Tag: Punjab Kings

  • IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

    IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

    – ಆರ್‌ಸಿಬಿ vs ಲಕ್ನೋ ಪಂದ್ಯದ ಟಿಕೆಟ್‌ ಶುಲ್ಕ ಶೀಘ್ರದಲ್ಲೇ ವಾಪಸ್‌

    ನವದೆಹಲಿ: ಭಾರತ ಮತ್ತು ಪಾಕ್‌ ನಡುವಿನ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ ಭದ್ರತಾ ಕಾರಣಗಳಿಂದ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯನ್ನು ಬಿಸಿಸಿಐ ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ.

    ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ ಕ್ರಿಕೆಟ್‌ ಮಂಡಳಿ (BCCI) ಈ ನಿರ್ಧಾರ ಕೈಗೊಂಡಿದೆ. ಅದರಂತೆ ಇಂದಿನಿಂದ ನಿಗದಿಯಾಗಿದ್ದ ಎಲ್ಲಾ ಪಂದ್ಯಗಳ ಒಂದು ವಾರಗಳ ಕಾಲ ಅಮಾನತುಗೊಳಿಸಿದೆ. ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಪರಿಸ್ಥಿತಿ ನೋಡಿಕೊಂಡು ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಬಿಸಿಸಿಐ ಹೇಳಿದೆ. ಆದ್ರೆ ಕೆಲ ವರದಿಗಳು ಭಾರತ ಮತ್ತು ಇಂಗ್ಲೆಂಡ್‌ ಟೆಸ್ಟ್‌ ಸರಣಿ ಬಳಿಕ ಪಂದ್ಯ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿವೆ.

    ಪ್ರಸ್ತುತ 18ನೇ ಆವೃತ್ತಿಯ ಐಪಿಎಲ್ ಗುರುವಾರದ ಸ್ಥಗಿತಗೊಂಡ ಪಂಜಾಬ್ ಕಿಂಗ್ಸ್ (Punjab Kings) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಸೇರಿ 58 ಪಂದ್ಯಗಳು ನಡೆದಿವೆ. ಇನ್ನೂ ನಾಲ್ಕು ಪ್ಲೇ ಆಫ್ಸ್ ಪಂದ್ಯಗಳೂ ಸೇರಿ 16 ಪಂದ್ಯಗಳು ಬಾಕಿ ಇವೆ. ಸದ್ಯ ಬಿಸಿಸಿಐ ಆಟಗಾರರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ಆಟಗಾರರನ್ನು ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸುವ ವ್ಯವಸ್ಥೆಗಳ ಬಗ್ಗೆ ಗಮನಹರಿಸಲಿದೆ. ಉದ್ವಿಗ್ನತೆ ಶಮನವಾದ ಬಳಿಕ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ, ಐಪಿಎಲ್‌ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    RCB vs LSG ಪಂದ್ಯ ಟಿಕೆಟ್‌ ವಾಪಸ್‌:
    ಇಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡಗಳ ನಡುವೆ ಹಣಾಹಣಿ ನಡೆಯಬೇಕಿತ್ತು. ಪ್ಲೇ ಆಫ್‌ ಅಧಿಕೃತ ಪ್ರವೇಶಕ್ಕೆ ಇಂದಿನ ಪಂದ್ಯದ ಗೆಲುವು ಅನಿವಾರ್ಯವಾಗಿತ್ತು. ಪಂದ್ಯ ಸ್ಥಗಿತಗೊಳಿಸಿದ್ದರಿಂದ ಟಿಕೆಟ್‌ ಖರೀದಿ ಮಾಡಿರುವ ಎಲ್ಲಾ ಗ್ರಾಹಕರಿಗೂ ಶೀಘ್ರದಲ್ಲೇ ಹಣ ವಾಪಸ್‌ ನೀಡುವುದಾಗಿ ಐಪಿಎಲ್‌ ಮಂಡಳಿ ತಿಳಿಸಿದೆ.

    ಜಮ್ಮು ಮತ್ತು ಪಠಾಣ್‌ಕೋಟ್ ನಗರಗಳಲ್ಲಿ ದಾಳಿಯ ಎಚ್ಚರಿಕೆಗಳು ಬಂದಿದ್ದರಿಂದ ಗುರುವಾರ (ಮೇ 8) ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಈ ವಿಚಾರವಾಗಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು.

    ಅತ್ತ ಪಾಕ್‌ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ್ ಸೂಪರ್ ಲೀಗ್‌ನ ಉಳಿದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಪಾಕ್‌ ಸರ್ಕಾರ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೆ ಸೂಚನೆ ನೀಡಿದೆ.

  • Breaking | ಭಾರತ-ಪಾಕ್‌ ಉದ್ವಿಗ್ನತೆ – IPL 2025 ಟೂರ್ನಿ ಸಸ್ಪೆಂಡ್‌!

    Breaking | ಭಾರತ-ಪಾಕ್‌ ಉದ್ವಿಗ್ನತೆ – IPL 2025 ಟೂರ್ನಿ ಸಸ್ಪೆಂಡ್‌!

    ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan) ನಡುವೆ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯನ್ನು ಬಿಸಿಸಿಐ (BCCI) ಅನಿರ್ದಿಷ್ಟಾವಧಿಗೆ ಮುಂದೂಡಿದೆ.

    ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಅದರಂತೆ ಇಂದಿನಿಂದ ನಡೆಯುವ ಎಲ್ಲಾ ಪಂದ್ಯಗಳನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಿದೆ. ಸದ್ಯ ಪ್ಲೇ ಆಫ್ಸ್‌ ಸೇರಿ 16 ಪಂದ್ಯಗಳು ಬಾಕಿ ಉಳಿದಿವೆ. ಸದ್ಯ ಬಿಸಿಸಿಐ ಆಟಗಾರರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ಆಟಗಾರರನ್ನು ಸದ್ಯಕ್ಕೆ ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸುವ ವ್ಯವಸ್ಥೆಗಳ ಬಗ್ಗೆ ಗಮನಹರಿಸಲಿದೆ. ಉದ್ವಿಗ್ನತೆ ಶಮನವಾದ ಬಳಿಕ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ ಉನ್ನತ ಮೂಲಗಳು ತಿಳಿಸಿವೆ.

    ಪ್ರಸ್ತುತ 18ನೇ ಆವೃತ್ತಿಯ ಐಪಿಎಲ್‌ ಗುರುವಾರದ ಸ್ಥಗಿತಗೊಂಡ ಪಂಜಾಬ್‌ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯ ಸೇರಿ 58 ಪಂದ್ಯಗಳು ನಡೆದಿವೆ. ಇನ್ನೂ ನಾಲ್ಕು ಪ್ಲೇ ಆಫ್ಸ್‌ ಪಂದ್ಯಗಳೂ ಸೇರಿ 16 ಪಂದ್ಯಗಳು ಬಾಕಿ ಇವೆ.

    ಜಮ್ಮು ಮತ್ತು ಪಠಾಣ್‌ಕೋಟ್ ನಗರಗಳಲ್ಲಿ ದಾಳಿಯ ಎಚ್ಚರಿಕೆಗಳು ಬಂದಿದ್ದರಿಂದ ಗುರುವಾರ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈ ವಿಚಾರವಾಗಿ BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು.

    ಅಲ್ಲದೇ ಪಾಕ್‌ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ್‌ ಸೂಪರ್‌ ಲೀಗ್‌ನ ಉಳಿದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಲು ಪಿಸಿಬಿ ನಿರ್ಧಾರ ಕೈಗೊಂಡಿದೆ.

  • ಮತ್ತೆ ಕೈಕೊಟ್ಟ ಪಂತ್‌ – ತವರಿನಲ್ಲಿ ಗೆದ್ದ ಪಂಜಾಬ್‌; ಪ್ಲೇ ಆಫ್‌ ಹಾದಿ ಬಹುತೇಕ ಖಚಿತ

    ಮತ್ತೆ ಕೈಕೊಟ್ಟ ಪಂತ್‌ – ತವರಿನಲ್ಲಿ ಗೆದ್ದ ಪಂಜಾಬ್‌; ಪ್ಲೇ ಆಫ್‌ ಹಾದಿ ಬಹುತೇಕ ಖಚಿತ

    ಧರ್ಮಶಾಲಾ: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ತಂಡವು ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 37 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

    ಈ ಮೂಲಕ 11 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ 15 ಅಂಕ ಪಡೆದಿರುವ ಪಂಜಾಬ್‌ ಪ್ಲೇ ಆಫ್‌ ಹಾದಿಯನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಇತ್ತ 11 ಪಂದ್ಯಗಳಲ್ಲಿ ಕೇವಲ 5ರಲ್ಲಿ ಮಾತ್ರ ಗೆಲುವು ಸಾಧಿಸಿರುವ ಲಕ್ನೋ ಸೂಪರ್‌ ಜೈಂಟ್ಸ್‌ 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲೇ ಉಳಿದಿದೆ. ಅಲ್ಲದೇ ಪ್ಲೇ ಆಫ್‌ ಹಾದಿ ಬಹುತೇಕ ಮುಚ್ಚಿದಂತಾಗಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 236 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಲಕ್ನೋ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ ನಿಗದಿ ಓವರ್‌ಗಳಲ್ಲಿ 7‌ ವಿಕೆಟ್‌ ನಷ್ಟಕ್ಕೆ 199 ರನ್‌ಗಳಿಸಿ ಸೋಲೊಪ್ಪಿಕೊಂಡಿತು.

    ಪಂಜಾಬ್ ಕಿಂಗ್ಸ್ ನೀಡಿದ 237 ರನ್ ಗಳ ಗುರಿ ಬೆನ್ನಟ್ಟಿದ ಲಕ್ನೋಗೆ ಆರಂಭಿಕ ಆಘಾತ ಎದುರಾಯಿತು. ಮಾರ್ಕ್ರಮ್ 13 ರನ್ ಗಳಿಸಿ ಔಟಾದರೆ ಮಿಚೆಲ್ ಮಾರ್ಷ್‌ ಶೂನ್ಯಕ್ಕೆ ಔಟಾದರು. ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ನಿಕೋಲಸ್‌ ಪೂರನ್ ಸಹ 6 ರನ್ ಗಳಿಗೆ ಔಟಾಗಿದ್ದು ಲಕ್ನೋ ತೀವ್ರ ಹಿನ್ನಡೆಯಾಗುವಂತೆ ಮಾಡಿತು. ಆದರೆ ಆಯೂಷ್ ಬದೋನಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 74 ರನ್ ಗಳಿಸಿದ್ದು ತಂಡದ ಗೆಲುವಿಗೆ ಸಾಕಷ್ಟು ಪ್ರಯತ್ನಿಸಿದರು. ಆದರೆ ಲಕ್ನೋ ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಲಷ್ಟೇ ಶಕ್ತವಾಯಿತು.

    ಪಂಜಾಬ್‌ಗೆ ಆರಂಭದಲ್ಲೇ ಪ್ರಿಯಾಂಶ್ ಆರ್ಯ (1) ವಿಕೆಟ್ ನಷ್ಟವಾಯಿತು. ಆದರೆ ಜೋಶ್ ಇಂಗ್ಲಿಷ್ (30) ಜೊತೆ ಸೇರಿದ ಪ್ರಭಸಿಮ್ರನ್ ತಂಡವನ್ನು ಮುನ್ನಡೆಸಿದರು. ವಿಕೆಟ್‌ನ ಒಂದು ತುದಿಯಿಂದ ನೆಲಕಚ್ಚಿ ಆಟವಾಡಿದ ಪ್ರಭಸಿಮ್ರನ್‌ಗೆ ನಾಯಕ ಶ್ರೇಯಸ್ ಅಯ್ಯರ್ ಅವರಿಂದಲೂ ಉತ್ತಮ ಬೆಂಬಲ ದೊರಕಿತು. ಶ್ರೇಯಸ್ ಕೇವಲ 25 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 45 ರನ್ ಗಳಿಸಿದರು. ಅತ್ತ ಪ್ರಭಸಿಮ್ರನ್ ಎಸೆತಗಳಲ್ಲಿ ಅರ್ಧಶತಕ ಪೊರ್ಣಗೊಳಿಸಿದರು. ಇನಿಂಗ್ಸ್‌ನ ಕೊನೆಯಲ್ಲಿ ರನ್ ಗತಿ ಏರಿಸುವ ಭರದಲ್ಲಿ ಪ್ರಭಸಿಮ್ರನ್ ವಿಕೆಟ್ ಒಪ್ಪಿಸಿದರು. ಇದರಿಂದಾಗಿ ಶತಕ ಗಳಿಸುವ ಅವಕಾಶ ತಪ್ಪಿತು. 48 ಎಸೆತಗಳನ್ನು ಎದುರಿಸಿದ ಪ್ರಭಸಿಮ್ರನ್ 7 ಸಿಕ್ಸರ್ ಹಾಗೂ 6 ಬೌಂಡರಿಗಳ ನೆರವಿನಿಂದ 91 ರನ್ ಗಳಿಸಿದರು.

    ಇನ್ನುಳಿದಂತೆ ಶಶಾಂಕ್ ಸಿಂಗ್ 15 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿ (4 ಬೌಂಡರಿ, 1 ಸಿಕ್ಸರ್) ಅಬ್ಬರಿಸಿದರು. ಮಾರ್ಕಸ್ ಸ್ಟೋಯಿನಸ್ ಸಹ ಅಜೇಯ 15 ರನ್‌ ಗಳ ಕಾಣಿಕೆ (1 ಸಿಕ್ಸರ್, 1 ಬೌಂಡರಿ) ನೀಡಿದರು.

    ಲಖನೌ ಪರ ಆಕಾಶ್ ಮಹಾರಾಜ್ ಸಿಂಗ್ ಹಾಗೂ ದಿಗೇಶ್ ರಾಠಿ ತಲಾ ಎರಡು ವಿಕೆಟ್ ಗಳಿಸಿದರು.

  • ಈಡನ್‌ ಗಾರ್ಡನ್‌ನಲ್ಲಿ ಗೆದ್ದ ಮಳೆ – PBKS vs KKR ಪಂದ್ಯ ರದ್ದು, 4ನೇ ಸ್ಥಾನಕ್ಕೇರಿದ ಪಂಜಾಬ್‌

    ಈಡನ್‌ ಗಾರ್ಡನ್‌ನಲ್ಲಿ ಗೆದ್ದ ಮಳೆ – PBKS vs KKR ಪಂದ್ಯ ರದ್ದು, 4ನೇ ಸ್ಥಾನಕ್ಕೇರಿದ ಪಂಜಾಬ್‌

    ಕೋಲ್ಕತ್ತಾ: ಇಲ್ಲಿನ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಪಂಜಾಬ್‌ ಕಿಂಗ್ಸ್‌ vs ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯದಲ್ಲಿ ಮಳೆಯಾಟ ಮೇಲುಗೈ ಸಾಧಿಸಿದೆ.

    ನಿರಂತರ ಮಳೆಯಿಂದಾಗಿ ಪಂದ್ಯ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಅಂಕ ಪಡೆದುಕೊಂಡಿವೆ. ಇದರಿಂದ 11 ಅಂಕಗಳೊಂದಿಗೆ ಪಂಜಾಬ್‌ ಕಿಂಗ್ಸ್‌ 4ನೇ ಸ್ಥಾನಕ್ಕೆ ಜಿಗಿದರೆ, ಕೋಲ್ಕತ್ತಾ ನೈಟ್‌ರೈಡರ್ಸ್‌ 7 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿ ಉಳಿದಿದೆ. ಮೊದಲ ಮೂರು ಸ್ಥಾನಗಳಲ್ಲಿ ಕ್ರಮವಾಗಿ ಗುಜರಾತ್‌ ಟೈಟಾನ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌, ಆರ್‌ಸಿಬಿ ಸ್ಥಾನ ಪಡೆದುಕೊಂಡಿವೆ.

    ಗೆಲುವಿಗೆ 202 ರನ್‌ಗಳ ಗುರಿ ಪಡೆದ ಕೋಲ್ಕತ್ತಾ ರೆಹಮಾನುಲ್ಲಾ ಗುರ್ಬಾಜ್‌, ಸುನೀಲ್‌ ನರೇನ್‌ ಆರಂಭಿಕ ಜೋಡಿಯನ್ನು ಕಣಕ್ಕಿಳಿಸಿತ್ತು. ಮೊದಲ ಓವರ್‌ನಲ್ಲಿ 7 ರನ್‌ ಗಳಿಸುತ್ತಿದ್ದಂತೆ ಮಳೆ ಕಾಟ ಶುರುವಾಯಿತು. ಇದರಿಂದ ರಾತ್ರಿ 11:44 ಗಂಟೆಗೆ 5 ಓವರ್‌ಗಳ ಪಂದ್ಯ ನಡೆಸಲು ಯೋಜಿಸಲಾಗಿತ್ತು. ಆದ್ರೆ ನಿರಂತರ ಮಳೆಯಾಗಿದ್ದರಿಂದ ಪಂದ್ಯವನ್ನು ಫಲಿತಾಂಶವಿಲ್ಲದೇ ರದ್ದುಗೊಳಿಸಲಾಯಿತು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ನಿಗದಿತ 20 ಓವರ್‌ ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 201 ರನ್‌ ಗಳಿಸಿತ್ತು. ಪಂಜಾಬ್‌ ಪರ ಬ್ಯಾಟಿಂಗ್‌ ಮಾಡಿದ್ದ ಪ್ರಿಯಾಂಶ್‌ ಆರ್ಯ 35 ಎಸೆತಗಳಲ್ಲಿ 4 ಸಿಕ್ಸ್‌, 8 ಬೌಂಡರಿ ಬಾರಿಸಿ 69 ರನ್‌, ಪ್ರಭಸಿಮ್ರನ್‌ ಸಿಂಗ್‌ 49 ಎಸೆತಗಳಲ್ಲಿ 6 ಸಿಕ್ಸ್‌ ಹಾಗೂ 6 ಬೌಂಡರಿ ಬಾರಿಸಿ 83 ರನ್‌ ಗಳಿಸಿದರು. ಶ್ರೇಯಸ್‌ ಅಯ್ಯರ್‌ 16 ಎಸೆತಗಳಲ್ಲಿ ತಲಾ ಒಂದೊಂದು ಸಿಕ್ಸ್‌ ಹಾಗೂ ಬೌಂಡರಿ ಹೊಡೆದು 25 ರನ್‌ ಗಳಿಸಿದರು. ಇನ್ನುಳಿದಂತೆ ಗ್ಲೆನ್‌ ಮ್ಯಾಕ್ಸ್‌ವೆಲ್‌ 8 ಎಸೆತಗಳಲ್ಲಿ 7ರನ್‌, ಮಾರ್ಕೊ ಜಾನ್ಸೆಮ್‌ 7 ಎಸೆತಗಳಲ್ಲಿ 3 ರನ್‌ ಹಾಗೂ ಜೋಶ್‌ ಇಂಗ್ಲಿಸ್‌ 6 ಎಸೆತಗಳಲ್ಲಿ 11 ರನ್‌ ಬಾರಿಸಿದರು.

    ಕೋಲ್ಕತ್ತಾ ಪರ ಬೌಲಿಂಗ್‌ ಮಾಡಿದ ವೈಭವ್‌ ಅರೋರಾ 2 ವಿಕೆಟ್‌ ಕಬಳಿಸಿದರೆ, ವರುಣ್‌ ಚಕ್ರವರ್ತಿ ಹಾಗೂ ಆಂಡ್ರೆ ರಸೆಲ್‌ ತಲಾ ಒಂದು ವಿಕೆಟ್‌ ಪಡೆದರು.

     

  • ಕೊಹ್ಲಿ, ಪಡಿಕ್ಕಲ್‌ ಮಿಂಚು- ‘ಕಿಂಗ್ಸ್‌’ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ

    ಕೊಹ್ಲಿ, ಪಡಿಕ್ಕಲ್‌ ಮಿಂಚು- ‘ಕಿಂಗ್ಸ್‌’ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ

    – ಆರ್‌ಸಿಬಿಗೆ 7 ವಿಕೆಟ್‌ಗಳ ಜಯ

    ಮೊಹಲಿ: ವಿರಾಟ್‌ ಕೊಹ್ಲಿ (Virat Kohli), ದೇವದತ್‌ ಪಡಿಕ್ಕಲ್‌ ಅಮೋಘ ಡಬಲ್‌ ಫಿಫ್ಟಿ ಆಟಕ್ಕೆ ಪಂಜಾಬ್‌ ಕಿಂಗ್ಸ್‌ (PBKS) ಸೋತು ಶರಣಾಯಿತು. ಕಿಂಗ್ಸ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ (RCB) ತವರಿನ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ಮೊಹಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಪಂಜಾಬ್‌ ಮೊದಲು ಬ್ಯಾಟಿಂಗ್‌ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 157 ರನ್‌ ಗಳಿಸಿತು. 157 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 18.5 ಓವರ್‌ಗೆ 3 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿ ಗೆದ್ದು ಬೀಗಿತು.

    ಮೊದಲು ಬ್ಯಾಟಿಂಗ್‌ ಮಾಡಿದ್ದ ಶ್ರೇಯಸ್‌ ಪಡೆ ಉತ್ತಮ ಆರಂಭ ಪಡೆದುಕೊಂಡಿತ್ತು. ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ ಭರವಸೆ ಮೂಡಿಸಿದ್ದರು. ತಂಡದ ಮೊತ್ತ 42 ರನ್‌ ಇದ್ದಾಗ ಮೊದಲ ವಿಕೆಟ್‌ ಬಿದ್ದಿತು. 22 ರನ್‌ ಗಳಿಸಿ ಆರ್ಯ ಔಟಾದರು. ಇವರ ಬೆನ್ನಲ್ಲೇ ಸಿಂಗ್‌ ಕೂಡ (33) ವಿಕೆಟ್‌ ಒಪ್ಪಿಸಿ ಹೊರ ನಡೆದರು. ಇವರ ಬಳಿಕ ಆರ್‌ಸಿಬಿ ಬೌಲರ್‌ಗಳು ಸಾಲು ಸಾಲು ವಿಕೆಟ್‌ ಉರುಳಿಸಿದರು.

    ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ ಕೇವಲ 6 ರನ್‌ಗೆ ಔಟಾಗಿ ನಿರಾಸೆ ಮೂಡಿಸಿದರು. ಜೋಶ್‌ ಇಂಗ್ಲಿಸ್‌ 29, ಶಶಾಂಕ್‌ ಸಿಂಗ್‌ 31, ಮಾರ್ಕೊ ಜಾನ್ಸೆನ್‌ 25 ರನ್‌ ಗಳಿಸಿದರು. ಉಳಿದ ಬ್ಯಾಟರ್‌ಗಳು ಕಳಪೆ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಪರಿಣಾಮವಾಗಿ ಪಂಜಾಬ್‌ 157 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಆರ್‌ಸಿಬಿ ಪರ ಕೃಣಾಲ್‌ ಪಾಂಡ್ಯ, ಸುಯಶ್ ಶರ್ಮಾ ತಲಾ 2 ವಿಕೆಟ್‌ ಪಡೆದರು.

    ಪಂಜಾಬ್‌ ನೀಡಿದ ಸಾಧಾರಣ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಆಘಾತ ಎದುರಾಯಿತು. ಫಾರ್ಮ್‌ನಲ್ಲಿರುವ ಓಪನರ್‌ ಫಿಲ್‌ ಸಾಲ್ಟ್‌ ಕೇವಲ 1 ರನ್‌ಗೆ ಔಟಾಗಿದ್ದು, ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಯಿತು. ಈ ನಡುವೆ ಜವಾಬ್ದಾರಿಯುತ ಆಟವಾಡಿದ ವಿರಾಟ್‌ ಕೊಹ್ಲಿ ಮತ್ತು ದೇವದತ್‌ ಪಡಿಕ್ಕಲ್‌ ಜೋಡಿ ಕಿಂಗ್ಸ್‌ ಬೌಲರ್‌ಗಳನ್ನು ಬೆಂಡೆತ್ತಿತು. ಪಡಿಕ್ಕಲ್‌ 35 ಬಾಲ್‌ಗೆ 5 ಫೋರ್‌, 4 ಸಿಕ್ಸರ್‌ನೊಂದಿಗೆ 61 ರನ್‌ ಗಳಿಸಿದರು. ಕೊಹ್ಲಿ ಬೌಟಾಗದೇ 54 ಬಾಲ್‌ಗೆ 7 ಫೋರ್‌, 1 ಸಿಕ್ಸರ್‌ನೊಂದಿಗೆ 73 ರನ್‌ ಬಾರಿಸಿದರು. ಈ ಜೋಡಿ 69 ಬಾಲ್‌ಗೆ 103 ರನ್‌ಗಳ ಅಮೋಘ ಜೊತೆಯಾಟವಾಡಿತು.

    ರಜತ್‌ ಪಾಟೀದಾರ್‌ 12, ಜಿತೇಶ್‌ ಶರ್ಮಾ 11 (ಔಟಾಗದೇ) ರನ್‌ ಗಳಿಸಿದರು. ಅಂತಿಮವಾಗಿ ಆರ್‌ಸಿಬಿ 18.5 ಓವರ್‌ಗೆ 3 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ ಗೆಲುವು ದಾಖಲಿಸಿತು.

  • ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

    ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

    ಮಲ್ಲನ್‌ಪುರ್‌: ಸೂಪರ್‌ ಸಂಡೇ ಇಂದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸೋಲಿನ ಸರಪಣಿ ಮತ್ತೆ ಮುಂದುವರಿದಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಹ್ಯಾಟ್ರಿಕ್‌ ಸೋಲು ಕಂಡ ಆರ್‌ಸಿಬಿ ಇಂದು ಪಂಜಾಬ್‌ಗೆ ತವರಿನಲ್ಲೇ ಬಗ್ಗು ಬಡಿಯಲು ಕಾತರದಿಂದ ಕಾಯುತ್ತಿದೆ.

    18ನೇ ಆವೃತ್ತಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಬಾರಿಗೆ ಪರಾಭವಗೊಂಡಿದೆ. ಹೀಗಾಗಿ 3ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 4ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಆಡಿರುವ 7 ಪಂದ್ಯಗಳ ಪೈಕಿ 5 ಗೆಲುವಿನೊಂದಿಗೆ 10 ಅಂಕ ಪಡೆದು 2ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

    Punjab Kings 2

    ಆರ್‌ಸಿಬಿ ಸೋಲಿಗೆ ಮಳೆ ಕಾರಣವೇ?
    ಶುಕ್ರವಾರದ ಮಳೆಯಿಂದಾಗಿ ಅಚಡಣೆಗೊಳಗಾದ ಪಂದ್ಯವನ್ನು 14 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಆದಾಗ್ಯೂ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ನೀಡಿದ್ದ 96 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಇನ್ನೂ 11 ಎಸೆತಗಳು ಬಾಕಿ ಉಳಿದಿರುವಂತೆ 5 ವಿಕೆಟ್ ಕಳೆದುಕೊಂಡು ತಲುಪಿತು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

    ಪಂಜಾಬ್ ತಂಡದ ಮೊದಲೆರಡು ವಿಕೆಟ್‌ಗಳು 32 ರನ್ ಗಳಿಗೆ ಉರುಳಿದಾಗ ಆರ್‌ಸಿಬಿ ಗೆಲುವಿನ ಆಸೆಯಲ್ಲಿತ್ತು. ಬಳಿಕ 53 ರನ್ ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಾಗಲೂ ಗೆಲ್ಲುವ ಅವಕಾಶವಿತ್ತು. ಆದರೆ ಅಂತಿಮ ಹಂತದಲ್ಲಿ ನೇಹಾಲ್ ವಧೇರಾ ಕೇವಲ 19 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನೊಳಗೊಂಡ ಅಜೇಯ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು. ಆರ್‌ಸಿಬಿ ಪರ ಜೋಶ್ ಹೇಜಲ್ವುಡ್ 3 ವಿಕೆಟ್ ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಕಬಳಿಸಿದ್ದರು. ಇನ್ನೂ ಸ್ಫೋಟಕ ಪ್ರದರ್ಶನ ನೀಡಿ, 2 ಕ್ಯಾಚ್‌ ಪಡೆದಿದ್ದ ಆರ್‌ಸಿಬಿ ಟಿಂ ಡೇವಿಡ್‌ಗೆ ತಂಡ ಸೋತ ಹೊರತಾಗಿಯೂ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಲೀಕ್‌ – ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

  • ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲು – ಬೆಂಗಳೂರಿನಲ್ಲಿ ಪಂಜಾಬ್‌ ಕಿಂಗ್‌

    ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲು – ಬೆಂಗಳೂರಿನಲ್ಲಿ ಪಂಜಾಬ್‌ ಕಿಂಗ್‌

    ಬೆಂಗಳೂರು: ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ (RCB) ಹ್ಯಾಟ್ರಿಕ್‌ ಸೋಲಾಗಿದೆ. ಮಳೆಯ (Rain) ಆಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್‌ ಕಿಂಗ್ಸ್‌ (Punjab Kings) 5 ವಿಕೆಟ್‌ಗಳ ಜಯ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದೆ.

    ಮಳೆಯಿಂದಾಗಿ 7:30ಕ್ಕೆ ಆರಂಭವಾಗಿದ್ದ ಪಂದ್ಯ 2 ಗಂಟೆ ತಡವಾಗಿ 9:30ಕ್ಕೆ ಆರಂಭವಾಯಿತು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಕೊನೆಯಲ್ಲಿ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 95 ರನ್‌ ಹೊಡೆಯಿತು.

    ಸುಲಭದ ಸವಾಲನ್ನು ಬೆನ್ನಟ್ಟಿದ ಪಂಜಾಬ್‌ 12.1  ಓವರ್‌ಗಳಲ್ಲಿ 5  ವಿಕೆಟ್‌ ನಷ್ಟಕ್ಕೆ 98 ರನ್‌ ಹೊಡೆದು ಜಯಗಳಿಸಿತು. ಈ ಮೊದಲು ಗುಜರಾತ್‌ ಟೈಟಾನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯವನ್ನು ಸೋತಿತ್ತು. ಈಗ ಮತ್ತೆ ತವರಿನಲ್ಲಿ ರಾಜಸ್ಥಾನದ ವಿರುದ್ಧ ಸೋತಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

    ಪಂಜಾಬ್‌ ಪರ ನೆಹಾಲ್ ವಧೇರಾ ಔಟಾಗದೇ 33 ರನ್‌ (19 ಎಸೆತ, 3 ಬೌಂಡರಿ, 3 ಸಿಕ್ಸ್‌) ಪ್ರಿಯಾಂಶ್‌ ಆರ್ಯ 16 ರನ್‌, ಪ್ರಭುಸಿಮ್ರಾನ್‌ಸಿಂಗ್‌ 13 ರನ್‌ ಹೊಡೆದು ಜಯವನ್ನು ತಂದುಕೊಟ್ಟರು.

    ಆರ್‌ಸಿಬಿ ಪರ ಸಾಲ್ಟ್‌ 4 ರನ್‌, ಕೊಹ್ಲಿ 1 ರನ್‌, ನಾಯಕ ಪಾಟೀದರ್‌ 23 ರನ್‌ (18 ಎಸೆತ, 1 ಬೌಂಡರಿ, 1 ಸಿಕ್ಸ್‌ ) ಹೊಡೆದು ಔಟಾದರು.

    63 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿದ್ದರೂ ಕೊನೆಯಲ್ಲಿ ಡೇವಿಡ್‌ ಔಟಾಗದೇ ಸ್ಫೋಟಕ 50 ರನ್‌ (26 ಎಸೆತ, 5 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡದ ಮೊತ್ತವನ್ನು 90 ರನ್‌ಗಳ ಗಡಿಯನ್ನು ದಾಟಿಸಿದರು.

    ಆರ್ಶ್‌ದೀಪ್‌ ಸಿಂಗ್‌, ಜಾನ್‌ಸೆನ್‌ ಚಹಲ್‌, ಹರ್‌ಪ್ರೀತ್‌ ಬಾರ್‌ ತಲಾ 2 ವಿಕೆಟ್‌ ಪಡೆದರು.

  • ಚೆನ್ನೈ ತಂಡದಿಂದ ರುತುರಾಜ್‌ ಔಟ್‌ – ತಲಾ ಮತ್ತೆ ಕ್ಯಾಪ್ಟನ್‌

    ಚೆನ್ನೈ ತಂಡದಿಂದ ರುತುರಾಜ್‌ ಔಟ್‌ – ತಲಾ ಮತ್ತೆ ಕ್ಯಾಪ್ಟನ್‌

    ಚೆನ್ನೈ: ಲೆಜೆಂಡ್‌ ಕ್ರಿಕೆಟಿಗ, ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಉಸಿರಾಗಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಮತ್ತೆ ಸಿಎಸ್‌ಕೆ ತಂಡದ ನಾಯಕನಾಗಿ ಕಂಬ್ಯಾಕ್‌ ಮಾಡಿದ್ದಾರೆ.

    ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಹಾಲಿ ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ (Ruturaj Gaikwad) ಅವರು ಮೊಣಕೈ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಹೀಗಾಗಿ ಬಾಕಿ ಉಳಿದಿರುವ 9 ಪಂದ್ಯಗಳಿಗೆ ಎಂ.ಎಸ್‌ ಧೋನಿ ಅವರೇ ನಾಯಕತ್ವ ವಹಿಸಲಿದ್ದಾರೆ ಎಂದು ಮುಖ್ಯಕೋಚ್‌ ಸ್ಟೀಫನ್ ಫ್ಲೆಮಿಂಗ್ ಖಚಿತಪಡಿಸಿದ್ದಾರೆ. ನಾಳೆ (ಏ.11) ಕೋಲ್ಕತ್ತಾ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನ ಸರದಿಯ 6ನೇ ಪಂದ್ಯವನ್ನಾಡಲಿದೆ. ಇದನ್ನೂ ಓದಿ: 2028 Olympics | 128 ವರ್ಷಗಳ ಬಳಿಕ ಕ್ರಿಕೆಟ್‌ – ಒಲಿಂಪಿಕ್ಸ್‌ನಲ್ಲಿ 6 ತಂಡಗಳ ಸ್ಪರ್ಧೆ

    MS Dhoni 1

    ಇತ್ತೀಚೆಗೆ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ತುಷಾರ್‌ ದೇಶ್‌ಪಾಂಡೆ ಅವರ ಬೌಲಿಂಗ್‌ನಲ್ಲಿ ಚೆಂಡು ರುತುರಾಜ್‌ ಅವರ ಬಲ ಮೊಣಕೈಗೆ ಬಲವಾಗಿ ಬಡಿದಿತ್ತು. ಈ ವೇಳೆ ಕೊಂಚ ಬ್ರೇಕ್‌ ತೆಗೆದುಕೊಂಡಿದ್ದ ರುತುರಾಜ್‌ ತಂಡಕ್ಕಾಗಿ ಬ್ಯಾಟಿಂಗ್‌ ಮುಂದುವರಿಸಿದ್ದರು. ಆದ್ರೆ ಆ ಪಂದ್ಯದಲ್ಲಿ ಸಿಎಸ್‌ಕೆ ಸೋಲು ಕಂಡಿತು. ಇನ್ನೂ ಏಪ್ರಿಲ್‌ 8ರಂದು ಪಂಬಾಜ್‌ ಕಿಂಗ್ಸ್‌ (Punjab Kings) ವಿರುದ್ಧದ ಪಂದ್ಯದಲ್ಲಿಯೂ ರುತುರಾಜ್‌ ಬ್ಯಾಟಿಂಗ್‌ ವೈಫಲ್ಯ ಎದುರಿದರು. ಇದೀಗ ಮೊಣಕೈ ಗಾಯದ ಸಮಸ್ಯೆ ಉಲ್ಬಣಗೊಂಡಿದ್ದು, ಪ್ರಸ್ತುತ ಐಪಿಎಲ್‌ ಟೂರ್ನಿಯಿಂದಲೇ ಅವರು ಹೊರಗುಳಿಯಲಿದ್ದಾರೆ ಎಂದು ಸಿಎಸ್‌ಕೆ ಮುಖ್ಯಕೋಚ್‌ ತಿಳಿಸಿದ್ದಾರೆ. ಇದನ್ನೂ ಓದಿ: IPL 2025 | ಜಿಟಿ ವಿರುದ್ಧ ಸೋಲಿನ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ 24 ಲಕ್ಷ ರೂ. ದಂಡ

    2023ರ ಆವೃತ್ತಿಯಲ್ಲಿ ಸಿಎಸ್‌ಕೆ ಎಂ.ಎಸ್‌ ಧೋನಿ ನಾಯಕತ್ವದಲ್ಲಿ 5ನೇ ಬಾರಿಗೆ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿತ್ತು. ಆ ಬಳಿಕ ಧೋನಿ ತಮ್ಮ ನಾಯಕತ್ವಕ್ಕೆ ಗುಡ್‌ಬೈ ಹೇಳಿದ್ದರು. 2024ರ ಆವೃತ್ತಿಯಿಂದ ರುತುರಾಜ್‌ ಗಾಯಕ್ವಾಡ್‌ ಸಿಎಸ್‌ಕೆ ತಂಡದ ನಾಯಕನಾಗಿ ಮುಂದುವರಿಯುತ್ತಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ 5 ಪಂದ್ಯಗಳನ್ನಾಡಿರುವ ಸಿಎಸ್‌ಕೆ ಕೇವಲ 1ರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇದನ್ನೂ ಓದಿ: IPL 2025 – ಜಿಯೋದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಚಿತ ಇಂಟರ್ನೆಟ್

  • ಐಪಿಎಲ್ 2025: ಪಂಜಾಬ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್‌ಗೆ ಪಂದ್ಯದ 25% ದಂಡ

    ಐಪಿಎಲ್ 2025: ಪಂಜಾಬ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್‌ಗೆ ಪಂದ್ಯದ 25% ದಂಡ

    -ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಗ್ಲೆನ್

    ಚಂಡೀಗಢ: ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ (Glenn Maxwell) ಐಪಿಎಲ್ (IPL) ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ (BCCI) ಪಂದ್ಯದ ಶೇ.25 ರಷ್ಟು ದಂಡ ವಿಧಿಸಿದೆ.

    ಏ.8 ರಂದು ಪಂಜಾಬ್‌ನ (Punjab) ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ  ಕ್ರೀಡಾಂಗಣದಲ್ಲಿ (Maharaja Yadavindra Singh International Cricket Stadium) ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಹಾಗೂ ಪಂಜಾಬ್ ಕಿಂಗ್ಸ್ (Punjab Kings) ನಡುವೆ ನಡೆದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್‌ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ಪಂದ್ಯದ ಶೇ.25 ರಷ್ಟು ಶುಲ್ಕ ಪಾವತಿಸುವಂತೆ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಿದ್ದು, ಈ ಸೀಸನ್‌ನಲ್ಲಿ ದಂಡಕ್ಕೆ ಒಳಗಾದ ಆರನೇ ಆಟಗಾರರಾಗಿದ್ದಾರೆ.ಇದನ್ನೂ ಓದಿ: ಆರ್ಯನ ಆರ್ಭಟಕ್ಕೆ ಚೆನ್ನೈ ಉಡೀಸ್; ಪಂಜಾಬ್‌ಗೆ 18 ರನ್‌ಗಳ ಜಯ

    ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ಬಿಸಿಸಿಐ ನಿರ್ದಿಷ್ಟ ಕಾರಣ ತಿಳಿಸಿಲ್ಲವಾದರೂ, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದೆ. ಇದಕ್ಕೂ ಮುನ್ನ ಇದೇ ರೀತಿ ಅಪರಾಧ ಮಾಡಿದ್ದಕ್ಕಾಗಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧದ ಪಂದ್ಯದ ಸಮಯದಲ್ಲಿ ಗುಜರಾತ್ ಟೈಟಾನ್ಸ್ (Gujrat Titans) ಆಟಗಾರ ಇಶಾಂತ್ ಶರ್ಮಾಗೆ (Ishant Sharma) ದಂಡ ವಿಧಿಸಲಾಗಿತ್ತು.

    ಐಪಿಎಲ್ ನೀತಿ ಸಂಹಿತೆಯ ಪ್ರಕಾರ, ಆರ್ಟಿಕಲ್ 2.2ರ ಅಡಿಯಲ್ಲಿ ಪಂದ್ಯದ ಸಮಯದಲ್ಲಿ ಕ್ರಿಕೆಟ್ ಉಪಕರಣಗಳು ಅಥವಾ ಬಟ್ಟೆ, ಗ್ರೌಂಡ್ ಉಪಕರಣಗಳು ಮತ್ತು ಫಿಟ್ಟಿಂಗ್‌ಗಳ ದುರುಪಯೋಗಪಡಿಸಿಕೊಂಡರೆ ದಂಡ ವಿಧಿಸಲಾಗುತ್ತದೆ. ಉದಾಹರಣೆಗೆ ಉದ್ದೇಶಪೂರ್ವಕವಾಗಿ ವಿಕೆಟ್‌ಗಳನ್ನು ಹೊಡೆಯುವುದು ಅಥವಾ ಒದೆಯುವುದು ಮತ್ತು ಅಜಾಗರೂಕತೆಯಿಂದ ಅಥವಾ ನಿರ್ಲಕ್ಷ್ಯದಿಂದ ಜಾಹೀರಾತು ಫಲಕಗಳು, ಡ್ರೆಸ್ಸಿಂಗ್ ಕೋಣೆಯ ಬಾಗಿಲು, ಕನ್ನಡಿ, ಕಿಟಕಿಗಳು ಮತ್ತು ಇತರ ನೆಲೆವಸ್ತುಗಳು ಮತ್ತು ಫಿಟ್ಟಿಂಗ್‌ಗಳಿಗೆ ಹಾನಿಯನ್ನುಂಟುಮಾಡುವುದು ಮತ್ತು ಆಟಗಾರನು ಹತಾಶೆಯಿಂದ ಬ್ಯಾಟ್‌ನ್ನು ತೀವ್ರವಾಗಿ ಬೀಸಿ ಹಾನಿಯನ್ನುಂಟು ಮಾಡಿದಾಗ ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗುತ್ತದೆ.

    ಈ ಸೀಸನ್‌ನಲ್ಲಿ ದಿಗ್ವೇಶ್ ಸಿಂಗ್, ರಿಷಬ್ ಪಂತ್ ಮತ್ತು ರಿಯಾನ್ ಪರಾಗ್ ಸೇರಿದಂತೆ ಹಲವಾರು ಆಟಗಾರರಿಗೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಹಾಗೂ ನಿಧಾನಗತಿಯ ಓವರ್ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ.

    ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 18 ರನ್‌ಗಳ ರೋಚಕ ಗೆಲುವು ಸಾಧಿಸಿದ್ದು, ಮೊದಲ ಬ್ಯಾಟಿಂಗ್ ಮಾಡಿದ್ದ ಪಂಜಾಬ್ 219 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 201 ರನ್ ಗಳಿಸಿತ್ತು. ಗ್ಲೆನ್ ಮ್ಯಾಕ್ಸ್‌ವೆಲ್‌ ಅವರ ಬೌಲಿಂಗ್ ಅಬ್ಬರದಿಂದ ಸಿಎಸ್‌ಕೆ ಸೋಲುವಲ್ಲಿ ಕಾರಣವಾಯಿತು. ಸಿಎಸ್‌ಕೆ ವಿರುದ್ಧದ ಗೆಲುವಿನೊಂದಿಗೆ ಪಿಬಿಕೆಎಸ್ ಮತ್ತೆ ಗೆಲುವಿನ ಹಾದಿಗೆ ಮರಳಿದೆ. ಐದು ಬಾರಿ ಚಾಂಪಿಯನ್ ಆಗಿರುವ ಸಿಎಸ್‌ಕೆ ಈ ಸೀಸನ್‌ನಲ್ಲಿ ಸತತ ನಾಲ್ಕನೇ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಸ್ಫೋಟಕ ಶತಕ – ಎಬಿಡಿ, ಕೊಹ್ಲಿ ದಾಖಲೆ ಪುಡಿಗಟ್ಟಿದ 24ರ ಯುವಕ

  • ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಸ್ಫೋಟಕ ಶತಕ – ಎಬಿಡಿ, ಕೊಹ್ಲಿ ದಾಖಲೆ ಪುಡಿಗಟ್ಟಿದ 24ರ ಯುವಕ

    ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಸ್ಫೋಟಕ ಶತಕ – ಎಬಿಡಿ, ಕೊಹ್ಲಿ ದಾಖಲೆ ಪುಡಿಗಟ್ಟಿದ 24ರ ಯುವಕ

    ಮಲ್ಲನ್‌ಪುರ್‌: ಉದಯೋನ್ಮುಖ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (IPL 2025) 18ನೇ ಆವೃತ್ತಿಯಲ್ಲಿ ಹೊಸ ಹೊಸ ಪ್ರತಿಭೆಗಳು ಬೆಳಕಿಗೆ ಬರಲಾರಂಭಿಸಿವೆ. ಪಂಬಾಬ್‌ ಕಿಂಗ್ಸ್‌ ತಂಡದ ಆರಂಭಿಕ ಆಟಗಾರ ಪ್ರಿಯಾಂಶ್‌ ಆರ್ಯ (Priyansh Arya) ತಾನು ಪ್ರವೇಶಿಸಿದ ಚೊಚ್ಚಲ ಆವೃತ್ತಿಯಲ್ಲೇ ಸ್ಫೋಟಕ ಶತಕ ಸಿಡಿಸಿ ದಿಗ್ಗಜರ ದಾಖಲೆಗಳನ್ನ ನುಚ್ಚುನೂರು ಮಾಡಿದ್ದಾರೆ.

    ಹೌದು. ಮಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ಸ್ಫೋಟಕ ಶತಕ ಸಿಡಿಸಿದ ಟಾಪ್‌-5 ಬ್ಯಾಟರ್‌ಗಳ ಪಟ್ಟಿ ಸೇರಿದ್ದಾರೆ. ಇದರೊಂದಿಗೆ ಎಬಿ ಡಿವಿಲಿಯರ್ಸ್‌, ವಿರಾಟ್‌ ಕೊಹ್ಲಿ ಅವರಂತಹ ದಿಗ್ಗಜರ ದಾಖಲೆಗಳನ್ನ ಪುಡಿಗಟ್ಟಿದ್ದಾರೆ. ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌ 2016ರಲ್ಲಿ ಗುಜರಾತ್‌ ಲಯನ್ಸ್‌ ವಿರುದ್ಧ 43 ಎಸೆತಗಳಲ್ಲಿ ವೇಗದ ಶತಕ ಸಿಡಿಸಿದ್ರೆ, ವಿರಾಟ್‌ ಕೊಹ್ಲಿ 2016ರಲ್ಲೇ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ 47 ಎಸೆತಗಳಲ್ಲಿ ವೇಗದ ಶತಕ ಪೂರೈಸಿದ್ದರು.

    ಪಂಜಾಬ್‌ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಪ್ರಿಯಾಂಶ್‌ 19 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್‌ಗಳೊಂದಿಗೆ ಅರ್ಧಶತಕ ಸಿಡಿಸಿದ್ರೆ, 39 ಎಸೆತಗಳಲ್ಲಿ 7 ಬೌಂಡರಿ, 9 ಭರ್ಜರಿ ಸಿಕ್ಸರ್‌ಗಳೊಂದಿಗೆ ಶತಕ ಪೂರೈಸಿದರು. 245.23 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಪ್ರಿಯಾಂಶ್‌ ಆರ್ಯ ಒಟ್ಟಾರೆ ತಾನು ಎದುರಿಸಿದ 42 ಎಸೆತಗಳಲ್ಲಿ 103 ರನ್‌ (9 ಸಿಕ್ಸರ್‌, 7 ಬೌಂಡರಿ) ಬಾರಿಸಿ ಔಟಾದರು. ಇದು ತಾನು ಐಪಿಎಲ್‌ನಲ್ಲಿ ಸಿಡಿಸಿದ ಚೊಚ್ಚಲ ಶತಕವಾಗಿದೆ.

    ಐಪಿಎಲ್‌ನಲ್ಲಿ ಸ್ಫೋಟಕ ಶತಕ ಸಿಡಿಸಿದ ಟಾಪ್‌-5 ಬ್ಯಾಟರ್ಸ್‌
    ಕ್ರಿಸ್‌ ಗೇಲ್‌ – 30 ಎಸೆತ
    ಯೂಸುಫ್‌ ಪಠಾಣ್‌ – 37 ಎಸೆಯ
    ಡೇವಿಡ್‌ ಮಿಲ್ಲರ್‌ – 38 ಎಸೆತ
    ಟ್ರಾವಿಸ್‌ ಹೆಡ್‌ – 39 ಎಸೆತ
    ಪ್ರಿಯಾಂಶ್‌ ಆರ್ಯ – 39 ಎಸೆತ