Tag: publlictv

  • ಇಂದಿನಿಂದ ಜುಲೈ 13 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ

    ಇಂದಿನಿಂದ ಜುಲೈ 13 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ

    ಬೆಂಗಳೂರು: ಇಂದಿನಿಂದ ಜುಲೈ 13 ರವರೆಗೆ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಜುಲೈ 13ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ:  ತೆಂಗು ರಫ್ತಿಗೆ ಅವಕಾಶ, ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರ: ಶೋಭಾ ಕರಂದ್ಲಾಜೆ

    ಇಂದು ಸಹ ದಕ್ಷಿಣ ಕನ್ನಡ, ಕೋಲಾರ, ಕೊಪ್ಪಳದಲ್ಲಿ ಮಳೆಯಾಗಿದೆ. ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಜುಲೈ 9, 10, 13 ಆರೆಂಜ್ ಹಾಗೂ ಜುಲೈ 11, 12ರಂದು ರೆಡ್ ಅಲರ್ಟ್‍ನ್ನು ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 2 ದಿನ ಮಳೆ ಮುನ್ಸೂಚನೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

  • ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    – ಯೋಗ ಯಾವುದೇ ದೇಶ-ಧರ್ಮಕ್ಕೆ ಸೀಮಿತವಲ್ಲ 

    ಬೆಂಗಳೂರು: ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಡಿದ ಅವರು, ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ:  ಗಾಳಿ-ಮಳೆಗೆ ಉರುಳುತ್ತಿರುವ ಮರಗಳ ರಕ್ಷಣೆಗೆ ಸರ್ಕಾರದ ಹೊಸ ಪ್ಲ್ಯಾನ್

    ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ.ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜೊತೆಗೆ ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಡಿಸಿಎಂ ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಗೋವಿಂದರಾಜು ಅವರು ಯೋಗವನ್ನು ಶಿಕ್ಷಣದ ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಡಿಸಿಎಂ ಸ್ಪಂದಿಸಿ ಈ ಪ್ರತಿಕ್ರಿಯೆ ನೀಡಿದರು.

    ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ:

    ಯೋಗ ದಿನಾಚರಣೆಗೆ ಸಾನ್ನಿಧ್ಯ ವಹಿಸಿ ಆಸೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು, ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ ಎಂದು ನುಡಿದರು.

    ಯೋಗ ಭಾರತಕ್ಕೆ ಸೇರಿದ್ದು ಎಂದು ಜಗತ್ತು ಅದನ್ನು ಬಳಸದೇ ಇರಬಾರದು. ಹಾಗೆ ಮಾಡಿದರೆ ಜಗತ್ತಿಗೇ ನಷ್ಟ. ಯುರೋಪಿಯನ್ ವಿಜ್ಞಾನಿ ಲಾವಾಶಿಯರ್ ಅವರು ಆಮ್ಲಜನಕವನ್ನು ಸಂಶೋಧಿಸಿದರು ಎಂಬ ಕಾರಣಕ್ಕೆ ನಾವು ಅದನ್ನು ಬಳಸದೇ ಇದ್ದರೆ ನಮಗೇ ನಷ್ಟ. ಹಾಗೆಯ ಯೋಗವೂ ಕೂಡ. ಯೋಗ ಜಗತ್ತಿನ ಪ್ರತಿಯೊಬ್ಬರ ಜೀವನ ಶೈಲಿ ಆಗಬೇಕು ಎಂದು ಸ್ವಾಮೀಜಿ ಅವರು ಆಶಯ ವ್ಯಕ್ತಪಡಿಸಿದರು.

    ವಚನಾನಂದ ಶ್ರೀಗಳಿಂದ ಯೋಗ ಮಾರ್ಗದರ್ಶನ:

    ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಯೋಗ ಮಾರ್ಗದರ್ಶನ ನೀಡಿದರು. ಯೋಗ ಪಟುಗಳಿಂದ ಶ್ರೀಗಳವರು ‘ಕಟ್ಟಿ ಚಕ್ರಾಸನ’, ‘ತ್ರಿಕೋನಾಸನ’, ‘ಊಧ್ರ್ವ ತಾಡಾಸನ’, ‘ಪಾದ ಹಸ್ತಾಸನ’, ‘ಉಸ್ಟ್ರಾಸನ’, ‘ಶಶಾಂಕಾಸನ’, ‘ಮಂಡೂಕಾಸನ’, ‘ಮಕರಾಸನ’, ‘ಭುಜಂಗಾಸನ’, ‘ಬಾಲ ಕ್ರೀಡಾಸನ’, ‘ಶಲ್ಬಾಸನ’, ‘ಉತ್ಥಾನ ಪಾದಾಸನ’, ‘ಅರ್ಧಪವನ ಮುಕ್ತಾಸನ’, ‘ಪವನ ಮುಕ್ತಾಸನ’ ಜತೆಗೆ, ‘ಕಪಾಲಬಾತಿ’, ‘ಪ್ರಾಣಯಾಮ’, ‘ನಾಡಿ ಶೋಧನ’, ‘ಶೀಥಲಿ ಪ್ರಾಣಯಾಮ’, ‘ಭ್ರಾಮರಿ ಪ್ರಾಣಯಾಮ’ ಮಾಡಿಸಿದರು.

    ಕ್ರೀಡಾ ಮತ್ತು ಯವಜನ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

  • ಕಾರ್ ಖರೀದಿಸಲು ಕಂದಮ್ಮನನ್ನು ಮಾರಿದ ದಂಪತಿ

    ಕಾರ್ ಖರೀದಿಸಲು ಕಂದಮ್ಮನನ್ನು ಮಾರಿದ ದಂಪತಿ

    ಲಕ್ನೋ: ನವಜಾತ ಶಿಶುವನ್ನು ದಂಪತಿ ಉದ್ಯಮಿಗಳಿಗೆ 1.5 ಲಕ್ಷ ರೂಪಾಯಿಗೆ ಮಾರಿದ ಅಮಾನುಷ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ.

    ದಂಪತಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ತಮ್ಮ ಮಗುವನ್ನೇ ಮಾರಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಮಗುವಿನ ಅಜ್ಜ, ಅಜ್ಜಿಯಂದಿರು ಗುರುವಾರ ಪೊಲೀಸರನ್ನು ಸಂಪರ್ಕಿಸಿ ಪೋಷಕರ ವಿರುದ್ಧ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ತಿರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ದಂಪತಿಗೆ ಮೂರು ತಿಂಗಳ ಹಿಂದೆ ಮಗು ಜನಿಸಿದ ಮಗುವಾಗಿದೆ. ಮಗಳು ಮತ್ತು ಅಳಿಯ ಮಗುವನ್ನು, ಗುರ್ಸಹೈಗಂಜ್ ಮೂಲದ ಉದ್ಯಮಿಯೊಬ್ಬರಿಗೆ 1.5 ಲಕ್ಷ ರೂ.ಗೆ ಮಾರಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರ್ ಕೊಳ್ಳಲು ಈ ಕೆಲಸ ಮಾಡಿದ್ದಾರೆ ಮಗುವಿನ, ಅಜ್ಜ, ಅಜ್ಜಿ ಪೊಲೀಸರ ಬಳಿ ಆರೋಪಿಸಿದ್ದಾರೆ.

     

    ಮಗು ಉದ್ಯಮಿ ಬಳಿ ಇದೆ. ನಾವು ಶುಕ್ರವಾರ ಮಹಿಳೆ ಮತ್ತು ಅವಳ ಪತಿಯನ್ನು ವಿಚಾರಣೆಗಾಗಿ ಕರೆದಿದ್ದೇವೆ. ದಂಪತಿ ಇತ್ತೀಚೆಗೆ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ.

  • ಸೌಲಭ್ಯಗಳಿಗೆ ಅನುಗುಣವಾಗಿ ರೋಗಿಗಳನ್ನ ದಾಖಲಿಸಿಕೊಳ್ಳಿ : ಖಾಸಗಿ ಆಸ್ಪತೆಗಳಿಗೆ ಡಿಸಿ ಎಚ್ಚರಿಕೆ

    ಸೌಲಭ್ಯಗಳಿಗೆ ಅನುಗುಣವಾಗಿ ರೋಗಿಗಳನ್ನ ದಾಖಲಿಸಿಕೊಳ್ಳಿ : ಖಾಸಗಿ ಆಸ್ಪತೆಗಳಿಗೆ ಡಿಸಿ ಎಚ್ಚರಿಕೆ

    ಚಿಕ್ಕಮಗಳೂರು: ಖಾಸಗಿ ಆಸ್ಪತ್ರೆ ಸೋಂಕಿತರನ್ನ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಆಕ್ಸಿಜನ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಡಿಸ್ಚಾರ್ಜ್‍ಮಾಡಿ ಹೋಗಪ್ಪ ಅಂತ ರಸ್ತೆಯಲ್ಲಿ ಬಿಟ್ಟರೆ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಎಚ್ಚರಿಕೆ ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯವರು ರೋಗಿಗಳನ್ನು ಟ್ರೀಟ್ ಮಾಡಿದ ಬಳಿಕ ಅವರ ಬಗ್ಗೆ ಕೇರ್ ತೆಗೆದುಕೊಳ್ಳಬೇಕು, ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಡಿಸ್ಚಾರ್ಜ್‍ಮಾಡಿ ಹೋಗಪ್ಪ ಅಂತ ರಸ್ತೆಯಲ್ಲಿ ಬಿಟ್ಟರೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    ಖಾಸಗಿ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಸಂಜೆ ವೇಳೆಗೆ ಆಕ್ಸಿಜನ್ ಸಿಗದಿದ್ದರೆ ಕಷ್ಟ ಎಂದು ಆಸ್ಪತ್ರೆಯ ಮುಖ್ಯಸ್ಥ ವೈದ್ಯರು ಹೇಳಿದ್ದರು. ಕೆಲ ಸೋಂಕಿತರನ್ನ ಬೇರೆ ಆಸ್ಪತ್ರೆಗೆ ರವಾನಿಸಿ, ಉಳಿದ ಸೋಂಕಿತರ ಸಂಬಂಧಿಕರಿಗೆ ಬೇರೆ ಕಡೆ ಕರೆದುಕೊಂಡು ಹೋಗಲು ಮನವಿ ಮಾಡುತ್ತೇವೆ. ಸರ್ಕಾರ ಆಕ್ಸಿಜನ್ ಪೂರೈಸುತ್ತಿಲ್ಲ ಎಂದು ಆರೋಪಿಸಿದ್ದರು. ಜಿಲ್ಲಾಧಿಕಾರಿ ರಮೇಶ್, ಖಾಸಗಿ ಆಸ್ಪತ್ರೆಗಳು ಸೌಲಭ್ಯಗಳು ಹಾಗೂ ಅವಶ್ಯಕತೆಗಳಿಗೆ ಅನುಗುಣವಾಗಿ ರೋಗಿಗಳನ್ನು ತುಂಬಿಸಬೇಕು. ಕಮರ್ಷಿಯಲ್ ಆಧಾರದಲ್ಲಿ ಪೇಶೆಂಟ್‍ಗಳನ್ನ ತೆಗೆದುಕೊಳ್ಳಬಾರದು ಎಂದು ಸೂಚಿಸಿದ್ದಾರೆ.

    ಸರ್ಕಾರದಿಂದ ಈವರೆಗೆ ನಾವು ಖಾಸಗಿ ಆಸ್ಪತ್ರೆಗೆ ಯಾವ ಸೋಂಕಿತರನ್ನೂ ರೆಫರ್ ಮಾಡಿಲ್ಲ. ಖಾಸಗಿ ಆಸ್ಪತ್ರೆಗಳು 50 ಪಸೆರ್ಂಟ್ ಕೋಟಾ ಖಾಲಿ ಇಡಬೇಕು ಇಟ್ಟಿದ್ದಾರೆ ಎಂದು ನಂಬಿದ್ದೇವೆ ಎಂದರು. ಒಂದು ವೇಳೆ, ಖಾಸಗಿ ಆಸ್ಪತ್ರೆಯ ಯಾವುದೇ ರೋಗಿಗಳಿಗೆ ತೀವ್ರ ಸಮಸ್ಯೆಯಾದಾಗ ಜೀವ ಹೋಗಬಾರದು ಎಂದು ಮಾನವೀಯತೆ ದೃಷ್ಟಿಯಿಂದ ಸರ್ಕಾರ ಸ್ಪಂದಿಸುತ್ತೆ. ಆದರೆ ಖಾಸಗಿ ಆಸ್ಪತ್ರೆಯವರು ತಮ್ಮ ಎಲ್ಲಾ ಸೌಲಭ್ಯಗಳಿಗೆ ಅನುಗುಣವಾಗಿ ರೋಗಿಗಳನ್ನು ತೆಗೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

    ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಬರಬಾರದು ಎಂದು ನಾವು ಮುಂಜಾಗೃತ ಕ್ರಮ ಕೈಗೊಂಡಿದ್ದೇವೆ. ಪ್ರತಿ ದಿನ ಬೆಳಗ್ಗೆ-ಸಂಜೆ ಎಷ್ಟು ಆಕ್ಸಿಜನ್ ಇದೆ. ಎಷ್ಟ ಬಳಕೆ ಆಗುತ್ತಿದೆ. ಇರುವ ಸ್ಟಾಕ್ ಎಷ್ಟು ದಿನ-ಗಂಟೆ ಬರುತ್ತೆ ಎಂದು ಮಾನೀಟರ್ ಮಾಡಿ, ಕಾಲ-ಕಾಲಕ್ಕೆ ಆಕ್ಸಿಜನ್ ತರಿಸುತ್ತಿದ್ದೇವೆ. ಏಪ್ರಿಲ್ 19ರಂದು 49ಪ್ರಕರಣಗಳಿದ್ದವು. ಆದರೆ ಇಂದು 1009 ಪ್ರಕರಣಗಳಿವೆ. ದಿನೇ-ದಿನೇ ಆಕ್ಸಿಜನ್ ಹೆಚ್ಚಾಗಿ ಬೇಕಾಗುತ್ತಿದೆ. ಇಂದಿಗೂ ಜಿಲ್ಲಾದ್ಯಂತ ಎಲ್ಲೂ ಸಮಸ್ಯೆ ಆಗಬಾರದೆಂದು ತಂಡ ಮಾಡಿ ಹಗಲಿರುಳು ಪೂರೈಕೆ ವ್ಯವಸ್ಥೆ ಮಾಡಿದ್ದೇವೆ. ಖಾಸಗಿ ಆಸ್ಪತ್ರೆಯಲ್ಲಿ ಕೊರತೆ ಇದೆ ಎಂದು ಫೋನ್ ಬರುತ್ತಿದೆ. ಖಾಸಗಿ ಆಸ್ಪತ್ರೆಗಳು 50 ಪಸೆರ್ಂಟ್ ಕೋಟಾ ಖಾಲಿ ಇಡಬೇಕು, ಇಟ್ಟಿದ್ದಾರೆ ಎಂದು ನಂಬಿದ್ದೇವೆ ಪರೀಶಿಲನೆ ತಂಡಗಳನ್ನೂ ಕಳಿಸಿದ್ದೇವೆ. ಖಾಸಗಿ ಆಸ್ಪತ್ರೆಗಳು ಆಕ್ಸಿಜನ್ ಕೆಪಾಸಿಟಿ ಪೂರೈಸುವ ಕೆಪಾಸಿಟಿ ಆಧಾರದ ಮೇಲೆ ಪೇಶೆಂಟ್‍ಗಳನ್ನ ತೆಗೆದುಕೊಳ್ಳಬೇಕು ಎಂದಿದ್ದಾರೆ.

  • ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್ ನಟಿ ಸಹೋದರ ಕೊರೊನಾಗೆ ಬಲಿ

    ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್ ನಟಿ ಸಹೋದರ ಕೊರೊನಾಗೆ ಬಲಿ

    ಮುಂಬೈ: ಹಿಂದಿ ಚಿತ್ರರಂಗದ ಖ್ಯಾತ ನಟಿ ಪಿಯಾ ಬಾಜೆಪೇಯ್ ಅವರ ಸಹೋದರ ಕೊರೊನಾ ವೈರಸ್‍ನಿಂದ ಮೃತಪಟ್ಟಿದ್ದಾರೆ. ಈ ವಿಷಯವನ್ನು ಸ್ವತಃ ಪಿಯಾ ಸೋಶಿಯಲ್ ಮೀಡಿಯಾ ಮೂಲಕವಾಗಿ ಖಚಿತ ಪಡಿಸಿದ್ದಾರೆ.

    ಸಹೋದರನಿಗೆ ಕೊರೊನಾ ಪಾಸಿಟಿವ್ ಆಗಿದ್ದು ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ತುರ್ತಾಗಿ ನನಗೆ ಸಹಾಯ ಬೇಕಿದೆ. ನನ್ನ ಸಹೋದರ ಸಾಯುತ್ತಿದ್ದಾನೆ. ಉತ್ತರ ಪ್ರದೇಶದ ಫಾರುಕಾಬಾದ್‍ನಲ್ಲಿ ಒಂದು ಬೆಡ್ ಮತ್ತು ವೆಂಟಿಲೇಟರ್ ಬೇಕಾಗಿದೆ. ನಾವು ಕಷ್ಟದಲ್ಲಿದ್ದೇವೆ. ಯಾರಾದರೂ ಸಹಾಯ ಮಾಡಿ ಪ್ಲೀಸ್ ಎಂದು ಪಿಯಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡು ಸಹಾಯಕ್ಕಾಗಿ ಅಂಗಲಾಚಿ ಇಂದು ಟ್ವೀಟ್ ಮಾಡಿದ್ದರು.

     

    ಈ ಟ್ವೀಟ್ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ ಪಿಯಾ ಸಹೋದರ ಇಹಲೋಕ ತ್ಯಜಿಸಿದ್ದರು. ನನ್ನ ಸಹೋದರ ಇನ್ನಿಲ್ಲ ಎಂದು ಮತ್ತೆ ಟ್ವೀಟ್ ಮಾಡುವ ಮೂಲಕವಾಗಿ ದುಃಖವನ್ನು ತೋಡಿಕೊಂಡಿದ್ದಾರೆ. ಸಹೋದರನನ್ನು ಕಳೆದುಕೊಂಡಿರುವ ಪಿಯಾಗೆ ನೆಟ್ಟಿಗರು ಸಂತಾಪ ಸೂಚಿಸಿದ್ದಾರೆ. ಇತ್ತೀಚೆಗೆ ಅನೆಕ ಸೆಲೆಬ್ರಿಟಿಗಳು ಕೊರೊನಾಗೆ ಬಲಿಯಾಗುತ್ತಿದ್ದಾರೆ.

  • ಬನ್ನೇರುಘಟ್ಟ ಝೂನಲ್ಲಿ ಮತ್ತೊಂದು ಅವಘಡ – ಬಿಳಿಹುಲಿ ಮರಿ ದಾಳಿಗೆ ಅನಿಮಲ್ ವಾಚರ್ ಬಲಿ

    ಬನ್ನೇರುಘಟ್ಟ ಝೂನಲ್ಲಿ ಮತ್ತೊಂದು ಅವಘಡ – ಬಿಳಿಹುಲಿ ಮರಿ ದಾಳಿಗೆ ಅನಿಮಲ್ ವಾಚರ್ ಬಲಿ

    ಬೆಂಗಳೂರು: ನಗರಕ್ಕೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಕಾಡು ಪ್ರಾಣಿಗಳ ಪ್ರವಾಸಿ ತಾಣವಾಗಿದ್ದು, ರಾಷ್ಟ್ರದಲ್ಲಿಯೆ ಪ್ರಖ್ಯಾತಿ ಗಳಿಸಿದೆ. ಆದರೆ ಕಳೆದ ಎರಡು ವರ್ಷಗಳಿಂದ ಇಲ್ಲಿನ ಅಧಿಕಾರಿಗಳ ಬೇಜವಬ್ದಾರಿ ತನದಿಂದಾಗಿ ಕಾಡುಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದು, ಇದೀಗ ಸಿಬ್ಬಂದಿಗಳು ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗುವಂತಾಗಿದೆ.

    ಬೆಂಗಳೂರಿನ ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. 7 ದಿನಗಳ ಹಿಂದಷ್ಟೇ ಅಸಿಸ್ಟೆಂಟ್ ಅನಿಮಲ್ ವಾಚರ್ ಆಗಿ ಕೆಲಸಕ್ಕೆ ಸೇರಿಕೊಂಡ 35 ವರ್ಷದ ಆಂಜನೇಯ ಹುಲಿಗಳ ದಾಳಿಗೆ ಬಲಿಯಾಗಿದ್ದಾರೆ.

    ನಿನ್ನೆ ಸಂಜೆ 5:30ರ ಸುಮಾರಿನಲ್ಲಿ ಎಂದಿನಂತೆ ಹುಲಿಗಳಿಗೆ ಆಹಾರ ನೀಡಿದ ನಂತರ ಹುಲಿಗಳನ್ನ ಕೇಜ್‍ನಲ್ಲಿ ಬಿಡಲು ಆಂಜನೇಯ ಹೋಗಿದ್ರು. ಈ ವೇಳೆ, 1 ವರ್ಷ ವಯಸ್ಸಿನ 2 ಹುಲಿ ಮರಿಗಳು ಆಂಜನೇಯ ಮೇಲೆ ದಾಳಿ ಮಾಡಿವೆ. ಇದರಿಂದ ಗಾಬರಿಗೊಂಡ ಆಂಜನೇಯ ಕೆಳಬಿದ್ದಿದ್ದಾರೆ. ಹುಲಿ ಮರಿಗಳ ದಾಳಿ ಬೆನ್ನಲ್ಲೇ ದೊಡ್ಡ ಹುಲಿಗಳು ದಾಳಿ ಮಾಡಿವೆ.

    ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಆಂಜನೇಯ ಮೃತಪಟ್ಟಿದ್ದಾರೆ. ಇನ್ನು ಪಾರ್ಕ್ ನಲ್ಲಿ ಪ್ರಾಣಿಗಳಿಗೆ ಆಹಾರ ನೀಡುವ ಸಂದರ್ಭದಲ್ಲಿ ನುರಿತ ಅನಿಮಲ್ ಕೀಪರ್ ಇರಬೇಕಿತ್ತು. ಆದರೆ ಆತ ಇರದೇ ಇದ್ದದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

    ಘಟನೆ ನಡೆದ ನಂತರ ಯಾವುದೇ ಮಾಧ್ಯಮದವರು ಒಳ ಹೋಗದಂತೆ ಬನ್ನೇರುಘಟ್ಟ ಪಾರ್ಕ್ ಡಿಎಫ್‍ಓ ಕುಶಾಲಪ್ಪ ಉದ್ಯಾನವನದ ಮುಖ್ಯ ಗೇಟ್‍ಗೆ ಬೀಗ ಹಾಕಿದ್ದಾರೆ. ಇದುವರೆಗೂ ಹುಲಿದಾಳಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿಯನ್ನು ಪಾರ್ಕ್ ಅಧಿಕಾರಿಗಳು ನೀಡಿಲ್ಲ. ಇನ್ನು ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಕೊಟ್ಟ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ವಿಕ್ಟೊರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

    ಒಂದೂವರೆ ವರ್ಷದ ಹಿಂದೆ ಬೆಂಗಾಲ್ ಟೈಗರ್‍ಗಳು ಕೃಷ್ಣಾ ಎಂಬ ಪ್ರಾಣಿಪಾಲಕನ ಮೇಲೆ ಎರಗಿದ್ದವು. ಅದೃಷ್ಟವಶಾತ್ ಕೃಷ್ಣಾ ತೀವ್ರ ಗಾಯಗೊಂಡರೂ ಬದುಕುಳಿದು ಚೇತರಿಸಿಕೊಂಡಿದ್ದರು. ಇನ್ನು, 2 ತಿಂಗಳ ಹಿಂದೆ ಇದೆ ಬಿಳಿಹುಲಿಯೊಂದು ಬೆಂಗಾಲ್ ಟೈಗರ್ ಕೇಜ್ ಗೆ ಹೋಗಿ ದಾಳಿಗೀಡಾಗಿ ಸಾವನ್ನಪ್ಪಿತ್ತು.

    https://www.youtube.com/watch?v=8sATYADYfzc

    https://www.youtube.com/watch?v=gkyumRjXHk0