Tag: punjab

  • ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ

    ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ

    – ಭವಿಷ್ಯದಲ್ಲಿ ನನ್ನ ಹಾದಿ ನಾನು ಹುಡುಕಿಕೊಳ್ಳುತ್ತೇನೆ

    ಚಂಡೀಗಢ: ಕಾಂಗ್ರೆಸ್ ಪಕ್ಷದಲ್ಲಿ ಹಲವು ದಿನಗಳಿಂದ ಎದ್ದಿದ್ದ ಬಂಡಾಯದಿಂದ ಇದೀಗ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

    ಪಂಬಾಜ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಹಲವು ಬಿಕ್ಕಟ್ಟುಗಳ ನಡುವೆ ಹೈಕಮಾಂಡ್ ಅಮರೀಂದರ್ ಸಿಂಗ್ ಅವರ ರಾಜೀನಾಮೆ ಪಡೆದಿದೆ. ರಾಜ್ಯಪಾಲರನ್ನು ಭೇಟಿಯಾದ ಅಮರೀಂದರ್ ಸಿಂಗ್ ರಾಜೀನಾಮೆ ಪತ್ರ ನೀಡಿದ್ದಾರೆ. ಬಳಿಕ ಮಾತನಾಡಿ, ಕಾಂಗ್ರೆಸ್ ತೊರೆಯುವ ಮುನ್ಸೂಚನೆ ಕೂಡ ನೀಡಿದ್ದಾರೆ.

    ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅಮರೀಂದರ್ ಸಿಂಗ್, ತಾನು ಅವಮಾನಕ್ಕೆ ಒಳಗಾಗುತ್ತೇನೆ ಎಂದನಿಸಿತು, ಆದ್ದರಿಂದ ನಾನು ರಾಜೀನಾಮೆ ನೀಡಿದೆ ಎಂದು ಹೇಳಿದ್ದಾರೆ. ನಾನು ರಾಜೀನಾಮೆ ನೀಡಲು ಹೋಗುತ್ತಿದ್ದೇನೆ ಎಂದು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಿಳಿಸಿದ್ದೇನೆ. ಇದು ಮೂರನೇ ಬಾರಿ ನಡೆಯುತ್ತಿದೆ. ನಾನು ಅವಮಾನಕ್ಕೆ ಒಳಗಾಗಿದ್ದೇನೆ. ಅವರು ಯಾರನ್ನು ನಂಬಬಲ್ಲರೋ ಅವರನ್ನು ಮುಖ್ಯಮಂತ್ರಿ ಮಾಡಬಹುದು. ಕಾಂಗ್ರೆಸ್ ಅಧ್ಯಕ್ಷೆ ಏನು ನಿರ್ಧಾರ ಮಾಡುತ್ತಾರೋ ಅದು ಸರಿ. ನಾನು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದೇನೆ, ನನ್ನ ಬೆಂಬಲಿತರನ್ನು ಭೇಟಿಯಾದ ಬಳಿಕ ನಾನು ನನ್ನ ಮುಂದಿನ ಜೀವನದ ರಾಜಕೀಯದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ತನ್ನ ತಂದೆ ರಾಜೀನಾಮೆ ನೀಡುವ ಬಗ್ಗೆ ಪುತ್ರ ರಣೀಂದರ್ ಸಿಂಗ್ ಕೂಡಾ ಮಾಹಿತಿ ನೀಡಿದ್ದಾರೆ. ನನ್ನ ತಂದೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಅವರ ಜೊತೆಯಾಗಲು ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 3ನೇ ಸಾಲಿನಲ್ಲಿ ಕೂತಿದ್ದಕ್ಕೆ ವಿಶೇಷ ಅರ್ಥ ಬೇಕಿಲ್ಲ: ಶೆಟ್ಟರ್

    ಅಮರೀಂದರ್ ಸಿಂಗ್‍ರನ್ನು ಬದಲಾಯಿಸುವಂತೆ ಅನೇಕ ಶಾಸಕರು ಹೈಕಮಾಂಡ್‍ಗೆ ಒತ್ತಡ ಹೇರಿರುವ ಪರಿಣಾಮ ಹೈಕಮಾಂಡ್ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಪಂಜಾಬ್ ವಿಧಾನಸಬೇ ಚುನಾವಣೆ ಕೇವಲ 4 ತಿಂಗಳು ಬಾಕಿ ಉಳೀದಿದ್ದು, ಅಧಿಕಾ ಹಸ್ತಾಂತರದ ಪ್ರಸಂಗ ಕುತೂಹಲ ಮೂಡಿಸಿದೆ. ಬಿಜೆಪಿ ಹಾದಿಯನ್ನೇ ಕಾಂಗ್ರೆಸ್ ಪಕ್ಷ ಕೂಡ ಹಿಡಿದಂತಿದೆ. ಕೆಲದಿನಗಳ ಹಿಂದೆ ಬಿಜೆಪಿ, ಕರ್ನಾಟಕ, ಗುಜಾರಾತ್ ಸೇರಿದಂತೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆ ಮಾಡಿದೆ. ಇದನ್ನೂ ಓದಿ: ನಾಯಕತ್ವ ಬದಲಾವಣೆಗೆ ಮುಂದಾದ ಕಾಂಗ್ರೆಸ್- ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ?

    ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ಸಿನಲ್ಲಿ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದರು. 2017ರ ವಿಧಾನಸಭೆ ಚುನಾವಣೆ ಮುನ್ನ ಅಮರೀಂದರ್ ಸಿಂಗ್ ನೀಡಿದ್ದ ಭರವಸೆಗಳು ರಾಜ್ಯದಲ್ಲಿ ಈಡೇರದೆ ಇರುವುದೇ ಬಂಡಾಯಕ್ಕೆ ಪ್ರಮುಖ ಕಾರಣವಾಗಿದ್ದು, ಅಮರೀಂದರ್ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಸಚಿವರು ಮತ್ತು ಶಾಸಕರು ಹೈಕಮಾಂಡ್‍ಗೆ ದೂರು ನೀಡಿದ್ದರು ಎಂದು ಈ ಹಿಂದೆ ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ:  ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ

    ಕೆಲ ತಿಂಗಳ ಹಿಂದೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಸಿಎಂ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದರು. ಈ ಸಂದರ್ಭ ಅಮರೀಂದರ್ ಸಿಂಗ್ ವಿರುದ್ಧ 24ಕ್ಕೂ ಹೆಚ್ಚು ಶಾಸಕರು ಅಸಮಾಧಾನ ಹೊರಹಾಕಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಪಂಜಾಬ್‍ನ ಮುಖ್ಯಮಂತ್ರಿ ಅಮರೀಂದರ್ ರಾಜೀನಾಮೆ ಕೊಟ್ಟಿದ್ದಾರೆ.

  • ನಾಯಕತ್ವ ಬದಲಾವಣೆಗೆ ಮುಂದಾದ ಕಾಂಗ್ರೆಸ್- ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ?

    ನಾಯಕತ್ವ ಬದಲಾವಣೆಗೆ ಮುಂದಾದ ಕಾಂಗ್ರೆಸ್- ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ?

    ಚಂಡೀಗಢ: ಪಂಜಾಬ್‍ನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಹಲವು ದಿನಗಳಿಂದ ಎದ್ದಿದ್ದ ಬಂಡಾಯ ಇದೀಗ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ಕೊಡುವ ಮಟ್ಟಕ್ಕೆ ಬಂದು ನಿಂತಿದೆ. ರಾಜಕೀಯ ಬೆಳವಣಿಗೆಯ ಮಧ್ಯೆ ಇಂದು ಅಮರೀಂದರ್ ಸಿಂಗ್ ರಾಜೀನಾಮೆ ಕೊಡುವ ಸಾಧ್ಯತೆ ಬಗ್ಗೆ ವರದಿಯಾಗಿದೆ.

    ಅಮರೀಂದರ್ ಸಿಂಗ್‍ರನ್ನು ಬದಲಾಯಿಸುವಂತೆ ಅನೇಕ ಶಾಸಕರು ಹೈಕಮಾಂಡ್‍ಗೆ ಒತ್ತಡ ಹೇರಿರುವ ಪರಿಣಾಮ ಹೈಕಮಾಂಡ್ ರಾಜೀನಾಮೆ ನೀಡಲು ತಿಳಿಸಿದೆ ಎಂದು ಮಾಹಿತಿ ಇದ್ದು, ಈ ಮೂಲಕ ಬಿಜೆಪಿ ಹಾದಿಯನ್ನೇ ಕಾಂಗ್ರೆಸ್ ಪಕ್ಷ ಕೂಡ ಹಿಡಿದಂತಿದೆ. ಕೆಲದಿನಗಳ ಹಿಂದೆ ಬಿಜೆಪಿ, ಕರ್ನಾಟಕ, ಗುಜಾರಾತ್ ಸೇರಿದಂತೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆ ಮಾಡಿದೆ. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‍ನಲ್ಲಿ ಭಿನ್ನಮತ – ಸತ್ಯಕ್ಕೆ ಸೋಲಿಲ್ಲ ಎಂದ ನವಜೋತ್ ಸಿಂಗ್ ಸಿಧು

    ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದಾರೆ. 2017 ರ ವಿಧಾನಸಭೆ ಚುನಾವಣೆಗೂ ಮುನ್ನ ಅಮರೀಂದರ್ ಸಿಂಗ್ ನೀಡಿದ್ದ ಭರವಸೆಗಳು ರಾಜ್ಯದಲ್ಲಿ ಈಡೇರದೆ ಇರುವುದೇ ಬಂಡಾಯಕ್ಕೆ ಪ್ರಮುಖ ಕಾರಣವಾಗಿದ್ದು, ಅಮರಿಂದರ್ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಸಚಿವರು ಮತ್ತು ಶಾಸಕರು ಹೈಕಮಾಂಡ್‍ಗೆ ದೂರು ನೀಡಿದ್ದರು ಎಂದು ಈ ಹಿಂದೆ ಆರೋಪ ಕೇಳಿ ಬಂದಿತ್ತು.

    ಕೆಲ ತಿಂಗಳ ಹಿಂದೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಸಿಎಂ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದರು. ಈ ಸಂದರ್ಭ ಅಮರೀಂದರ್ ಸಿಂಗ್ ವಿರುದ್ಧ 24ಕ್ಕೂ ಹೆಚ್ಚು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್

  • ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿ ಬಂಧನ

    ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿ ಬಂಧನ

    ಬೆಂಗಳೂರು: ಅಕ್ರಮವಾಗಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮುಖೇಶ್ ಮತ್ತು ರೋಹಿ ಬಂಧಿತ ದಂಪತಿ. ಮೂಲತಃ ಪಂಜಾಬ್ ರಾಜ್ಯದವರಾದ ಆರೋಪಿಗಳು ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಆರೋಪಿಗಳು ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೀಣ್ಯಾ ಬಳಿ ಜಗಜ್ಯೋತಿ ಎಜುಕೇಶನ್ ಇನ್ಟ್ಸಿಟ್ಯೂಟ್ ನಡೆಸುತ್ತಿದ್ದರು. ಈ ಸಂಸ್ಥೆ ಹೆಸರಲ್ಲಿ ಎಂಎ, ಎಂಬಿಎ, ಬಿಸಿಎ, ಬಿಟೆಕ್, ಬಿಬಿಎ, ಬಿಕಾಂ, ಬಿಎಸ್‍ಸಿ, ಸೇರಿ ಹಲವು ಡಿಗ್ರಿ ಮಾರ್ಕ್ಸ್ ಕಾರ್ಡ್ ನೀಡುತಿದ್ದರು. ಒಂದು ಡಿಗ್ರಿಗೆ 60 ಸಾವಿರದಿಂದ 70 ಸಾವಿರ ರೂಪಾಯಿ ವರೆಗೆ ಹಣ ಪಡೆದು ಪದವಿ ಅಂಕಪಟ್ಟಿಗಳನ್ನು ನೀಡುತ್ತಿದ್ದರು. ಇದನ್ನೂ ಓದಿ: ವಾಹನ ಗುಜುರಿ ನೀತಿ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಮೋದಿ

    ಸಿಸಿಬಿ ಪೊಲೀಸರ ದಾಳಿಯ ವೇಳೆ ಸಿ.ವಿ ರಾಮನ್ ಯುನಿವರ್ಸಿಟಿ, ರವೀಂದ್ರನಾಥ್ ಟ್ಯಾಗೋರ್ ಯುನಿವರ್ಸಿಟಿ. ಅಸೆಟ್ ಯುನಿವರ್ಸಿಟಿಗೆ ಸೇರಿದ ಮಾರ್ಕ್ಸ್ ಕಾರ್ಡ್‍ಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಇಲ್ಲಿಯವರೆಗೂ 500ಕ್ಕೂ ಹೆಚ್ಚು ಫಲನುಭವಿಗಳಿಗೆ ಮಾರ್ಕ್ಸ್ ಕಾರ್ಡ್ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳ ಹೆಚ್ಚಿನ ತನಿಖೆಯಿಂದ ಮತ್ತಷ್ಟು ನಕಲಿ ಅಂಕಪಟ್ಟಿ ಹಿಂದಿನ ಮುಖವಾಡ ಬಯಲಾಗುವ ಸಾದ್ಯತೆ ಇದೇ ಎನ್ನುತ್ತಿದೆ ಸಿಸಿಬಿ ಮೂಲಗಳು.

  • ಚಿನ್ನದ ನೀರಜ್‍ಗೆ ಪ್ರಶಂಸೆಯ ಮಹಾಪೂರ – ಸರ್ಕಾರಗಳಿಂದ ಬಹುಮಾನಗಳ ಸುರಿಮಳೆ

    ಚಿನ್ನದ ನೀರಜ್‍ಗೆ ಪ್ರಶಂಸೆಯ ಮಹಾಪೂರ – ಸರ್ಕಾರಗಳಿಂದ ಬಹುಮಾನಗಳ ಸುರಿಮಳೆ

    – ಬಿಸಿಸಿಐ, ರೈಲ್ವೆ ಇಲಾಖೆಯಿಂದಲೂ ಭರ್ಜರಿ ಉಡುಗೊರೆ
    – ಭರ್ಜರಿ ಬಹುಮಾನ ಘೋಷಣೆ ಮಾಡುತ್ತಿರುವ ಸರ್ಕಾರಗಳು

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ 100 ವರ್ಷಗಳ ನಂತರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೂಪ್ರಾ ಪಾತ್ರರಾಗಿದ್ದಾರೆ. ಈ ಹಿನ್ನೆಲೆ ವಿಶ್ವದ್ಯಾಂತ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದ್ದು, ಇವರ ಸಾಧನೆಗಾಗಿ ಸರ್ಕಾರ ಹಲವು ಕೊಡುಗೆಗಳನ್ನು ಘೋಷಿಸುತ್ತಿದೆ. ಹರಿಯಾಣ ಸಿಎಂ ಮನೋಹರ್‍ಲಾಲ್ ಖಟ್ಟರ್ ಹಾಗೂ ಆನಂದ್ ಮಹೀಂದ್ರ ಬಳಿಕ ರಾಜ್ಯ ಸರ್ಕಾರಗಳು, ಕ್ರೀಡಾ ಸಂಸ್ಥೆಗಳು ಹಾಗೂ ವಿವಿಧ ಸಂಸ್ಥೆಗಳು ಸಾಧಕರಿಗೆ ಭರ್ಜರಿ ಬಹುಮಾನ ನೀಡುತ್ತಿವೆ.

    6 ಕೋಟಿ ಘೋಷಿಸಿದ ಹರಿಯಾಣ ಸರ್ಕಾರ
    ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಕ್ಲಾಸ್ ಒನ್ ಕೆಟಗರಿ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್‍ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್‍ಗೆ ಗೌರವ ಸಲ್ಲಿಸಿದ್ದಾರೆ. ನೀರಜ್ ಅವರು ಬಯಸಿದರೆ ಹರಿಯಾಣ ಪ್ರದೇಶದ ಮುಖ್ಯಸ್ಥರನ್ನಾಗಿ ಮಾಡುವುದಾಗಿ ಹರಿಯಾಣ ಸಿಎಂ ಖಟ್ಟರ್ ತಿಳಿಸಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಪಂಜಾಬ್ ಸರ್ಕಾರದಿಂದ 2.25 ಕೋಟಿ
    ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2.25 ಕೋಟಿ ರೂ. ಘೋಷಿಸಿದ್ದು, ಭಾರತೀಯರು ಹೆಮ್ಮೆ ಪಡುವಂತಹ ವಿಚಾರವೆಂದು ಪ್ರಶಂಸಿದ್ದಾರೆ. ಬೆಳ್ಳಿ ಪದಕ ಗೆದ್ದವರಿಗೆ 1.5 ಕೋಟಿ ರೂ.ಗಳನ್ನು ಸಹ ಘೋಷಿಸಿದ್ದಾರೆ. ಇನ್ನು 26 ಅಥ್ಲಿಟ್ಸ್ ಆಟಗಾರರಿಗೆ 5 ಲಕ್ಷ ರೂ. ಘೋಷಿದ್ದಾರೆ.

    ಮಣಿಪುರ ಸರ್ಕಾರದಿಂದ 1 ಕೋಟಿ
    ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಅವರು ಚೋಪ್ರಾ ಅವರಿಗೆ 1 ಕೋಟಿ ರೂ. ಬಹುಮಾನ ನೀಡುವ ಮೂಲಕ ಗೌರವಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ಬಿಸಿಸಿಐನಿಂದ ಎಲ್ಲ ಆಟಗಾರರಿಗೂ ಗೌರವ
    ಬಿಸಿಸಿಐ ಕೂಡ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಅವರಿಗೆ 1 ಕೋಟಿ ರೂ. ನೀಡುವುದಾಗಿ ಹೇಳಿದ್ದು, ಕಂಚಿನ ಪದಕ ವಿಜೇತರಾದ ಪಿವಿ ಸಿಂಧು ಅವರಿಗೆ 50 ಲಕ್ಷ ರೂ. ಚಾನು, ರವಿ ಧಾಹಿಯಾ ಮತ್ತು ಭಜರಂಗ್ ಪುನಿಯಾ ಅವರಿಗೆ 25 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದೆ. ಅಲ್ಲದೆ ಪುರುಷರ ಹಾಕಿ ತಂಡಕ್ಕೆ 1.25 ಕೋಟಿ ರೂ. ಕೊಟ್ಟು ಆಟಗಾರರನ್ನು ಗೌರವಿಸಿ ಎಲ್ಲರನ್ನೂ ಐಪಿಎಲ್‍ನ ಫೈನಲ್‍ಗೆ ಆಹ್ವಾನಿಸಲಾಗಿದೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಸಹ ನೀರಜ್ ಅವರಿಗೆ 1 ಕೋಟಿ ರೂ. ನೀಡುವುದಾಗಿ ತಿಳಿಸಿದೆ.

    ಇಂಡಿಗೊದಿಂದ ವರ್ಷ ಉಚಿತ ಟಿಕೆಟ್
    ವಿಮಾನಯಾನ ಸಂಸ್ಥೆ ಇಂಡಿಗೋ ನೀರಜ್ ಅವರಿಗೆ ಒಂದು ವರ್ಷಗಳ ಕಾಲ, ಅಂದರೆ ಮುಂದಿನ ವರ್ಷ ಆಗಸ್ಟ್ 8ರ ವರೆಗೂ ಉಚಿತವಾಗಿ ಪ್ರಯಾಣ ಮಾಡಲು ಟಿಕೆಟ್‍ನ್ನು ಘೋಷಣೆ ಮಾಡಿದೆ.

    ಮಹೀಂದ್ರಾದಿಂದ ಉಚಿತ ಎಸ್‍ಯುವಿ
    ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ನೀರಜ್ ಅವರಿಗೆ ಮಹೀಂದ್ರಾ ನ್ಯೂ ಎಕ್ಸ್‍ಯುವಿ 700 ಅನ್ನು ಉಡುಗೊರೆಯಾಗಿ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಚಿನ್ನದ ಹುಡುಗನಿಗೆ ಬಹುಮಾನ ಘೋಷಿಸಿದ್ದಾರೆ.

    ಕುಸ್ತಿಯಲ್ಲಿ ಬಜರಂಗ್ ಪುನಿಯಾ ಸಾಧನೆ
    ಕಂಚಿನ ಪದಕ ಗೆದ್ದ ಕುಸ್ತಿಪಟು ಬಜರಂಗ್ ಪುನಿಯಾ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇವರಿಗೂ ಸಹ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶೇ.50ರ ರಿಯಾಯಿತಿಯಲ್ಲಿ 2.5 ಕೋಟಿ ರೂ. ಮತ್ತು ಭೂಮಿಯೊಂದಿಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ರೈಲ್ವೆ ಇಲಾಖೆ 1 ಕೋಟಿ ರೂ. ಬಿಸಿಸಿಐ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿವೆ. ಇದರ ಜೊತೆಗೆ ಭಾರತೀಯ ಒಲಿಂಪಿಕ್ ಸಂಸ್ಥೆ(ಐಒಎ) ಚಿನ್ನ ಗೆದ್ದವರಿಗೆ 75 ಲಕ್ಷ ರೂ. ಬೆಳ್ಳಿ ಗೆದ್ದವರಿಗೆ 40 ಲಕ್ಷ ರೂ. ಮತ್ತು ಕಂಚಿನ ಪದಕ ಗೆದ್ದವರಿಗೆ 25 ಲಕ್ಷ ಬಹುಮಾನ ಘೋಷಿಸಿದೆ.

    ರೈಲ್ವೇ ಇಲಾಖೆಯಿಂದ ಆಟಗಾರರಿಗೆ, ಕೋಚ್‍ಗೆ ಭರ್ಜರಿ ಗಿಫ್ಟ್
    ರೈಲ್ವೇ ಇಲಾಖೆ ಚಿನ್ನದ ಪದಕ ಗೆದ್ದ ಆಟಗಾರನಿಗೆ 3 ಕೋಟಿ ರೂ. ಮತ್ತು ಅವರ ಕೋಚ್‍ಗೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಬೆಳ್ಳಿ ಗೆದ್ದ ಆಟಗಾರನಿಗೆ 2 ಕೋಟಿ ರೂ. ಮತ್ತು ಕೋಚ್‍ಗೆ 20 ಲಕ್ಷ ರೂ. ಹಾಗೂ ಕಂಚು ಗೆದ್ದ ಆಟಗಾರರಿಗೆ 1 ಕೋಟಿ ರೂ. ಮತ್ತು ಕೋಚ್‍ಗೆ 15 ಲಕ್ಷ ರೂ. ಬಹುಮಾನ ನೀಡುತ್ತಿದೆ. ಅಲ್ಲದೆ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಎಲ್ಲ ಆಟಗಾರರಿಗೆ 7.5 ಲಕ್ಷ ರೂ. ಕೊಡಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಎಲ್ಲ 228 ಮಂದಿಯನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದು, ಕ್ರೀಡಾಪಟುಗಳ ಜೊತೆ ಮಾತನಾಡಿದ್ದಾರೆ.

  • ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ನವಜೋತ್ ಸಿಂಗ್ ಸಿಧು?

    ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ನವಜೋತ್ ಸಿಂಗ್ ಸಿಧು?

    ನವದೆಹಲಿ: ಪಂಜಾಬ್ ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತಕ್ಕೆ ಕೈ ಕಮಾಂಡ್ ಮುಲಾಮು ಹುಡುಕಿದೆ. ರೆಬೆಲ್ ಆಗಿರುವ ನಾಯಕ ನವಜೋತ್ ಸಿಂಗ್ ಸಿಧುಗೆ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ವರದಿಯಾಗಿವೆ. ಕಾಂಗ್ರೆಸ್ ವಕ್ತಾರ ಹರೀಶ್ ರಾವತ್ ಈ ಕುರಿತ ಸಣ್ಣದಾದ ಸುಳಿವನ್ನ ಬಿಟ್ಟುಕೊಟ್ಟಿದ್ದಾರೆ.

    ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ್ರೆ, ಜೊತೆಯಲ್ಲಿಯೇ ಇಬ್ಬರನ್ನು ಕಾರ್ಯದರ್ಶಿಗಳ ನೇಮಕವಾಗಲಿದೆ. ಈ ಕುರಿತು ಕಾಂಗ್ರೆಸ್ ಆಂತರಿಕ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಸದ್ಯ ಸುನಿಲ್ ಜಾಖಡ್ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ?

    ಇನ್ನೂ 2022ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ. ಹಾಗಾಗಿ ಸಿಎಂ ಅಮರೀಂದರ್ ಸಿಂಗ್, ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದ್ದು, ಹಿರಿಯರಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಸೂಚನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್

  • ಕಡಿಮೆ ದರಕ್ಕೆ ಖರೀದಿಸಿ ದುಬಾರಿ ಬೆಲೆಗೆ ಖಾಸಗಿ ಆಸ್ಪತ್ರೆಗಳಿಗೆ ಪಂಜಾಬ್ ಸರ್ಕಾರದಿಂದಲೇ ಲಸಿಕೆ ಮಾರಾಟ

    ಕಡಿಮೆ ದರಕ್ಕೆ ಖರೀದಿಸಿ ದುಬಾರಿ ಬೆಲೆಗೆ ಖಾಸಗಿ ಆಸ್ಪತ್ರೆಗಳಿಗೆ ಪಂಜಾಬ್ ಸರ್ಕಾರದಿಂದಲೇ ಲಸಿಕೆ ಮಾರಾಟ

    – ಸಿಎಂ ಅಮರೀಂದರ್ ಸರ್ಕಾರದ ನಡೆಗೆ ಟೀಕೆ
    – ತನ್ನ ನಡೆಯನ್ನು ಸಮರ್ಥಿಸಿಕೊಂಡ ಸರ್ಕಾರ

    ನವದೆಹಲಿ: ಕೇಂದ್ರ ಸರ್ಕಾರ ಸರಿಯಾಗಿ ಲಸಿಕೆ ವಿತರಣೆ ಮಾಡುತ್ತಿಲ್ಲ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ದೂರುತ್ತಿದೆ. ಆದರೆ ಕಾಂಗ್ರೆಸ್ ಆಡಳಿತ ಇರುವ ಪಂಜಾಬ್ ಕಡಿಮೆ ದರದಲ್ಲಿ ಲಸಿಕೆ ಖರೀದಿಸಿ ಅದನ್ನು ದುಬಾರಿ ಬೆಲೆಗೆ ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿರುವ ವಿಷಯ ಈಗ ವಿವಾದಕ್ಕೆ ಕಾರಣವಾಗಿದೆ.

    ಹೌದು. ಸಿಎಂ ಅಮರೀಂದರ್ ನೇತೃತ್ವದ ಸರ್ಕಾರ ಇತ್ತೀಚೆಗೆ ಹೈದರಾಬಾದ್‍ನಲ್ಲಿರುವ ಭಾರತ್ ಬಯೋಟೆಕ್ ಕಂಪನಿಯಿಂದ 1 ಲಕ್ಷ ಡೋಸ್ ಲಸಿಕೆಯನ್ನು 600 ರೂ.ನಂತೆ ಖರೀದಿಸಿದೆ. ಖರೀದಿಸಿದ ಲಸಿಕೆಯನ್ನು ಜನರಿಗೆ ಉಚಿತವಾಗಿ ನೀಡುವ ಬದಲು ಕನಿಷ್ಠ 20 ಸಾವಿರ ಡೋಸ್‍ಗಳನ್ನು ಖಾಸಗಿ ಆಸ್ಪತ್ರೆಗಳಿಗೆ 1,060 ರೂ.ನಂತೆ ಮಾರಾಟ ಮಾಡಿದೆ.

    ಸರ್ಕಾರ ಒಂದು ಲಸಿಕೆಯನ್ನು ಮಾರಾಟ ಮಾಡಿ 660 ರೂ. ಲಾಭ ಮಾಡಿದರೆ ಖಾಸಗಿ ಆಸ್ಪತ್ರೆಗಳು ಈ ಲಸಿಕೆಯನ್ನು 1,560 ರೂ.ಗೆ ಮಾರಾಟ ಮಾಡುತ್ತಿವೆ. ಈ ಮೂಲಕ 500 ರೂ. ಲಾಭ ಮಾಡುತ್ತಿವೆ. ಈಗ ಈ ವಿಚಾರ ಬಿಜೆಪಿಗೆ ಸಿಕ್ಕಿದ್ದೆ ತಡ ಭಾರೀ ಟೀಕೆ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಆರಂಭಿಸಿದೆ. ಇದನ್ನೂ ಓದಿ: ಜೂನ್‍ನಲ್ಲಿ ಕರ್ನಾಟಕಕ್ಕೆ ಬರಲಿದೆ 58.71 ಲಕ್ಷ ಲಸಿಕೆ – ಕೇಂದ್ರ, ರಾಜ್ಯದ ಪಾಲು ಎಷ್ಟು?

    ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿ, ಕೇಂದ್ರ ಸರ್ಕಾರ ಉತ್ಪಾದಕರಿಂದ ಲಸಿಕೆಯನ್ನು ಖರೀದಿಸಿ 400 ರೂ.ಗೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದೆ. ಆದರೆ ಪಂಜಾಬ್ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಇದನ್ನು 1,060 ರೂ.ಗೆ ಮಾರಾಟ ಮಾಡಿದರೆ, ಖಾಸಗಿ ಆಸ್ಪತ್ರೆಗಳು ಈ ಲಸಿಕೆಯನ್ನು 1,560 ರೂ.ಗೆ ಮಾರಾಟ ಮಾಡುತ್ತಿದೆ. ಉಚಿತವಾಗಿ ನೀಡಬೇಬೇಕಾದ ಲಸಿಕೆಯನ್ನು 3,120 ರೂ. ನೀಡುತ್ತಿದೆ. ಇದುವೇ ಕಾಂಗ್ರೆಸ್ ಪಕ್ಷದ ನೆಚ್ಚಿನ “ಎರಡಕ್ಕೆ ನಾಲ್ಕು ಪಾಲಿಸಿ” ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

    ಸರ್ಕಾರ ಹೇಳೋದು ಏನು?
    ಈ ವಿಚಾರಕ್ಕೆ ಪಂಜಾಬ್ ಸರ್ಕಾರ ಲಸಿಕೆಯ ನೋಡಲ್ ಅಧಿಕಾರಿ ವಿಕಾಸ್ ಗಾರ್ಗ್ ಪ್ರತಿಕ್ರಿಯಿಸಿ, ಲಸಿಕೆ ಸಾಮಾಜಿಕ ಹೊಣೆಗಾರಿಕಾ ನಿಧಿ ಹೆಸರಿನಲ್ಲಿ ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ತೆರೆದಿದ್ದೇವೆ. ಖಾಸಗಿ ಆಸ್ಪತ್ರೆಗಳು ಈ ನಿಧಿಯಲ್ಲಿ ಹಣವನ್ನು ಠೇವಣಿ ಇಡುತ್ತವೆ. ಲಸಿಕೆ ಮಾರಾಟದಿಂದ ಬಂದ ಹಣವನ್ನು ಈ ಖಾತೆಗೆ ಹಾಕಿ ಮತ್ತೆ ಹೊಸ ಲಸಿಕೆ ಖರೀದಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜುಲೈ ಮಧ್ಯ, ಆಗಸ್ಟ್ ಆರಂಭದಲ್ಲಿ ದಿನಕ್ಕೆ 1 ಕೋಟಿ ಲಸಿಕೆ ಲಭ್ಯ – ಕೇಂದ್ರ

    ಪಂಜಾಬ್ ಸರ್ಕಾರದ ಈ ನೀತಿಗೆ ಈಗ ಭಾರೀ ಟೀಕೆಗೆ ಬಂದಿದೆ. ಸರ್ಕಾರ ಜನರಿಗೆ ಉಚಿತವಾಗಿ ಲಸಿಕೆಯನ್ನು ನೀಡಬೇಕು. ಆದರೆ ಇಲ್ಲಿ ಖಾಸಗಿ ಆಸ್ಪತ್ರೆಗಳಿಗೆ ನೆರವಾಗಲು ಈ ರೀತಿಯ ನಿಧಿಯನ್ನು ಸ್ಥಾಪನೆ ಮಾಡಿ ಲಾಭ ಮಾಡಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಆಸ್ಪತ್ರೆಗಳು ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿ ಮಾಡಬೇಕೇ ಹೊರತು ಸರ್ಕಾರದ ಮೂಲಕ ಖರೀದಿ ಮಾಡುವುದು ಸರಿಯಲ್ಲ ಎಂದು ಪಟಿಯಾಲದ ಆಪ್ ನಾಯಕ ಡಾ. ಬಲ್ಬೀರ್ ಸಿಂಗ್ ಟೀಕಿಸಿದ್ದಾರೆ.

    ಕಾಂಗ್ರೆಸ್ ವಿರುದ್ಧ ಟೀಕೆ ಮುಂದುವರಿಸಿದ ಅನುರಾಗ್ ಠಾಕೂರ್ 11.50 ಲಕ್ಷ ಲಸಿಕೆ ವ್ಯರ್ಥ ಮಾಡಿದ ವಿಚಾರನ್ನು ಉಲ್ಲೇಖಿಸಿ, ಪಂಜಾಬ್ ಸರ್ಕಾರಕ್ಕಿಂತ ರಾಜಸ್ಥಾನ ಸರ್ಕಾರ ಎರಡು ಹೆಜ್ಜೆ ಮುಂದಿದೆ. ಸಾವಿರಾರು ಲಸಿಕೆಗಳು ಕಸದ ತೊಟ್ಟಿಗೆ ಸೇರಿದೆ. ಈ ಮೂಲಕ ಕಾಂಗ್ರೆಸ್ ಜನರ ನಂಬಿಕೆಯನ್ನು ಕಸದ ತೊಟ್ಟಿಗೆ ಎಸೆದಿದೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

  • ಪಂಜಾಬ್ ಕಾಂಗ್ರೆಸ್‍ನಲ್ಲಿ ಭಿನ್ನಮತ – ಸತ್ಯಕ್ಕೆ ಸೋಲಿಲ್ಲ ಎಂದ ನವಜೋತ್ ಸಿಂಗ್ ಸಿಧು

    ಪಂಜಾಬ್ ಕಾಂಗ್ರೆಸ್‍ನಲ್ಲಿ ಭಿನ್ನಮತ – ಸತ್ಯಕ್ಕೆ ಸೋಲಿಲ್ಲ ಎಂದ ನವಜೋತ್ ಸಿಂಗ್ ಸಿಧು

    – ಹೈಕಮಾಂಡ್ ಸಮಿತಿ ಮುಂದೆ ಹಾಜರಾದ ‘ಕೈ’ ಶಾಸಕರು

    ನವದೆಹಲಿ: ಪಂಜಾಬ್ ಕಾಂಗ್ರೆಸ್‍ನಲ್ಲಿ ಭಿನ್ನಮತ ಕಾಣಿಸಿಕೊಂಡ ಹಿನ್ನೆಲೆ ಹೈಕಮಾಂಡ್ ತನ್ನ ಎಲ್ಲ ಶಾಸಕರು ಮತ್ತು ಸಚಿವರನ್ನ ಕರೆಸಿ ಸಭೆ ನಡೆಸಿದೆ. ಪಂಜಾಬ್ ಕಾಂಗ್ರೆಸ್ ಶಾಸಕರ ಸಮಸ್ಯೆ ಹೈಕಮಾಂಡ್ ಮೂವರು ಸದಸ್ಯರ ಸಮಿತಿ ಸಹ ರಚಿಸಿತ್ತು. ಇಂದು ಎಲ್ಲ ಶಾಸಕರು ಸಮಿತಿ ಮುಂದೆ ಹಾಜರಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎನ್ನಲಾಗಿದೆ. ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ, ನವಜೋತ್ ಸಿಂಗ್ ಸಿಧು ಸತ್ಯಕ್ಕೆ ಸೋಲಿಲ್ಲ ಎಂಬ ಮಾತುಗಳನ್ನಾಡಿದ್ದಾರೆ.

    ಹೈಕಮಾಂಡ್ ಸೂಚನೆ ಹಿನ್ನೆಲೆ ನಾವು ದೆಹಲಿಗೆ ಬಂದಿದ್ದೇವೆ. ಪಂಜಾಬ್ ಜನತೆಯನ್ನ ಧ್ವನಿಯನ್ನ ತಲುಪಿಸಲು ಆಗಮಿಸಿದ್ದೇನೆ. ಪಂಜಾಬಿನ ಸತ್ಯ ಮತ್ತು ಹಕ್ಕಿನ ಧ್ವನಿಯಾಗಿ ಪ್ರತಿನಿಧಿಸಿದ್ದೇನೆ ಎಂದು ಸಿಧು ಹೇಳಿದ್ದಾರೆ.

    ಪ್ರಜಾಪ್ರಭುತ್ವದ ಪಂಜಾಬ್ ಜನರ ಶಕ್ತಿ. ಅದು ಅವರಿಗೆ ಸಿಗುವಂತಾಗಬೇಕು. ಅದರ ಪರ ನನ್ನ ನಿಲುವು ಮತ್ತು ಅದಕ್ಕೆ ಬದ್ಧ. ಸತ್ಯಕ್ಕೆ ಯಾವಾಗಲೂ ಸೋಲಿಲ್ಲ, ನಾವು ಪಂಜಾಬ್ ಗೆಲ್ಲಿಸಬೇಕಿದೆ ಎಂದರು.

    ಮುಂದಿನ ವರ್ಷದ ಆರಂಭದಲ್ಲಿಯೇ ಪಂಜಾಬ್ ಚುನಾವಣೆ ಎದುರಿಸಬೇಕಿದೆ. ಸಿಎಂ ಅಮರಿಂದರ್ ಸಿಂಗ್ ಕಾರ್ಯವೈಖರಿ ಬಗ್ಗೆ ವಿರುದ್ಧ 24ಕ್ಕೂ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಸಿಎಂ ಪೂರ್ಣ ಮಾಡಿಲ್ಲ. ಇದು ಚುನಾವಣೆಯ ಪರಿಣಾಮ ಬೀರಲಿದೆ ಎಂದು ಸಚಿವರು ಸೇರಿದಂತೆ ಶಾಸಕರು ಸಭೆಯಲ್ಲಿ ಬೇಸರ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ.

  • ಕೃಷಿ ಕಾನೂನು ವಿರೋಧಿಸಿ ಮನೆ ಮೇಲೆ ಕಪ್ಪು ಧ್ವಜ ಹಾರಿಸಿದ ಸಿಧು

    ಕೃಷಿ ಕಾನೂನು ವಿರೋಧಿಸಿ ಮನೆ ಮೇಲೆ ಕಪ್ಪು ಧ್ವಜ ಹಾರಿಸಿದ ಸಿಧು

    ಚಂಡೀಗಢ: ಕೇಂದ್ರ ನೂತನ ಮೂರು ಕೃಷಿ ಕಾನೂನುಗಳನ್ನ ವಿರೋಧಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮನೆಯ ಮೇಲೆ ಕಪ್ಪು ಧ್ವಜ ಹಾರಿಸಿದ್ದಾರೆ. ಧ್ವಜ ಹಾರಿಸಿರುವ ವೀಡಿಯೋ ಹಂಚಿಕೊಂಡಿರುವ ನವಜೋತ್ ಸಿಂಗ್ ಸಿಧು ಪಂಜಾಬ್ ಜನತೆಗೆ ಸಂದೇಶ ರವಾನಿಸಿದ್ದಾರೆ.

    ಕಳೆದ 20-25 ವರ್ಷಗಳಿಂದ ಆದಾಯ ಕುಸಿತ ಕಾಣುತ್ತಿದ್ದು, ಖರ್ಚು ಹೆಚ್ಚಾಗುತ್ತಿರೋದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮೂರು ಕೃಷಿ ಕಾನೂನುಗಳು ರೈತರು, ದಿನಗೂಲಿ ಕಾರ್ಮಿಕರು ಮತ್ತು ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆಯಲಿವೆ. ಆದ್ದರಿಂದ ಪಂಜಾಬ್ ರೈತರು ಆಂದೋಲನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಒಂದು ವೇಳೆ ಕೇಂದ್ರ ಮೂರು ಕಾನೂನು ಹಿಂಪಡೆಯದಿದ್ರೆ ಪಂಜಾಬ್ ಅಭಿವೃದ್ಧಿ ಆಗಲ್ಲ. ಈ ಮೂರು ಕಾನೂನು ವಿರೋಧಿಸಿ ನನ್ನ ಮನೆ ಮೇಲೆ ಕಪ್ಪು ಧ್ವಜ ಹಾರಿಸಿದ್ದೇನೆ. ಕಾನೂನು ಹಿಂಪಡೆಯವರೆಗೂ ಈ ಧ್ವಜ ಇಳಿಸಲ್ಲ. ಪ್ರತಿ ಪಂಜಾಬಿ ರೈತರ ಪ್ರತಿಭಟನೆಯನ್ನ ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.

  • ಸಾಕ್ಸ್ ಮಾರುತ್ತಿದ್ದ ಬಾಲಕನಿಗೆ ಸಿಎಂ ಕರೆ

    ಸಾಕ್ಸ್ ಮಾರುತ್ತಿದ್ದ ಬಾಲಕನಿಗೆ ಸಿಎಂ ಕರೆ

    ಚಂಢೀಗಢ: ಹತ್ತವರ್ಷದ ಬಾಲಕನೊಬ್ಬ ಶಾಲೆ ತ್ಯಜಿಸಿ, ರಸ್ತೆಗಳಲ್ಲಿ ಸಾಕ್ಸ್ ಮಾರುತ್ತಿರುವ ವೀಡಿಯೋವೊಂದು ಪಂಜಾಬ್‍ನಲ್ಲಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ಬಾಲಕ ವಂಶ ಸಿಂಗ್‍ಗೆ ಅಚ್ಚರಿಯೊಂದು ಕಾದಿತ್ತು.

    ಸ್ವತಃ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬಾಲಕನಿಗೆಕರೆ ಮಾಡಿ ನೀನು ಮತ್ತೆ ಶಾಲೆಗೆ ಸೇರಿಕೊ ನಿನ್ನ ವಿದ್ಯಾಭ್ಯಾಸ ಖರ್ಚನ್ನು ಪೂರ್ಣವಾಗಿ ಸರ್ಕಾರ ಹೊತ್ತುಕೊಳ್ಳುತ್ತದೆ. ನಿನ್ನ ಕುಟುಂಬಕ್ಕೆ ತಕ್ಷಣಕ್ಕೆ 2 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದರು.

    ಬಾಲಕನ ತಂದೆಯೂ ಜೀವನ ನಿರ್ವಹಣೆಗೆ ಸಾಕ್ಸ್ ಮಾರುತ್ತಾರೆ. ವಂಶ ಸಿಂಗ್‍ಗೆ ಮೂವರು ಸಹೋದರಿಯರು, ಒಬ್ಬ ಸಹೋದರ ಇದ್ದಾನೆ. ಬಾಲಕನಿಗೆ ಈ ಮಟ್ಟದ ಜನಪ್ರಿಯತೆ ಬರಲೂ ಒಂದು ಕಾರಣವಿದೆ. ಪ್ರಾಮಾಣಿಕತೆ ಇವನಿಗೆ ಇಂತಹ ಒಂದು ದೊಡ್ಡ ಮಟ್ಟದ ಸಾಹಯ ಸಿಗಲು ಕಾರಣವಾಗಿದೆ. ಸಾಕ್ಸ್ ಬೆಲೆಗಿಂತ 50 ರೂ. ಹೆಚ್ಚು ಕೊಡುತ್ತೇನೆಂದರೂ, ವಂಶ ಸಿಂಗ್ ತೆಗೆದುಕೊಳ್ಳಲು ಒಪ್ಪುತ್ತಿರಲಿಲ್ಲ. ಇದನ್ನು ಇಡೀ ರಾಜ್ಯವೇ ಗೌರವಿಸಿದೆ.

  • ತರಕಾರಿ ಬುಟ್ಟಿ ಒದ್ದಿದ್ದ ಪೊಲೀಸಪ್ಪ ಸಸ್ಪೆಂಡ್

    ತರಕಾರಿ ಬುಟ್ಟಿ ಒದ್ದಿದ್ದ ಪೊಲೀಸಪ್ಪ ಸಸ್ಪೆಂಡ್

    ಚಂಡೀಗಢ: ವ್ಯಾಪಾರಿಯ ತರಕಾರಿಯ ಬುಟ್ಟಿಯನ್ನ ಒದ್ದು ಅಮಾನವೀಯವಾಗಿ ನಡೆದುಕೊಂಡಿದ್ದ ಪೊಲೀಸ್ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ.

    ಕೊರೊನಾ ನಿಯಂತ್ರಣಕ್ಕಾಗಿ ಪಂಜಾಬ್ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ನಿಗದಿತ ಸಮಯದಲ್ಲಿಯೇ ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ. ಪಂಜಾಬ್ ರಾಜ್ಯದ ಫಗವಾಡಾ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಕಂವರ್ ದೀಪ್ ಕೌರ್ ತರಕಾರಿ ವ್ಯಾಪಾರಿಗಳ ಜೊತೆ ಅಮಾನವೀಯವಾಗಿ ನಡೆದುಕೊ0ಡಿದ್ದ ವೀಡಿಯೋ ವೈರಲ್ ಆಗಿತ್ತು.

    ಏನದು ವೀಡಿಯೋ?: ಮಾರುಕಟ್ಟೆಗೆ ಬರೋ ಪೊಲೀಸ್ ಅಧಿಕಾರಿ ತರಕಾರಿ ಅಂಗಡಿ ಮುಚ್ಚುವಂತೆ ಹೇಳುತ್ತಿರುತ್ತಾರೆ. ವ್ಯಾಪಾರಿಗಳು ಸಹ ಅವಸರವಾಗಿ ತರಕಾರಿ ಅಂಗಡಿ ಒಳಗೆ ತೆಗೆದುಕೊಳ್ಳುತ್ತಿರುತ್ತಾರೆ. ಈ ವೇಳೆ ಕಂವರ್ ದೀಪ್ ಅಂಗಡಿ ಮುಂದೆ ಮೆಣಸಿನಕಾಯಿ ತುಂಬಿಸಿದ್ದ ಪಾತ್ರೆಯನ್ನ ಕಾಲಿನಿಂದ ಒದ್ದು ಹೋಗುತ್ತಾರೆ.

    ವೀಡಿಯೋ ವೈರಲ್ ಬಳಿಕ ಪಂಜಾಬ್ ಡಿಜಿಪಿ ತನಿಖೆಗೆ ಆದೇಶಿಸಿದ್ದಾರೆ. ಸದ್ಯ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ವ್ಯಾಪಾರಿಯನ್ನ ಠಾಣೆ ಕರೆಸಿ ಹೇಳಿಕೆಯನ್ನ ದಾಖಲಿಸಿಕೊಳ್ಳಲಾಗಿದೆ. ವ್ಯಾಪಾರಿಗಾದ ನಷ್ಟವನ್ನ ಪೊಲೀಸ್ ಅಧಿಕಾರಿಯ ಸಂಬಳದಿಂದ ಕಡಿತಗೊಳಿಸುವಂತೆ ಆದೇಶಿಸಲಾಗಿದೆ.

    ಇಂತಹ ಘಟನೆಗಳನ್ನ ಪಂಜಾಬ್ ಪೊಲೀಸರು ಪ್ರೋತ್ಸಾಹ ನೀಡಲ್ಲ. ಜನ ಸಾಮಾನ್ಯರಿಗೆ ಕೊರೊನಾ ನಿಯಮಗಳನ್ನ ತಿಳಿ ಹೇಳಿ. ಆದ್ರೆ ಅಮಾನವೀಯವಾಗಿ ನಡೆದುಕೊಳ್ಳೋದು ತಪ್ಪು ಎಂದು ಡಿಜಿಪಿ ಹೇಳಿದ್ದಾರೆ.