Tag: punjab

  • ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್

    ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್

    ಚಂಡೀಗಢ: ಪರಾರಿಯಾಗಿದ್ದ ಸಿಖ್ ಮೂಲಭೂತವಾದಿ, ಧರ್ಮಪ್ರಚಾರಕ ಅಮೃತಪಾಲ್ ಸಿಂಗ್ (Amritpal Singh) ಭಾನುವಾರ ಮೊಗಾದಲ್ಲಿ ಪಂಜಾಬ್ ಪೊಲೀಸರ (Punjab Police) ಮುಂದೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

    ಮಾಚ್ 18 ರಂದು ಪರಾರಿಯಾಗಿದ್ದ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನನ್ನು ಪತ್ತೆ ಹಚ್ಚಲು ಪಂಜಾಬ್ ಪೊಲೀಸರು ಹಲವು ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೂ ಅಮೃತ್‌ಪಾಲ್ ಯಾರ ಕಣ್ಣಿಗೂ ಬೀಳದಂತೆ ತನ್ನ ಸ್ಥಳಗಳನ್ನು ಆಗಾಗ ಬದಲಿಸುತ್ತಾ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ನೂರಾರು ಬೆಂಬಲಿಗರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

    ಇದೀಗ ಅಮೃತ್‌ಪಾಲ್ ಸಿಂಗ್ ಬಂಧನವನ್ನು ಪಂಜಾಬ್ ಪೊಲೀಸರು ದೃಢೀಕರಿಸಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಸುಳ್ಳು ಸುದ್ದಿಗಳನ್ನು ಹರಡದಂತೆ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

    ಅಮೃತ್‌ಪಾಲ್‌ ಸಿಂಗ್‌ ಯಾರು?: ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಗುಂಪುಗಳನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದ ಈತ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ

    ಅಮೃತ್‍ಪಾಲ್ ಸಿಂಗ್‌ಗೆ ಪಾಕಿಸ್ತಾನದ (Pakistan) ಗುಪ್ತಚರ ಇಲಾಖೆ ಐಎಸ್‌ಐ (ISI) ಬೆಂಬಲವಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು. ಅಮೃತಪಾಲ್‌ ಸಿಂಗ್‌ ಜಾರ್ಜಿಯಾಕ್ಕೆ ಭೇಟಿಯಾಗಿದ್ದ. ಅಲ್ಲಿ ಆತನಿಗೆ ಬೋಧನೆ ಮಾಡಲಾಗಿದೆ. ಖಲಿಸ್ತಾನ ಹೋರಾಟವನ್ನು ಜೀವಂತವಾಗಿಡಲು ಭಾರತದಲ್ಲಿ ಐಎಸ್‌ಐಗೆ ವ್ಯಕ್ತಿ ಬೇಕಿತ್ತು ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿತ್ತು. ಇದನ್ನೂ ಓದಿ:  ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

  • ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ – ನಾಲ್ವರು ಸಾವು

    ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ – ನಾಲ್ವರು ಸಾವು

    ಚಂಡೀಗಢ: ಬಟಿಂಡಾ ಸೇನಾ ಠಾಣೆಯೊಳಗೆ (Bathinda Military Station) ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಪಂಜಾಬ್‍ನಲ್ಲಿ (Punjab) ನಡೆದಿದೆ.

    ಘಟನೆಯ ನಂತರ ಸ್ಟೇಷನ್ ಕ್ವಿಕ್ ರಿಯಾಕ್ಷನ್ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ. ಸೇನಾ ಠಾಣೆಯೊಳಗೆ ಮುಂಜಾನೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

    ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಸುರೀಂದರ್ ಪಾಲ್ ಸಿಂಗ್ ಪರ್ಮಾರ್ ಮಾತನಾಡಿ, ಇದರಲ್ಲಿ ಯಾವುದೇ ಭಯೋತ್ಪಾದನಾ ದಾಳಿಯ ಕೋನವಿಲ್ಲ. ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರ ಎದೆ ನಡುಗಿಸುವಂತಿದೆ ಬಿಜೆಪಿ ಪಟ್ಟಿ: ಈಶ್ವರಪ್ಪ

    ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ, 2 ದಿನಗಳ ಹಿಂದೆ 28 ಕಾಟ್ರಿಡ್ಜ್‌ಗಳಿದ್ದ ಒಂದು ಇನ್ಸಾಸ್ ರೈಫಲ್ ನಾಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಘಟನೆಯ ಹಿಂದೆ ಕೆಲವು ಸೇನಾ ಸಿಬ್ಬಂದಿ ಇರಬಹುದು ಎಂದು ಶಂಕಿಸಿದೆ. ಇದನ್ನೂ ಓದಿ: 2 ಕಡೆ ಟಿಕೆಟ್ ಕೊಡ್ತಾರೆ ಅಂತ ಕನಸಲ್ಲೂ ಅನ್ಕೊಂಡಿರಲಿಲ್ಲ: ಸೋಮಣ್ಣ

  • ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್

    ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್

    ನವದೆಹಲಿ: ಪರಾರಿಯಾಗಿರುವ ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್‌ನ ಆಪ್ತ ಸಹಾಯಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಸೋಮವಾರ ಬಂಧಿಸಲಾಗಿದೆ.

    ಕಳೆದ ತಿಂಗಳು ಜಲಂಧರ್‌ನಲ್ಲಿ ಪೋಲೀಸರ ಬಲೆಯಿಂದ ಅಮೃತ್‌ಪಾಲ್ ಸಿಂಗ್ ಹಾಗೂ ಪಪ್ಪಲ್ಪ್ರೀತ್ ಸಿಂಗ್ ನಾಟಕೀಯವಾಗಿ ತಪ್ಪಿಸಿಕೊಂಡಿದ್ದರು. ಬಳಿಕ ಇಬ್ಬರೂ ಒಟ್ಟಿಗೆ ತಲೆಮರೆಸಿಕೊಂಡಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಮಾರ್ಗಗಳನ್ನು ಕಂಡುಹಿಡಿದು ಸ್ಥಳ ಬದಲಾವಣೆ ಮಾಡುತ್ತಿದ್ದರು. ಇದೀಗ ಪಂಜಾಬ್ ಪೊಲೀಸರ ಗುಪ್ತಚರ ಘಟಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಬಂಧಿಸಿದೆ.

    ಅಮೃತ್‌ಪಾಲ್ ಸಿಂಗ್ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ತನ್ನ ಗುರುತು ಯಾರಿಗೂ ಸಿಗದಂತೆ ವೇಷಗಳನ್ನು ಬದಲಿಸಿಕೊಂಡು, ಪಂಜಾಬ್ ಮಾತ್ರವಲ್ಲದೇ ದೆಹಲಿಯಲ್ಲಿಯೂ ತಿರುಗಾಡಿರುವುದು ಕೆಲ ದಿನಗಳ ಹಿಂದೆ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿತ್ತು. ಆತ ಪೊಲೀಸರ ಬಂಧನದಿಂದ ತಪ್ಪಿಸಿಕೊಂಡು 3 ವಾರ ಆಗಿದ್ದರೂ ಇಲ್ಲಿಯವರೆಗೆ ಅಧಿಕಾರಿಗಳಿಂದ ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ಇದೀಗ ಅಮೃತ್‌ಪಾಲ್ ಸಿಂಗ್‌ನ ಪತ್ತೆಗಾಗಿ ಪಂಜಾಬ್ ಪೊಲೀಸರಿಗೆ ಏಪ್ರಿಲ್ 14 ರಂದು ಬೈಸಾಖಿ ಆಚರಣೆ ವರೆಗೆ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಮೋದಿ ಇಡೀ ವಿಶ್ವಕ್ಕೆ ಹುಲಿ: ಈಶ್ವರಪ್ಪ

    ಇದೀಗ ಪಪ್ಪಲ್ಪ್ರೀತ್ ಸಿಂಗ್‌ನ ಬಂಧನವಾಗಿದ್ದು, ಈಗಲಾದರೂ ಅಮೃತ್‌ಪಾಲ್ ಸಿಂಗ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾನೆಯೇ ನೋಡಬೇಕಿದೆ. ಆತ ಈ ತಿಂಗಳ ಕೊನೆಯಲ್ಲಿ ಸಿಖ್ಖರ ಸಭೆಯನ್ನು ಕರೆದಿದ್ದಾನೆ. ಈ ಹಿನ್ನೆಲೆ ಆತ ಪಂಜಾಬ್‌ಗೆ ಆಗಮಿಸಿ ಪೊಲೀಸರಿಗೆ ಶರಣಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವಧುವಿಗೆ ಬಂತು ಕುತ್ತು- ಪೊಲೀಸರಿಂದ ಹುಡುಕಾಟ

  • ಟರ್ಬನ್ ಬಿಚ್ಚಿಟ್ಟು, ಸನ್‌ಗ್ಲಾಸ್, ಜಾಕೆಟ್ ತೊಟ್ಟು ದೆಹಲಿ ಬೀದಿಯಲ್ಲಿ ಕಂಡುಬಂದ ಅಮೃತ್‌ಪಾಲ್ ಸಿಂಗ್

    ಟರ್ಬನ್ ಬಿಚ್ಚಿಟ್ಟು, ಸನ್‌ಗ್ಲಾಸ್, ಜಾಕೆಟ್ ತೊಟ್ಟು ದೆಹಲಿ ಬೀದಿಯಲ್ಲಿ ಕಂಡುಬಂದ ಅಮೃತ್‌ಪಾಲ್ ಸಿಂಗ್

    – ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರೋ ಖಲಿಸ್ತಾನ್ ಹೋರಾಟಗಾರ

    ನವದೆಹಲಿ: ಪಂಜಾಬ್‌ನಿಂದ (Punjab) ಪರಾರಿಯಾಗಿ ಒಂದು ವಾರಕ್ಕೂ ಹೆಚ್ಚು ಕಾಲ ತಲೆಮರೆಸಿಕೊಂಡಿರುವ ಮೂಲಭೂತವಾದಿ ಸಿಖ್ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ (Amritpal Singh) ಇದೀಗ ದೆಹಲಿಯಲ್ಲಿ (Delhi) ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

    ಅಮೃತ್‌ಪಾಲ್ ಸಿಂಗ್ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದು, ತಮ್ಮ ಗುರುತು ಯಾರಿಗೂ ಸಿಗದಂತೆ ವೇಷವನ್ನು ಬದಲಿಸಿ ತಪ್ಪಿಸಿಕೊಳ್ಳುತ್ತಿದ್ದಾನೆ. ಇದೀಗ ದೆಹಲಿ ಬೀದಿಯಲ್ಲಿ ಕಂಡುಬಂದಿರುವ ಸಿಂಗ್ ಟರ್ಬನ್ (Turban) ಅನ್ನು ತೆಗೆದು, ಸನ್‌ಗ್ಲಾಸ್ ಹಾಗೂ ಜಾಕೆಟ್ ಧರಿಸಿ ಓಡಾಡಿದ್ದಾನೆ. ಸಿಸಿಟಿವಿ ದೃಶ್ಯದಲ್ಲಿ ಅಮೃತ್‌ಪಾಲ್ ಸಿಂಗ್ ಜೊತೆಗೆ ಆತನ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಕೂಡಾ ಕಾಣಿಸಿಕೊಂಡಿದ್ದಾನೆ. ಇಬ್ಬರೂ ತಮ್ಮ ಗುರುತುಗಳನ್ನು ಮರೆಮಾಚಲು ಮಾಸ್ಕ್‌ಗಳನ್ನು ಧರಿಸಿದ್ದಾರೆ.

    ವರದಿಗಳ ಪ್ರಕಾರ ಈ ಸಿಸಿಟಿವಿ ದೃಶ್ಯ ಮಾರ್ಚ್ 21ನೇ ತಾರೀಖಿನದ್ದಾಗಿದೆ. ಪಂಜಾಬ್‌ನಲ್ಲಿ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿರುವ 3 ದಿನಗಳ ಬಳಿಕದ ದೃಶ್ಯಗಳಾಗಿವೆ. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

    ಅಮೃತ್‌ಪಾಲ್ ಸಿಂಗ್ ಹಾಗೂ ಪಾಪಲ್‌ಪ್ರೀತ್ ಸಿಂಗ್ ಇಬ್ಬರೂ ಹರಿಯಾಣದ ಕುರುಕ್ಷೇತ್ರದ ಮೂಲಕ ದೆಹಲಿಗೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ ಇನ್ನು ಕೂಡಾ ದೆಹಲಿಯಲ್ಲಿಯೇ ತಲೆಮರೆಸಿಕೊಂಡಿದ್ದಾನೆಯೇ ಅಥವಾ ಅಲ್ಲಿಂದ ಬೇರೆಡೆಗೆ ಓಡಿಹೋಗಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.

    ಇದೀಗ ನೆರೆಯ ನೇಪಾಳದಲ್ಲಿ ಅಮೃತ್‌ಪಾಲ್ ಸಿಂಗ್‌ನನ್ನು ತನ್ನ ಕಣ್ಗಾವಲು ಪಟ್ಟಿಗೆ ಸೇರಿಸಿದೆ. ಏಕೆಂದರೆ ಆತ ನಕಲಿ ಪಾಸ್‌ಪೋರ್ಟ್ ಬಳಸಿ ಗಡಿ ದಾಟಲು ಯತ್ನಿಸುವ ಸಾಧ್ಯತೆಯಿದೆ. ಕಳೆದ ವಾರದಿಂದ ಆತ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋಗಿ ಮನೆಯೊಂದರಲ್ಲಿ ಆಶ್ರಯ ಪಡೆದಿರುವುದು ಹಲವು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಸಿಕ್ಕಿವೆ. ಇದನ್ನೂ ಓದಿ: ನೀವು ಮಾಡಿದ್ದೆಲ್ಲಾ ಸಹಿಸಿಕೊಂಡು ಬಿರಿಯಾನಿ ಹಾಕುವ 47ರ ಕಾಲವಲ್ಲ- SDPI ಮುಖಂಡನಿಗೆ ಸಿ.ಟಿ ರವಿ ವಾರ್ನಿಂಗ್

  • ಪಂಜಾಬ್‍ನಲ್ಲಿ ಸುಂಟರಗಾಳಿ ಅಪ್ಪಳಿಸಿ 12 ಮಂದಿಗೆ ಗಾಯ, 30 ಮನೆಗಳಿಗೆ ಹಾನಿ

    ಪಂಜಾಬ್‍ನಲ್ಲಿ ಸುಂಟರಗಾಳಿ ಅಪ್ಪಳಿಸಿ 12 ಮಂದಿಗೆ ಗಾಯ, 30 ಮನೆಗಳಿಗೆ ಹಾನಿ

    ಚಂಡಿಗಢ: ಪಂಜಾಬ್‍ನ (Punjab) ಬಕೆನ್‍ವಾಲಾ (Bakenwala) ಎಂಬಲ್ಲಿ ಭೀಕರ ಸುಂಟರಗಾಳಿ (Tornado) ಅಪ್ಪಳಿಸಿ 30 ಮನೆಗಳಿಗೆ ಹಾನಿಯಾಗಿದೆ. ಹಾಗೂ 12 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

    ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಗ್ರಾಮಸ್ಥರು ಸುಂಟರಗಾಳಿಯನ್ನು ನೋಡಿದ್ದಾರೆ. ಸುಮಾರು 2ರಿಂದ 2.5 ಕಿಮೀ ಪ್ರದೇಶದಲ್ಲಿ ಸುಂಟರಗಾಳಿ ಹಾನಿಯನ್ನುಂಟು ಮಾಡಿದೆ ಎಂದು ಬಕೆನ್‍ವಾಲಾ ನಿವಾಸಿ ಗುರುಮುಖ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದಶಪಥ ಹೆದ್ದಾರಿ ಟೋಲ್‍ನಲ್ಲಿ ತಾಂತ್ರಿಕ ಸಮಸ್ಯೆ, ಫಾಸ್ಟ್ ಟ್ಯಾಗ್ ನಲ್ಲಿ ಪದೇ ಪದೆ ಹಣ ಕಡಿತ

    ಗಾಳಿಯ ರಭಸಕ್ಕೆ ಹೊಲಗಳು ಮತ್ತು ತೋಟಗಳಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದೆ. ಮನೆ ಹಾನಿಗೊಳಗಾದ ಗ್ರಾಮಸ್ಥರನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಜಿಲ್ಲಾಧಿಕಾರಿ (Deputy Commissioner) ಸೇನು ದುಗ್ಗಲ್ ಸಂತ್ರಸ್ತ ಗ್ರಾಮಕ್ಕೆ ಭೇಟಿ ನೀಡಿ ಆಸ್ತಿ ಮತ್ತು ಬೆಳೆ (Property and crop) ನಷ್ಟದ ಪರಿಹಾರವನ್ನು ಸರ್ಕಾರ ನೀಡಲಿದೆ. ಈ ಬಗ್ಗೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಜನರಿಗೆ ಸಮಾಧಾನ ಹೇಳಿದ್ದಾರೆ.

    ಸುಂಟರಗಾಳಿಯ ವಿನಾಶದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದನ್ನೂ ಓದಿ: Congress First List: 6 ಮಹಿಳೆಯರಿಗೆ ಟಿಕೆಟ್‌

  • 12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್

    12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್

    ನವದೆಹಲಿ: ಖಲಿಸ್ತಾನ್ ಹೋರಾಟಗಾರ ಅಮೃತ್‌ಪಾಲ್ ಸಿಂಗ್ (Amritpal Singh) ಪಂಜಾಬ್‌ನಿಂದ (Punjab) ತಲೆ‌ಮರಿಸಿಕೊಂಡಿದ್ದು, ಆಪ್ತರು, ಸ್ನೇಹಿತರ ಸಹಕಾರ ಪಡೆದು ಪ್ರತಿ 12 ಗಂಟೆಗೊಮ್ಮೆ ಸ್ಥಳ ಬದಲಿಸುವ ಮೂಲಕ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಅಮೃತ್‌ಪಾಲ್ ಸಿಂಗ್ ಪತ್ತೆಗಾಗಿ ಬಲೆ ಬೀಸಿರುವ ಪೊಲೀಸರು ಹಗಲು ರಾತ್ರಿ ಎನ್ನದೇ ಹುಡುಕಾಟ ಮುಂದುವರಿಸಿದ್ದಾರೆ.

    ಮೂಲಗಳ ಪ್ರಕಾರ, ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಹರಡಿರುವ ಸಿಂಗ್ ಅವರ ಬೆಂಬಲಿಗರ ಪಟ್ಟಿಯನ್ನು ಪಂಜಾಬ್ ಪೊಲೀಸರು ಸಿದ್ಧಪಡಿಸಿದ್ದಾರೆ. ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತಿದೆ. ಹರಿಯಾಣ, ಪಂಜಾಬ್, ಉತ್ತರಾಖಂಡ ಅಥವಾ ಹಿಮಾಚಲ ಪ್ರದೇಶವನ್ನು ಹೊರತುಪಡಿಸಿ, ಸಿಂಗ್ ದೆಹಲಿಯಲ್ಲಿ ಅಡಗಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಮೃತ್‍ಪಾಲ್‍ಗೆ ಆಶ್ರಯ ಕೊಟ್ಟಿದ್ದ ಮಹಿಳೆ ಅರೆಸ್ಟ್

    ಅಮೃತ್‌ಪಾಲ್ ಸಿಂಗ್ ಮೊಬೈಲ್‌ಗಳನ್ನು ಬದಲಾವಣೆ ಮಾಡುತ್ತಿರುವುದರಿಂದ ಆತನ ನಿಖರ ಸ್ಥಳವನ್ನು ಪತ್ತೆಹಚ್ಚಲು ಏಜೆನ್ಸಿಗಳಿಗೆ ಸಾಧ್ಯವಾಗುತ್ತಿಲ್ಲ. ಆತ ಹಳೆಯ ಫೀಚರ್ ಫೋನ್ ಬಳಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಸರಿಯಾದ ಲೊಕೇಷನ್ ಕೂಡಾ ಪತ್ತೆಯಾಗುತ್ತಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.

    ಗುಪ್ತಚರ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ, ಅಮೃತ್‌ಪಾಲ್ ಸಿಂಗ್‌‌ಗೆ ಪಾಪಲ್ಪ್ರೀತ್ ಎನ್ನುವ ವ್ಯಕ್ತಿ ಸಹಾಯ ಮಾಡುತ್ತಿದ್ದು, ಪಂಜಾಬ್‌ನಿಂದ ಹರಿಯಾಣದ ಕುರುಕ್ಷೇತ್ರದಲ್ಲಿರುವ ಬಲ್ಜಿತ್ ಕೌರ್ ಅವರ ಮನೆಯಲ್ಲಿ ವಾಸಕ್ಕೆ ವ್ಯವಸ್ಥೆ ಮಾಡಿದರು. ಸದ್ಯ ಪಾಪಲ್ಪ್ರೀತ್ ಅನ್ನು ಬಂಧಿಸಿರುವ ಪೊಲೀಸರು ಮತ್ತಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಮಹಿಳೆಯರ ಅಶ್ಲೀಲ ವೀಡಿಯೋಗಳನ್ನಿಟ್ಟುಕೊಂಡು ಬ್ಲಾಕ್‌ಮೇಲ್ – ಅಮೃತ್‌ಪಾಲ್ ಕರಾಳ ಮುಖ ಬಯಲು

  • ಅಮೃತ್‍ಪಾಲ್‍ಗೆ ಆಶ್ರಯ ಕೊಟ್ಟಿದ್ದ ಮಹಿಳೆ ಅರೆಸ್ಟ್

    ಅಮೃತ್‍ಪಾಲ್‍ಗೆ ಆಶ್ರಯ ಕೊಟ್ಟಿದ್ದ ಮಹಿಳೆ ಅರೆಸ್ಟ್

    ಚಂಡೀಗಢ: ಆರು ದಿನಗಳ ಹಿಂದೆ ಪಂಜಾಬ್‍ (Punjab) ನಿಂದ ಎಸ್ಕೇಪ್ ಆಗಿದ್ದ ಖಲಿಸ್ತಾನ್ ಬೆಂಬಲಿಗ ಅಮೃತ್‍ಪಾಲ್ ಸಿಂಗ್ (Amritpal Singh) ಹರಿಯಾಣದಲ್ಲಿ ತಲೆಮರೆಸಿಕೊಂಡಿರುವ ಕುರುಹುಗಳು ಸಿಕ್ಕಿವೆ. ಸ್ಕೂಟರ್‍ನಲ್ಲಿ ತನ್ನ ಅನುಯಾಯಿ ಜೊತೆ ಕುರುಕ್ಷೇತ್ರಕ್ಕೆ ಬಂದಿದ್ದ ಅಮೃತ್‍ಪಾಲ್ ಸಿಂಗ್ ಮಹಿಳೆಯೊಬ್ಬರ ಮನೆಯಲ್ಲಿ ಒಂದು ರಾತ್ರಿ ತಲೆ ಮರೆಸಿಕೊಂಡಿದ್ದ ವಿಚಾರ ಬೆಳಕಿಗೆ ಬಂದಿದೆ.

    ಅಮೃತ್‍ಪಾಲ್‍ಗೆ ಒಂದು ರಾತ್ರಿ ಆಶ್ರಯಕೊಟ್ಟಿದ್ದ ಮಹಿಳೆ ಬಲ್ಜಿತ್ ಕೌರ್‍ರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದೀಗ ಹರಿಯಾಣದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ಅತ್ತ ಲಂಡನ್‍ನಲ್ಲಿ ಖಲಿಸ್ತಾನಿ ಬೆಂಬಲಿಗರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಭಾರೀ ಬಂದೋಬಸ್ತ್ ನಡುವೆಯೂ ಭಾರತೀಯ ಹೈಕಮೀಷನ್ ಕಚೇರಿ ಮೇಲೆ ನೀರಿನ ಬಾಟಲಿ ಎಸದಿದ್ದಾರೆ. ಯೋಜಿತ ರೀತಿಯಲ್ಲಿ ಹೈಕಮೀಷನ್ ಕಚೇರಿ ಬಳಿ ಬಂದ ಮಕ್ಕಳು, ಮಹಿಳೆಯರನ್ನು ಒಳಗೊಂಡ 2ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಖಲಿಸ್ತಾನ್ ಪರ ಘೋಷಣೆ ಕೂಗಿದ್ರು. ಇದನ್ನೂ ಓದಿ: ಮಹಿಳೆಯರ ಅಶ್ಲೀಲ ವೀಡಿಯೋಗಳನ್ನಿಟ್ಟುಕೊಂಡು ಬ್ಲಾಕ್‌ಮೇಲ್ – ಅಮೃತ್‌ಪಾಲ್ ಕರಾಳ ಮುಖ ಬಯಲು

    ಭಾರತ ವಿರೋಧಿ ಘೋಷಣೆ ಕೂಗಿದ್ರು. ಇದಕ್ಕೆ ಪ್ರತಿಯಾಗಿ ಭಾರತೀಯ ಹೈಕಮಿಷನ್ ಸಿಬ್ಬಂದಿ ಭಾರತದ ಧ್ವಜ ಪ್ರದರ್ಶಿಸಿ ತಿರುಗೇಟು ಕೊಟ್ಟರು. ಈ ಹಂತದಲ್ಲೇ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಕಚೇರಿ ಮೇಲೆ ಬಾಟಲ್‍ಗಳನ್ನು ಎಸೆದರು. ಕೂಡಲೇ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಇಂಡಿಯಾ ಹೌಸ್ ಪ್ರಾಂತ್ಯದಲ್ಲಿ ಇನ್ನಷ್ಟು ಭದ್ರತೆ ಹೆಚ್ಚಿಸಿದ್ರು. ಅಮೆರಿಕಾದ ಸ್ಯಾನ್‍ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೂ ಮುಂಜಾಗ್ರತಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ.

  • 80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

    80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

    ಚಂಡೀಗಢ: ಪಂಜಾಬ್‌ನಲ್ಲಿ (Punjab) ಗುಪ್ತಚರ ಇಲಾಖೆ ವಿಫಲವಾಗಿದ್ದು, 80 ಸಾವಿರ ಪೊಲೀಸರಿಂದ ಓರ್ವ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಾಗಿಲ್ಲ. ಅವರೆಲ್ಲಾ ಏನು ಮಾಡುತ್ತಿದ್ದಾರೆ? ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ (High Court) ಪಂಜಾಬ್ ಪೊಲೀಸ್ ಇಲಾಖೆಯನ್ನು ತರಾಟೆ ತೆಗೆದುಕೊಂಡಿದೆ.

    ಖಲಿಸ್ತಾನಿ (Khalistan) ಬೆಂಬಲಿಗ ಅಮೃತ್‌ಪಾಲ್ ಸಿಂಗ್ (Amritpal Singh) ನಾಪತ್ತೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ಗೆ ಪೊಲೀಸ್ ಇಲಾಖೆಯ ಪರ ವಕೀಲರು ಮಾಹಿತಿ ನೀಡಿದ್ದಾರೆ. ಅಮೃತ್‌ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಈ ವಾದ ಆಲಿಸಿದ ಬಳಿಕ ಗರಂ ಆದ ಕೋರ್ಟ್, ಪಂಜಾಬ್ ಸರ್ಕಾರ ತನ್ನ ಜವಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿತು. ಅಮೃತ್ ಪಾಲ್ ಹೊರತುಪಡಿಸಿ ಎಲ್ಲರನ್ನೂ ಬಂಧಿಸಿದ್ದು ಹೇಗೆ? ನಾವು ಕಥೆಯನ್ನು ನಂಬಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

    ಖಲಿಸ್ತಾನಿ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಬಂಧನಕ್ಕಾಗಿ ಕಳೆದ 4 ದಿನಗಳಿಂದ ಬಹುದೊಡ್ಡ ಕಾರ್ಯಾಚರಣೆಯನ್ನು ಪಂಜಾಬ್ ಪೊಲೀಸರು ಆರಂಭಿಸಿದ್ದಾರೆ. ಸತತ ಹುಡುಕಾಟದ ಬಳಿಕ ಅಮೃತ್ ಪಾಲ್ ಸಿಂಗ್ ಬಂಧಿಸುವಲ್ಲಿ ವಿಫಲವಾದ ಇಲಾಖೆ ಆತನ ಆಪ್ತರನ್ನು ಬಂಧಿಸಿದೆ. ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆ ರಾಜ್ಯದ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

  • ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

    ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

    ಚಂಡೀಗಢ: ಖಲಿಸ್ತಾನ್‌ (Khalistan) ಪರ ಸಹಾನುಭೂತಿ ಹೊಂದಿರುವ ಸಿಖ್‌ ಮೂಲಭೂತವಾಗಿ ಧರ್ಮ ಪ್ರಚಾರ ಅಮೃತ್‌ಪಾಲ್‌ ಸಿಂಗ್‌ (Amritpal Singh), ವ್ಯಸನಮುಕ್ತ ಕೇಂದ್ರಗಳು ಮತ್ತು ಗುರುದ್ವಾರದಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಮಾಡುತ್ತಿದ್ದಾರೆ. ಅಲ್ಲದೇ ಯುವಕರನ್ನು ಆತ್ಮಾಹುತಿ ದಾಳಿಗೆ ತಯಾರಿಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಬೆನ್ನಲ್ಲೇ ಭದ್ರತಾ ಪಡೆ ಎಚ್ಚೆತ್ತುಕೊಂಡಿದ್ದಾರೆ.

    ಕಳೆದ ವರ್ಷ ಸಿಂಗ್‌ ದುಬೈನಿಂದ ಬಂದಿದ್ದ. ಪಾಕಿಸ್ತಾನದ ಐಎಸ್‌ಐ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಅಮೃತ್‌ಪಾಲ್‌ ಸಿಂಗ್‌, ಯುವಕರನ್ನು ಮಾನವ ಬಾಂಬರ್‌ಗಳಾಗಲು ಮನವೊಲಿಸುವ ಕಾರ್ಯ ಮಾಡುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಭಾರತ ಧ್ವಜ ಕೆಳಗಿಳಿಸಿ ಖಲಿಸ್ತಾನ್‌ ಧ್ವಜ ಹಾರಿಸಿದ ಪ್ರತ್ಯೇಕತಾವಾದಿಗಳು – ಭಾರತ ಸರ್ಕಾರ ಬೇಸರ

    ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪದ ಮೇಲೆ ಅಮೃತ್‌ಪಾಲ್‌ ಸಿಂಗ್‌ ವಿರುದ್ಧ ಪಂಜಾಬ್‌ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಿಂಗ್‌ನ 80ಕ್ಕೂ ಹೆಚ್ಚು ಬೆಂಬಲಿಗರನ್ನು ಬಂಧಿಸಿದ್ದಾರೆ. ಅಮೃತ್‌ಪಾಲ್‌ನನ್ನೂ ಸಹ ಬಂಧಿಸಿ ಅಜ್ಞಾತ ಸ್ಥಳದಲ್ಲಿ ಪೊಲೀಸರು ಇರಿಸಿಕೊಂಡಿದ್ದಾರೆ ಎಂದು ಆತನ ಸಂಬಂಧಿಕರು ಆರೋಪಿಸಿದ್ದಾರೆ.

    ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಮವಸ್ತ್ರ ಮತ್ತು ಜಾಕೆಟ್‌ಗಳನ್ನು ಪಂಜಾಬ್‌ (Punjab) ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮೂಲಭೂತವಾದಿ ಸಿಖ್ ಪ್ರಚಾರಕರ ಕಾರಿನಲ್ಲಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು “ಎಕೆಎಫ್” ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ

    ವ್ಯಸನಮುಕ್ತ ಕೇಂದ್ರಗಳಲ್ಲಿ ದಾಖಲಾದ ಯುವಕರನ್ನು ಬಂದೂಕು ಸಂಸ್ಕೃತಿಯತ್ತ ಆಕರ್ಷಿಸಲಾಗುತ್ತಿದೆ. ಮಾನವ ಬಾಂಬರ್‌ಗಳಾಗಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್‌ ಅವರನ್ನು ಕೊಂದ ಭಯೋತ್ಪಾದಕ ದಿಲಾವರ್ ಸಿಂಗ್‌ನ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಯುವಕರ ಮನವೊಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

  • ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ

    ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ

    ಅಮೃತಸರ: ಖಲಿಸ್ತಾನಿ (Khalistan) ಪ್ರತ್ಯೇಕ ರಾಷ್ಟ್ರ ಹೋರಾಟಗಾರ ಅಮೃತ್‌ಪಾಲ್ ಸಿಂಗ್ (Amritpal Singh) ಪರಾರಿಯಾಗಿದ್ದು ಆತನನ್ನು ಬಂಧಿಸಲು ಪಂಜಾಬ್‌ ಪೊಲೀಸರು (Punjab Police) ಬಲೆ ಬೀಸಿದ್ದಾರೆ.

    ನೂರಾರು ಪೊಲೀಸರ ತಂಡ ಶನಿವಾರ ಆತನ ಮನೆ ಮೇಲೆ ದಾಳಿ ನಡೆಸಿದಾಗ ಪರಾರಿಯಾಗಿದ್ದ. ಈ ವೇಳೆ ಬೆನ್ನತ್ತಿ ಅಡ್ಡಗಟ್ಟಿದ್ದರೂ ಪೊಲೀಸರ ಕಣ್ಣುತಪ್ಪಿಸಿ ಪರಾರಿಯಾಗಿದ್ದಾನೆ.

    ಏಳು ಜಿಲ್ಲೆಗಳ ಸಿಬ್ಬಂದಿಯನ್ನು ಒಳಗೊಂಡ ರಾಜ್ಯ ಪೊಲೀಸರ ವಿಶೇಷ ತಂಡವು ಅಮೃತ್‌ಪಾಲ್‌ ಸಹಚಚರು ಜಲಂಧರ್‌ನ ಶಾಹಕೋಟ್ ತಹಸಿಲ್‌ಗೆ ತೆರಳುತ್ತಿದ್ದಾಗ ಹಿಂಬಾಲಿಸಿದೆ. ಕೊನೆಯದಾಗಿ ಆತ ಬೈಕ್‌ನಲ್ಲಿ ವೇಗವಾಗಿ ಸಂಚರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈಗಾಗಲೇ ಆತನ 78 ಮಂದಿ ಆಪ್ತರನ್ನು ಬಂಧಿಸಲಾಗಿದೆ. ಬಂಧಿಸಿದ ಬೆನ್ನಲ್ಲೇ ಆತನ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡುತ್ತಿರುವ ವೀಡಿಯೋಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಹಲವೆಡೆ ಇಂಟರ್‌ನೆಟ್‌ ಸೇವೆಗಳನ್ನು (Internet Service) ಬಂದ್‌ ಮಾಡಲಾಗಿದೆ. ಇದನ್ನೂ ಓದಿ: ಚಾಲಕರ ಮುಷ್ಕರ – ರಾತ್ರಿಯಿಡೀ ನಡೆದುಕೊಂಡೇ ಹೋಗಿ ವಧು ಮನೆ ಸೇರಿದ ವರನ ಕುಟುಂಬ

    ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಗುಂಪುಗಳನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದ ಈತ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇತ್ತೀಚೆಗೆ ಅಮೃತ್‌ಪಾಲ್ ಸಿಂಗ್ ಸಹಚರನನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಅಮೃತಸರದ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿ ಆತನ ಶಸ್ತ್ರಧಾರಿ ಬೆಂಬಲಿಗರು ದಾಂಧಲೆ ನಡೆಸಿದ್ದರು.

     

    ಅಮೃತ್‍ಪಾಲ್ ಸಿಂಗ್‌ಗೆ ಪಾಕಿಸ್ತಾನದ (Pakistan) ಗುಪ್ತಚರ ಇಲಾಖೆ ಐಎಸ್‌ಐ (ISI) ಬೆಂಬಲವಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು. ಅಮೃತಪಾಲ್‌ ಸಿಂಗ್‌ ಜಾರ್ಜಿಯಾಕ್ಕೆ ಭೇಟಿದ್ದ. ಅಲ್ಲಿ ಆತನಿಗೆ ಬೋಧನೆ ಮಾಡಲಾಗಿದೆ. ಖಲಿಸ್ತಾನ ಹೋರಾಟವನ್ನು ಜೀವಂತವಾಗಿಡಲು ಭಾರತದಲ್ಲಿ ಐಎಸ್‌ಐಗೆ ವ್ಯಕ್ತಿ ಬೇಕಿತ್ತು ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿತ್ತು.

    ನಾನು ಭಾರತೀಯನೇ ಅಲ್ಲ, ಪಾಸ್‍ಪೋರ್ಟ್ ಇದ್ದ ಮಾತ್ರಕ್ಕೆ ನಾನು ಭಾರತೀಯ ವ್ಯಕ್ತಿಯಾಗುವುದಿಲ್ಲ. ಅದು ಕೇವಲ ಟ್ರಾವೆಲ್ ಡಾಕ್ಯುಮೆಂಟ್ ಎಂದು ಹೇಳಿಕೊಂಡಿದ್ದ. ಸಿದ್ದಾಂತಕ್ಕೆ ಸಾವಿಲ್ಲ. ನಮ್ಮ ಸಿದ್ದಾಂತವೂ ಅಷ್ಟೇ. ಖಲಿಸ್ತಾನ್ ತಡೆಯಲು ನೋಡಿದರೆ ಇಂದಿರಾ ಗಾಂಧಿಗೆ ಆದ ಗತಿಯೇ ಅಮಿತ್ ಶಾಗೂ ಎದುರಾಗಲಿದೆ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದ.