Tag: Punjab Kings

  • ಒಂದೇ ಓವರ್‌ನಲ್ಲಿ 31 ರನ್‌ – ಸಚಿನ್‌ ತೆಂಡೂಲ್ಕರ್‌ ಪುತ್ರನ ವಿರುದ್ಧ ಸಿಕ್ಕಾಪಟ್ಟೆ ಟ್ರೋಲ್‌

    ಒಂದೇ ಓವರ್‌ನಲ್ಲಿ 31 ರನ್‌ – ಸಚಿನ್‌ ತೆಂಡೂಲ್ಕರ್‌ ಪುತ್ರನ ವಿರುದ್ಧ ಸಿಕ್ಕಾಪಟ್ಟೆ ಟ್ರೋಲ್‌

    ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) 13 ರನ್‌ಗಳಿಂದ ವಿರೋಚಿತ ಸೋಲನುಭವಿಸಿತು.

    ಸಿಕ್ಸರ್‌ ಬೌಂಡರಿಗಳ ಆಟದಲ್ಲಿ ಬರೋಬ್ಬರಿ 25 ಸಿಕ್ಸರ್‌ ಹಾಗೂ 33 ಬೌಂಡರಿಗಳು ಸಿಡಿದವು. ಪಂಜಾಬ್‌ ಕಿಂಗ್ಸ್‌ ಪರ 14 ಸಿಕ್ಸರ್‌, 16 ಬೌಂಡರಿ ಹಾಗೂ ಮುಂಬೈ ಇಂಡಿಯನ್ಸ್‌ ಪರ 11 ಸಿಕ್ಸರ್‌, 17 ಬೌಂಡರಿಗಳು ದಾಖಲಾದವು. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 31 ರನ್‌ ಕೊಟ್ಟ ಅರ್ಜುನ್‌ ತೆಂಡೂಲ್ಕರ್‌; ಹರ್ಷ ತಂದ ಅರ್ಷ್‌ದೀಪ್‌ – ಪಂಜಾಬ್‌ಗೆ 13 ರನ್‌ಗಳ ಜಯ

    ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಕೊನೆಯ 6 ಓವರ್‌ಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಿಕೊಂಡಿತು. ಮೊದಲ 14 ಓವರ್‌ಗಳ ಅಂತ್ಯಕ್ಕೆ 105 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಪಂಜಾಬ್‌, ಮುಂಬೈಗೆ ಸುಲಭ ಗುರಿಗೆ ತುತ್ತಾಗಲಿದೆ ಎಂದೇ ಭಾವಿಸಲಾಗಿತ್ತು. ಆದ್ರೆ ಅರ್ಜುನ್‌ ತೆಂಡೂಲ್ಕರ್‌ (Arjun Tendulkar) ಎಸೆದ 16ನೇ ಓವರ್‌ನಲ್ಲಿ ಸ್ಯಾಮ್‌ ಕರ್ರನ್‌ ಹಾಗೂ ಹರ್ಪ್ರೀತ್‌ ಸಿಂಗ್‌ ಜೋಡಿ ಬರೋಬ್ಬರಿ 31 ರನ್‌ (6,1,4,1,4,6,5,4) ಸಿಡಿಸಿತ್ತು. ಈ ಬೆನ್ನಲ್ಲೇ ಕ್ಯಾಮರೂನ್ ಗ್ರೀನ್ ಎಸೆದ 18ನೇ ಓವರ್‌ನಲ್ಲಿ ಜಿತೇಶ್‌ ಶರ್ಮಾ ಸ್ಫೋಟಕ 25 ರನ್ ಚಚ್ಚಿದರು. ಇದು ಪಂಜಾಬ್‌ ಗೆಲುವಿಗೆ ಪ್ರಮುಖ ತಿರುವು ಪಡೆದುಕೊಂಡಿತು.

    ಅರ್ಜುನ್‌ ತೆಂಡೂಲ್ಕರ್‌ ಒಂದೇ ಓವರ್‌ನಲ್ಲಿ 31 ರನ್‌ ನೀಡಿರುವ ಬಗ್ಗೆ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಕೆಲವರು ʻಇದು ಪಕ್ಕಾ ನೆಪೊಟಿಸಮ್‌ ಪ್ರಾಡಕ್ಟ್‌ʼ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 7 ಸಾವಿರ ರನ್‌ ಪೂರೈಸಿದ ರಾಹುಲ್‌ – ಕೊಹ್ಲಿ, ರೋಹಿತ್‌ ಸೇರಿ ಹಲವರ ದಾಖಲೆ ಉಡೀಸ್‌

    ಹಿಟ್‌ ಮ್ಯಾನ್‌ ಬೆಂಬಲ: ಸದ್ಯ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮಾ ಪಂದ್ಯ ಸೋತ ಹೊರತಾಗಿಯೂ ಅರ್ಜುನ್‌ ತೆಂಡೂಲ್ಕರ್‌ನನ್ನ ಬೆಂಬಲಿಸಿದ್ದಾರೆ. ಬಹುಶಃ ಅರ್ಜುನ್‌ ಒತ್ತಡದಲ್ಲಿದ್ದರು ಅನ್ನಿಸುತ್ತೆ. ಆದರೆ ಇದೇ ಅಂತ್ಯವಲ್ಲ ಈ ಬೆಳವಣಿಗೆಯಿಂದ ಇನ್ನಷ್ಟು ಕಲಿಯುತ್ತಾರೆ. ಅರ್ಜುನ್‌ ಆಶಾದಾಯಕ ಬೆಳವಣಿಗೆ ಹೊಂದಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಕಂಬ್ಯಾಕ್‌  ಮಾಡಲಿದ್ದಾರೆ. ಅವರಿಗೆ ನಮ್ಮ ತಂಡದ ಆಟಗಾರರ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

  • ಟಿ20 – 6000 ರನ್ ಗಡಿ ದಾಟಿದ ಸೂರ್ಯಕುಮಾರ್

    ಟಿ20 – 6000 ರನ್ ಗಡಿ ದಾಟಿದ ಸೂರ್ಯಕುಮಾರ್

    ಮುಂಬೈ: ಮುಂಬೈ ಇಂಡಿಯನ್ಸ್ (Mumbai Indians) ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ (Suryakumar Yadav) ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಟಿ20 (T20) ಪಂದ್ಯದಲ್ಲಿ 6,000 ರನ್‍ಗಳ ಗಡಿಯನ್ನು ದಾಟಿದ್ದಾರೆ.

    ಮುಂಬೈನಲ್ಲಿ ನಡೆದ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧದ ಐಪಿಎಲ್‌ (IPL) ಪಂದ್ಯದಲ್ಲಿ, 215 ರನ್ ಚೇಸಿಂಗ್ ವೇಳೆ ಸೂರ್ಯಕುಮಾರ್ 26 ಎಸೆತಗಳಲ್ಲಿ 57 ರನ್ ಗಳಿಸಿದರು. ಅದರಲ್ಲಿ ಏಳು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದನ್ನೂ ಓದಿ: `ನಮ್ಮ ಹಸಿರು ಭೂಮಿಗಾಗಿʼ – ಪರಿಸರ ಕಾಳಜಿ ಸಂದೇಶ ಕೊಟ್ಟ RCB

    ಈ ಇನ್ನಿಂಗ್ಸ್‌ನೊಂದಿಗೆ ಅವರು 248 ಪಂದ್ಯಗಳಲ್ಲಿ ಮತ್ತು 226 ಇನ್ನಿಂಗ್ಸ್‌ಗಳಲ್ಲಿ 34.01 ಸರಾಸರಿಯಲ್ಲಿ 6,021 ರನ್ ಗಳಿಸಿದ್ದಾರೆ. ಅವರ ರನ್ 149.55 ಸ್ಟ್ರೈಕ್ ರೇಟ್‍ನಲ್ಲಿದೆ. ಸೂರ್ಯಕುಮಾರ್ ಅವರ ಕ್ರಿಕೆಟ್ ಜೀವನದಲ್ಲಿ ಮೂರು ಶತಕಗಳು ಮತ್ತು 38 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‍ನಲ್ಲಿ ಸೂರ್ಯಕುಮಾರ್ ಅವರ ಅಂತಾರಾಷ್ಟ್ರೀಯ ಮಟ್ಟದ ಅಂಕಿ ಅಂಶಗಳು ಅಭಿಮಾನಿಗಳನ್ನು ಬೆರಗುಗೊಳಿಸಿದೆ.

    ಅವರು ಟೀಂ ಇಂಡಿಯಾ (Team India) ಆಟಗಾರರಾಗಿ ಮೂರು ಶತಕಗಳು ಮತ್ತು 13 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. 2022ರ ಐಸಿಸಿ ಟಿ20 ಕ್ರಿಕೆಟರ್ ಪ್ರಶಸ್ತಿ ವಿಜೇತರಾಗಿದ್ದರು.

    ಪಂದ್ಯದಲ್ಲಿ 215 ರನ್‍ಗಳನ್ನು ಬೆನ್ನಟ್ಟಿದ ಮುಂಬೈ ಇಶಾನ್ ಕಿಶನ್‍ನನ್ನು ಬೇಗನೆ ಕಳೆದುಕೊಂಡಿತು. ಆದರೆ ನಾಯಕ ರೋಹಿತ್ ಶರ್ಮಾ 27 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 44 ರನ್ ಸೇರಿಸಿದರು. 43 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್‍ಗಳೊಂದಿಗೆ ಗ್ರೀನ್ 67 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಮೂರು ಸಿಕ್ಸರ್‍ನೊಂದಿಗೆ 57 ರನ್ ಗಳಿಸಿದರು. ಮುಂಬೈ ಉತ್ತಮ ಹೋರಾಟದ ನಡುವೆಯೂ ಸೋಲು ಕಂಡಿತು. ಪಂಜಾಬ್ ತಂಡ 13 ರನ್‍ಗಳಿಂದ ಗೆಲುವು ದಾಖಲಾಯಿತು.

    ಈ ಗೆಲುವಿನೊಂದಿಗೆ ಪಂಜಾಬ್ ಏಳು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಮೂರು ಸೋಲು ಸೇರಿ ಒಟ್ಟು ಎಂಟು ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಮುಂಬೈ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಒಟ್ಟು ಆರು ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ.

    ಟಿ20ಯಲ್ಲಿ ವೇಗವಾಗಿ 6,000 ರನ್ ಗಳಿಸಿದ ಆಟಗಾರರು
    ಆಂಡ್ರೆ ರಸೆಲ್ (3,550 ಎಸೆತಗಳಿಗೆ), ಗ್ಲೆನ್ ಮ್ಯಾಕ್ಸ್‌ವೆಲ್ (3,890 ಎಸೆತ), ಕೀರಾನ್ ಪೊಲಾರ್ಡ್ (3918 ಎಸೆತ), ಕ್ರಿಸ್ ಗೇಲ್ (4,008 ಎಸೆತ), ಸೂರ್ಯಕುಮಾರ್ ಯಾದವ್ 4,017 ಎಸೆತಗಳಿಗೆ 6,000 ರನ್ ಗಳಿಸಿದ್ದಾರೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 31 ರನ್‌ ಕೊಟ್ಟ ಅರ್ಜುನ್‌ ತೆಂಡೂಲ್ಕರ್‌; ಹರ್ಷ ತಂದ ಅರ್ಷ್‌ದೀಪ್‌ – ಪಂಜಾಬ್‌ಗೆ 13 ರನ್‌ಗಳ ಜಯ

  • ಒಂದೇ ಓವರ್‌ನಲ್ಲಿ 31 ರನ್‌ ಕೊಟ್ಟ ಅರ್ಜುನ್‌ ತೆಂಡೂಲ್ಕರ್‌; ಹರ್ಷ ತಂದ ಅರ್ಷ್‌ದೀಪ್‌ – ಪಂಜಾಬ್‌ಗೆ 13 ರನ್‌ಗಳ ಜಯ

    ಒಂದೇ ಓವರ್‌ನಲ್ಲಿ 31 ರನ್‌ ಕೊಟ್ಟ ಅರ್ಜುನ್‌ ತೆಂಡೂಲ್ಕರ್‌; ಹರ್ಷ ತಂದ ಅರ್ಷ್‌ದೀಪ್‌ – ಪಂಜಾಬ್‌ಗೆ 13 ರನ್‌ಗಳ ಜಯ

    ಮುಂಬೈ: ‌ಅರ್ಷ್‌ದೀಪ್‌ ಸಿಂಗ್‌ (Arshdeep Singh) ಬೆಂಕಿ ಬೌಲಿಂಗ್‌ ದಾಳಿ ಹಾಗೂ ನಾಯಕ ಸ್ಯಾಮ್‌ ಕರ್ರನ್‌ (Sam Curran) ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ (Punjab Kings), ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ 13 ರನ್‌ಗಳ ಜಯ ಸಾಧಿಸಿದೆ.

    ಕೊನೆಯ 6 ಎಸೆತಗಳಲ್ಲಿ ಮುಂಬೈಗೆ 16 ರನ್‌ ಗಳ ಅಗತ್ಯವಿತ್ತು. ಈ ವೇಳೆ ಮೊದಲ ಎಸೆತದಲ್ಲಿ ಟಿಮ್‌ ಡೇವಿಡ್‌ 1 ರನ್‌ ಕದ್ದರು. ನಂತರ ಕ್ರೀಸ್‌ಗೆ ಬಂದ ತಿಲಕ್‌ ವರ್ಮಾ 2ನೇ ಎಸೆತದಲ್ಲಿ ರನ್‌ ಗಳಿಸಲು ವಿಫಲರಾಗಿ, 3ನೇ ಎಸೆತದಲ್ಲೇ ಕ್ಲೀನ್‌ ಬೌಲ್ಡ್‌ ಆದರು. ಅರ್ಷ್‌ದೀಪ್‌ ಎಸೆದ ಬೌಲಿಂಗ್‌ ವೇಗಕ್ಕೆ ವಿಕೆಟ್‌ ಮುರಿದೇ ಹೋಯಿತು. 4ನೇ ಎಸೆತದಲ್ಲೂ ವಿಕೆಟ್‌ ಕಬಳಿಸಿದ ಅರ್ಷ್‌ದೀಪ್‌ ತಂಡದ ಗೆಲುವಿಗೆ ಆಸರೆಯಾದರು. 5ನೇ ಎಸೆತದಲ್ಲಿ ಯಾವುದೇ ರನ್‌ ನೀಡದೇ 6ನೇ ಎಸೆತದಲ್ಲಿ ಕೇವಲ ಒಂದು ರನ್‌ ನೀಡಿ ಪಂಜಾಬ್‌ ಗೆಲುವಿಗೆ ಕಾರಣರಾದರು.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿತ್ತು. 215 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 201 ರನ್‌ ಗಳಿಸಿ ತವರಿನಲ್ಲಿ ವಿರೋಚಿತ ಸೋಲನುಭವಿಸಿತು. ಇದನ್ನೂ ಓದಿ: ಪಾಂಡ್ಯ ಪರಾಕ್ರಮದ ಮುಂದೆ ಮಂಡಿಯೂರಿದ ರಾಹುಲ್‌ ಪಡೆ – ಗುಜರಾತ್‌ಗೆ 7 ರನ್‌ಗಳ ರೋಚಕ ಜಯ

    ರೋಹಿತ್‌, ಗ್ರೀನ್‌, ಸೂರ್ಯನ ಅಬ್ಬರ ವ್ಯರ್ಥ: ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 2ನೇ ಓವರ್‌ನಲ್ಲೇ 8 ರನ್‌ಗಳಿಗೆ ಇಶಾನ್‌ ಕಿಶನ್‌ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಬಳಿಕ ಜೊತೆಗೂಡಿದ ಕ್ಯಾಮರೂನ್‌ ಗ್ರೀನ್‌ (Cameron Green) ಹಾಗೂ ರೋಹಿತ್‌ ಶರ್ಮಾ (Rohit Sharma) ಜೋಡಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದರು. ಭರ್ಜರಿ ಸಿಕ್ಸರ್‌ ಬೌಂಡರಿ ಆಟವಾಡಿದ ಈ ಜೋಡಿ 50 ಎಸೆತಗಳಲ್ಲಿ 76 ರನ್‌ ಸಿಡಿಸಿತ್ತು. ಅತ್ತ ರೋಹಿತ್‌ ಶರ್ಮಾ 44 ರನ್‌ (27 ಎಸೆತ, 4 ಬೌಂಡರಿ, 3 ಸಿಕ್ಸರ್‌) ಬಾರಿಸಿ ಔಟಾಗುತ್ತಿದ್ದಂತೆ, ಪಂಜಾಬ್‌ ಬೌಲರ್‌ಗಳನ್ನ ಚೆಂಡಾಡಿದ ಗ್ರೀನ್‌, ಸೂರ್ಯಕುಮಾರ್‌ ಯಾದವ್‌ (Suryakumar Yadav) ಜೋಡಿ, 36 ಎಸೆತಗಳಲ್ಲಿ ಬರೋಬ್ಬರಿ 75 ರನ್‌ ಸಿಡಿಸಿತು. ಇದು ತಂಡದ ಗೆಲುವಿಗೆ ಹೆಚ್ಚು ಸಹಕಾರಿಯಾಯಿತು. ಕ್ಯಾಮರೂನ್‌ ಗ್ರೀನ್‌ 67 ರನ್‌ (43 ಎಸೆತ, 6 ಬೌಂಡರಿ, 3 ಸಿಕ್ಸರ್‌) ಗಳಿಸಿದರೆ, 219.23 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯಕುಮಾರ್‌ ಯಾದವ್‌ 26 ಎಸೆತಗಳಲ್ಲಿ 57 ರನ್‌ ಸಿಡಿಸಿ ಮಿಂಚಿದರು.

    ಇದರಿಂದ ಮುಂಬೈ ತಂಡ ಖಚಿತವಾಗಿ ಗೆಲ್ಲುವ ಭರವಸೆ ಹೊಂದಿತ್ತು. ಆದರೆ ಕೊನೆಯಲ್ಲಿ ತಿಲಕ್‌ ವರ್ಮಾ ಬ್ಯಾಟಿಂಗ್‌ ವಿಫಲತೆಯಿಂದ ಮುಂಬೈ ಇಂಡಿಯನ್ಸ್‌ಗೆ ವಿರೋಚಿತ ಸೋಲಾಯಿತು. ಕೊನೆಯಲ್ಲಿ 192.30 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಟಿಮ್‌ ಡೇವಿಡ್‌ 13 ಎಸೆತಗಳಲ್ಲಿ 25 ರನ್‌ ಗಳಿಸಿದರೆ, ಜೋಫ್ರಾ ಆರ್ಚರ್‌ 1 ರನ್‌ ಗಳಿಸಿ ಅಜೇಯರಾಗುಳಿದರು. ತಿಲಕ್‌ ವರ್ಮಾ 3 ರನ್‌ ಗಳಿಸಿ ಔಟಾದರು.

    ಪಂಜಾಬ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಅರ್ಷ್‌ದೀಪ್‌ ಸಿಂಗ್‌ 4 ಓವರ್‌ಗಳಲ್ಲಿ 29 ರನ್‌ ನೀಡಿ ಪ್ರಮುಖ 4 ವಿಕೆಟ್‌ ಕಿತ್ತರೆ, ನಾಥನ್‌ ಎಲ್ಲಿಸ್‌ ಹಾಗೂ ಲಿಯಾಮ್‌ ಲಿವಿಂಗ್ಸ್ಟನ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ:  7 ಸಾವಿರ ರನ್‌ ಪೂರೈಸಿದ ರಾಹುಲ್‌ – ಕೊಹ್ಲಿ, ರೋಹಿತ್‌ ಸೇರಿ ಹಲವರ ದಾಖಲೆ ಉಡೀಸ್‌

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ ಆರಂಭದಲ್ಲಿ ಮುಂಬೈ ಬೌಲರ್‌ಗಳ ದಾಳಿಗೆ ತುತ್ತಾದರೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸ್ವರೂಪ ರೌದ್ರಾವತಾರ ತಾಳಿತು. ಆದರೆ ಕೊನೆಯ 6 ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ ಮುಂಬೈಗೆ 215 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡುವಲ್ಲಿ ಯಶಸ್ವಿಯಾಯಿತು.

    ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಈ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದಿ ನಾಯಕ ಸ್ಯಾಮ್ ಕರ್ರನ್‌ 29 ಎಸೆತಗಳಲ್ಲಿ 55 ರನ್‌ (4 ಸಿಕ್ಸರ್‌, 5 ಬೌಂಡರಿ) ಬಾರಿಸಿದ ದೊಡ್ಡ ಮೊತ್ತದತ್ತ ದಾಪುಗಾಲಿಕ್ಕಲು ಕಾರಣವಾದರು. ಇದರೊಂದಿಗೆ ಹರ್ಪ್ರೀತ್‌ ಸಿಂಗ್‌ ಭಾಟಿಯಾ 28 ಎಸೆತಗಳಲ್ಲಿ 41 ರನ್‌ (2 ಸಿಕ್ಸರ್‌, 4 ಬೌಂಡರಿ) ಬಾರಿಸಿದರೆ ಜಿತೇಶ್ ಶರ್ಮಾ ಕೇವಲ 7 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್‌ನೊಂದಿಗೆ 25 ರನ್ ಚಚ್ಚಿದರು.

    ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಕೊನೆಯ 6 ಓವರ್‌ಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಿಕೊಂಡಿತು. ಮೊದಲ 14 ಓವರ್‌ಗಳ ಅಂತ್ಯಕ್ಕೆ 105 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಪಂಜಾಬ್‌ 150 ರನ್‌ಗಳ ಗುರಿ ತಲುಪುವುದೇ ಕಷ್ಟವಾಗಿತ್ತು. ಮುಂಬೈ ತವರಿನಲ್ಲಿ ಪಂಜಾಬ್ ಸುಲಭ ಗುರಿ ಮುಂದಿಡಲಿದೆ ಎಂದೇ ಬಹುತೇಕ ಅಭಿಮಾನಿಗಳು ಭಾವಿಸಿದ್ದರು. 15ನೇ ಓವರ್‌ನಿಂದ ಅಬ್ಬರಿಸಲು ಶುರು ಮಾಡಿದ ಪಂಜಾಬ್‌ ಬ್ಯಾಟ್ಸ್‌ಮ್ಯಾನ್‌ಗಳು ಮುಂಬೈ ಬೌಲರ್‌ಗಳನ್ನು ಚೆಂಡಾಡಿದರು. ಅರ್ಜುನ್ ತೆಂಡೂಲ್ಕರ್ ಎಸೆತ 16ನೇ ಓವರ್‌ನಲ್ಲಿ 31 ರನ್ ಹರಿದು ಬಂದಿದ್ದರೇ ಕ್ಯಾಮರೂನ್ ಗ್ರೀನ್ ಎಸೆದ 18ನೇ ಓವರ್‌ನಲ್ಲಿ 25 ರನ್ ಹರಿದು ಬಂದಿತು. ಇದು ತಂಡದ ಬೃಹತ್‌ ಮೊತ್ತಕ್ಕೆ ಕಾರಣವಾಯಿತು.

  • ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್‌

    ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್‌

    ಮೊಹಾಲಿ: ಇಲ್ಲಿನ ಐಎಸ್‌ ಬಿಂದ್ರಾ ಕ್ರೀಡಾಂಗಣದಲ್ಲಿ ಗುರುವಾರ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ ಮತ್ತೆ ಆರ್‌ಸಿಬಿ (Royal Challengers Bangalore) ನಾಯಕನಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ (Virat Kohli) ಅರ್ಧಶತಕ ಸಿಡಿಸಿ ಮಿಂಚಿದರು.

    2022ರ ಐಪಿಎಲ್‌ ಟೂರ್ನಿ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ನಾಯಕತ್ವ ತೊರೆದಿದ್ದ ವಿರಾಟ್‌ ಮತ್ತೆ ನಾಯಕನಾಗಿ ಕಣಕ್ಕಿಳಿದಿದ್ದು, ಅಭಿಮಾನಿಗಳಲ್ಲಿ ಖುಷಿ ಹೆಚ್ಚಿಸಿತ್ತು. ಈ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದಿಂದಲೂ ನಾಯಕ ಶಿಖರ್‌ ಧವನ್‌ ಆಟದಿಂದ ಹೊರಗುಳಿದಿದ್ದರು. ಇದನ್ನೂ ಓದಿ: ಕ್ಯಾಪ್ಟನ್‌ ಕೊಹ್ಲಿ, ಡುಪ್ಲೆಸಿಸ್‌ ಶತಕದಾಟಕ್ಕೆ ಪಂಜಾಬ್‌ ಪಂಚರ್‌ – RCBಗೆ 24 ರನ್‌ಗಳ ಭರ್ಜರಿ ಜಯ

    ಹೌದು. ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶಿಖರ್ ಧವನ್ ಹಾಗೂ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಇಬ್ಬರೂ ಗಾಯದ ಸಮಸ್ಯೆಗೊಳಗಾಗಿದ್ದರು. ಶಿಖರ್ ಧವನ್ ಸಂಪೂರ್ಣ ಪಂದ್ಯದಿಂದ ಹೊರಗುಳಿದಿದ್ದರೆ, ಫಾಫ್ ಡು ಪ್ಲೆಸಿಸ್, ವಿಜಯ್ ಕುಮಾರ್ ವೈಶಾಖ್ ಬದಲಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದು ಬ್ಯಾಟ್‌ ಬೀಸಿದರು. ಫೀಲ್ಡಿಂಗ್‌ನಲ್ಲಿ ಹೊರಗುಳಿದು ವಿಶ್ರಾಂತಿ ತೆಗೆದುಕೊಂಡರು.

    ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದ ಡುಪ್ಲೆಸಿಸ್‌ ಮಧ್ಯದಲ್ಲಿ ಹೊಟ್ಟೆಗೆ ಬ್ಯಾಂಡೇಜ್‌ ಕಟ್ಟಿಸಿಕೊಂಡೇ ಕಣದಲ್ಲಿ ಅಬ್ಬರಿಸಿದ್ದರು. ಗುರುವಾರ ಗಾಯದ ಸಮಸ್ಯೆ ಇದ್ದರೂ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಾಣಿಸಿಕೊಂಡ ಡು ಪ್ಲೆಸಿಸ್‌ 150 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ 56 ಎಸೆತಗಳಲ್ಲಿ 84 ರನ್‌ ಗಳಿಸಿ, ತಂಡ ಬೃಹತ್‌ ಮೊತ್ತ ಗಳಿಸಲು ಕಾರಣರಾದರು. ಫಾಫ್‌ ಡು ಪ್ಲೆಸಿಸ್‌ ಫೀಲ್ಡಿಂಗ್‌ನಲ್ಲಿ ಹೊರಗುಳಿಯಬೇಕಿದ್ದ ಕಾರಣ ವಿರಾಟ್‌ ಕೊಹ್ಲಿ ನಾಯಕತ್ವ ವಹಿಸಿಕೊಂಡಿದ್ದರು.

    ಈ ಕುರಿತು ಮಾತನಾಡಿದ್ದ ವಿರಾಟ್‌ ಕೊಹ್ಲಿ ಟಾಸ್‌ ಮುಗಿದ ಬಳಿಕ ಡುಪ್ಲೆಸಿಸ್ ಗಾಯಕ್ಕೊಳಗಾಗಿರುವ ವಿಷಯ ಬಿಚ್ಚಿಟ್ಟಿದ್ದರು. ಅವರು ಫೀಲ್ಡಿಂಗ್‌ ಮಾಡಲಾಗದ ಕಾರಣ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ನಾವು ಮೊದಲು ಬ್ಯಾಟಿಂಗ್‌ ಮಾಡಬೇಕೆಂದು ಬಯಸಿದ್ದೆವು. ಅದೇ ನಮಗೆ ಸಿಕ್ಕಿದೆ ಎಂದು ಹೇಳಿದ್ದರು. ಇದನ್ನೂ ಓದಿ: RCBvsCSK ರಣರೋಚಕ ಪಂದ್ಯದಲ್ಲಿ ಎರಡೆರಡು ದಾಖಲೆ ಉಡೀಸ್‌

    ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರ್ರನ್ (SamCurran) ಸಹ ಮಾತನಾಡಿದ್ದು, ಕಳೆದ ಪಂದ್ಯದಂತೆ ಈ ಪಂದ್ಯದಲ್ಲಿಯೂ ಮೊದಲು ಬೌಲಿಂಗ್ ಮಾಡುವ ಆಯ್ಕೆ ಉತ್ತಮ ಎನಿಸಿತ್ತು ಎಂದಿದ್ದರು. ಜೊತೆಗೆ ಶಿಖರ್‌ ಧವನ್ ಈ ದಿನ ಕಣಕ್ಕಿಳಿಯುತ್ತಿಲ್ಲ ಎಂಬುದನ್ನೂ ಅವರು ಖಚಿತಪಡಿಸಿದ್ದರು.

    ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತ್ತು. 175 ರನ್‌ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ 18.2 ಓವರ್‌ಗಳಲ್ಲೇ 150 ರನ್‌ಗಳಿಗೆ ಸರ್ವಪತನ ಕಂಡು, ಆರ್‌ಸಿಬಿ ಎದುರು ಮಂಡಿಯೂರಿತು.

  • ಕ್ಯಾಪ್ಟನ್‌ ಕೊಹ್ಲಿ, ಡುಪ್ಲೆಸಿಸ್‌ ಶತಕದಾಟಕ್ಕೆ ಪಂಜಾಬ್‌ ಪಂಚರ್‌ – RCBಗೆ 24 ರನ್‌ಗಳ ಭರ್ಜರಿ ಜಯ

    ಕ್ಯಾಪ್ಟನ್‌ ಕೊಹ್ಲಿ, ಡುಪ್ಲೆಸಿಸ್‌ ಶತಕದಾಟಕ್ಕೆ ಪಂಜಾಬ್‌ ಪಂಚರ್‌ – RCBಗೆ 24 ರನ್‌ಗಳ ಭರ್ಜರಿ ಜಯ

    ಮೊಹಾಲಿ: ನಾಯಕ ವಿರಾಟ್‌ ಕೊಹ್ಲಿ ಹಾಗೂ ಫಾಫ್‌ ಡು ಪ್ಲೆಸಿಸ್‌ ಶತಕದ ಜೊತೆಯಾಟ ಹಾಗೂ ಮೊಹಮ್ಮದ್‌ ಸಿರಾಜ್‌ ಮಾರಕ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಕಿಂಗ್ಸ್‌ ಪಂಜಾಬ್‌ ವಿರುದ್ಧ 24 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ನಾಯಕತ್ವ ವಹಿಸಿಕೊಂಡಿದ್ದು ಮತ್ತೊಂದು ವಿಶೇಷ.

    ಮೊಹಾಲಿಯ ಐಎಸ್‌ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ವಿರಾಟ್‌ ಕೊಹ್ಲಿ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ 18.2 ಓವರ್‌ಗಳಲ್ಲೇ 150 ರನ್‌ಗಳಿಗೆ ಸರ್ವಪತನ ಕಂಡು, ಆರ್‌ಸಿಬಿ ಎದುರು ಮಂಡಿಯೂರಿತು.

    ಆರ್‌ಸಿಬಿ ನೀಡಿದ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕಿಂಗ್ಸ್‌ ಪಂಜಾಬ್‌ ತಂಡದ ಆಟಗಾರರು ಆರ್‌ಸಿಬಿ ಬೌಲರ್‌ಗಳ ದಾಳಿಗೆ ತತ್ತರಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಅಥರ್ವ ತೈದೆ 4 ರನ್‌, ಮ್ಯಾಥಿವ್‌ ಶಾರ್ಟ್‌ 8 ರನ್‌, ಲಿಯಾಮ್‌ ಲಿವಿಂಗ್ಸ್ಟನ್‌ 2 ರನ್‌ ಹಾಗೂ ಹರ್ಪ್ರೀತ್‌ ಸಿಂಗ್‌ 13 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಈ ನಡುವೆ ಮತ್ತೋರ್ವ ಆರಂಭಿಕ ಪ್ರಭ್‌ಸಿಮ್ರಾನ್‌ ಸಿಂಗ್‌ ಹಾಗೂ ಸ್ಯಾಮ್‌ ಕರ್ರನ್‌ ಉತ್ತಮ ಜೊತೆಯಾಟವಾಡಲು ಪ್ರಯತ್ನಿಸಿದರು. ಆದ್ರೆ ಆರ್‌ಸಿಬಿ ಬೌಲರ್‌ಗಳು ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿದರು. ಸ್ಯಾಮ್‌ ಕರ್ರನ್‌ ಕೇವಲ 10 ರನ್‌ ಗಳಿಸಿ ರನೌಟ್‌ಗೆ ತುತ್ತಾದ ಬೆನ್ನಲ್ಲೇ 46 ರನ್‌ (30 ಎಸೆತ, 3 ಬೌಂಡರಿ, 4 ಸಿಕ್ಸರ್‌) ಗಳಿಸಿದ್ದ ಪ್ರಭ್‌ಸಿಮ್ರಾನ್‌ ಸಹ ಕ್ಲೀನ್‌ ಬೌಲ್ಡ್‌ ಆದರು.

    ಮಧ್ಯಮ ಕ್ರಮಾಂಕದಲ್ಲಿ ಬಂದ ಎಂ.ಶಾರೂಖ್‌ ಖಾನ್‌ 7 ರನ್‌ ಗಳಿಸಿದ್ರೆ, ಹರ್ಪ್ರೀತ್‌ ಬ್ರಾರ್‌ 13 ರನ್‌, ನಾಥನ್‌ ಎಲ್ಲಿಸ್‌ ಕೇವಲ 1 ರನ್‌ ಗಳಿಸಿದರು. ಇತ್ತ ತಂಡ ವಿಕೆಟ್‌ ಕಳೆದುಕೊಳ್ಳುತ್ತಿದ್ದರ ಹೊರತಾಗಿಯೂ ಸ್ಫೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಜಿತೇಶ್‌ ಶರ್ಮಾ 27 ಎಸೆತಗಳಲ್ಲಿ 41 ರನ್‌ (3 ಸಿಕ್ಸರ್‌, 2 ಬೌಂಡರಿ) ಸಿಡಿಸಿದ್ದರು. ಕೊನೆಯ 11 ಎಸೆತಗಳಲ್ಲಿ 25 ರನ್‌ ಬೇಕಿದ್ದಾಗಲೇ ಶರ್ಮಾ ಸಿಕ್ಸರ್‌ ಸಿಡಿಸಲು ಮುಂದಾಗಿ ಕ್ಯಾಚ್‌ ನೀಡಿದರು. ಇದರಿಂದ ತಂಡ ನಿರಾಸೆಗೊಂಡಿತು. ಅಂತಿಮವಾಗಿ ಅರ್ಷ್‌ದೀಪ್‌ ಸಿಂಗ್‌ ಅಜೇಯರಾಗುಳಿದರು.

    ಆರ್‌ಸಿಬಿ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌ 4 ಓವರ್‌ಗಳಲ್ಲಿ ಕೇವಲ 21 ರನ್‌ ನೀಡಿ 4 ವಿಕೆಟ್‌ ಕಿತ್ತರು. ಇನ್ನುಳಿದಂತೆ ವಾನಿಂದು ಹಸರಂಗ 2 ವಿಕೆಟ್‌ ಪಡೆದರೆ, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಆರ್‌ಸಿಬಿ ತಂಡದಿಂದ ಆರಂಭಿಕರಾಗಿ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಫಾಫ್‌ ಡುಪ್ಲೆಸಿಸ್‌ ಸಿಕ್ಸರ್‌, ಬೌಂಡರಿಗಳ ಆಟದಿಂದ ಉತ್ತಮ ಶುಭಾರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 16.1 ಓವರ್‌ಗಳಲ್ಲಿ 137 ರನ್‌ಗಳ ಜೊತೆಯಾಟವಾಡಿತು. ಕೊಹ್ಲಿ 47 ಎಸೆತಗಳಲ್ಲಿ 59 ರನ್ (4 ಬೌಂಡರಿ, 1 ಸಿಕ್ಸರ್) ಗಳಿಸಿ ಔಟಾದರು. ಈ ಬೆನ್ನಲ್ಲೇ ಫಾಫ್‌ ಡುಪ್ಲೆಸಿಸ್‌ 56 ಎಸೆತಗಳಲ್ಲಿ 84 ರನ್ (5 ಬೌಂಡರಿ, 5 ಸಿಕ್ಸರ್ ) ಸಿಡಿಸಿ ಶತಕವಂಚಿತರಾದರು.

    ಕೊನೆಯಲ್ಲಿ ದಿನೇಶ್ ಕಾರ್ತಿಕ್ 7 ರನ್‌ ಗಳಿಸಿ ಔಟಾದರೆ, ಮಹಿಪಾಲ್ ಲೋಮ್ರೋರ್ 6 ರನ್‌, ಶಹಬಾಜ್ ಅಹ್ಮದ್ 5 ರನ್ ಗಳಿಸಿ ಅಜೇಯರಾಗುಳಿದರು. ಇನ್ನೂ ಕಳೆದ ಪಂದ್ಯದಲ್ಲಿ ಸಿಎಸ್‌ಕೆ ಬೌಲರ್‌ಗಳನ್ನು ಚೆಂಡಾಡಿದ್ದ ಗ್ಲೇನ್‌ ಮ್ಯಾಕ್ಸ್‌ವೆಲ್‌ ಮೊದಲ ಎಸೆತದಲ್ಲೇ ಡಕೌಟ್‌ ಆಗಿ ನಿರಾಸೆ ಮೂಡಿಸಿದರು.

    ಪಂಜಾಬ್ ಪರ ಹರ್ಪ್ರೀತ್‌ ಬ್ರಾರ್ 2 ವಿಕೆಟ್‌ ಪಡೆದರೆ, ನಾಥನ್ ಎಲ್ಲಿಸ್, ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

    ಮತ್ತೆ ಕ್ಯಾಪ್ಟನ್‌ ಆಗಿ ಕಣಕ್ಕಿಳಿದ ಕೊಹ್ಲಿ: ಪಂಜಾಬ್‌ ಕಿಂಗ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳು ನಿರೀಕ್ಷಿಸದ ಅಚ್ಚರಿಯೊಂದು ಕಾದಿತ್ತು. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದರು. ವಿರಾಟ್ ಕೊಹ್ಲಿ 2022ರ ಐಪಿಎಲ್ ಟೂರ್ನಿಯ ಆರಂಭಕ್ಕೂ ಮುನ್ನ ನಾಯಕತ್ವ ತ್ಯಜಿಸಿದ್ದರು. ಹೀಗಾಗಿ ಫಾಫ್ ಡು ಪ್ಲೆಸಿಸ್ ಕಳೆದ ವರ್ಷದ ಆವೃತ್ತಿಯಿಂದ ಆರ್‌ಸಿಬಿ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ವಿರಾಟ್ ಕೊಹ್ಲಿ ಅನುಭವಿ ಆಟಗಾರನಾಗಿ ನಾಯಕನಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಮತ್ತೆ ನಾಯಕನಾಗಿ ಕಣಕ್ಕಿಳಿಯುವ ಮೂಲಕ ಅಭಿಮಾನಿಗಳನ್ನ ರಂಜಿಸಿದರು.

  • IPL 2023: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ ಆಟ – ಲಕ್ನೋ ತವರಿನಲ್ಲಿ ಗೆದ್ದು ಬೀಗಿದ ಪಂಜಾಬ್‌

    IPL 2023: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ ಆಟ – ಲಕ್ನೋ ತವರಿನಲ್ಲಿ ಗೆದ್ದು ಬೀಗಿದ ಪಂಜಾಬ್‌

    ಲಕ್ನೋ: ಕೊನೆಯಲ್ಲಿ ಶಾರೂಖ್‌ ಖಾನ್‌ (M Shahrukh Khan) ಸಿಕ್ಸರ್‌, ಬೌಂಡರಿ ಆಟ ಹಾಗೂ ಸಿಕಂದರ್‌ ರಾಜಾ (Sikandar Raza) ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ (Punjab Kings), ಲಕ್ನೋ ಸೂಪರ್‌‌ ಜೈಂಟ್ಸ್‌ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿತು. 160 ರನ್‌ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ 19.3 ಓವರ್‌ಗಳಲ್ಲೇ 8 ವಿಕೆಟ್‌ ನಷ್ಟಕ್ಕೆ 161 ರನ್‌ ಗಳಿಸಿ ರೋಚಕ ಜಯ ಸಾಧಿಸಿತು.

    ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಪಂಜಾಬ್‌ ಕಿಂಗ್ಸ್‌ 159 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಸ್ಯಾಮ್ ಕರ್ರನ್‌ ತಂಡದ ನಾಯಕತ್ವ ವಹಿಸಿಕೊಂಡಿದ್ದರು.

    ಚೇಸಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್‌ ತಂಡವು ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ಉತ್ತಮ ಆರಂಭ ಪಡೆಯುವಲ್ಲಿ ವೀಫಲವಾಯಿತು. ಆರಂಭಿಕರಾದ ಅಥರ್ವ ತೈದೆ ಶೂನ್ಯ ಸುತ್ತಿದರೆ, ಪ್ರಭ್‌ಸಿಮ್ರಾನ್‌ ಸಿಂಗ್‌ ಕೇವಲ 4 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.  5ನೇ ವಿಕೆಟ್‌ಗೆ  ಜೊತೆಯಾಟವಾಡಿದ ಮ್ಯಾಥಿವ್‌ ಶಾರ್ಟ್‌ 34 ರನ್‌ (22 ಎಸೆತ, 5 ಬೌಂಡರಿ, 1 ಸಿಕ್ಸರ್‌) ಹಾಗೂ ಹರ್ಪ್ರೀತ್‌ ಸಿಂಗ್‌ 22 ರನ್‌ (22 ಎಸೆತ, 3 ಬೌಂಡರಿ) ಗಳಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಹರ್ಪ್ರೀತ್‌ ಸಿಂಗ್‌ ವಿಕೆಟ್‌ ಪತನವಾಗುತ್ತಿದ್ದಂತೆ ಕಣಕ್ಕಿಳಿದ ಸಿಕಂದರ್‌ ರಾಜಾ ಭರ್ಜರಿ ಬ್ಯಾಟಿಂಗ್‌ ಮಾಡುವ ಮೂಲಕ ಲಕ್ನೋ ಬೌಲರ್‌ಗಳನ್ನ ಬೆಂಡೆತ್ತಿದರು.

    ಬೌಲಿಂಗ್‌ನಲ್ಲಿ ಒಂದು ವಿಕೆಟ್‌ ಕಿತ್ತ ಸಿಕಂದರ್‌ ರಾಜಾ ಬ್ಯಾಟಿಂಗ್‌ನಲ್ಲಿ 57 ರನ್‌ (41 ಎಸೆತ, 4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಮಿಂಚಿದರು. ಇದರಿಂದ ತಂಡದಲ್ಲಿ ಗೆಲುವಿನ ಭರವಸೆ ಚಿಗುರಿತ್ತು. ಈ ಬೆನ್ನಲ್ಲೇ ನಾಯಕ ಸ್ಯಾಮ್‌ ಕರ್ರನ್‌ 6 ರನ್‌, ಜಿತೇಶ್‌ ಶರ್ಮಾ 2 ರನ್‌ ಗಳಿಸಿ ನಿರಾಸೆ ಮೂಡಿಸಿದ್ದರು. ಆದ್ರೆ ಕೊನೆಯಲ್ಲಿ ಎಂ. ಶಾರೂಖ್‌ ಖಾನ್‌ ಕೇವಲ 10 ಎಸೆತಗಳಲ್ಲಿ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಹರ್ಪ್ರೀತ್‌ ಬ್ರಾರ್‌ ಕೊನೆಯಲ್ಲಿ 6 ರನ್‌ ಗಳಿಸಿದರು.

    ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಉತ್ತಮ ಆರಂಭ ಪಡೆಯಿತು. ನಾಯಕ ಕೆ.ಎಲ್ ರಾಹುಲ್ ಮತ್ತು ಕೇಲ್ ಮೇಯರ್ಸ್ ಮೊದಲ ವಿಕೆಟ್‌ ಪತನಕ್ಕೆ 7.4 ಓವರ್‌ಗಳಲ್ಲಿ 53 ರನ್‌ ಕಲೆಹಾಕಿದ್ದರು. ಈ ವೇಳೆ ಕೇಲ್‌ ಮೇಯರ್ಸ್‌ 23 ಎಸೆತಗಳಲ್ಲಿ 29 ರನ್‌ ಗಳಿಸಿ ಔಟಾಗುತ್ತಿದ್ದಂತೆ, ಕ್ರೀಸ್‌ಗೆ ಬಂದ ದೀಪಕ್‌ ಹೂಡಾ ಕೇವಲ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ನಂತರ ಕಣಕ್ಕಿಳಿದ ಕೃನಾಲ್‌ ಪಾಂಡ್ಯ 17 ಎಸೆತಗಳಲ್ಲಿ 18 ರನ್ ಗಳಿಸುವ ಮೂಲಕ ನಾಯಕ ರಾಹುಲ್‌ಗೆ ಸಾಥ್‌ ನೀಡಿದರು. ಈ ಜೋಡಿ 35 ಎಸೆತಗಳಲ್ಲಿ 48 ರನ್‌ಗಳನ್ನು ಕಲೆಹಾಕಿತು. ಇನ್ನೂ ಕಳೆದ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ ಸ್ಫೋಟಕ 50 ರನ್‌ ಚಚ್ಚಿದ್ದ ನಿಕೋಲಸ್‌ ಪೂರನ್‌ ಈ ಬಾರಿ ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಔಟಾದರು.

    ನಂತರ ಕ್ರೀಸ್‌ಗೆ ಬಂದ ಮಾರ್ಕಸ್‌ ಸ್ಟೋಯ್ನಿಸ್‌ 15 ರನ್‌ ಗಳಿಸಿ ಔಟಾದ ನಂತರ ಕೃಷ್ಣಪ್ಪ ಗೌತಮ್‌ (1 ರನ್‌), ಯದ್ವೀರ್‌ ಸಿಂಗ್‌ (ಶೂನ್ಯ) ಬಹುಬೇಗನೆ ಕ್ರೀಸ್‌ನಿಂದ ನಿರ್ಗಮಿಸಿದರು. ಕೊನೆಯಲ್ಲಿ ಆಯುಷ್‌ ಬದೋನಿ 5 ರನ್‌, ರವಿ ಬಿಷ್ಣೋಯಿ 3 ರನ್‌ ಗಳಿಸಿ ಅಜೇಯರಾಗುಳಿದರು.

    ರಾಹುಲ್‌ ತಾಳ್ಮೆಯ ಆಟ:
    ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಲಕ್ನೋ ತಂಡದ ನಾಯಕ ಕೆ.ಎಲ್‌ ರಾಹುಲ್‌ ಇಂದು ತಾಳ್ಮೆಯ ಆಟವಾಡಿದರು. ಮೊದಲ ವಿಕೆಟ್‌ ಪತನಗೊಳ್ಳುತ್ತಿದ್ದಂತೆ ಜವಾಬ್ದಾರಿ ಆಟಕ್ಕೆ ಮುಂದಾದ ರಾಹುಲ್‌ 56 ಎಸೆತಗಳಲ್ಲಿ 74 ರನ್ (8 ಬೌಂಡರಿ, 1 ಸಿಕ್ಸರ್) ಗಳಿಸಿ ಕೊನೆಯ ಕ್ಷಣದಲ್ಲಿ ವಿಕೆಟ್ ಒಪ್ಪಿಸಿದರು. ಈ ಮೂಲಕ ರಾಹುಲ್‌ 2023ರ ಐಪಿಎಲ್‌ನಲ್ಲಿ ಮೊದಲ ಅರ್ಧಶತಕ ಗಳಿಸಿದರು.

    ಸ್ಯಾಮ್‌ ಬೌಲಿಂಗ್‌ ಮಿಂಚು:
    ಪಂಜಾಬ್‌ ಕಿಂಗ್ಸ್‌ ಪರ ನಾಯಕ ಸ್ಯಾಮ್ ಕರ್ರನ್ 3 ವಿಕೆಟ್ ಪಡೆದು ಮಿಂಚಿದರು. ಇದರೊಂದಿಗೆ ಕಗಿಸೊ ರಬಾಡ 2 ವಿಕೆಟ್ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ಹಪ್ರೀತ್ ಬ್ರಾರ್ ಮತ್ತು ಸಿಕಂದರ್ ರಾಜಾ ತಲಾ ಒಂದೊಂದು ವಿಕೆಟ್‌ ಕಿತ್ತರು.

  • IPl 2023: ಗುಜರಾತ್‌ ಗುನ್ನಕ್ಕೆ ಪಂಜಾಬ್‌ ಪಂಚರ್‌ – ರೋಚಕ ಪಂದ್ಯದಲ್ಲಿ ಟೈಟಾನ್ಸ್‌ಗೆ 6 ವಿಕೆಟ್‌ಗಳ ಜಯ

    IPl 2023: ಗುಜರಾತ್‌ ಗುನ್ನಕ್ಕೆ ಪಂಜಾಬ್‌ ಪಂಚರ್‌ – ರೋಚಕ ಪಂದ್ಯದಲ್ಲಿ ಟೈಟಾನ್ಸ್‌ಗೆ 6 ವಿಕೆಟ್‌ಗಳ ಜಯ

    ಮೊಹಾಲಿ: ಶುಭಮನ್‌ ಗಿಲ್‌ (Shubman Gill) ಭರ್ಜರಿ ಅರ್ಧ ಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಗುಜರಾತ್‌ ಜೈಂಟ್ಸ್‌ (Gujarat Titans) ತಂಡವು ಕಿಂಗ್ಸ್‌ ಪಂಜಾಬ್‌ (Punjab Kings) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

    ಕೊನೆಯ 6 ಎಸೆತಗಳಲ್ಲಿ 6 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್‌ಗಿಳಿದ ಸ್ಯಾಮ್‌ ಕರ್ರನ್‌ (Sam Curran) ಮೊದಲ ಎಸೆತದಲ್ಲಿ ರನ್‌ ನೀಡಿದರೆ, 2ನೇ ಎಸೆತದಲ್ಲಿ ಶುಭಮನ್‌ ಗಿಲ್‌ ಅವರನ್ನ ಕ್ಲೀನ್‌ ಬೌಲ್ಡ್‌ ಮಾಡಿದರು. ನಂತರ ಕ್ರೀಸ್‌ಗೆ ಬಂದ ರಾಹುಲ್‌ ತೆವಾಟಿಯ 1 ರನ್‌ ಕದ್ದರು, ಮರು ಎಸೆತದಲ್ಲಿ ಡೇವಿಡ್‌ ಮಿಲ್ಲರ್‌ ರನೌಟ್‌ ಆಗುವ ಸಾಧ್ಯತೆಯಿತ್ತು. ಆದರೆ ಒಂದು ಕರ್ರನ್‌ ಯಾವುದೇ ಪ್ರಯತ್ನ ಮಾಡದೇ 1 ರನ್‌ ನೀಡಿದರು. ಕೊನೆಯ 2 ಎಸೆತಗಳಲ್ಲಿ 4ರನ್‌ ಬೇಕಿದ್ದಾಗ ತೆವಾಟಿಯಾ ಬೌಂಡರಿ ಬಾರಿಸಿ ತಂಡಕ್ಕೆ ರೋಚಕ ಜಯ ತಂದರು.

    ಇಲ್ಲಿನ ಐಎಸ್‌ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಪಂಜಾಬ್‌ ಕಿಂಗ್ಸ್‌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 153 ರನ್‌ ಗಳಿಸಿತ್ತು. 154 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ಗುಜರಾತ್‌ ಟೈಟಾನ್ಸ್‌ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 154 ರನ್‌ ಗಳಿಸಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಗುಜರಾತ್‌ ಟೈಟಾನ್ಸ್‌ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ ಮೊದಲ ವಿಕೆಟ್‌ ಪತನಕ್ಕೆ 4.4 ಓವರ್‌ಗಳಲ್ಲಿ 48 ರನ್‌ ಕಲೆಹಾಕಿತ್ತು. ವೃದ್ಧಿಮಾನ್‌ ಸಾಹಾ 19 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ ಸ್ಫೋಟಕ 30 ರನ್‌ ಚಚ್ಚಿದರು. ಸಾಹಾ ಔಟಾಗುತ್ತಿದ್ದಂತೆ ರನ್‌ ಕದಿಯುವಲ್ಲಿ ತಂಡ ಹೆಣಗಾಡಿತ್ತು.

    ನಿಧಾನಗತಿಯ ಬ್ಯಾಟಿಂಗ್‌ ಮಾಡಿದ ಶುಭಮನ್‌ ಗಿಲ್‌ ಕೊನೆಯ ಓವರ್‌ ವರೆಗೂ ಹೋರಾಡಿ 49 ಎಸೆತಗಳಲ್ಲಿ 67 ರನ್‌ (7 ಬೌಂಡಿರಿ, 1 ಸಿಕ್ಸರ್‌) ಗಳಿಸಿ ಔಟಾದರು. ಈ ನಡುವೆ ಸಾಯಿ ಸುದರ್ಶನ್‌ 19 ರನ್‌, ಹಾರ್ದಿಕ್‌ ಪಾಂಡ್ಯ 8 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಕೊನೆಯಲ್ಲಿ ಡೇವಿಡ್‌ ಮಿಲ್ಲರ್‌ 17 ರನ್‌, 5 ರನ್‌ ಗಳಿಸಿ ಅಜೇಯರಾಗುಳಿದರು.

    ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌, ಕಗಿಸೋ ರಬಾಡ, ಹರ್ಪ್ರೀತ್‌ ಬ್ರಾರ್‌, ಸ್ಯಾಮ್‌ ಕರ್ರನ್‌ ತಲಾ ಒಂದೊಂದು ವಿಕೆಟ್‌ಕಿತ್ತರು.

    ಮೊದಲು ಬ್ಯಾಟಿಂಗ್‌ ಮಾಡಿದ್ದ ಪಂಜಾಬ್‌ ಕಿಂಗ್ಸ್‌ ಅಗ್ರಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳ ಕಳಪೆ ಪ್ರದರ್ಶನದಿಂದ ಬೃಹತ್‌ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ಮ್ಯಾಥಿವ್‌ ಶಾರ್ಟ್‌ 36‌ ರನ್‌, ಭಾನುಕ ರಾಜಪಕ್ಸ 20 ರನ್‌, ಜಿತೇಶ್‌ ಶರ್ಮಾ 25 ರನ್‌, ಸ್ಯಾಮ್‌ ಕರ್ರನ್‌ 22 ರನ್‌ ಹಾಗೂ ಎಂ.ಶಾರೂಖ್‌ ಖಾನ್‌ 22 ರನ್‌ ಗಳಿಸಿ, ತಂಡದ ಮೊತ್ತ 150ರನ್‌ ಗಡಿ ದಾಟಿಸಿದರು. ಆದರೆ ಯಾರೊಬ್ಬರು ಹೆಚ್ಚು ಮೊತ್ತ ಕಲೆಹಾಕದ ಕಾರಣ ತಂಡ ಸಾಧಾರಣ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

    ಗುಜರಾತ್‌ ಟೈಟಾನ್ಸ್‌ ಪರ ಮೋಹಿತ್‌ ಶರ್ಮಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಶಮಿ, ಜೋಶ್‌ ಲಿಟಲ್‌, ಅಲ್ಝರಿ ಜೋಸೆಫ್‌ ಹಾಗೂ ರಶೀದ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2023: ಪಂಜಾಬ್‌ಗೆ ಪಂಚ್‌ ಕೊಟ್ಟ ಸನ್‌ ರೈಸರ್ಸ್‌ – ಹೈದರಾಬಾದ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    IPL 2023: ಪಂಜಾಬ್‌ಗೆ ಪಂಚ್‌ ಕೊಟ್ಟ ಸನ್‌ ರೈಸರ್ಸ್‌ – ಹೈದರಾಬಾದ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ಹೈದರಾಬಾದ್‌: ರಾಹುಲ್‌ ತ್ರಿಪಾಠಿ ಭರ್ಜರಿ ಅರ್ಧ ಶತಕದ ಬ್ಯಾಟಿಂಗ್‌ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ಕಿಂಗ್ಸ್‌ ಪಂಜಾಬ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 143 ರನ್‌ ಗಳಿಸಿತು. 144 ರನ್‌ಗಳ ಗುರಿ ಬೆನ್ನತ್ತಿದ್ದ ಹೈದರಾಬಾದ್‌ ತಂಡ 17.1 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 145 ರನ್‌ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: IPL 2023: ಮೋದಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್‌ ಸಾಧನೆ ಮಾಡಿದ ರಶೀದ್‌ ಖಾನ್‌

    ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಹೈದರಾಬಾದ್‌ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಆರಂಭಿಕರಾದ ಹ್ಯಾರಿ ಬ್ರೂಕ್‌ 13 ರನ್‌, ಮಯಾಂಕ್‌ ಅಗರ್ವಾಲ್‌ 21 ರನ್‌ ಗಳಿಸಿ ಔಟಾಗಿದ್ದರು. ಮೊದಲ 6 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು ಕೇವಲ 34 ರನ್‌ ಗಳಿಸಿತ್ತು. ನಂತರ 3ನೇ ವಿಕೆಟ್‌ಗೆ ಜೊತೆಯಾದ ರಾಹುಲ್‌ ತ್ರಿಪಾಠಿ ಹಾಗೂ ನಾಯಕ ಏಡನ್‌ ಮಾರ್ಕಮ್ ಮುರಿಯದ 3ನೇ ವಿಕೆಟ್‌ಗೆ 52 ಎಸೆತಗಳಲ್ಲಿ 100 ರನ್‌ಗಳ ಜೊತೆಯಾಟವಾಡಿದರು.

    ರಾಹುಲ್‌ ತ್ರಿಪಾಠಿ 48 ಎಸೆತಗಳಲ್ಲಿ 74 ರನ್‌ (10 ಬೌಂಡರಿ, 3 ಸಿಕ್ಸರ್‌) ಸಿಡಿಸಿದರೆ, ಮಾರ್ಕಮ್‌ 37 ರನ್‌ (21 ಎಸೆತ, 6 ರನ್‌) ಗಳಿಸಿ ತಂಡದ ಗೆಲುವಿಗೆ ಆಸರೆಯಾದರು. ಕಿಂಗ್ಸ್‌ ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 -‌ KKRಗೆ 3 ವಿಕೆಟ್‌ಗಳ ರೋಚಕ ಜಯ

    ಇನ್ನೂ ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ ಪರ ಏಕಾಂಗಿ ಹೋರಾಟ ನಡೆಸಿದ ಶಿಖರ್ ಧವನ್ 1 ರನ್‌ನಿಂದ ಶತಕವಂಚಿತರಾದರು. 66 ಎಸೆತಗಳಲ್ಲಿ ಅಜೇಯ 99 ರನ್ ಗಳಿಸಿದ ಶಿಖರ್ ತಂಡ ಮೊತ್ತ 140ರ ಗಡಿದಾಟಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಸ್ಯಾಮ್‌ ಕರ್ರನ್‌ 22 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ ಎರಡಂಕಿಯ ಮೊತ್ತ ಗಳಿಸದ ಕಾರಣ ಪಂಜಾಬ್‌ ಅಲ್ಪಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

    ಹೈದರಾಬಾದ್‌ ಪರ ಮಿಂಚಿನ ಬೌಲಿಂಗ್‌ ದಾಳಿ ನಡೆಸಿದ ಮಯಾಂಕ್‌ ಮಾರ್ಕಂಡೆ, 4 ವಿಕೆಟ್‌ ಕಿತ್ತರೆ, ಉಮ್ರಾನ್‌ ಮಲಿಕ್‌, ಮಾರ್ಕೊ ಜಾನ್ಸೆನ್‌ ತಲಾ 2 ವಿಕೆಟ್‌ ಹಾಗೂ ಭುವನೇಶ್ವರ್‌ ಕುಮಾರ್‌ ಒಂದು ವಿಕೆಟ್‌ ಕಿತ್ತರು.

  • IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

    IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

    ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿಯ ಪರಿಣಾಮ ಮಳೆಯ ನಡುವೆಯೂ ಪಂಜಾಬ್‌ ಕಿಂಗ್ಸ್‌ (Punjab Kings), ಕೆಕೆಆರ್‌ (KKR) ವಿರುದ್ಧ 7 ರನ್‍ಗಳ ರೋಚಕ ಜಯ ಸಾಧಿಸಿದೆ.

    ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸುಧಾರಣೆಯಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ಕೊನೆಯ 24 ಎಸೆತಗಳಲ್ಲಿ 55 ರನ್‌ ಗಳ ಅಗತ್ಯವಿತ್ತು. ಆದರೆ ಮಳೆ ಅಡ್ಡಿಯಾದ್ದರಿಂದ ಡಕ್ವರ್ಥ್ ಲೂಯಿಸ್‌ ನಿಯಮ (DLS Method) ಅನ್ವಯಿಸಲಾಯಿತು. ಈ ನಿಯಮದಂತೆ ಪಂಜಾಬ್‌ 7 ರನ್‌ಗಳ ರೋಚಕ ಜಯ ಸಾಧಿಸಿತು.

    ಶನಿವಾರ ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಐಪಿಎಲ್‌ನ (IPL 2023) 2ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಭರ್ಜರಿ 191 ರನ್‌ ಕಲೆಹಾಕಿತ್ತು. 192 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ಮಳೆಯ ಕಾರಣ ನಿಗದಿತ 16 ಓವರ್‌ಗಳಲ್ಲಿ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳು ಪಂಜಾಬ್ ‌ಬೌಲರ್‌ಗಳ ದಾಳಿಗೆ ತತ್ತರಿಸಿದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

    ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್‌ ಸಿಂಗ್‌ 4 ಎಸೆತಗಳಲ್ಲಿ ಕೇವಲ 2 ರನ್‌ ಗಳಿಸಿದರೆ, ರಹಮಾನುಲ್ಲಾ ಗುರ್ಬಾಜ್ 16 ಎಸೆತಗಳಲ್ಲಿ 22 ರನ್‌ (3 ಬೌಂಡರಿ, 1 ಸಿಕ್ಸರ್‌) ಬಾರಿಸಿ ಪೆವಿಲಿಯನ್‌ ಸೇರಿದರು. ತಾಳ್ಮೆಯ ಆಟವಾಡಿದ ನಾಯಕ ನಿತೀಶ್‌ ರಾಣಾ (Nitish Rana) 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್‌ನೊಂದಿಗೆ 24 ರನ್‌ ಗಳಿಸಿದರು. ರಿಂಕು ಸಿಂಗ್‌, ಅನುಕುಲ್‌ ರಾಯ್‌ ತಲಾ 4 ರನ್‌ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಕೆಕೆಆರ್‌ ತಂಡ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

    ಮಧ್ಯಮ ಕ್ರಮಾಂಕದಲ್ಲಿ ಒಂದಾದ ವೆಂಕಟೇಶ್‌ ಅಯ್ಯರ್ (Venkatesh Iyer) ಹಾಗೂ ಆಂಡ್ರೆ ರಸೆಲ್ (Andre Russell) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ನೆರವಾದರು. ಇದರಿಂದ ಕೆಕೆಆರ್‌ಗೆ ಮತ್ತೆ ಗೆಲುವಿನ ಆಸೆ ಚಿಗುರಿತ್ತು. ಆದರೆ, ಸ್ಯಾಮ್‌ ಕರ್ರನ್‌, ಅರ್ಷ್‌ದೀಪ್‌ ಸಿಂಗ್‌ ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ವೆಂಕಟೇಶ್‌ ಅಯ್ಯರ್‌ 28 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ಸಹಿತ 34 ರನ್‌ ಗಳಿಸಿದರೆ, ರಸೆಲ್‌ 19 ಎಸೆತಗಳಲ್ಲಿ 2 ಸಿಕ್ಸರ್‌, 3 ಬೌಂಡರಿಯೊಂದಿಗೆ 35 ರನ್‌ ಚಚ್ಚಿ ಔಟಾದರು. ಕೊನೆಯಲ್ಲಿ ಶಾರ್ದೂಲ್‌ ಠಾಕೂರ್‌ 3 ಎಸೆತಗಳಲ್ಲಿ 8 ರನ್‌ ಹಾಗೂ ಸುನೀಲ್‌ ನರೇನ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಮಳೆ ಅಬ್ಬರಿಸಿದ್ದರಿಂದ ಡಕ್ವರ್ಥ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ನಿರಾಸೆಯುಂಟಾಯಿತು.

    ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌ 3 ವಿಕೆಟ್‌ ಪಡೆದರೆ, ಸ್ಯಾಮ್‌ ಕರ್ರನ್‌, ನಾಥನ್ ಎಲ್ಲಿಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ (Bhanuka Rajapaksa ಮತ್ತು ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

    ಭಾನುಕ ರಾಜಪಕ್ಸ ಕೇವಲ 32 ಎಸೆತಗಳಲ್ಲಿ 50 ರನ್ (5 ಬೌಂಡರಿ, 2 ಸಿಕ್ಸರ್‌) ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿ ಸಮೇತ 40 ರನ್ ಗಳಿಸಿ ಔಟಾದರು. ನಂತರ ಬಂದ ಜಿತೇಶ್ ಶರ್ಮಾ 11 ಎಸೆತಗಳಲ್ಲಿ 21 ರನ್‌ಗಳ (1 ಬೌಂಡರಿ, 2 ಸಿಕ್ಸರ್‌) ಕೊಡುಗೆ ನೀಡಿದರು. ಇದೇ ವೇಳೆ ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಾಜ 13 ಎಸೆತಗಳಲ್ಲಿ 16 ರನ್ ಗಳಿಸಿದರು.

    ಕೊನೆಯಲ್ಲಿ ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್ ಕರ್ರನ್ (Sam Curran) 17 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಬಾರಿಸಿದರೆ, ಶಾರೂಖ್ ಖಾನ್ 11 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

    ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನೂ ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಕಿತ್ತರು.

  • ಐಪಿಎಲ್ ಇತಿಹಾಸದಲ್ಲೇ ದುಬಾರಿ ಆಟಗಾರ – 18.50 ಕೋಟಿ ರೂ.ಗೆ ಬಿಕರಿಯಾದ ಸ್ಯಾಮ್ ಕರ್ರನ್

    ಐಪಿಎಲ್ ಇತಿಹಾಸದಲ್ಲೇ ದುಬಾರಿ ಆಟಗಾರ – 18.50 ಕೋಟಿ ರೂ.ಗೆ ಬಿಕರಿಯಾದ ಸ್ಯಾಮ್ ಕರ್ರನ್

    ತಿರುವನಂತಪುರಂ: ಐಪಿಎಲ್ ಮಿನಿ ಹರಾಜಿನಲ್ಲಿ (IPL Auction 2023) ಇಂಗ್ಲೆಂಡ್‍ನ ಸ್ಟಾರ್ ಆಲ್‍ರೌಂಡರ್ ಸ್ಯಾಮ್ ಕರ್ರನ್ (Sam Curran) 18.50 ಕೋಟಿ ರೂ.ಗೆ ಮಾರಾಟವಾಗಿದ್ದಾರೆ. ಈ ಮೂಲಕ ಐಪಿಎಲ್ (IPL) ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    ತೀವ್ರ ಪೈಪೋಟಿಯಿಂದ ಕೂಡಿದ ಬಿಡ್‍ನಲ್ಲಿ ಸ್ಯಾಮ್ ಕರ್ರನ್ ಖರೀದಿಸಲು ಪಂಜಾಬ್ ಹಾಗೂ ಮುಂಬೈ ನಡುವೆ ಬಾರಿ ಜಿದ್ದಾಜಿದ್ದು ಕಂಡುಬಂತು. ಅಂತಿಮವಾಗಿ ಪಂಜಾಬ್ ಕಿಂಗ್ಸ್ 18.50 ಕೋಟಿ ರೂ. ನೀಡಿ ಕರ್ರನ್‍ರನ್ನು ಖರೀದಿಸಿತು. ಈ ಮೂಲಕ ಕ್ರಿಸ್ ಮೋರಿಸ್ ಅವರ ಈ ಹಿಂದಿನ ದಾಖಲೆಯ ಬಿಡ್ ಪತನಗೊಂಡಿತು. ಈ ಹಿಂದೆ ಕ್ರಿಸ್ ಮೋರಿಸ್ ಅವರನ್ನು 16.25 ಕೋಟಿ ನೀಡಿ ರಾಜಸ್ಥಾನ ತಂಡ ಖರೀದಿಸಿತ್ತು ಇದು ಐಪಿಎಲ್ ಇತಿಹಾಸದಲ್ಲಿ ಹೆಚ್ಚಿನ ಬಿಡ್ ಮೊತ್ತವಾಗಿತ್ತು. ಇದೀಗ ಈ ದಾಖಲೆಯನ್ನು ಕರ್ರನ್ ಮುರಿದು ನೂತನ ದಾಖಲೆಯೊಂದಿಗೆ ಬಿಕರಿ ಆಟಗಾರನಾಗಿ ಹೊರ ಹೊಮ್ಮಿದ್ದಾರೆ. ಇದನ್ನೂ ಓದಿ: ರನ್‌ ಓಡಲು ಪಂತ್‌ ನಿರಾಕರಣೆ – ಗುರಾಯಿಸಿದ ಕೊಹ್ಲಿ

    ಸ್ಯಾಮ್ ಕರ್ರನ್ ಟಿ20 ವಿಶ್ವಕಪ್‍ನಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಇಂಗ್ಲೆಂಡ್ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಟೂರ್ನಿಯ ಸರಣಿ ಶ್ರೇಷ್ಠ ಆಟಗಾರನಾಗಿ ಹೊರಹೊಮ್ಮಿದ್ದರು. ಹಾಗಾಗಿ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಹುಸಿಯಾಗಿದೆ. ದಾಖಲೆಯ ಮೊತ್ತಕ್ಕೆ ಬಿಡ್ ಆಗಿದ್ದಾರೆ.

    ಕಳೆದ ಬಾರಿ ಮೆಗಾ ಹರಾಜಿನ ಮೊದಲು ಡ್ರಾಫ್ಟ್ ಪಿಕ್‍ನ ಭಾಗವಾಗಿ ರಾಹುಲ್ ಅವರಿಗೆ ಬರೋಬ್ಬರಿ 17 ಕೋಟಿ ರೂ. ನೀಡಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಖರೀದಿಸಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಖರೀದಿಯಾದ ಆಟಗಾರನಾಗಿ ರಾಹುಲ್ ಹೊರಹೊಮ್ಮಿದ್ದರು.

    Live Tv
    [brid partner=56869869 player=32851 video=960834 autoplay=true]