Tag: puneeth parva

  • ‘ಪುನೀತ ಪರ್ವ’ ನೋಡಿ ನೊಂದುಕೊಂಡಿದ್ದ ಅಪ್ಪು ಅಭಿಮಾನಿ ಹೃದಯಾಘಾತದಿಂದ ಸಾವು

    ‘ಪುನೀತ ಪರ್ವ’ ನೋಡಿ ನೊಂದುಕೊಂಡಿದ್ದ ಅಪ್ಪು ಅಭಿಮಾನಿ ಹೃದಯಾಘಾತದಿಂದ ಸಾವು

    ಪುನೀತ್ ರಾಜ್ ಕುಮಾರ್ (Puneeth Rajkumar) ನಟನೆಯ ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್ ‘ಪುನೀತ ಪರ್ವ’ (Puneeth Parva) ಕಾರ್ಯಕ್ರಮವನ್ನು ವೀಕ್ಷಿಸುತ್ತಾ ಕಣ್ಣೀರಿಟ್ಟಿದ್ದ ಬೆಂಗಳೂರಿನ ಅಪ್ಪು ಅಭಿಮಾನಿ (Fan) ಗಿರಿರಾಜ್ (Giriraj) ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ೨೯ ವರ್ಷದ ಗಿರಿರಾಜ್ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ನೆನ್ನೆ ಪುನೀತ ಪರ್ವ ಕಾರ್ಯಕ್ರಮಕ್ಕೆ ಹೋಗಲು ಆಗದೇ ಮನೆಯಲ್ಲೆ ಕುಟುಂಬದ ಜೊತೆ ಟಿವಿಯಲ್ಲಿ ವೀಕ್ಷಣೆ ಮಾಡಿದ್ದ ಗಿರಿರಾಜ್, ಎರಡ್ಮೂರು ಬಾರಿ ಪುನೀತ್ ರಾಜಕುಮಾರ್ ಭೇಟಿ ಕೂಡ ಮಾಡಿದ್ದರು.

    ಈ ಕುರಿತು ಮಾತನಾಡಿರುವ ಗಿರಿರಾಜ್ ತಂದೆ, ‘ನನ್ನ ಮಗನಿಗೆ ಅಪ್ಪು ಅಂದರೆ ಪಂಚಪ್ರಾಣ. ಅಪ್ಪು ಜೀವಂತವಾಗಿದ್ದಾಗ ಭೇಟಿ ಮಾಡಿ ಕಾಫಿ ಕುಡಿದು ಬಂದಿದ್ದ. ನಿನ್ನೆ ಕಾರ್ಯಕ್ರಮ ನೋಡ್ತಾ ನೋಡ್ತಾ ಬಿಕ್ಕಿಬಿಕ್ಕಿ ಅಳೋಕೆ ಶುರು ಮಾಡಿದ. ರಾತ್ರಿ ಕಾರ್ಯಕ್ರಮ ನೋಡುತ್ತ ತುಂಬಾ ಕಣ್ಣಿರುಹಾಕಿದ್ದ. ಹುಟ್ಟಿದರೆ ಅಪ್ಪು ತರ ಇರಬೇಕು. ಬದುಕಿದರೆ ಅಪ್ಪು ತರಹ ಬದುಕಬೇಕು ಅಂತ ಸಾಕಷ್ಟು ಕಣ್ಣಿರು ಹಾಕಿದ್ದ. ಸಮಾಧಾನ ಮಾಡ್ಕೊ ಅಂತ ತುಂಬಾ ಹೇಳಿದ್ವಿ. ರಾತ್ರಿ ಶೌಚಾಲಯಕ್ಕೆ ಹೋಗಿದ್ದಾಗ ಕುಸಿದ ಬಿದ್ದ. ಸಮೀಪದ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಜೀವ ಹೋಗಿತ್ತು ( Death) ಇಬ್ಬರು ಹೆಣ್ಣು ಮಕ್ಕಳು, ಮಗನೊಬ್ಬನೇ ಇದ್ದ ಅವನನ್ನು ಕಳ್ಕೊಂಡಿದ್ದೇವೆ’ ಎಂದಿದ್ದಾರೆ. ಇದನ್ನೂ ಓದಿ:ಪುನೀತ ಪರ್ವ ಕಾರ್ಯಕ್ರಮಕ್ಕೆ ರಿಷಬ್ ಶೆಟ್ಟಿ ಗೈರು ಹಾಜರಿ : ಕ್ಷಮಿಸಿ ಅಪ್ಪು ಸರ್

    ಪುನೀತ್ ನಿಧರಾದಾಗಲೂ ಅನೇಕ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡರು, ಹೃದಯಾಘಾತದಿಂದಲೂ ನಿಧನರಾಗಿದ್ದರು. ಈ ಸಮಯದಲ್ಲಿ ಡಾ.ರಾಜ್ ಕುಟುಂಬ ಅಭಿಮಾನಿಗಳಿಗೆ ಮನವಿ ಮಾಡಿ, ‘ದಯವಿಟ್ಟು ಯಾರೂ ದುಡುಕಿನ ನಿರ್ಧಾರ ತಗೆದುಕೊಳ್ಳಬೇಡಿ. ಅಪ್ಪುಗೆ ಇದು ಇಷ್ಟವಾಗಲ್ಲ. ನಿಮ್ಮ ಕುಟುಂಬವನ್ನು ನೀವು ಚೆನ್ನಾಗಿ ನೋಡಿಕೊಳ್ಳಿ. ಅದು ಅಪ್ಪುಗೆ ಇಷ್ಟವಾಗುತ್ತದೆ. ದಯವಿಟ್ಟು ಯಾರೂ ಸಾಯಬೇಡಿ’ ಎಂದೂ ಮನವಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ನೆನೆದು ಗಳಗಳನೇ ಅಳುತ್ತಲೇ ವೇದಿಕೆಯಿಂದ ಹೊರ ನಡೆದ ಅಶ್ವಿನಿ

    ಅಪ್ಪು ನೆನೆದು ಗಳಗಳನೇ ಅಳುತ್ತಲೇ ವೇದಿಕೆಯಿಂದ ಹೊರ ನಡೆದ ಅಶ್ವಿನಿ

    ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ (Palace Ground) ನಡೆಯುತ್ತಿರುವ ಪುನೀತ ಪರ್ವ(Puneeth Parva) ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ (Ashwini Puneeth Rajkumar) ಅವರು ಗಳಗಳನೇ ಅಳುತ್ತಾ ವೇದಿಕೆ ಮೇಲಿಂದ ಹೊರನಡೆದಿದ್ದಾರೆ.

    ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯಿಸಿರುವ ಡಾಕ್ಯೂಮೆಂಟರಿ ಫಿಲ್ಮ್ ಗಂಧದ ಗುಡಿ ( Gandhada Gudi) ಪ್ರೀ ರಿಲೀಸ್ ಇವೆಂಟ್ ಇಂದು ಅದ್ದೂರಿಯಾಗಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಸ್ಯಾಂಡಲ್‍ವುಡ್ ಸೇರಿದಂತೆ ಬಹುಭಾಷಾ ತಾರೆಯರು ಆಗಮಿಸಿದ್ದು, ಪುನೀತ್ ಜೊತೆಗೆ ಕಳೆದ ಸವಿನೆನಪುಗಳನ್ನು ವೇದಿಕೆ ಮೇಲೆ ಮೆಲುಕು ಹಾಕಿದ್ದಾರೆ.

    ಇದೇ ವೇಳೆ ಅಪ್ಪು ಅಭಿನಯಿಸಿದ್ದ ಬ್ಲಾಕ್ ಬಾಸ್ಟರ್ ಹಿಟ್ ರಾಜಕುಮಾರ ಸಿನಿಮಾದ ನೀನೇ ರಾಜಕುಮಾರ ಹಾಡನ್ನು, ಅಶ್ವಿನಿ ಪುನೀತ್ ರಾಜ್‌ ಕುಮಾರ್, ಅವರ ಪುತ್ರಿ ದ್ವಿತೀಯ ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್ (Shiva RajKumar), ರಾಘವೇಂದ್ರ ರಾಜ್‍ಕುಮಾರ್ (Raghavendra Rajkumar), ವಿನಯ್ ರಾಜ್ ಕುಮಾರ್, ಯುವ ರಾಜ್‍ಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬಸ್ಥರು ವೇದಿಕೆ ಮೇಲೆ ಕಣ್ಣೀರಿಡುತ್ತಲೇ ಹಾಡಿದರು.

    ಈ ವೇಳೆ ಅಪ್ಪು ನೆನೆದು ಭಾವುಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಣ್ಣೀರು ಹಾಕುತ್ತಾ, ಅಭಿಮಾನಿಗಳಿಗೆ ನಮಸ್ಕರಿಸಿ ವೇದಿಕೆ ಮೇಲಿಂದ ಹೊರ ನಡೆದಿದ್ದಾರೆ. ಇನ್ನೂ ಹಾಡು ಮುಕ್ತಾಯವಾಗುತ್ತಿದ್ದಂತೆ ಅಭಿಮಾನಿಗಳು ಅಪ್ಪು, ಅಪ್ಪು ಎಂದು ಜೈಕಾರ ಕೂಗಿದರು. ಒಟ್ಟಾರೆ ಒಂದು ನಿಮಿಷ ನೀರವ ಮೌನ ಆವರಿಸಿದ್ದ ಅರಮನೆ ಮೈದಾನ ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದೆ ಎಂದೇ ಹೇಳಬಹುದು.

    Live Tv
    [brid partner=56869869 player=32851 video=960834 autoplay=true]

  • ಅಭಿಮಾನಿಗಳ ಮೂಲಕ ಅಪ್ಪು ಇನ್ನೂ ಜೀವಂತವಾಗಿದ್ದಾರೆ: ನಟಿ ರಮ್ಯಾ

    ಅಭಿಮಾನಿಗಳ ಮೂಲಕ ಅಪ್ಪು ಇನ್ನೂ ಜೀವಂತವಾಗಿದ್ದಾರೆ: ನಟಿ ರಮ್ಯಾ

    `ಗಂಧದಗುಡಿ’ (Gandadagudi) ಸಿನಿಮಾ ಇದೇ ಅ.28ಕ್ಕೆ ತೆರೆಗೆ ಬರುತ್ತಿದೆ. ಈ ಪ್ರಯುಕ್ತ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರವನ್ನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ. `ಪುನೀತ ಪರ್ವ’ ಕಾರ್ಯಕ್ರಮಕ್ಕೆ ಅಪ್ಪು ಸಹನಟಿ ಮೋಹಕತಾರೆ ರಮ್ಯಾ(Sandalwood Queen Ramya) ಸಾಥ್ ನೀಡಿದ್ದಾರೆ. ಅಪ್ಪು ಜೊತೆಗಿನ ನೆನಪನ್ನ ಬಿಚ್ಚಿಟ್ಟಿದ್ದಾರೆ.

    ಪುನೀತ ಪರ್ವ(Puneetha Parva) ಕಾರ್ಯಕ್ರಮದಲ್ಲಿ ನಟಿ ರಮ್ಯಾ ಕೂಡ ಭಾಗವಹಿಸಿದ್ದಾರೆ. ಅಭಿಮಾನಿಗಳ ಮುಂದೆ ಲೈವ್ ಡ್ಯಾನ್ಸ್ ಅರಸು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇನ್ನೂ ನನಗೆ ಅಷ್ಟಾಗಿ ಡ್ಯಾನ್ಸ್ ಬರುತ್ತಿರಲಿಲ್ಲ. ಅಪ್ಪು ನನಗೆ ಸಲಹೆ ನೀಡುತ್ತಿದ್ದರು. ನನ್ನ ಕೋ ಸ್ಟಾರ್ ನನಗೆ ತುಂಬಾ ಬೆಂಬಲ ನೀಡಿದ್ದಾರೆ. ನಾನು ಇಂದು ಈ ವೇದಿಕೆಯಲ್ಲಿ ನಿಂತಿದ್ದೇನೆ ಅಂದ್ರೆ ಅದಕ್ಕೆ ಡಾ.ರಾಜ್‌ಕುಮಾರ್ ಕುಟುಂಬವೇ ಕಾರಣ ಎಂದು ರಮ್ಯಾ ಮಾತನಾಡಿದ್ದಾರೆ. ಇದನ್ನೂ ಓದಿ:ಅಪ್ಪು ದೇವರಾಗಿದ್ದಾರೆ ಎಂದು ಭಾವುಕರಾದ ಶರತ್ ಕುಮಾರ್

    ಅಪ್ಪು ಕುಟುಂಬದ ಧೀರೇನ್, ಯುವ, ಡಿಂಪಿ, ಅಮ್ಮುನ ನೋಡಿದಾಗ ಖುಷಿಯಾಗುತ್ತದೆ. ಏಲ್ಲೋ ಒಂದು ಕಡೆ ಅಪ್ಪುನ ಮಿಸ್ ಮಾಡಿಕೊಂಡರೂ ಕೂಡ ಅವರ ಫ್ಯಾಮಿಲಿ ಮತ್ತು ಅಭಿಮಾನಿಗಳ ಮೂಲಕ ಅಪ್ಪು ಬದುಕಿದ್ದಾರೆ ಎಂದು ಅನಿಸುತ್ತದೆ ಎಂದು ರಮ್ಯಾ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಬುರಾಯನ ಕೊಪ್ಪಲಿನ ಜೈ ಭುವನೇಶ್ವರಿ ಹೊಟೇಲ್ ಅಪ್ಪು ಫೇವರೆಟ್

    ಬಾಬುರಾಯನ ಕೊಪ್ಪಲಿನ ಜೈ ಭುವನೇಶ್ವರಿ ಹೊಟೇಲ್ ಅಪ್ಪು ಫೇವರೆಟ್

    ವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ಅವರು ನಮ್ಮನ್ನ ಅಗಲಿ ಒಂದು ವರ್ಷ ಕಳೆದಿದೆ. ಹೀಗಿದ್ರು ಸಹ ಪುನೀತ್ ಅವರು ಓಡಾಡಿದ ಜಾಗಗಳು ಅವರು ಊಟ ಮಾಡಲು ಹೋಗುತ್ತಿದ್ದ ಹೊಟೇಲ್‌ಗಳು ಇಂದಿಗೂ ಸಹ ನಮ್ಮನ್ನ ಕಾಡುತ್ತಿವೆ. ಅಪ್ಪುಗೆ ಮಂಡ್ಯ ಬಾಡೂಟ ಎಂದ್ರೆ ಪಂಚಪ್ರಾಣ. ಅದ್ರಲ್ಲೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಾಬುರಾಯನಕೊಪ್ಪಲಿನಲ್ಲಿ (Baburayan Koppalu) ಇರುವ ಜೈ ಭುವನೇಶ್ವರಿ ಹೊಟೇಲ್‌ನ (Jai Bhubaneswari Hotel) ಮಂಸಹಾರ ಎಂದರೆ ಪುನೀತ್ ಅವರಿಗೆ ಅಚ್ಚುಮೆಚ್ಚಿನ ಊಟ.

    ಈ ಹೊಟೇಲ್‌ನ ಕಾಲ್ ಸೂಫ್, ಬೋಟಿಗೊಜ್ಜು, ಮಟನ್ ಕುರ್ಮ, ಮುದ್ದೆ ಎಂದ್ರೆ ಪಂಚಪ್ರಾಣ. ಮೈಸೂರಿಗೆ ತೆರಳುವ ಮುನ್ನ ಹಾಗೂ ಈ ಭಾಗದಲ್ಲಿ ಶೂಟಿಂಗ್ ಮಾಡುವಾಗ ಈ ಹೊಟೇಲ್‌ನಲ್ಲಿ ಅವರು ಊಟ ಮಾಡಿ ಮುಂದಿನ ಕೆಲಸ ಮಾಡುತ್ತಿದ್ರು. ಜನ ಜಾಸ್ತಿ ಇದ್ದ ವೇಳೆಯಲ್ಲಿ ಕಾರಿಗೆ ತರಿಸಿಕೊಂಡು ತಿಂದು ಹೋದ ಎಷ್ಟೋ ಉದಾಹರಣೆಗಳು ಸಹ ಇವೆ. ಪುನೀತ್ ರಾಜ್‍ಕುಮಾರ್ ಅವರಿಗೆ ಈ ಹೊಟೇಲ್ ಪರಿಚಯ ಮಾಡಿಸಿದ್ದು, ಅವರ ತಂದೆಯಾದ ರಾಜ್‌ಕುಮಾರ್ ಅವರು ಎನ್ನುವುದು ವಿಶೇಷವಾಗಿದೆ. ಇದನ್ನೂ ಓದಿ:ವಿಯೆಟ್ನಾಂನಲ್ಲೂ ಕಾಂತಾರ ಕಂಪು – ಮೊದಲ ಬಾರಿಗೆ ಕನ್ನಡ ಚಿತ್ರ ಬಿಡುಗಡೆ 

    ರಾಜ್‌ಕುಮಾರ್ ಅವರಿಗೂ ಸಹ ಜೈ ಭುವನೇಶ್ವರಿ ಹೊಟೇಲ್ ಊಟ ಎಂದ್ರೆ ಪಂಚಪ್ರಾಣವಾಗಿತ್ತು. ಹೀಗಾಗಿ ತಮ್ಮ ಕುಟುಂಬ ಸಮೇತರಾಗಿ ಸಾಕಷ್ಟು ಬಾರಿ ಈ ಹೊಟೇಲ್‌ಗೆ ಬಂದಿದ್ದಾರೆ. 1970 ರಲ್ಲಿ ಆರಂಭವಾಗಿರುವ ಈ ಹೊಟೇಲ್ ಆರಂಭದಲ್ಲಿ ಶೆಡ್ ಹೊಟೇಲ್ ಆಗಿತ್ತು. ಇದೀಗ ಮಾರ್ಪಾಡಾಗಿದೆ. ಈ ಹೊಟೇಲ್‌ಗೆ ರಾಜ್‌ಕುಮಾರ್ ಅವರು ಹೆಚ್ಚಾಗಿ ಬರುತ್ತಿದ್ದ ಕಾರಣ ಈ ಭಾಗದ ಜನರು ಇಂದಿಗೂ ಈ ಹೊಟೇಲ್‌ನ್ನು ರಾಜ್‌ಕುಮಾರ್ ಹೊಟೇಲ್ ಎಂದೆ ಕರೆಯುತ್ತಾರೆ.

    ಇಲ್ಲಿನ‌ ಮಾಲೀಕರು ಹಾಗೂ ಸಿಬ್ಬಂದಿಗಳು ಅಪ್ಪು ಈ ಹೊಟೇಲ್‌ಗೆ ಬರುತ್ತಿದ್ದದ್ದು, ಇವರೊಂದಿಗೆ ಬೆರೆತು ಮಾತನಾಡುತ್ತಿದ್ದದು ಯಾವುದನ್ನು ಮರೆತಿಲ್ಲ. ಅದ್ರಲ್ಲೂ ಪುನೀತ್ ರಾಜ್‍ಕುಮಾರ್ ಅವರು ಸಿಬ್ಬಂದಿಗಳಿಗೆ ಯಾರಿಗೂ ಕಾಣದ ಹಾಗೆ ಟಿಪ್ಸ್ ಕೊಟ್ಟು ಬೆನ್ನು ತಟ್ಟಿ ಹೀಗೆ ಕೆಲಸ ಮಾಡಿಕೊಂಡು ಹೋಗಿ ಎಂದು ಹೇಳುತ್ತಿದ್ದ ಮಾತನ್ನಿ ಇಲ್ಲಿನ ಮಾಲೀಕರು ಇಂದು ಮರೆತಿಲ್ಲ. ಅಪ್ಪು ಅವರನ್ನು ಇಂದು ಎಂದೂ ಮರೆಯಲು ಸಾಧ್ಯವಿಲ್ಲ. ನಮ್ಮೊಂದಿಗೆ ಅವರು ಯಾವಾಗಲೂ ಇರುತ್ತಾರೆ ಎಂದು ಈ ಹೊಟೇಲ್ ಮಾಲೀಕರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ ಪರ್ವ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ಕೇಸರಿ ಬಾತ್, ಉಪ್ಪಿಟ್ಟು

    ಪುನೀತ ಪರ್ವ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ಕೇಸರಿ ಬಾತ್, ಉಪ್ಪಿಟ್ಟು

    ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ ಪರ್ವ (Puneeth Parva) ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗಾಗಿ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, ದೂರದ ಊರಿನಿಂದ ಅಭಿಮಾನಿಗಳು ಬೆಳಗ್ಗೆಯೇ ಬಂದಿರುವುದರಿಂದ ಅವರಿಗಾಗಿ ಕೇಸರಿ ಬಾತ್ ಮತ್ತು ಉಪ್ಪಿಟ್ಟು ತಯಾರಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮತ್ತು ಕಾರ್ಯಕ್ರಮದ ಸಿಬ್ಬಂದಿಗೆ ಮೊಸರನ್ನ, ಬಿಸಿಬೇಳೆ ಬಾತ್ ಮತ್ತು ಬೊಂಡಾ ನೀಡಲಾಗುತ್ತಿದೆ.

    ತಮ್ಮ ನೆಚ್ಚಿನ ನಟನ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ರಾಜ್ಯಾದ ನಾನಾ ಜಿಲ್ಲೆಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದು, ತಡರಾತ್ರಿವರೆಗೂ ಕಾರ್ಯಕ್ರಮವನ್ನು ವೀಕ್ಷಿಸಲಿದ್ದಾರೆ. ಹಾಗಾಗಿಯೇ ಅವರಿಗೆ ನೀರು, ತಿಂಡಿ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಮಾಡಿದೆ ದೊಡ್ಮನೆ. ವಾರದಿಂದಲೇ ಈ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಮಾಡಲಾಗಿದ್ದು, ಗಣ್ಯರಿಗೆ ಮತ್ತು ಅಭಿಮಾನಿಗಳಿಗೆ ಕೂರಲು ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. ಇದನ್ನೂ ಓದಿ:BREAKING:`ಕಾಂತಾರ’ ಪಾರ್ಟ್ 2 ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ರು ನಟ ಪ್ರಮೋದ್ ಶೆಟ್ಟಿ

    ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಸೇರಿದಂತೆ ಅನೇಕ ತಾರೆಯರು ನೃತ್ಯ ಮಾಡಲಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾಗಳ ಗೀತೆಗಳಿಗೆ ತಾರೆಯರು ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಅರಮನೆ ಮೈದಾನ ಸಿದ್ಧಗೊಂಡಿದ್ದು, ಕನ್ನಡ ಸಿನಿಮಾ ರಂಗದ ಬಹುತೇಕ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.

    ಖ್ಯಾತಗಾಯಕರಾದ ವಿಜಯ್ ಪ್ರಕಾಶ್, ಗುರುಕಿರಣ್ ಸೇರಿದಂತೆ ಅನೇಕ ಗಾಯಕರು ಈ ಕಾರ್ಯಕ್ರಮದಲ್ಲಿ ಪುನೀತ್ ನಟನೆಯ ಹಾಡುಗಳನ್ನು ಹೇಳಲಿದ್ದಾರೆ. ಐದುನೂರಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಬಹೃತ್ ಸಮಾರಂಭ ಇದಾಗಿದೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಡಾನ್ಸ್

    ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ, ಪ್ರಭುದೇವ ಡಾನ್ಸ್

    ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ (Ramya), ಪ್ರಭುದೇವ (Prabhudeva) ಸೇರಿದಂತೆ ಅನೇಕ ತಾರೆಯರು ನೃತ್ಯ (Dance) ಮಾಡಲಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾಗಳ ಗೀತೆಗಳಿಗೆ ತಾರೆಯರು ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಅರಮನೆ ಮೈದಾನ ಸಿದ್ಧಗೊಂಡಿದ್ದು, ಕನ್ನಡ ಸಿನಿಮಾ ರಂಗದ ಬಹುತೇಕ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.

    ಖ್ಯಾತಗಾಯಕರಾದ ವಿಜಯ್ ಪ್ರಕಾಶ್, ಗುರುಕಿರಣ್ ಸೇರಿದಂತೆ ಅನೇಕ ಗಾಯಕರು ಈ ಕಾರ್ಯಕ್ರಮದಲ್ಲಿ ಪುನೀತ್ ನಟನೆಯ ಹಾಡುಗಳನ್ನು ಹೇಳಲಿದ್ದಾರೆ. ಐದುನೂರಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಬಹೃತ್ ಸಮಾರಂಭ ಇದಾಗಿದೆ. ಇದನ್ನೂ ಓದಿ:ಆಮದು ಮಾಡಿಕೊಂಡ ಧರ್ಮಗಳು ಎಂದು ಚೇತನ್ ಮತ್ತೆ ಕಿಡಿ

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ನೆನಪಿನಲ್ಲಿ ‘ಪುನೀತ್ ಪರ್ವ’ (Puneeth Parva) ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ಸಮಾಧಿ ಹೂವಿನ ಅಲಂಕಾರ: ಸಮಾಧಿ ಬಳಿ ಅಭಿಮಾನಿಗಳ ದಂಡು

    ಅಪ್ಪು ಸಮಾಧಿ ಹೂವಿನ ಅಲಂಕಾರ: ಸಮಾಧಿ ಬಳಿ ಅಭಿಮಾನಿಗಳ ದಂಡು

    ಇಂದು ಪುನೀತ್ ಪರ್ವ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ (Samadhi) ಬಳಿ ಅಭಿಮಾನಿಗಳ ದಂಡು ನೆರೆದಿದೆ. ಪುನೀತ್ ಪರ್ವಕ್ಕಾಗಿ ದೂರದ ಜಿಲ್ಲೆಗಳಿಂದ ಬಂದ ಅಭಿಮಾನಿಗಳು (Fans) ಮೊದಲು ಪುನೀತ್ ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ಕಂಠೀರವ ಸ್ಟೂಡಿಯೋ(Kantheerava Studio) ಸುತ್ತಲೂ ಅಭಿಮಾನಿಗಳು ತಂಡೋಪತಂಡವಾಗಿ ಸೇರಿದ್ದು, ಅಪ್ಪು ಸಮಾಧಿಯ ದರ್ಶನಕ್ಕೆ ಕಾಯುತ್ತಿದ್ದಾರೆ.

    ಈ ಕುರಿತು ಅಭಿಮಾನಿಗಳು ಮಾತನಾಡಿ, ‘ಅಪ್ಪು ದರ್ಶನ ಪಡೆದು ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗ್ತೀವಿ. ನಮ್ಮ ದೇವರು ನಮ್ಮನ್ನ ಬಿಟ್ಟು ಹೋಗಿಲ್ಲ. ಅಪ್ಪು ನಮ್ಮ ಜೊತೆಯಲ್ಲೇ ಇದ್ದಾರೆ. ಅಪ್ಪು ಸಮಾಧಿಗೆ ಹೂವಿನ ಅಲಂಕಾರ ನಡೆಯುತ್ತಿದೆಯಂತೆ. ಅಲಂಕಾರ ಮುಗಿದ ಮೇಲೆ ದರ್ಶನಕ್ಕೆ ಬಿಡುವುದಾಗಿ ಹೇಳಿದ್ದಾರೆ. ಕಾಯುತ್ತಿದ್ದೇವೆ’ ಅಂತಾರೆ. ಬಳ್ಳಾರಿ, ಹೊಸಪೇಟೆ, ರಾಣೆಬೆನ್ನೂರು, ಹಾವೇರಿ ಸೇರಿ ಹಲವು ಕಡೆಯಿಂದ ಅಭಿಮಾನಿಗಳು ಇಲ್ಲಿಗೆ ಬಂದಿದ್ದಾರೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ನೆನಪಿನಲ್ಲಿ ‘ಪುನೀತ್ ಪರ್ವ’ (Puneeth Parva)  ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪುನೀತ್  ಪರ್ವ’ ಕಾರ್ಯಕ್ರಮಕ್ಕೆ ಪೊಲೀಸ್ ಸರ್ಪವಾಗಲು

    ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಪೊಲೀಸ್ ಸರ್ಪವಾಗಲು

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

    ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ʻಕಾಂತಾರʼ ಸಿನಿಮಾ ನೋಡದ ರಶ್ಮಿಕಾ ಮಂದಣ್ಣ ಬಗ್ಗೆ ಪ್ರಮೋದ್‌ ಶೆಟ್ಟಿ ಪ್ರತಿಕ್ರಿಯೆ

    ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಶ್ರೀನಿವಾಸ್ ಗೌಡ, 1400 ಪೊಲೀಸರ್, 180 ಪಿಎಸ್.ಐ, 60 ಇನ್ಸೆಪೆಕ್ಟರ್, 14 ಎಸಿಪಿ ಹಾಗೂ 3 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ, 20 ಕೆ.ಎಸ್.ಆರ್ಪಿ ತುಕಡಿ ಕೂಡ ಆ ಸ್ಥಳದಲ್ಲಿ ಇರಲಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಪ್ರವೇಶವನ್ನು ಕಲ್ಪಿಸಲಾಗಿದೆ.

    ಭಾರತೀಯ ಸಿನಿಮಾ ರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದರಿಂದ ಮತ್ತು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಳ್ಳುವುದರಿಂದ ಈ ಪ್ರಮಾಣದಲ್ಲಿ ಭದ್ರತೆಯನ್ನು ಕಲ್ಪಿಸಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಅಲ್ಲದೇ, ಪಾರ್ಕಿಂಗ್ ಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲುವ ಮೂಲಕ ಟ್ರಾಫಿಕ್ ಜಾಮ್ ತಪ್ಪಿಸಲು ಕಸರತ್ತು ನಡೆಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • `ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

    `ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

    ವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ನಟನೆಯ `ಗಂಧದಗುಡಿ’ (Gandadagudi) ಸಾಕ್ಷ್ಯ ಚಿತ್ರ ತೆರೆಗೆ ಬರಲು ಕೌಂಟ್ ಡೌನ್ ಶುರುವಾಗಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್‌ಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಈ ಅಂಗವಾಗಿ `ಪುನೀತ ಪರ್ವ’ (Puneeth Parva) ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಅವರಿಗೆ ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ.

    ಅಪ್ಪು ಅವರ ಕನಸಿನ ಪ್ರಾಜೆಕ್ಟ್ `ಗಂಧದ ಗುಡಿ'(Gandadagudi) ಹಾಗಾಗಿ ರಾಜ್ ಕುಟುಂಬದವರು ತುಂಬಾ ಕಾಳಜಿ ವಹಿಸಿ ಇದನ್ನು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಸಿನಿಮಾದ ರೀತಿ ಚಿತ್ರಮಂದಿರದಲ್ಲೇ ಇದು ಬಿಡುಗಡೆ ಆಗಲಿದೆ. `ಗಂಧದಗುಡಿ’ ಟ್ರೈಲರ್ ಬಿಡುಗಡೆ ಆದ ಬಳಿಕ ಅನೇಕ ಗಣ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕನ್ನಡದ ಸ್ಟಾರ್ಸ್ ಜೊತೆ ದಕ್ಷಿಣದ ಸ್ಟಾರ್ಸ್ ಹಲವರು ಈ ಬಗ್ಗೆ ಟ್ವೀಟ್ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಅ.21ರಂದು ನಡೆಯಲಿರುವ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini PuneethRajkumar) ಅವರು ವಿನಂತಿಸಿಕೊಂಡಿದ್ದಾರೆ. ಇನ್ನೂ ಈ ವೇಳೆ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಮತ್ತು ಯುವ ರಾಜ್‌ಕುಮಾರ್ (Yuva Rajkumar) ಕೂಡ ಸಾಥ್ ನೀಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು `ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ. ಅದಕ್ಕೆ ಭಾರತೀಯ ಚಿತ್ರರಂಗದ ಅನೇಕ ದಿಗ್ಗಜರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಹಲವರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ʻಗಂಧದ ಗುಡಿʼ ಸಾಕ್ಷ್ಯಚಿತ್ರ ಬೆಳಕು ಚೆಲ್ಲಿರೋದು ವಿಶೇಷ. ಇದನ್ನೂ ಓದಿ:ಮಿಡ್‌ನೈಟ್‌ನಲ್ಲಿ ಸಾನ್ಯ -ರೂಪೇಶ್‌ ಲವ್ವಿ ಡವ್ವಿ

    ಇನ್ನೂ `ಪುನೀತ ಪರ್ವ'(Puneeth Parva) ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿಶೇಷವಾಗಿದ್ದು, ಗಂಧದಿಂದ ಪುನೀತ್ ಪುತ್ಥಳಿ ಮಾಡಲಾಗಿದೆ. ಪುನೀತ್ ರಾಜ್‌ಕುಮಾರ್ ಎಂದು ಬರೆದಿರುವ ಹಸ್ತಾಕ್ಷರವಿದೆ. ಒಟ್ನಲ್ಲಿ ʻಪುನೀತ ಪರ್ವʼ ಕಾರ್ಯಕ್ರಮಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]