Tag: punjab

  • ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ

    ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ

    ಚಂಡೀಗಢ: 82 ವರ್ಷದ ವೃದ್ಧನೊಬ್ಬ ತನ್ನ ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದಿರುವ ಹೃದಯವಿದ್ರಾವಕ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ, ಬಲ್ವಂತ್ ಸಿಂಗ್ ತನ್ನ ದತ್ತು ಪುತ್ರ ಸುಖ್ವಿಂದರ್ ಸಿಂಗ್ ಜೊತೆ ವಾಸವಿದ್ದರು. ವೃದ್ಧ ವಯೋಸಹಜವಾಗಿ ಹೆಚ್ಚೇನೂ ಮಾತನಾಡದೇ ಇರುತ್ತಿದ್ದು, ತನ್ನ ಮಗ ಮೃತಪಟ್ಟಿರುವ ಬಗ್ಗೆ ತಿಳಿಯದೇ ಹೋಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಬಲ್ವಂತ್ ಸಿಂಗ್ ಇದ್ದ ಮನೆಯಿಂದ ದುರ್ನಾತ ಬರುತ್ತಿದ್ದುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮೊದಲಿಗೆ ಪೊಲೀಸರು ಮನೆಯೊಳಗಿರುವವರನ್ನು ಹೊರಗೆ ಕರೆಯಲು ಪ್ರಯತ್ನಿಸಿದ್ದರು. ಆದರೆ ಯಾರೂ ಉತ್ತರಿಸದ ಕಾರಣ ತಾವೇ ಬಾಗಿಲು ಮುರಿದು ಒಳ ಹೊಕ್ಕಿದ್ದಾರೆ. ಇದನ್ನೂ ಓದಿ: ಶೀತಲ ಸಮರವನ್ನು ಕೊನೆಗೊಳಿಸಿದ್ದ ಸೋವಿಯತ್ ನಾಯಕ ಮಿಖಾಯಿಲ್ ಗೋರ್ಬಚೇವ್ ನಿಧನ

    ಪೊಲೀಸರು ಮನೆ ಒಳಗೆ ಹೊಕ್ಕಾಗ ವೃದ್ಧ ತನ್ನ ಮಗನ ಶವದ ಪಕ್ಕದಲ್ಲಿ ಕುಳಿತಿದ್ದಿದ್ದು ಕಂಡುಬಂದಿದೆ. ಅಸ್ವಸ್ಥನಾಗಿ, ಅರೆಪ್ರಜ್ಞಾವಸ್ಥೆಯಲ್ಲಿದ್ದ ವೃದ್ಧನನ್ನು ಬಳಿಕ ಪೊಲೀಸರು ಹಿರಿಯ ನಾಗರಿಕ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

    ಮೆನೆಯಲ್ಲಿ ಪತ್ತೆಯಾದ ಶವ ಬಲ್ವಂತ್ ಸಿಂಗ್‌ನ ದತ್ತು ಪುತ್ರ. ಅವರಿಗೆ ಸ್ವಂತ ಮಕ್ಕಳಿಲ್ಲ. ಅವರನ್ನು ಯಾರೂ ಕೂಡಾ ಭೇಟಿಯೂ ಆಗುತ್ತಿರಲಿಲ್ಲ. ಕಳೆದ 1 ತಿಂಗಳಿನಿಂದ ವೃದ್ಧ ಮನೆಯ ಒಳಗೆಯೇ ಇದ್ದರು. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಮನೆಯಿಂದ ದುರ್ವಾಸನೆ ಬರುತ್ತಿರುವುದು ನಮ್ಮ ಗಮನಕ್ಕೆ ಬಂದ ಬಳಿಕ ಅನುಮಾನಗೊಂಡ ನಾವು ಪೊಲೀಸರಿಗೆ ಕರೆ ಮಾಡಿದೆವು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಸೋಮವಾರ ಜಲಂಧರ್‌ನ ಗುರು ಗೋವಿಂದ್ ಸಿಂಗ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಆಟವನ್ನು ಆಡಿದ್ದಾರೆ.

    Bhagwant Mann

    ಎರಡು ತಿಂಗಳ ಕಾಲ ನಡೆಯುವ ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಭಗವಂತ್ ಮಾನ್ ಅವರು ಸುಮಾರು 10-15 ನಿಮಿಷಗಳ ಕಾಲ ಕ್ರೀಡಾಪಟುಗಳೊಂದಿಗೆ ವಾಲಿಬಾಲ್ ಪಂದ್ಯವನ್ನು ಆಡಿದ್ದಾರೆ. ನೆಟ್‍ನಲ್ಲಿ ತಾವೂ ಕೂಡ ವಾಲಿಬಾಲ್ ಸರ್ವ್ ಮಾಡಿ ಆಟದ ಕೌಶಲ್ಯ ಮೆರೆದಿದ್ದಾರೆ. ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಕಿಡ್ನ್ಯಾಪ್ ಆಗಿದ್ದ ಮಗು ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆ

    ವಾಲಿಬಾಲ್ ಅಂಕಣದ ಹೊರಗೆ ಭದ್ರತಾ ಸಿಬ್ಬಂದಿ ನಿಂತಿದ್ದರು. ಈ ವೇಳೆ ಟ್ರ್ಯಾಕ್‍ಸೂಟ್ ಮತ್ತು ಕ್ಯಾಪ್ ಧರಿಸಿ ಮೈದಾನಕ್ಕೆ ಇಳಿದ ಭಗವಂತ್ ಮಾನ್ ಅವರು ಎದುರಾಳಿಗಳು ನೀಡಿದ ಪಾಸ್ ಅನ್ನು ಒಂದೇ ಕೈಯಿಂದ ತಡೆದು ನಿಲ್ಲಿಸಿದ್ದು ಅಲ್ಲಿದ್ದವರಿಗೆ ಬೆರಗು ಮೂಡಿಸಿದೆ. ಭಗವಂತ್ ಮಾನ್ ಅವರು ಕೇವಲ ಆಟವಷ್ಟೇ ಅಲ್ಲ. ತಮ್ಮ ತಂಡಕ್ಕೆ ಅಂಕವನ್ನು ಸಹ ತಂದು ಕೊಟ್ಟಿದ್ದಾರೆ. ಇದನ್ನೂ ಓದಿ: ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿ – ಸರ್ಕಾರಕ್ಕೆ ಕೆಎಂಎಫ್‌ ಪ್ರಸ್ತಾವ

    ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸುವ ಮುನ್ನ ಮಾತನಾಡಿದ ಅವರು, ನಾಲ್ಕು ಲಕ್ಷಕ್ಕೂ ಹೆಚ್ಚು ಆಟಗಾರರು 28 ಕ್ರೀಡಾ ವಿಭಾಗಗಳಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯಮಟ್ಟದ ವಿಜೇತರಿಗೆ ಒಟ್ಟು 6 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಬಾರಿಯ ಕ್ರೀಡಾಕೂಟಗಳು ರಾಜ್ಯದ ಕ್ರೀಡಾ ಕ್ಯಾಲೆಂಡರ್‌ನಲ್ಲಿ ವಾರ್ಷಿಕ ವೈಶಿಷ್ಟ್ಯವಾಗಲಿದೆ. ಪಂಜಾಬ್ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಂತೋಷವಾಗಿರುವುದನ್ನು ಕಂಡು ನಾನು ಹರ್ಷಗೊಂಡಿದ್ದೇನೆ. ರಾಜ್ಯ ಸರ್ಕಾರವು ರಾಜ್ಯಾದ್ಯಂತ ಕ್ರೀಡೆಯನ್ನು ಉತ್ತೇಜಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಯುವಕರ ಸಾಮರ್ಥ್ಯವನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ಭದ್ರತಾ ವೈಫಲ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ನೇರ ಕಾರಣ – ಸುಪ್ರೀಂಗೆ ಸಮಿತಿ ವರದಿ

    ಪ್ರಧಾನಿ ಮೋದಿ ಭದ್ರತಾ ವೈಫಲ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ನೇರ ಕಾರಣ – ಸುಪ್ರೀಂಗೆ ಸಮಿತಿ ವರದಿ

    ನವದೆಹಲಿ: ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಉಂಟಾದ ಭದ್ರತಾ ವೈಫಲ್ಯಕ್ಕೆ ಫಿರೋಜ್‍ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ನೇರ ಕಾರಣ. ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕರ್ತವ್ಯವನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‍ಗೆ ಸಮಿತಿ ವರದಿ ಸಲ್ಲಿಸಿದೆ.

    ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ರಚಿಸಿದ ವಿಶೇಷ ಸಮಿತಿಯೂ ತನ್ನ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠಕ್ಕೆ ಸಲ್ಲಿಸಿದೆ. ವರದಿಯಲ್ಲಿ ಪೊಲೀಸ್ ಭದ್ರತಾ ವೈಫಲ್ಯವನ್ನು ಕಟುವಾಗಿ ಟೀಕಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಭದ್ರತಾ ವೈಫಲ್ಯ -150 ಅಪರಿಚಿತರ ವಿರುದ್ಧ ಎಫ್‌ಐಆರ್‌

    ವರದಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಫಿರೋಜ್‍ಪುರ ಎಸ್‍ಎಸ್‍ಪಿ ತನ್ನ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಸಾಕಷ್ಟು ಬಲ ಲಭ್ಯವಿದ್ದರೂ ಅವರು ಭದ್ರತೆ ನೀಡುವಲ್ಲಿ, ಪ್ರತಿಭಟನೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪ್ರಧಾನಿ ಮಾರ್ಗದ ಬಗ್ಗೆ 2 ಗಂಟೆಗಳ ಮೊದಲು ಅವರಿಗೆ ತಿಳಿಸಲಾಗಿದ್ದರೂ ಅವರು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಉಲ್ಲೇಖಿಸಿದೆ.

    ವರದಿಯನ್ನು ಗಣನೆಗೆ ತೆಗೆದುಕೊಂಡಿದ್ದು, ಸಮಿತಿಯು ಪ್ರಧಾನಿಯ ಭದ್ರತೆಯನ್ನು ಬಲಪಡಿಸಲು ಕೆಲವು ಪರಿಹಾರ ಕ್ರಮಗಳನ್ನು ಸೂಚಿಸಿದ್ದು, ನಾವು ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಸಿಜೆಐ ರಮಣ ವಿಚಾರಣೆ ವೇಳೆ ಹೇಳಿದರು. ಸಮಿತಿಯ ವರದಿಯ ಪರಿಷ್ಕೃತ ಪ್ರತಿಯನ್ನು ನೀಡುವಂತೆ ಕೇಳಿದ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಲು ಪೀಠ ನಿರಾಕರಿಸಿತು. ಇದನ್ನೂ ಓದಿ: 5 ಫೋನ್‌ಗಳಲ್ಲಿ ಮಾಲ್‍ವೇರ್‌ಗಳು ಕಂಡು ಬಂದಿದೆ, ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್‍ಗೆ ತಜ್ಞರ ವರದಿ

    ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ವೈಫಲ್ಯ ಉಂಟಾಗಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ನ್ಯಾಯಾಲಯ ಮೇಲುಸ್ತುವಾರಿಯಲ್ಲಿ ವಿಶೇಷ ಸಮಿತಿ ರಚಿಸಿ ತನಿಖೆಗೆ ಸೂಚಿಸಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್‍ಗೆ ಸಹಕರಿಸಲು ಮತ್ತು ಪಂಜಾಬ್ ಪೊಲೀಸ್ ಮತ್ತು ವಿಶೇಷ ರಕ್ಷಣೆ (SPG) ಮತ್ತು ಇತರ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳ ಅಧಿಕಾರಿಗಳಿಗೆ ಅಗತ್ಯ ನೆರವು ನೀಡುವಂತೆ ಪೀಠವು ನಿರ್ದೇಶನ ನೀಡಿತು.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್ ವಾಹನದ ಕೆಳಗೆ ಬಾಂಬ್ ಪತ್ತೆ

    ಪೊಲೀಸ್ ವಾಹನದ ಕೆಳಗೆ ಬಾಂಬ್ ಪತ್ತೆ

    ಚಂಡೀಗಢ: ಪೊಲೀಸ್ ಅಧಿಕಾರಿಯೊಬ್ಬರ ಕಾರಿನ ಕೆಳಗೆ ಬಾಂಬ್ ಮಾದರಿಯ ವಸ್ತುವೊಂದು ಪತ್ತೆ ಆದ ಘಟನೆ ಪಂಜಾಬ್‍ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ.

    ಅಮೃತಸರದ ರಂಜಿತ್ ಅವೆನ್ಯೂ ಪ್ರದೇಶದಲ್ಲಿರುವ ಸಬ್ ಇನ್ಸ್‌ಪೆಕ್ಟರ್ ದಿಲ್ಬಾಗ್ ಸಿಂಗ್ ಅವರ ನಿವಾಸದ ಬಳಿ ಬಾಂಬ್ ಮಾದರಿಯ ವಸ್ತು ಪತ್ತೆ ಆಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್‍ನಲ್ಲಿ ಬಂದು ಪೊಲೀಸ್ ಕಾರಿನ ಕೆಳಗೆ ಈ ಅನುಮಾನಸ್ಪದ ವಸ್ತುವನ್ನು ಇಟ್ಟು ಹೋಗಿರುವುದು ಕಂಡು ಬಂದಿದೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ ಈ ವಸ್ತು ಬಾಂಬ್ ಎಂದು ತಿಳಿಸಿದ್ದಾರೆ. ಇನ್ಸ್‌ಪೆಕ್ಟರ್ ಜನರಲ್ ಸುಖ್ ಚಾನ್ ಸಿಂಗ್ ಗೋಲ್ ಅವರು, ಈ ವಸ್ತುವು ಡಿಟೋನೇಟರ್ ಆಗಿರಬಹುದು ಎಂದು ಹೇಳಿದ್ದಾರೆ. ಪೊಲೀಸರು ವಾಹನವನ್ನು ಪ್ರದೇಶದಿಂದ ಸ್ಥಳಾಂತರಿಸಿದ್ದಾರೆ. ಘಟನೆ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸೇನೆಗೆ ಸ್ವದೇಶಿ ಆಧುನಿಕ ಶಸ್ತ್ರಾಸ್ತ್ರ ಹಸ್ತಾಂತರ – ಏನಿದು F-INSAS ಸಿಸ್ಟಂ? ನಿಪುಣ್‌ ಲ್ಯಾಂಡ್‌ ಮೈನ್ಸ್‌?

    ಈ ಬಗ್ಗೆ ಸಬ್ ಇನ್ಸ್‌ಪೆಕ್ಟರ್ ದಿಲ್ಬಾಗ್ ಸಿಂಗ್ ಮಾತನಾಡಿ, ನನ್ನ ಕಾರಿನ ಕೆಳಗೆ ಬಾಂಬ್ ಇಡಲಾಗಿತ್ತು. ನನ್ನ ಕಾರ್ ಕ್ಲೀನರ್ ಅದರ ಬಗ್ಗೆ ನನಗೆ ಮಾಹಿತಿ ನೀಡಿದರು. ನಸುಕಿನ 2 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ನನ್ನ ಕಾರಿನ ಕೆಳಗೆ ಏನನ್ನೋ ಹಾಕಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಈ ವಿಷಯದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಐಜಿ ಬಾರ್ಡರ್ ರೇಂಜ್ ಮನೀಶ್ ಚಾವ್ಲಾ ಮಾತನಾಡಿ, ಸಬ್ ಇನ್ಸ್‌ಪೆಕ್ಟರ್ ಕಾರಿನಲ್ಲಿ ಯಾರೋ ಐಇಡಿ ಇಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಪೊಲೀಸರು ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ. ಐಇಡಿಯ ವಿಧಿವಿಜ್ಞಾನ ತನಿಖೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ದಲಿತ ವಿದ್ಯಾರ್ಥಿ ಸಾವಿನಿಂದ ಮನನೊಂದು ಕಾಂಗ್ರೆಸ್ ಶಾಸಕ ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ

    ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ

    ಇಸ್ಲಾಮಾಬಾದ್: ಪ್ರಯಾಣಿಕರ ಬಸ್ ಹಾಗೂ ತೈಲ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಮಂದಿ ಸಜೀವ ದಹನವಾಗಿರುವ ಘಟನೆ ಮಂಗಳವಾರ ಪಾಕಿಸ್ತಾನದ ಪಂಜಾಬ್‌ನಲ್ಲಿ ನಡೆದಿದೆ. ಇದು ಕೇವಲ 3 ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ 2ನೇ ದೊಡ್ಡ ರಸ್ತೆ ಅವಘಡವಾಗಿದೆ.

    ಲಾಹೋರ್‌ನಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಮುಲ್ತಾನ್‌ನ ಮೋಟಾರು ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹಲವು ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ಲಾಹೋರ್‌ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ಹಾಗೂ ತೈಲದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಎರಡೂ ಹೊತ್ತಿ ಉರಿದಿವೆ. ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ತೀವ್ರವಾದ ಸುಟ್ಟ ಗಾಯಗಳಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಗಾಯಾಳುಗಳನ್ನು ಮುಲ್ತಾನ್‌ನ ನಿಶ್ತಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನದಿ ಕಣಿವೆಗೆ ಉರುಳಿದ ಬಸ್- 6 ಮಂದಿ ಯೋಧರು ಹುತಾತ್ಮ

    ಹಲವು ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಮೃತದೇಹಗಳ ಡಿಎನ್‌ಎ ಪರೀಕ್ಷೆಯ ಬಳಿಕ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.

    ಶನಿವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ರಯಾಣಿಕ ಬಸ್‌ಗೆ ಲೋಡ್ ಟ್ರಕ್ ಡಿಕ್ಕಿ ಹೊಡೆದು 12 ಜನರು ಸಾವನ್ನಪ್ಪಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಮೋ ಕ್ಲಿನಿಕ್‌ಗೆ ಟಕ್ಕರ್ ಕೊಡಲು ಪಂಜಾಬ್‌ನಲ್ಲಿ `ಆಮ್ ಆದ್ಮಿ ಕ್ಲಿನಿಕ್’- ಆ.15ಕ್ಕೆ 100 ಕ್ಲಿನಿಕ್ ಓಪನ್

    ನಮೋ ಕ್ಲಿನಿಕ್‌ಗೆ ಟಕ್ಕರ್ ಕೊಡಲು ಪಂಜಾಬ್‌ನಲ್ಲಿ `ಆಮ್ ಆದ್ಮಿ ಕ್ಲಿನಿಕ್’- ಆ.15ಕ್ಕೆ 100 ಕ್ಲಿನಿಕ್ ಓಪನ್

    ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಸ್ಥಾಪಿತವಾದ `ನಮೋ ಕ್ಲಿನಿಕ್’ಗೆ ಟಕ್ಕರ್ ಕೊಡಲು ಪಂಜಾಬ್‌ನಲ್ಲಿ ಎಎಪಿ ಸರ್ಕಾರ `ಆಮ್ ಆದ್ಮಿ ಕ್ಲಿನಿಕ್’ ಸ್ಥಾಪಿಸಲು ಮುಂದಾಗಿದೆ.

    ಇದೇ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಿಎಂ ಭಗವಂತ್ ಮಾನ್ ನೇತೃತ್ವದ ರಾಜ್ಯ ಸರ್ಕಾರ ಪಂಜಾಬ್‌ನಲ್ಲಿ 100 `ಆಮ್ ಆದ್ಮಿ ಕ್ಲಿನಿಕ್’ಗಳನ್ನು ಸ್ಥಾಪಿಸಲು ಮುಂದಾಗಿದೆ. ಸಾರ್ವಜನಿಕರ ಯೋಗಕ್ಷೇಮಕ್ಕಾಗಿ ಈ ಹಿಂದೆ 75ಕ್ಕೆ ಸ್ಥಾಪಿಸಲು ಗುರಿ ಹೊಂದಿದ್ದ ಕ್ಲಿನಿಕ್‌ಗಳ ಗುರಿಯನ್ನು 100ಕ್ಕೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಾಮಜ್ರಾ ಇಂದು ಹೇಳಿದ್ದಾರೆ. ಇದನ್ನೂ ಓದಿ: ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ತೆರಿಗೆ ಬರೆ

    ಸಾಮಾನ್ಯ ಜನರಿಗೂ ಉನ್ನತ ದರ್ಜೆಯ ಆರೋಗ್ಯ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಬದ್ಧತೆಯ ಈಡೇರಿಕೆಗೆ ಆಮ್ ಆದ್ಮಿ ಸರ್ಕಾರದ ಮೊದಲ ಆರೋಗ್ಯ ಹೆಜ್ಜೆ ಇರಿಸಿದೆ. ಈ ಸಂಬಂಧ ಆರೋಗ್ಯ ಉಪಕರಣಗಳು ಹಾಗೂ ಮೂಲ ಸೌಕರ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಶ್ರಮಿಸುತ್ತಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ

    MEDICAL
    ಸಾಂದರ್ಭಿಕ ಚಿತ್ರ

    ಆಮ್ ಆದ್ಮಿ ಕ್ಲಿನಿಕ್ ಪ್ರಯೋಜನವೇನಿದೆ?:

    •  ಈ ಚಿಕಿತ್ಸಾಲಯಗಳ ಸ್ಥಾಪನೆಯಿಂದ ಕೆಳ ಹಾಗೂ ಮಧ್ಯಮ ವರ್ಗದ ಜನರ ಮನೆ ಬಾಗಿಲಿಗೆ ಆರೋಗ್ಯ ಪ್ರಯೋಜನ.
    • ಆರೋಗ್ಯ ಕೇಂದ್ರಗಳಲ್ಲಿ ಅನಗತ್ಯ ಜನಸಂದಣಿಗೆ ಕಡಿವಾಣ.
    • ಒಂದು ಕ್ಲಿನಿಕ್‌ನಲ್ಲಿ ಒಬ್ಬರು ಎಂಬಿಬಿಎಸ್ ವೈದ್ಯರು ಸೇರಿದಂತೆ 5 ಸಿಬ್ಬಂದಿ ನೇಮಕ.
    • ರಾಜ್ಯದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸುವ ಗುರಿ.

    Live Tv
    [brid partner=56869869 player=32851 video=960834 autoplay=true]

  • 3 ವರ್ಷದಲ್ಲಿ ಬಿಜೆಪಿ ಸಾಂಗತ್ಯ ತೊರೆದ 3 ಪ್ರಬಲ ಪ್ರಾದೇಶಿಕ ಪಕ್ಷಗಳು

    3 ವರ್ಷದಲ್ಲಿ ಬಿಜೆಪಿ ಸಾಂಗತ್ಯ ತೊರೆದ 3 ಪ್ರಬಲ ಪ್ರಾದೇಶಿಕ ಪಕ್ಷಗಳು

    ನವದೆಹಲಿ: ಜೆಡಿಯು ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿದ್ದಾರೆ. ಈ ಮೂಲಕ 3 ವರ್ಷದಲ್ಲಿ ಮೂರು ಪ್ರಾದೇಶಿಕ ಪಕ್ಷಗಳು ಬಿಜೆಪಿಯ ಸಾಂಗತ್ಯವನ್ನು ತೊರೆದು ಹೊರಬಂದಿವೆ.

    3 ಕೃಷಿ ಕಾನೂನು ಜಾರಿ ಮಾಡಿದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಪಂಜಾಬ್‍ನ ಪ್ರಮುಖ ಪ್ರಾದೇಶಿಕ ಪಕ್ಷ ಅಕಾಲಿ ದಳ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿತ್ತು. ಕೃಷಿ ಕಾನೂನುಗಳನ್ನು ರದ್ದು ಮಾಡಲು ಅಕಾಲಿದಳ ನಾಯಕರು ಒತ್ತಾಯಿಸಿದ್ದರು. ಆದರೆ ಆರಂಭದಲ್ಲಿ ಕಾನೂನು ವಾಪಸ್ ಪಡೆಯಲು ಹಿಂದೇಟು ಹಾಕಿದ ಹಿನ್ನೆಲೆ ಅಕಾಲಿದಳ ಬಿಜೆಪಿ ಜೊತೆಗಿನ ಮೈತ್ರಿ ಕಡಿದು ಹಾಕಿತ್ತು.

    ಇನ್ನು ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಕಡಿದು ಕಾಂಗ್ರೆಸ್ ಎನ್‍ಸಿಪಿ ಜೊತೆಗೆ ಸೇರಿ ಸರ್ಕಾರ ರಚನೆ ಮಾಡಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಪ್ರಬಲ ಮೈತ್ರಿ ಹೊಂದಿದ್ದವು. ಆದರೆ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗಿ ಸಿಎಂ ಹುದ್ದೆ ನೀಡಲು ಒಪ್ಪದ ಬಿಜೆಪಿ ಮೈತ್ರಿಯಿಂದ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹೊರ ಬಂದಿದ್ದರು.

    ಇನ್ನು ಜೆಡಿಯು ಬಿಹಾರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆಗಿನ ಮೈತ್ರಿಯಿಂದ ಹೊರಬಂದಿದೆ. ಮಹಾರಾಷ್ಟ್ರ ಮಾದರಿಯಲ್ಲಿ ಜೆಡಿಯುವನ್ನು ಇಬ್ಭಾಗಿಸಲು ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ನಿತೀಶ್ ಕುಮಾರ್ ಪಕ್ಷದ ಉಳಿವಿಗಾಗಿ ಎನ್‍ಡಿಎ ಒಕ್ಕೂಟದಿಂದ ದೂರವಾಗಿದ್ದಾರೆ. ಇದನ್ನೂ ಓದಿ: ನಿತೀಶ್ ಕುಮಾರ್ 2024ರ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ? – ಬಿಹಾರದಲ್ಲಿ ಇಂದು 2ನೇ ಇನ್ನಿಂಗ್ಸ್ ಆರಂಭ

    bjP

    ಲೋಕಸಭೆ ಚುನಾವಣೆ 2 ವರ್ಷ ಬಾಕಿ ಇರುವಾಗ ಈ ಮೂರು ಪ್ರಬಲ ಪ್ರಾದೇಶಿಕ ಪಕ್ಷಗಳು ಎನ್‍ಡಿಎ ಒಕ್ಕೂಟ ತೊರೆದಿರುವುದು ಮುಂಬರುವ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಏನಾಗಬಹುದು ಎಂಬ ವಿಶ್ಲೇಷಣೆ ಆರಂಭವಾಗಿದೆ. ವಿಶೇಷವಾಗಿ ಮಹಾರಾಷ್ಟ್ರ, ಬಿಹಾರದಲ್ಲಿ ಪ್ರಾದೇಶಿಕ ಪಕ್ಷಗಳ ಸಹಾಯದಿಂದ ಬಿಜೆಪಿ ಹೆಚ್ಚು ಪ್ರಬಲವಾಗಿತ್ತು. ಈ ಪಕ್ಷಗಳ ಬಿಜೆಪಿ ದೊಸ್ತಿ ಮುರಿದುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಲಾಭವಾಗುತ್ತಾ, ನಷ್ಟವಾಗುತ್ತಾ ಎಂಬ ಪ್ರಶ್ನೆಗೆ ಲೋಕಸಭಾ ಚುನಾವಣೆ ಉತ್ತರ ನೀಡಲಿದೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಗೆ ಕೊರೊನಾ – ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಪಾಸಿಟಿವ್

    Live Tv
    [brid partner=56869869 player=32851 video=960834 autoplay=true]

  • ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಚಂಡೀಗಢ: ಎನ್‍ಆರ್‍ಐಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ರಾಜ್ಯ ಸರ್ಕಾರ ಹೊಸ ನೀತಿಯನ್ನು ಹೊರತರಲಿದೆ ಎಂದು ಪಂಜಾಬ್ ಕ್ಯಾಬಿನೆಟ್ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ.

    ಧಲಿವಾಲ್ ಅವರು ಎನ್‍ಆರ್‌ಐ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದು, ಹೊಸ ಅನಿವಾಸಿ ಭಾರತೀಯ(ಎನ್‍ಆರ್‌ಐ) ನೀತಿಯ ಕರಡನ್ನು ಅವರೊಂದಿಗೆ ಮತ್ತು ಪಂಜಾಬ್‍ನ ಎನ್‍ಆರ್‌ಐ ಆಯೋಗದ ಸದಸ್ಯರೊಂದಿಗೆ ಚರ್ಚಿಸಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

    ಚರ್ಚೆಯಲ್ಲಿ ಆಗಿದ್ದೇನು?
    ಎನ್‍ಆರ್‌ಐ ಪಂಜಾಬಿ ಯುವಕರನ್ನು ಅವರ ಮೂಲವನ್ನು ಸಂಪರ್ಕಿಸಲು ಪಂಜಾಬ್ ಸರ್ಕಾರ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಎನ್‍ಆರ್‌ಐ ಪಂಜಾಬಿ ವೃದ್ಧರಿಗೆ ರಾಜ್ಯದ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಸಲುವಾಗಿ ಸರ್ಕಾರವು ಕಾರ್ಯಕ್ರಮವನ್ನು ಪ್ರಾರಂಭಿಸುತ್ತದೆ. ಇದನ್ನೂ ಓದಿ: ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

    ಎನ್‍ಆರ್‌ಐ ವ್ಯವಹಾರಗಳ ಸಚಿವರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ನಾಗರಿಕ ಲೋಕ ಅದಾಲತ್‍ಗಳ ಮಾದರಿಯಲ್ಲಿ ಎನ್‍ಆರ್‍ಐ ಲೋಕ ಅದಾಲತ್‍ಗಳನ್ನು ಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ, ವಿಶೇಷವಾಗಿ ಭೂಮಿ ಮತ್ತು ವಿವಾಹದ ವಿವಾದಗಳನ್ನು ಪರಸ್ಪರ ಒಪ್ಪಿಗೆಯಿಂದ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗುವುದು. ಅದಕ್ಕೆ ಕಾನೂನಿನ ಮಾನ್ಯತೆ ಇರುತ್ತದೆ.

    ಸಭೆಯಲ್ಲಿ ತೆಗೆದುಕೊಳ್ಳಲಾದ ಮತ್ತೊಂದು ಪ್ರಮುಖ ನಿರ್ಧಾರವೆಂದರೆ ಎನ್‍ಆರ್‌ಐಗಳ ಸಮಸ್ಯೆಗಳಿಗೆ ತ್ವರಿತ ವಿಚಾರಣೆಗೆ ಪ್ರತಿ ಜಿಲ್ಲೆಗೆ ಪಂಜಾಬ್ ನಾಗರಿಕ ಸೇವೆಗಳ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲು ಸಿಎಂ ಭಗವಂತ್ ಮಾನ್ ಅವರಿಗೆ ಮನವಿ ಮಾಡಲಾಗುವುದು. ಇದನ್ನೂ ಓದಿ: ಯಾರಿಗೆ ಬೇಕು ‘ಚಿಕನ್ ಕಥಿ ರೋಲ್’ – ಮನೆಯಲ್ಲಿ ಟ್ರೈ ಮಾಡಿ

    ಸಾಮಾನ್ಯವಾಗಿ ಅನಿವಾಸಿ ಭಾರತೀಯರ ಜಮೀನು ಅತಿಕ್ರಮಣ ಪ್ರಕರಣಗಳು ಹೆಚ್ಚಾಗಿದೆ. ಅನಿವಾಸಿ ಭಾರತೀಯರಿಗೆ ಪರಿಹಾರ ನೀಡಲು ಅನಿವಾಸಿ ಭಾರತೀಯರ ಒಪ್ಪಿಗೆಯಿಲ್ಲದೆ ಗಿರದಾರಿ ಬದಲಾವಣೆಯನ್ನು ತಡೆಯಲು ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆಮ್ ಆದ್ಮಿ ಪಕ್ಷದ ಮುನ್ಸಿಪಲ್ ಕೌನ್ಸಿಲರ್‌ನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

    ಆಮ್ ಆದ್ಮಿ ಪಕ್ಷದ ಮುನ್ಸಿಪಲ್ ಕೌನ್ಸಿಲರ್‌ನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

    ಚಂಡೀಗಢ: ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಪಂಜಾಬ್‍ನ ಮಲೇರ್ ಕೋಟ್ಲಾ ಜಿಲ್ಲೆಯಲ್ಲಿ ನಡೆದಿದೆ.

    ಪುರಸಭೆ ಸದಸ್ಯ ಮೊಹಮ್ಮದ್ ಅಕ್ಬರ್ ಮೃತ ದುರ್ದೈವಿ. ಇಂದು ಮುಂಜಾನೆ ಅಕ್ಬರ್‌ ಜಿಮ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಇಬ್ಬರು ಅಪರಿಚಿತ ಆರೋಪಿಗಳು ಅಕ್ಬರ್ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದಾದ ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

    POLICE JEEP

    ಈ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಘಟನೆ ನಡೆದ ನಂತರ ಸ್ಥಳದಿಂದ ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ- ಬೆಳಗಾವಿ ಜಿಲ್ಲೆಯಲ್ಲಿ ಆತಂಕ

    Live Tv
    [brid partner=56869869 player=32851 video=960834 autoplay=true]

  • ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

    ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

    ಬ್ರಿಟನ್ ಸಂಗೀತ ಕ್ಷೇತ್ರದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದ್ದ, ಪಂಜಾಬಿ ಮೂಲದ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. 63ರ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸ್ವತಃ ಕುಟುಂಬದ ಮೂಲಗಳೇ ತಿಳಿಸಿವೆ. ಭಾರತೀಯ ಮೂಲದ ಬ್ರಿಟನ್ ನಲ್ಲಿ ಫೇಮಸ್ ಆಗಿದ್ದ ಸಫ್ರಿ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದರು.

    ಪಂಜಾಬಿನಲ್ಲಿ ಜನಿಸಿದ್ದರೂ, ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆ ಕಂಡುಕೊಂಡಿದ್ದ ಬಲ್ವಿಂದರ್ ಸಫ್ರಿ, 1989ರಿಂದ ಯುಕೆ ಭಾಂಗ್ರಾದ ಭಾಗವಾಗಿದ್ದ ಅವರು 1990ರಲ್ಲಿ ಸಫ್ರಿ ಬಾಯ್ಸ್ ಬ್ಯಾಂಡ್ ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಸಫ್ರಿ ಬಾಯ್ಸ್ ಬ್ಯಾಂಡ್ ಅತೀ ದುಬಾರಿ ಬ್ಯಾಂಡ್ ಎಂದೂ ಖ್ಯಾತಿಗಳಿಸಿತ್ತು. ಇದನ್ನೂ ಓದಿ:ಓಟಿಟಿನಲ್ಲಿ ಬರುತ್ತಿದ್ದಾಳೆ ರಕ್ಷಿತ್ ಶೆಟ್ಟಿ ನಟನೆಯ ಕನ್ನಡದ ‘ಚಾರ್ಲಿ

    ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ನಂತರ ಅವರು ಕೋಮಾಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೇ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತಂತೆ. ಆನಂತರ ಜುಲೈ 15ರಂದು ಆಸ್ಪತ್ರೆಯಿಂದ ಅವರನ್ನು ಮನೆಗೆ ಕರೆತರಲಾಗಿತ್ತು. ಮನೆಯಲ್ಲೇ ಸಫ್ರಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]