Tag: punjab

  • ನಟ ಅಕ್ಷಯ್ ಕುಮಾರ್ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ

    ನಟ ಅಕ್ಷಯ್ ಕುಮಾರ್ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ

    ಚಂಡೀಗಢ: ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿದಂತೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬದಲ್ ಹಾಗೂ ಅವರ ಪುತ್ರ ಸುಖಬೀರ್ ಸಿಂಗ್ ಬದಲ್ ಗೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಸಮನ್ಸ್ ಜಾರಿಮಾಡಿದೆ.

    2015 ರಲ್ಲಿ ಪಂಜಾಬಿನ ಫರೀದ್‍ಕೋಟ್ ಜಿಲ್ಲೆಯಲ್ಲಿ ನಡೆದ ಪೊಲೀಸರ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದ ಎಸ್‍ಐಟಿ ತನಿಖೆ ನಡೆಸುತ್ತಿತ್ತು. ಈ ಸಂಬಂಧ ಅಕ್ಷಯ್ ಕುಮಾರ್ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿಮಾಡಿದೆ.

    ತನಿಖಾಧಿಕಾರಿಯಾದ ಇನ್ಸ್ ಪೆಕ್ಟರ್ ಜನರಲ್ ವಿಜಯ್ ಪ್ರತಾಪ್ ಸಿಂಗ್ ಮುಂದೆ ಅಮೃತಸರ್ ದಲ್ಲಿರುವ ಸರ್ಕ್ಯೂಟ್ ಹೌಸ್‍ನಲ್ಲಿ ವಿಚಾರಣೆಗೆ ಆಗಮಿಸುವಂತೆ ಎಸ್‍ಐಟಿ ಹೇಳಿತ್ತು. ಅಲ್ಲದೇ ನವೆಂಬರ್ 19ಕ್ಕೆ ಪ್ರಕಾಶ್ ಸಿಂಗ್ ಬದಲ್, ನ.19ಕ್ಕೆ ಸುಖಬೀರ್ ಬದಲ್ ಹಾಗೂ ನ.21ಕ್ಕೆ ಅಕ್ಷಯ್ ಕುಮಾರ್ ಗೆ ಹಾಜರಾಗಲೂ ಸೂಚಿಸಿದೆ.

    ಈ ಕುರಿತು ಪ್ರತಿಕ್ರಯಿಸಿರುವ ಐಜಿ, ಕಾನೂನು ಎಲ್ಲರಿಗೂ ಒಂದೇ. ನಮ್ಮ ತನಿಖೆ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ನಡೆಯುತ್ತದೆ. ವಿಚಾರಣೆ ಸಂಪೂರ್ಣವಾಗಿ ಪಾರದರ್ಶಕವಾಗಿರುತ್ತದೆಂದು ಹೇಳಿದ್ದಾರೆ.

    ಏನಿದು ಗೋಲಿಬಾರ್ ಪ್ರಕರಣ?
    2015ರ ಫರೀದ್‍ಕೋಟ್ ಜಿಲ್ಲೆಯ ಹಾಲ್ ಕಲನ್ ಗ್ರಾಮದಲ್ಲಿ ಸಿಖ್ಖರ ಪವಿತ್ರ ಗ್ರಂಥ ‘ಗುರು ಗ್ರಂಥ ಸಾಹಿಬ್’ ಅನ್ನು ಅಪವಿತ್ರಗೊಳಿಸಿದ್ದಾರೆಂದು, ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಉದ್ರಿಕ್ತರ ಗುಂಪು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿತ್ತು, ಹೀಗಾಗಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದರು. ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು.

    ಅಕ್ಷಯ್ ಕುಮಾರ್ ಹೆಸರು ಬಂದಿದ್ದೇಗೆ?
    ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಂಜಿತ್ ಸಿಂಗ್ ಅವರ ಕಮಿಷನ್ ವರದಿಯಲ್ಲಿ ನಟ ಅಕ್ಷಯ್ ಕುಮಾರ್ ಹೆಸರನ್ನು ಉಲ್ಲೇಖಿಸಲಾಗಿತ್ತು. ವರದಿಯ ಪ್ರಕಾರ ಮುಂಬೈನಲ್ಲಿರುವ ನಟ ಅಕ್ಷಯ್ ಕುಮಾರ್ ಫ್ಲಾಟ್ ನಲ್ಲಿ ಮಾಜಿ ಉಪ ಮುಖ್ಯಮಂತ್ರಿ ಸುಖಬೀರ್ ಹಾಗೂ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಜೊತೆ ಎಂಎಂಜಿ ಸಿನೆಮಾ ಬಿಡುಗಡೆಯ ಸಂಬಂಧ ಸಭೆ ನಡೆಸಿದ್ದರು.

    ಧರ್ಮ ನಿಂದನೆ ಪ್ರಕರಣದಲ್ಲಿ ಗುರ್ಮಿತ್ ಸಿಂಗ್ ಅವರಿಗೆ ಕ್ಷಮಾಧಾನ ಸಿಗುವುದಕ್ಕೂ ಮುನ್ನ ಸಭೆ ನಡೆದಿತ್ತು ಎನ್ನಲಾಗುತ್ತಿದೆ. ಆದರೆ ಈ ಆರೋಪಗಳನ್ನು ನಟ ಅಕ್ಷಯ್ ಕುಮಾರ್ ತಳ್ಳಿ ಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪಾಕ್ ಐಎಸ್‍ಐಗೆ ಏಜೆಂಟ್‍ಗೆ ಮಾಹಿತಿ ರವಾನೆ: ಬಿಎಸ್‍ಎಫ್ ಯೋಧ ಅರೆಸ್ಟ್

    ಪಾಕ್ ಐಎಸ್‍ಐಗೆ ಏಜೆಂಟ್‍ಗೆ ಮಾಹಿತಿ ರವಾನೆ: ಬಿಎಸ್‍ಎಫ್ ಯೋಧ ಅರೆಸ್ಟ್

    ಚಂಡೀಗಢ: ಪಾಕಿಸ್ತಾನದ ಐಎಸ್‍ಐ ಏಜೆಂಟ್ ನೊಂದಿಗೆ ಮಾಹಿತಿ ರವಾನಿಸದ್ದರ ಆರೋಪದ ಮೇರೆಗೆ ಬಾರ್ಡರ್ ಸೆಕ್ಯೂರಿಟ್ ಫೋರ್ಸ್ (ಬಿಎಸ್‍ಫ್) ಯೋಧನನ್ನು ಗುಪ್ತದಳ ಅಧಿಕಾರಿಗಳು ಪಂಜಾಬಿನ ಫೆರೋಜ್‍ಪುರ್ ನಲ್ಲಿ ಬಂಧಿಸಿದ್ದಾರೆ.

    ಶೇಖ್ ರೈಯಾಜುದ್ದೀನ್ ಬಂಧಿತ ಬಿಎಸ್‍ಎಫ್ ಯೋಧ. ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ವ್ಯವಸ್ಥೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ಛಾಯಚಿತ್ರಗಳನ್ನು ಪಾಕಿಸ್ತಾನಿ ಮೂಲದ ಐಎಸ್‍ಐ ಏಜೆಂಟ್‍ಗೆ ರವಾನಿಸಿದ್ದಾರೆ. ಶೇಖ್ ಮೂಲತಃ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ರೆನ್‍ಪುರ್ ಗ್ರಾಮದವರಾಗಿದ್ದು, ಬಿಎಸ್‍ಎಫ್‍ನ 29ನೇ ಬೆಟಾಲಿಯನ್‍ನಲ್ಲಿ ಪಂಜಾಬ್‍ನ ಫೆರೋಜ್‍ಪುರ್ ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಗುಪ್ತದಳ ಅಧಿಕಾರಿಗಳು ಹೇಳಿದ್ದಾರೆ.

    ಮಾಹಿತಿಗಳ ಪ್ರಕಾರ ಯೋಧ ಭಾರತದ ಗಡಿಪ್ರದೇಶಗಳ ಛಾಯಚಿತ್ರ ಹಾಗೂ ಬಿಎಸ್‍ಎಫ್ ನ ಮುಖ್ಯ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪಾಕಿಸ್ತಾನದ ಗುಪ್ತದಳ ಅಧಿಕಾರಿ ಮಿರ್ಜಾ ಫೈಸಲ್ ನೊಂದಿಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಬಂಧಿತ ಯೋಧನಿಂದ ಎರಡು ಮೊಬೈಲ್, 7 ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ.

    ಬಂಧಿತ ಆರೋಪಿಯ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 29ನೇ ಹೆಚ್ಚುವರಿ ಕಮಾಡೇಂಟ್ ಮ್ಯಾಮ್ದತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೈನಿಕನನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ತನಿಖಾಧಿಕಾರಿ ರಂಜಿತ್ ಸಿಂಗ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟಾಯ್ಲೆಟ್ ನಲ್ಲಿ ಸ್ಯಾನಿಟರಿ ಪ್ಯಾಡ್ ಹಾಕಿದ್ರೆಂದು ವಿದ್ಯಾರ್ಥಿನಿಯರ ಬಟ್ಟೆ ಕಳಚಿದ್ರು!

    ಟಾಯ್ಲೆಟ್ ನಲ್ಲಿ ಸ್ಯಾನಿಟರಿ ಪ್ಯಾಡ್ ಹಾಕಿದ್ರೆಂದು ವಿದ್ಯಾರ್ಥಿನಿಯರ ಬಟ್ಟೆ ಕಳಚಿದ್ರು!

    – ಶಿಕ್ಷಕರ ಎತ್ತಂಗಡಿಗೆ ಸಿಎಂ ಆದೇಶ

    ಚಂಢಿಗಡ್: ಶಾಲೆಯ ಶೌಚಾಲಯದೊಳಗೆ ಸ್ಯಾನಿಟರಿ ಪ್ಯಾಡ್ ಹಾಕಿದ್ದ ಮಕ್ಕಳ ಬಟ್ಟೆಯನ್ನ ಕಳಚಿದ್ದ ಶಿಕ್ಷಕರನ್ನ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಎತ್ತಗಂಡಿ ಮಾಡಲು ಆದೇಶ ನೀಡಿದ್ದಾರೆ.

    ಶಾಲೆಯ ಟಾಯ್ಲೆಟ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಯಾನಿಟರಿ ಪ್ಯಾಡ್ ಹಾಕಿದ್ದ ಕಾರಣ ಅಲ್ಲಿನ ಶಿಕ್ಷಕರು ಶಾಲಾ ಆವರಣದಲ್ಲಿಯೇ ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಕಳಚಿದ ಘಟನೆ ಫಝಿಲ್ಕಾ ಜಿಲ್ಲೆಯ ಕುಂದಾಲ್ ಹಳ್ಳಿಯ ಶಾಲೆಯಲ್ಲಿ ಗುರುವಾರ ನಡೆದಿತ್ತು.

    ಈ ಘಟನೆ ಪಂಜಾಬ್ ಮುಖ್ಯಮಂತ್ರಿಯ ಗಮನಕ್ಕೆ ಬಂದಿದ್ದು, ಸೋಮವಾರದಂದು ಈ ವಿಷಯದ ಸಂಪೂರ್ಣ ತನಿಖೆ ನಡೆಸಿ ಹಾಗೂ ಸೂಕ್ತ ನಿರ್ಧಾರವನ್ನ ತೆಗೆದುಕೊಳ್ಳಬೇಕೆಂದು ರಾಜ್ಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕ್ರಿಶನ್ ಕುಮಾರ್ ಅವರಿಗೆ ಆದೇಶ ನೀಡಿದ್ದಾರೆ.

    ಶಾಲೆಯ ಟಾಯ್ಲೆಟ್ ನಲ್ಲಿ ಯಾರು ಸ್ಯಾನಿಟರಿ ಪ್ಯಾಡ್ ಹಾಕಿದ್ದಾರೆ ಎಂಬುದನ್ನ ಕಂಡು ಹಿಡಿಯಲು ಆ ಶಾಲೆಯ ವಿದ್ಯಾರ್ಥಿನಿಯರನ್ನ ಎಲ್ಲರ ಮುಂದೆ ಬಟ್ಟೆ ಕಳಚಿರುವ ವಿಡಿಯೋ ದೊರಕಿದ್ದು, ಈ ವಿಡಿಯೋದಲ್ಲಿ ಕೆಲವು ವಿದ್ಯಾರ್ಥಿನಿಯರು ನಮ್ಮನ್ನ ಶಾಲೆಯ ಆವರಣದಲ್ಲಿ ನಿಲ್ಲಿಸಿ ಬಟ್ಟೆಯನ್ನ ಕಳಚಿದ್ದಾರೆ ಎಂದು ಜೋರಾಗಿ ಅಳುತ್ತಿದ್ದರು. ಶಿಕ್ಷಕರು ಸ್ಯಾನಿಟರಿ ಪ್ಯಾಡ್ ಸರಿಯಾಗಿ ವಿಲೇವಾರಿ ಮಾಡುವುದರ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಬದಲು ಈ ರೀತಿ ಬಟ್ಟೆ ಕಳಚಿರುವುದು ಅಮಾನವೀಯವಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ.

    ಈ ಸಂಬಂಧ ತನಿಖಾ ವರದಿ ಬಂದ ನಂತರ ಆ ಶಿಕ್ಷಕರ ವಿರುದ್ಧ ಕಠಿಣ ಶಿಸ್ತಿನ ಕ್ರಮವನ್ನ ತೆಗೆದುಕೊಳ್ಳುವುದಾಗಿ ಪಂಜಾಬ್ ಸರ್ಕಾರ ತಿಳಿಸಿದ್ದು, ಅಂತಿಮ ವಿಚಾರಣೆಯ ವರದಿಯನ್ನ ವೈಯಕ್ತಿಕವಾಗಿ ತಿಳಿಸಲು ಕ್ರಿಶನ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಸರಾ ದುರಂತ: ನೋಡ ನೋಡುತ್ತಲೇ 50 ಮಂದಿ ರೈಲಿಗೆ ಬಲಿ!

    ದಸರಾ ದುರಂತ: ನೋಡ ನೋಡುತ್ತಲೇ 50 ಮಂದಿ ರೈಲಿಗೆ ಬಲಿ!

    ಚಂಡೀಗಢ: ರಾವಣ ಸಂಹಾರದ ಕಾರ್ಯಕ್ರಮವನ್ನು ನೋಡುತ್ತಿದ್ದ ಜನರ ಮೇಲೆ ರೈಲು ಹರಿದ ಪರಿಣಾಮ 50ಕ್ಕೂ ಹೆಚ್ಚು ಜನ ಧಾರುಣವಾಗಿ ಮೃತಪಟ್ಟಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದ ಜೋದಾ ಪಾಟ್ಕರ್ ನಲ್ಲಿ ನಡೆದಿದೆ.

    ವಿಜಯದಶಿಮಿ ಹಿನ್ನೆಯಲ್ಲಿ ಇಂದು ಅಮೃತಸರದ ಜೋದಾ ಪಾಟ್ಕರ್ ನಲ್ಲಿ ರಾವಣನ ಪ್ರತಿಕೃತಿ ಸಂಹರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದು ಕೆಲವರು ರೈಲು ಹಳಿ ಮೇಲೆ ನಿಂತಿದ್ದರು. ಈ ವೇಳೆ ರೈಲು ಹಳಿ ಮೇಲೆ ಜಮಾಯಿಸಿದ್ದ ಜನರ ಮೇಲೆ ಏಕಾಏಕಿ ರೈಲು ಹರಿದಿದೆ. ರೈಲು ಗುದ್ದಿದ ರಭಸಕ್ಕೆ ಸ್ಥಳದಲ್ಲೇ 50 ಮಂದಿ ಮೃತಪಟ್ಟಿದ್ದಾರೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರ್ಯಕ್ರಮ ಆಯೋಜಿಸಿದ್ದ ಸ್ಥಳದ ಸಮೀಪವೇ ರೈಲು ಮಾರ್ಗ ಹಾದುಹೋಗಿತ್ತು. ಜನ ರೈಲು ಹಳಿಯ ಮೇಲೆ ನಿಂತು ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಕಾರ್ಯಕ್ರಮದಲ್ಲಿ ದೊಡ್ಡದಾದ ಪಟಾಕಿಗಳನ್ನು ಹೊಡೆಯುತ್ತಿದ್ದರಿಂದ ರೈಲು ಬರುತ್ತಿರುವ ಶಬ್ಧ ಯಾರಿಗೂ ಕೇಳಿಸಿಲಿಲ್ಲ. ಒಮ್ಮೆಲೆ ರೈಲು ಜನರ ಮೇಲೆಯೇ ಹರಿಯಿತು. ಸ್ಥಳದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 700 ಮಂದಿ ಸ್ಥಳದಲ್ಲಿದ್ದರು ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮತ್ತೋರ್ವ ಪ್ರತ್ಯಕ್ಷದರ್ಶಿ, ಘಟನೆಗೆ ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರೇ ನೇರ ಹೊಣೆಯಾಗಿದ್ದಾರೆ. ರೈಲು ಬರುವ ಮುನ್ನ ದೊಡ್ಡದಾಗ ಶಬ್ದವನ್ನಾದರೂ ಅವರು ಮಾಡಬಹುದಿತ್ತು. ಅಲ್ಲದೇ ಕಾರ್ಯಕ್ರಮ ನಿಗಧಿಯಾಗಿದ್ದರಿಂದ ರೈಲಿನ ಸಂಪೂರ್ಣ ಮಾಹಿತಿಯನ್ನು ಅವರು ಪಡೆದುಕೊಂಡು, ಕಾರ್ಯಕ್ರಮ ನಡೆಯುವ ವೇಳೆ ಜನರು ಇಲ್ಲವೇ ರೈಲನ್ನು ತಡೆಯುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರಕ್ಷಣಾ ತಂಡ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿವೆ. ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐಟಿ ಅಧಿಕಾರಿಗಳಿಗೆ ಶರಣಾಗಿ, 60 ಲಕ್ಷ ಮೌಲ್ಯದ ಆಸ್ತಿ ಒಪ್ಪಿಸಿದ ಪಕೋಡವಾಲಾ!

    ಐಟಿ ಅಧಿಕಾರಿಗಳಿಗೆ ಶರಣಾಗಿ, 60 ಲಕ್ಷ ಮೌಲ್ಯದ ಆಸ್ತಿ ಒಪ್ಪಿಸಿದ ಪಕೋಡವಾಲಾ!

    ಸಾಂದರ್ಭಿಕ ಚಿತ್ರ

    ಚಂಡೀಗಡ: ಪಂಜಾಬ್ ರಾಜ್ಯದ ಲೂಧಿಯಾನದ ಪ್ರಸಿದ್ಧ ಪಕೋಡಾ ವ್ಯಾಪಾರಿಯ ಮೇಲೆ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿ ಮಾಡುತ್ತಲೇ ನಾಪತ್ತೆಯಾಗಿದ್ದ ವ್ಯಾಪಾರಿಯೊಬ್ಬ ನಂತರ ಶರಣಾಗಿ 60 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯನ್ನು ಒಪ್ಪಿಸಿದ್ದಾನೆ.

    ಹೌದು, ಪ್ರಧಾನಿ ನರೇಂದ್ರ ಮೋದಿಯವರು ಪಕೋಡ ಮಾರುವುದು ಕೂಡ ಒಂದು ಉದ್ಯೋಗ ಎಂದು ಹೇಳಿಕೆ ನೀಡಿದ್ದನ್ನು ವಿರೋಧ ಪಕ್ಷಗಳು ಟೀಕಿಸಿದ್ದವು. ಇದರ ಬೆನ್ನಲ್ಲೇ ಲೂಧಿಯಾನದ ಪ್ರಸಿದ್ಧ ಪಕೋಡಾ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ದಾಳಿ ನಡೆಸಿತ್ತು.

    ದಾಳಿ ವೇಳೆ ಖ್ಯಾತ ಪಕೋಡ ಮಾರಾಟಗಾರ ಪನ್ನಾ ಸಿಂಗ್ ನಾಪತ್ತೆಯಾಗಿದ್ದ. ಈ ವೇಳೆ ಅಧಿಕಾರಿಗಳು ಪನ್ನಾ ಸಿಂಗ್‍ರ ಅಂಗಡಿ ಹಾಗೂ ಮನೆ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ದಾಳಿ ಬೆನ್ನಲ್ಲೇ ಶುಕ್ರವಾರ ಪನ್ನಾ ಸಿಂಗ್ ಪಂಜಾಬ್‍ನ ಆದಾಯ ತೆರಿಗೆ ಇಲಾಖೆಗೆ ಶರಣಾಗಿ 60 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಿದ್ದಾನೆ.

    1952 ರಿಂದಲೂ ಪನ್ನಾ ಸಿಂಗ್ ಲೂಧಿಯಾನದ ಗಿಲ್ ರಸ್ತೆಯಲ್ಲಿ ಪಕೋಡಾ ವ್ಯಾಪಾರವನ್ನು ಮಾಡಿಕೊಂಡು ಬರುತ್ತಿದ್ದ. ಅಲ್ಲದೇ ಪನ್ನಾ ಸಿಂಗ್ ಕೇವಲ ಪಕೋಡ ವ್ಯಾಪಾರದ ಮೂಲಕ ಐಷಾರಾಮಿ ಮನೆ, ಅಂಗಡಿ ಹಾಗೂ ಅಪಾರ ಪ್ರಮಾಣದ ಆಸ್ತಿಯನ್ನು ಗಳಿಸಿದ್ದರು ಎಂದು ತಿಳಿದು ಬಂದಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಆಯುಕ್ತ ಡಿ.ಎಸ್.ಚೌದರಿ, ದಶಕಗಳಷ್ಟು ಹಳೆಯದಾಗಿರುವ ಪಕೋಡಾ ಅಂಗಡಿಯು ಇಲ್ಲಿಯವರೆಗೂ ಯಾವುದೇ ಆದಾಯ ತೆರಿಗೆಯನ್ನು ಪಾವತಿ ಮಾಡಿರಲಿಲ್ಲ. ಹೀಗಾಗಿ ಪನ್ನಾ ಸಿಂಗ್‍ರ ಎರಡೂ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದೇವೆ. ದಾಳಿ ವೇಳೆ ಪ್ರತಿದಿನ ಆಗುತ್ತಿದ್ದ ವ್ಯಾಪಾರವನ್ನು ಲೆಕ್ಕಹಾಕಿ ತೆರಿಗೆಯನ್ನು ಸಂಗ್ರಹಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಿಳೆಯನ್ನ ಜೀಪ್ ಮೇಲೆ ಕಟ್ಟಿ, ನಗರ ಸುತ್ತಾಡಿಸಿ ಪೊಲೀಸರಿಂದ ಅಮಾನವೀಯ ಕೃತ್ಯ

    ಮಹಿಳೆಯನ್ನ ಜೀಪ್ ಮೇಲೆ ಕಟ್ಟಿ, ನಗರ ಸುತ್ತಾಡಿಸಿ ಪೊಲೀಸರಿಂದ ಅಮಾನವೀಯ ಕೃತ್ಯ

    ಚಂಡೀಗಡ: ಪೊಲೀಸರು 35 ವರ್ಷದ ಮಹಿಳೆಯನ್ನು ಆಕೆಯ ಗ್ರಾಮದಿಂದ ಬಲವಂತವಾಗಿ ಜೀಪ್ ಮೇಲೆ ಕಟ್ಟಿ ಹಾಕಿ ಇಡೀ ನಗರವನ್ನು ಸುತ್ತಾಡಿಸಿರುವ ಅಮಾನವೀಯ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ನಡೆದಿದೆ.

    ಪಂಜಾಬ್ ಪೊಲೀಸರ ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಮಹಿಳೆಯನ್ನು ಜೀಪ್ ಮೇಲೆ ಕಟ್ಟಿ ಹಾಕಿ ನಗರ ಸುತ್ತಾಡಿಸುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಪೊಲೀಸರು ಮಹಿಳೆಯ ಮಾವನನ್ನು ಬಂಧಿಸಲು ಹೋಗಿದ್ದಾಗ ಈ ರೀತಿಯಾಗಿ ಮಾಡಿದ್ದಾರೆ.

    ಪೊಲೀಸ್ ಜೀಪ್ ಮೇಲೆ ಮಹಿಳೆ ಮಲಗಿದ್ದು, ಆಕೆ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವೇಳೆ ಮಹಿಳೆ ಜೀಪಿನಿಂದ ಕೆಳಗೆ ಬಿದ್ದಿದ್ದರಿಂದ ಆಕೆಯ ತಲೆಗೆ ತೀವ್ರವಾಗಿ ಗಾಯವಾಗಿದ್ದು, ಮಹಿಳೆಯನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತ ಪೊಲೀಸರು ಮಹಿಳೆ ಮಾಡಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.

    ಅಮೃತಸರ ಜಿಲ್ಲೆಯ ಷಾಝಾಡಾ ಹಳ್ಳಿಯಲ್ಲಿ ಪೊಲೀಸ್ ಇಲಾಖೆಯ ತಂಡವು ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ನಮ್ಮ ಮಾವ ಬಲ್ವಂತ್ ಸಿಂಗ್ ನನ್ನು ಬಂಧಿಸಲು ಮನೆಯ ಮೇಲೆ ದಾಳಿ ನಡೆಸಿದ್ದರು. ಆದರೆ ಮನೆಯಲ್ಲಿ ಮಾವ ಪತ್ತೆಯಾಗಿಲ್ಲ. ನಂತರ ಪೊಲೀಸರು ನನ್ನನ್ನು ವಾಹನದ ಮೇಲೆ ಕುಳಿತುಕೊಳ್ಳುವಂತೆ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

    ಮಹಿಳೆ ಆರೋಪಿ ಏನು ಅಲ್ಲ. ಆಕೆಯ ಮಾವವನ್ನು ಬಂಧಿಸಲು ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಆತ ಮನೆಯಲ್ಲಿ ಇರಲಿಲ್ಲ. ಈ ವೇಳೆ ಕುಟುಂಬದವರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ವಾಹನದ ಮೇಲೆ ಕಲ್ಲು ಎಸೆದು ಹಾನಿ ಮಾಡಿದ್ದಾರೆ. ಆದ್ದರಿಂದ ಕುರಿತು ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ತೇಜಿಂದರ್ ಸಿಂಗ್ ಮೌರ್ ತಿಳಿಸಿದ್ದಾರೆ.

    ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವವರೆಗೂ ನಾನು ಮಹಿಳೆಯ ಆರೋಪದ ಬಗ್ಗೆ ಮಾತನಾಡುವುದಿಲ್ಲ. ಪೋಲಿಸ್ ತಂಡ ಈಗ ನಮ್ಮನ್ನು ಸಂಪರ್ಕಿಸಿದೆ. ಪೋಲೀಸ್ ತಂಡದ ಮೇಲೆ ದಾಳಿ ಮಾಡಿ ಪೊಲೀಸ್ ವಾಹನವನ್ನು ಹಾನಿಗೊಳಿಸಿದ್ದಕ್ಕಾಗಿ ಆಕೆಯ ವಿರುದ್ಧ ದೂರು ದಾಖಲಾಗಿದೆ ಎಂದು ಸೂಪರಿಟೆಂಡೆಂಟ್ ಪೊಲೀಸ್ ಪರ್ಮಲ್ ಸಿಂಗ್ ಹೇಳಿದ್ದಾರೆ.

    ಇನ್ಸ್ ಪೆಕ್ಟರ್ ವಿಜಯ್ ಪ್ರತಾಪ್ ಸಿಂಗ್ ಈ ಆರೋಪಗಳನ್ನು ನಿರಾಕರಿಸಿ ಈ ಫಟನೆ ಕುರಿತು ತನಿಖೆ ನಡೆಸಲಾಗುವುದು ಮತ್ತು ಸತ್ಯಾಸತ್ಯತೆಯನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಂಜಾಬ್ ಪೊಲೀಸರ ಗ್ರೂಪ್ ಫೋಟೋ ವೈರಲ್: ನೆಟ್ಟಿಗರಿಂದ ಭಾರೀ ಕಮೆಂಟ್ಸ್

    ಪಂಜಾಬ್ ಪೊಲೀಸರ ಗ್ರೂಪ್ ಫೋಟೋ ವೈರಲ್: ನೆಟ್ಟಿಗರಿಂದ ಭಾರೀ ಕಮೆಂಟ್ಸ್

    ಚಂಡೀಗಢ: ಕಳ್ಳರನ್ನು ಹಿಡಿದ ಮೇಲೆ ಪೊಲೀಸರು ಗ್ರೂಪ್ ಫೋಟೋ ತೆಗೆಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಆದರೆ ಪಂಜಾಬ್ ಪೊಲೀಸರು ಈಗ ಇಂತಹದ್ದೇ ಗ್ರೂಪ್ ಫೋಟೋ ಸಾಮಾಜಿಕ ಜಾಲತಾಣಲದಲ್ಲಿ ವೈರಲ್ ಆಗಿದ್ದು, ಪರ ಹಾಗೂ ವಿರೋಧ ಕಮೆಂಟ್ಸ್‍ಗಳು ಹರಿದಾಡುತ್ತಿವೆ.

    ಏನಿದೆ ಫೋಟೋದಲ್ಲಿ?
    ಗ್ರೂಪ್ ಫೋಟೋ ತೆಗೆಸುತ್ತಿರುವ ವೇಳೆ ಆರೋಪಿಗಳನ್ನು ಕುರ್ಚಿ ಮೇಲೆ ಕೂರಿಸಲಾಗಿರುತ್ತದೆ. ಆದರೆ ತಮ್ಮ ತಪ್ಪಿನಿಂದ ಎಚ್ಚೆತ್ತ ಪೊಲೀಸರು ಪುನಃ ಆರೋಪಿಗಳನ್ನು ಕೆಳಗೆ ಕೂರಿಸಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ಎರಡು ಫೋಟೋಗಳನ್ನು ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದ್ದು, ನೆಟ್ಟಿಗರಿಂದ ಭಾರೀ ಕಮೆಂಟ್ಸ್ ಕೇಳಿಬರುತ್ತಿವೆ.

    ಪಂಜಾಬ್ ಪೊಲೀಸರು ಇಂತಹದಕ್ಕೆ ಉತ್ತಮರು. ದರೋಢೆಕೊರರ ಜೊತೆ ಪೂರ್ಣ ಗೌರವ ನೀಡುವ ಗ್ರೂಪ್ ಫೋಟೋ ತಗೆಸಿಕೊಂಡಿದ್ದಾರೆ ಎಂದು ಬರೆದು ಅಮನ್ ಸಿಂಗ್ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

    ಇದರಲ್ಲಿ ಯಾವುದೇ ತಪ್ಪಿಲ್ಲ. ಇದೊಂದು ಸೌಜನ್ಯದ ಸಂಕೇತ. ಆರೋಪ ಸಾಬೀತು ಆಗುವವರೆಗೆ ಅವರು ಮುಗ್ಧರು ಎಂದು ಕಾನೂನಿನಲ್ಲಿದೆ ಎಂದು ಬರೆದು ಗುರ್ಸಾಟಿಂದರ್ ಸಿಂಗ್ ಟ್ವೀಟ್ ಮಾಡಿ, ಪೊಲೀಸರನ್ನು ಬೆಂಬಲಿಸಿದ್ದಾರೆ.

    https://twitter.com/Gursatinder68/status/1019808763258081280

  • ಕ್ರಿಕೆಟ್ ಆಟಗಾರ್ತಿ ಹರ್ಮನ್‍ಪ್ರೀತ್ ಕೌರ್ ಗೆ  ಡಿಎಸ್‍ಪಿ ಹುದ್ದೆ ರದ್ದು!

    ಕ್ರಿಕೆಟ್ ಆಟಗಾರ್ತಿ ಹರ್ಮನ್‍ಪ್ರೀತ್ ಕೌರ್ ಗೆ ಡಿಎಸ್‍ಪಿ ಹುದ್ದೆ ರದ್ದು!

    ಚಂಡೀಗಡ: ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡಿದ್ದ ಕಾರಣ ಟೀಂ ಇಂಡಿಯಾ ಮಹಿಳಾ ಟಿ-20 ಕ್ರಿಕೆಟ್ ತಂಡದ ನಾಯಕಿ ಹರ್ಮನ್‍ಪ್ರೀತ್ ಕೌರ್ ಅವರಿಗೆ ಗೌರವಾರ್ಥವಾಗಿ ನೀಡಿದ್ದ ಡಿಎಸ್‍ಪಿ ಹುದ್ದೆಯನ್ನು ಪಂಜಾಬ್ ಸರ್ಕಾರ ಹಿಂಪಡೆದುಕೊಂಡಿದೆ.

    2017ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಭಾರತ ರನ್ನರ್ ಅಪ್ ಪ್ರಶಸ್ತಿಗಳಿಸಲು ಹರ್ಮತ್‍ಪ್ರೀತ್ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಡಿಎಸ್‍ಪಿ ಹುದ್ದೆಯನ್ನು ನೀಡಿ ಗೌರವಿಸಿತ್ತು.

    ಈ ಮೊದಲು ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ದೃಷ್ಟಿಯಿಂದ ರೈಲ್ವೆ ಇಲಾಖೆ ನೀಡಿದ್ದ ಕೆಲಸಕ್ಕೆ ರಾಜೀನಾಮೆ ನೀಡಿ ಡಿಎಸ್‍ಪಿ ಹುದ್ದೆಯನ್ನು ಅಲಂಕರಿಸಿದ್ದರು.

    ಮಾರ್ಚ್ 1 ರಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಡಿಎಸ್‍ಪಿ ಸುರೇಶ್ ಅರೋರರವರು ಹರ್ಮನ್‍ಪ್ರೀತ್ ಕೌರ್ ರವರಿಗೆ ಡಿಎಎಸ್‍ಪಿ ಹುದ್ದೆ ಜವಾಬ್ದಾರಿಯನ್ನು ನೀಡಿ ಗೌರವಿಸಿದ್ದರು. ಡಿಎಸ್‍ಪಿ ಹುದ್ದೆಗೆ ಸಂಬಂಧಿಸಿದಂತೆ ಅವರು ಉತ್ತರ ಪ್ರದೇಶದ ಮೀರತ್ ನ ಚೌಧರಿ ಸಿಂಗ್ ವಿಶ್ವ ವಿದ್ಯಾನಿಲಯದಲ್ಲಿ ಪದವಿ ಪೂರ್ಣಗೊಳಿಸಿದರ ಪ್ರಮಾಣ ಪತ್ರವನ್ನು ಇಲಾಖೆಗೆ ಸಲ್ಲಿಸಿದ್ದರು.

    ಇಲಾಖೆಗೆ ಸಲ್ಲಿಸಿದ್ದ ದಾಖಲೆಗಳನ್ನು ಸಂಬಂಧಪಟ್ಟ ವಿಶ್ವವಿದ್ಯಾಲಯದ ಜೊತೆ ಪರಿಶೀಲನೆ ನಡೆಸಿದಾಗ ಡಿಗ್ರಿ ಪ್ರಮಾಣಪತ್ರಗಳು ನಕಲಿಯೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹರ್ಮನ್‍ಪ್ರೀತ್ ಕೌರ್ ರವರಿಗೆ ನೀಡಿದ ಡಿಎಸ್‍ಪಿ ಹುದ್ದೆಯನ್ನು ಪಂಜಾಬ್ ಸರ್ಕಾರ ಹಿಂತೆಗೆದುಕೊಂಡಿದೆ.

    ಪದವಿ ಪ್ರಮಾಣಪತ್ರಗಳು ನಕಲಿ ಆಗಿರುವುದರಿಂದ ಅವರು ಡಿಎಸ್‍ಪಿ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಅವರ ಕನಿಷ್ಠ ವಿದ್ಯಾರ್ಹತೆ 12ನೇ ತರಗತಿ ಆಗಿರುವುದರಿಂದ ಅವರು ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಯಲ್ಲಿ ಮುಂದುವರೆಯಬಹುದು. ಈ ಕುರಿತು ಕ್ರಿಕೆಟ್ ಆಟಗಾರ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಹಿಂದೆ ಕಾಮನ್‍ವೇಲ್ತ್ ಕೂಟದಲ್ಲಿ ಚಿನ್ನದ ಪದಕ ನೀಡಿದ್ದ ಮಂದೀಪ್ ಕೌರ್ ಅವರಿಗೆ ಪಂಜಾಬ್ ಸರ್ಕಾರ ಡಿಎಸ್‍ಪಿ ಹುದ್ದೆಯನ್ನು ನೀಡಿತ್ತು. ಬಳಿಕ ದಾಖಲಾತಿ ಪರಿಶೀಲನೆ ವೇಳೆ ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡಿದ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿದ್ದ ಡಿಎಸ್‍ಪಿ ಹುದ್ದೆಯನ್ನು ಹಿಂದಕ್ಕೆ ಪಡೆದುಕೊಂಡಿತ್ತು.

  • ಹಾಲು, ತರಕಾರಿ ರಸ್ತೆಗೆ ಸುರಿದು ಪ್ರತಿಭಟನೆ ಪ್ರಾರಂಭಿಸಿದ ರೈತರು

    ಹಾಲು, ತರಕಾರಿ ರಸ್ತೆಗೆ ಸುರಿದು ಪ್ರತಿಭಟನೆ ಪ್ರಾರಂಭಿಸಿದ ರೈತರು

    ಚಂಡೀಗಢ: ಇಂಧನ ಬೆಲೆ ಏರಿಕೆ ವಿರೋಧಿಸಿ ರಾಷ್ಟ್ರವ್ಯಾಪಿ ರೈತ ಸಂಘಟನೆಗಳು ಕೈಗೊಂಡಿರುವ ಪ್ರತಿಭಟನೆ ಮೊದಲ ದಿನ ರೈತರು ರಸ್ತೆ ಮೇಲೆ ಹಾಲು ಚಲ್ಲಿ, ತರಕಾರಿ ಹಾಗೂ ಹಣ್ಣುಗಳನ್ನು ಸುರಿದು ಮುಷ್ಕರ ಪ್ರಾರಂಭಿಸಿದ್ದಾರೆ.

    ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ದೊರೆತಿದೆ. 130 ರೈತ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ರೀತಿಯ ರಸ್ತೆ ತಡೆ ನಡೆಸುವುದಿಲ್ಲ ಹಾಗೂ ಶಾಂತಿಯುತವಾಗಿ ಮುಷ್ಕರ ನಡೆಸುವುದಾಗಿದೆ ಭರವಸೆ ನೀಡಿವೆ.

    ಪಂಜಾಬ್‍ನಲ್ಲಿ ರೈತರು ರಸ್ತೆಗೆ ಹಾಲು ಚಲ್ಲಿದರೆ, ಮಹಾರಾಷ್ಟ್ರದ ನಾಸಿಕ್‍ನಲ್ಲಿ ಟೊಮೊಟೊವನ್ನು ರಸ್ತೆಯ ಮೇಲೆ ಸುರಿದು ಪ್ರತಿಭಟಿಸಲಾಗಿದೆ. ನಾಸಿಕ್ ನಿಂದ ಮುಂಬೈವರೆಗೆ 35 ಸಾವಿರ ರೈತರು ಕಾಲ್ನಡಿ ಮೂಲಕ 180 ಕಿ.ಮೀ. ಕ್ರಮಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇದನ್ನು ಓದಿ: ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!

    ಕಾಂಗ್ರೆಸ್‍ನವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಹೀಗೆ ಮಾಡುತ್ತಿದ್ದಾರೆ. ಬಿಜೆಪಿ ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಹಾಗೂ ಅವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಭೋಪಾಲ್‍ನಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

    ರೈತರು ವಿಧಿಸುವ ದರದಲ್ಲಿ ಹಾಲು ಮತ್ತು ತರಕಾರಿಯನ್ನು ಗ್ರಾಹಕರು ಖರೀದಿಸಬೇಕು ಎನ್ನುವ ನಿಟ್ಟಿನಲ್ಲಿ ವಿಶೇಷ ಪ್ರತಿಭಟನೆ ದೇಶದಲ್ಲಿ ಪ್ರಾರಂಭವಾಗಿದೆ. ದೇಶದಲ್ಲಿ ಇಂಧನ ಬೆಲೆ ಹೆಚ್ಚಳವನ್ನು ವಿರೋಧಿಸಿ ರೈತ ಸಂಘಟನೆಗಳು ಈ ಪ್ರತಿಭಟನೆಗೆ ಮುಂದಾಗಿದ್ದು, ದೇಶದ ವಿವಿಧ ರಾಜ್ಯಗಳಲ್ಲಿ ರೈತರು ಜೂನ್ 1ರಿಂದ ಜೂನ್ 10 ರವರೆಗೆ ಪ್ರತಿಭಟನೆ ನಡೆಸಲಿದ್ದಾರೆ.

    ಹತ್ತು ದಿನಗಳ ಕಾಲ ರೈತರು ಹಾಲು ಹಾಗೂ ತಾವು ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತರುವುದಿಲ್ಲ. ಹೀಗಾಗಿ ಗ್ರಾಹಕರು ರೈತರ ಬಳಿ ಹೋಗಿ ಅವರು ಹೇಳಿದ ದರ ನೀಡಿ ಖರೀದಿಸಬೇಕು ಎಂದು ರೈತರು ಹೇಳಿದ್ದಾರೆ.

  • ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!

    ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!

    ಚಂಡಿಗಢ: ರೈತರು ವಿಧಿಸುವ ದರದಲ್ಲಿ ಹಾಲು ಮತ್ತು ತರಕಾರಿಯನ್ನು ಗ್ರಾಹಕರು ಖರೀದಿಸಬೇಕು ಎನ್ನುವ ನಿಟ್ಟಿನಲ್ಲಿ ವಿಶೇಷ ಪ್ರತಿಭಟನೆಯೊಂದು ಶುಕ್ರವಾರದಿಂದ ದೇಶದಲ್ಲಿ ಕಾಣಿಸಿಕೊಳ್ಳಲಿದೆ. ದೇಶದಲ್ಲಿ ಇಂಧನ ಬೆಲೆ ಹೆಚ್ಚಳವನ್ನು ವಿರೋಧಿಸಿ ರೈತ ಸಂಘಟನೆಗಳು ಈ ಪ್ರತಿಭಟನೆಗೆ ಮುಂದಾಗಿವೆ. ಪಂಜಾಬ್ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ರೈತರು ಜೂನ್ 1ರಿಂದ ಜೂನ್ 10 ರವರೆಗೆ ಪ್ರತಿಭಟನೆ ನಡೆಸಲಿದ್ದಾರೆ.

    ಹತ್ತು ದಿನಗಳ ಕಾಲ ರೈತರು ಹಾಲು ಹಾಗೂ ತಾವು ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತರುವುದಿಲ್ಲ. ಹೀಗಾಗಿ ಗ್ರಾಹಕರು ರೈತರ ಬಳಿ ಹೋಗಿ ಅವರು ಹೇಳಿದ ದರ ನೀಡಿ ಖರೀದಿಸಬೇಕು ಎಂದು ರೈತರು ಹೇಳಿದ್ದಾರೆ.

    ಏನಿದು ಪ್ರತಿಭಟನೆ?

    “ಗ್ರಾಮಗಳು ಮುಚ್ಚಿವೆ ಹಾಗೂ ರೈತರು ರಜೆಯಲ್ಲಿದ್ದಾರೆ” ಎನ್ನುವ ಘೋಷಣೆ ಮೇಲೆ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಪಂಜಾಬ್ ಘಟಕದ ಅಧ್ಯಕ್ಷ ಬಲ್ಬೀರ್ ಸಿಂಗ್ ರಾಜೇವಾಲ್ ಪ್ರತಿಭಟನೆ ಮುಂದಾಳತ್ವ ವಹಿಸಿದ್ದಾರೆ.

    ಕೃಷಿ ಭೂಮಿ ಉಳುಮೆ ಮಾಡಲು, ನೀರಾವರಿಗೆ ಇಂಧನದ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ಇಂಧನ ದರ ಕಡಿಮೆ ಮಾಡಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ 15 ದಿನಗಳಲ್ಲಿ ಡೀಸೆಲ್ ದರ ಗಗನಕ್ಕೆರಿದೆ. ಟ್ರ್ಯಾಕ್ಟರ್, ನೀರಾವರಿ ಹಾಗೂ ಯಂತ್ರೋಪಕರಣ ಚಾಲನೆಗೆ ಡೀಸೆಲ್ ಅಗತ್ಯವಾಗಿದೆ. ದಿನದಿಂದ ದಿನಕ್ಕೆ ಕೃಷಿ ಖರ್ಚು ಹೆಚ್ಚಾಗುತ್ತಿದೆ. ಇಂಧನ ದರ ಕಡಿಮೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಬೇಕಾಗಿದೆ ಎಂದು ಬಲ್ಬೀರ್ ಸಿಂಗ್ ರಾಜೆವಾಲ್ ಹೇಳಿದ್ದಾರೆ.

    ಪ್ರತಿಭಟನೆಯಿಂದ ರೈತರು ತಾವು ಇರುವಲ್ಲಿಯೇ ತಮ್ಮ ಉತ್ಪನ್ನಗಳಿಗೆ ಬೆಲೆ ನಿಗದಿ ಮಾಡಿ ಮಾರಬಹುದು. ಇದರಿಂದ ರೈತರು ಲಾಭ ಪಡೆಯುತ್ತಾರೆ ಮತ್ತು ನಗರದ ಜನರು ಕಡಿಮೆ ಬೆಲೆಯಲ್ಲಿ ಹಾಲು ಹಾಗೂ ತರಕಾರಿ ಪಡೆಯುತ್ತಾರೆ. ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪನ್ನ ಕಡಿಮೆಯಾಗುತ್ತದೆ. ಆಗ ಹಾಲಿನ ಬೆಲೆಯಲ್ಲಿ 7 ರೂ. ಕಡಿಮೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್ ಗೆ 22 ರೂ. ನೀಡಿ ಖರೀದಿಸಿದ ಹಾಲನ್ನು 45 ರೂ. ಮಾರುಕಟ್ಟೆ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.

    ರೈತರು ಟೊಮಾಟೊ ಹಾಗೂ ಕುಂಬಳಕಾಯಿ ಸೇರಿದಂತೆ ಅನೇಕ ತರಕಾರಿಗಳನ್ನು ಪ್ರತಿ ಕೆ.ಜಿಗೆ ಕೇವಲ 1 ರೂ., ಈರುಳ್ಳಿ 50 ಪೈಸೆ, 35 ಕೆ.ಜಿ ಕ್ಯಾಪ್ಸಿಕಂಗೆ 25 ರೂ. ನಂತೆ ಮಾರಾಟ ಮಾಡುತ್ತಿದ್ದಾರೆ. ಕೆಲವು ರೈತರು ಒಂದು ಲಾಟ್ ಮೆಣಸಿನಕಾಯಿಯನ್ನು 1,700 ರೂ. ಮಾರುತ್ತಾರೆ. ಅದರಲ್ಲಿ ಇಂಧನ ದರ ಹೊರತುಪಡೆಸಿ ಕೃಷಿ ಕಾರ್ಮಿಕರ ಕೂಲಿಯೇ 1,450 ರೂ. ಆಗುತ್ತದೆ ಎಂದು ರಾಜೇವಾಲ್ ಹೇಳಿದರು.

    ಪ್ರತಿಭಟನೆಯಿಂದ ಸ್ವಾಮಿನಾಥನ್ ಆಯೋಗದ ವರದಿ ಜಾರಿಯಾಗುತ್ತದೆ, ರೈತರ ಸಾಲ ಮನ್ನಾ, ಕನಿಷ್ಠ ಆದಾಯದ ಭದ್ರತೆ ಸಿಗುತ್ತದೆ. ಭಾರತದ ಎಲ್ಲ ರೈತರು ಒಂದೇ ಕುಟುಂಬದವರು ಒಂದೇ ಧ್ವನಿ ಹೊಂದಿದ್ದಾರೆ. ದೇಶದ ವಿವಿಧ ರೈತ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಲಿವೆ ಎಂದು ರಾಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.