Tag: Punjab Kings

  • IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

    IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

    ಅಹಮದಾಬಾದ್‌: 18ನೇ ಆವೃತ್ತಿಯ ಐಪಿಎಲ್‌ ಆವೃತ್ತಿಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್‌ ಕಿಂಗ್ಸ್‌ vs ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಫೈನಲ್‌ಪಂದ್ಯಕ್ಕೆ ಇಲ್ಲಿ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಎರಡು ದಶಕಗಳಿಂದ ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಕಾದಿರುವ ಬೆಂಗಳೂರು ಮತ್ತು ಪಂಜಾಬ್‌ಗೆ ವಿರಾಟ್‌ ಕೊಹ್ಲಿ (Virat Kohli) ಮತ್ತು ಶ್ರೇಯಸ್‌ ಅಯ್ಯರ್‌ (Shreyas Iyer) ಇಬ್ಬರೂ ಪ್ರಶಸ್ತಿ ಗೆದ್ದುಕೊಡುವ ಉತ್ಸಾಹದಲ್ಲಿ ಎದುರಾಗುತ್ತಿದ್ದಾರೆ. 18 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಕಾತರದಲ್ಲಿವೆ ಎರಡೂ ತಂಡಗಳೂ ಇವೆ.

    ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದ್ದು, ಜಿಯೋ ಸ್ಟಾರ್‌ನಲ್ಲಿ ನೇರಪ್ರಸಾರವಾಗಲಿದೆ. 2ನೇ ಅವಧಿಯಲ್ಲಿ ಇಬ್ಬನಿಯ ಪ್ರಭಾವದಿಂದಾಗಿ ಚೇಸಿಂಗ್ ಸುಲಭವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಟಾಸ್‌ ಗೆಲುವು ನಿರ್ಣಾಯಕವಾಗಲಿದೆ. ಟಾಸ್‌ ಗೆದ್ದ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಳ್ಳುವ ಸಾಧ್ಯತೆಯೇ ಹೆಚ್ಚಾಗಿದೆ. ಉಭಯ ತಂಡಗಳ ನಡುವೆ ಈವರೆಗೆ 36 ಪಂದ್ಯಗಳು ನಡೆದಿದ್ದು, ಇತ್ತಂಡಗಳೂ ತಲಾ 18 ಪಂದ್ಯಗಳಲ್ಲಿ ಗೆಲುವು ಕಂಡಿವೆ.

    ಪ್ರತಿ ವರ್ಷವೂ ʻಈ ಸಲ ಕಪ್‌ ನಮ್ದೇ’ ಎನ್ನುವ ಘೋಷವಾಕ್ಯ ಈ ಬಾರಿಯಾದ್ರೂ ನಿಜವಾಗಲಿ ಅನ್ನೋದು ಅಭಿಮಾನಿಗಳ ಹೆಬ್ಬಯಕೆಯಾಗಿದೆ. ಅದಕ್ಕಾಗಿ ದೇಶಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳು ಈ ಬಾರಿ ಆರ್‌ಸಿಬಿ ಪ್ರಶಸ್ತಿ ಗೆಲ್ಲಲೆಂದು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆರ್‌ಸಿಬಿ ಮತ್ತು ಪಂಜಾಬ್‌ ಕಿಂಗ್ಸ್‌ ಎರಡೂ ತಂಡಗಳು ಇದುವರೆಗೂ ಟ್ರೋಫಿ ಗೆಲ್ಲದೇ ಇರುವುದರಿಂದ 18ನೇ ಆವೃತ್ತಿಯ ಐಪಿಎಲ್‌ ಫೈನಲ್‌ ಮೇಲೆ ಕ್ರೀಡಾಭಿಮಾನಿಗಳ ಚಿತ್ತ ನೆಟ್ಟಿದೆ.

    ಆರ್‌ಸಿಬಿ ಗೆಲ್ಲುವ ಫೇವರೆಟ್
    ಕ್ವಾಲಿಫೈಯರ್‌-1ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (Punjab King) ತಂಡವನ್ನು 8 ವಿಕೆಟ್‌ಗಳಿಂದ ಮಣಿಸುವ ಮೂಲಕ ಆರ್‌ಸಿಬಿ (RCB) ನೇರವಾಗಿ ಫೈನಲ್‌ ಪ್ರವೇಶಿಸಿದೆ. ಹಿಂದಿನ ಆವೃತ್ತಿಗಳಲ್ಲಿನ ನೀರಸ ಪ್ರದರ್ಶನ ಮೀರಿರುವ ಆರ್‌ಸಿಬಿ, ಈ ವರ್ಷ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಅರಂಭಿಕ ಕ್ರಮಾಂಕದಲ್ಲಿ ಕೊಹ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಭದ್ರ ಅಡಿಪಾಯ ಒದಗಿಸಿದ್ದಲ್ಲದೇ, ಈ ಬಾರಿ ಒಟ್ಟು 614 ರನ್‌ ಗಳಿಸಿದ್ದಾರೆ.

    ಬ್ಯಾಟಿಂಗ್‌ನಲ್ಲಿ ಕಿಂಗ್‌ ಕೊಹ್ಲಿ, ಫಿಲ್‌ ಸಾಲ್ಟ್‌, ರಜತ್‌ ಪಾಟಿದಾರ್‌, ಮಯಾಂಕ್‌ ಅಗರ್ವಾಲ್‌, ಜಿತೇಶ್‌ ಶರ್ಮಾ ಬಲ ತುಂಬಿದ್ರೆ ಬೌಲಿಂಗ್‌ನಲ್ಲಿ ಮಾರಕ ವೇಗಿ ಜೋಷ್‌ ಹೇಜಲ್‌ವುಡ್‌, ಯಶ್‌ ದಯಾಳ್‌, ಸುಯಶ್‌, ಕೃನಾಲ್‌ ಪಾಂಡ್ಯ, ರೊಮಾರಿಯೊ ಶೆಫರ್ಡ್‌ ಹೀಗೆ ತಂಡದ ಪ್ರತಿಯೊಬ್ಬ ಸದಸ್ಯನೂ ಫೈನಲ್‌ ತನಕದ ತಂಡದ ಪಯಣದಲ್ಲಿ ತಮ್ಮ ಹೊಣೆಗಾರಿಕೆ ನಿಭಾಯಿಸುವ ಮೂಲಕ ಹೆಗಲು ನೀಡಿದ್ದಾರೆ.

    ಅಯ್ಯರ್‌ ಕಡೆಗಣಿಸುವಂತಿಲ್ಲ
    ಇನ್ನೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನ ಫೈನಲ್‌ವರೆಗೆ ಕೊಂಡೊಯ್ದಿದ್ದ, ಕೆಕೆಆರ್‌ಗೆ ಪ್ರಶಸ್ತಿ ತಂದುಕೊಟ್ಟಿದ್ದ ಶ್ರೇಯಸ್‌ ಅವರನ್ನೂ ಕಡೆಗಣಿಸುವಂತಿಲ್ಲ. 18 ವರ್ಷದ ಐಪಿಎಲ್‌ ಇತಿಹಾಸದಲ್ಲಿ ಮೂರು ತಂಡಗಳನ್ನು ಫೈನಲ್‌ಗೆ ಮುನ್ನಡೆಸಿದ ಕೀರ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ವರ್ಷವೂ ಪಂಜಾಬ್‌ ತಂಡವನ್ನು ಫೈನಲ್‌ ತಲುಪಿಸುವ ಮೂಲಕ ತಮ್ಮ ನಾಯಕತ್ವ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್‌ ಪ್ರಶಸ್ತಿ ಗೆಲುವಿನ ಶ್ರೇಯವನ್ನು ಅಯ್ಯರ್‌ ನೀಡಿರಲಿಲ್ಲ ಎನ್ನುವ ಟೀಕೆಗಳು ಕೇಳಿಬಂದಿದ್ದವು. ಪ್ರಭ್‌ಸಿಮ್ರನ್‌ ಸಿಂಗ್‌, ಜೋಷ್‌ ಇಂಗ್ಲಿಸ್‌, ಪ್ರಿಯಾಂಶ್‌ ಆರ್ಯ, ಶಶಾಂಕ್‌ ಸಿಂಗ್‌, ಅಯ್ಯರ್‌ ಪಡೆಗೆ ಆಸರೆ ಒದಗಿಸಿದ್ದಾರೆ. ಕೈ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್‌ ಸ್ಪಿನ್ನರ್‌ ಯಜ್ವೇಂದ್ರ ಚಾಹಲ್‌ ಕ್ವಾಲಿಫೈಯರ್‌-2 ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ತಂಡ, ಚಾಹಲ್‌ ಫೈನಲ್‌ನಲ್ಲಿ ಕಮ್‌ ಬ್ಯಾಕ್‌ ಮಾಡುವ ನಿರೀಕ್ಷೆಯಲ್ಲಿದೆ.

    ಮಳೆ ಸಾಧ್ಯತೆ ಇದೆಯೇ?
    ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಕ್ವಾಲಿಫೈಯರ್‌ ಪಂದ್ಯ, ಮಳೆಯಿಂದಾಗಿ 2 ಗಂಟೆ ತಡವಾಗಿ ಆರಂಭಗೊಂಡಿತ್ತು. ಫೈನಲ್‌ಗೂ ಸಾಕ್ಷಿಯಾಗಲಿರುವ ಅಹಮದಾಬಾದ್‌ನಲ್ಲಿ ಸದ್ಯದ ಮಾಹಿತಿ ಪ್ರಕಾರ ಮಂಗಳವಾರ ಮಳೆಯ ಸಾಧ್ಯತೆ ಶೇ.62ರಷ್ಟಿದೆ. ಆದರೆ, ಬೆಳಗ್ಗೆ ಅಥವಾ ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ರಾತ್ರಿ ವೇಳೆ ಮಳೆಯ ಸಾಧ್ಯತೆ ಶೇ.5ರಷ್ಟು ಎಂದು ಹವಾಮಾನ ವರದಿ ತಿಳಿಸಿದೆ.

  • ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ

    ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ

    ಅಹಮದಾಬಾದ್‌: ಮುಂಬೈ ವಿರುದ್ಧ ರೋಚಕ ಗೆಲುವು ಸಾಧಿಸಿರುವ ಪಂಜಾಬ್‌ ಕಿಂಗ್ಸ್‌ 11 ವರ್ಷಗಳ ಬಳಿಕ ಐಪಿಎಲ್‌ ಫೈನಲ್‌ ತಲುಪಿದೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್‌ ಪರ ಟ್ರೋಫಿ ತಂದುಕೊಟ್ಟಿದ್ದ ಅಯ್ಯರ್‌ ಈ ಬಾರಿ ಪಂಜಾಬ್‌ ಕಿಂಗ್ಸ್‌ ತಂಡವನ್ನ ಫೈನಲ್‌ವರೆಗೆ ಕೊಂಡೊಯ್ದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಚಲನಚಿತ್ರ ನಿರ್ಮಾಪಕ ಎಸ್‌ಎಸ್‌ ರಾಜಮೌಳಿ (SS Rajamouli), ಟ್ರೋಫಿ ಗೆಲ್ಲಲು ಶ್ರೇಯಸ್‌ ಅಯ್ಯರ್‌ (Shreyas Iyer) ಅರ್ಹರು ಅಂತ ಹೇಳಿದ್ದಾರೆ.

    ಬುಮ್ರಾ ಮತ್ತು ಬೌಲ್ಟ್‌ ಅವರ ಯಾರ್ಕರ್‌ಗಳಮನ್ನ ಥರ್ಡ್‌ ಮ್ಯಾನ್ ಬೌಂಡರಿಗಟ್ಟುವ ಶ್ರೇಯಸ್‌ ಅವರ ಸಾಮರ್ಥ್ಯ ಅದ್ಭುತ. ಅಯ್ಯರ್‌ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವನ್ನ ಫೈನಲ್‌ಗೆ ಕೊಂಡೊಯ್ದಿದ್ದರು ಆದ್ರೆ ಫ್ರಾಂಚೈಸಿ ಅವರನ್ನ ಕೈಬಿಟ್ಟಿತು. ಕೋಲ್ಕತ್ತಾ ತಂಡಕ್ಕೆ ಟ್ರೋಫಿ ತಂದುಕೊಟ್ಟರು, ಆದ್ರೂ ಫ್ರಾಂಚೈಸಿ ಅವರನ್ನ ಕೈಬಿಟ್ಟಿತು. ಇದೀಗ 11 ವರ್ಷಗಳ ಬಳಿಕ ಪಂಜಾಬ್‌ ತಂಡವನ್ನ ಫೈನಲ್‌ಗೆ ಕರೆದೊಯ್ದಿದ್ದಾರೆ, ಈ ವರ್ಷದ ಟ್ರೋಫಿಗೆ ಅವರು ಅರ್ಹರು ಅಂತ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

    ಮುಂದುವರಿದು… ಮತ್ತೊಂದೆಡೆ, ವಿರಾಟ್‌ ಕೊಹ್ಲಿ (Virat Kohli) ವರ್ಷದಿಂದ ವರ್ಷಕ್ಕೆ ಪ್ರದರ್ಶನ ನೀಡುತ್ತಿದ್ದಾರೆ. ಸಾವಿರಾರು ಕಲೆಹಾಕಿದ್ದಾರೆ. ಅವರೂ ಕೂಡ ಈ ಟ್ರೋಫಿಗೆ ಅರ್ಹರು. ಫಲಿತಾಂಶ ಏನೇ ಇರಲಿ…. ಹೃದಯ ವಿದ್ರಾವಕವಾಗಲಿದೆ ಎಂದು ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

    ಮಳೆಯಿಂದ 2 ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 203 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್‌ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನೂ 6 ಎಸೆತ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್‌ ಆರ್ಯ 20 ರನ್‌, ಪ್ರಭುಸಿಮ್ರಾನ್‌ ಸಿಂಗ್‌ 6 ರನ್‌, ಬುಮ್ರಾ ಮೊದಲ ಓವರ್‌ನಲ್ಲಿ 20 ರನ್‌ ಹೊಡೆದ ಜೋಶ್‌ ಇಂಗ್ಲಿಸ್‌ 38 ರನ್‌(21 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದಾಗ ಪಂಜಾಬ್‌ ಸ್ಕೋರ್‌ 3 ವಿಕಟ್‌ ನಷ್ಟಕ್ಕೆ 72 ರನ್‌ ಗಳಿಸಿತ್ತು. ಇದನ್ನೂ ಓದಿ: ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

    ಒಂದು ಹಂತದಲ್ಲಿ ಸಂಕಷ್ಟದಲ್ಲಿದ್ದರೂ ಶ್ರೇಯಸ್‌ ಅಯ್ಯರ್‌ ಮತ್ತು ನೆಹಲ್‌ ವಧೇರಾ 47 ಎಸೆತಗಳಲ್ಲಿ 84 ರನ್‌ ಜೊತೆಯಾಟವಾಡಿ ತಂಡವನ್ನು ಪಾರು ಮಾಡಿದರು. ವಧೇರಾ 48 ರನ್‌(29 ಎಸೆತ, 4 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ನಾಯಕನ ಆಟವಾಡಿದ ಶ್ರೇಯಸ್‌ ಅಯ್ಯರ್‌ ಔಟಾಗದೇ 87 ರನ್‌(41 ಎಸೆತ, 5 ಬೌಂಡರಿ, 8 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು. ಅತ್ಯುತ್ತಮ ಆಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟ ಶ್ರೇಯಸ್‌ ಅಯ್ಯರ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

    11 ವರ್ಷಗಳ ಬಳಿಕ ಫೈನಲ್‌:
    ಪಂಜಾಬ್ ಐಪಿಎಲ್‌ನಲ್ಲಿ 2ನೇ ಬಾರಿ ಐಪಿಎಲ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. 2014 ರಲ್ಲಿ ಕೋಲ್ಕತ್ತಾ ವಿರುದ್ಧ ಫೈನಲ್‌ನಲ್ಲಿ ಸೋತು ಪಂಜಾಬ್‌ ರನ್ನರ್‌ ಅಪ್‌ ಅಗಿತ್ತು. ಇದನ್ನೂ ಓದಿ: ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ಐಪಿಎಲ್‌ನಲ್ಲಿ ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

  • ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

    ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

    ಅಹಮದಾಬಾದ್‌: ಈ ಬಾರಿ ಐಪಿಎಲ್‌ನಲ್ಲಿ (IPL 2025) ಹೊಸ ಚಾಂಪಿಯನ್ ತಂಡದ ಉದಯವಾಗಲಿದೆ. ಅಷ್ಟೇ ಅಲ್ಲದೇ ಈ ಬಾರಿ ಐಪಿಎಲ್‌ನಲ್ಲಿ ಆರ್‌ಸಿಬಿ (RCB) ಮತ್ತು ಪಂಜಾಬ್‌ (Punjab Kings) 4 ಬಾರಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ವಿಶೇಷ.

    ಕಳೆದ 18 ಆವೃತ್ತಿಗಳಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ಟ್ರೋಫಿ ಗೆದ್ದುಕೊಂಡಿಲ್ಲ. ಆರ್‌ಸಿಬಿ ಈ ಮೊದಲು 3 ಬಾರಿ ಫೈನಲ್‌ ಪ್ರವೇಶಿಸಿದ್ದರೆ ಪಂಜಾಬ್ ಒಂದು ಬಾರಿ ಫೈನಲ್ ಆಡಿ ಸೋಲನುಭವಿಸಿತ್ತು. 2014 ರಲ್ಲಿ ಕೋಲ್ಕತ್ತಾ ವಿರುದ್ಧ ಪಂಜಾಬ್‌ ಕಿಂಗ್ಸ್‌ ಸೋತಿತ್ತು. ಇದೇ ಮೊದಲ ಬಾರಿಗೆ ಎರಡು ತಂಡಗಳು ಫೈನಲಿನಲ್ಲಿ ಮುಖಾಮುಖಿಯಾಗುತ್ತಿವೆ.

    ಲೀಗ್‌ ಹಂತದಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದುಕೊಂಡಿದ್ದವು. ಆದರೆ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ತಂಡವನ್ನು ಸೋಲಿಸಿ ಆರ್‌ಸಿಬಿ ಫೈನಲ್‌ ಪ್ರವೇಶಿಸಿತ್ತು. ಹೀಗಾಗಿ ಎರಡು ತಂಡಗಳ ಮಧ್ಯೆ ಸಮಬಲದ ಹೋರಾಟ ನಡೆಯಲಿದೆ. ಹೀಗಾಗಿ ಇಲ್ಲಿ ಆರ್‌ಸಿಬಿ ಮತ್ತು ಪಂಜಾಬ್‌ ತಂಡ ಈ ಹಿಂದೆ ಆಡಿದ ಫೈನಲ್‌ ಪಂದ್ಯಗಳ ಕಿರು ಮಾಹಿತಿಯನ್ನು ನೀಡಲಾಗಿದೆ.  ಇದನ್ನೂ ಓದಿ: ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

    2009 – ಫೈನಲ್‌ನಲ್ಲಿ ವಿರೋಚಿತ ಸೋಲು
    2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು.

    2011 ಚೆನ್ನೈ ವಿರುದ್ಧ ಎರಡು ಬಾರಿ ಸೋಲು
    2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಇದನ್ನೂ ಓದಿ:ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

    2016 – 8 ರನ್‌ಗಳಿಂದ  ಸೋಲು
    2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

    2014 – ಕೋಲ್ಕತ್ತಾ ವಿರುದ್ಧ ಸೋಲು
    ಅಂಕಪಟ್ಟಿಯಲ್ಲಿ 22 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದ ಪಂಜಾಬ್‌ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಮೊದಲು ಬ್ಯಾಟ್‌ ಬೀಸಿದ್ದ ಪಂಜಾಬ್‌ 4 ವಿಕೆಟ್‌ ನಷ್ಟಕ್ಕೆ 199 ರನ್‌ ಹೊಡೆದಿತ್ತು. ವೃದ್ಧಿಮಾನ್‌ ಸಹ ಅಜೇಯ 115 ರನ್‌ ಹೊಡೆದಿದ್ದರು. ನಂತರ ಬ್ಯಾಟ್‌ ಬೀಸಿದ್ದ ಕೋಲ್ಕತ್ತಾ ಇನ್ನೂ 3 ಎಸೆತ ಬಾಕಿ ಇರುವಂತೆಯೇ 7 ವಿಕೆಟ್‌ ನಷ್ಟಕ್ಕೆ 200 ರನ್‌ ಹೊಡೆದು ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. ಕೋಲ್ಕತ್ತಾ ಪರ ಕನ್ನಡಿಗ ಮನೀಷ್‌ ಪಾಂಡೆ 50 ಎಸೆತಗಳಲ್ಲಿ 94 ರನ್‌ ಹೊಡೆದಿದ್ದರು. ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂಜಾಬ್‌ನ ಮ್ಯಾಕ್ಸ್‌ವೆಲ್‌ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು.

  • ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

    ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

    – ಶ್ರೇಯಸ್‌ ಅಯ್ಯರ್‌ ಸ್ಫೋಟಕ ಅರ್ಧಶತಕ
    – 2ನೇ ಬಾರಿ ಫೈನಲ್‌ ಪ್ರವೇಶಿಸಿದ ಪಂಜಾಬ್‌

    ಅಹಮಾದಾಬಾದ್‌: ಕ್ವಾಲಿಫೈಯರ್‌-2ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ರೋಚಕ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಪಂಜಾಬ್‌ (Punjab Kings) ಐಪಿಎಲ್‌ ಫೈನಲ್‌ಗೆ (IPL Final) ಪ್ರವೇಶಿಸಿದೆ. 5 ಬಾರಿ ಚಾಂಪಿಯನ್ ಮುಂಬೈ ತಂಡವನ್ನು ಬಗ್ಗು ಬಡಿದ ಪಂಜಾಬ್‌ 2ನೇ ಬಾರಿ ಫೈನಲ್‌ಗೆ ತಲುಪಿದ್ದು ನಾಳೆ ಆರ್‌ಸಿಬಿಯನ್ನು (RCB) ಎದುರಿಸಲಿದೆ

    ಮಳೆಯಿಂದ 2 ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 203 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್‌ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನೂ 6 ಎಸೆತ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್‌ ಆರ್ಯ 20 ರನ್‌, ಪ್ರಭುಸಿಮ್ರಾನ್‌ ಸಿಂಗ್‌ 6 ರನ್‌, ಬುಮ್ರಾ ಮೊದಲ ಓವರ್‌ನಲ್ಲಿ 20 ರನ್‌ ಹೊಡೆದ ಜೋಶ್‌ ಇಂಗ್ಲಿಸ್‌ 38 ರನ್‌(21 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದಾಗ ಪಂಜಾಬ್‌ ಸ್ಕೋರ್‌ 3 ವಿಕಟ್‌ ನಷ್ಟಕ್ಕೆ 72 ರನ್‌ ಗಳಿಸಿತ್ತು. ಇದನ್ನೂ ಓದಿ: ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

    ಒಂದು ಹಂತದಲ್ಲಿ ಸಂಕಷ್ಟದಲ್ಲಿದ್ದರೂ ಶ್ರೇಯಸ್‌ ಅಯ್ಯರ್‌ ಮತ್ತು ನೆಹಲ್‌ ವಧೇರಾ 47 ಎಸೆತಗಳಲ್ಲಿ 84 ರನ್‌ ಜೊತೆಯಾಟವಾಡಿ ತಂಡವನ್ನು ಪಾರು ಮಾಡಿದರು. ವಧೇರಾ 48 ರನ್‌(29 ಎಸೆತ, 4 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ನಾಯಕನ ಆಟವಾಡಿದ ಶ್ರೇಯಸ್‌ ಅಯ್ಯರ್‌ ಔಟಾಗದೇ 87 ರನ್‌(41 ಎಸೆತ, 5 ಬೌಂಡರಿ, 8 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು. ಅತ್ಯುತ್ತಮ ಆಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟ ಶ್ರೇಯಸ್‌ ಅಯ್ಯರ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

     

    11 ವರ್ಷಗಳ ಬಳಿಕ ಫೈನಲ್‌:
    ಪಂಜಾಬ್ ಐಪಿಎಲ್‌ನಲ್ಲಿಎರಡನೇ ಬಾರಿ ಫೈನಲ್‌ ಪ್ರವೇಶಿಸಿದೆ. 11 ವರ್ಷಗಳ ಹಿಂದೆ 2014 ರಲ್ಲಿ ಕೋಲ್ಕತ್ತಾ ವಿರುದ್ಧ ಫೈನಲ್‌ನಲ್ಲಿ ಸೋತು ಪಂಜಾಬ್‌ ರನ್ನರ್‌ ಅಪ್‌ ಅಗಿತ್ತು.

  • ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

    ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

    ಅಹಮದಾಬಾದ್‌: ಪಂಜಾಬ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವೆ ಇಂದು ಕ್ವಾಲಿಫೈಯರ್‌-2 ಕದನ ನಡೆಯಲಿದೆ. ಗೆದ್ದ ತಂಡ ಜೂನ್‌ 3ರಂದು ಆರ್‌ಸಿಬಿ (RCB) ವಿರುದ್ಧ ಟ್ರೋಫಿಗಾಗಿ ಗುದ್ದಾಡಲಿದೆ.

    ಇಂದು ಅಹಮದಾಬಾದ್‌ನಲ್ಲಿ 2ನೇ ಕ್ವಾಲಿಫೈಯರ್ (Qualifier 2 IPL) ಪಂದ್ಯ ನಡೆಯಲಿದ್ದು, ರಾತ್ರಿ 7:30ಕ್ಕೆ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಪ್ರಶಸ್ತಿ ಸುತ್ತಿನ ಕಾದಾಟ ನಡೆಸಲಿದೆ. ಈ ನಡುವೆ ಟ್ರೋಫಿ ಗೆಲ್ಲುವ ಲೆಕ್ಕಾಚಾರವೂ ಶುರುವಾಗಿದೆ. ಇದನ್ನೂ ಓದಿ: ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

    ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ಪಂದ್ಯದ ಚಿತ್ರಣವನ್ನೇ ಬುಡಮೇಲು ಮಾಡುವ ಸಾಮರ್ಥ್ಯ ಹೊಂದಿವೆ. ಪಂಜಾಬ್‌ ಹಾಗೂ ಮುಂಬೈ ಒಟ್ಟಾರೆ ಐಪಿಎಲ್‌ನಲ್ಲಿ 33 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಮುಂಬೈ 17 ಪಂದ್ಯಗಳನ್ನು ಗೆದ್ದಿದೆ. ಪಂಜಾಬ್‌ 16 ಬಾರಿ ಗೆಲುವು ಸಾಧಿಸಿದೆ. ಆದ್ರೆ 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಬಲಿಷ್ಠ ಪಡೆಯನ್ನ ಹೊಂದಿದ್ದು, ಪ್ರಶಸ್ತಿಗೆ ಮುತ್ತಿಡುವ ಕನಸು ಕಂಡಿದೆ.

    ಇತ್ತ ಆರಂಭಿಕ 5 ಪಂದ್ಯಗಳಲ್ಲಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್‌ ನಿರೀಕ್ಷೆಗೂ ಮೀರಿದ ಪ್ರದರ್ಶನದೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಎಲಿಮಿನೇಟರ್‌-1ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನ ಹೊರದಬ್ಬಿ, ಕ್ವಾಲಿಫೈಯರ್‌-2ಗೆ ಲಗ್ಗೆಯಿಟ್ಟಿದೆ. ಇದನ್ನೂ ಓದಿ: ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈಗಾಗಲೇ 42 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಈ ವೇಳೆ ಮೊದಲು ಹಾಗೂ ಎರಡನೇ ಬಾರಿಗೆ ಬ್ಯಾಟ್ ಮಾಡಿದ ತಂಡಗಳು ತಲಾ 21 ಬಾರಿ ಗೆದ್ದಿವೆ. ಈ ಮೈದಾನದಲ್ಲಿ 243 ರನ್‌ ಗರಿಷ್ಠ ಸ್ಕೋರ್ ಆಗಿದೆ. ಇನ್ನು ಈ ಅಂಗಳದಲ್ಲಿ 204 ರನ್‌ವರೆಗೆ ಚೇಸಿಂಗ್‌ ಆಗಿದೆ. ಈ ಆವೃತ್ತಿಯಲ್ಲಿ ಈಗಾಗಲೇ ಈ ಮೈದಾನದಲ್ಲಿ 7 ಪಂದ್ಯಗಳು ನಡೆದಿದ್ದು, ಬ್ಯಾಟಿಂಗ್ ಮೊದಲ ಬಾರಿಗೆ ತಂಡ 6 ಪಂದ್ಯಗಳನ್ನು ಗೆದ್ದಿದೆ.

    2023ರ ಆವೃತ್ತಿಯಲ್ಲಿ ಇದೇ ಪಿಚ್‌ನಲ್ಲಿ ಚೆನ್ನೈ 15 ಓವರ್‌ಗಳಲ್ಲಿ 170 ರನ್‌ ಚೇಸ್‌ ಮಾಡಿ 5ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    ಸ್ಟಾರ್‌ ಬ್ಯಾಟರ್‌ಗಳೇ ಬಲ:
    ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ರೋಹಿತ್ ಶರ್ಮಾ, ಜಾನಿ ಬೇರ್‌ಸ್ಟೋ ಇನಿಂಗ್ಸ್ ಆರಂಭಿಸಲಿದ್ದು, ದೊಡ್ಡ ಮೊತ್ತಕ್ಕೆ ಈ ಜೋಡ ಭದ್ರ ಅಡಿಪಾಯ ಒಡ್ಡುವ ಸಾಧ್ಯತೆಗಳಿವೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಈ ಬಾರಿ ಫಾರ್ಮ್‌ ಸಾಬೀತು ಮಾಡಿದ್ದಾರೆ. ಮೊದಲು ಬ್ಯಾಟ್‌ ಮಾಡುವ ತಂಡ ದೊಡ್ಡ ಮೊತ್ತ ಕಲೆಹಾಕಿದ್ರೆ ಗೆಲುವು ಸಾಧ್ಯತೆಯಿದೆ. ಜಸ್ಪ್ರಿತ್ ಬುಮ್ರಾ, ಟ್ರೆಂಟ್‌ ಬೌಲ್ಟ್‌, ಅಶ್ವನಿ ಕುಮಾರ್‌ ವೇಗದ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಲಿದ್ದು, ಮಿಚೆಲ್‌ ಸ್ಯಾಂಟ್ನರ್ ಸ್ಪಿನ್ ಜಾದು ಸಹ ವರ್ಕೌಟ್‌ ಆಗಲಿದೆ ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ. ಇನ್ನೂ ಪಂಜಾಬ್‌ನಲ್ಲೂ ಶ್ರೇಯಸ್‌ ಅಯ್ಯರ್‌, ಪ್ರಿಯಾಂಶ್‌ ಆರ್ಯ, ಸ್ಟೋಯಿನಿಸ್‌, ಶಶಾಂಕ್‌ ಸಿಂಗ್‌ ಅವರಂತಹ ಬ್ಯಾಟಿಂಗ್‌ ಪಡೆಯೇ ಇದೆ.

    ಮುಂಬೈ ಸಂಭಾವ್ಯ ಪ್ಲೇಯಿಂಗ್‌-11
    ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ರಿಚರ್ಡ್ ಗ್ಲೀಸನ್/ರೀಸ್ ಟಾಪ್ಲೆ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್. ಇದನ್ನೂ ಓದಿ: IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

    ಪಂಜಾವ್‌ ಸಂಭಾವ್ಯ ಪ್ಲೇಯಿಂಗ್‌-11
    ಪ್ರಭ್‌ಸಿಮ್ರನ್‌ ಸಿಂಗ್, ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಕೈಲ್ ಜೈಮಿಸನ್, ಯುಜುವೇಂದ್ರ ಚಾಹಲ್, ವಿಜಯಕುಮಾರ್ ವೈಶಾಖ್.

  • ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಚಂಡೀಗಢ: ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ನಡೆದ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಭರ್ಜರಿ ಗೆಲುವು ಕಂಡಿದೆ. ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಬಾರಿಸುತ್ತಾ ರನ್‌ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದ ಆರ್‌ಸಿಬಿ ಇನ್ನೂ 10 ಓವರ್‌ಗಳು ಬಾಕಿಯಿರುವಾಗಲೇ ಗೆದ್ದು, ಫೈನಲ್‌ ತಲುಪಿತು.

    ಈ ನಡುವೆ ಮಹಿಳಾ ಅಭಿಮಾನಿಯೊಬ್ಬರು (RCB Women Fan) ವಿಚ್ಛೇದನದ ಕುರಿತು ವಿಶೇಷ ಭಿತ್ತಿಪತ್ರ ಪ್ರದರ್ಶಿಸಿರುವುದು ಗಮನಸೆಳೆದಿದೆ. ಹೌದು. 17 ಆವೃತ್ತಿ ಕಳೆದರೂ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಆರ್‌ಸಿಬಿಗೆ ಅಭಿಮಾನಿಗಳ ಕೊರತೆಯಂತೂ ಆಗಿಲ್ಲ. ಆದರೀಗ ತಂಡ ಫೈನಲ್‌ಗೆ ತಲುಪಿದ್ದು, ಈ ಸಲವೂ ಟ್ರೋಫಿ ಗೆಲ್ಲದಿದ್ದರೆ ಪತಿಗೆ ವಿಚ್ಛೇದನ (Devorce) ನೀಡುವುದಾಗಿ ಮಹಿಳೆಯೊಬ್ಬರು ಸ್ಟೇಡಿಯಂನಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಿರುವುದು ಕಂಡುಬಂದಿದೆ. ಇದು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

    ಇತ್ತೀಚೆಗೆ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ನಡೆದ ಪಂದ್ಯದ ವೇಳೆಯೂ ಅಭಿಮಾನಿಯೊಬ್ಬರು ನಾನು, ಆರ್‌ಸಿಬಿ ಕಪ್‌ ಗೆಲ್ಲುವವರೆಗೆ ಮದುವೆಯಾಗೋದಿಲ್ಲ ಅಂತ ಪೋಸ್ಟರ್‌ ಹಿಡಿದುಕೊಂಡಿದ್ದರು. ಇದಕ್ಕೂ ಮುನ್ನ 2022 ಐಪಿಎಲ್‌ ಟೂರ್ನಿ ವೇಳೆಯೂ ಮಹಿಳಾ ಅಭಿಮಾನಿಯೊಬ್ಬರು ಆರ್‌ಸಿಬಿ ಕಪ್‌ ಗೆಲ್ಲೋವರೆಗೆ ನಾನು ಮದುವೆಯಾಗಲ್ಲ ಅಂತ ಪೋಸ್ಟರ್‌ ಹಿಡುಕೊಂಡಿದ್ದರು. ಆಗ ಇದು ಭಾರೀ ಟ್ರೆಂಡ್‌ ಕ್ರೆಯೆಟ್‌ ಮಾಡಿತ್ತು. ಇದನ್ನೂ ಓದಿ: RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    ಚಂಡೀಗಢದ ಮುಲ್ಲನಪುರದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತ ಪಂಜಾಬ್‌ ಮೊದಲು ಕ್ರೀಸ್‌ಗಿಳಿದು 101 ರನ್‌ಗಳಿಗೆ ಆಲೌಟ್‌ ಆಯಿತು. 102 ರನ್‌ಗಳ ಸುಲಭಗುರಿ ಬೆನ್ನಟ್ಟಿದ ಆರ್‌ಸಿಬಿ 10 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ ಬಾರಿಸಿ ಫೈನಲ್‌ಗೆ ಲಗ್ಗೆಯಿಟ್ಟಿತು. ಇದನ್ನೂ ಓದಿ: IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

  • ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

    ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

    ಚಂಡೀಗಢ: ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ (RCB) ವಿರುದ್ಧ ಪಂಜಾಬ್‌ (PBKS) ಮತ್ತೊಂದು ಕೆಟ್ಟ ದಾಖಲೆ ಬರೆದಿದೆ.

    ಚಂಡೀಗಢದ ಮುಲ್ಲನಪುರದಲ್ಲಿ ನಡೆಯುತ್ತಿರುವ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೇವಲ 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ ಆಯಿತು. ಆ ಮೂಲಕ ಐಪಿಎಲ್‌ ಇತಿಹಾಸದಲ್ಲೇ 6 ನೇ ಬಾರಿಗೆ ಅಲ್ಪ ಮೊತ್ತದ ಕೆಟ್ಟ ದಾಖಲೆ ಬರೆಯಿತು. ಆರ್‌ಸಿಬಿ ವಿರುದ್ಧವೇ ಮೂರನೇ ಬಾರಿಗೆ ಅಲ್ಪ ಮೊತ್ತದ ಕೆಟ್ಟ ದಾಖಲೆಯನ್ನು ಪಂಜಾಬ್‌ ತನ್ನದಾಗಿಸಿಕೊಂಡಿದೆ. ಇದನ್ನೂ ಓದಿ: RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

    2015 ರಲ್ಲಿ (13.4 ಓವರ್‌) ಮತ್ತು 2018ರಲ್ಲಿ ಆರ್‌ಸಿಬಿ ವಿರುದ್ಧ 88 ರನ್‌ಗೆ (15.1 ಓವರ್‌ಗೆ) ಪಂಜಾಬ್‌ ಆಲೌಟ್‌ ಆಗಿತ್ತು.

    ಗುರುವಾರದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಪರಾಕ್ರಮ ಮೆರೆದಿದ್ದಾರೆ. ಪಂಜಾಬ್‌ ತಂಡ 14.1 ಓವರ್‌ಗಳಲ್ಲಿ 101 ರನ್‌ಗೆ ಆಲೌಟ್‌ ಆಗಿದೆ.

    ಜೋಶ್ ಹ್ಯಾಜಲ್‌ವುಡ್ ಮತ್ತು ಸುಯಾಶ್ ಶರ್ಮಾ ತಲಾ ಮೂರು ವಿಕೆಟ್ ಪಡೆದರೆ, ಯಶ್ ದಯಾಳ್ ಎರಡು ವಿಕೆಟ್ ಪಡೆದು ಪಂಜಾಬ್‌ನ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕಿದರು. ಭುವನೇಶ್ವರ್ ಕುಮಾರ್ ಮತ್ತು ರೊಮಾರಿಯೊ ಶೆಫರ್ಡ್ ತಲಾ ಒಂದು ವಿಕೆಟ್ ಪಡೆದರು. ಇದನ್ನೂ ಓದಿ: ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಪಂಜಾಬ್‌ ಕಿಂಗ್ಸ್‌ ಅಲ್ಪಮೊತ್ತದ ಕೆಟ್ಟ ದಾಖಲೆ ಪಟ್ಟಿ ಹೀಗಿದೆ..
    15.5 ಓವರ್‌ಗಳಲ್ಲಿ 73/10 vs RPSG (ಪುಣೆ, 2017)
    13.4 ಓವರ್‌ಗಳಲ್ಲಿ 88/10 vs RCB (ಬೆಂಗಳೂರು, 2015)
    15.1 ಓವರ್‌ಗಳಲ್ಲಿ 88/10 vs RCB (ಇಂದೋರ್, 2018)
    20 ಓವರ್‌ಗಳಲ್ಲಿ 92/8 vs CSK (ಡರ್ಬನ್, 2009)
    20 ಓವರ್‌ಗಳಲ್ಲಿ 95/9 vs CSK (ಚೆನ್ನೈ, 2015)

  • RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

    RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

    ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ (IPL 2025) ಇನ್ನೇನು ಕೊನೆಯ ಹಂತ ತಲುಪಿದೆ. ಲೀಗ್‌ ಸುತ್ತಿನ ಎಲ್ಲಾ ಪಂದ್ಯಗಳು ಮುಕ್ತಾಯಗೊಂಡಿದ್ದು,‌ ಇಂದು ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸೆಣಸಲು ಸಜ್ಜಾಗಿವೆ.

    11 ವರ್ಷಗಳ ಬಳಿಕ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಈ ಬಾರಿ ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿಯುವ ತವಕದಲ್ಲಿದೆ. 2011ರಲ್ಲಿ ಮೊದಲ ಬಾರಿಗೆ ಜಾರ್ಜ್ ಬೈಲಿ ನಾಯಕತ್ವದಲ್ಲಿ ಫೈನಲ್‌ ಪ್ರವೇಶಿಸಿದ್ದ ಪಂಜಾಬ್‌ ತಂಡ ಕೆಕೆಆರ್‌ ವಿರುದ್ಧ 3 ವಿಕೆಟ್‌ಗಳ ವಿರೋಚಿತ ಸೋಲು ಕಂಡಿತ್ತು. ಇನ್ನೂ ಐಪಿಎಲ್‌ನ ಜನಪ್ರಿಯ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ಮೂರು ಬಾರಿ ಫೈನಲ್‌ ಪ್ರವೇಶಿಸಿಯೂ ಸೋಲು ಕಂಡಿತ್ತು. ಈ ಸಲ 10ನೇ ಬಾರಿಗೆ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದ್ದು, 18ನೇ ಆವೃತ್ತಿಯಲ್ಲಾದರೂ ಟ್ರೋಫಿ ಗೆಲ್ಲುವ ಕನಸು ನನಸು ಮಾಡಿಕೊಳ್ಳುತ್ತಾ ಅನ್ನೋದನ್ನು ಕಾದುನೋಡಬೇಕಿದೆ. ಹಾಗಾದ್ರೆ ಮೂರು ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಹೋರಾಟ ಹೇಗಿತ್ತು ಅನ್ನೋದನ್ನ ತಿಳಿಯಬೇಕಿದ್ರೆ ಮುಂದೆ ಓದಿ… ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    ಫೈನಲ್‌ನಲ್ಲಿ ವಿರೋಚಿತ ಸೋಲು
    2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು. ಇದನ್ನೂ ಓದಿ: ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

    ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
    2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    8 ರನ್‌ಗಳಿಂದ ಕೈತಪ್ಪಿದ ಟ್ರೋಫಿ 
    2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

    18ನೇ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ 9 ಪಂದ್ಯ ಗೆದ್ದಿರುವ ಆರ್‌ಸಿಬಿ ಟ್ರೋಫಿ ಎತ್ತಿ ಹಿಡಿಯಲೇಬೇಕೆಂದು ಪಣ ತೊಟ್ಟಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

  • IPL 2025 | ಗೆಲುವಿನ ವಿದಾಯ ಹೇಳಿದ ಡೆಲ್ಲಿ ಕ್ಯಾಪಿಟಲ್ಸ್‌ – ಪಂಜಾಬ್‌ ವಿರುದ್ಧ 6 ವಿಕೆಟ್‌ಗಳ ಜಯ

    IPL 2025 | ಗೆಲುವಿನ ವಿದಾಯ ಹೇಳಿದ ಡೆಲ್ಲಿ ಕ್ಯಾಪಿಟಲ್ಸ್‌ – ಪಂಜಾಬ್‌ ವಿರುದ್ಧ 6 ವಿಕೆಟ್‌ಗಳ ಜಯ

    ಜೈಪುರ: ಸಂಘಟಿತ ಬೌಲಿಂಗ್‌ ಬ್ಯಾಟಿಂಗ್‌ ಪ್ರದರ್ಶನದ ನೆರವಿನೊಂದಿಗೆ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡ ಆರು ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 18ನೇ ಆವೃತ್ತಿಗೆ ವಿದಾಯ ಹೇಳಿದೆ. ಆದ್ರೆ 13 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 17 ಅಂಕ ಪಡೆದಿರುವ ಪಂಜಾಬ್‌ 2ನೇ ಸ್ಥಾನ ಕಾಯ್ದುಕೊಂಡಿದೆ.

    ಇಲ್ಲಿನ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ 66ನೇ ಐಪಿಎಲ್ (IPL 2025) ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಈ ಮೂಲಕ ಡೆಲ್ಲಿಗೆ 207 ರನ್‌ಗಳ ಗುರಿ ನೀಡಿತು. ಪಂಜಾಬ್ ತಂಡ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 19.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ ಗೆಲುವು ಸಾಧಿಸಿತು.

    ತಂಡದಿಂದ ಮೊದಲು ಬ್ಯಾಟ್ ಬೀಸಿದ ಕೆಎಲ್ ರಾಹುಲ್ ಹಾಗೂ ಫಾಫ್ ಡುಪ್ಲೆಸಿಸ್ ಜೊತೆಯಾಟವಾಡಿ 33 ಎಸೆತಗಳಿಗೆ 55 ರನ್ ಗಳಿಸಿಕೊಟ್ಟರು. ಕೆಎಲ್ ರಾಹುಲ್ 21 ಎಸೆತಕ್ಕೆ 35 ರನ್ (6 ಬೌಂಡರಿ, 1 ಸಿಕ್ಸ್) ಗಳಿಸಿ ಮೊದಲ ವಿಕೆಟ್ ಒಪ್ಪಿಸಿದರೇ, ತಂಡದ ನಾಯಕ ಫಾಫ್ ಡುಪ್ಲೆಸಿಸ್ 15 ಎಸೆತಗಳಿಗೆ 23 ರನ್ (2 ಬೌಂಡರಿ, 1 ಸಿಕ್ಸ್) ಗಳಿಸಿ ಔಟಾದರು. ಸೇದಿಕುಲ್ಲಾ ಅಟಲ್ 16 (22) ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಕರುಣ್ ನಾಯರ್ 27 ಎಸೆತಗಳಿಗೆ 44 ರನ್ (5 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಕರುಣ್ ನಾಯರ್ ಹಾಗೂ ಸಮೀರ್ ರಿಜ್ವಿ ಜೊತೆಯಾಟವಾಡಿ 30 ಎಸೆತಗಳಿಗೆ 62 ರನ್ ಗಳಿಸಿಕೊಟ್ಟು ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ರಿಜ್ವಿ 25 ಎಸೆತಗಳಿಗೆ 58 ರನ್ (3 ಬೌಂಡರಿ, 5 ಸಿಕ್ಸ್) ಗಳಿಸಿಕೊಟ್ಟು ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

    ಮೊದಲಿಗೆ ಫೀಲ್ಡಿಗಿಳಿದ ಪಂಜಾಬ್ ತಂಡದ ಪ್ರಿಯಾಂಶ್ ಆರ್ಯ 9 ಎಸೆತಗಳಿಗೆ 6 ರನ್ (1 ಫೋರ್) ಗಳಿಸಿ ಔಟಾದರು. ಬಳಿಕ ಪ್ರಭಸಿಮ್ರನ್ ಸಿಂಗ್ ಹಾಗೂ ಜೋಶ್ ಇಂಗ್ಲಿಸ್ ಜೊತೆಯಾಟವಾಡಿ 21 ಎಸೆತಗಳಿಗೆ 47 ರನ್ ಸಿಡಿಸಿ ತಂಡವನ್ನು ಮುನ್ನಡೆಸಿದರು. ಜೋಶ್ ಇಂಗ್ಲಿಸ್ 12 ಎಸೆತಗಳಿಗೆ 32 ರನ್ (3 ಫೋರ್, 2 ಸಿಕ್ಸ್) ಗಳಿಸಿ ಪೆವಿಲಿಯನ್‌ಗೆ ಮರಳಿದರು. ಪ್ರಭಸಿಮ್ರನ್ 18 ಎಸೆತಗಳಿಗೆ 28 ರನ್ (4 ಫೋರ್, 1 ಸಿಕ್ಸ್) ಗಳಿಸಿ ಔಟಾದರು. ಶಶಾಂಕ್ ಸಿಂಗ್ 10 (11) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್‌ಗಿಳಿದ ತಂಡದ ನಾಯಕ ಶ್ರೇಯಸ್ ಅಯ್ಯರ್ 34 ಎಸೆತಗಳಿಗೆ 53 ರನ್ (5 ಫೋರ್, 2 ಸಿಕ್ಸ್) ಕಲೆಹಾಕಿ ಮಿಂಚಿದರು. ಶ್ರೇಯಸ್ ಐಯ್ಯರ್ ಹಾಗೂ ನೇಹಲ್ ವಧೇರಾ ಜೊತೆಯಾಟವಾಡಿ 28 ಎಸೆತಗಳಿಗೆ 41 ರನ್ ಗಳಿಸಿಕೊಟ್ಟರು. ನೇಹಲ್ ವಧೇರಾ 16 (16) ರನ್ ಗಳಿಸಿ ಔಟಾದರು. ಮಾರ್ಕಸ್ ಸ್ಟೊಯಿನಿಸ್ 16 ಬಾಲ್‌ಗಳಿಗೆ 44 ರನ್ (3 ಫೋರ್, 4 ಸಿಕ್ಸ್) ಹಾಗೂ ಹರ್‌ಪ್ರೀತ್ ಬ್ರಾರ್ 2 (7) ರನ್ ಗಳಿಸಿ ಅಜೇಯರಾಗಿ ಉಳಿದರು.

    ಡೆಲ್ಲಿ ಪರವಾಗಿ ಮುಸ್ತಾಫಿಜುರ್ ರಹಮಾನ್ 3 ವಿಕೆಟ್ ಕಿತ್ತರು. ವಿಪ್ರಾಜ್ ನಿಗಮ್ ಹಾಗೂ ಕುಲದೀಪ್ ಯಾದವ್ ತಲಾ ವಿಕೆಟ್ ಪಡೆದರು. ಮುಕೇಶ್ ಕುಮಾರು ಒಂದು ವಿಕೆಟ್ ಕಿತ್ತರು. ಪಂಜಾಬ್ ತಂಡದ ಪರ ಹರ್‌ಪ್ರೀತ್ ಬ್ರಾರ್ 2 ವಿಕೆಟ್ ಕಿತ್ತರೇ, ಮಾರ್ಕೋ ಜಾನ್ಸೆನ್ ಮತ್ತು ಪ್ರವೀಣ್ ದುಬೆ ತಲಾ ಒಂದು ವಿಕೆಟ್ ಕಿತ್ತರು.

  • ʻನೀವು ಮದ್ವೆ ಆಗ್ಲಿಲ್ಲ ಅಂತ ಮ್ಯಾಕ್ಸಿ ಚೆನ್ನಾಗಿ ಆಡ್ತಿಲ್ಲʼ – ಕಾಮೆಂಟ್‌ ಮಾಡಿದ ನೆಟ್ಟಿಗನಿಗೆ ಪ್ರೀತಿ ಝಿಂಟಾ ಕ್ಲಾಸ್‌

    ʻನೀವು ಮದ್ವೆ ಆಗ್ಲಿಲ್ಲ ಅಂತ ಮ್ಯಾಕ್ಸಿ ಚೆನ್ನಾಗಿ ಆಡ್ತಿಲ್ಲʼ – ಕಾಮೆಂಟ್‌ ಮಾಡಿದ ನೆಟ್ಟಿಗನಿಗೆ ಪ್ರೀತಿ ಝಿಂಟಾ ಕ್ಲಾಸ್‌

    ಪಂಜಾಬ್ ಕಿಂಗ್ಸ್ (Punjab Kings) ತಂಡದ ಸಹ ಮಾಲೀಕರೂ ಆಗಿರುವ ಬಾಲಿವುಡ್ ನಟಿ ಪ್ರೀತಿ ಝಿಂಟಾ (Preity G Zinta) ವೈಯಕ್ತಿಕ ಬದುಕಿನ ವಿಚಾರಕ್ಕೆ ಮತ್ತೆ ಸುದ್ದಿಯಾಗಿದ್ದಾರೆ.

    ಪ್ರೀತಿ ಝಿಂಟಾ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳಿಗೆ ಪ್ರಶ್ನೆ ಕೇಳುವ ಸೆಷನ್‌ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಪಂಜಾಬ್‌ ಕಿಂಗ್ಸ್‌ ಆಟಗಾರ ಗ್ಲೆನ್‌ ಮ್ಯಾಕ್ಸ್‌ವೆಲ್‌ (Glenn Maxwell) ಬಗ್ಗೆ ಮಾಡಿದ ಕಾಮೆಂಟ್ ಸಂಚಲನ ಸೃಷ್ಟಿಸಿದೆ. ನೆಟ್ಟಿಗರೊಬ್ಬರು ಕೇಳಿದ ಪ್ರಶ್ನೆಯಿಂದ ಬೇಸರಗೊಂಡ ನಟಿ ಎಕ್ಸ್‌ ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಡಿಂಪಲ್ ಕ್ವೀನ್ ಬಣ್ಣದ ಬದುಕಿಗೆ 12 ವರ್ಷ- ಶುಭಕೋರಿದ ದರ್ಶನ್

    ಪ್ರಶ್ನೆ ಕೇಳುವ ಸೆಷನ್‌ ವೇಳೆ ನೆಟ್ಟಿಗರೊಬ್ಬರು, ʻಸತತ ಕಳಪೆ ಪ್ರದರ್ಶನದಿಂದಾಗಿ ಪ್ರೀತಿ, ಮ್ಯಾಕ್ಸ್‌ವೆಲ್‌ರನ್ನ ಮದುವೆಯಾಗುತ್ತಿಲ್ಲʼ ಎಂದು ಕಾಲೆಳೆದಿದ್ದರು. ಮತ್ತೊಬ್ಬರು ʻಮೇಡಂ ನೀವು ಮ್ಯಾಕ್ಸ್‌ವೆಲ್‌ ಅವರನ್ನ ಮದುವೆಯಾಗ್ಲಿಲ್ಲ (Marriage), ಅದಕ್ಕಾಗಿ ಅವರು ನಿಮ್ಮ ತಂಡದಲ್ಲಿ ಚೆನ್ನಾಗಿ ಆಡ್ತಿಲ್ಲʼ ಎಂದು ಕಾಮೆಂಟ್‌ ಮಾಡಿದ್ದರು. ಇದರಿಂದ ಕೆರಳಿದ ನೆಟ್ಟಿಗರನ್ನ ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ತಮಿಳಿನತ್ತ ಕೋಮಲ್- ರಗಡ್ ಲುಕ್‌ನಲ್ಲಿ ಕನ್ನಡದ ನಟ

    ʻನೀವು ಎಲ್ಲಾ ಫ್ರಾಂಚೈಸಿಗಳ ಮಾಲೀಕರಿಗೂ ಇದೇ ರೀತಿ ಕೇಳ್ತೀರಾ? ಅಥವಾ ಮಹಿಳೆಯರಿಗೆ ಮಾತ್ರ ಮಾಡುತ್ತಿರುವ ತಾರತಮ್ಯವಾ? ನಾನು ಕ್ರಿಕೆಟ್‌ ಫ್ರಾಂಚೈಸಿಗೆ ಬರುವವರೆಗೂ ಕಾರ್ಪೋರೇಟ್‌ ವ್ಯವಸ್ಥೆಗಳಲ್ಲಿ ಮಹಿಳೆಯರು ಬದುಕುವುದು ಎಷ್ಟು ಕಷ್ಟ ಅಂತ ಗೊತ್ತಿರಲಿಲ್ಲ. ನೀವು ಹಾಸ್ಯದಿಂದ ಈ ಪ್ರಶ್ನೆ ಕೇಳಿದ್ದೀರಿ ಅಂದುಕೊಳ್ತೀನಿ.. ಆದ್ರೆ, ಒಮ್ಮೆ ಅದನ್ನ ನೀವೇ ನೋಡಿ, ಏನು ಕೇಳ್ತಾ ಇದ್ದೀರಿ ಅನ್ನೋದು ಅರ್ಥವಾಗುತ್ತೆ, ಇದೆಲ್ಲ ಒಳ್ಳೆಯದಲ್ಲ. ಕಳೆದ 18 ವರ್ಷಗಳಿಂದಲೂ ಬಹಳ ಕಷ್ಟಪಟ್ಟು ಒಂದೊಂದೇ ಹಂತಗಳನ್ನು ದಾಟಿ ಇಲ್ಲಿಗೆ ಬಂದಿದ್ದೇನೆ. ಈ ರೀತಿ ತಾರತಮ್ಯ ಮಾಡುವುದು ಹಾಗೂ ಅಗೌರವ ತೋರಿಸುವ ಹೇಳಿಕೆ ನೀಡೋದನ್ನ ಇಲ್ಲಿಗೆ ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.

    Preity Zinta

    ಮದುವೆ ಬಳಿಕ ವಿದೇಶದಲ್ಲಿ ನೆಲೆಸಿರುವ ಪ್ರೀತಿ ಝಿಂಟಾ ಐಪಿಎಲ್ ಸಂದರ್ಭದಲ್ಲಿ ಮಾತ್ರ ಭಾರತದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಸೆಲ್ಫಿ- ಡೇಟಿಂಗ್ ಬಗ್ಗೆ ಹಿಂಟ್ ಕೊಟ್ರಾ ಈ ಜೋಡಿ?

    2012ರಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಪದಾರ್ಪಣೆ ಮಾಡಿದ ಆಸ್ಟ್ರೇಲಿಯಾ ಆಟಗಾರ ಗ್ಲೆನ್‌ ಮ್ಯಾಕ್ಸ್‌ವೆಲ್‌ ಈವರೆಗೆ ಡೆಲ್ಲಿ ಕ್ಯಾಪಿಟಲ್ಸ್‌, ಆರ್‌ಸಿಬಿ, ಪಂಜಾಬ್‌ ಕಿಂಗ್ಸ್‌ ತಂಡಗಳಲ್ಲಿ ಆಡಿದ್ದಾರೆ. 2013 ರಿಂದ 2016ರ ಆವೃತ್ತಿಯಲ್ಲಿ ಮ್ಯಾಕ್ಸಿ ಪಂಜಾಬ್‌ ಕಿಂಗ್ಸ್‌ ಪರ ಭರ್ಜರಿ ಪ್ರದರ್ಶನ ನೀಡಿದ್ದರು. ಆದ್ರೆ 2017ರ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ ಫ್ರಾಂಚೈಸಿ ಅವರನ್ನು ಕೈಬಿಟ್ಟಿತ್ತು. 2021ರಿಂದ ಆರ್‌ಸಿಬಿ ಪರ ಆಡ್ತಿದ್ದ ಮ್ಯಾಕ್ಸ್‌ವೆಲ್‌ ಅವರ ಅದ್ಭುತ ಪ್ರದರ್ಶನ ಕಂಡು ಪಂಜಾಬ್‌ 2025ರ ಆವೃತ್ತಿಗೆ ಮತ್ತೆ ಅವರನ್ನ ಖರೀದಿ ಮಾಡಿತ್ತು. ಇದೀಗ ಈ ಆವೃತ್ತಿಯಲ್ಲಿ ಅವರ ಕಳಪೆ ಪ್ರದರ್ಶನದಿಂದ ಫ್ರಾಂಚೈಸಿ ಪ್ಲೇಯಿಂಗ್‌ -11 ನಿಂದಲೇ ಕೈಬಿಟ್ಟಿದೆ.