Tag: punjab

  • ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ – ಪಾಕಿಸ್ತಾನದ ಪಂಜಾಬ್‌ನಲ್ಲಿ ತುರ್ತು ಪರಿಸ್ಥಿತಿಗೆ ನಿರ್ಧಾರ

    ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ – ಪಾಕಿಸ್ತಾನದ ಪಂಜಾಬ್‌ನಲ್ಲಿ ತುರ್ತು ಪರಿಸ್ಥಿತಿಗೆ ನಿರ್ಧಾರ

    ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಪಾಕಿಸ್ತಾನದ ಪಂಜಾಬ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿದೆ. ಅತ್ಯಾಚಾರ ಪ್ರಕರಣಗಳನ್ನು ಹತೋಟಿಗೆ ತರಲು ತುರ್ತು ಪರಿಸ್ಥಿತಿಯನ್ನು ಘೋಷಿಸಲು ಆಡಳಿತವನ್ನು ಒತ್ತಾಯಿಸಲಾಗಿದೆ ಎಂದು ಪಂಜಾಬ್ ಗೃಹ ಸಚಿವ ಅಟ್ಟ ತರಾರ್ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ – ಬಿಜೆಪಿಯ ಐವರು ಆಯ್ಕೆ

    ಪಂಜಾಬ್‌ನಲ್ಲಿ ಪ್ರತಿದಿನ 4-5 ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಲೈಂಗಿಕ ಕಿರುಕುಳ, ನಿಂದನೆ ಮತ್ತು ಬಲವಂತದ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಪರಿಗಣಿಸುತ್ತಿದೆ ಎಂದು ಪ್ರಾಂತೀಯ ಸಚಿವರು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪ್ರಧಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.

    ಕಾನೂನು ಸಚಿವ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ ಅವರ ಸಮ್ಮುಖದಲ್ಲಿ ಸಚಿವರು, ಎಲ್ಲಾ ಪ್ರಕರಣಗಳನ್ನು ಅತ್ಯಾಚಾರ ಮತ್ತು ಕಾನೂನು ಹಾಗೂ ಸುವ್ಯವಸ್ಥೆಯ ಕ್ಯಾಬಿನೆಟ್ ಸಮಿತಿ ಪರಿಶೀಲಿಸುತ್ತದೆ. ಅಂತಹ ಘಟನೆಗಳ ಮೇಲೆ ನಿಗಾ ಇರಿಸಿ ನಾಗರಿಕ ಸಮಾಜ, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರನ್ನು ಸಹ ಸಮಾಲೋಚಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    RAPE

    ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವದ ಬಗ್ಗೆ ಕಲಿಸಬೇಕು, ಮೇಲ್ವಿಚಾರಣೆಯಿಲ್ಲದೆ ಯುವಕರು ತಮ್ಮ ಮನೆಗಳಲ್ಲಿ ಒಂಟಿಯಾಗಿರಬಾರದು ಎಂದು ತಾರಾರ್ ಒತ್ತಾಯಿಸಿದರು.

    ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರ ಅತ್ಯಾಚಾರ ವಿರೋಧಿ ಅಭಿಯಾನವನ್ನು ಪ್ರಾರಂಭಿಸಿದೆ ಹಾಗೂ ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಹಾಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

    Live Tv

  • ಮುಸ್ಲಿಂ ಹುಡುಗಿಯರು 16ನೇ ವಯಸ್ಸಿನಲ್ಲಿ ಮದುವೆಯಾಗಬಹುದು: ಹೈಕೋರ್ಟ್

    ಮುಸ್ಲಿಂ ಹುಡುಗಿಯರು 16ನೇ ವಯಸ್ಸಿನಲ್ಲಿ ಮದುವೆಯಾಗಬಹುದು: ಹೈಕೋರ್ಟ್

    ಚಂಡೀಗಢ: 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿಯರು ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಳ್ಳಬಹುದು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ.

    ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್‍ಕೋಟ್ ಮೂಲದ ಮುಸ್ಲಿಂ ದಂಪತಿಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್

    ಅರ್ಜಿದಾರರು ತಮ್ಮ ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು ಭಾರತದ ಸಂವಿಧಾನದ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

    ಇಸ್ಲಾಮಿಕ್ ಶರಿಯಾ ನಿಯಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಬೇಡಿ, ಮುಸ್ಲಿಂ ವೈಯಕ್ತಿಕ ಕಾನೂನು ಅಡಿ ಮುಸ್ಲಿಂ ಮದುವೆಯನ್ನು ಮಾನ್ಯ ಮಾಡಲಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

    No Means No, Even After an Initial Yes': Punjab and Haryana High Court

    ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರ ‘ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ’ ಪುಸ್ತಕದ ಆರ್ಟಿಕಲ್ 195 ರ ಪ್ರಕಾರ, ಹುಡುಗಿ 16 ವರ್ಷಕ್ಕಿಂತ ಮೇಲ್ಪಟ್ಟವಳಾಗಿದ್ದು, ಹುಡುಗ 21 ವರ್ಷ ಮೀರಿದರೆ ಮದುವೆಯಾಗಬಹುದು. ಈ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಕಾನೂನುಗಳ ಪ್ರಕಾರ ಪ್ರಾಪ್ತರಾದ ಕಾರಣ ಮದುವೆ ಕಾನೂನುಬದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.

    ದಂಪತಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಎಸ್‍ಎಸ್‍ಪಿ ಪಠಾಣ್‍ಕೋಟ್‍ಗೆ ಕೋರ್ಟ್ ನಿರ್ದೇಶನ ನೀಡಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ 

    ಅರ್ಜಿದಾರರ ಪ್ರಕಾರ, ದಂಪತಿಯ ವಿವಾಹ 2022 ಜೂನ್ 8 ರಂದು ಮುಸ್ಲಿಂ ವಿಧಿಗಳು ಮತ್ತು ಸಮಾರಂಭಗಳ ಪ್ರಕಾರ ನೆರವೇರಿಸಲಾಯಿತು. ಆದರೆ, ಅವರ ಕುಟುಂಬಗಳು ಈ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಅನುಮತಿಯಿಲ್ಲದೆ ಮದುವೆಯಾಗಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು.

    Live Tv

  • ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಆರೋಪಿ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸರು

    ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಆರೋಪಿ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸರು

    ಚಂಡೀಗಢ: ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರೆನ್ಸ್ ಬಿಷ್ಣೋಯ್‍ಗೆ ಪಂಜಾಬ್ ಪೊಲೀಸರು ಹೆಚ್ಚಿನ ಭದ್ರತೆ ನೀಡಿ ಕೋರ್ಟ್ ಬಳಿ ಕರೆತಂದರು.

    ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‍ಸ್ಟರ್ ಲಾರೆನ್ಸ್ ಬಿಷ್ಣೋಯ್‍ನನ್ನು ಪಂಜಾಬ್ ಪೊಲೀಸರು ಬುಧವಾರ ಮುಂಜಾನೆ ಮಾನ್ಸಾ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು. ಈ ವೇಳೆ ಪಂಜಾಬ್ ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ಮಾಡುವಂತೆ ಆದೇಶ ಹೊರಡಿಸಿದೆ.


    ಭದ್ರತೆ ಹೇಗಿದೆ?
    ಹೈ-ಪ್ರೊಫೈಲ್ ಪ್ರಕರಣದ ಪ್ರಮುಖ ಆರೋಪಿ ಮತ್ತು ಸಂಚುಕೋರ ಬಿಷ್ಣೋಯ್‍ನನ್ನು ಬಿಗಿ ಭದ್ರತೆಯ ನಡುವೆ ಮಾನ್ಸಾದಿಂದ ಮೊಹಾಲಿಗೆ ಸಾಗಿಸಲಾಗಿತ್ತು. ಈತನನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಸ್ಥಳಾಂತರಿಸಲಾಗಿದೆ. ಅಲ್ಲದೇ ಎರಡು ಡಜನ್ ವಾಹನಗಳನ್ನು ಒಳಗೊಂಡ ಸುಮಾರು 100 ಪೊಲೀಸರು ಅವನ ಬೆಂಗಾವಲಿನಲ್ಲಿದೆ. ಇದನ್ನೂ ಓದಿ: ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಮೊಹಾಲಿಯಲ್ಲಿ, ಪಂಜಾಬ್ ಪೊಲೀಸರು ರಚಿಸಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ), ದರೋಡೆಕೋರರ ವಿರುದ್ಧ ವಿಚಾರಣೆ ನಡೆಸುತ್ತಿದೆ. ಈ ವೇಳೆ ಬಿಷ್ಣೋಯ್, ಸಿಧು ಹತ್ಯೆಯಲ್ಲಿ ಯಾವ ರೀತಿ ಭಾಗಿಯಾಗಿದ್ದ ಎಂದು ತನಿಖೆ ಮಾಡುತ್ತಿದೆ.

    ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ಪಂಜಾಬ್‍ನ ಅಡ್ವೊಕೇಟ್ ಜನರಲ್ ಸ್ವತಃ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‍ಗೆ ಹಾಜರಾಗಿ ರಿಮಾಂಡ್‍ಗೆ ಒತ್ತಾಯಿಸಿದರು. ಸಿಧು ಮೂಸೆವಾಲಾ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿಯು ಬಿಷ್ಣೋಯ್‍ನನ್ನು ಬಂಧಿಸಲು ನ್ಯಾಯಾಲಯದ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಸ್ಥಳೀಯ ಮಾನ್ಸಾ ನ್ಯಾಯಾಲಯ ಈಗಾಗಲೇ ಬಂಧನ ವಾರಂಟ್ ಹೊರಡಿಸಿದೆ. ಇದನ್ನೂ ಓದಿ: ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು

  • ಗೋಲ್ಡೀ ಬ್ರಾರ್‌ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ –  ಸಿಧು ಹತ್ಯೆ ಕೇಸ್‌ನಲ್ಲಿ ಅಲ್ಲ

    ಗೋಲ್ಡೀ ಬ್ರಾರ್‌ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ – ಸಿಧು ಹತ್ಯೆ ಕೇಸ್‌ನಲ್ಲಿ ಅಲ್ಲ

    ನವದೆಹಲಿ: ಪಂಜಾಬ್‍ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿರುವ ಸತೀಂದರ್‌ಜೀತ್ ಸಿಂಗ್ ಅಲಿಯಾಸ್‌ ಗೋಲ್ಡೀ ಬ್ರಾರ್ ವಿರುದ್ಧ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡಿದೆ.

    ಸಿಧು ಮೂಸೆವಾಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾಗಿಲ್ಲ. ಬದಲಾಗಿ ಈ ಹಿಂದೆ ನಡೆದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್‌ ಜಾರಿಯಾಗಿದೆ. ಸಿಧು ಮೂಸೆವಾಲ ಹತ್ಯೆಯ ನಂತರ ಈ ಕೃತ್ಯವನ್ನು ನಾವು ನಡೆಸಿದ್ದೇವೆ ಎಂದು ಗೋಲ್ಡೀ ಬ್ರಾರ್ ಹೇಳಿಕೊಂಡಿದ್ದ.

    ನೋಟಿಸ್‌ ಯಾಕೆ?
    2020ರ ನವೆಂಬರ್‌ 11 ರಂದು ಫರೀದಾಕೋಟ್‌ನ ಕಟಾರಿಯಾ ಪೆಟ್ರೋಲ್ ಪಂಪ್ ಬಳಿ ಶೂಟೌಟ್‌ ನಡೆದಿತ್ತು. 2021ರ ಫೆಬ್ರವರಿ 18ರಂದು ಫರೀದಾಕೋಟ್‌ನಲ್ಲಿ ಹತ್ಯೆ ನಡೆದಿತ್ತು. ಈ ಎರಡು ಪ್ರಕರಣದ ತನಿಖೆ ನಡೆದು ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಎರಡೂ ಪ್ರಕರಣದಲ್ಲಿ ಆರೋಪಿಯಾಗಿರುವ ಗೋಲ್ಡೀ ಬ್ರಾರ್ ವಿರುದ್ಧ ಈಗ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾಗಿದೆ.

    ಪಂಜಾಬ್‌ ಪೊಲೀಸರು ಸಿಧು ಹತ್ಯೆಯಾಗುವ 10 ದಿನದ ಮೊದಲೇ ಸಿಬಿಐಗೆ ಪತ್ರ ಬರೆದಿದ್ದರು. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಸಿಬಿಐ ಇಂಟರ್‌ಪೋಲ್‌ ಕೇಂದ್ರ ಕಚೇರಿ ಲಿಯಾನ್‌ಗೆ ಜೂನ್‌ 3 ರಂದು ಕಳುಹಿಸಿತ್ತು. ಈಗ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡಿದೆ.

    ಗೋಲ್ಡೀ ಬ್ರಾರ್ ಶ್ರೀಮುಕ್ತ್ಸರ್ ಸಾಹೀಬ್ ನ ಮೂಲದವನಾಗಿದ್ದು, 2017 ರಲ್ಲಿ ವಿದ್ಯಾರ್ಥಿ ವೀಸಾ ಪಡೆದು ಕೆನಡಾಗೆ ತೆರಳಿದ್ದ ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯನಾಗಿದ್ದಾನೆ.

    ಏನಿದು ರೆಡ್‌ ಕಾರ್ನರ್‌ನೋಟಿಸ್‌?
    ಇಂಟರ್‌ ಪೋಲ್‌ ತನ್ನ 192 ಸದಸ್ಯ ರಾಷ್ಟ್ರಗಳಿಗೆ ಆರೋಪಿ ತಮ್ಮ ದೇಶದಲ್ಲಿ ತಲೆಮರೆಸಿಕೊಂಡಿದ್ದಲ್ಲಿ ಅವರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸೂಚಿಸುವ ಆದೇಶವೇ ರೆಡ್‌ ಕಾರ್ನರ್‌ ನೋಟಿಸ್‌. ಚಾರ್ಜ್‌ಶೀಟ್‌ ಸಲ್ಲಿಕೆಯಾಗಿ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಪರಾರಿಯಾಗಿರುವ ಆರೋಪಿಗಳ ಇತರ ದೇಶಗಳಿಗೆ ಎಚ್ಚರಿಸುವುದು ರೆಡ್ ಕಾರ್ನರ್ ನೋಟಿಸ್‌ ನೀಡುವುದರ ಉದ್ದೇಶ.

    ಈ ನೋಟಿಸ್‌ ಜಾರಿಯಾದ ಬಳಿಕ ಆರೋಪಿಗಳು ಅಂತಾರಾಷ್ಟ್ರೀಯ ಗಡಿಗಳನ್ನು ದಾಟಿ ಪ್ರಯಾಣಿಸುವುದು ಅಸಾಧ್ಯವಾಗಲಿದೆ. ಬಂಧನದ ಬಳಿಕ ಆ ದೇಶದಿಂದ ಆರೋಪಿಗಳನ್ನು ಇನ್ನೊಂದು ದೇಶಕ್ಕೆ ಕಳುಹಿಸಲಾಗುತ್ತದೆ.

  • ಸಿಧು ಮೂಸೆವಾಲಾ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಸಿಧು ಮೂಸೆವಾಲಾ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಚಂಡೀಗಢ: ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಪಂಜಾಬಿ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ನಿವಾಸಕ್ಕೆ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

    ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಜ್ವಾ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿ ಜೊತೆಗಿದ್ದರು. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ

    ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಭದ್ರತೆಯನ್ನು ಹೆಚ್ಚು ಮಾಡಲಾಗಿತ್ತು. ಸಿಧು ಮೂಸೆವಾಲಾ ಹತ್ಯೆ ಬಳಿಕ ಹಲವು ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದು, ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅದಕ್ಕೂ ಮುನ್ನ ಸಿಎಂ ಭಗವಂತ್ ಮಾನ್ ಭೇಟಿ ನೀಡಿದ್ದರು.

    ಸಿಧು ಮೂಸೆವಾಲಾ, ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದು, ಮಾನ್ಸಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮೇ 29 ರಂದು ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಅವರ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಭರವಸೆಯ ನಾಯಕ ಮತ್ತು ಪ್ರತಿಭಾವಂತ ಕಲಾವಿದ ಸಿಧು ಮೂಸೆವಾಲಾ ಅವರ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಪ್ರಪಂಚದಾದ್ಯಂತದ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಹೇಳಿದ್ದರು. ಇದನ್ನೂ ಓದಿ: ಅಗಲಿದ ಕೆಕೆ ಕೊನೆ ಹಾಡು ರಿಲೀಸ್ : ಭಾವುಕರಾದ ಕೇಳುಗರು

     

  • ಭ್ರಷ್ಟಾಚಾರ ಆರೋಪ – ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಬಂಧನ

    ಭ್ರಷ್ಟಾಚಾರ ಆರೋಪ – ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಬಂಧನ

    ಚಂಡೀಗಢ: ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಅವರನ್ನು ಭ್ರಷ್ಟಾಚಾರದ ಆರೋಪದಡಿ ವಿಚಕ್ಷಣ ದಳ (ವಿಬಿ) ಬಂಧಿಸಿದೆ. ಸಾಧು ಸಿಂಗ್ ಧರಂಸೋತ್ ಅವರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಕ್ಯಾಬಿನೆಟ್‍ನಲ್ಲಿ ಪಂಜಾಬ್‍ನ ಅರಣ್ಯ ಮತ್ತು ಸಮಾಜ ಕಲ್ಯಾಣ ಸಚಿವರಾಗಿದ್ದರು.

    ಸಾಧು ಸಿಂಗ್ ಧರಂಸೋತ್ ಅವರು ಪಂಜಾಬ್‍ನಲ್ಲಿ ಅರಣ್ಯ ಸಚಿವರಾಗಿದ್ದ ವೇಳೆ ಮರಗಳನ್ನು ಕಡಿಯಲು ಅನುಮತಿ ನೀಡುವುದ್ದಕ್ಕೆ ಲಂಚ ಪಡೆಯುತ್ತಿದ್ದರು ಎಂದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಐಎಎಸ್ ಅಧಿಕಾರಿಯೊಬ್ಬರು ಆರೋಪಿಸಿದ್ದರು. ಇದೀಗ ವಿಚಕ್ಷಣ ದಳ, ಸಚಿವರಾಗಿ ದುಷ್ಕೃತ್ಯ ಎಸಗಿದ್ದಕ್ಕಾಗಿ ಸಾಧು ಸಿಂಗ್ ಧರಂಸೋತ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ದಲಿತ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬಹುಕೋಟಿ ಹಗರಣದ ಮಾಸ್ಟರ್ ಮೈಂಡ್ ಆರೋಪವೂ ಸಾಧು ಸಿಂಗ್ ಧರಂಸೋತ್ ಅವರ ಮೇಲೆ ಕೇಳಿ ಬಂದಿದೆ. ಇದನ್ನೂ ಓದಿ:  ಕಾಂಗ್ರೆಸ್‍ನಲ್ಲಿ ನಲಪಾಡ್ ರೌಡಿಸಂ ಆರೋಪ – ಡಿಕೆಶಿಗೆ ದೂರು

    ಇವರೊಂದಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಒಂದು ಮರವನ್ನು ಕೊಡಲಿಯಿಂದ ಕತ್ತರಿಸಲು ಗುತ್ತಿಗೆದಾರು 500 ರೂ. ದಂಡ ನೀಡಬೇಕಾಗಿತ್ತು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕನ ಎನ್‍ಕೌಂಟರ್

  • ಗೋಲ್ಡನ್ ಟೆಂಪಲ್‍ನ ಬಳಿ ಖಾಲಿಸ್ತಾನ ಪರ ಘೋಷಣೆ

    ಗೋಲ್ಡನ್ ಟೆಂಪಲ್‍ನ ಬಳಿ ಖಾಲಿಸ್ತಾನ ಪರ ಘೋಷಣೆ

    ಚಂಡೀಗಢ: ಖಾಲಿಸ್ತಾನ ಪ್ರತ್ಯೇಕವಾದಿಗಳ ಕೂಗು ಹೆಚ್ಚುತ್ತಿದ್ದು, ಇಂದು ಪಂಜಾಬ್‍ನ ಅಮೃತಸರದಲ್ಲಿರುವ ಸಿಖ್‍ರ ಪವಿತ್ರ ಸ್ಥಳ ಗೋಲ್ಡನ್ ಟೆಂಪಲ್‍ನ ಪ್ರವೇಶದ್ವಾರದಲ್ಲಿ ಜನರ ಗುಂಪು ಭಿಂದ್ರನ್‍ವಾಲೆ ಪರ ಪೋಸ್ಟರ್‌ಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ.

    38ನೇ ಆಪರೇಷನ್ ಬ್ಲೂಸ್ಟಾರ್ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಕಳೆದ ವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಆಪರೇಷನ್ ಬ್ಲೂಸ್ಟಾರ್ ವಾರ್ಷಿಕೋತ್ಸವದ ಮೊದಲು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸಿದ್ದರು. ನಂತರ ಶಾಂತಿಯನ್ನು ಕಾಪಾಡಲು ಪೊಲೀಸರಿಗೆ ಸೂಚಿಸಿದ್ದರು.

    ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಗೋಲ್ಡನ್ ಟೆಂಪಲ್ ಸುತ್ತಲೂ ಸೆಕ್ಷನ್ 144 ಅನ್ನು ವಿಧಿಸಲಾಗಿತ್ತು. ದೇವಸ್ಥಾನಕ್ಕೆ ಯಾವುದೇ ರೀತಿಯ ಆಯುಧಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿತ್ತು. ಆದರೆ ಬೆಳಗಿನ ಪ್ರಾರ್ಥನಾ ಸಭೆಯ ನಂತರ ನೂರಕ್ಕೂ ಹೆಚ್ಚು ಜನರು ಹೊರಗೆ ಜಮಾಯಿಸಿ ಘೋಷಣೆ ಕೂಗಿದ್ದಾರೆ.

    ಏನಿದು ಆಪರೇಷನ್ ಬ್ಲೂಸ್ಟಾರ್: ಪ್ರತ್ಯೇಕ ಖಾಲಿಸ್ತಾನ ರಾಷ್ಟ್ರಕ್ಕಾಗಿ ಬಂಡುಕೋರರ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‍ವಾಲೆ, ಗೋಲ್ಡನ್‍ಟೆಂಪಲ್ (ಸ್ವರ್ಣಮಂದಿರ)ನ್ನೆ ಆಶ್ರಯ ತಾಣವಾಗಿಸಿಕೊಂಡಿದ್ದ. ಶಸ್ತ್ರಾಸ್ತ್ರಗಳೊಂದಿಗೆ ಅಡಗಿಕೊಂಡಿದ್ದ ಭಿಂದ್ರನ್‍ವಾಲೆಯನ್ನು ಸ್ವರ್ಣಮಂದಿರದಿಂದ ಹೊರಹಾಕಲು ಭಾರತೀಯ ಸೇನೆಯು 1984ರ ಜೂನ್ 3ರಿಂದ 8ರವರೆಗೆ ಆಪರೇಷನ್ ಬ್ಲೂಸ್ಟಾರ್ ಎಂಬ ಹೆಸರಿನ ಕಾರ್ಯಾಚರಣೆ ನಡೆಸಿತ್ತು. ಆಗಿನ ಪ್ರಧಾನಿ ಇಂದಿರಾಗಾಂಧಿ ಕಾರ್ಯಾಚರಣೆಗೆ ಆದೇಶ ನೀಡಿದ್ದರು. ಇದರಲ್ಲಿ ಭಿಂದ್ರನ್‍ವಾಲೆ ಹತನಾಗಿದ್ದ. ಇದರ ನೆನಪಿಗಾಗಿ ಆಪರೇಷನ್ ಬ್ಲೂಸ್ಟಾರ್ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇದನ್ನೂ ಓದಿ: RSSಗೆ ಕೈ ಹಾಕಿದ ನೆಹರೂ, ಇಂದಿರಾ ಗಾಂಧಿ ಸುಟ್ಟೋಗಿದ್ದಾರೆ, ಸಿದ್ದರಾಮಯ್ಯನೂ ಸುಟ್ಟು ಹೋಗ್ತಾರೆ: ಕಟೀಲ್

    ಖಾಲಿಸ್ತಾನ ಕೂಗು ಹೆಚ್ಚಳ: ವರ್ಷದ ಮಾರ್ಚ್‍ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್ ರಾಜ್ಯದಲ್ಲಿ ಬಹುಮತದಿಂದ ಸರ್ಕಾರವನ್ನು ರಚಿಸಿತ್ತು. ಆದರೆ ಸರ್ಕಾರ ರಚನೆ ಆದಗಿನಿಂದಲೂ ರಾಜ್ಯಕ್ಕೆ ಆಪತ್ತು ತರುವಂತಹ ಒಂದೆಲ್ಲಾ ಒಂದು ಘಟನೆಗಳು ಆಗುತ್ತಲೇ ಇವೆ. ಇದರ ಜೊತೆಗೆ ಖಾಲಿಸ್ತಾನ್ ಪ್ರತ್ಯೇಕವಾದಿಗಳ ಕೂಗು ಹೆಚ್ಚುತ್ತಲೇ ಇದೆ. ಇದಕ್ಕೆ ಪುಷ್ಠಿ ನೀಡುವಂತೆ ಮೊಹಾಲಿಯಲ್ಲಿರುವ ರಾಜ್ಯ ಪೊಲೀಸ್‍ನ ಗುಪ್ತಚರ ವಿಭಾಗದ ಪ್ರಧಾನ ಕಚೇರಿಯಲ್ಲಿ ರಾಕೆಟ್ ಚಾಲಿತ ಗ್ರೆನೇಡ್ ದಾಳಿ ನಡೆದಿತ್ತು. ಇದನ್ನೂ ಓದಿ: ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ

    Bhagwant Mann

    ಇದಾದ ಬಳಿಕ ಆಪ್ ಸರ್ಕಾರ ತೀವ್ರ ಟೀಕೆ ಗುರಿಯಾಗಿತ್ತು. ಇದಾದ ಬಳಿಕ ಸರ್ಕಾರ ಭದ್ರತೆಯನ್ನು ಹಿಂತೆಗೆದುಕೊಂಡ ಮರುದಿನವೇ ಪಂಜಾಬಿ ಗಾಯಕ ಸಿಧು ಮೂಸೆ ವಾಲೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಭಗವಂತ್ ಮಾನ್ ಅವರು ಪಂಜಾಬ್‍ನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಖಾಲಿಸ್ತಾನ್ ಬೆಂಬಲಿಗರು ರಾಜ್ಯದಲ್ಲಿ ಪ್ರವೇಶಿಸಲು ಪ್ರಯತ್ನಿಸುತ್ತಿರುವುದು ಹೆಚ್ಚುತ್ತಿದೆ.

  • ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

    ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

    ಚಂಡೀಗಢ: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಗ್ಯಾಂಗ್‍ವೊಂದು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ.

    ಜೂನ್ 4ರ ಶನಿವಾರದಂದು ಪಂಜಾಬ್‍ನ ಮೋಗಾ ಜಿಲ್ಲೆಯ ಬಧ್ನಿ ಕಾಲಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಂಜಾಬಿನ ಜನಪ್ರಿಯ ಗಾಯಕ ಸಿಧು ಮೂಸೆ ವಾಲಾ ಅವರನ್ನು ಕಳೆದ ಭಾನುವಾರ ದುಷ್ಕರ್ಮಿಗಳು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಭಯಾನಕ ಘಟನೆ ಪಂಜಾಬ್ ಜನತೆಯನ್ನು ಬೆಚ್ಚಿಬೀಳಿಸಿದೆ. ಇದನ್ನೂ ಓದಿ: ಕಂಟೈನರ್ ಡಿಪೋದಲ್ಲಿ ಬೆಂಕಿ: 16 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    crime

    ಈ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಲ್ಲದೇ ಕೆಲವು ಮಂದಿ ತಮ್ಮ ಮೊಬೈಲ್‍ನಲ್ಲಿ ಕೂಡ ಘಟನೆಯ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್‍ಪಿ) ಸರ್ಫರಾಜ್ ಆಲಂ ಅವರು, ಕೆಲವು ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಬಧ್ನಿಕಲ ನಿವಾಸಿ ದೇಸ್ರಾಜ್ ಅಲಿಯಾಸ್ ದೇಸು ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಕೆಲ ಆರೋಪಿಗಳ ಗುರುತು ಪತ್ತೆಯಾಗಿದ್ದು, ತಿಸಲಾಗಿದೆ. ಶೀಘ್ರದಲ್ಲಿಯೇ ಅವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

    ದಾಳಿ ವೇಳೆ ರಕ್ತಸ್ರಾವದಿಂದ ಕೆಲ ನಿಮಿಷಗಳ ಕಾಲ ಯುವಕ ರಸ್ತೆಯಲ್ಲಿಯೇ ಒದ್ದಾಡಿದ್ದಾನೆ. ನಂತರ ಅವನನ್ನು ಮೊಗಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಪುತ್ರಿಯ ಅಂಡಾಣು ದಾನ ಮಾಡಲು ಒತ್ತಾಯಿಸಿದ ಪಾಪಿ ತಾಯಿ!

  • ಸಿದ್ದು ಮೂಸೆವಾಲಾ ಹತ್ಯಾ ಪ್ರಕರಣ ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ

    ಸಿದ್ದು ಮೂಸೆವಾಲಾ ಹತ್ಯಾ ಪ್ರಕರಣ ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ

    ನವದೆಹಲಿ: ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಖ್ಯಾತ ಗಾಯಕ ಸಿದ್ದು ಮೂಸೆವಾಲಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

    ಬಿಜೆಪಿ ನಾಯಕ ಜಗಜಿತ್ ಸಿಂಗ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳ ಅಡಿಯಲ್ಲಿ ದಾಖಲಾಗಿರುವ ಮೇ 29 ರ ಪ್ರಥಮ ಮಾಹಿತಿ ವರದಿಯನ್ನು(ಎಫ್‌ಐಆರ್) ಸಿಬಿಐಗೆ ವರ್ಗಾಯಿಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ

    ಹಗಲು ಹೊತ್ತಿನಲ್ಲಿ ಕೋಲ್ಡ್ ಬ್ಲೆಡ್ ಹತ್ಯೆಯನ್ನು ನಡೆಸಿದ ರೀತಿ, ಪಂಜಾಬ್ ರಾಜ್ಯದ ಆಡಳಿತ ಯಂತ್ರವು ಅಪರಾಧವನ್ನು ತಡೆಗಟ್ಟುವಲ್ಲಿ ಮಾತ್ರವಲ್ಲದೆ ದರೋಡೆಕೋರರ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಗ್ರಹಿಸುವ ಕರ್ತವ್ಯದಲ್ಲೂ ವಿಫಲವಾಗಿದೆ ಎಂಬ ಅಂಶವನ್ನು ಸೂಚಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಕಾನ್ಪುರದಲ್ಲಿ ಘರ್ಷಣೆ – ಸಾವಿರ ಮಂದಿ ಮೇಲೆ ಎಫ್‍ಐಆರ್, 18 ಮಂದಿ ಅರೆಸ್ಟ್

    ಗಾಯಕ ಮೂಸೆವಾಲಾ ಕಳೆದ ವಾರ ತನ್ನ ಸ್ಪೋರ್ಟ್ಸ್ ಯುಟಿಲಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯಲ್ಲಿ ಭಾಗಿಯಾಗಿದ್ದು, ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಾವೇ ಎಸಗಿದ್ದಾನೆ ಎಂದು ಹೇಳಿದ್ದಾನೆ.

    ಹತ್ಯೆಗೂ ಒಂದು ದಿನದ ಮೊದಲು ಪಂಜಾಬ್ ಸರ್ಕಾರ ಮೂಸೆವಾಲಾ ಭದ್ರತೆಯನ್ನು ಹೇಗೆ ತೆಗೆದುಹಾಕಿತ್ತು ಮತ್ತು ಅದರ ಬಗ್ಗೆ ಮಾಧ್ಯಮಗಳಲ್ಲಿ ಹೇಗೆ ಮಾಹಿತಿ ಪ್ರಕಟವಾಯಿತು ಎಂಬುದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಒತ್ತಿ ಹೇಳಲಾಗಿದೆ.

    ಪ್ರಕರಣದ ಓರ್ವ ಆರೋಪಿ ಮನ್‌ಪ್ರೀತ್ ಸಿಂಗ್‌ನನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ. ಆದರೆ ಇತರ ಸಹ ಆರೋಪಿಗಳು ಕಾನೂನಿನಿಂದ ತಪ್ಪಿಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

  • ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಚಂಡೀಗಢ: ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರನ್ನು ಭಾನುವಾರ ಮಾನ್ಸಾ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

    ಪಂಜಾಬ್‍ನಲ್ಲಿ ಸಿಎಂ ಭಗವಂತ್ ಮಾನ್ ಅವರು 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದರು. ಅದರಲ್ಲಿ ಮೂಸೆ ವಾಲಾ ಕೂಡ ಒಬ್ಬರಾಗಿದ್ದರು. ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: 424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

    ನಡೆದಿದ್ದೇನು?
    ಜವಾಹರ್ ಕೆ ಗ್ರಾಮದ ದೇವಸ್ಥಾನದ ಬಳಿ ಮೂಸೆ ವಾಲಾ ಅವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಕಾರಿನ ಮೇಲೆ 10 ಬಾರಿ ಗುಂಡು ಹಾರಿಸಿದ್ದಾರೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಮಾನ್ಸಾದ ಸಿವಿಲ್ ಆಸ್ಪತ್ರೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದೆ ಮೂಸೆ ವಾಲಾ ಸಾವನ್ನಪ್ಪಿದ್ದಾರೆ.

    ಸುದ್ದಿ ತಿಳಿದು ಭಗವಂತ್ ಮಾನ್ ಅವರು ಶಾಕ್ ಆಗಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ಟ್ವೀಟ್‍ನಲ್ಲಿ, ಸಿದ್ದು ಮೂಸೆ ವಾಲಾ ಅವರ ಭೀಕರ ಹತ್ಯೆಯಿಂದ ನಾನು ಆಘಾತಗೊಂಡಿದ್ದೇನೆ, ತೀವ್ರ ದುಃಖಿತನಾಗಿದ್ದೇನೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ. ನನ್ನ ಪ್ರಾರ್ಥನೆ ಅವರ ಕುಟುಂಬ ಮತ್ತು ಪ್ರಪಂಚದಾದ್ಯಂತದ ಅವರ ಅಭಿಮಾನಿಗಳೊಂದಿಗೆ ಇವೆ. ಎಲ್ಲರೂ ಶಾಂತವಾಗಿರಲು ನಾನು ಮನವಿ ಮಾಡುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣ: ಸಿಎಂ 

    ಮೂಸ್ ವಾಲಾ ಅವರು ಮಾನ್ಸಾ ಬಳಿಯ ಮೂಸ್ ವಾಲಾ ಗ್ರಾಮಕ್ಕೆ ಸೇರಿದವರು. ಕಳೆದ ಕೆಲವು ವರ್ಷಗಳಲ್ಲಿ ಅನೇಕ ಸೂಪರ್‌ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದರು. ಮೂಸ್ ವಾಲಾ ಅವರು ಕಳೆದ ವರ್ಷ ನವೆಂಬರ್‍ನಲ್ಲಿ ಭಾರೀ ಅಬ್ಬರದ ನಡುವೆ ಕಾಂಗ್ರೆಸ್‍ಗೆ ಸೇರಿದ್ದರು.