Tag: Punjab Kings

  • ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ, ಕುಂಬ್ಳೆ ಮುಂದೆ ಅತ್ತಿದ್ದೆ: ಕ್ರಿಸ್‌ ಗೇಲ್‌

    ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ, ಕುಂಬ್ಳೆ ಮುಂದೆ ಅತ್ತಿದ್ದೆ: ಕ್ರಿಸ್‌ ಗೇಲ್‌

    ಮುಂಬೈ: ಪಂಜಾಬ್‌ ಕಿಂಗ್ಸ್‌ (Punjab Kings) ತಂಡದಲ್ಲಿ ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ. ನನ್ನನ್ನು ಸಣ್ಣ ಮಕ್ಕಳಂತೆ ನಡೆಸಿಕೊಂಡಿದ್ದರು ಎಂದು ಎಂದು ಮಾಜಿ ವಿಂಡೀಸ್‌ ಆಟಗಾರ ಕ್ರಿಸ್‌ ಗೇಲ್‌ (Chris Gayle) ಹೇಳಿದ್ದಾರೆ.

    ಶುಭಂಕರ್ ಮಿಶ್ರಾ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಗೇಲ್‌, ಗೌರವದಿಂದ ನನ್ನನ್ನು ತಂಡ ನಡೆಸಿಕೊಂಡಿರಲಿಲ್ಲ. ಇದರಿಂದ ನಾನು ಖಿನ್ನತೆಗೆ ಒಳಗಾಗುವ ಸ್ಥಿತಿ ತಲುಪಿದ್ದೆ ಎಂದು ತಿಳಿಸಿದರು.

    ಪಂಜಾಬ್ ಕಿಂಗ್ಸ್ ತಂಡದಲ್ಲಿ ನನ್ನ ಐಪಿಎಲ್ ಜೀವನ ಬಹಳ ಬೇಗ ಕೊನೆಯಾಯಿತು. ನಾನು ತಂಡಕ್ಕೆ ಕೊಡುಗೆ ನೀಡಿದ್ದರೂ ಹಿರಿಯ ಆಟಗಾರನಾಗಿ ಕೊಡಬೇಕಾದ ಗೌರವ ಸಿಗಲಿಲ್ಲ. ಅನಿಲ್‌ ಕುಂಬ್ಳೆ (Anil Kumble) ಅವರ ಜೊತೆ ಮಾತನಾಡುವಾಗ ನಾನು ಅತ್ತಿದ್ದೆ. ತಂಡ ನನ್ನನ್ನು ನಡೆಸಿಕೊಂಡ ರೀತಿಯಿಂದ ನಿರಾಸೆಯಾಗಿತ್ತು ಎಂದು ದೂರಿದರು. ಇದನ್ನೂ ಓದಿ: BCCI ಬ್ಯಾಂಕ್ ಬ್ಯಾಲೆನ್ಸ್‌ 20 ಸಾವಿರ ಕೋಟಿಗೂ ಅಧಿಕ 5 ವರ್ಷದಲ್ಲಿ 14,627 ಕೋಟಿ ಆದಾಯ ಹೆಚ್ಚಳ

    ಕೆಎಲ್‌ ರಾಹುಲ್‌ ಅವರು ಕರೆ ಮಾಡಿ ಕ್ರಿಸ್‌ ಇರು ಮುಂದಿನ ಪಂದ್ಯದಲ್ಲಿ ಅವಕಾಶ ಸಿಗಲಿದೆ ಎಂದು ಹೇಳಿದರು. ಇದಕ್ಕೆ ನಾನು, ನಿಮಗೆ ಒಳ್ಳೆಯದಾಗಿ ಎಂದು ಹೇಳಿ ಬ್ಯಾಗ್‌ ಹಿಡಿದು ಹೊರಟೆ ಎಂದು ಹಳೆಯ ನೆನಪನ್ನು ಬಿಚ್ಚಿಟ್ಟರು.

    ಕ್ರಿಸ್ ಗೇಲ್ ಅವರು ಐಪಿಎಲ್‌ನಲ್ಲಿ 2018ರಿಂದ 2021ರವರೆಗೆ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡಿದ್ದರು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆರಂಭಿಕ ಆಟಗಾರರಾಗಿ 41 ಪಂದ್ಯಗಳಲ್ಲಿ 40.75 ಸರಾಸರಿಯಲ್ಲಿ 1,304 ರನ್ ಹೊಡೆದಿದ್ದರು. ಇದರಲ್ಲಿ 1 ಶತಕ ಮತ್ತು ಹನ್ನೊಂದು ಅರ್ಧ ಶತಕಗಳಿದ್ದವು. ಅವರ ಸ್ಟ್ರೈಕ್ ರೇಟ್ 148.65 ಆಗಿದ್ದರೂ ತಂಡದ ಮ್ಯಾನೇಜ್ ಮೆಂಟ್ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದಿದ್ದಾರೆ.

    ಗೇಲ್‌ ಐಪಿಎಲ್‌ನಲ್ಲಿ ಮೂರು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಆರಂಭದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌(2009-10), ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (2011-2027), ಬಳಿಕ ಪಂಜಾಬ್‌ ಕಿಂಗ್ಸ್‌ (2018-2021) ತಂಡದ ಪರ ಆಡಿದ್ದರು.

  • ಪಂಜಾಬ್‌ ಪರ ವಾಲಿದ್ದ ಪಂದ್ಯವನ್ನು ಆರ್‌ಸಿಬಿ ಕಡೆ ತಿರುಗಿಸಿದ್ದು ಕೃನಾಲ್‌!

    ಪಂಜಾಬ್‌ ಪರ ವಾಲಿದ್ದ ಪಂದ್ಯವನ್ನು ಆರ್‌ಸಿಬಿ ಕಡೆ ತಿರುಗಿಸಿದ್ದು ಕೃನಾಲ್‌!

    ಅಹಮದಾಬಾದ್‌: 4 ಓವರ್‌ 17 ರನ್‌ 2 ವಿಕೆಟ್‌. ಪಂಜಾಬ್‌ (PBKS) ಪರ ವಾಲಿದ್ದ ಪಂದ್ಯವನ್ನು ಆರ್‌ಸಿಬಿ (RCB) ಕಡೆ ತಿರುಗಿಸಿದ್ದು ಕೃನಾಲ್‌ ಪಾಂಡ್ಯ.

    ಪಂಜಾಬ್‌ 6 ಓವರ್‌ ಅಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 52 ರನ್‌ ಗಳಿಸಿತ್ತು. ಈ ಹಂತದಲ್ಲಿ ರಜತ್‌ ಪಾಟಿದಾರ್‌ ಕೃನಾಲ್‌ ಪಾಂಡ್ಯ (Krunal Pandya) ಕೈಗೆ ಚೆಂಡು ನೀಡಿದರು. ಕೃನಾಲ್‌ ತಮ್ಮ ಮೊದಲ ಓವರ್‌ನಲ್ಲಿ 3 ರನ್‌ ನೀಡಿ ರನ್‌ಗೆ ಕಡಿವಾಣ ಹಾಕಿದರು. ತಮ್ಮ ಎರಡನೇ ಓವರ್‌ನಲ್ಲಿ ಪ್ರಭುಸಿಮ್ರಾನ್‌ ಸಿಂಗ್‌ ಅವರನ್ನು ಔಟ್‌ ಮಾಡಿದರು. ಈ ಓವರ್‌ನಲ್ಲಿ ಕೇವಲ 4 ರನ್‌ ಮಾತ್ರ ನೀಡಿದರು.

     

     

    ತಮ್ಮ ಮೂರನೇ ಓವರ್‌ನಲ್ಲಿ 11 ರನ್‌ ನೀಡಿದ ಕೃನಾಲ್‌ ತಮ್ಮ ಕೊನೆಯ ಓವರ್‌ನಲ್ಲಿ ಜೋಶ್‌ ಇಂಗ್ಲಿಸ್‌ ಅವರನ್ನು ಔಟ್‌ ಮಾಡಿದರು. ಸಿಕ್ಸ್‌ ಹೊಡೆಯಲು ಹೋದ ಇಂಗ್ಲಿಸ್‌ ಅವರ ಕ್ಯಾಚನ್ನು ಬೌಂಡರಿ ಬಳಿ ಲಿವಿಂಗ್‌ಸ್ಟೋನ್ ಹಿಡಿದರು. ಇಲ್ಲಿಂದ ಪಂದ್ಯದ ದಿಕ್ಕೇ ಬದಲಾಯಿತು.

    4 ಓವರ್‌ನಲ್ಲಿ ರನ್‌ ನಿಯಂತ್ರಣ ಮಾಡಿದ್ದು ಅಲ್ಲದೇ 2 ವಿಕೆಟ್‌ ತೆಗೆಯುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ನಂತರ ಪಂಜಾಬ್‌ ಸತತ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿ ಕೊನೆಗೆ ಸೋಲನ್ನು ಒಪ್ಪಿಕೊಂಡಿತು.

    ಹಾಗೆ ನೋಡಿದ್ರೆ 4 ಓವರ್‌ ಎಸೆದ ಭುವನೇಶ್ವರ್‌ ಕುಮಾರ್‌ 38 ರನ್‌ ನೀಡಿದ್ರೆ ಹೆಜಲ್‌ವುಡ್‌ 54 ರನ್‌ ನೀಡಿ ದುಬಾರಿಯಾಗಿದ್ದರು. ಸುಯಾಶ್‌ ಶರ್ಮಾ 2 ಓವರ್‌ ಎಸೆದಿದ್ದರೂ 19 ರನ್‌ ನೀಡಿದ್ದರು. ರೋಮಾರಿಯೋ ಶೆಪರ್ಡ್‌ 3 ಓವರ್‌ ಎಸೆದು 30 ರನ್‌ ಕೊಟ್ಟಿದ್ದರು. ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ಅರ್ಹವಾಗಿಯೇ ಕೃನಾಲ್‌ ಪಾಂಡ್ಯ ಅವರು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

  • ಆರ್‌ಸಿಬಿ ಜೆರ್ಸಿ, ಪಂಜಾಬ್‌ ಪೇಟಾ ಧರಿಸಿದ ಕ್ರಿಸ್‌ ಗೇಲ್‌ – ವೈರಲ್‌ ಆಯ್ತು ಸ್ಪೆಷಲ್‌ ಲುಕ್‌

    ಆರ್‌ಸಿಬಿ ಜೆರ್ಸಿ, ಪಂಜಾಬ್‌ ಪೇಟಾ ಧರಿಸಿದ ಕ್ರಿಸ್‌ ಗೇಲ್‌ – ವೈರಲ್‌ ಆಯ್ತು ಸ್ಪೆಷಲ್‌ ಲುಕ್‌

    ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವಿನ ಬಹು ನಿರೀಕ್ಷಿತ IPL 2025 ಫೈನಲ್ ಪಂದ್ಯಕ್ಕೆ ಉತ್ಸಾಹ ಹೆಚ್ಚಾಗಿದೆ. T20 ದಂತಕಥೆ ಕ್ರಿಸ್ ಗೇಲ್ (Chris Gayle) ಅವರ ವೈರಲ್ ಚಿತ್ರವು‌ ಶ್ರೀಮಂತ ಲೀಗ್‌ನ ಉನ್ಮಾದವನ್ನು ಮತ್ತಷ್ಟು ಹೆಚ್ಚಿಸಿದೆ.

    ಐಪಿಎಲ್ ವೃತ್ತಿಜೀವನದಲ್ಲಿ ಎರಡೂ ಫ್ರಾಂಚೈಸಿಗಳಿಗಾಗಿ ಆಡಿದ್ದ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ, ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮ್ಯಾಚ್‌ ವೇಳೆ ಆರ್‌ಸಿಬಿ ಜೆರ್ಸಿ ಹಾಗೂ ಸಾಂಪ್ರದಾಯಿಕ ಪಂಜಾಬಿ ಪೇಟ ಧರಿಸಿ ಕಾಣಿಸಿಕೊಂಡಿದ್ದಾರೆ. ಗೇಲ್‌ ಹೊಸ ಲುಕ್‌ ಸಖತ್‌ ವೈರಲ್‌ ಆಗಿದೆ. ಇದನ್ನೂ ಓದಿ: For The First Time ಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ – ಇಂದಿನ ಲಕ್‌ ಹೇಗಿದೆ?

    ಗೇಲ್ ಅವರನ್ನು ಟಿ20 ಇತಿಹಾಸದಲ್ಲಿ ಅತ್ಯಂತ ಪರಿಣಾಮಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿತ್ತು. ಅವರ ಐಪಿಎಲ್ ವೃತ್ತಿಜೀವನದಲ್ಲಿ 4,965 ರನ್‌ಗಳನ್ನು ಗಳಿಸಿದ್ದಾರೆ. ಐಪಿಎಲ್ 2011 (608 ರನ್‌ಗಳು) ಮತ್ತು ಐಪಿಎಲ್ 2012 (733 ರನ್‌ಗಳು) ನಲ್ಲಿ ಆರೆಂಜ್ ಕ್ಯಾಪ್ ಗೆದ್ದಿದ್ದರು.

    ಐಪಿಎಲ್‌ 2025ರ ಫೈನಲ್‌ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಸೆಣಸುತ್ತಿದೆ. ರಜತ್ ಪಾಟಿದಾರ್ ನೇತೃತ್ವದ ತಂಡವು ಮುಲ್ಲನ್‌ಪುರದಲ್ಲಿ ನಡೆದ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪ್ರಬಲ ಪ್ರದರ್ಶನ ನೀಡಿತ್ತು. ಜೋಶ್ ಹ್ಯಾಜಲ್‌ವುಡ್ ಮತ್ತು ಸುಯಾಶ್ ಶರ್ಮಾ ಅವರು ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಪಂಜಾಬ್‌ ವಿರುದ್ಧ ಇನ್ನೂ 60 ಎಸೆತಗಳು ಬಾಕಿ ಇರುವಾಗ ಆರ್‌ಸಿಬಿ ಸಮಗ್ರ ಗೆಲುವು ಸಾಧಿಸಿತ್ತು. ಇದನ್ನೂ ಓದಿ: Photo Gallery | ಭಾರತೀಯ ಸೇನೆಗೆ ಫೈನಲ್‌‌ ಪಂದ್ಯ ಅರ್ಪಣೆ… ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

    ಜೂನ್ 1 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (MI) ತಂಡದ ವಿರುದ್ಧ ಕ್ವಾಲಿಫೈಯರ್ 2 ರಲ್ಲಿ ಗೆಲುವು ದಾಖಲಿಸಿ PBKS ಫಾರ್ಮ್‌ಗೆ ಬಂದಿತ್ತು. ಶ್ರೇಯಸ್ ಅಯ್ಯರ್ ಕೇವಲ 41 ಎಸೆತಗಳಲ್ಲಿ 87 ರನ್ ಗಳಿಸಿ ಪಂದ್ಯ ಗೆಲ್ಲುವ ಮೂಲಕ ಮುಂಚೂಣಿಯಲ್ಲಿ ನಿಂತು ತಂಡವನ್ನು ಮುನ್ನಡೆಸಿದ್ದರು. 11 ವರ್ಷಗಳ ನಂತರ ಐಪಿಎಲ್ 2025 ರ ಫೈನಲ್‌ಗೆ ಪಂಜಾಬ್‌ ಲಗ್ಗೆ ಇಟ್ಟಿದೆ.

    18 ಋತುಗಳ ನಂತರ, ಈ ಎರಡೂ ಫ್ರಾಂಚೈಸಿಗಳು ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಸೆಣಸುತ್ತಿವೆ. ಇದು ಪಂದ್ಯಾವಳಿಯ ಪರಂಪರೆಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಇದನ್ನೂ ಓದಿ: IPL Final | ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌

  • Photo Gallery | ಭಾರತೀಯ ಸೇನೆಗೆ ಫೈನಲ್‌‌ ಪಂದ್ಯ ಅರ್ಪಣೆ… ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

    Photo Gallery | ಭಾರತೀಯ ಸೇನೆಗೆ ಫೈನಲ್‌‌ ಪಂದ್ಯ ಅರ್ಪಣೆ… ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

    ಅಹಮದಾಬಾದ್‌: 18ನೇ ಆವೃತ್ತಿಯ ಐಪಿಎಲ್‌ ಫೈನಲ್‌ (IPL Final) ಪಂದ್ಯ ಆರಂಭಗೊಂಡಿದೆ. ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಆರ್‌ಸಿಬಿಗೆ ಬಿಟ್ಟುಕೊಟ್ಟಿದೆ. ಫೈನಲ್‌ ಪಂದ್ಯಕ್ಕೂ ಮುನ್ನ ಭಾರತ ಸೇನೆಗೆ ವಿಶೇಷ ಗೌರವ ಸಲ್ಲಿಸಲಾಯಿತು. ಖ್ಯಾತ ಹಿನ್ನೆಲೆ ಗಾಯಕ ಶಂಕರ್‌ ಮಹಾದೇವನ್‌ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರ ಮೈನವಿರೇಳುವಂತೆ ಮಾಡಿದರು. ಅಲ್ಲದೇ ವಾಯುಪಡೆಯ ಅದ್ಭುತ ಏರ್‌ಶೋ ಕೂಡ ಗಮನ ಸೆಳೆಯಿತು. ಇಂತಹ ಅದ್ಭುತ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೀಗೆ….

  • ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

    ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

    ಅಹಮದಾಬಾದ್‌: ಆರ್‌ಸಿಬಿ (RCB) ಓಪನರ್‌ ಫಿಲ್‌ ಸಾಲ್ಟ್‌ (Phil Salt) ಫೈನಲ್‌ ಪಂದ್ಯ ಆಡುವುದು ಅನುಮಾನ ಎನ್ನಲಾಗುತ್ತಿದೆ.

    ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ (Punjab Kings) ಫೈನಲ್‌ ಪಂದ್ಯ ನಡೆಯಲಿದೆ. ಫೈನಲ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಅಭ್ಯಾಸ ವೇಳೆ ಸಾಲ್ಟ್‌ ಕಾಣಿಸಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: RCB ಇಂಪ್ಯಾಕ್ಟ್ ಪ್ಲೇಯರ್ ಆಗಿ ಸಿಂಧನೂರಿನ ಮನೋಜ್ ಬಾಂಡಗೆ – ಕುಟುಂಬಸ್ಥರಿಂದ ಗೆಲುವಿನ ಶುಭಹಾರೈಕೆ

    ಇಂಗ್ಲೆಂಡಿನ ಫಿಲ್‌ ಸಾಲ್ಟ್‌ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಹೀಗಾಗಿ ಅವರು ತವರಿಗೆ ತೆರಳಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಆರ್‌ಸಿಬಿ ಅಧಿಕೃತವಾಗಿ ಸಾಲ್ಟ್‌ ಅಲಭ್ಯರಾಗುವ ಬಗ್ಗೆ ತಿಳಿಸಿಲ್ಲ.

    ಆರ್‌ಸಿಬಿ ಪರ 12 ಪಂದ್ಯ ಆಡಿರುವ ಸಾಲ್ಟ್‌ ಒಟ್ಟು 387 ರನ್‌ ಹೊಡೆದು ಟಾಪ್‌ 20 ಬ್ಯಾಟರ್‌ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 18ನೇ ಐಪಿಎಲ್‌, 18ನೇ ಸಂಖ್ಯೆಗೆ ನಂಟು – 2013 ರಿಂದ ಆರ್‌ಸಿಬಿ ಪರ 18 ಟ್ರೆಂಡಿಂಗ್‌!

    ಪಂಜಾಬ್‌ ವಿರುದ್ಧದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸಾಲ್ಟ್‌ ಔಟಾಗದೇ 56 ರನ್‌(27 ಎಸೆತ, 6 ಬೌಂಡರಿ, 3 ಸಿಕ್ಸ್‌ ) ಹೊಡೆದು ಜಯವನ್ನು ತಂದುಕೊಟ್ಟಿದ್ದರು.

  • ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

    ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

    ಮುಂಬೈ ವಿರುದ್ಧ ನಡೆದ ಎರಡನೇ ಕ್ವಾಲಿಫೈಯರ್‌ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಪಂಜಾಬ್‌ ಕಿಂಗ್ಸ್‌ (Punjab Kings) ತಂಡವನ್ನು ಫೈನಲ್‌ಗೆ ಕೊಂಡೊಯ್ದ ನಾಯಕ ಶ್ರೇಯಸ್‌ ಅಯ್ಯರ್ (Shreyas Iyer) ‌ ಕಳೆದ ಒಂದೂವರೆ ವರ್ಷದಿಂದ ಮುಟ್ಟಿದೆಲ್ಲವೂ ಚಿನ್ನವಾಗುತ್ತಿದೆ.

    ಭಾರತದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಟೀಂ ಇಂಡಿಯಾದಿಂದ (Team India) ಹೊರಬಿದ್ದು, ಬಿಸಿಸಿಐ (BCCI) ಗುತ್ತಿಗೆ ಪಟ್ಟಿಯಲ್ಲೂ ಶ್ರೇಯಸ್‌ ಅಯ್ಯರ್ ಸ್ಥಾನ ಗಿಟ್ಟಿಸಲು ವಿಫಲರಾಗಿದ್ದರು. ಆದರೆ ಕಳೆದ ಒಂದೂವರೆ ವರ್ಷದಲ್ಲಿ ಶ್ರೇಯಸ್‌ ಅಯ್ಯರ್‌ ಅತ್ಯುತ್ತಮ ಲಯದಲ್ಲಿದ್ದಾರೆ.  ಇದನ್ನೂ ಓದಿ: ಸತತ 2ನೇ ವರ್ಷ ರಜತ್‌ vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

    ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ (Mumbai Team) ತಂಡವನ್ನು ಶ್ರೇಯಸ್‌ ಅಯ್ಯರ್‌ ಪ್ರತಿನಿಧಿಸುತ್ತಿದ್ದಾರೆ. ಕಳೆದ ವರ್ಷ ಮುಂಬೈ ತಂಡ ರಣಜಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಶ್ರೇಯಸ್‌ ಅಯ್ಯರ್‌ ಮುಂಬೈ ಪರ ಉತ್ತಮವಾಗಿ ಆಡಿದ್ದರು. ರಣಜಿಯ ಬೆನ್ನಲ್ಲೇ ಶ್ರೇಯಸ್‌ ನಾಯಕತ್ವದಲ್ಲಿ ಮುಂಬೈ ತಂಡ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಇದನ್ನೂ ಓದಿ: IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

    ಇರಾನಿ ಕಪ್ ಗೆದ್ದ ಮುಂಬೈ ತಂಡದ ಸದಸ್ಯರಾಗಿದ್ದ ಶ್ರೇಯಸ್‌ ಅಯ್ಯರ್‌ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದಾಗ ಶ್ರೇಯಸ್ ತಂಡದ ಪ್ರಮುಖ ಭಾಗವಾಗಿದ್ದರು. ಇಷ್ಟೇ ಅಲ್ಲದೇ ಕಳೆದ ವರ್ಷ ಶ್ರೇಯಸ್‌ ನಾಯಕತ್ವದಲ್ಲೇ ಕೋಲ್ಕತ್ತಾ ನೈಟ್‌ ರೈಡರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಕಳೆದ 15 ತಿಂಗಳಿನಲ್ಲಿ 5 ಟ್ರೋಫಿ ಗೆದ್ದಿರುವ ಶ್ರೇಯಸ್‌ ಅಯ್ಯರ್‌ ಈಗ 6ನೇ ಟ್ರೋಫಿ ಗೆಲ್ಲುವ ಕಾತರದಲ್ಲಿದ್ದಾರೆ. ಇದರೊಂದಿಗೆ ಈ ಬಾರಿ ಒಟ್ಟು 16 ಪಂದ್ಯಗಳಿಂದ 603 ರನ್‌ ಹೊಡೆದಿರುವ ಶ್ರೇಯಸ್‌ ಅಯ್ಯರ್ ಸರಣಿ ಶ್ರೇಷ್ಠ ಪ್ರಶಸ್ತಿಯ ಮೇಲೂ ಕಣ್ಣಿಟ್ಟಿದ್ದಾರೆ.‌

  • ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

    ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

    – ನಗರ ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ

    ಬೆಂಗಳೂರು: ಆರ್‌ಸಿಬಿ (RCB) ಹಾಗೂ ಪಂಜಾಬ್ (Punjab Kings) ನಡುವೆ ಇಂದು ಐಪಿಎಲ್ ಫೈನಲ್ ಹಣಾಹಣಿ ನಡೆಯಲಿದೆ. ಈ ಹಿನ್ನೆಲೆ ಅವಧಿಗೂ ಮೀರಿ ಬೆಂಗಳೂರು ನಗರದ ಪಬ್‌ಗಳನ್ನು ಓಪನ್ ಮಾಡದಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರು ನಗರದ ಪಬ್‌ಗಳ ಸ್ವರ್ಗವಾಗಿರುವ ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ಹಲವಡೆ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಗುಜರಾತ್ ರಾಜಧಾನಿ ಅಹಮದಾಬಾದ್‌ನಲ್ಲಿ ಮಳೆ ಇರುವ ಕಾರಣ ಪಂದ್ಯ ತಡವಾಗಿ ಆರಂಭವಾಗಿ ತಡ ರಾತ್ರಿ ಮುಕ್ತಾಯವಾಗಿತ್ತು. ಅದೇ ರೀತಿ ಇಂದು ಕೂಡ ನಡೆಯುವ ಆರ್‌ಸಿಬಿ – ಪಂಜಾಬ್ ಫೈನಲ್ ಪಂದ್ಯ ಮಳೆ ಬಂದು ತಡವಾದರೆ ಪಬ್‌ಗಳನ್ನ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ಕ್ಲೋಸ್ ಮಾಡಬೇಕು. ಮ್ಯಾಚ್ ಮುಗಿದಿಲ್ಲ ಎಂದು ತಡರಾತ್ರಿಯ ತನಕ ಪಬ್ ಓಪನ್ ಮಾಡಿಕೊಂಡಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

    ಒಂದು ವೇಳೆ ಪೊಲೀಸರ ಖಡಕ್ ಸೂಚನೆ ಮೀರಿ ಅವಧಿ ಮುಗಿದರೂ ಪಬ್ ಓಪನ್ ಮಾಡಿಕೊಂಡರೆ ಎಫ್‌ಐಆರ್ ದಾಖಲಿಸಲಾಗುತ್ತದೆ ಎಂದು ಪಬ್ ಮಾಲೀಕರಿಗೆ ಎಚ್ಚರಿಸಲಾಗಿದೆ. ಇದನ್ನೂ ಓದಿ: ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

  • ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

    ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

    ತತ ಎರಡನೇ ವರ್ಷ ಟಿ20 ಫೈನಲ್‌ನಲ್ಲಿ (T20 Final) ರಜತ್‌ ಪಾಟಿದಾರ್‌ (Rajat Patidar) ಮತ್ತು ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕತ್ವದ ತಂಡಗಳು ಮುಖಾಮುಖಿಯಾಗುತ್ತಿವೆ.

    ಹೌದು. ಕಳೆದ ಡಿಸೆಂಬರ್‌ನಲ್ಲಿ ವರ್ಷ ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯ ಬೆಂಗಳೂರಿನಲ್ಲಿ ಮಧ್ಯಪ್ರದೇಶ (Madhya Pradesh) ಮತ್ತು ಮುಂಬೈ (Mumbai) ತಂಡಗಳ ಮಧ್ಯೆ ನಡೆದಿತ್ತು.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ್ದ ಮಧ್ಯಪ್ರದೇಶ 8 ವಿಕೆಟ್‌ ನಷ್ಟಕ್ಕೆ 174 ರನ್‌ ಹೊಡೆದಿತ್ತು. ನಾಯಕ ಪಾಟಿದಾರ್‌ ಅಜೇಯ 81 ರನ್‌(40 ಎಸೆತ, 6 ಬೌಂಡರಿ, 6 ಸಿಕ್ಸ್‌) ಹೊಡೆದಿದ್ದರು. ಇದನ್ನೂ ಓದಿ: ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

    ಈ ಮೊತ್ತವನ್ನು ಬೆನ್ನಟ್ಟಿದ ಮುಂಬೈ 17.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 180 ರನ್‌ ಹೊಡೆಯುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. ಶ್ರೇಯಸ್‌ ಅಯ್ಯರ್‌ 16 ರನ್‌ ಗಳಿಸಿ ಔಟಾಗಿದ್ದರು.


    ಈಗ ಐಪಿಎಲ್‌ನಲ್ಲಿ ಆರ್‌ಸಿಬಿಯನ್ನು ರಜತ್‌, ಪಂಜಾಬ್‌ ತಂಡವನ್ನು ಶ್ರೇಯಸ್‌ ಮುನ್ನಡೆಸುತ್ತಿದ್ದಾರೆ. ಕಳೆದ 18 ಆವೃತ್ತಿಗಳಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ಟ್ರೋಫಿ ಗೆದ್ದುಕೊಂಡಿಲ್ಲ. ಆರ್‌ಸಿಬಿ ಈ ಮೊದಲು 3 ಬಾರಿ ಫೈನಲ್‌ ಪ್ರವೇಶಿಸಿದ್ದರೆ ಪಂಜಾಬ್ ಒಂದು ಬಾರಿ ಫೈನಲ್ ಆಡಿ ಸೋಲನುಭವಿಸಿತ್ತು. 2014 ರಲ್ಲಿ ಕೋಲ್ಕತ್ತಾ ವಿರುದ್ಧ ಪಂಜಾಬ್‌ ಕಿಂಗ್ಸ್‌ ಸೋತಿತ್ತು. ಇದೇ ಮೊದಲ ಬಾರಿಗೆ ಎರಡು ತಂಡಗಳು ಫೈನಲಿನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಯಾರೇ ಕಪ್‌ ಗೆದ್ದರೂ ಐಪಿಎಲ್‌ನಲ್ಲಿ (IPL 2025) ಹೊಸ ಚಾಂಪಿಯನ್ ತಂಡದ ಉದಯವಾಗಲಿದೆ. ಇದನ್ನೂ ಓದಿ: IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

    ಲೀಗ್‌ ಹಂತದಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದುಕೊಂಡಿದ್ದವು. ಆದರೆ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ತಂಡವನ್ನು ಸೋಲಿಸಿ ಆರ್‌ಸಿಬಿ ಫೈನಲ್‌ ಪ್ರವೇಶಿಸಿತ್ತು. ಹೀಗಾಗಿ ಎರಡು ತಂಡಗಳ ಮಧ್ಯೆ ಸಮಬಲದ ಹೋರಾಟ ನಡೆಯಲಿದೆ.

  • IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

    IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

    ಅಹಮದಾಬಾದ್‌: ಐಪಿಎಲ್‌ ಫೈನಲ್‌ನಲ್ಲಿ (IPL Fainl) ಆರ್‌ಸಿಬಿ ಚಾಂಪಿಯನ್‌ ಪಟ್ಟ ಅಲಂಕರಿಸಿದರೆ 20 ಕೋಟಿ ರೂ. ನಗದು ಬಹುಮಾನವನ್ನು ಪಡೆಯಲಿದೆ.

    ಐಪಿಎಲ್‌ ಆಡಳಿತ ಸಮಿತಿ ಈ ವರ್ಷ ಎಷ್ಟು ನಗದು ಬಹುಮಾನವನ್ನು (Cah Prize) ನೀಡಲಾಗುತ್ತದೆ ಎಂಬುದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ 2022 ರಲ್ಲಿ ಘೋಷಣೆಯಾದ ನಗದು ಬಹುಮಾನವನ್ನೇ 2023, 2024 ರಲ್ಲಿ ನೀಡಲಾಗಿತ್ತು. ಇದನ್ನೂ ಓದಿ: IPL Final – ಮೀಸಲು ದಿನವೂ ಮಳೆಯಿಂದ ಪಂದ್ಯ ರದ್ದಾದ್ರೆ ಚಾಂಪಿಯನ್‌ ಯಾರು?

    ಯಾವ ತಂಡಕ್ಕೆ ಎಷ್ಟು ಕೋಟಿ?
    ಚಾಂಪಿಯನ್ ತಂಡ 20 ಕೋಟಿ ರೂ., ರನ್ನರ್ ಅಪ್ 13 ಕೋಟಿ ರೂ., ಕ್ವಾಲಿಫೈಯರ್‌ನಲ್ಲಿ 3ನೇ ಸ್ಥಾನ ಪಡೆದ ಮುಂಬೈಗೆ 7 ಕೋಟಿ ರೂ. ಎಲಿಮಿನೇಟರ್‌ನಲ್ಲಿ ಔಟ್‌ಗಿ ನಾಲ್ಕನೇ ಸ್ಥಾನ ಪಡೆದ ಗುಜರಾತ್‌ ಟೈಟಾನ್ಸ್‌ಗೆ 6.5 ಕೋಟಿ ರೂ. ಸಿಗಲಿದೆ. ತಂಡಗಳಿಗೆ ಮಾತ್ರ ಅಲ್ಲದೇ ವೈಯಕ್ತಿಕ ಪ್ರಶಸ್ತಿಗಳಿಗೂ ನಗದು ಬಹುಮಾನಗಳಿವೆ.

    ವೈಯಕ್ತಿಕ ಬಹುಮಾನ ಎಷ್ಟು?
    ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್‌ ಹೊಡೆದ ಬ್ಯಾಟ್ಸ್‌ಮನ್‌, ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌, ಸೂಪರ್ ಸ್ಟ್ರೈಕರ್‌, ಪವರ್ ಪ್ಲೇಯರ್‌, ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ, ಗೇಮ್ ಚೇಂಜರ್ ಪ್ರಶಸ್ತಿಗೆ 10 ಲಕ್ಷ ರೂ. ಸಿಗುತ್ತದೆ. ಇದನ್ನೂ ಓದಿ: IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

    2008 ರಲ್ಲಿ ಐಪಿಎಲ್‌ ಆರಂಭವಾದಾಗ ಗೆದ್ದ ತಂಡಕ್ಕೆ 4.8 ಕೋಟಿ ರೂ. ಸಿಗುತ್ತಿತ್ತು. ರನ್ನರ್ ಅಪ್ ತಂಡಕ್ಕೆ ಅದರ ಅರ್ಧದಷ್ಟು ಹಣ ಸಿಗುತ್ತಿತ್ತು. ಈಗ ಬಹುಮಾನದ ಮೊತ್ತವು ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ.

  • IPL Final – ಮೀಸಲು ದಿನವೂ ಮಳೆಯಿಂದ ಪಂದ್ಯ ರದ್ದಾದ್ರೆ ಚಾಂಪಿಯನ್‌ ಯಾರು?

    IPL Final – ಮೀಸಲು ದಿನವೂ ಮಳೆಯಿಂದ ಪಂದ್ಯ ರದ್ದಾದ್ರೆ ಚಾಂಪಿಯನ್‌ ಯಾರು?

    ಅಹಮದಾಬಾದ್‌: ಐಪಿಎಲ್‌ ಫೈನಲ್‌ (IPL Final) ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ಬೆಂಗಳೂರು ಅಭಿಮಾನಿಗಳು ಆರ್‌ಸಿಬಿ (RCB) ಗೆಲ್ಲಬೇಕೆಂದು ಪ್ರಾರ್ಥನೆ ಮಾಡುತ್ತಿದ್ದಾರೆ. ಆದರೆ ಈ ಪಂದ್ಯಕ್ಕೆ ಮಳೆ (Rain) ಬರಬಹುದೇ ಎಂಬ ಆತಂಕ ಈಗ ಅಭಿಮಾನಿಗಳನ್ನು ಕಾಡುತ್ತಿದೆ.

    ಪಂಜಾಬ್-ಮುಂಬೈ ನಡುವಿನ ಎಲಿಮಿನೇಟರ್‌ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಕೊನೆಗೂ ಮಳೆ ನಿಂತ ಮೇಲೆ ಸುಮಾರು 2:30 ಗಂಟೆಯ ನಂತರ ಪಂದ್ಯ ಆಡಿಸಲಾಗಿತ್ತು. ಮಳೆ ನಿಂತ ಬಳಿಕ ಪೂರ್ಣ 20 ಓವರ್‌ಗಳನ್ನು ಆಡಿಸಲಾಗಿತ್ತು. ಇದನ್ನೂ ಓದಿ: IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

    ಹವಾಮಾನ ವರದಿ ಪ್ರಕಾರ ಅಹಮದಾಬಾದ್‌ನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಮಳೆ ಬಂದರೂ ದೊಡ್ಡ ಮಟ್ಟದ ಸಮಸ್ಯೆ ಎದುರಾಗುವುದಿಲ್ಲ. ಯಾಕೆಂದರೆ ಪ್ರತಿ ದೊಡ್ಡ ಕ್ರಿಕೆಟ್‌ ಟೂರ್ನಿಗೆ ಇರುವಂತೆ ಫೈನಲ್ ಪಂದ್ಯಕ್ಕೆ ಮೀಸಲು ದಿನ ಇರಿಸಲಾಗಿದೆ.

    ಒಂದು ವೇಳೆ ಮಂಗಳವಾರ ಪಂದ್ಯ ಸಾಧ್ಯವಾಗದೇ ಹೋದರೆ ಮೀಸಲು ದಿನವಾದ ಬುಧವಾರ ಪಂದ್ಯ ನಡೆಯಲಿದೆ. ಒಂದು ವೇಳೆ ಎರಡೂ ದಿನ ಪಂದ್ಯ ನಡೆಯದೇ ಇದ್ದರೆ ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ (Punjab Kings) ತಂಡ ಚಾಂಪಿಯನ್ ಆಗಲಿದೆ. ಇದನ್ನೂ ಓದಿ: ಪಂಜಾಬ್‌ ವಿರುದ್ಧ ಫೈನಲ್‌ ಮ್ಯಾಚ್‌ – ಆರ್‌ಸಿಬಿ ಫ್ಯಾನ್ಸ್‌ಗೆ 1 ರೂ.ಗೆ ಆಫರ್‌ ಕೊಟ್ಟ ಸ್ನೂಕರ್‌ ಕ್ಲಬ್

    ಲೀಗ್‌ನಲ್ಲಿ ಆರ್‌ಸಿಬಿ ಮತ್ತು ಪಂಜಾಬ್‌ ತಲಾ 19 ಅಂಕ ಸಂಪಾದಿಸಿದ್ದರೂ ನೆಟ್‌ ರನ್‌ ರೇಟ್‌ನಲ್ಲಿ ಪಂಜಾಬ್‌ ಮುಂದಿದೆ. ಆರ್‌ಸಿಬಿ 0.301 ನೆಟ್‌ ರನ್‌ ರೇಟ್‌ ಹೊಂದಿದ್ದರೆ ಪಂಜಾಬ್‌ 0.372 ಹೊಂದಿದೆ. 0.071 ಅಂಕ ಹೆಚ್ಚಿರುವ ಕಾರಣ ಪಂಜಾಬ್‌ ಚಾಂಪಿಯನ್‌ ಆಗಿ ಹೊರಹೊಮ್ಮಲಿದೆ.