಂಬಿಯನ್ನು ಸಣ್ಣದಾಗಿ ಕತ್ತರಿಸಿಕೊಳ್ಳಿ. (ಮಾವಿನ ಕಾಯಿ ಕಾಯಿಯನ್ನು ಕೊಬ್ಬರಿ ತುರಿಯಂತೆ ಮಾಡಿಕೊಳ್ಳುವುದು ಉತ್ತಮ)

    * ಹುಣಸೆ ಹಣ್ಣಿನ ಮಿಶ್ರಣಕ್ಕೆ ಚಿಕ್ಕದಾಗಿ ಕತ್ತರಿಸಿಕೊಂಡಿರುವ ಎಲ್ಲ ಹಣ್ಣುಗಳನ್ನು ಒಂದೊಂದಾಗಿ ಹಾಕುತ್ತಾ ಹೋಗಬೇಕು.
    * ಈ ಮಿಶ್ರಣಕ್ಕೆ ಒಂದರಿಂದ ಎರಡು ಗ್ಲಾಸ್ ನೀರನ್ನು ಬೆರೆಸಿಕೊಳ್ಳಿ.
    * ನೀರು ಸೇರಿಸಿದ ಬಳಿಕ ಸ್ವಲ್ಪ ಶುಂಠಿ ಪೌಡರ್, ಸ್ವಲ್ಪ ಉಪ್ಪು ಹಾಕಿ, ಕೊನೆಯದಾಗಿ ಬೇವಿನ ಹೂಗಳನ್ನು ಹಾಕಿದರೆ ಬೇವು-ಬೆಲ್ಲದ ಪಾನಕ ಸಿದ್ದವಾಗುತ್ತದೆ.

  • ರಾಜ್ಯದ ಹವಾಮಾನ ವರದಿ: 06-03-2022

    ರಾಜ್ಯದ ಹವಾಮಾನ ವರದಿ: 06-03-2022

    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಯಲ್ಲಿ ಚಳಿಯ ವಾತಾವರಣ ಇರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಿರಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾವೇರಿಯಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 31-17
    ಮಂಗಳೂರು: 33-24
    ಶಿವಮೊಗ್ಗ: 36-21
    ಬೆಳಗಾವಿ: 34-21
    ಮೈಸೂರು: 34-19


    ಮಂಡ್ಯ: 34-19
    ರಾಮನಗರ: 26-19
    ಹಾಸನ: 33-17
    ಚಾಮರಾಜನಗರ: 34-19
    ಚಿಕ್ಕಬಳ್ಳಾಪುರ: 29-16
    ಕೋಲಾರ: 30-17

    ತುಮಕೂರು: 32-18
    ಉಡುಪಿ: 34-24
    ಕಾರವಾರ: 33-26
    ಚಿಕ್ಕಮಗಳೂರು: 32-17
    ದಾವಣಗೆರೆ: 35-21

    ಚಿತ್ರದುರ್ಗ: 33-19
    ಹಾವೇರಿ: 36-21
    ಬಳ್ಳಾರಿ: 35-21
    ಗದಗ: 35-21
    ಕೊಪ್ಪಳ: 32-18
    ರಾಯಚೂರು: 35-21

    ಯಾದಗಿರಿ: 36-22
    ವಿಜಯಪುರ: 35-22
    ಬೀದರ್: 33-20
    ಕಲಬುರಗಿ: 36-22
    ಬಾಗಲಕೋಟೆ: 36-22