Tag: punith fans

  • ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬ – ಅಪ್ಪು ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ

    ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬ – ಅಪ್ಪು ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ

    ಬೆಂಗಳೂರು: ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್‌ಕುಮಾರ್‌ಗೆ (Punith Rajkumar) 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬಾರದ ಲೋಕಕ್ಕೆ ಹೋಗಿದ್ದರೂ ಅಪ್ಪು ಅಭಿಮಾನಿಗಳ ಪ್ರೀತಿ, ವಿಶ್ವಾಸ, ಹುಟ್ಟುಹಬ್ಬ ಆಚರಿಸುವ ಉತ್ಸಾಹ ಕಿಂಚಿತ್ತೂ ಕಮ್ಮಿಯಾಗಿಲ್ಲ. ಜೊತೆಗಿರದ ಜೀವವನ್ನು ಜೀವಂತವಾಗಿಸಿಕೊಂಡ ಅಭಿಮಾನಿಗಳು ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದಾರೆ.

    ಅದೆಷ್ಟು ವರ್ಷ ಕಳೆದರೂ ಸಹ ಅಪ್ಪು ಇಲ್ಲ ಎನ್ನುವುದನ್ನು ಅಭಿಮಾನಿಗಳು ಜೀರ್ಣಿಸಿಕೊಳ್ಳಲಾರರು. ಅಂದು ಕಣ್ಮುಂದಿದ್ದ ಅಪ್ಪು, ಈಗ ಕಣ್ಮುಂದಿನ ದೇವರಾಗಿದ್ದಾರೆ ಎಂಬುದು ಅಭಿಮಾನಿಗಳ ನಂಬಿಕೆಯಾಗಿದೆ. ಅದರಂತೆ ಅವರ 50ನೇ ವರ್ಷದ ಹುಟ್ಟುಹಬ್ಬವನ್ನ ಅಭಿಮಾನಿಗಳು ಭಾರೀ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಅಪ್ಪು ಸಮಾಧಿ ಬಳಿ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: 59 ಬಾರಿ ಡ್ರಗ್ಸ್‌ ಸಾಗಾಟ ಮಾಡಿದ್ರೂ ವಿಮಾನ ನಿಲ್ದಾಣ ಸಿಕ್ಕಿ ಬಿದ್ದಿಲ್ಲ ಹೇಗೆ?

    ಕಂಠೀರವ ಸ್ಟುಡಿಯೋದಲ್ಲಿ ಇಂದು (ಮಾ.17) ಬೆಳಗ್ಗೆ 9 ಗಂಟೆ ಸುಮಾರಿಗೆ ಅಭಿಮಾನಿಗಳ ಸಮ್ಮುಖದಲ್ಲೇ ಅಪ್ಪು ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಬಳಿಕ ಸಮಾಧಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರುತ್ತದೆ. ನಾನಾ ಊರುಗಳಿಂದ ಸಾವಿರಾರು ಅಪ್ಪು ಅಭಿಮಾನಿಗಳು ಭೇಟಿ ಕೊಡುವ ನಿರೀಕ್ಷೆ ಇದೆ. ತಡರಾತ್ರಿ 12 ಗಂಟೆಯಿಂದ ಶುರುವಾದ ಅಪ್ಪು ಹುಟ್ಟುಹಬ್ಬ ಆಚರಣೆಯ£ನ್ನು ಇಂದು ಇಡೀ ದಿನ ಅಭಿಮಾನಿಗಳು ಹಬ್ಬದಂತೆ ಆಚರಿಸಲಿದ್ದಾರೆ.

    ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರ ಘೋಷಿಸಿದೆ. ಅದರಂತೆ ಸ್ಫೂರ್ತಿಯ ಚಿಲುಮೆ ಅಪ್ಪು ನೆನಪಲ್ಲಿ ರಾಜ್ಯದೆಲ್ಲೆಡೆ ಅಭಿಮಾನಿಗಳು ತಮ್ಮಿಷ್ಟ ಬಂದಂತೆ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಜೊತೆಗೆ ಕಂಠೀರವ ಸ್ಟುಡಿಯೋದಲ್ಲಂತೂ ಜಾತ್ರೆಯೇ ನಡೆಯಲಿದ್ದು ಅನ್ನದಾನ, ಉಚಿತ ಆರೊಗ್ಯ ತಪಾಸಣೆ, ರಕ್ತದಾನ ಶಿಬಿರ, ವ್ಯಾಪಾರ ವಹಿವಾಟು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿದೆ. ಇದನ್ನೂ ಓದಿ: 5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ರೂ. ತೆರಿಗೆ ಪಾವತಿ!

    ಪುನೀತ್ ರಾಜ್‌ಕುಮಾರ್ ಇದ್ದಿದ್ದರೇ ಹೇಗೆಲ್ಲಾ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಬೇಕು ಎಂದು ಫ್ಯಾನ್ಸ್ ಅಂದುಕೊಂಡಿದ್ದರೋ ಅದರಂತೆಯೇ ಅದ್ದೂರಿಯಾಗಿಯೇ ಆಚರಿಸಲಾಗುತ್ತಿದೆ. ಅಪ್ಪು ಕುಟುಂಬಸ್ಥರ ಜೊತೆ ಆಪ್ತರು ನಟ-ನಟಿಯರು ನಗುಮೊಗದ ಅರಸನ ಹುಟ್ಟುಹಬ್ಬಕ್ಕೆ ಕಳೆ ತುಂಬಲಿದ್ದಾರೆ. ಜೊತೆಗಿರದ ಈ ಯುವರತ್ನನನ್ನು ಕರುನಾಡು ಎಂದೆಂದಿಂಗೂ ಜೀವಂತವಾಗಿಸಿಕೊಂಡಿದೆ.

  • ಅನ್ನಸಂತರ್ಪಣೆಯೊಂದಿಗೆ `ನಟಸಾರ್ವಭೌಮ’ನಿಗೆ ಅಭಿಮಾನಿಗಳು ಸ್ವಾಗತ

    ಅನ್ನಸಂತರ್ಪಣೆಯೊಂದಿಗೆ `ನಟಸಾರ್ವಭೌಮ’ನಿಗೆ ಅಭಿಮಾನಿಗಳು ಸ್ವಾಗತ

    ಚಿತ್ರದುರ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ನಟಸಾರ್ವಭೌಮ ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ನಟ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಜಿಲ್ಲೆಯ ಬಸವೇಶ್ವರ ಚಿತ್ರ ಮಂದಿರದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

    ಕೋಟೆನಾಡಿನ ಬಸವೇಶ್ವರ ಚಿತ್ರ ಮಂದಿರದಲ್ಲಿ ತೆರೆಕಂಡಿರೋ ನಟಸಾರ್ವಭೌಮ ಚಿತ್ರ ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ಅನ್ನಸಂತರ್ಪಣೆ ಏರ್ಪಡಿಸಿ ಅಭಿಮಾನಿಗಳು ನಟಸಾರ್ವಭೌಮನಿಗೆ ವಿನೂತವಾಗಿ ಸ್ವಾಗತ ಕೋರಿದ್ದಾರೆ. ಮೊದಲ ಶೋಗೆ ಚಿತ್ರಮಂದಿರ ಮುಂದೆ ಅಪ್ಪು ಫ್ಯಾನ್ಸ್ ಕಿಕ್ಕಿರಿದು ಸೇರಿದ್ದಾರೆ. ಅಪ್ಪು ಬೃಹತ್ ಕಟೌಟ್ ಮುಂದೆ ಕುಂಬಳಕಾಯಿ ಒಡೆದು, ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ನಟಸಾರ್ವಭೌಮನನ್ನು ಅಭಿಮಾನಿಗಳು ಭರ್ಜರಿಯಾಗಿ ಬರ ಮಾಡಿಕೊಂಡಿದ್ದಾರೆ.

    ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನಟಸಾರ್ವಭೌಮನಾಗಿ ನೋಡಲು ಬಹು ದಿನಗಳಿಂದ ಕಾತುರದಿಂದ ಕಾದು ಕುಳಿತಿದ್ದರು. ಬೆಳ್ಳಂಬೆಳಗ್ಗೆ 5 ಗಂಟೆಗೆ ಚಿತ್ರಮಂದಿರದ ಬಳಿ ಅಪ್ಪು ಅಭಿಮಾನಿಗಳು ಜಮಾಯಿಸಿದ್ದು, ಈಗಾಗಲೇ 7 ಗಂಟೆಯಿಂದ ಬಸವೇಶ್ವರ ಚಿತ್ರ ಮಂದಿರದಲ್ಲಿ ಮೊದಲ ಶೋ ಆರಂಭವಾಗಿದೆ. ಅಭಿಮಾನಿಗಳು ಚಿತ್ರ ವೀಕ್ಷಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv