Tag: puppy

  • ಗೋವಾಗೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ ಪಪ್ಪಿಯೊಂದಿಗೆ ದೆಹಲಿಗೆ ವಾಪಸ್‌

    ಗೋವಾಗೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ ಪಪ್ಪಿಯೊಂದಿಗೆ ದೆಹಲಿಗೆ ವಾಪಸ್‌

    ಪಣಜಿ: ಗೋವಾಕ್ಕೆ (Goa) ಖಾಸಗಿ ಭೇಟಿ ನೀಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi), ಜಾಕ್‌ ರಸೆಲ್‌ ಟೆರಿಯರ್‌ ನಾಯಿ ಮರಿಯೊಂದಿಗೆ ದೆಹಲಿಗೆ (New Delhi) ವಾಪಸ್‌ ಆಗಿದ್ದಾರೆ.

    ಶಿವಾನಿ ಪಿತ್ರೆ ಅವರು ತನ್ನ ಪತಿ ಸ್ಟಾನ್ಲಿ ಬ್ರಗಾಂಕಾ ಅವರೊಂದಿಗೆ ಉತ್ತರ ಗೋವಾದ ಮಾಪುಸಾ ಪಟ್ಟಣದಲ್ಲಿ ವಿವಿಧ ತಳಿಯ ಶ್ವಾನಗಳ ಮಾರಾಟ ಅಂಗಡಿ ನಡೆಸುತ್ತಿದ್ದಾರೆ. ‘ಗೋವಾಗೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ ಅವರು ಒಂದು ನಾಯಿ ಮರಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಮತ್ತೊಂದನ್ನು ಕೆಲ ದಿನಗಳ ನಂತರ ಅವರಿಗೆ ಕಳುಹಿಸಲಾಗುವುದು’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    ರಾಹುಲ್‌ ಗಾಂಧಿ ಅವರು ಗುರುವಾರ ರಾತ್ರಿ ಗೋವಾಗೆ ಭೇಟಿ ಕೊಟ್ಟಿದ್ದರು. ಪಪ್ಪಿಯೊಂದಿಗೆ ಶುಕ್ರವಾರ ಬೆಳಗ್ಗೆ ದೆಹಲಿಗೆ ವಾಪಸ್‌ ಆಗಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಉತ್ತರ ಗೋವಾದ ಮೋಪಾದಲ್ಲಿರುವ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಕಾಂಗ್ರೆಸ್ ನಾಯಕ ಮಾಪುಸಾದಲ್ಲಿ ಶ್ವಾನಗಳಿಗೆ ಶೆಲ್ಟರ್‌ಗೆ ಭೇಟಿ ನೀಡಿದ್ದರು.

    ಗೋವಾ ಶಾಸಕರು ಮತ್ತು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮಿತ್ ಪಾಟ್ಕರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಬುಧವಾರ ರಾತ್ರಿ ಹೋಟೆಲ್‌ನಲ್ಲಿ ಗಾಂಧಿ ಭೇಟಿ ಮಾಡಿದ್ದರು. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಯಿಮರಿ ಹಿಡ್ಕೊಂಡು ವರ್ಕೌಟ್ ಮಾಡಿದ ಮಮತಾ ಬ್ಯಾನರ್ಜಿ

    ನಾಯಿಮರಿ ಹಿಡ್ಕೊಂಡು ವರ್ಕೌಟ್ ಮಾಡಿದ ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನಾಯಿಮರಿಯನ್ನು (Puppy) ಹಿಡಿದುಕೊಂಡು, ಟ್ರೆಡ್‍ಮಿಲ್‍ನಲ್ಲಿ (Treadmill) ನಡೆಯುವ ವೀಡಿಯೋವೊಂದು ಹರಿದಾಡುತ್ತಿದೆ.

    ಈ ಬಗ್ಗೆ ಮಮತಾ ಬ್ಯಾನರ್ಜಿ ಅವರೇ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ಕೆಲವೊಮ್ಮೆ ಹೆಚ್ಚಿನ ಪ್ರೇರೇಪಣೆ ಅಗತ್ಯವಿರುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

     

    View this post on Instagram

     

    A post shared by Mamata Banerjee (@mamataofficial)

    ವೀಡಿಯೋದಲ್ಲಿ ಏನಿದೆ?: ಮಮತಾ ಬ್ಯಾನರ್ಜಿ ಅವರು ಬಿಳಿ ಸೀರೆಯಲ್ಲಿ ಟ್ರೆಡ್‍ಮಿಲ್‍ನಲ್ಲಿ ವಾಕಿಂಗ್ ಮಾಡುತ್ತಾ, ಒಂದು ನಾಯಿಮರಿಯನ್ನು ತಮ್ಮ ಮುಂದೆ ಹಿಡಿದುಕೊಂಡಿದ್ದಾರೆ. ನಾಯಿ ಮರಿಯನ್ನೇ ನೋಡುತ್ತಾ ವಾಕಿಂಗ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿನಾ ಬಡ್ಡಿ ಸಮೇತ ತೀರಿಸುತ್ತೇನೆ: ಮೋದಿ

    ಕಾಮೆಂಟ್‍ಗಳನ್ನು ಆಫ್ ಮಾಡಲಾಗಿದೆ, ವೀಡಿಯೊವನ್ನು 15,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅವರು ಪ್ರತಿನಿತ್ಯ ವ್ಯಾಯಾಮವನ್ನು ಮಾಡುತ್ತಾರೆ. ಇವರು 2019ರಲ್ಲಿ ಜಾಗೃತಿ ಮೂಡಿಸಲು ಡಾರ್ಜಿಲಿಂಗ್‍ನಲ್ಲಿ 10 ಕಿಮೀ ದೂರ ಜಾಗಿಂಗ್ ಮಾಡಿದ್ದರು. ಇದನ್ನೂ ಓದಿ: ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ: ಶೋಭಾ ವಾಗ್ದಾಳಿ

  • ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ಸ್ನ್ಯಾಕ್ಸ್ ಮಾಡಿ ತಿಂದ ಕುಡುಕ

    ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ಸ್ನ್ಯಾಕ್ಸ್ ಮಾಡಿ ತಿಂದ ಕುಡುಕ

    ಲಕ್ನೋ: ಕುಡುಕನೊಬ್ಬ ಮದ್ಯ (alcohol) ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ (Puppy) ಬಾಲ (Tail) ಮತ್ತು ಕಿವಿಗೆ (Ear) ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಬರೇಲಿ ಜಿಲ್ಲೆಯ ಫರೀದ್‍ಪುರ ಪ್ರದೇಶದ ಎಸ್‍ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ.

    ALCOHOL

    ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿವೆ. ಇದನ್ನೂ ಓದಿ: ಮದ್ಯಕ್ಕೆ ಸಾಲ ಕೊಡಲ್ಲ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿದ ನೆರೆಮನೆಯಾತ

    ಘಟನೆಗೆ ಸಂಬಂಧಿಸಿ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯ ಸದಸ್ಯ ಧೀರಜ್ ಪಾಠಕ್ ಎಂಬಾತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ಕುಟ್ಟಿ ಫೋಟೋಗೆ ಮನಸೋತ ಶಿಕ್ಷಕ – ಮ್ಯಾಟ್ರಿಮೊನಿ ಹೆಸರಲ್ಲಿ ಲಕ್ಷ ಲಕ್ಷ ಪೀಕಿದ ಯುವತಿ

    Live Tv
    [brid partner=56869869 player=32851 video=960834 autoplay=true]

  • ನಾಯಿ ಮರಿ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಯುವಕ

    ನಾಯಿ ಮರಿ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಯುವಕ

    ಬೆಳಗಾವಿ(ಚಿಕ್ಕೋಡಿ): ನಾಯಿಮರಿ ಜೀವ ಉಳಿಸಲು ಹೋಗಿ ಬೈಕ್ ಸವಾರನೋರ್ವ ಪ್ರಾಣ ಕಳೆದುಕೊಂಡ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದಲ್ಲಿ ನಡೆದಿದೆ.

    ಸೌರಭ್ ಕಾಶಾಳಕರ(24) ಮೃತ ದುರ್ದೈವಿ. ನಿಪ್ಪಾಣಿ ನಗರ ಹೊರ ವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದೆ. ಬೈಕ್ ಸವಾರ ಸೌರಭ್ ಮಹಾರಾಷ್ಟ್ರದ ಆಜರಾದಿಂದ ಕೊಲ್ಹಾಪುರಕ್ಕೆ ಬೈಕ್‍ನಲ್ಲಿ ಪ್ರಯಾಣಿಸುವಾಗ ರಸ್ತೆ ಮಧ್ಯದಲ್ಲಿ ನಾಯಿ ಮರಿ ಬಂದಿದೆ. ಅದನ್ನು ರಕ್ಷಿಸಲು ಹೋಗಿ ಯುವಕ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ.

    ನಾಯಿ ಮರಿಯನ್ನ ರಕ್ಷಣೆ ಮಾಡಲು ಹೋದಾಗ ಬೈಕ ಸ್ಕಿಡ್ ಆಗಿ ಡಿವೈಡರ್‍ಗೆ ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಿದ್ದಂತೆಯೇ ಹಿಂಬದಿಯಿಂದ ಬಂದ ಲಾರಿ ಆತನ ಮೈಮೇಲೆ ಹರಿದಿದೆ. ಪರಿಣಾಮ ಸೌರಭ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಪ್ಪಾಣಿ ಬಸವೇಶ್ವರ ಚೌಕ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ಚಿಕಿತ್ಸೆ ಬಗ್ಗೆ ದೂರಿದ ತಾಯಿ, ಮಗಳನ್ನು ಕೊಲ್ಲಲು ಯತ್ನಿಸಿದ ವೈದ್ಯ

    ಚಿಕಿತ್ಸೆ ಬಗ್ಗೆ ದೂರಿದ ತಾಯಿ, ಮಗಳನ್ನು ಕೊಲ್ಲಲು ಯತ್ನಿಸಿದ ವೈದ್ಯ

    – ಅಡ್ಡ ಬಂದ ನಾಯಿಮರಿ ಕತ್ತು ಹಿಸುಕಿದ
    – ಪೊಲೀಸರಿಂದ ದಂತ ವೈದ್ಯ ಅರೆಸ್ಟ್

    ಲಕ್ನೋ: ಮಗಳಿಗೆ ಸರಿಯಾಗಿ ಚಿಕಿತ್ಸೆ ಕೊಟ್ಟಿಲ್ಲವೆಂದು ತಾಯಿಯೊಬ್ಬರು ದೂರಿದ್ದಕ್ಕೆ ಸಿಟ್ಟಿಗೆದ್ದ ದಂತ ವೈದ್ಯನೋರ್ವ ಇಬ್ಬರನ್ನೂ ಕೊಲೆ ಮಾಡಲು ಯತ್ನಿಸಿ, ಅಡ್ಡ ಬಂದ ನಾಯಿ ಮರಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಘಾಜಿಯಾಬಾದ್‍ನಲ್ಲಿ ಶನಿವಾರ ಈ ಘಟನೆ ನಡೆದಿದೆ. ಆರೋಪಿಯನ್ನು ದಂತ ವೈದ್ಯ ಯಾಮಿನ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ಈತ ವಿಜಯನಗರದಲ್ಲಿ ಡೆಂಟಲ್ ಕ್ಲಿನಿಕ್ ಇಟ್ಟುಕೊಂಡಿದ್ದಾನೆ. ಕಳೆದ 6 ತಿಂಗಳಿನಿಂದ ವೈದ್ಯನ ಮನೆ ಬಳಿ ಇದ್ದ ಮಹಿಳೆಯೊಬ್ಬರು ತನ್ನ ಮಗಳ ಹಲ್ಲು ನೋವಿಗೆ ಈತನ ಬಳಿಯೇ ಚಿಕಿತ್ಸೆ ಕೊಡಿಸುತ್ತಿದ್ದರು. 6 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಬಾಲಕಿಯ ಹಲ್ಲು ನೋವು ಮಾತ್ರ ಕಡಿಮೆಯಾಗಿರಲಿಲ್ಲ.

    ಆದ್ದರಿಂದ ತಾಯಿ ಸಿದ್ದಿಕಿ ಬಳಿ ಹೋಗಿ ಜಗಳವಾಡಿದ್ದರು. ನೀವು ಸರಿಯಾಗಿ ಚಿಕಿತ್ಸೆ ಕೊಡುತ್ತಿಲ್ಲ ಎಂದು ದೂರಿದ್ದರು. ಇದರಿಂದ ಸಿಟ್ಟಿಗೆದ್ದ ವೈದ್ಯ ಶನಿವಾರ ಮಹಿಳೆ ಮನೆಗೆ ನುಗ್ಗಿ ಚಾಕುವಿನಿಂದ ತಾಯಿ, ಮಗಳನ್ನು ಕೊಲ್ಲಲು ಯತ್ನಿಸಿದನು. ಈ ವೇಳೆ ಅವರನ್ನು ರಕ್ಷಿಸಲು ಮನೆಯಲ್ಲಿ ಸಾಕಿದ್ದ ನಾಯಿ ಮರಿ ಮುಂದೆ ಬಂದು, ವೈದ್ಯನ ಕಾಲಿಗೆ ಕಚ್ಚಿತು. ಇದರಿಂದ ಮತ್ತಷ್ಟು ಕೋಪಗೊಂಡ ವೈದ್ಯ ನಾಯಿ ಮರಿಯ ಕತ್ತು ಹಿಸುಕಿ ಕೊಂದು ಹಾಕಿದನು.

    ಅಷ್ಟೇ ಅಲ್ಲದೆ ಮಹಿಳೆ ಹಾಗೂ ಆಕೆಯ ಮಗಳ ಜೊತೆ ವೈದ್ಯ ಅಸಭ್ಯವಾಗಿ ವರ್ತಿಸಿದ್ದನು, ಈ ವೇಳೆ ಮಹಿಳೆ ಕಿರುಚಾಡಿ ಅಲಾರಾಂ ಹೊಡೆದಾಗ ಅಕ್ಕಪಕ್ಕದ ಮನೆಯವರು ಬಂದು ಆರೋಪಿಯನ್ನು ಹಿಡಿದರು ಎಂದು ಪೊಲೀಸರು ತಿಳಿಸಿದರು.

    ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 354, 307 ಕಾಯ್ದೆ ಅಡಿ ಹಾಗೂ ಪ್ರಾಣಿ ಮೇಲೆ ವಿಕೃತಿ ಮೆರೆದಿದ್ದಕ್ಕೆ ಸಂಬಂಧಿಸಿದ ಪ್ರಕರಣವನ್ನು ದಾಖಲಿಸಲಾಗಿದೆ. ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶಿಸಿದ್ದಾರೆ.

  • ಬೈಕಿನಲ್ಲಿ ಹೋಗ್ತಿದ್ದಾಗಲೇ ಸಂಯುಕ್ತಾ ಹೆಗ್ಡೆ ಲಿಪ್ ಲಾಕ್

    ಬೈಕಿನಲ್ಲಿ ಹೋಗ್ತಿದ್ದಾಗಲೇ ಸಂಯುಕ್ತಾ ಹೆಗ್ಡೆ ಲಿಪ್ ಲಾಕ್

    ಬೆಂಗಳೂರು: ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಅವರು ಲಿಪ್‍ಲಾಕ್ ಮಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಸಂಯುಕ್ತಾ ತಮಿಳಿನಲ್ಲಿ ನಟಿಸಿರುವ ‘ಪಪ್ಪಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಟ್ರೈಲರ್ ನಲ್ಲಿ ಸಂಯುಕ್ತಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಲಿಪ್‍ಲಾಕ್ ದೃಶ್ಯಗಳಲ್ಲಿ ಅಭಿನಯಿಸಿದ್ದು, ಜೊತೆಗೆ ಕೆಲವು ಹಾಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪಪ್ಪಿ ಚಿತ್ರದಲ್ಲಿ ಸಂಯುಕ್ತಾ, ಹೀರೋ ವರುಣ್ ಜೊತೆ ಬೈಕಿನಲ್ಲಿ ಹೋಗುವಾಗ ಲಿಪ್‍ಲಾಕ್ ಮಾಡುವ ದೃಶ್ಯಗಳು ವೈರಲ್ ಆಗಿವೆ.

    ಮೊರಟ್ಟು ಸಿಂಗಲ್ `ಪಪ್ಪಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಂಯುಕ್ತಾ ಇದೀಗ ತಮಿಳಿನಲ್ಲಿ ಲಿಪ್‍ಲಾಕ್ ಮಾಡಿದ್ದಕ್ಕೆ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಏಕೆಂದರೆ ಈ ಹಿಂದೆ ಕನ್ನಡದ `ಮೈ ನೇಮ್ ಈಸ್ ರಾಜ್’ ಸಿನಿಮಾದಲ್ಲಿ ಸಂಯುಕ್ತಾ ಅಭಿನಯಿಸಬೇಕಿತ್ತು. ಆದರೆ ಚಿತ್ರದಲ್ಲಿ ಲಿಪ್‍ಲಾಕ್ ದೃಶ್ಯಗಳು ಇವೆ ಎಂದು ಚಿತ್ರವನ್ನು ರಿಜೆಕ್ಟ್ ಮಾಡಿದ್ದರು ಎಂದು ಚಿತ್ರತಂಡ ತಿಳಿಸಿತ್ತು.

    ಸಂಯುಕ್ತಾ ಈ ಹಿಂದೆ ತಮಿಳಿನ ‘ಕೋಮಲಿ’ ಚಿತ್ರದಲ್ಲಿ ನಟಿಸಿದ್ದರು. ಇತ್ತೀಚೆಗಷ್ಟೆ ಈ ಸಿನಿಮಾ ಬಿಡುಗಡೆಯಾಗಿದ್ದು, ಸಂಯುಕ್ತಾ ಶಾಲಾ ವಿದ್ಯಾರ್ಥಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಂಯುಕ್ತಾ ಸಾಮಾಜಿಕ ಜಾಲತಾಣದಲ್ಲೂ ಹಾಟ್ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಆದರೆ ಈಗ ಬೈಕ್ ಮೇಲೆ ಲಿಪ್‍ಲಾಕ್ ಮಾಡುವ ಮೂಲಕ ಇದೀಗ ಸುದ್ದಿಯಲ್ಲಿದ್ದಾರೆ.

  • ಅಮ್ಮನನ್ನು ಕಳೆದುಕೊಂಡ ನಾಯಿ ಮರಿಗಳಿಗೆ ಹಾಲುಣಿಸಿದ ಗೋ ಮಾತೆ

    ಅಮ್ಮನನ್ನು ಕಳೆದುಕೊಂಡ ನಾಯಿ ಮರಿಗಳಿಗೆ ಹಾಲುಣಿಸಿದ ಗೋ ಮಾತೆ

    ಳೆದ ಕೆಲವು ದಿನಗಳಿಂದ ಹಸುವೊಂದು ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.

    ಅಪಘಾತದಲ್ಲಿ ತಾಯಿಯನ್ನು ಕಳೆದುಕೊಂಡ ನಾಲ್ಕೈದು ನಾಯಿಮರಿಗಳಿಗೆ ಹಸು ತಾನಾಗಿಯೇ ಹಾಲು ನೀಡುತ್ತಿದೆ. ಸಾಮಾನ್ಯವಾಗಿ ಹಸು ನಿಂತಿದ್ದರೆ, ಅದರ ಕರು ಹಾಲು ಕುಡಿಯವಷ್ಟು ಎತ್ತರವಾಗಿರುತ್ತದೆ. ಇಲ್ಲಿ ಪುಟ್ಟ ನಾಯಿ ಮರಿಗಳಿಗೆ ಕಷ್ಟವಾಗಬಾರದು ಅಂತಾ ಗೋ ಮಾತೆ ಮಲಗಿ ಹಾಲು ನೀಡುತ್ತಿದೆ. ಘಟನೆ ನಿಖರವಾಗಿ ಎಲ್ಲಿ ನಡೆದಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲವಾದರೂ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರೀ ವೈರಲ್ ಆಗುತ್ತಿದೆ.

    ಮನುಷ್ಯರಲ್ಲಿ ನಾನು, ನೀನು ಎಂಬ ಭೇದ ಭಾವವಿರುತ್ತೆ ಹೊರತು ಪ್ರಾಣಿಗಳಲ್ಲಿರಲ್ಲ ಎಂಬುವುದಕ್ಕೆ ತಾಜಾ ಉದಾಹರಣೆ ಇಂದು ನಮ್ಮ ಮುಂದಿದೆ. ಕೆಲ ಪ್ರಾಣಿಗಳು ಪರಸ್ಪರ ಬದ್ಧವೈರಿಗಳಾಗಿದ್ದರು, ಒಂದಕ್ಕೊಂದು ಹಾಲುಣಿಸುವ ವಿಡಿಯೋಗಳನ್ನು ನಾವು ನೋಡಿರುತ್ತೇವೆ. ಜಾತಿ-ಧರ್ಮ ಎಂದು ಹೊಡೆದಾಡುತ್ತಿರುವ ಮನುಷ್ಯ ಜನ್ಮ ಕೆಲವೊಮ್ಮೆ ಮೂಕ ಪ್ರಾಣಿಗಳ ಪ್ರೀತಿ-ಸಾಮರಸ್ಯವನ್ನು ನೋಡಿ ಕಲಿಯಬೇಕಾಗುತ್ತದೆ.

    ಚೆನ್ನೈನ ಪುದುಕೊಟ್ಟೈ ಗ್ರಾಮದಲ್ಲಿ ಅನಾಥ ಮೇಕೆ ಮರಿಗೆ ಶ್ವಾನವೊಂದು ತಾಯಿಯಾಗಿತ್ತು. ಕನ್ನ ಎಂಬ ಮೇಕೆ ಮರಿ ಕೆಲ ದಿನಗಳ ಹಿಂದೆ ನಡೆದ ಗಜ ಚಂಡಮಾರುತದಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡು ಅನಾಥವಾಗಿತ್ತು. ತಬ್ಬಲಿ ಮೇಕೆಗೆ ಅದೇ ಮನೆಯಲ್ಲಿದ್ದ ಶ್ವಾನವೇ ತಾಯಿಯಾಗಿ ಆಸರೆಯಾಗಿತ್ತು.

    https://www.youtube.com/watch?v=uQca3sM_wfw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಯಿ ಮರಿ ಎತ್ತಿ ಬಿಸಾಡಿದ್ದ ವ್ಯಕ್ತಿ ವಿರುದ್ಧ ಎಫ್‍ಐಆರ್

    ನಾಯಿ ಮರಿ ಎತ್ತಿ ಬಿಸಾಡಿದ್ದ ವ್ಯಕ್ತಿ ವಿರುದ್ಧ ಎಫ್‍ಐಆರ್

    – ಮೂರು ವಾರಗಳ ನಿರಂತರ ಹೋರಾಡಿ ಕೇಸ್ ದಾಖಲಿಸಿದ ವಿದ್ಯಾರ್ಥಿಗಳು

    ಚೆನ್ನೈ: ನಾಯಿ ಮರಿಯೊಂದನ್ನು ನಿರ್ದಯವಾಗಿ ಎಸೆದಿದ್ದ ದಿನಸಿ ಅಂಗಡಿ ಮಾಲೀಕನ ವಿರುದ್ಧ ಎಫ್‍ಐಆರ್ ದಾಖಲಿಸುವಲ್ಲಿ ತಿರುಚ್ಚಿಯ ತಮಿಳುನಾಡು ಕಾನೂನು ಕಾಲೇಜು ವಿದ್ಯಾರ್ಥಿಗಳು ಯಶ್ವಸಿಯಾಗಿದ್ದಾರೆ.

    ಚೆನ್ನೈನ ಮನಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಮುರುಗನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮುರುಗನ್ ಬೇಲ್ ಪಡೆದು ಹೊರಬಂದಿದ್ದಾನೆ. ಈ ಮೂಲಕ ಕಾನೂನು ವಿದ್ಯಾರ್ಥಿಗಳು ಮೂರು ವಾರ ಹೋರಾಡಿ ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸಾಂದರ್ಭಿಕ ಚಿತ್ರ

    ಏನಿದು ಪ್ರಕರಣ?:
    ದುರ್ಗಾಯ್ ಅವೆನ್ಯೂ ರಸ್ತೆಯಲ್ಲಿ ಡಿಸೆಂಬರ್ 1ರಂದು ಘಟನೆ ನಡೆದಿದ್ದು, ಅಂದು ಆರೋಪಿ ಬಾಲಮುರುಗನ್ ತನ್ನ ಬೈಕ್ ಬಳಿ ನಿಂತಿರುತ್ತಾನೆ. ಈ ವೇಳೆ ನಾಯಿಯೊಂದನ್ನು ನಾಯಿಮರಿ ಹಿಂಬಾಲಿಸುತ್ತಿರುತ್ತದೆ. ತನ್ನ ಬಳಿಗೆ ನಾಯಿಮರಿ ಬರುತ್ತಿದ್ದಂತೆ, ಮುದ್ದಾಡಿ ಕರೆದಂತೆ ನಟಿಸಿದ ಆರೋಪಿ ಅದನ್ನು ಎತ್ತಿಕೊಂಡ ಜೋರಾಗಿ ರಸ್ತೆಯ ಮೇಲೆ ಎಸೆಯುತ್ತಾನೆ. ನೆಲಕ್ಕೆ ಅಪ್ಪಳಿಸಿದ ನಾಯಿ ನೋವಿನಿಂದ ಅರಚುತ್ತದೆ. ಈ ಶಬ್ದ ಕೇಳಿಸಿಕೊಂಡ ಕೆಲವು ನಾಯಿಗಳು ಸ್ಥಳಕ್ಕೆ ನಾಯಿ ಮರಿಯನ್ನು ಎತ್ತಿಕೊಂಡು ಹೋಗಲು ಪ್ರಯತ್ನಿಸುತ್ತವೆ.

    ಬಾಲಮುರುಗನ್ ಕೃತ್ಯವು ಸ್ಥಳದಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದನ್ನು ನೋಡಿದ್ದ ವಿದ್ಯಾರ್ಥಿನಿಯೊಬ್ಬಳು ಕಸ್ತೂರಿ ರಾಜಮಣಿ ಹಾಗೂ ಆಕೆಯ ಐವರು ಸಹಪಾಠಿಗಳಿಗೆ ಈ ವಿಷಯವನ್ನು ತಿಳಿಸಿದ್ದಾರೆ. ಎಲ್ಲರು ಸೇರಿ ಡಿಸೆಂಬರ್ 14 ರಂದು ಎಂ6 ಮನಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ದೂರು ಪಡೆದಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರು.

    ಪೊಲೀಸರು ನಿಷ್ಕಾಳಜಿ ತೊರಿದ್ದರಿಂದ ಡಿಸೆಂಬರ್ 13ರಂದು ಕಾನೂನು ವಿದ್ಯಾರ್ಥಿಗಳು ಬ್ಯೂವ್ ಕ್ರಾಸ್ ಸಂಘಟನೆಗೆ ವಿಡಿಯೋ ನೀಡಿದ್ದರು. ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಭೇಟಿ ಮಾಡಿದ್ದರೂ, ಸೂಕ್ತ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಈ ಎಲ್ಲ ಬೆಳವಣಿಗೆ ಬಳಿಕ ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾಗಿ ಮನಾಲಿ ಪೊಲೀಸ್ ಠಾಣೆಯ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದರಂತೆ.

    ಗಂಭೀರವಾಗಿ ಗಾಯಗೊಂಡಿರುವ ನಾಯಿಮರಿ ಚೇತರಿಸಿಕೊಳ್ಳುತ್ತಿದೆ. ಆರೋಪಿ ವಿರುದ್ಧ ಐಪಿಸಿ ಸೆಕ್ಸನ್ 428 (ಪ್ರಾಣಿಯ ಮೇಲೆ ಹಲ್ಲೆ) ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಆದರೆ ಬೇಲ್ ಪಡೆದು ಆರೋಪಿ ಬಾಲಮುರುಗನ್ ಹೊರಬಂದಿದ್ದಾನೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಇನ್ನೋವಾ ಕಾರಿನಲ್ಲಿ ಬಂದು ನಾಯಿ ಕಳ್ಳತನ!

    ಇನ್ನೋವಾ ಕಾರಿನಲ್ಲಿ ಬಂದು ನಾಯಿ ಕಳ್ಳತನ!

    ರಾಮನಗರ: ಇನ್ನೋವಾ ಕಾರಿನಲ್ಲಿ ಬಂದ ಕಳ್ಳರು ಮನೆಯ ಮುಂದೆ ಆಟವಾಡುತ್ತಿದ್ದ ನಾಯಿ ಮರಿಯನ್ನು ಕದ್ದೋಯ್ದ ಘಟನೆ ಇಲ್ಲಿನ ಭುವನೇಶ್ವರಿ ನಗರದಲ್ಲಿ ನಡೆದಿದೆ.

    ಭುವನೇಶ್ವರಿ ನಗರದ ನಿವಾಸಿ ಹರ್ಷ ಎಂಬವರಿಗೆ ಸೇರಿದ್ದ 25 ಸಾವಿರ ರೂ. ಮೌಲ್ಯದ ಸಿಟ್ಜ್ ನಾಯಿಮರಿಯನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲೀಕರು ಘಟನೆ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಏನಿದು ಪ್ರಕರಣ?:
    ಹರ್ಷ ಅವರ ಮನೆಯ ಮುಂದೆ ಇದೇ ತಿಂಗಳ 16ರಂದು ರಾತ್ರಿ ಸಿಟ್ಜ್ ನಾಯಿಮರಿ ಆಟವಾಡುತ್ತಿತ್ತು. ಈ ವೇಲೆ ಇಲ್ಲಿಗೆ ಇನೋವಾ ಕಾರಿನಲ್ಲಿ ಬಂದಿದ್ದ ಕಳ್ಳರು, ನಾಯಿಮರಿಯನ್ನು ಕದ್ದು ಪರಾರಿಯಾಗಿದ್ದಾರೆ. ನಾಯಿಮರಿ ಕಾಣೆಯಾಗಿದ್ದರಿಂದ ಮಾಲೀಕ ಹರ್ಷ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರೈಲು ಹರಿದರೂ, ಯಾವುದೇ ಚಿಂತೆ ಇಲ್ಲದೇ ಹಳಿಯಿಂದ ಎದ್ದು ಹೋದ ನಾಯಿಮರಿ- ವೈರಲ್ ವಿಡಿಯೋ ನೋಡಿ

    ರೈಲು ಹರಿದರೂ, ಯಾವುದೇ ಚಿಂತೆ ಇಲ್ಲದೇ ಹಳಿಯಿಂದ ಎದ್ದು ಹೋದ ನಾಯಿಮರಿ- ವೈರಲ್ ವಿಡಿಯೋ ನೋಡಿ

    ಮಂಗಳೂರು: ಅದೃಷ್ಟ ಇದ್ದರೆ ರೈಲಿನಡಿಗೆ ಬಿದ್ದರೂ ಬದುಕಿ ಬರಬಹುದು ಎನ್ನುವುದಕ್ಕೆ ನೈಜ ನಿದರ್ಶನ ಆಗುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

    ಪುತ್ತೂರಿನ ಕಬಕ ರೈಲು ನಿಲ್ದಾಣದ ಬಳಿ ನಾಯಿ ಮರಿಯೊಂದು ಹಳಿ ಮೇಲೆ ಹೋಗುತ್ತಿದ್ದಾಗ ರೈಲು ಅದೇ ಟ್ರಾಕ್ ಮೇಲೆ ಆಗಮಿಸಿದೆ. ರೈಲು ನಾಯಿ ಮರಿಯ ಮೇಲೆಯೇ ಹರಿದು ಹೋಗಿದೆ. ಆದರೆ ನಾಯಿಮರಿ ಭಯದಿಂದಲೇ ಹಳಿಯ ಮಧ್ಯಭಾಗದಲ್ಲಿ ಕುಂಟುತ್ತಾ ನಡೆಯತೊಡಗಿದೆ. ಸ್ವಲ್ಪ ಮುಂದೆ ಹೋಗಿ, ಹಳಿಯ ನಡುವಿನ ಖಾಲಿ ಜಾಗದಲ್ಲಿ ಮಲಗಿದ್ದು, ರೈಲಿನ ಅಷ್ಟೂ ಬೋಗಿಗಳು ತನ್ನ ಮೇಲಿಂದ ಹಾದುಹೋಗುವವರೆಗೂ ಮಲಗಿಬಿಟ್ಟಿತ್ತು.

    ಕೊನೆಗೆ ರೈಲು ಹೋಯಿತು ಎನ್ನುವಷ್ಟರಲ್ಲಿ, ಬದುಕಿದೆಯಾ ಬಡ ಜೀವ ಅನ್ನುವಂತೆ ಅಲ್ಲಿಂದ ಓಡಿ ಹೋಗಿದೆ. ಈ ಘಟನೆಯಲ್ಲಿ ನಿಲ್ದಾಣದಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=nz5hHbk_l4Y