Tag: publlic tv

  • ಪಬ್ಲಿಕ್‌ ಟಿವಿ ಮೆಗಾ PG ಶೈಕ್ಷಣಿಕ ಮೇಳ – 50ಕ್ಕೂ ಹೆಚ್ಚು ಕೋರ್ಸ್‌ಗಳ ಬಗ್ಗೆ ತಿಳಿಯಿರಿ

    ಪಬ್ಲಿಕ್‌ ಟಿವಿ ಮೆಗಾ PG ಶೈಕ್ಷಣಿಕ ಮೇಳ – 50ಕ್ಕೂ ಹೆಚ್ಚು ಕೋರ್ಸ್‌ಗಳ ಬಗ್ಗೆ ತಿಳಿಯಿರಿ

    – ಆ.31, ಸೆ.1 ರಂದು ಕಾರ್ಯಕ್ರಮ
    – ವಿದ್ಯಾರ್ಥಿಗಳಿಗೆ, ಪೋಷಕರಿಗೆ ಉಚಿತ ಪ್ರವೇಶ

    ಬೆಂಗಳೂರು: ನೀವು ಪದವಿ ಮುಗಿಸಿದ್ದೀರಾ? ಮುಂದೇನು ಮಾಡಬೇಕು ಎಂಬ ಚಿಂತೆಯಲ್ಲಿದ್ದೀರಾ? ಯಾವ ಕಾಲೇಜಿನಲ್ಲಿ ಯಾವ ಕೋರ್ಸ್‌ ಸೇರಬೇಕು ಎಂಬ ಗೊಂದಲದಲ್ಲಿದ್ದೀರಾ? .. ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಪಬ್ಲಿಕ್‌ ಟಿವಿ ʼವಿದ್ಯಾ ಮಂದಿರʼ ಪರಿಹಾರ ನೀಡಲಿದೆ.

    ಹೌದು. ಒಂದೇ ಸೂರಿನಡಿ ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸುವ ವಿಶಿಷ್ಟ ಕಾರ್ಯಕ್ರಮವನ್ನು ಪಬ್ಲಿಕ್‌ ಟಿವಿ ನಗರದಲ್ಲಿ ಆಯೋಜಿಸಿದೆ. 

    ಪಬ್ಲಿಕ್‌ ಟಿವಿ ಪ್ರಸ್ತುತ ಪಡಿಸುವ  AD6 ಸಹಯೋಗದಲ್ಲಿ ಮೂರನೇ ಆವೃತ್ತಿಯ  ʼವಿದ್ಯಾ ಮಂದಿರʼ 2 ದಿನಗಳ ಮೆಗಾ PG ಶೈಕ್ಷಣಿಕ ಮೇಳ  ಆಗಸ್ಟ್‌ 31 ಶನಿವಾರ ಮತ್ತು ಸೆಪ್ಟೆಂಬರ್‌ 1ರ ಭಾನುವಾರ ಮಲ್ಲೇಶ್ವರಂನಲ್ಲಿ ನಡೆಯಲಿದೆ.  ಕೆಸಿ ಜನರಲ್‌ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಉಚಿತವಾಗಿ ಸ್ಟಾಲ್‌ಗಳಿಗೆ ಭೇಟಿ ನೀಡಿ 50ಕ್ಕೂ ಹೆಚ್ಚು ಕೋರ್ಸ್‌ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು. ಇದನ್ನೂ ಓದಿ: ಐಸಿಸಿ ಮುಖ್ಯಸ್ಥರಾಗಿ ಜಯ್‌ ಶಾ ಅವಿರೋಧ ಆಯ್ಕೆ

    42ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ:  ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ  ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.  

    ಉಡುಗೊರೆ ಪಡೆಯಿರಿ:
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ಪ್ರತಿ  ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು

    ಪ್ಲಾಟಿನಂ ಪ್ರಾಯೋಜಕರು: 
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ,  ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌,  CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ ಇದನ್ನೂ ಓದಿ: ಲಕ್ನೋದಲ್ಲೇ ರಾಹುಲ್‌ ಉಳಿಸಿಕೊಳ್ಳಲು ಗೋಯೆಂಕಾ ಪ್ರಯತ್ನ

    ಸಿಲ್ವರ್‌ ಪ್ರಾಯೋಜಕರು:
    AIMS  ಇನ್‌ಸ್ಟಿಟ್ಯೂಟ್ಸ್‌,  ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್,  ಪ್ರೆಸಿಡೆನ್ಸಿ ಯೂನಿವರ್ಸಿಟಿ,

    ಸ್ಪೆಷಲ್‌ ಪೆವಿಲಿಯನ್‌:
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

    ಸ್ಟಾಲ್‌ ಪಾರ್ಟ್‌ನರ್‌:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ,  BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು,  ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ,  ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ,  ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್)

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    ದಿನಾಂಕ:  ಆಗಸ್ಟ್‌ 31, ಸೆಪ್ಟೆಂಬರ್‌ 1

    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು

    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

     

  • ಹಾಕಿ ತಂಡದ ನಾಯಕ ಮನ್‍ಪ್ರೀತ್‍ ಸಿಂಗ್‍ಗೆ ಕೊರೊನಾ ದೃಢ

    ಹಾಕಿ ತಂಡದ ನಾಯಕ ಮನ್‍ಪ್ರೀತ್‍ ಸಿಂಗ್‍ಗೆ ಕೊರೊನಾ ದೃಢ

    ನವದೆಹಲಿ: ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮನ್‍ಪ್ರೀತ್ ಸಿಂಗ್ ಹಾಗೂ ಇತರ ಮೂವರು ಆಟಗಾರರಿಗೆ ಕೊರೊನಾ ಪಾಸಿಟಿವ್ ಎಂದು ದೃಢವಾಗಿದೆ.

    ಬೆಂಗಳೂರಿನ ಎಸ್‍ಎಐ ದಕ್ಷಿಣ ಕೇಂದ್ರದಲ್ಲಿ ನಡೆದಿದ್ದ ಹಾಕಿ ಶಿಬಿರಕ್ಕೆ ಮರಳಿರುವ ಎಲ್ಲಾ ಆಟಗಾರರಿಗೆ ಕೋವಿಡ್ 19 ಟೆಸ್ಟ್ ಮಾಡಲಾಗಿದೆ. ಈ ವೇಳೆ ಮನ್‍ಪ್ರೀತ್ ಸಿಂಗ್, ಡಿಫೆಂಡರ್ ಸುರೇಂದ್ರ ಕುಮಾರ್, ಜಸ್ಕರನ್ ಸಿಂಗ್ ಹಾಗೂ ಡ್ರ್ಯಾಗ್ ಫ್ಲಿಕರ್ ವರುಣ್ ಕುಮಾರ್‍ಗೆ ಕೋವಿಡ್ 19 ಪಾಸಿಟಿವ್ ಎಮದು ವರದಿ ಬಂದಿದೆ.

    ಈ ಸಂಬಂಧ ಮಾತನಾಡಿರುವ ಮನ್‍ಪ್ರೀತ್‍ಸಿಂಗ್, ನಾನು ಎಸ್‍ಎಐ ಕ್ಯಾಂಪಸ್‍ನಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದೇನೆ. ಪರಿಸ್ಥಿತಿಯನ್ನು ಅಧಿಕಾರಿಗಳು ನಿಭಾಯಿಸಿದ ರೀತಿ ನನಗೆ ತುಂಬಾ ಖುಷಿ ನೀಡಿತು. ನನ್ನ ಆರೋಗ್ಯ ಸ್ಥಿರವಾಗಿದ್ದು, ಆದಷ್ಟು ಬೇಗ ಗುಣಮುಖರಾಗಿ ಬರುವುದಾಗಿ ತಿಳಿಸಿದ್ದಾರೆ.

  • ಒಂದೇ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದಿದ್ವಿ: ಕಾರ್ನಾಡ್‍ರನ್ನ ನೆನೆದ ಪಾಪು

    ಒಂದೇ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದಿದ್ವಿ: ಕಾರ್ನಾಡ್‍ರನ್ನ ನೆನೆದ ಪಾಪು

    ಹುಬ್ಬಳ್ಳಿ: ಕರ್ನಾಟಕ ವಿಶ್ವ ವಿಶ್ವವಿದ್ಯಾಲಯದಿಂದ ಒಂದೇ ವೇದಿಕೆಯಲ್ಲಿ ನನಗೆ ಹಾಗೂ ಗಿರೀಶ್ ಕಾರ್ನಾಡ್ ಅವರಿಗೆ ಗೌರವ ಡಾಕ್ಟರೇಟ್ ಸಿಕ್ಕಿತ್ತು ಎಂದು ಹಿರಿಯ ನಾಡೋಜ ಪಾಟೀಲ್ ಪುಟ್ಟಪ್ಪ ನೆನೆದಿದ್ದಾರೆ.

    ನಗರದ ನಿವಾಸದಲ್ಲಿ ಮಾತನಾಡಿದ ಅವರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ನಿಧನದಿಂದ ಸಾಹಿತ್ಯ ಲೋಕಕ್ಕೆ ಬಹಳಷ್ಟು ನಷ್ಟವಾಗಿದೆ. ಕಾರ್ನಾಡ್ ಅವರು ನನ್ನಗಿಂತ 22 ವರ್ಷ ಚಿಕ್ಕವರು. ನಾಟಕ ಹಾಗೂ ಚಿತ್ರರಂಗದಲ್ಲಿ ಒಳ್ಳೆ ಹೆಸರು ಮಾಡಿದರು ಎಂದು ಸ್ಮರಿಸಿದರು.

    ಗಿರೀಶ್ ಕಾರ್ನಾಡ್ ಅವರ ಧಾರವಾಡದ ನಿವಾಸಕ್ಕೆ ಒಂದು ಐತಿಹಾಸಿಕ ಇತ್ತು. ಆ ಮನೆಗೆ ಮಹಾತ್ಮಾ ಗಾಂಧಿಯವರು ಬಂದು ಹೋಗಿದ್ದರು. ಆದರೂ ಕಾರ್ನಾಡ್ ಆ ಮನೆಯನ್ನು ಮಾರಾಟ ಮಾಡಿದರು. ಆಗಾಗ ವಿದ್ಯಾವರ್ಧಕ ಸಂಘಕ್ಕೆ ಬರುತ್ತಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಮಾತನಾಡುತ್ತಿದ್ದರು ಎಂದು ಹೇಳಿದರು.

  • ಫಸ್ಟ್ ನ್ಯೂಸ್ | 6-2-2019

    ಫಸ್ಟ್ ನ್ಯೂಸ್ | 6-2-2019

    https://www.youtube.com/watch?v=FgKDefV36oQ