Tag: punjab

  • ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಚಂಡೀಗಢ: ಪಂಜಾಬ್‍ನ ಲೂಧಿಯಾನದಲ್ಲಿ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಟ್ಟಡದ ಎರಡನೇ ಮಹಡಿಯಲ್ಲಿರುವ ಬಾತ್‍ರೂಮ್‍ನಲ್ಲಿ ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಬಾತ್‍ರೂಮ್ ಗೋಡೆಗಳಿಗೆ ಹಾನಿಯಾಗಿದೆ ಮತ್ತು ಸಮೀಪದ ಕೋಣೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ನ್ಯಾಯಾಲಯ ಲುಧಿಯಾನ ನಗರದ ಹೃದಯಭಾಗದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಸಮೀಪದಲ್ಲಿದೆ.

    ಈ ಘಟನೆ ಸಂಬಂಧ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಕೂಲಂಕಷವಾಗಿ ತನಿಖೆ ನಡೆಸುವಂತೆ ಪಂಜಾಬ್ ಪೊಲೀಸರಿಗೆ ಆದೇಶಿಸಿದ್ದಾರೆ. ಇದನ್ನೂ ಓದಿ:  ಜಾಹೀರಾತಿನಲ್ಲಿ ಸಹಾಯವಾಣಿ ನಂಬರ್ ತಪ್ಪಾಗಿದ್ದಕ್ಕೆ ಮಹಿಳೆಗೆ ಎಡಬಿಡದೇ ಬಂತು 4,500 ಫೋನ್‌ ಕಾಲ್‌!

    ಲುಧಿಯಾನ ಕೋರ್ಟ್ ಆವರಣದಲ್ಲಿ ಸಂಭವಿಸಿದ ಸ್ಫೋಟ ವಿಚಾರ ಗೊಂದಲನ್ನುಂಟು ಮಾಡಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಬಗ್ಗೆ ಕೇಳಿ ದುಃಖವಾಗಿದೆ ಮತ್ತು ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಈ ಕುರಿತಂತೆ ಪಂಜಾಬ್ ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಬಗ್ಗೆ ಸಿಕ್ತು ಗುಡ್‌ ನ್ಯೂಸ್‌ – ಪ್ರಾಥಮಿಕ ಅಧ್ಯಯನ ವರದಿಗಳು ಬಹಿರಂಗ

    ಅಮರಿಂದರ್ ಸಿಂಗ್ ಅವರು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಡೆಗಳಿಂದ ರಾಜ್ಯಕ್ಕೆ ಬೆದರಿಕೆ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ರಕ್ಷಣೆಗಾಗಿ 25 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಡ್ರೋನ್ ವಿರೋಧಿ ಗ್ಯಾಜೆಟ್‍ಗಳನ್ನು ಗಡಿ ಭದ್ರತಾ ಪಡೆಗೆ (ಬಿಎಸ್‍ಎಫ್) ಕೋರಿದ್ದಾರೆ.

  • ಸಿಖ್‌ ಧರ್ಮಕ್ಕೆ ಅಪಚಾರ ಎಸಗಿದರೆಂದು ಉದ್ರಿಕ್ತರ ಗುಂಪಿನಿಂದ ಹಲ್ಲೆ- ಇಬ್ಬರು ಸಾವು

    ಸಿಖ್‌ ಧರ್ಮಕ್ಕೆ ಅಪಚಾರ ಎಸಗಿದರೆಂದು ಉದ್ರಿಕ್ತರ ಗುಂಪಿನಿಂದ ಹಲ್ಲೆ- ಇಬ್ಬರು ಸಾವು

    ಚಂಡೀಗಢ: ಕಳೆದ 24 ಗಂಟೆಗಳ ಅವಧಿಯಲ್ಲಿ ಪ್ರತ್ಯೇಕ ಎರಡು ಕಡೆ ಕೋಪೋದ್ರಿಕ್ತ ಜನರ ಗುಂಪು ಇಬ್ಬರು ವ್ಯಕ್ತಿಗಳನ್ನು ಹೊಡೆದು ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ.

    ಅಮೃತಸರದ ಸ್ವರ್ಣ ಮಂದಿರವನ್ನು ಅಪವಿತ್ರಗೊಳಿಸಲು ಯತ್ನಿಸಿದ ಎಂದು ಆರೋಪಿಸಿ ಉದ್ರಿಕ್ತರ ಗುಂಪು ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಘಟನೆ ಶನಿವಾರ ನಡೆದಿತ್ತು. ಇದಾದ 24 ಗಂಟೆಯೊಳಗಡೆ ಮತ್ತೊಂದು ಕಡೆ ಇದೇ ಕಾರಣಕ್ಕೆ ವ್ಯಕ್ತಿಯನ್ನು ಹೊಡೆದು ಕೊಲ್ಲಲಾಗಿದೆ. ಇದನ್ನೂ ಓದಿ: ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ

    ಪಂಜಾಬ್‌ನ ಕಪುರ್ತಲಾದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ಸಿಖ್‌ ಬಾವುಟವನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ವೇಳೆ ಗುಂಪೊಂದು ಆತನನ್ನು ಹಿಡಿದಿದೆ. ಗಲಾಟೆ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಆಗ ಕೋಪೋದ್ರಿಕ್ತ ಗುಂಪು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರು ತಕ್ಷಣ ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಅಷ್ಟರೊಳಗೆ ವ್ಯಕ್ತಿ ಮೃತಪಟ್ಟಿದ್ದಾನೆ.

    ಮೃತ ವ್ಯಕ್ತಿ ಸಿಖ್‌ ಬಾವುಟ ತೆರವುಗೊಳಿಸಿ ಅಪವಿತ್ರಗೊಳಿಸಲು ಬಂದಿರಲಿಲ್ಲ. ಆತ ಕಳ್ಳತನ ಮಾಡಲು ಬಂದಿದ್ದ. ಆದರೆ ಜನರು ತಪ್ಪು ತಿಳಿದು ವ್ಯಕ್ತಿಯನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 43 ತಮಿಳುನಾಡಿನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

    POLICE JEEP

    ಇದೇ ರೀತಿಯ ಘಟನೆ ಶನಿವಾರ ಸಂಜೆ ಅಮೃತಸರದ ಸ್ವರ್ಣ ಮಂದಿರದಲ್ಲಿ ಶನಿವಾರ ನಡೆದಿತ್ತು. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಖಡ್ಗವನ್ನು ಹಿಡಿದುಕೊಂಡು ಪ್ರಾರ್ಥನೆಯ ಸಂದರ್ಭದಲ್ಲಿ ಗರ್ಭಗುಡಿಯೊಳಗೆ ಜಿಗಿದು, ಗುರು ಗ್ರಂಥ ಸಾಹೀಬ್‌ ಪಠಿಸುತ್ತಿದ್ದ ಸ್ಥಳದ ಸಮೀಪ ತಲುಪಿದ್ದ. ಈ ವೇಳೆ ಶಿರೋಮಣಿ ಗುರುದ್ವಾರ ಪ್ರಬಂಧಕ್‌ ಸಮಿತಿ ಕಾರ್ಯಪಡೆ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದಿತ್ತು. ಆದರೆ ಕೋಪೋದ್ರಿಕ್ತ ಗುಂಪು ವ್ಯಕ್ತಿಯನ್ನು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದ.

  • ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ

    ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ

    ಚಂಡೀಗಢ: ಅಮೃತಸರದ ಸ್ವರ್ಣ ಮಂದಿರವನ್ನು ಅಪವಿತ್ರಗೊಳಿಸಲು ಯತ್ನಿಸಿದ ಆರೋಪ ಕೇಳಿಬಂದ ಹಿನ್ನೆಲೆ ಯುವಕನೋರ್ವನನ್ನು ಕೋಪ್ರೋದ್ರಿಕ್ತರು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

    ಪ್ರತಿನಿತ್ಯ ಸಂಜೆ ನಡೆಯುವ ಪ್ರಾರ್ಥನೆ ವೇಳೆ ರೇಲಿಂಗ್( ಕಬ್ಬಿಣದ ಸರಪಳಿಯನ್ನು) ದಾಟಿ, ಆ ಸ್ಥಳಕ್ಕೆ ಜಿಗಿದು ಬಂದ ವ್ಯಕ್ತಿಯೋರ್ವ ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರವಾದ ಗ್ರಂಥ) ಬಳಿ ಇರಿಸಲಾದ ಖಡ್ಗವನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾನೆ.

    ಈ ವೇಳೆ ಕರ್ತವ್ಯನಿರತ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಕೊಠಡಿಗೆ ಎಳೆದೊಯ್ದು ವಿಚಾರಣೆ ನಡೆಸಿ ತೀವ್ರವಾಗಿ ಥಳಿಸಿದ್ದಾರೆ. ಇದರಿಂದ ಗಂಭೀರವಾಗಿ ಹಲ್ಲೆಗೆ ಒಳಗಾದ ವ್ಯಕ್ತಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ:  ಓವೈಸಿ

    ಈ ಕೃತ್ಯ ಕುರಿತಂತೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ (ಎಸ್‍ಜಿಪಿಸಿ) ಕಾರ್ಯನಿರ್ವಾಹಕ ಸದಸ್ಯ ಭಾಯಿ ಗುರುಪ್ರೀತ್ ಸಿಂಗ್ ರಾಂಧವಾ ಅವರು, ಅಮೃತಸಾರದ ಸ್ವರ್ಣ ಮಂದಿರದಲ್ಲಿ ನಡೆದ ಈ ಅಹಿತಕರವಾದ ಘಟನೆಯನ್ನು ನಾನು ಖಂಡಿಸುತ್ತೇನೆ. ಪಂಜಾಬ್ ಸರ್ಕಾರ ಈ ವಿಚಾರವಾಗಿ ತಕ್ಷಣವೇ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

    ದಿನ ನಿತ್ಯ ಪ್ರಾರ್ಥನೆಯು ವಾಹಿನಿಯೊಂದರಲ್ಲಿ ನೇರ ಪ್ರಸಾರವಾಗುವುದರಿಂದ ಈ ದೃಶ್ಯಾವಳಿಗಳು ಪ್ರಸಾರವಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಪೊಲೀಸರ ಸರ್ಪಗಾವಲಿನಲ್ಲಿ ಶಾಂತಿಯುತವಾಗಿ ತೆರೆಕಂಡ ಕಾಫಿನಾಡ ಶೋಭಾಯಾತ್ರೆ

    ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಮೃತಸರ ಪೊಲೀಸ್ ಆಯುಕ್ತರು ಆ ವ್ಯಕ್ತಿ ದೈವ ನಿಂದನೆಗೆ ಯತ್ನಿಸಿದ್ದರಿಂದ ಸಾರ್ವಜನಿಕರು ಆತನನ್ನು ತೀವ್ರವಾಗಿ ಥಳಿಸಿದ್ದಾರೆ, ಇದೀಗ ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆತ ಯಾರು? ಎಲ್ಲಿಂದ ಬಂದಿದ್ದಾನೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಸಿಎಂ ರ‍್ಯಾಲಿ ವೇಳೆ ನಿರುದ್ಯೋಗಿ ಶಿಕ್ಷಕರ ಮೇಲೆ ಪೊಲೀಸರ ದಬ್ಬಾಳಿಕೆ – ವೀಡಿಯೋ ವೈರಲ್

    ಸಿಎಂ ರ‍್ಯಾಲಿ ವೇಳೆ ನಿರುದ್ಯೋಗಿ ಶಿಕ್ಷಕರ ಮೇಲೆ ಪೊಲೀಸರ ದಬ್ಬಾಳಿಕೆ – ವೀಡಿಯೋ ವೈರಲ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ವಿರುದ್ಧ ಸಂಗ್ರೂರ್‌ನಲ್ಲಿ ನಡೆಸಿದ ಪ್ರತಿಭಟನೆ ವೇಳೆ ನಿರುದ್ಯೋಗಿ ಶಿಕ್ಷಕರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಸಂಗ್ರೂರಿನ ಫತೇಘರ್ ಸನ್ನಾ ಗ್ರಾಮದ ಸಿಮೆಂಟ್ ಕಾರ್ಖಾನೆ ಉದ್ಘಾಟನೆಗೆ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ಆಗಮಿಸಿದ್ದರು. ಈ ವೇಳೆ ಚರಂಜಿತ್ ಸಿಂಗ್ ಚನ್ನಿ ಅವರು ಭಾಷಣವನ್ನು ಆರಂಭಿಸಲು ಮುಂದಾದಾಗ, ಬಿ.ಎಡ್ ಶಿಕ್ಷಣ ಅರ್ಹತೆ ಪಡೆದಿರುವ ಶಿಕ್ಷಕರ ಗುಂಪು ಸರ್ಕಾರದ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದರು. ಜೊತೆಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದರು.

    ಹೀಗಾಗಿ ಪೊಲೀಸರು ಮಹಿಳೆಯರು ಸೇರಿದಂತೆ ಪ್ರತಿಭಟನಾಕಾರರನ್ನು ಸ್ಥಳದಿಂದ ಎಳೆದೊಯ್ದು ವಾಹನಗಳಲ್ಲಿ ತುಂಬಿದರು. ಅಲ್ಲದೇ ಘೋಷಣೆ ಕೂಗಲು ಮುಂದಾದ ಶಿಕ್ಷಕರ ಬಾಯಿ ಮುಚ್ಚಿ ಧರಧರನೇ ಎಳೆದೊಯ್ದಿದ್ದಾರೆ. ಇದನ್ನೂ ಓದಿ: 7 ಎಕರೆ ಆಸ್ತಿಗಾಗಿ 98 ವರ್ಷದ ವೃದ್ಧೆಯನ್ನೇ ಕಿಡ್ನಾಪ್‍ಗೈದ್ರು

    ಕಳೆದ ನಾಲ್ಕು ವರ್ಷಗಳಿಂದ ಇದೇ ರೀತಿ ನಮ್ಮನ್ನು ನಡೆಸಿಕೊಳ್ಳುತ್ತಿದ್ದಾರೆ. ಆದರೆ ಇಂದಿಗೂ ಉದ್ಯೋಗ ಸಿಕ್ಕಿಲ್ಲ. 9,000 ಶಿಕ್ಷಕರ ಹುದ್ದೆಗಳಿಗೆ ಸರ್ಕಾರ ಇನ್ನೂ ನೇಮಕಾತಿಯನ್ನು ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿಗಳು ಭರವಸೆ ನೀಡುವುದರಲ್ಲಿ ಮಾತ್ರ ನಿಪುಣರು ಎಂದು ನಿರುದ್ಯೋಗಿ ಶಿಕ್ಷಕರು ತಮ್ಮ ಅಳನ್ನು ತೋಡಿಕೊಂಡಿದ್ದಾರೆ.

    ವೇತನವನ್ನು ಹೆಚ್ಚಿಸುವಂತೆ ಮತ್ತು ಉದ್ಯೋಗ ಖಾಯಂಗೊಳಿಸುವ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಪಂಜಾಬ್‍ನಾದ್ಯಂತ ಶಿಕ್ಷಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!

  • ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ

    ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ

    ಚಂಢೀಗಢ: ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಕ್ರಮ ಕೈಗೊಂಡರೆ, ಪ್ರತಿಯೊಂದು ಪ್ರಕರಣಕ್ಕೆ ಅವರಿಗೆ 25,000 ಬಹುಮಾನ ನೀಡುವುದಾಗಿ ಆಮ್ ಆದ್ಮಿ ಹೇಳಿದೆ.

    ಮರಳು ಅಕ್ರಮ ಗಣಿಗಾರಿಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪುರಾವೆ ಕೊಟ್ಟವರಿಗೆ 25,000 ಬಹುಮಾನ ನೀಡಲಾಗುವುದು ಎಂದು ಚನ್ನಿ ಗುರುವಾರವಷ್ಟೇ ಹೇಳಿದ್ದರು. ಅವರು ಈ ಘೋಷಣೆ ಮಾಡಿದ ಮರುದಿನ ಸುದ್ದಿಗೋಷ್ಠಿ ನಡೆಸಿದ ಎಎಪಿ ವಕ್ತಾರ ರಾಘವ್ ಛಡ್ಡಾ, ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಕ್ರಮ ಕೈಗೊಂಡರೆ, ಪ್ರತಿಯೊಂದು ಪ್ರಕರಣಕ್ಕೆ ಅವರಿಗೆ 25,000 ಬಹುಮಾನ ನೀಡುವುದಾಗಿ ಸವಾಲು ಎಸೆದಿದ್ದಾರೆ. ಮರಳು ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ನಿಜವಾದ ಉದ್ದೇಶವಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇದನ್ನೂ ಓದಿ:  ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ಚನ್ನಿ ಅವರ ವಿಧಾನಸಭೆ ಕ್ಷೇತ್ರವಾದ ರಾಮ್‍ಪಂತ್‍ನಲ್ಲಿಯೇ ಮರಳು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಯಾವ ಸ್ಥಳಗಳಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಕೇವಲ ಐದು ನಿಮಿಷಗಳಲ್ಲಿ ಮುಖ್ಯಮಂತ್ರಿ  ಅವರು ಪಡೆಯಬಹುದು. ನೀವು ನನ್ನ ಜೊತೆ ಬನ್ನಿ. ಯಾವ ಸ್ಥಳಗಳಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ನಾನು ನಿಮಗೆ ತೋರಿಸುತ್ತೇನೆ ಎಂದು ಅವರು ಸವಾಲು ಹಾಕಿದ್ದಾರೆ.  ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ನಿಮ್ಮ ಕ್ಷೇತ್ರದ ಜಿಂದಾಪುರ್ ಪಿಂಡ್ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದಕ್ಕೆ ನಾನು ನಿಮಗೆ ಪುರಾವೆಗಳನ್ನು, ನಿಮ್ಮ ವಿರುದ್ಧವೇ ಮೊದಲು ಎಫ್‍ಐಆರ್ ದಾಖಲಿಸಿಕೊಳ್ಳಿ. ಮುಖ್ಯಮಂತ್ರಿಯೇ ಅಕ್ರಮ ಗಣಿಗಾರಿಕೆಯ ಅತಿದೊಡ್ಡ ಮಾಫಿಯಾ ಆದಂತಿದೆ. ಚನ್ನಿ ಅವರ ವಿಧಾನಸಭೆ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದನ್ನು ಬಹಿರಂಗಪಡಿಸಿದ್ದೇವೆ ಎಂದು  ಛಡ್ಡಾ ಹೇಳಿದ್ದರು.

  • ಕಳ್ಳತನ ಮಾಡಲು ಬಂದರೆಂದು ನಾಲ್ವರು ಮಹಿಳೆಯರ ಬೆತ್ತಲೆ ಮೆರವಣಿಗೆ – ಐವರು ಅರೆಸ್ಟ್

    ಕಳ್ಳತನ ಮಾಡಲು ಬಂದರೆಂದು ನಾಲ್ವರು ಮಹಿಳೆಯರ ಬೆತ್ತಲೆ ಮೆರವಣಿಗೆ – ಐವರು ಅರೆಸ್ಟ್

    ಲಾಹೋರ್: ನಾಲ್ವರು ಮಹಿಳೆಯರು ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದರೆಂದು ಪಾಕಿಸ್ತಾನದ ಜನರ ಗುಂಪು ಅವರ ಮೇಲೆ ಮಾರಾಮಾರಿ ಹಲ್ಲೆ ಮಾಡಿದ್ದು, ಬೆತ್ತಲೆ ಮೆರವಣಿಗೆ ಮಾಡಿಸಿದ್ದಾರೆ. ಈ ಹಿನ್ನೆಲೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಪಂಜಾಬ್ ಪೊಲೀಸರು ಅರೆಸ್ಟ್ ಮಾಡಿದ್ದು, ಇನ್ನೊಳಿದ ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ.

    ನಡೆದಿದ್ದೇನು?
    ಪಂಜಾಬ್ ನ ಲಾಹೋರ್‍ನಿಂದ 180 ಕಿಮೀ ದೂರದಲ್ಲಿರುವ ಫೈಸಲಾಬಾದ್‍ನಲ್ಲಿ ನಾಲ್ವರು ಮಹಿಳೆಯರು ಉಸ್ಮಾನ್ ಎಲೆಕ್ಟ್ರಿಕ್ ಅಂಗಡಿಯೊಳಗೆ ಹೋಗಿ ನೀರಿನ ಬಾಟಲಿಯನ್ನು ಕೇಳಿದ್ದಾರೆ. ಆದರೆ ಅಲ್ಲಿಂದ ಅಂಗಡಿಯ ಮಾಲೀಕ ಸದ್ದಾಂ ಇವರು ಕಳ್ಳತನ ಮಾಡಲು ಬಂದಿದ್ದಾರೆ ಎಂದು ಆರೋಪಿಸಿ ಅವರನ್ನು ಥಳಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆ ಪಾಕಿಸ್ತಾನದ ಜನರ ಗುಂಪೊಂದು ಆ ಮಹಿಳೆಯರನ್ನು ಅಂಗಡಿಯಿಂದ ಎಳೆದು ತಂದು ಅವರನ್ನು ನಿರ್ವಸ್ತ್ರ ಮಾಡಿದ್ದಾರೆ. ಈ ವೇಳೆ ವೀಡಿಯೋ ಮಾಡುತ್ತಿದ್ದು, ಆ ಮಹಿಳೆಯರು ಮಾನ ಮುಚ್ಚಿಕೊಳ್ಳಲು ಬಟ್ಟೆಯನ್ನು ನೀಡುವಂತೆ ಮನವಿ ಮಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಅದು ಅಲ್ಲದೇ ಅವರನ್ನು ದೊಣ್ಣೆಗಳಿಂದ ಥಳಿಸಲಾಗಿದೆ. ಇದನ್ನೂ ಓದಿ: ಟ್ರೈನ್ ಟಿಕೆಟ್ ರದ್ದು ಮಾಡಿದ್ದಕ್ಕೆ ದಂಡ ವಿಧಿಸಿದವನನ್ನೇ ಕೊಂದ ಸಹೋದರರು!

    ಈ ವೇಳೆ ನಾವೇನು ತಪ್ಪು ಮಾಡಿಲ್ಲ, ನಮ್ಮನ್ನು ಹೋಗಲು ಬಿಡಿ ಎಂದು ಜನರಲ್ಲಿ ಅಳುತ್ತಾ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಒಂದು ಗಂಟೆ ಕಾಲ ಆ ಮಹಿಳೆಯರನ್ನು ಬೀದಿಗಳಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಯಿತು.

    ಐವರ ಬಂಧನ!
    ಈ ವೀಡಿಯೋ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪಂಜಾಬ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಅದು ಅಲ್ಲದೇ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ದಾಳಿ ನಡೆಸಲಾಗಿದ್ದು, ಸದ್ದಾಂ ಸೇರಿದಂತೆ ಐವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಫೈಸಲಾಬಾದ್ ಪೊಲೀಸ್ ಮುಖ್ಯಸ್ಥ ಡಾ.ಅಬಿದ್ ಖಾನ್ ಮಂಗಳವಾರ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಈ ಘಟನೆಯಲ್ಲಿ ಭಾಗಿಯಾದ ಎಲ್ಲರ ಮೇಲೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಪ್ರಸ್ತುತ ಈ ಐವರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

    ಈ ಕುರಿತು ಸಂತ್ರಸ್ತೆ, ಫೈಸಲಾಬಾದ್‍ನ ಬಾವಾ ಚಾಕ್ ಮಾರುಕಟ್ಟೆಗೆ ತ್ಯಾಜ್ಯ ಸಂಗ್ರಹಿಸಲು ನಾವು ಹೋಗಿದ್ದೆವು. ಈ ವೇಳೆ ನಾವು ಬಾಯಾರಿಕೆಯಿಂದ ಉಸ್ಮಾನ್ ಎಲೆಕ್ಟ್ರಿಕ್ ಅಂಗಡಿಯೊಳಗೆ ಹೋಗಿ ನೀರಿನ ಬಾಟಲಿಯನ್ನು ಕೇಳಿದ್ದೆವು. ಆದರೆ ಆ ಮಾಲೀಕ ಸದ್ದಾಂ ನಾವು ಕಳ್ಳತನದ ಉದ್ದೇಶದಿಂದ ಅಂಗಡಿಗೆ ಪ್ರವೇಶಿಸಿದ್ದೇವೆ ಎಂದು ನಮ್ಮ ಮೇಲೆ ಆರೋಪಿಸಿದರು. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಟೆಸ್ಟಿಂಗ್ ಹೆಚ್ಚಳ

    ಸದ್ದಾಂ ಮತ್ತು ಇತರ ಜನರು ನಮ್ಮನ್ನು ಥಳಿಸಲು ಪ್ರಾರಂಭಿಸಿದರು. ನಂತರ ಅವರು ನಮ್ಮನ್ನು ನಿರ್ವಸ್ತ್ರಗೊಳಿಸಿ, ಬೀದಿಗೆ ಎಳೆದೊಯ್ದು ಥಳಿಸಿದರು. ಈ ವೇಳೆ ನಮ್ಮ ವೀಡಿಯೋಗಳನ್ನೂ ಮಾಡಿದ್ದಾರೆ. ಈ ದುಷ್ಕøತ್ಯವನ್ನು ತಡೆಯಲು ಯಾರು ಸಹ ಪ್ರಯತ್ನಿಸಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

  • ಕಾಂಗ್ರೆಸ್ ಸೇರ್ಪಡೆ ನಂತ್ರ ರಾಹುಲ್ ಗಾಂಧಿ ಭೇಟಿಯಾದ ಸಿಧು ಮೂಸೆವಾಲಾ

    ಕಾಂಗ್ರೆಸ್ ಸೇರ್ಪಡೆ ನಂತ್ರ ರಾಹುಲ್ ಗಾಂಧಿ ಭೇಟಿಯಾದ ಸಿಧು ಮೂಸೆವಾಲಾ

    ಚಂಡೀಗಢ: ಪಂಜಾಬಿ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಂತೆಯೇ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾದರು.

    ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಎಐಸಿಸಿ ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಮತ್ತು ರಾಜ್ಯ ಸಾರಿಗೆ ಸಚಿವ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಉಪಸ್ಥಿತರಿದ್ದರು.

    ನವಜೋತ್ ಸಿಂಗ್ ಸಿಧು ಅವರು ರಾಹುಲ್ ಗಾಂಧಿ ಅವರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಣ್ಣನ ತೋಳಿನಲ್ಲಿ ಸಹೋದರರು ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

    ಗುರುವಾರ ಸಿಧು ಮೂಸೆವಾಲಾ ಅವರು ಚಂಡೀಗಢದಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸಿಧು ಮೂಸೆವಾಲಾ ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

    ಚರಂಜಿತ್ ಸಿಂಗ್ ಚನ್ನಿ ಅವರು ಕೂಡ ತಮ್ಮ ಟ್ವಿಟ್ಟರ್‌ನಲ್ಲಿ ಪ್ರತಿಭಾವಂತ ಸಿಧು ಮೂಸೆವಾಲಾ ಅವರನ್ನು ಕಾಂಗ್ರೆಸ್ ಕುಟುಂಬಕ್ಕೆ ಸ್ವಾಗತಿಸುತ್ತೇನೆ. ಅವರು ತಮ್ಮ ಸಾಮರ್ಥ್ಯದಷ್ಟು ಜನರಿಗೆ ಸೇವೆ ಸಲ್ಲಿಸುತ್ತಾರೆ ಮತ್ತು ಕಾಂಗ್ರೆಸ್ ಬಗ್ಗೆ ಸಂದೇಶವನ್ನು ಸಾರುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ.

  • ಕೃಷಿ ಕಾನೂನು ವಾಪಸ್ ಬೆನ್ನಲ್ಲೇ ಪಂಜಾಬ್‌ನಲ್ಲಿ ಕ್ಯಾಪ್ಟನ್ ಜೊತೆಗೆ ಬಿಜೆಪಿ ಮೈತ್ರಿ

    ಕೃಷಿ ಕಾನೂನು ವಾಪಸ್ ಬೆನ್ನಲ್ಲೇ ಪಂಜಾಬ್‌ನಲ್ಲಿ ಕ್ಯಾಪ್ಟನ್ ಜೊತೆಗೆ ಬಿಜೆಪಿ ಮೈತ್ರಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುತ್ತಿದ್ದಂತೆ ಪಂಜಾಬ್ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. 2022 ರ ಫೆಬ್ರವರಿ – ಮಾರ್ಚ್‍ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆ ಪೂರ್ವ ಮೈತ್ರಿ ಲೆಕ್ಕಾಚಾರಗಳು ಶುರುವಾಗಿವೆ.

    ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಲೆಕ್ಕಚಾರದಲ್ಲಿದೆ. ಬಿಜೆಪಿ ಈ ಬಾರಿ ಶಿರೋಮಣಿ ಅಕಾಲಿದಳ ಜೊತೆಗೆ ಮೈತ್ರಿಗೆ ಹಿಂದೇಟು ಹಾಕಿದ್ದು ಕ್ಯಾಪ್ಟನ್ ಜೊತೆಗೆ ಹೊಸ ರಾಜಕೀಯ ತಂತ್ರಗಳನ್ನು ಮಾಡಲು ಮುಂದಾಗಿದೆ. ಇದಕ್ಕೆ ಪೂರಕವಾಗಿ ಹೇಳಿಕೆ ನೀಡಿರುವ ಪಂಜಾಬ್ ಬಿಜೆಪಿ ಅಧ್ಯಕ್ಷ ಅಶ್ವಿನಿ ಶರ್ಮಾ ಕ್ಯಾಪ್ಟನ್ ಜೊತೆಗಿನ ಮೈತ್ರಿಗೆ ನಮ್ಮ ಆದ್ಯತೆಯಾಗಿರಲಿದ್ದು ಶಿರೋಮಣಿ ಅಕಾಲಿದಳ ಜೊತೆಗೆ ಮೈತ್ರಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಪ್ರತ್ಯೇಕ ಪಕ್ಷ ಸ್ಥಾಪನೆ ಬಗ್ಗೆ ಘೋಷಿಸಿದರು. ಅಲ್ಲದೇ ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದ ಅವರು ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದರು. ಅಮರೇಂದ್ರ ಸಿಂಗ್ ಭೇಟಿ ಬಳಿಕ ಕೇಂದ್ರ ಸರ್ಕಾರವೂ ಕಾನೂನು ವಾಪಸ್ ಪಡೆದಿದ್ದು ತೆರೆ ಹಿಂದಿನ ರಾಜಕೀಯ ಹೊಂದಾಣಿಕೆಯನ್ನ ತೊರ್ಪಡಿಸಿದೆ. ಇದನ್ನೂ ಓದಿ:  ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಕಳೆದ ಬಾರಿಯ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳ 84% ಸ್ಥಾನಗಳಲ್ಲಿ ಸ್ವರ್ಧಿಸಿದರೇ ಬಾಕಿ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿತ್ತು. ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ವಿಚಾರದಲ್ಲಿ ಬಿಜೆಪಿ ಮತ್ತು ಅಕಾಲಿದಳ ನಡುವಿನ ಆತಂರಿಕ ಸಂಘರ್ಷದ ಬಳಿಕ ಅಕಾಲಿದಳ ಬಿಜೆಪಿ ಜೊತೆಗಿನ ಸಂಬಂಧಕ್ಕೆ ಗುಡ್ ಬೈ ಹೇಳಿತ್ತು. ಈ ವೇಳೆ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿತ್ತು. ಈ ಹಿನ್ನಲೆ ಈ ಬಾರಿ ಕ್ಯಾಪ್ಟನ್ ಜೊತೆಗೆ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸುವ ಇರಾದೆಯಲ್ಲಿದೆ ಎಂದು ವಿಶ್ಲೇಷಿಸಲಾಗಿದೆ.

    ಕೃಷಿ ಕಾನೂನುಗಳ ವಾಪಸ್ ಪಡೆದಿರುವುದು ಬಿಜೆಪಿಗೆ ಪಂಜಾಬ್‍ನಲ್ಲಿ ಲಾಭವಾಗಲಿದೆ ಎಂದು ಅಧ್ಯಕ್ಷ ಅಶ್ವಿನಿ ಶರ್ಮಾ ಹೇಳಿದ್ದಾರೆ. ಈಗಾಗಲೇ ತಯಾರಿ ಆರಂಭಿಸಿದ್ದು ಕಾರ್ಯಕರ್ತರ ಮೂಲಕ ಮೋದಿ ಸರ್ಕಾರದ ಉದ್ದೇಶಗಳನ್ನು ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬಿಜೆಪಿ ಅತ್ಯುತ್ತಮ ಕೆಲಸ ಮಾಡಿದ್ದು 117 ಸ್ಥಾನಗಳ ಮೇಲೆ ಗುರಿ ಇದೆ ಎಂದು ಹೇಳಿದ್ದಾರೆ.

  • ಅತಿ ಹೆಚ್ಚು ಬೆಲೆ ಕಡಿತ – ಪಂಜಾಬ್‍ನಲ್ಲಿ ಪೆಟ್ರೋಲ್ 16 ರೂ. ಇಳಿಕೆ

    ಅತಿ ಹೆಚ್ಚು ಬೆಲೆ ಕಡಿತ – ಪಂಜಾಬ್‍ನಲ್ಲಿ ಪೆಟ್ರೋಲ್ 16 ರೂ. ಇಳಿಕೆ

    ಚಂಡೀಗಢ: ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್‍ನಲ್ಲಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಲೀಟರ್‌ಗೆ 11.27 ರೂ. ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡ ರಾಜ್ಯವಾಗಿದೆ.

    ಕೇಂದ್ರ ಸರ್ಕಾರ ಅಬಕಾರಿ ತೆರಿಗೆಯನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಕಡಿಮೆ ಮಾಡಿದ ನಂತರ, ಕೆಲವು ರಾಜ್ಯಗಳು ಸಹ ತೆರಿಗೆ ಕಡಿಮೆ ಮಾಡಿದೆ. ಇದೀಗ ಚರಣ್‍ಜಿತ್ ಸಿಂಗ್ ಛನ್ನಿ ನೇತೃತ್ವದ ಪಂಜಾಬ್ ಸರ್ಕಾರ  ವ್ಯಾಟ್‍ನ್ನು ಕಡಿತಗೊಳಿಸಿದ ಪರಿಣಾಮವಾಗಿ ಪೆಟ್ರೋಲ್ ಬೆಲೆ ಲೀಟರ್‌ಗೆ 16.02 ರೂಪಾಯಿ ಮತ್ತು ಡೀಸೆಲ್ ಬೆಲೆ 19.61 ರೂಪಾಯಿ ಕಡಿಮೆಯಾಗಿದೆ. ಈ ಮೂಲಕ ಸರ್ಕಾರ ಜನರ ಸಹಾಯಕ್ಕೆ ಮುಂದಾಗಿದೆ. ಇದನ್ನೂ ಓದಿ: ಇಂಧನ ಮಾರಾಟ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

    ಕೇಂದ್ರ ಸರ್ಕಾರ ತೈಲ ದರ ಇಳಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ 7 ರೂ ತೆರಿಗೆ ಇಳಿಸಿತ್ತು. ಬಳಿಕ ಇದೀಗ ಇತರ ರಾಜ್ಯಗಳು ಕೂಡ ತೈಲ ದರ ಇಳಿಕೆ ಮಾಡುತ್ತಿವೆ. ಪಂಜಾಬ್, ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಾಗಲಿದೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರ ಪ್ಲಾನ್ ಮಾಡಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್‌ಗೆ 16.02 ರೂಪಾಯಿ ಕಡಿತ ಮಾಡಿ ಜನರಿಗೆ ಹೊರೆ ಕಡಿಮೆ ಮಾಡಿದೆ. ಇದನ್ನೂ ಓದಿ: ಅಡಿಕೆ ನಿಷೇಧ ಕುರಿತು ಬಿಜೆಪಿ ಸಂಸದರ ಹೇಳಿಕೆಗೆ ಖಂಡನೆ

  • ಪಂಜಾಬ್ ಚುನಾವಣೆಗೆ ಸೋನು ಸೂದ್ ಸೋದರಿ ಸ್ಪರ್ಧೆ – ಪಕ್ಷ ಇನ್ನೂ ಸಸ್ಪೆನ್ಸ್!

    ಪಂಜಾಬ್ ಚುನಾವಣೆಗೆ ಸೋನು ಸೂದ್ ಸೋದರಿ ಸ್ಪರ್ಧೆ – ಪಕ್ಷ ಇನ್ನೂ ಸಸ್ಪೆನ್ಸ್!

    ಚಂಡೀಗಢ: ಸಹೋದರಿ ಮಾಳವಿಕಾ ಸೂದ್ ಪಂಜಾಬ್ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸೂದ್ ತಿಳಿಸಿದ್ದಾರೆ.

    ಚಂಡೀಗಢದಿಂದ ಸುಮಾರು 170 ಕಿಮೀ ದೂರದಲ್ಲಿರುವ ಮೊಗಾ ಎಂಬಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ಚುನಾವಣೆಯಲ್ಲಿ ಸಹೋದರಿ ಮಾಳವಿಕಾ ಸೂದ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನುವುದು ಮಾತ್ರ ಇನ್ನೂ ಗೌಪ್ಯವಾಗಿದೆ. ಇದನ್ನೂ ಓದಿ:     ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್

    ಸೂದ್ ಇತ್ತೀಚೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜೀತ್ ಸಿಂಗ್ ಚನ್ನಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು. ಕೇಜ್ರಿವಾಲ್ ಅವರೊಂದಿಗಿನ ಭೇಟಿ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿ ರಾಜಕೀಯ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ವದಂತಿಗಳನ್ನು ಹುಟ್ಟುಹಾಕಿತು. ಆದರೆ ಈ ವೇಳೆ ಸೂನು ಸೂದ್ ಅವರು ನಾವು ಸದ್ಯಕ್ಕೆ ನಾವು ಯಾವುದೇ ರಾಜಕೀಯವನ್ನು ಚರ್ಚಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು. ಆದರೆ ಇದೀಗ ಅವರ ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಆಗಿದೆ. ಯಾವ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ:   ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

    ಸೋನು ಸೂದ್ ಅವರು ಕೊರೊನಾ ಲಾಕ್‍ಡೌನ್‍ನಲ್ಲಿ ಸಿಲುಕಿ ಅಸಹಾಯಕರಾಗಿರುವ ನೂರಾರು ವಲಸಿಗರನ್ನು ಅವರ ಸ್ವಂತ ರಾಜ್ಯಕ್ಕೆ ಕರೆದೊಯ್ಯಲು ಬಸ್‍ಗಳು, ರೈಲು ಮತ್ತು ವಿಮಾನಗಳನ್ನು ಸಹ ವ್ಯವಸ್ಥೆ ಮಾಡಿದರು. ಈ ವರ್ಷದ ಆರಂಭದಲ್ಲಿ ಎರಡನೇ ಅಲೆ ವೇಳೆ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಕೊರೊನಾ ಲಸಿಕೆಯನ್ನು ನೀಡುವಲ್ಲಿ ಸಹಾಯ ಮಾಡಿದ್ದರು.