Tag: punjab

  • ಗಡಿಯಲ್ಲಿ 12 ಕೆ.ಜಿ ಸರಕು ಹೊತ್ತ ಡ್ರೋನ್ ಹೊಡೆದುರುಳಿಸಿದ ಭಾರತ

    ಗಡಿಯಲ್ಲಿ 12 ಕೆ.ಜಿ ಸರಕು ಹೊತ್ತ ಡ್ರೋನ್ ಹೊಡೆದುರುಳಿಸಿದ ಭಾರತ

    ಚಂಡೀಗಢ: ಪಂಜಾಬ್‌ನ (Punjab) ಭಾರತ – ಪಾಕಿಸ್ತಾನ (India – Pakistan) ಗಡಿಯ (Border) ಭಾಗದಲ್ಲಿ ಅನುಮಾನಾಸ್ಪದವಾಗಿ ಹಾರಾಡುತ್ತಿದ್ದ ಸುಮಾರು 12 ಕೆ.ಜಿ ಸರಕನ್ನು ಹೊತ್ತಿದ್ದ ಡ್ರೋನ್ (Drone) ಒಂದನ್ನು ಭದ್ರತಾ ಪಡೆಗಳು (Security Force) ಭಾನುವಾರ ರಾತ್ರಿ ಹೊಡೆದುರುಳಿಸಿದ್ದಾರೆ.

    ಅಮೃತಸರ ಸೆಕ್ಟರ್‌ನ ರಾನಿಯಾ ಗಡಿ ಪೋಸ್ಟ್ ಬಳಿ ರಾತ್ರಿ 9:15ರ ಸುಮಾರಿಗೆ ಭದ್ರತಾ ಪಡೆಗಳು ಕ್ವಾಡ್ ಕಾಪ್ಟರ್ ಸ್ಪೋರ್ಟಿಂಗ್ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾರಾಣಸಿಯಲ್ಲಿ ಗಂಗಾರತಿ ಮಾಡಿದ ‘ಬನಾರಸ್’ ಹೀರೋ ಝೈದ್ ಖಾನ್

    ಡ್ರೋನ್‌ನಲ್ಲಿ ಲೋಡ್ ಮಾಡಲಾಗಿದ್ದ ಹಾಗೂ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸರಕನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡ್ರೋನ್‌ನಲ್ಲಿ ಯಾವ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂಬುದು ಸ್ಪಷ್ಟವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಗಡಿ ಭದ್ರತಾ ಪಡೆ (BSF) ತಿಳಿಸಿದ್ದಾರೆ. ಇದನ್ನೂ ಓದಿ: ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಇದು ಕಳೆದ 3 ದಿನಗಳಲ್ಲಿ ನಡೆದ 2ನೇ ಘಟನೆಯಾಗಿದೆ. ಅಕ್ಟೋಬರ್ 13-14ರ ಮಧ್ಯರಾತ್ರಿ ಪಂಜಾಬ್‌ನ ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಡ್ರೋನ್ ಹಾರಾಡಿದ್ದು, ಅದನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜೀವ ಬೆದರಿಕೆ – ಐವರು BJP ನಾಯಕರಿಗೆ `Y-ಶ್ರೇಣಿ’ ಭದ್ರತೆ

    ಜೀವ ಬೆದರಿಕೆ – ಐವರು BJP ನಾಯಕರಿಗೆ `Y-ಶ್ರೇಣಿ’ ಭದ್ರತೆ

    ಚಂಡೀಗಢ: ಪಂಜಾಬ್‌ನ (Panjab) ಐವರು ಬಿಜೆಪಿ ನಾಯಕರಿಗೆ (BJP Leader) ಜೀವ ಬೆದರಿಕೆ ಇರುವುದಾಗಿ ಗುಪ್ತಚರ ಇಲಾಖೆ ವರದಿ ಮಾಡಿದ ಬಳಿಕ ಐವರಿಗೆ Y-ಶ್ರೇಣಿ ಭದ್ರತೆ (Y-Category Security) ಕಲ್ಪಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

    ಗುಪ್ತಚರ ಇಲಾಖೆ (Intelligence Bureau) ವರದಿ ಆಧರಿಸಿ ಗೃಹ ಸಚಿವಾಲಯವು (Home Affairs Ministry) ಅಮರಿಕ್ ಸಿಂಗ್ ಅಲಿವಾಲ್, ಹರ್ಜಿಂದರ್ ಸಿಂಗ್, ಹರ್ಚಂದ್ ಕೌರ್, ಪ್ರೇಮ್ ಮಿತ್ತಲ್ ಹಾಗೂ ಕಮಲದೀಪ್ ಸೈನಿ ಐವರು ನಾಯಕರಿಗೆ ಭದ್ರತೆ ಕಲ್ಪಿಸಿದೆ. ಈ ಐವರು ನಾಯಕರು ಪಂಜಾಬ್ (Punjab) ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಬಿಜೆಪಿ ಸೇರಿದ್ದರು. ಇದನ್ನೂ ಓದಿ: ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ

    ಹೀಗಿರಲಿದೆ Y-ಶ್ರೇಣಿ ಭದ್ರತೆ: ವೈ ಶ್ರೇಣಿ ಭದ್ರತೆಯು ದೇಶದ 4ನೇ ಹಂತದ ಭದ್ರತಾ ಶ್ರೇಣಿಯಾಗಿದೆ. ವೈ-ಶ್ರೇಣಿಯಲ್ಲಿ ಒಬ್ಬರು ಅಥವಾ ಇಬ್ಬರು ಎನ್‌ಎಸ್‌ಜಿ ಕಮಾಂಡೋಗಳು (NSG commandos) ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ.

    Live Tv
    [brid partner=56869869 player=32851 video=960834 autoplay=true]

  • ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ – ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರರು ಸೇರ್ಪಡೆ

    ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ – ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರರು ಸೇರ್ಪಡೆ

    ಚಂಡೀಗಢ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆಯನ್ನು (IAF weapon system branch) ರಚಿಸಲು ಸರ್ಕಾರ ಅನುಮೋದನೆ ನೀಡಿದೆ. ಅಲ್ಲದೇ ಮುಂದಿನ ವರ್ಷದಿಂದ ವಾಯುಪಡೆಗೆ ಮಹಿಳಾ ಅಗ್ನಿವೀರರನ್ನು (Female Agniveer) ನೇಮಿಸಲಾಗುತ್ತದೆ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ (IAF chief Air Chief Marshal Vivek Ram Chaudhari ) ಹೇಳಿದ್ದಾರೆ.

    ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ ವೇಳೆ ಚಂಡೀಗಢದಲ್ಲಿ ಮಾತನಾಡಿದ ಅವರು, ಐಎಎಫ್ ಅಧಿಕಾರಿಗಳಿಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆಯನ್ನು ರಚಿಸಲು ಸರ್ಕಾರ ಅನುಮೋದನೆ ನೀಡಿದೆ. ಇದು ಸ್ವಾತಂತ್ರದ ನಂತರ ಮೊದಲ ಬಾರಿಗೆ ರಚಿಸಲಾಗುತ್ತಿರುವ ಹೊಸ ಕಾರ್ಯಾಚರಣೆಯ ಶಾಖೆಯಾಗಿದೆ. ಇದು ಮೂಲಭೂತವಾಗಿ ಎಲ್ಲಾ ರೀತಿಯ ಇತ್ತೀಚಿನ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಹೊಂದಿರುತ್ತದೆ. ಇದರಿಂದ ಸರ್ಕಾರಕ್ಕೆ 3,400 ಕೋಟಿ ರೂ. ಉಳಿತಾಯವಾಗುತ್ತದೆ. ಜೊತೆಗೆ ಮುಂದಿನ ವರ್ಷದಿಂದ ವಾಯುಪಡೆಗೆ ಮಹಿಳಾ ಅಗ್ನಿವೀರರನ್ನು ಸೇರ್ಪಡೆಗೊಳಿಸಲು ಐಎಎಫ್ ಯೋಜಿಸುತ್ತಿದೆ ಎಂದು ತಿಳಿಸಿದ್ದಾರೆ.

    ಅಗ್ನಿಪಥ್ ಯೋಜನೆಯಿಂದಾಗಿ ( Agnipath scheme) ಭಾರತೀಯ ವಾಯುಪಡೆಗೆ ಅಗ್ನಿವೀರರನ್ನು ಸೇರಿಸಿಕೊಳ್ಳುವುದು ಒಂದು ದೊಡ್ಡ ಸವಾಲಾಗಿದೆ. ಆದರೆ ಅದಕ್ಕೂ ಮುಖ್ಯವಾಗಿ, ಇದು ಭಾರತದ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊರೆತಿರುವ ಒಂದು ಅವಕಾಶವಾಗಿದೆ ಎಂದಿದ್ದಾರೆ.  ಇದನ್ನೂ ಓದಿ: ತಮಿಳುನಾಡಿನಲ್ಲಿ ಆನ್‌ಲೈನ್‌ ಗೇಮ್ಸ್ ಬ್ಯಾನ್? – ಶೀಘ್ರದಲ್ಲಿ ಸರ್ಕಾರದಿಂದ ಆದೇಶ ಸಾಧ್ಯತೆ

    ಐಎಎಫ್ ಮೂಲಕ ವೃತ್ತಿಜೀವನ ಪ್ರಾರಂಭಿಸಲು ಪ್ರತಿಯೊಬ್ಬ ಅಗ್ನಿವೀರ್ ಉತ್ತಮ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕಾರ್ಯಾಚರಣೆಯ ತರಬೇತಿ ವಿಧಾನವನ್ನು ಬದಲಾಯಿಸಿದ್ದೇವೆ. ಈ ವರ್ಷದ ಡಿಸೆಂಬರ್‍ನಲ್ಲಿ ಆರಂಭಿಕ ತರಬೇತಿಗಾಗಿ 3,000 ಅಗ್ನಿವೀರರನ್ನು ವಾಯುಪಡೆಗೆ ಸೇರಿಸಿಕೊಳ್ಳುತ್ತೇವೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಸಿಬ್ಬಂದಿಯನ್ನು ಹೆಚ್ಚಾಗಿ ಸೇರಿಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳನೆಂದು ಭಾವಿಸಿ ಭಿಕ್ಷುಕನಿಗೆ ಥಳಿಸಿದ ಸಾರ್ವಜನಿಕರು

    ಇದೇ ಮೊದಲ ಬಾರಿಗೆ ದೆಹಲಿಯ ಹೊರಗಿರುವ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು. ಇಲ್ಲಿನ ಸುಕ್ನ ಕೆರೆಯ ಮೇಲೆ ಸುಮಾರು 80 ವಿಮಾನಗಳು ಗಂಟೆಗಳ ಕಾಲ ತಮ್ಮ ಸಾಮಥ್ರ್ಯ, ಚಮತ್ಕಾರಗಳನ್ನು ಬಾನಂಗಳದಲ್ಲಿ ಪ್ರದರ್ಶಿಸಿದವು. ಹೊಸ ಯುದ್ಧ ಸಮವಸ್ತ್ರವನ್ನು ಕೂಡ ಇಂದು ಅನಾವರಣಗೊಳಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಮಕ್ಕಳ ಕಳ್ಳನೆಂದು ಭಾವಿಸಿ ಭಿಕ್ಷುಕನಿಗೆ ಥಳಿಸಿದ ಸಾರ್ವಜನಿಕರು

    ಮಕ್ಕಳ ಕಳ್ಳನೆಂದು ಭಾವಿಸಿ ಭಿಕ್ಷುಕನಿಗೆ ಥಳಿಸಿದ ಸಾರ್ವಜನಿಕರು

    ಚಂಡೀಗಢ: ಮಕ್ಕಳ ಕಳ್ಳನೆಂದು ಭಾವಿಸಿ ಭಿಕ್ಷುಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಚಂಡೀಗಢದ (Chhattisgarh) ದುರ್ಗ್‍ನಲ್ಲಿ ( Durg) ನಡೆದಿದೆ.

    ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಭಿಕ್ಷುಕನಿಗೆ ಥಳಿಸಿದ ಮೂವರನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 34 (ಏಕೋದ್ದೇಶವನ್ನು ಮುಂದುವರಿಸಲು ಅನೇಕ ವ್ಯಕ್ತಿಗಳು ಮಾಡಿದ ಕೃತ್ಯಗಳು), 294 (ಅಶ್ಲೀಲ ಕೃತ್ಯಗಳು ಮತ್ತು ಅಶ್ಲೀಲ ಪದಗಳನ್ನು ಬಳಸುವುದು), 506 (ಆಪರಾಧಿಕ ಭಯೋತ್ಪಾದನೆಗೆ ದಂಡನೆ) ಮತ್ತು 323 (ಸ್ವಯಿಚ್ಛೆಯಿಂದ ಗಾಯವನ್ನುಂಟು ಮಾಡಿದ್ದಕ್ಕೆ ದಂಡನೆ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

    POLICE JEEP

    ಬಳಿಕ ಭಿಕ್ಷುಕನನ್ನು ಸ್ಥಳೀಯ ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಇನ್ನೂ ಭಿಕ್ಷುಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಆತನನ್ನು ಮಾನಸಿಕ ಅಸ್ವಸ್ಥರ ಆರೈಕೆ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಆತನ ಯೋಗಕ್ಷೇಮವನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ತಾಯಿ ಜೊತೆ ಅನೈತಿಕ ಸಂಬಂಧ – ಪಿಡಿಓ ಕೊಲೆ ಮಾಡಿದ `ಶೀಲವಂತ’ರು

    ಮಕ್ಕಳ ಕಳ್ಳನೆಂದು ಶಂಕಿಸಿ ಸ್ಥಳೀಯರು ಥಳಿಸಿರುವ ಎರಡನೇ ಘಟನೆ ಇದಾಗಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ಪೊಲೀಸರು ಸ್ಥಳೀಯರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಹಿಂದೆ ಮದರಸಾದಲ್ಲಿ ಹಿಂದೂಗಳು ಪೂಜೆ ಮಾಡಿದ ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ ಕೊಡುಗೆ ನೀಡಿದ ಇನ್ಫೋಸಿಸ್‌

    ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ ಕೊಡುಗೆ ನೀಡಿದ ಇನ್ಫೋಸಿಸ್‌

    ಪಂಜಾಬ್: ಇಲ್ಲಿನ ಮೊಗಾ ಜಿಲ್ಲೆಯಲ್ಲಿ ಶಾಲಾ ಶಿಕ್ಷಣವನ್ನು ಆಧುನೀಕರಿಸಲು ಇನ್ಫೋಸಿಸ್ (Infosys), ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ಗಳನ್ನು ವಿತರಿಸಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

    ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಮತ್ತು ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವುದು ಈ ನೆರವಿನ ಮುಖ್ಯ ಉದ್ದೇಶವಾಗಿದೆ ಎಂದು ಆಡಳಿತ ತಿಳಿಸಿದೆ. ಮೊಗಾ ಜಿಲ್ಲೆ ಡಿಸಿ ಕುಲವಂತ್ ಸಿಂಗ್ ಮಾತನಾಡಿ, ಅಭಿವೃದ್ಧಿಗಾಗಿ ʻಆಕಾಂಕ್ಷೆಯ ಜಿಲ್ಲೆʼ ಎಂದು ಕೇಂದ್ರವು ಆಯ್ಕೆ ಮಾಡಿರುವ ಜಿಲ್ಲೆಗಳಲ್ಲಿ ಮೊಗಾವು ಸೇರಿದೆ. ಇದನ್ನೂ ಓದಿ: ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆಸ್ಪತ್ರೆಗೆ ದಾಖಲು

    ಇನ್ಫೋಸಿಸ್ ಮೊಗಾ ಜಿಲ್ಲೆಗೆ ಇದುವರೆಗೆ 350 ಕಂಪ್ಯೂಟರ್‌ಗಳನ್ನು ಒದಗಿಸಿದ್ದು, ಇದರಲ್ಲಿ ಕಳೆದ ವರ್ಷ 200 ಕಂಪ್ಯೂಟರ್‌ಗಳನ್ನು ಸರ್ಕಾರಿ ಶಾಲೆಗಳಿಗೆ ಹಂಚಿಕೆ ಮಾಡಲಾಗಿತ್ತು. ಈಗ ಪಡೆದ 150 ಕಂಪ್ಯೂಟರ್‌ಗಳನ್ನು ಶೀಘ್ರದಲ್ಲೇ ಶಾಲೆಗಳಿಗೆ ಹಂಚಿಕೆ ಮಾಡಲಾಗುವುದು. ಈ ಕ್ರಮದಿಂದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್‌ಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಡಿಸಿ ತಿಳಿಸಿದ್ದಾರೆ.

    ಇನ್ಫೋಸಿಸ್‌ನೊಂದಿಗೆ ನಿರಂತರ ಸಂಪರ್ಕದಲ್ಲಿರುವ ಜಿಲ್ಲಾಧಿಕಾರಿಗೆ ಉಪ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ರಾಕೇಶ್ ಕುಮಾರ್ ಮಕ್ಕರ್ ಧನ್ಯವಾದ ತಿಳಿಸಿದರು. ಎಲ್ಲಾ ಸರ್ಕಾರಿ ಶಾಲೆಗಳನ್ನು ಆಧುನಿಕ ಮತ್ತು ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಮಕ್ಕರ್ ಹೇಳಿದರು. ಇದನ್ನೂ ಓದಿ: ಫೇಕ್ ಮ್ಯಾರೇಜ್ ಸರ್ಟಿಫಿಕೇಟ್ ಸೃಷ್ಟಿ – ಸತ್ತವನ 19 ಕೋಟಿ ಆಸ್ತಿ ಹೊಡೆದ್ಲು ಖತರ್ನಾಕ್ ಸುಂದ್ರಿ

    Live Tv
    [brid partner=56869869 player=32851 video=960834 autoplay=true]

  • ನವರಾತ್ರಿಯಲ್ಲಿ ಸಿಎಂ ಭಗವಂತ್ ಮಾನ್ ಗರ್ಬಾ ಡ್ಯಾನ್ಸ್

    ನವರಾತ್ರಿಯಲ್ಲಿ ಸಿಎಂ ಭಗವಂತ್ ಮಾನ್ ಗರ್ಬಾ ಡ್ಯಾನ್ಸ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್ (Punjab Chief Minister Bhagwant Mann) ಅವರು ಶನಿವಾರ ರಾತ್ರಿ ಗುಜರಾತ್‍ನಲ್ಲಿ ನಡೆದ ನವರಾತ್ರಿ ಉತ್ಸವದಲ್ಲಿ (Navratri festivities) ಪಾಲ್ಗೊಂಡರು. ಈ ವೇಳೆ ಯಾವುದೇ ಪೂರ್ವಸಿದ್ಧತೆಯಿಲ್ಲದೇ ಗಾರ್ಬಾ ಟ್ಯೂನ್‍ಗೆ (Garba tune) ನೃತ್ಯ ಮಾಡಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ರಾಜ್‍ಕೋಟ್‍ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರೇಕ್ಷಕರು ಭಗವತ್ ಮಾನ್ ಅವರನ್ನು ಹುರಿದುಂಬಿಸುವುದರೊಂದಿಗೆ ಕೆಲವು ಭಾಂಗ್ರಾ ಸ್ಟೆಪ್ಸ್ (Bhangra moves) ಹಾಕುವಂತೆ ಒತ್ತಾಯಿಸಿದರು. ಹೀಗಾಗಿ ಪ್ರೇಕ್ಷರನ್ನು ಸಂತೋಷ ಪಡಿಸಲು ಭಗವಂತ್ ಮಾನ್ ಅವರು ನೃತ್ಯ ಮಾಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

    ವರ್ಷಕ್ಕೊಮ್ಮೆ ಬರುವ ಹಿಂದೂ ಹಬ್ಬಗಳಲ್ಲಿ ನವರಾತ್ರಿ ಕೂಡ ದೊಡ್ಡ ಹಬ್ಬವಾಗಿದ್ದು, ಇದರಲ್ಲಿ ಒಂಬತ್ತು ರಾತ್ರಿ ದುರ್ಗಾದೇವಿಯನ್ನು ಪೂಜಿಸಲಾಗುತ್ತದೆ. ಗುಜರಾತ್‍ನ ಫೇಮಸ್ ನೃತ್ಯವನ್ನು ಈ ಸಮಯದಲ್ಲಿ ಆಡುತ್ತಾರೆ. ನವರಾತ್ರಿಯು ವಾರ್ಷಿಕ ಹಿಂದೂ ಹಬ್ಬವಾಗಿದ್ದು, ಇದರಲ್ಲಿ ಒಂಬತ್ತು ರಾತ್ರಿ ದುರ್ಗಾದೇವಿಯನ್ನು ಪೂಜಿಸಲಾಗುತ್ತದೆ, ಗರ್ಬಾ ಗುಜರಾತ್‍ನ ಸಿಗ್ನೇಚರ್ ನೃತ್ಯ ಪ್ರಕಾರವಾಗಿದೆ, ಭಾಂಗ್ರಾಗೂ ಪಂಜಾಬ್‍ಗೂ ವಿಶಿಷ್ಟವಾದ ಸಂಬಂಧವಿದೆ.

    ಇತ್ತೀಚೆಗಷ್ಟೇ ವಡೋದರದಲ್ಲಿ ನಡೆದ ಮತ್ತೊಂದು ಸಾರ್ವಜನಿಕ ಸಮಾರಂಭದಲ್ಲಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ (Raghav Chadha) ಗರ್ಬಾ ನೃತ್ಯ ಮಾಡಿ ಪ್ರೇಕ್ಷಕರೊಂದಿಗೆ ಕುಪ್ಪಳಿಸಿದ್ದರು. ಈ ವೀಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ರಾಹುಲ್‌, ಸೋನಿಯಾ ಗಾಂಧಿ ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ

    Live Tv
    [brid partner=56869869 player=32851 video=960834 autoplay=true]

  • AAP ಉರುಳಿಸಲು ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕುತಂತ್ರ ನಡೆಸುತ್ತಿವೆ – ಭಗವಂತ್ ಮಾನ್

    AAP ಉರುಳಿಸಲು ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕುತಂತ್ರ ನಡೆಸುತ್ತಿವೆ – ಭಗವಂತ್ ಮಾನ್

    ಚಂಡೀಗಢ: ಆಮ್ ಆದ್ಮಿ ಪಕ್ಷವನ್ನು (AAP) ಉರುಳಿಸಲು ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಪರಸ್ಪರ ಕುತಂತ್ರ ನಡೆಸುತ್ತಿವೆ ಎಂದು ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Maan) ಆರೋಪಿಸಿದ್ದಾರೆ.

    ಅವರಿಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು (Punjab Government) ಉರುಳಿಸಲು ಕೈಜೋಡಿವೆ. ಹಾಗಾಗಿ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಮಂಡಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

    ಪಂಜಾಬ್‌ನಲ್ಲಿ ಹಿಂಬಾಗಿಲಿನಿಂದ ಸರ್ಕಾರ ರಚಿಸಲು ಬಿಜೆಪಿ ಪಕ್ಷಾಂತರ ನಿಷೇಧ ಕಾನೂನನ್ನು ಸಾಧನವಾಗಿ ಬಳಸುತ್ತಿದೆ. ದುರಾದೃಷ್ಟವಶಾತ್ ಕಾಂಗ್ರೆಸ್ ಸಹ ಇದನ್ನು ಬೆಂಬಲಿಸುತ್ತಿದೆ. ಬಿಜೆಪಿಯು ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ (Karnataka) ಮತ್ತು ಇತರ ರಾಜ್ಯಗಳಲ್ಲಿ ಶಾಸಕರನ್ನು ಸೆಳೆಯುವ ಮೂಲಕ ಚುನಾಯಿತ ಸರ್ಕಾರಗಳನ್ನು ಉರುಳಿಸಿದೆ. ಆದರೆ ತಮ್ಮ ಕೆಟ್ಟ ನಡೆಯಿಂದ ದೆಹಲಿಯಲ್ಲಿ ಮೂರು ಬಾರಿಯೂ ಅಧಿಕಾರಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ. ಈಗ ಪಂಜಾಬ್‌ನಲ್ಲಿ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    AAP 02

    ಬಿಜೆಪಿ (BJP) ತನ್ನ ಹಣದ ಚೀಲಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವಕ್ಕೆ ತುಂಬಲಾರದ ನಷ್ಟವುಂಟುಮಾಡುತ್ತಿದೆ. ಹಿಂದೆ ಕಾಂಗ್ರೆಸ್ (Congress) ಸಹ ಅದನ್ನೇ ಮಾಡಿತ್ತು. ಈಗ ಕೇಸರಿ ಪಕ್ಷವೂ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ದಸರಾ ಉದ್ಘಾಟನೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ವಿ. ಸೋಮಣ್ಣ ಕೆಂಡಾಮಂಡಲ

    ಇದೇ ವೇಳೆ ಭಾರತ್ ಜೋಡೋ ಯಾತ್ರೆ (Bharat Jodo Yatra) ಕುರಿತು ಟೀಕಿಸಿದ ಮಾನ್, ಕಾಂಗ್ರೆಸ್ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ `ಭಾರತ್ ಜೋಡೋ ಯಾತ್ರೆ’ ಹಮ್ಮಿಕೊಂಡಿದೆ. ಆದರೆ ಬಿಜೆಪಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳನ್ನ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • X-ray ಫಿಲ್ಮ್ ಖಾಲಿ – ಮೊಬೈಲಿನಲ್ಲಿಯೇ ಫೋಟೋ ಕ್ಲಿಕ್ಕಿಸಿ ಕೊಟ್ಟ ಆಸ್ಪತ್ರೆ ಸಿಬ್ಬಂದಿ

    X-ray ಫಿಲ್ಮ್ ಖಾಲಿ – ಮೊಬೈಲಿನಲ್ಲಿಯೇ ಫೋಟೋ ಕ್ಲಿಕ್ಕಿಸಿ ಕೊಟ್ಟ ಆಸ್ಪತ್ರೆ ಸಿಬ್ಬಂದಿ

    ಚಂಡೀಗಢ: ನಿಮ್ಮ ಬಳಿ ಸ್ಮಾರ್ಟ್ ಫೋನ್ (Smart Phone) ಇಲ್ವಾ ಹಾಗಾದ್ರೆ ನಿಮಗೆ ಎಕ್ಸ್-ರೇ ಪ್ರಿಂಟ್ ಕೂಡಾ ಸಿಗಲ್ಲ. ಹೀಗಂತ ಹೇಳಿ ರೋಗಿಗಳ ಸ್ಮಾರ್ಟ್ ಫೋನ್‌ಗಳಲ್ಲಿಯೇ ಎಕ್ಸ್-ರೇ (X-Ray) ಫೋಟೋವನ್ನು ಆಸ್ಪತ್ರೆ ಸಿಬ್ಬಂದಿ ಕ್ಲಿಕ್ಕಿಸಿ ಕೊಟ್ಟ ವಿಚಿತ್ರ ಘಟನೆ ಪಂಜಾಬ್‌ನ (Punjab) ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ನಡೆದಿದೆ.

    ಪಂಜಾಬ್‌ನ ಪಟಿಯಾಲದಲ್ಲಿ (Patiala) ಸರ್ಕಾರಿ ಮಾತಾ ಕೌಶಲ್ಯ ಆಸ್ಪತ್ರೆಯಲ್ಲಿ ಸಿಬ್ಬಂದಿ ರೋಗಿಳ ಎಕ್ಸ್-ರೇ ಫೋಟೋಗಳನ್ನು ಅವರ ಫೋನ್‌ಗಳಲ್ಲಿಯೇ ಕ್ಲಿಕ್ಕಿಸಿ ಕೊಟ್ಟಿದ್ದಾರೆ. ಎಕ್ಸ್-ರೇಯ ಪ್ರಿಂಟ್ ಕೊಡಿ ಎಂದರೆ, ಅವರು ರೋಗಿಗಳ ಬಳಿ ಎಕ್ಸ್-ರೇ ಫಿಲ್ಮ್ ಖಾಲಿಯಾಗಿದೆ ಎಂದು ಕಾರಣ ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

    ವಿಪರ್ಯಾಸವೆಂದರೆ ಪಂಜಾಬ್‌ನ ಆರೋಗ್ಯ ಸಚಿವ ಚೇತನ್ ಸಿಂಗ್ ಅವರ ತವರೂರು ಆಗಿರುವ ಪಟಿಯಾಲದಲ್ಲಿಯೇ ಇಂತಹ ವಿಚಿತ್ರ ಘಟನೆ ನಡೆದಿದೆ. ಮಾತ್ರವಲ್ಲದೇ ಈ ಘಟನೆ ನಡೆಯುವುದಕ್ಕೂ 2 ದಿನ ಮೊದಲು ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: BBMP ಹೊಸ ಪ್ಲಾನ್ – ರಸ್ತೆ ಗುಂಡಿ ಮುಚ್ಚಲು ಆ್ಯಪ್ ಬಳಕೆ

    ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ತಲೆಯೇ ಕೆಡಿಸಿಕೊಳ್ಳದ ಆಸ್ಪತ್ರೆಯ ಅಧಿಕಾರಿಗಳು, ನಾವು ರೋಗಿಗಳೊಂದಿಗೆ ಸಹಾನುಭೂತಿಯಿಂದಲೇ ವರ್ತಿಸುತ್ತೇವೆ. ಅವರ ಬಳಿ ಸ್ಮಾರ್ಟ್ ಫೋನ್ ಇಲ್ಲದೇ ಹೋದರೂ ನಮ್ಮ ಎಕ್ಸ್-ರೇ ವಿಭಾಗದಿಂದ ಸಿಬ್ಬಂದಿ ನೇರವಾಗಿ ಸಂಬಂಧಪಟ್ಟ ವೈದ್ಯರಿಗೆ ಎಕ್ಸ್-ರೇ ಫೋಟೋಗಳನ್ನು ಕಳುಹಿಸುತ್ತಾರೆ. ಇದು ರೋಗಿಗಳ ಹಣವನ್ನೂ ಉಳಿಸುತ್ತದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಸಂದೀಪ್ ಕೌರ್ ಹೇಳಿದ್ದಾರೆ. ಆದರೆ ಆಸ್ಪತ್ರೆಯ ದುಸ್ಥಿತಿಗೆ ಜನರು ಹೈರಾಣಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಶೇಷ ಅಧಿವೇಶನ ನಡೆಸಲು ಕೊನೆಗೂ ಒಪ್ಪಿಗೆ ನೀಡಿದ ಪಂಜಾಬ್ ಗವರ್ನರ್

    ವಿಶೇಷ ಅಧಿವೇಶನ ನಡೆಸಲು ಕೊನೆಗೂ ಒಪ್ಪಿಗೆ ನೀಡಿದ ಪಂಜಾಬ್ ಗವರ್ನರ್

    ಚಂಡೀಗಢ: ಸೆಪ್ಟೆಂಬರ್ 22 ರಂದು ವಿಶ್ವಾಸಮತ ಚಲಾಯಿಸಲು ಪಂಜಾಬ್‌ನ (Punjab) ಆಮ್ ಆದ್ಮಿ ಪಕ್ಷ (AAP) ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶವನ್ನು (One Day Special Session) ಪಂಜಾಬ್‌ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ರದ್ದುಗೊಳಿಸಿದ್ದರು. ಇದೀಗ ಸೆಪ್ಟೆಂಬರ್ 27ರಂದು 1 ದಿನದ ವಿಧಾನಸಭೆ ಅಧಿವೇಶನ ನಡೆಸುವ ಸರ್ಕಾರದ ಮನವಿಯನ್ನು ಅವರು ಅಂಗೀಕರಿಸಿದ್ದಾರೆ.

    ಭಗವಂತ್ ಮಾನ್ (Bhagwant Mann) ನೇತೃತ್ವದ ಎಎಪಿ ಸರ್ಕಾರ ಸರಕು ಸೇವಾ ತೆರಿಗೆ, ವಿದ್ಯುತ್ ಪೂರೈಕೆಯಂತಹ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 27ರಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ನಡೆಸಲಿದೆ. ಇದಕ್ಕೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಭಾನುವಾರ ತಿಳಿಸಿದ್ದಾರೆ.

    Bhagwant Mann

    ಪಂಜಾಬ್‌ನ ಎಎಪಿ ಸರ್ಕಾರ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿತ್ತು. ಇದಾದ ಬಳಿಕ ಮಾನ್ ವಿಶ್ವಾಸ ಮತ ಪಡೆಯಲು ಸೆಪ್ಟೆಂಬರ್ 22 ರಂದು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದ್ದರು. ಇದನ್ನೂ ಓದಿ: ಎಸ್.ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದು, ಗಾಬರಿ ಬೇಡ: ಬಸವರಾಜ್ ಬೊಮ್ಮಾಯಿ

    ಅಧಿವೇಶನ ನಡೆಸಲು ರಾಜ್ಯಪಾಲರು ಮೊದಲಿಗೆ ಅನುಮತಿ ನೀಡಿದರೂ ಬಳಿಕ ಅದನ್ನು ಹಿಂತೆಗೆದುಕೊಂಡರು. ಇದಾದ ಬಳಿಕ ಪಂಜಾಬ್ ಸಿಎಂ ರಾಜಭವನದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದಾಗಿ ತಿಳಿಸಿದ್ದರು. ಇದೀಗ ಸೆಪ್ಟೆಂಬರ್ 27ರಂದು ಅಧಿವೇಶನ ನಡೆಸಲು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಇದನ್ನೂ ಓದಿ: PFI ಶಂಕಿತರ ಮೊಬೈಲ್‌ನಲ್ಲಿತ್ತು ಸಾಕ್ಷಿಗಳನ್ನೇ ನಾಶ ಮಾಡುವ ಆಪ್

    Live Tv
    [brid partner=56869869 player=32851 video=960834 autoplay=true]

  • ಚಂಡೀಗಢ ವೀಡಿಯೋ ಲೀಕ್ ಕೇಸ್ – ಯುವತಿಗೆ ಬ್ಲ್ಯಾಕ್‌ಮೇಲ್, ಯೋಧ ಅರೆಸ್ಟ್

    ಚಂಡೀಗಢ ವೀಡಿಯೋ ಲೀಕ್ ಕೇಸ್ – ಯುವತಿಗೆ ಬ್ಲ್ಯಾಕ್‌ಮೇಲ್, ಯೋಧ ಅರೆಸ್ಟ್

    ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ಹಾಸ್ಟೆಲ್ ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ವಿಡಿಯೋ ರೆಕಾರ್ಡ್ (Bathroom Video) ಮಾಡಿದ್ದ ಪ್ರಕರಣದಲ್ಲಿ, ಆಕೆಗೆ ಬ್ಲ್ಯಾಕ್‌ಮೇಲ್ (Blackmail) ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು (Punjab Police) ಶನಿವಾರ ಅರುಣಾಚಲ ಪ್ರದೇಶದಲ್ಲಿ ಸೇನಾ ಸಿಬ್ಬಂದಿಯನ್ನು (Soldier) ಬಂಧಿಸಿದ್ದಾರೆ.

    ಕಳೆದ ಶನಿವಾರ ವಿದ್ಯಾರ್ಥಿನಿಯೊಬ್ಬಳು ಬಾತ್‌ರೂಂ ವೀಡಿಯೋಗಳನ್ನು ಸೆರೆಹಿಡಿದು ತನ್ನ ಗೆಳೆಯನಿಗೆ ಕಳುಹಿಸುತ್ತಿದ್ದ ವಿಷಯ ಬೆಳಕಿಗೆ ಬಂದ ಬಳಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಬಳಿಕ ವೀಡಿಯೋ ಸೆರೆಹಿಡಿದಿದ್ದ ವಿದ್ಯಾರ್ಥಿನಿ, ಪ್ರಕರಣಕ್ಕೆ ಸಂಬಂಧಿಸಿದ ಹಿಮಾಚಲ ಪ್ರದೇಶದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದರು.

    ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡ ಸಾಧನಗಳಿಂದ ಡಿಜಿಟಲ್ ಸಾಕ್ಷ್ಯಗಳನ್ನು ಪತ್ತೆಹಚ್ಚಿ ಇಂದು ಮೊಹಾಲಿಯ ಪೊಲೀಸರ ತಂಡ ಯೋಧ ಸಂಜೀವ್ ಸಿಂಗ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಅಶ್ಲೀಲ ಚಿತ್ರದ ವಿರುದ್ಧ ಕರ್ನಾಟಕ ಸೇರಿದಂತೆ ದೇಶಾದ್ಯಂತ 56 ಸ್ಥಳಗಳಲ್ಲಿ ಸಿಬಿಐ ದಾಳಿ

    ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಇತರ ವಿದ್ಯಾರ್ಥಿನಿಯರ ವೀಡಿಯೋಗಳು ಲೀಕ್ ಆಗಿರುವುದಾಗಿ ವದಂತಿ ಹಬ್ಬಿದ ಬಳಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಆದರೆ ಬಂಧಿತ ವಿದ್ಯಾರ್ಥಿನಿ ತನ್ನ ಸ್ವಂತ ಖಾಸಗಿ ವೀಡಿಯೋಗಳನ್ನು ತನ್ನ ಗೆಳೆಯನಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾಳೆ. ಬಳಿಕ ವಿದ್ಯಾರ್ಥಿನಿಗೆ ವೀಡಿಯೋಗಳನ್ನು ಕಳುಹಿಸಲು ಬ್ಲ್ಯಾಕ್‌ಮೇಲೆ ಮಾಡಲಾಗಿತ್ತೇ ಎಂಬ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಿಎಫ್‌ಐ ಪ್ರತಿಭಟನೆ ವೇಳೆ ಪಾಕ್ ಪರ ಘೋಷಣೆ – ಪ್ರಕರಣ ದಾಖಲು

    Live Tv
    [brid partner=56869869 player=32851 video=960834 autoplay=true]