Tag: Puducherry

  • ಎಕ್ಸಾಂ ನಡೆಯುತ್ತಿದ್ದ ಸ್ಕೂಲ್‍ಗೆ ನುಗ್ಗಿದ ಹಿಂದೂ ಮುನ್ನಾನಿ ಸದಸ್ಯರು – ಶಾಲೆ ಮುಚ್ಚುವಂತೆ ಒತ್ತಾಯ

    ಎಕ್ಸಾಂ ನಡೆಯುತ್ತಿದ್ದ ಸ್ಕೂಲ್‍ಗೆ ನುಗ್ಗಿದ ಹಿಂದೂ ಮುನ್ನಾನಿ ಸದಸ್ಯರು – ಶಾಲೆ ಮುಚ್ಚುವಂತೆ ಒತ್ತಾಯ

    ಪುದುಚೇರಿ: ಪುದುಚೇರಿಯ (Puducherry) ಬಾಲಕಿಯರ ಶಾಲೆಗೆ ನುಗ್ಗಿದ ಹಿಂದೂ ಮುನ್ನಾನಿ ಸದಸ್ಯರು ವಿದ್ಯಾರ್ಥಿನಿಯರು ತಮ್ಮ ತ್ರೈ ಮಾಸಿಕ ಪರೀಕ್ಷೆಯನ್ನು ಬರೆಯುತ್ತಿದ್ದರೂ ಶಾಲೆಯನ್ನು ಮುಚ್ಚುವಂತೆ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಿಂದೂ ಮುನ್ನಾನಿ ಸದಸ್ಯರನ್ನು ಚದುರಿಸಿದ್ದಾರೆ.

    ಹಿಂದೂ ಮುನ್ನಾನಿ (Hindu Munnani) ನೇತೃತ್ವದಲ್ಲಿ ಐದು ಹಿಂದೂಪರ ಸಂಘಟನೆಗಳು ಸೇರಿಕೊಂಡು ಮಂಗಳವಾರ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ (Union Territory of Puducherry) ಬಂದ್‍ಗೆ ಕರೆ ನೀಡಿದ್ದವು. ಇದರಿಂದಾಗಿ ಅಂಗಡಿಗಳನ್ನು ಮುಚ್ಚಲಾಯಿತು ಮತ್ತು ಹಲವಾರು ಖಾಸಗಿ ಶಾಲೆಗಳಿಗೆ ಸೆಪ್ಟೆಂಬರ್ 27 ರಂದು ರಜೆ ಘೋಷಿಸಲಾಗಿದೆ. ಆದರೆ ತ್ರೈಮಾಸಿಕ ಪರೀಕ್ಷೆ ನಡೆಯುತ್ತಿರುವುದರಿಂದ 600 ಬಾಲಕಿಯರು ಓದುತ್ತಿರುವ ಉಪ್ಪಳಂನಲ್ಲಿರುವ (Uppallam) ಇಮ್ಯಾಕ್ಯುಲೇಟ್ ಗರ್ಲ್ಸ್‌  ಹೈಯರ್ ಸೆಕೆಂಡರಿ ಶಾಲೆಗೆ (Girls Higher Secondary School) ರಜೆ ಘೋಷಿಸಲಾಗಿರಲಿಲ್ಲ.

    Puducherry

    ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿರುವುದನ್ನು ಕಂಡ ಹಿಂದೂ ಮುನ್ನಾನಿ ಕಾರ್ಯಕರ್ತರು ಶಾಲೆಯನ್ನು ಮುಚ್ಚುವಂತೆ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ. ಈ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಇದನ್ನೂ ಓದಿ: ಪ್ರತಿಷ್ಠಾಪನೆಯಾಗಿದ್ದ ದುರ್ಗಾ ದೇವಿಯ ವಿಗ್ರಹ ವಿರೂಪ – ಇಬ್ಬರು ಮಹಿಳೆಯರು ಅರೆಸ್ಟ್

    ತಂಥೈ ಪೆರಿಯಾರ್ ದ್ರಾವಿಡರ್ ಕಳಗಂನ (Thanthai Periyar Dravidar Kazhagam) ಕಾರ್ಯಕರ್ತರು ಕೂಡ ಶಾಲೆಗೆ ಜಮಾಯಿಸಿ ತೀವ್ರ ವಾಗ್ವಾದ ನಡೆಸಿದರು. ಕೊನೆಯದಾಗಿ ಪುದುಚೇರಿ ಪೊಲೀಸರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಿದರು ಮತ್ತು ಹಿಂದೂ ಮುನ್ನಾನಿ ಕಾರ್ಯಕರ್ತರನ್ನು ಚದುರಿಸಿದರು. ನಂತರ ಪರೀಕ್ಷೆಗಳನ್ನು ನಿಗದಿತ ಸಮಯದಲ್ಲಿಯೇ ನಡೆಸಲಾಯಿತು. ಇದನ್ನೂ ಓದಿ: ದಸರಾ ಕವಿಗೋಷ್ಠಿಯಲ್ಲಿ ಮೃತಪಟ್ಟ ಕವಿಯ ಹೆಸರು – ಆಮಂತ್ರಣ ಪತ್ರಿಕೆಯಲ್ಲಿ ಎಡವಟ್ಟು

    Live Tv
    [brid partner=56869869 player=32851 video=960834 autoplay=true]

  • ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು

    ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು

    ಪುದುಚೇರಿ: ಓದುವುದರಲ್ಲಿ ತನ್ನ ಮಗನಿಗೆ ಸ್ಪರ್ಧೆ ನೀಡುತ್ತಿದ್ದ ಸಹಪಾಠಿಗೆ ಮಹಿಳೆಯೊಬ್ಬಳು ವಿಷ ನೀಡಿ ಹತ್ಯೆಗೈದಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.

    ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು. ಈ ವೇಳೆ ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್‍ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಹನುಮನ ವೇಷ ಧರಿಸಿದ್ದ ವ್ಯಕ್ತಿ ಪ್ರದರ್ಶನ ನೀಡುತ್ತಲೇ ಕುಸಿದು ಸಾವು

    ಕೂಡಲೇ ಮಣಿಕಂದನ್ ಬಾಲನನ್ನು ಕಾರೈಕ್ಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಾಚ್‍ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಎಂದು ತಿಳಿಸಿರುವುದಾಗಿ ಹೇಳಿದ್ದಾನೆ.

    ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್‍ಮ್ಯಾನ್‍ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ನಾಳೆ ಜಮೀರ್ ನೇತೃತ್ವದಲ್ಲೇ ಗಣೇಶೋತ್ಸವ!

    ಚಿಕಿತ್ಸೆ ಫಲಾಕಾರಿಯಾಗದೇ ಶನಿವಾರ ರಾತ್ರಿ ಬಾಲ ಮೃತಪಟ್ಟಿದ್ದಾನೆ. ಇದರಿಂದ ರೊಚ್ಚಿಗೆದ್ದ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಿಕರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೀಗಾಗಿ ಪೊಲೀಸರು ಸಗಾಯರಾಣಿ ವಿಕ್ಟೋರಿಯಾಳನ್ನು ಕೂಡಲೇ ಬಂಧಿಸಿದರು. ಬಳಿಕ ಈ ಕುರಿತಂತೆ ವಿಚಾರಣೆ ನಡೆಸಿದಾಗ, ತನ್ನ ಮಗ ಅರುಲ್ ಮೇರಿ ಮತ್ತು ಬಾಲಾ ನಡುವೆ ಅಂಕ ಗಳಿಸುವ ವಿಚಾರವಾಗಿ ಮತ್ತು ತರಗತಿಯಲ್ಲಿ ರ‍್ಯಾಂಕ್ ಪಡೆಯಲು ಪೈಪೋಟಿ ಇತ್ತು. ಇದರಿಂದಾಗಿ ಆಗಾಗ ಸಣ್ಣ-ಪುಟ್ಟ ಜಗಳವಾಗುತ್ತಿತ್ತು. ಇದರಿಂದ ಅಸಮಾಧಾನಗೊಂಡು ಈ ಕೃತ್ಯ ವೆಸಗಿರುವುದಾಗಿ ಮಹಿಳೆ ತಿಳಿಸಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ಲಸಿಕೆ ಬೇಡ ಎಂದು ಚಾಕು ಹಿಡಿದು ಮರ ಹತ್ತಿ ಕುಳಿತ!

    ಲಸಿಕೆ ಬೇಡ ಎಂದು ಚಾಕು ಹಿಡಿದು ಮರ ಹತ್ತಿ ಕುಳಿತ!

    ಚೆನ್ನೈ: ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

    ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. ಇದನ್ನೂ ಓದಿ:  ಮೊಬೈಲ್ ಕದ್ದಿದ್ದಕ್ಕೆ ಬಾಲಕಿಗೆ ಹಿಗ್ಗಾಮುಗ್ಗ ಥಳಿಸಿದ ಯುವಕರು

     

    ವ್ಯಕ್ತಿಗೆ ಲಸಿಕೆ ಪಡೆಯಲು ಇಷ್ಟವಿಲ್ಲದಿದ್ದರಿಂದ ಆರೋಗ್ಯ ಕಾರ್ಯಕರ್ತರಿಗೆ ಮರ ಏರಿ ಲಸಿಕೆ ಹಾಕುವಂತೆ ಸವಾಲು ಹಾಕಿದ್ದಾನೆ. ಆದರೆ ಕಾರ್ಯಕರ್ತರು ಆತನನ್ನು ಹಿಂಬಾಲಿಸಿಯೂ ಕೈಗೆ ಸಿಗದಿದ್ದಾಗ ಆ ಸ್ಥಳ ತೊರೆದು ಮುಂದಿನ ಕೆಲಸಕ್ಕೆ ಗಮನ ಹರಿಸಿದ್ದಾರೆ.

    ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‍ನಲ್ಲಿ ಪೆಟ್ರೋಲ್ ದರ 25 ರೂ. ಇಳಿಕೆ – ದ್ವಿಚಕ್ರ ವಾಹನಗಳಿಗೆ ಮಾತ್ರ ಈ ಆಫರ್!

  • ಪಟಾಕಿ ಸ್ಫೋಟಗೊಂಡು ಅಪ್ಪ, ಮಗನ ದೇಹ ಛಿದ್ರ ಛಿದ್ರ

    ಪಟಾಕಿ ಸ್ಫೋಟಗೊಂಡು ಅಪ್ಪ, ಮಗನ ದೇಹ ಛಿದ್ರ ಛಿದ್ರ

    ಪಾಂಡಿಚೆರಿ: ಅಪ್ಪ- ಮಗ ಪಟಾಕಿಗಳನ್ನು ತೆಗೆದುಕೊಂಡು ಸ್ಕೂಟರ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ನಡುರಸ್ತೆಯಲ್ಲಿ ಇದ್ದಕ್ಕಿದ್ದ ಹಾಗೇ ಪಟಾಕಿ ಸ್ಫೋಟಗೊಂಡು, ಅಪ್ಪ- ಮಗನ ದೇಹ ಛಿದ್ರ ಛಿದ್ರವಾಗಿ ಬಿದ್ದಿರುವ ಘಟನೆ ಪುದುಚೇರಿ-ವಿಲ್ಲುಪುರಂ ಗಡಿಯಲ್ಲಿ ಈ ಘಟನೆ ನಡೆದಿದೆ.

    ತಂದೆ ಕಲೈನೇಸನ್ ಮತ್ತು ಅವರ ಮಗ ಪ್ರದೀಪ್ (7) ಮೃತರಾಗಿದ್ದಾರೆ. ಪಟಾಕಿಗಳ ಬಾಕ್ಸ್‍ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ವಿಲ್ಲುಪುರಂ ಜಿಲ್ಲೆಯ ಕೊಟ್ಟಕುಪ್ಪಂ ಪೂರ್ವ ಕರಾವಳಿ ರಸ್ತೆಯಲ್ಲಿರುವ ಕೂನಿಮೇಡು ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ:ಪತ್ನಿಯ ಎದೆಹಾಲು ಕದ್ದು ಕುಡಿದ ಆಯುಷ್ಮಾನ್ ಖುರಾನಾ

    ವೀಡಿಯೋದಲ್ಲಿ ಏನಿದೆ?
    ಕಲೈನಾಸನ್ ಸ್ಕೂಟರ್ ಓಡಿಸುತ್ತಿದ್ದಾಗ, ಅವರ ಮಗ ಪ್ರದೀಪ್ ಮುಂಭಾಗದಲ್ಲಿ ಕುಳಿತುಕೊಂಡಿದ್ದ. ತಿರುವಿನಲ್ಲಿ ವೇಗವಾಗಿ ಬಂದ ಸ್ಕೂಟರ್ ಸ್ಫೋಟಗೊಂಡು ಬಾಲಕ ಮತ್ತು ಆತನ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ದೃಶ್ಯ ಸಿಸಿಟಿವಿ ವೀಡಿಯೋದಲ್ಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

    ಈ ಘಟನೆಯಲ್ಲಿ ಸ್ಫೋಟಗೊಂಡ ಸ್ಕೂಟರ್ ಪಕ್ಕದಲ್ಲಿ ಬರುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಪುದುಚೇರಿಯ ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಆ್ಯಂಡ್ ರಿಸರ್ಚ್‍ಗೆ ಕರೆದೊಯ್ಯಲಾಯಿತು. ಒಂದು ಲಾರಿ ಹಾಗೂ ಎರಡು ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ. ಘಟನೆ ನಡೆದ ಕೂಡಲೇ ವಿಲ್ಲುಪುರಂ ಜಿಲ್ಲಾ ಡಿಐಜಿ ಪಾಂಡಿಯನ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

  • ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ – ಮೇಕೆದಾಟು ಯೋಜನೆಗೆ ಕೇರಳ, ಪುದುಚೆರಿಯಿಂದಲೂ ಕ್ಯಾತೆ

    ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ – ಮೇಕೆದಾಟು ಯೋಜನೆಗೆ ಕೇರಳ, ಪುದುಚೆರಿಯಿಂದಲೂ ಕ್ಯಾತೆ

    ನವದೆಹಲಿ: ಸೆಪ್ಟೆಂಬರ್ ತಿಂಗಳಲ್ಲಿ 6-7 ಟಿಎಂಸಿ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ಅಧ್ಯಕ್ಷ ಎಸ್.ಕೆ ಹಲ್ದರ್ ನೇತೃತ್ವದಲ್ಲಿ 13 ನೇ ಸಾಮಾನ್ಯ ಸಭೆ ನಡೆಸಲಾಯಿತು. ಸಭೆಯಲ್ಲಿ ತಮಿಳುನಾಡು ಜೂನ್ ಜುಲೈ ಅಗಸ್ಟ್ ತಿಂಗಳ ಬಾಕಿ ನೀರು ಬಿಡುಗಡೆ ಒತ್ತಾಯಿಸಿತು.

    ಮೂರು ತಿಂಗಳ ಅವಧಿಯಲ್ಲಿ ಕರ್ನಾಟಕ 86 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಈವರೆಗೂ 57-57 ಟಿಎಂಸಿ ನೀರು ಬಿಡುಗಡೆ ಮಾಡಿದೆ. ಬಾಕಿ 30.6 ಟಿಎಂಸಿ ನೀರು ಹರಿಸಲು ತಮಿಳುನಾಡು ಪ್ರಾಧಿಕಾರದ ಮುಂದೆ ಮನವಿ ಮಾಡಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕಳೆದ ತಿಂಗಳು ಉತ್ತಮ ಮಳೆಯಾಗಿರುವ ಕಾರಣ 14,000 ಕ್ಯೂಸೆಕ್ ನೀರು ಹರಿಸಿದೆ. ಆದರೆ ತಮಿಳುನಾಡು ಇದನ್ನು ಪರಿಗಣಿಸಲಿಲ್ಲ. ಉತ್ತಮ ಮಳೆಯಾದ್ರೆ ಬಾಕಿ ನೀರು ನೀಡುವುದಾಗಿ ಹೇಳಿತು.

    ಅಧ್ಯಕ್ಷ ಎಸ್.ಕೆ ಹಲ್ದರ್ ಮಳೆಯ ಪ್ರಮಾಣ, ಕೊರತೆ ಎಲ್ಲವನ್ನೂ ತಾಳೆ ಹಾಕಿ ತಮಿಳುನಾಡಿಗೆ ಸೆಪ್ಟೆಂಬರ್ ನಲ್ಲಿ 6-7 ಟಿಎಂಸಿ ನೀರು ನೀಡಬೇಕು, ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಉತ್ತಮ ಮಳೆಯಾಗಲಿದ್ದು, ಮುಂದೆ ತಮಿಳುನಾಡು ಪಾಲಿನ ಎಲ್ಲ ನೀರನ್ನು ನೀಡಬೇಕು ಎಂದು ಸೂಚಿಸಿದರು.

    ಇನ್ನು ಸಭೆಯಲ್ಲಿ ಕರ್ನಾಟಕ ಮೇಕೆದಾಟು ಆಣೆಕಟ್ಟು ನಿರ್ಮಾಣದ ಬಗ್ಗ ಪ್ರಸ್ತಾಪ ಮಾಡಿತು. ಆದರೆ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವ ಕಾರಣ ಈ ಬಗ್ಗೆ ಚರ್ಚೆ ಮಾಡದಂತೆ ಕೇರಳ, ಪುದುಚೇರಿ ಮತ್ತು ತಮಿಳುನಾಡು ಒತ್ತಾಯ ಮಾಡಿದವು. ಈ ಹಿನ್ನೆಲೆ ಈ ಚರ್ಚೆಯನ್ನು ಮುಂದೂಡಲಾಯಿತು. ಕರ್ನಾಟಕವೂ ವೆಲ್ಲಾರು – ಗುಂಡಾರು ನದಿ ಜೋಡಣೆಗೆ ವಿರೋಧ ವ್ಯಕ್ತಪಡಿಸಿತು. ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿತು. ಇದಕ್ಕೆ ತಮಿಳುನಾಡು ವಿರೋಧ ಹಿನ್ನಲೆ ಈ ಚರ್ಚೆಯನ್ನು ಮುಂದೂಡಲಾಯಿತು. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಈ ಎರಡು ವಿಚಾರಗಳು ಮುಂದಿನ ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆ ಇದೆ. ಸೆಪ್ಟೆಂಬರ್ 24ಕ್ಕೆ ಮುಂದಿನ ಸಭೆಗೆ ದಿನಾಂಕ ನಿಗದಿ ಮಾಡಿದೆ. ಸಭೆ ಬಳಿಕ ಮಾತನಾಡಿದ ಅಧ್ಯಕ್ಷ ಎಸ್.ಕೆ ಹಲ್ದರ್ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ನೇರ ರಾಜ್ಯಗಳ ಸಹಮತ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 2027ಕ್ಕೆ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ ಕರ್ನಾಟಕದ ನ್ಯಾ. ಬಿ.ವಿ.ನಾಗರತ್ನ

  • ಪುದುಚೇರಿ ಸಿಎಂ ಸಂಪುಟ ರಚನೆ- 13 ಖಾತೆಗಳನ್ನು ಇಟ್ಟುಕೊಂಡ ಎನ್.ರಂಗಸ್ವಾಮಿ

    ಪುದುಚೇರಿ ಸಿಎಂ ಸಂಪುಟ ರಚನೆ- 13 ಖಾತೆಗಳನ್ನು ಇಟ್ಟುಕೊಂಡ ಎನ್.ರಂಗಸ್ವಾಮಿ

    ಪುದುಚೆರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ನೇತೃತ್ವದ ಸಂಪುಟ ರಚನೆಯಾಗಿದೆ. ರಂಗಸ್ವಾಮಿ ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಪ್ರಮುಖ 13 ಖಾತೆಗಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ.

    ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಲೆಫ್ಟಿನೆಂಟ್ ಗವರ್ನರ್ ಡಾ.ತಮಿಳುಸಾಯಿ ಸುಂದರರಾಜನ್ ಅವರ ಅನುಮೋದನೆ ಬಳಿಕ ಸರ್ಕಾರದ ಸಂಪುಟ ರಚನೆಯಾಗಿದೆ. ಸಿಎಂ 13 ಖಾತೆಗಳನ್ನು ತನ್ನ ಬಳಿ ಇಟ್ಟುಕೊಂಡರೆ ಉಳಿದ ಎಲ್ಲಾ ಸಚಿವರಿಗೆ ತಲಾ ಆರು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: ಪುದುಚೇರಿಯಲ್ಲಿ ಕಮಲ ಅರಳಿದ್ದು ಹೇಗೆ? ಕಾಂಗ್ರೆಸ್ ಎಡವಿದ್ದೆಲ್ಲಿ?

    ಎನ್. ರಂಗಸ್ವಾಮಿ ಅವರು ಆರೋಗ್ಯ, ಕಂದಾಯ, ಸ್ಥಳೀಯ ಆಡಳಿತ, ಬಂದರು, ವಿಜ್ಞಾನ ತಂತ್ರಜ್ಞಾನ ಮತ್ತು ಪರಿಸರ, ಮಾಹಿತಿ ಮತ್ತು ಪ್ರಚಾರ ಸೇರಿದಂತೆ ಪ್ರಮುಖ 13 ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡು ಉಳಿದ ಸಚಿವರಿಗೆ ತಲಾ 6 ಖಾತೆಯಂತೆ ಹಂಚಿಕೆ ಮಾಡಿದ್ದಾರೆ.

    ಫೆಬ್ರವರಿಯಲ್ಲಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ಪ್ರಮುಖ ಕಾರಣರಾಗಿದ್ದ ಎನ್. ರಂಗಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಿದ್ದಾರೆ.

  • ಪುದುಚೇರಿಯಲ್ಲಿ ಅರಳಿದ ಕಮಲ

    ಪುದುಚೇರಿಯಲ್ಲಿ ಅರಳಿದ ಕಮಲ

    ಪುದುಚೇರಿ: ತಮಿಳುನಾಡಿಗೆ ಅಂಟಿಕೊಂಡೇ ಇರುವ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಬೇರೆಯದ್ದೇ ರಾಜಕಾರಣ. ತಮಿಳುನಾಡಿನಲ್ಲಿ ದ್ರಾವಿಡ ರಾಜಕಾರಣವೇ ಹಾಸುಹೊದ್ದು ಮಲಗಿದೆ. ರಾಷ್ಟ್ರೀಯ ಪಕ್ಷಗಳಿಗೂ ಅಲ್ಲಿನ ಜನ ಮಣೆ ಹಾಕುತ್ತವೆ. ಹೀಗಾಗಿಯೇ ಕಳೆದ ಬಾರಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರದಲ್ಲಿತ್ತು. ಈಗ ಬಿಜೆಪಿಯನ್ನು ಒಳಗೊಂಡ ಮೈತ್ರಿಕೂಟಕ್ಕೆ ಜನ ಜೈ ಎಂದಿದ್ದಾರೆ.

    ಅಧಿಕಾರ ರಚಿಸಲು ಕೇವಲ ಒಂದು ಸ್ಥಾನದ ಅಗತ್ಯ ಬಿದ್ದಿದೆ. ಪಕ್ಷೇತರರರು ಬೆಂಬಲನೀಡುವ ಸಂಭವ ಇದೆ. ಇದರೊಂದಿಗೆ ದಕ್ಷಿಣ ಭಾರತದಲ್ಲಿ ಇದ್ದೊಂದು ಸರ್ಕಾರವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಈಗ ಪುದ್ದುಚೇರಿಯ ಸಿಎಂ ಯಾರಾಗ್ತಾರಾ? ಬಿಜೆಪಿಯವರಾ ಅಥವಾ ಎನ್ ಆರ್ ರಂಗಸ್ವಾಮಿನಾ ಅನ್ನೋದು ಕುತೂಹಲ.

    ಯಾರಿಗೆ ಎಷ್ಟು ಕ್ಷೇತ್ರ?
    * ಬಿಜೆಪಿ+ – 15
    * ಕಾಂಗ್ರೆಸ್+ – 10
    * ಇತರೆ – 05

    ಪುದುಚ್ಚೆರಿಯಲ್ಲಿ ಕಮಲ ಅರಳಲು ಕಾರಣ
    * ಆಡಳಿತ ವಿರೋಧಿ ಅಲೆ
    * ಯುಪಿಎನಿಂದ ಪ್ರಮುಖ ನಾಯಕರ ವಲಸೆ
    * ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ
    * ಬಿಜೆಪಿಗೆ ಶಕ್ತಿ ತುಂಬಿದ ನಮಃ ಶಿವಾಯಂ
    * ನಾರಾಯಣಸ್ವಾಮಿಯನ್ನು ಕಾಂಗ್ರೆಸ್ ಕಡೆಗಣಿಸಿದ್ದು

  • ಪುದುಚೇರಿ ಕಳೆದುಕೊಂಡ ಕಾಂಗ್ರೆಸ್ – ಅರಳಿದ ಕಮಲ

    ಪುದುಚೇರಿ ಕಳೆದುಕೊಂಡ ಕಾಂಗ್ರೆಸ್ – ಅರಳಿದ ಕಮಲ

    ನವದೆಹಲಿ: ನಾಲ್ಕು ರಾಜ್ಯಗಳ ಜೊತೆಯಲ್ಲಿ ಒಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಬಹುಮತ ಸಾಬೀತು ಮಾಡುವಲ್ಲಿ ವಿಫಲವಾದ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ಈಗ ನಡೆದ ಚುನಾವಣೆಯಲ್ಲಿ ಪುದುಚೇರಿಯನ್ನ ಬಿಜೆಪಿ ತನ್ನ ತೆಕ್ಕಗೆ ತೆಗೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

    ವಿಶ್ವಾಸಮತ ಸಾಬೀತುಪಡಿಸುವಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಡಿಎಂಕೆ ಜೊತೆ ಎದುರಿಸಿತ್ತು. ಆದ್ರೆ ತಮಿಳುನಾಡಿನಲ್ಲಿ ವರ್ಕೌಟ್ ಆದ ತಂತ್ರ ಇಲ್ಲಿ ಯಶಸ್ಸು ಕಂಡಿಲ್ಲ. ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪ್ರಮುಖ ನಾಯಕರು ಕಮಲ ಹಿಡಿದಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ದೀದಿ ಅಧಿಕಾರಕ್ಕೆ

    ಯಾರಿಗೆ ಎಷ್ಟು ಕ್ಷೇತ್ರ: ಒಟ್ಟು ವಿಧಾನಸಭಾ ಕ್ಷೇತ್ರಗಳು-30

    ಇಂಡಿಯಾ ಟುಡೇ-ಆಕ್ಸಿನ್ ಮೈ ಇಂಡಿಯಾ
    ಕಾಂಗ್ರೆಸ್+: 6-10
    ಬಿಜೆಪಿ+: 20-24
    ಇತರೆ: 0-1

    ಟೈಮ್ಸ್ ನೌ-ಸಿ ವೋಟರ್
    ಕಾಂಗ್ರೆಸ್+: 6-10
    ಬಿಜೆಪಿ+: 19-23
    ಇತರೆ: 1-2

    ಸಿಎನ್‍ಎಕ್ಸ್
    ಕಾಂಗ್ರೆಸ್+: 11-13
    ಬಿಜೆಪಿ+: 16-20
    ಇತರೆ: 0

    ಜನ್ ಕಿ ಬಾತ್
    ಕಾಂಗ್ರೆಸ್+: 6-11
    ಬಿಜೆಪಿ+: 19-24
    ಇತರೆ: 0

    ಇದನ್ನೂ ಓದಿ: ಮಸ್ಕಿ, ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ – ಬೆಳಗಾವಿಯಲ್ಲಿ ಮತ್ತೆ ಬಿಜೆಪಿ

    2016ರ ಫಲಿತಾಂಶ: 2016ರಲ್ಲಿ 30 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15ರಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಅಣ್ಣಾಡಿಎಂಕೆ- 04, ಡಿಎಂಕೆ- 02 ಮತ್ತು ಇತರರು ಒಂದು ಕ್ಷೇತ್ರದಲ್ಲಿ ಗೆದ್ದಿದ್ದರು. 33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ.ಇದನ್ನೂ ಓದಿ: ಅಸ್ಸಾಂ ಚಹಾ ತೋಟದಲ್ಲಿ ಎರಡನೇ ಬಾರಿ ಅರಳಿದ ಕಮಲ

    ಇದನ್ನೂ ಓದಿ: ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ

    ಇದನ್ನೂ ಓದಿ: ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

  • ಇಂದು ಪುದುಚೇರಿ ಸೇರಿದಂತೆ 4 ರಾಜ್ಯಗಳಲ್ಲಿ ಚುನಾವಣೆ

    ಇಂದು ಪುದುಚೇರಿ ಸೇರಿದಂತೆ 4 ರಾಜ್ಯಗಳಲ್ಲಿ ಚುನಾವಣೆ

    ಬೆಂಗಳೂರು: ಒಂದು ಕೇಂದ್ರಾಡಳಿತ ಪ್ರದೇಶ, ನಾಲ್ಕು ರಾಜ್ಯಗಳಲ್ಲು ಚುನಾವಣೆ ಹಬ್ಬ ನಡೆಯಲಿದೆ. ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ಅಸ್ಸಾಂ ಮತ್ತು ಪುದುಚೇರಿಯಲ್ಲಿ ಮತದಾನ ನಡೆಯಲಿದೆ. ಕೇರಳ ಮತ್ತು ತಮಿಳುನಾಡು, ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ.

    ಕೇರಳದ 140 ಹಾಗೂ ತಮಿಳುನಾಡಿನ 234 ಪುದುಚೇರಿಯ 30 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಸೇರಲಿದೆ. ಕೇರಳದಲ್ಲಿ ಎಲ್‍ಡಿಎಫ್, ಯುಡಿಎಫ್ ಮತ್ತು ಎನ್‍ಡಿಎ ಒಕ್ಕೂಟದ ನಡುವೆ ತ್ರಿಕೋನ ಸ್ಪರ್ಧೆ ಇದೆ. ಇತ್ತ ತಮಿಳುನಾಡಿನಲ್ಲಿ ಡಿಎಂಕೆ ವರ್ಸಸ್ ಎಐಎಡಿಎಂ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಎರಡನೇ ಬಾರಿಗೆ ಸಿಎಂ ಆಗಲು ಪಿಣರಾಯಿ ವಿಜಯನ್ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಪ್ರಯತ್ನದಲ್ಲಿದ್ದಾರೆ.

    ಕೇರಳ:
    ಮಂಗಳವಾರ ಕೇರಳದ ಎಲ್ಲ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ವೋಟಿಂಗ್ ನಡೆಯಲಿದೆ. ಒಟ್ಟು 2,74,46,039 ಮತದಾರರಿದ್ದಾರೆ. ಸಿಪಿಐ(ಎಂ) ನೇತೃತ್ವದಲ್ಲಿ ಎಲ್‍ಡಿಎಫ್, ಕಾಂಗ್ರೆಸ್ ನೇತೃತ್ವದಲ್ಲಿ ಯುಡಿಎಫ್, ಮತ್ತು ಬಿಜೆಪಿ ನೇತೃತ್ವದಲ್ಲಿ ಎನ್‍ಡಿಎ ಮಿತ್ರ ಪಕ್ಷಗಳ ಸ್ಪರ್ಧೆ ಮಾಡಿವೆ. ಸಿಪಿಐ (ಎಂ) ಕಳೆದ ಬಾರಿ 91 ಸ್ಥಾನಗಳೊಂದಿಗೆ ಅಧಿಕಾರ ರಚಿಸಿತ್ತು. ಕಾಂಗ್ರೆಸ್ 46 ಸ್ಥಾನಗಳೊಂದಿಗೆ ವಿರೋಧ ಪಕ್ಷದಲ್ಲಿತ್ತು. ಹಾಗಾಗಿ ಸಿಪಿಐ (ಎಂ) ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆದಿದೆ.

    ಕಳೆದ ಬಾರಿ ಒಂದೇ ಸ್ಥಾನ ಗೆದ್ದಿದ್ದ ಬಿಜೆಪಿಯಿಂದ 10 ಸ್ಥಾನ ಗೆಲ್ಲುವ ಪ್ರಯತ್ನಕ್ಕೆ ಮುಂದಾಗಿದೆ. ಈಗಾಗಲೇ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ. ಲೋಕಸಭೆಯಲ್ಲಿ 20 ರ ಪೈಕಿ 18 ಸ್ಥಾನಗಳು ಗೆದ್ದಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಈ ಬಾರಿ ಅಧಿಕಾರ ರಚಿಸುವ ಪ್ರಯತ್ನದಲ್ಲಿದೆ. ಸಿ – ವೋಟರ್ ಸಮೀಕ್ಷೆ ಪ್ರಕಾರ 140 ಸದಸ್ಯರ ವಿಧಾನಸಭೆಯಲ್ಲಿ 82 ಸ್ಥಾನಗಳನ್ನು ಪಿಣರಾಯಿ ವಿಜಯನ್ ನೇತೃತ್ವದ ಎಲ್‍ಡಿಎಫ್, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮತ್ತೊಮ್ಮೆ 56 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

    ತಮಿಳುನಾಡು:
    ಒಟ್ಟು 234 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ತಮಿಳುನಾಡಿನ 88,937 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ. ಒಟ್ಟು 3,998 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದು, ಕರೂರು ಒಂದೇ ಕ್ಷೇತ್ರದಿಂದ 77 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 537 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು 10,813 ದುರ್ಬಲ ಎಂದು ಗುರುತಿಸಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 23,200 ಸಿಬ್ಬಂದಿ, 16,350 ಗೃಹರಕ್ಷಕರು ಮತ್ತು ಇತರ ರಾಜ್ಯಗಳ ಮಾಜಿ ಸೈನಿಕರು, ತಮಿಳುನಾಡಿನ 12,411 ಗೃಹರಕ್ಷಕರು ಮತ್ತು ರಾಜ್ಯ ಪೊಲೀಸರು 74,162 ಮಂದಿ ಸೇರಿ ಒಟ್ಟು 1,58,263 ಪೊಲೀಸ್ ಮತ್ತು ಪೊಲೀಸ್ ರಹಿತ ಪಡೆಗಳು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

    ಡಿಎಂಕೆ ಜೊತೆಗೆ ಕಾಂಗ್ರೆಸ್, ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ನಟ ಕಮಲ ಹಾಸನ್ ನೇತೃತ್ವದಲ್ಲಿ 154 ಸ್ಥಾನಗಳಲ್ಲಿ ಎಂಎನ್‍ಎಂ ಸ್ಪರ್ಧೆ ಮಾಡಿದೆ. 2016 ರಲ್ಲಿ 178 ರಲ್ಲಿ ಸ್ಪರ್ಧಿಸಿ 89, 41 ರಲ್ಲಿ ಸ್ಪರ್ಧಿಸಿ 8 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಎಐಎಡಿಎಂಕೆ 136 ಸ್ಥಾನಗಳು ಗೆಲ್ಲುವ ಮೂಲಕ 2016 ರಲ್ಲಿ ಅಧಿಕಾರ ರಚಿಸಿತ್ತು. ಮಾಜಿ ಸಿಎಂಗಳಾದ ಕರುಣಾನಿಧಿ ಮತ್ತು ಜಯಲಲಿತಾ ಇಲ್ಲದೇ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದ್ದು, ಬಿಜೆಪಿ ಈ ಬಾರಿ ಗರಿಷ್ಠ ಸೀಟುಗಳಿಗೆ ಪ್ರಯತ್ನ ಮಾಡಿದೆ.

    ಪುದುಚೇರಿ:
    30 ಸ್ಥಾನಗಳ ಪೈಕಿ ರಂಗಸಾಮಿಯ ಎಐಎನ್‍ಆರ್‍ಸಿ 16, 9 ಬಿಜೆಪಿ ಮತ್ತು ನಾಲ್ಕು ಕ್ಷೇತ್ರಗಳಿಂದ ಎಐಎಡಿಎಂಕೆ ಸ್ಪರ್ಧೆ ಮಾಡಿದೆ. ಕಾಂಗ್ರೆಸ್ 14 ಮತ್ತು ಡಿಎಂಕೆ 13 ಸ್ಪರ್ಧೆ, ಮೂವರು ಸ್ವತಂತ್ರ ಅಭ್ಯರ್ಥಿಗಳಿಗೆ ಬೆಂಬಲ ನೀಡಿದೆ. 10,04,197 ಮತದಾರರನ್ನು ಪುದುಚೇರಿ ಹೊಂದಿದೆ. ಎನ್‍ಡಿಎಗೆ ಸುಮಾರು 17-20 ಸ್ಥಾನಗಳು, ಕಾಂಗ್ರೆಸ್ ನೇತೃತ್ವದ ಎಸ್‍ಡಿಎ ಸುಮಾರು 9-11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆಗಳು ಹೇಳಿವೆ. ಆಡಳಿರೂಢ ಕಾಂಗ್ರೆಸ್ ಸೋಲಲಿದೆ ಎಂದು ಸಮೀಕ್ಷೆಗಳು ಹೇಳಿವೆ

    ಅಸ್ಸಾಂ
    ಮೂರನೇ ಹಂತದ 40 ಕ್ಷೇತ್ರಗಳಲ್ಲಿ 337 ಮಂದಿ ಕಣದಲ್ಲಿದ್ದಾರೆ. ಬಿಜೆಪಿ 20 ಸ್ಥಾನಗಳಲ್ಲಿ, ಅದರ ಮಿತ್ರರಾಷ್ಟ್ರಗಳಾದ ಅಸ್ಸಾಂ ಗಣ ಪರಿಷತ್ 9, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ 8 ಯುಪಿಪಿಎಲ್ 03 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. ಕಾಂಗ್ರೆಸ್ 24, ಮಿತ್ರ ಪಕ್ಷಗಳಾದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಎಂಟು, ಸಿಪಿಐ (ಎಂ) ಒಂದು ಸೇರಿದ ಉಳಿದ ಮಿತ್ರ ಪಕ್ಷಗಳಿಗೆ ಸ್ಥಾನ ಹಂಚಿಕೆ ಮಾಡಿಕೊಂಡಿವೆ.

    11,401 ಬೂತ್ ಗಳ ನಿರ್ಮಾಣ ಮಾಡಿದ್ದು, 79,19,641 ಮತದಾರರಿದ್ದಾರೆ. ಭದ್ರತೆಗೆ 320 ಸಶಸ್ತ್ರ ಪಡೆಗಳ ನೇಮಕ ಮಾಡಲಾಗಿದೆ. ಹಿರಿಯ ಸಚಿವ ಹಿಮಂತ ಬಿಸ್ವಾ ಶರ್ಮಾ ಸೇರಿ ಐವರು ಸಚಿವರು ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಭವಿಷ್ಯವನ್ನು ನಿರ್ಧಾರವಾಗಲಿದೆ. ಸಿಎಂ ರೇಸ್ ನಲ್ಲಿರುವ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ, ಕಾಂಗ್ರೆಸ್, ಬಿಜೆಪಿ ಮತ್ತು ಎಐಯುಡಿಎಫ್ ಸೇರಿ ಒಟ್ಟು 20 ಮಂದಿ ಹಾಲಿ ಶಾಸಕರ ಸ್ಪರ್ಧೆಯಲ್ಲಿದ್ದಾರೆ.

    ಪಶ್ಚಿಮ ಬಂಗಾಳ
    ಮೂರು ಜಿಲ್ಲೆಯ 31 ಕ್ಷೇತ್ರಗಳಿಗೆ ಮತದಾನ ಇಂದು ನಡೆಯಲಿದೆ. 78,52,425 ಮಂದಿ ಮತದಾರರಿಂದ 205 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಹಿಂದುತ್ವದ ಅಲೆ ಇರುವ ಮೂರು ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ ಭರ್ಜರಿ ಪ್ರಚಾರ ನಡೆಸಿದ್ದರು. ಖುದ್ದು ಪ್ರಚಾರಕ್ಕೆ ಇಳಿದಿದ್ದ ದೀದಿ, ಎಡ ಪಕ್ಷಗಳಿಂದ ಮನೆ ಮನೆ ಪ್ರಚಾರ ನಡೆಸಿದ್ದರು. ಮೋದಿ ಮತ್ತು ದೀದಿ ನಡುವೆ ನೇರ ಸಂಘರ್ಷಕ್ಕೆ ಮೂರು ಜಿಲ್ಲೆಗಳಲ್ಲಿ ನಡೆಯುವ ಸಾಧ್ಯತೆಯಿದೆ.

  • ಚುನಾವಣಾ ಪೂರ್ವ ಸಮೀಕ್ಷೆ- ಬಂಗಾಳದಲ್ಲಿ ದೀದಿ ಹ್ಯಾಟ್ರಿಕ್, ಕೇರಳದಲ್ಲಿ ಎಲ್‍ಡಿಎಫ್ ಸೇಫ್

    ಚುನಾವಣಾ ಪೂರ್ವ ಸಮೀಕ್ಷೆ- ಬಂಗಾಳದಲ್ಲಿ ದೀದಿ ಹ್ಯಾಟ್ರಿಕ್, ಕೇರಳದಲ್ಲಿ ಎಲ್‍ಡಿಎಫ್ ಸೇಫ್

    – ತಮಿಳುನಾಡು ಡಿಎಂಕೆ, ಅಸ್ಸಾಂನಲ್ಲಿ ಬಿಜೆಪಿಗೆ ಬಿಗ್ ಫೈಟ್
    – ಪುದುಚೇರಿಯಲ್ಲಿ ಎನ್‍ಡಿಎಗೆ ಗೆಲುವಿನ ಸಿಹಿ

    ನವದೆಹಲಿ: ಒಂದು ಕೇಂದ್ರಾಡಳಿಯ ಪ್ರದೇಶ ಪುದುಚೇರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಖಾಸಗಿ ವಾಹಿನಿ ಟೈಮ್ಸ್ ನೌ- ಸಿ ವೋಟರ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಗೊಂಡಿದೆ.

    ಬಿಜೆಪಿಯ ತೀವ್ರ ಸ್ಪರ್ಧೆಯ ನಡುವೆಯೂ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕೇರಳದಲ್ಲಿ ಎಲ್‍ಡಿಎಫ್ ಬಳಿಯಲ್ಲಿಯೇ ಉಳಿಯಲಿದೆ. ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ವಾಪಸ್ ಬರಲಿದೆ. ಸದ್ಯ ಬಿಜೆಪಿ ಸರ್ಕಾರ ಇರೋ ಅಸ್ಸಾಂನಲ್ಲಿ ನೇರ ಹಣಾಹಣಿ ನಡೆಯಲಿದ್ದು, ಪುದುಚೇರಿಯಲ್ಲಿ ಎನ್‍ಡಿಎಗೆ ಗೆಲುವು ಸಿಗಲಿದೆ ಎಂದು ಹೇಳಿದೆ.

    ಬಂಗಾಳದಲ್ಲಿ ಬಿಜೆಪಿಗೆ ಲಾಭ, ಅಧಿಕಾರದಿಂದ ದೂರ:
    ಅಭಿಪ್ರಾಯ ಸಮೀಕ್ಷೆ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ದೀದಿ ಮೂರನೇ ಬಾರಿ ಸರ್ಕಾರ ರಚನೆ ಮಾಡಲಿದ್ದಾರೆ. ಟಿಎಂಸಿ 160 ಕ್ಷೇತ್ರಗಳಲ್ಲಿ ಗೆಲುವು ಕಾಣಬಹುದು. 2016ರಲ್ಲಿ ಟಿಎಂಸಿ 211 ಕ್ಷೇತ್ರಗಳಲ್ಲಿ ಜಯ ದಾಖಲಿಸಿತ್ತು. ಈ ಬಾರಿ 200 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ ಅಂತ ಕಮಲ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2016ರಲ್ಲಿ ಮೂರು ಕ್ಷೇತ್ರಗಳಲ್ಲಿದ್ದ ಬಿಜೆಪಿ ಈ ಬಾರಿ 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಮಲ ಧ್ವಜ ಹಾರಿಸಲಿದೆ ಎಂದು ಪೋಲ್ ನಲ್ಲಿ ಹೇಳಲಾಗಿದೆ. ಟಿಎಂಸಿ ಗಿಂತ ಬಿಜೆಪಿ ಶೇಕಡಾವಾರು ಮತಗಳಿಕೆ ಹೆಚ್ಚಿರಲಿದೆ.

    ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ದೊಡ್ಡ ಸೋಲು ಕಾಣುವ ಸಾಧ್ಯತೆ ಇದೆ ಅನ್ನೋದು ಬಂಗಾಳ ಜನತೆಯ ಅಭಿಪ್ರಾಯ. ಕಾಂಗ್ರೆಸ್ ಮೈತ್ರಿ ಸುಮಾರು 26 ಕ್ಷೇತ್ರಗಳಲ್ಲಿ ಮಾತ್ರ ವಿಜಯದ ನಗೆ ಬೀರುವ ಸಾಧ್ಯತೆಗಳಿವೆ. ಶೇ.5ರಷ್ಟು ಜನರು ಮಮತಾ ಬ್ಯಾನರ್ಜಿ ನೆಚ್ಚಿನ ನಾಯಕಿ ಎಂದು ಒಪ್ಪಿಕೊಂಡಿದ್ದು, ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಎರಡನೇ ಸ್ಥಾನದಲ್ಲಿದ್ದಾರೆ.

    ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ:
    ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಜೊತೆಯಾಗಿ ಚುನಾವಣೆ ಎದುರಿಸುತ್ತಿದ್ದು, ಸರ್ಕಾರ ರಚಿಸಲಿದೆ ಎಂದು ಅಭಿಪ್ರಾಯ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. 234 ವಿಧಾನಸಭಾ ಕ್ಷೇತ್ರಗಳಲ್ಲಿ 177ರಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟ ಗೆಲ್ಲಲಿದೆ. ಸದ್ಯ ಅಧಿಕಾರದಲ್ಲಿರುವ ಎಐಎಎಂಡಿಕೆ ಬಿಜೆಪಿ ಜೊತೆಯಲ್ಲಿ ಚುನಾವಣೆ ಎದುರಿಸಿದ್ದು, ಮತಗಳಿಕೆಯಲ್ಲಿ ದೊಡ್ಡ ಪೆಟ್ಟು ಬೀಳಲಿದೆ.

    ಕಮಲ್ ಹಾಸನ್ ನೇತೃತ್ವದ ಎಂಎನ್‍ಎಂ ಮತ್ತು ಟಿಟಿವಿ ದಿನಕರನ್ ಅವರ ಎಎಂಎಂಕೆ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಕಾಣೋದು ಕಷ್ಟವಾಗಲಿದೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ತಮಿಳುನಾಡು ಜನರ ಮೊದಲ ಆಯ್ಕೆ. ಶೇ.43.1ರಷ್ಟು ಜನ ಸ್ಟಾಲಿನ್ ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ರೆ, ಶೇ.29.7 ಜನರ ಆಯ್ಕೆ ಸಿಎಂ ಪಳನಿಸ್ವಾಮಿ ಆಗಿದ್ದಾರೆ.

    ಅಸ್ಸಾಂನಲ್ಲಿ ಎನ್‍ಡಿಎ-ಯುಪಿಎ ನಡುವೆ ಸಮಬಲದ ಹೋರಾಟ:
    ಸಮೀಕ್ಷೆ ಪ್ರಕಾರ ಬಿಜೆಪಿ ಸರ್ಕಾರ ಇರೋ ಅಸ್ಸಾಂನಲ್ಲಿ ಎನ್‍ಡಿಎ ಮತ್ತು ಯುಪಿಎ ನಡುವೆ ಸಮಬಲದ ಹೋರಾಟ ನಡೆಯಲಿದೆ. ಸಮೀಕ್ಷೆಯ ಪ್ರಕಾರ 126 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‍ಡಿಎ 69 ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ 56ರಲ್ಲಿ ಗೆಲುವು ಕಾಣಲಿದೆ. ಈ ಬಾರಿ ಬದ್ರುದ್ದೀನ್ ಅಜ್ಮಲ್ ಅವರ ಎಐಯುಡಿಎಫ್ ಮತ್ತು ಬೋಡೋ ಪೀಪಲ್ಸ್ ಫ್ರಂಟ್ ಸೇರಿದಂತೆ ಮೂರು ಎಡಪಕ್ಷಗಳೊಂದಿಗೆ ಮೈತ್ರಿ ರಚಿಸಿಕೊಂಡು ಚುನಾವಣಾ ಅಖಾಡಕ್ಕೆ ಧುಮುಕಿದೆ.

    ಇತ್ತ ಎನ್‍ಡಿಎ ಕೂಟದ ಬಿಜೆಪಿ ಜೊತೆ ಅಸ್ಸಾಂ ಗಣ್ ಪರಿಷದ್ ಕೈ ಜೋಡಿಸಿದೆ. 2016ರಲ್ಲಿ ಎನ್‍ಡಿಎ 86 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚನೆ ಮಾಡಿತ್ತು. ಇತ್ತ ಯುಪಿಎ 26ರಲ್ಲಿ ಜಯ ತನ್ನದಾಗಿಸಿಕೊಂಡಿತ್ತು. ಸಿಎಂ ಸರ್ಬಾನಂದ್ ಸೋನಾವಾಲಾ ಬಿಜೆಪಿ ಸಿಎಂ ಅಭ್ಯರ್ಥಿಯಾಗಿದ್ದು, ಅಸ್ಸಾಂನ ಶೇ.46ರಷ್ಟು ಜನ ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್‍ನ ಗೌರವ್ ಗೋಗೊಯಿ ಅವರನ್ನ ಶೇ.25ರಷ್ಟು ಜನರ ಮೆಚ್ಚುಗೆ ಪಡೆದಿದ್ದಾರೆ.

    ಕೇರಳದಲ್ಲಿ ಬಹುಮತದೊಂದಿಗೆ ವಿಜಯನ್ ಸರ್ಕಾರ:
    ಆಡಳಿತದಲ್ಲಿರುವ ಪಿಣರಾಯಿ ವಿಜಯನ್ ನೇತೃತ್ವದ ಎಲ್‍ಡಿಎಫ್ ಸರ್ಕಾರ ಮತ್ತೊಮ್ಮೆ ಅಧಿಕಾರ ಬರುವ ಸಾಧ್ಯತೆಗಳಿವೆ ಅನ್ನೋದು ಸಮೀಕ್ಷೆ ಹೇಳಿದೆ. ಪಿಣರಾಯಿ ವಿಜಯನ್ ನೇತೃತ್ವದ ಘಟಬಂಧನ 140ರಲ್ಲಿ 77 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಲಿದೆ. 2016ರಲ್ಲಿ ಪಿಣರಾಯಿ ಸರ್ಕಾರ 91ರ ಶಾಸಕರೊಂದಿಗೆ ಸರ್ಕಾರ ರಚನೆ ಮಾಡಿತ್ತು. ಆಡಳಿತ ವಿರೋಧ ಅಲೆಯ ನಡುವೆಯೂ ಎಲ್‍ಡಿಎಫ್ ಮತ್ತಷ್ಟು ಕ್ಷೇತ್ರ ಗೆದ್ದು ಸರ್ಕಾರ ರಚನೆ ಮಾಡಲಿದೆ ಸಮೀಕ್ಷೆ ಹೇಳಿದೆ.

    2016ರಲ್ಲಿ 47 ಸೀಟ್ ಗೆದ್ದಿದ್ದ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಈ ಬಾರಿ 62 ಕ್ಷೇತ್ರಗಳನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಲಿದೆ. 2016ರಂತೆ ಈ ಬಾರಿಯೂ ಬಿಜೆಪಿ ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಬಹುದು. ಶೇ.39.3ರಷ್ಟು ಜನ ಸಿಎಂ ವಿಜಯನ್ ಅವರನ್ನ ಮತ್ತೊಮ್ಮೆ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಇಷ್ಟಪಡುತ್ತಾರೆ. ಮಾಜಿ ಸಿಎಂ ಉಮ್ಮನ್ ಚಾಂಡಿ ಎರಡನೇ ಸ್ಥಾನದಲ್ಲಿದ್ದಾರೆ. ಚಾಂಡಿ ಅವರಿಗೆ ಶೇ.26.5 ಜನರು ಸಮೀಕ್ಷೆಯಲ್ಲಿ ಮತ ಹಾಕಿದ್ದಾರೆ.

    ಪುದುಚೇರಿಯಲ್ಲಿ ಮಾತ್ರ ಎನ್‍ಡಿಎಗೆ ಗುಡ್ ನ್ಯೂಸ್:
    ಪುದುಚೇರಿಯ 30 ಸದಸ್ಯರ ಪೈಕಿ 21 ಎನ್‍ಡಿಎ ಕೂಟದ ಅಭ್ಯರ್ಥಿಗಳು ಗೆಲ್ಲುತ್ತಾರೆ. ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್ ಮತ್ತು ಡಿಎಂಕೆ ಜೊತೆಯಾಗಿ ಸ್ಪರ್ಧೆ ಮಾಡಿದ್ದು, 9 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಎಐಎನ್‍ಆರ್‍ಸಿಯ ಎನ್.ರಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳನ್ನಾಗಿ ನೋಡಲು ಶೇ.50ರಷ್ಟು ಜನ ಇಷ್ಟಪಡುತ್ತಾರೆ. ಸದ್ಯ ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ.

    ಮಾರ್ಚ್ 27ರಿಂದ ಮತದಾನ ಆರಂಭ:
    ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಮಾರ್ಚ್ 27ರಿಂದ ಏಪ್ರಿಲ್ 6ರವರಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27 ಮೊದಲ ಹಂತದ ಮತದಾನ ನಡೆಯಲಿದೆ. ತದನಂತರ ಏಪ್ರಿಲ್ 1, 6, 10, 17, 22, 26, 29 ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.