Tag: purchase

  • ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ ನಟಿ ಅದಾ

    ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ ನಟಿ ಅದಾ

    ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ (Sushant Singh) ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ್ದಾರೆ ನಟಿ ಅದಾ ಶರ್ಮಾ (Adah Sharma). ಈ ಮೂಲಕ ನೀವು ನನ್ನ ಹೃದಯದಲ್ಲಿ ಇದ್ದೀರಿ ಎನ್ನುವಂತಹ ಸಂದೇಶವನ್ನೂ ಅವರು ಕೊಟ್ಟಿದ್ದಾರೆ.

    ಯುವ ನಟ ಸುಶಾಂತ್ ಸಿಂಗ್ ಮುಂಬೈನ ಮೋಂಟ್ ಬ್ಲ್ಯಾಂಕ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದರು. 2020 ಜೂನ್ 14ರಂದು ಅದೇ ಅಪಾರ್ಟ್ ಮೆಂಟ್ ನ ರೂಮ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲಿಂದ ಆ ಫ್ಲ್ಯಾಟ್ (Flat) ಖಾಲಿಯೇ ಉಳಿದಿತ್ತು. ಸುಶಾಂತ್ ಸಿಂಗ್ ಆತ್ಮ ಅಲ್ಲಿದೆ ಎಂದೂ ಹಬ್ಬಿಸಲಾಗಿತ್ತು.

     

    ಮುಂಬೈನ  ಆ ಫ್ಲ್ಯಾಟ್ ನಾಲ್ಕು ಕೋಣೆಗಳನ್ನು ಹೊಂದಿದ್ದು, ಸಮುದ್ರಕ್ಕೆ ಮುಖ ಮಾಡಿದ ಮನೆಯಾಗಿದೆ. ಒಟ್ಟು 2500 ಸ್ಕ್ವೇರ್ ಫೀಟ್ ವಿಸ್ತೀರ್ಣ ಹೊಂದಿದೆ. ಇಲ್ಲಿಯೇ ಹಲವಾರು ವರ್ಷಗಳಿಂದ ಸುಶಾಂತ್ ಸಿಂಗ್ ವಾಸವಿದ್ದರು. ಸಾವಿನ ನಂತರ ಯಾರೂ ಈ ಮನೆಯಲ್ಲಿ ಉಳಿದುಕೊಳ್ಳಲು ಇಷ್ಟ ಪಟ್ಟಿರಲಿಲ್ಲ.

  • ದಿಢೀರ್ ಭಾರೀ ಇಳಿಕೆಯಾಗಲಿದೆ ಫೋನ್ ಬೆಲೆ

    ದಿಢೀರ್ ಭಾರೀ ಇಳಿಕೆಯಾಗಲಿದೆ ಫೋನ್ ಬೆಲೆ

    ನವದೆಹಲಿ: ಅರ್ಜೆಂಟ್ ಆಗಿ ಮೊಬೈಲ್ ಕೊಳ್ಳುವ ಯೋಜನೆಯಲ್ಲಿ ನೀವಿದ್ದರೆ, ಈ ಪ್ಲ್ಯಾನ್ ಅನ್ನು ಸ್ವಲ್ಪ ದಿನಗಳ ವರೆಗೆ ಮುಂದೂಡುವುದು ನಿಮಗೂ ನಿಮ್ಮ ಜೇಬಿಗೂ ಒಳಿತಾಗುವ ಸಾಧ್ಯತೆ ಇದೆ. ಹಣಕಾಸು ವರ್ಷದ 2ನೇ ಅರ್ಧದಲ್ಲಿ ಮೊಬೈಲ್‌ಗಳ ಬೆಲೆ ಭಾರೀ ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

    ಸ್ಮಾರ್ಟ್ ಫೋನ್ ಕಂಪನಿಗಳು ಈಗಾಗಲೇ ಭಾರೀ ಪ್ರಮಾಣದಲ್ಲಿ ಮೊಬೈಲ್‌ಗಳ ಸ್ಟಾಕ್‌ಗಳನ್ನು ಇಟ್ಟುಕೊಂಡಿದ್ದು, ಮಾರಾಟವಾಗದೇ ಹಾಗೆಯೇ ಉಳಿದುಹೋಗುವ ಭೀತಿಯಲ್ಲಿವೆ. ಇನ್ನೇನು ಹಬ್ಬದ ಸೀಸನ್ ಹತ್ತಿರದಲ್ಲಿದ್ದು, ಇದರ ರಿಯಾತಿಯಿಯೊಂದಿಗೆ ಕಂಪನಿಗಳು ಸ್ಟಾಕ್‌ಗಳನ್ನು ಖಾಲಿ ಮಾಡಲು ಬೆಲೆಯನ್ನು ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಇದೇ ವರ್ಷ ಬರಲಿದೆ ಇ-ಪಾಸ್‌ಪೋರ್ಟ್ – ಹೇಗಿರಲಿದೆ? ಕೆಲಸ ಹೇಗೆ?

    ಮಾಹಿತಿ ಪ್ರಕಾರ ದಸರಾ, ದೀಪಾವಳಿ ಹಬ್ಬಗಳ ಸಮಯದಲ್ಲಿ ಮೊಬೈಲ್ ಫೋನ್‌ಗಳ ಬೆಲೆ ಇಳಿಕೆಯಾಗಲಿದೆ. ಈ ಅವಕಾಶಗಳನ್ನು ಕಂಪನಿಗಳು ಕೂಡಾ ಬಳಸಿಕೊಳ್ಳಲು ಸಜ್ಜಾಗಿದ್ದು, ತಮಗೂ ಲಾಭವಾಗುವಂತೆ ಇಎಂಐ ಮೂಲಕ ವೆಬ್‌ಸೈಟ್ ಹಾಗೂ ಆಫ್‌ಲೈನ್ ಸ್ಟೋರ್‌ಗಳಲ್ಲಿ ಮಾರಾಟ ಮಾಡಲು ಮುಂದಾಗಿವೆ.

    ಹಳೆ ಸ್ಟಾಕ್‌ಗಳನ್ನು ಖಾಲಿ ಮಾಡುವ ಉದ್ದೇಶದಿಂದ ಕಂಪನಿಗಳಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವುದು ಒಂದೇ ಪರಿಹಾರವಾಗಿದ್ದು, ಹೀಗಾಗಿ ಕಂಪನಿಗಳು ಈ ಹಾದಿಯನ್ನೇ ತುಳಿಯುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ವಿದ್ಯುತ್ ದರ ಹೆಚ್ಚಳ ಇಲ್ಲ: ಸುನಿಲ್ ಕುಮಾರ್ ಸ್ಪಷ್ಟನೆ

    ಅಂಜಾಜಿನ ಪ್ರಕಾರ 5-8 ಕೋಟಿಯಷ್ಟು ಮೊಬೈಲ್‌ಗಳ ದಾಸ್ತಾನು ಇದ್ದು, ಇದನ್ನು ಆದಷ್ಟು ಬೇಗ ಖಾಲಿ ಮಾಡುವ ಅನಿವಾರ್ಯತೆಯೂ ಇದೆ. ಮುಂದಿನ ತಿಂಗಳಿನಿಂದ ಸಾಲು ಸಾಲು ಹಬ್ಬಗಳು ಪ್ರಾರಂಭವಾಗುವುದರಿಂದ ಚೀನಾ ಮೂಲದ ಕಂಪನಿಗಳು ಸೇರಿದಂತೆ ಹಲವು ಕಂಪನಿಗಳು ಭಾರತದ ಮಾರುಕಟ್ಟೆಗೆ ಸ್ಟಾಕ್‌ಗಳನ್ನು ಸುರಿಯಬಹುದು ಎಂದು ವರದಿಯಾಗಿದೆ.

    Live Tv

  • 16 ವರ್ಷದ ಬಳಿಕ 200 ಹೊಸ ವಿಮಾನ ಖರೀದಿಗೆ ಮುಂದಾದ ಏರ್ ಇಂಡಿಯಾ

    16 ವರ್ಷದ ಬಳಿಕ 200 ಹೊಸ ವಿಮಾನ ಖರೀದಿಗೆ ಮುಂದಾದ ಏರ್ ಇಂಡಿಯಾ

    ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ 200ಕ್ಕೂ ಹೆಚ್ಚು ಹೊಸ ವಿಮಾನಗಳನ್ನು ಖರೀದಿಸಲು ಮುಂದಾಗಿದೆ. ಅವುಗಳಲ್ಲಿ ಶೇ.70 ರಷ್ಟು ಸಣ್ಣ ದೇಹವುಳ್ಳ ವಿಮಾನಗಳನ್ನು ಖರೀದಿಸಲು ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.

    ಏರ್‌ಬಸ್ ಎ350 ಅಗಲ ದೇಹದ ಏರ್‌ಕ್ರಾಫ್ಟ್ ಖರೀದಿಗೆ ಏರ್‌ಇಂಡಿಯಾ ಯೋಜನೆ ನಡೆಸಿದ್ದರೂ ಇಲ್ಲಿಯವರೆಗೆ ಖರೀದಿಸಲಾಗಿಲ್ಲ. ಇದೀಗ ಚಿಕ್ಕ ಗಾತ್ರದ ವಿಮಾನಗಳನ್ನು ಕೊಳ್ಳಲು ಏರ್ ಇಂಡಿಯಾ ವಿಮಾನ ತಯಾರಕರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿವೆ. ಇದನ್ನೂ ಓದಿ: ಮತದಾನಕ್ಕೆ ಅನುಮತಿ ನೀಡಿ- ಸುಪ್ರೀಂ ಮೊರೆ ಹೋದ ಮಲಿಕ್, ದೇಶಮುಖ್

    ಏರ್ ಇಂಡಿಯಾ 2006ರಲ್ಲಿ ಕೊನೆಯದಾಗಿ 111 ವಿಮಾನಗಳನ್ನು ಖರೀದಿಸಿತ್ತು. ಅಮೆರಿಕ ಮೂಲದ ಬೋಯಿಂಗ್ ಕಂಪನಿಯಿಂದ 86 ವಿಮಾನಗಳು ಹಾಗೂ ಏರ್‌ಬಸ್‌ನಿಂದ 43 ವಿಮಾನಗಳನ್ನು ಖರೀದಿಸಿತ್ತು. ಇದೀಗ 16 ವರ್ಷಗಳ ಬಳಿಕ ಮೊದಲ ಬಾರಿ ವಿಮಾನಗಳನ್ನು ಕೊಳ್ಳಲು ಮುಂದಾಗಿದೆ. ಇದನ್ನೂ ಓದಿ: ಮುಸ್ಲಿಂ ಹುಡುಗಿಯರು 16ನೇ ವಯಸ್ಸಿನಲ್ಲಿ ಮದುವೆಯಾಗಬಹುದು: ಹೈಕೋರ್ಟ್

    ಕಳೆದ ವರ್ಷ ಅಕ್ಟೋಬರ್ 8 ರಂದು ಏರ್‌ಲೈನ್ಸ್ ಬಿಡ್ ಅನ್ನು ಟಾಟಾ ಗ್ರೂಪ್ ಯಶಸ್ವಿಯಾಗಿ ಗೆದ್ದು, ಈ ವರ್ಷ ಜನವರಿ 27 ರಂದು ಏರ್ ಇಂಡಿಯಾವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿತು. ಇದೀಗ 200 ಹೊಸ ವಿಮಾನಗಳನ್ನು ಕೊಳ್ಳಲು ಮುಂದಾಗಿದ್ದು, ಅದರಲ್ಲಿ ಶೇ.70 ರಷ್ಟು ಚಿಕ್ಕ ವಿಮಾನಗಳು ಹಾಗೂ ಶೇ.30 ರಷ್ಟು ದೊಡ್ಡ ವಿಮಾನಗಳನ್ನು ಕೊಳ್ಳುವುದಾಗಿ ತಿಳಿಸಿದೆ.

    Live Tv

  • ಪಾಕಿಸ್ತಾನದಲ್ಲಿ ಗನ್ ತರಿಸಿಕೊಳ್ಳುವುದು ಪಿಜ್ಜಾ ಆರ್ಡರ್ ಮಾಡಿದಷ್ಟೇ ಸುಲಭ!

    ಪಾಕಿಸ್ತಾನದಲ್ಲಿ ಗನ್ ತರಿಸಿಕೊಳ್ಳುವುದು ಪಿಜ್ಜಾ ಆರ್ಡರ್ ಮಾಡಿದಷ್ಟೇ ಸುಲಭ!

    ಇಸ್ಲಾಮಾಬಾದ್: ಸಾಮಾಜಿಕ ಮಾಧ್ಯಮದ ಮೂಲಕ ಗನ್‍ಗಳನ್ನು ತರಿಸಿಕೊಳ್ಳಬಹುದು ಹಾಗೂ ಈ ಸೇವೆ ಪಾಕಿಸ್ತಾನದಾದ್ಯಂತ ಚಾಲ್ತಿಯಲ್ಲಿದೆ ಎಂಬ ಆಘಾತಕಾರಿ ವಿಷಯವನ್ನು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

    ಹೌದು, ಪಾಕಿಸ್ತಾನದಲ್ಲಿ ಗನ್‍ಗಳನ್ನು ಪಿಜ್ಜಾ ಆರ್ಡರ್ ಮಾಡಿದಷ್ಟೇ ಸುಲಭವಾಗಿ ತರಿಸಿಕೊಳ್ಳಬಹುದು ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಪಾಕಿಸ್ತಾನದಲ್ಲಿ ಜನರು ಸಾಮಾಜಿಕ ಮಾಧ್ಯಮದ ಮೂಲಕ ತಮಗಿಷ್ಟದ ಗನ್‍ಗಳನ್ನು ಆಯ್ಕೆ ಮಾಡಿ, ವಿತರಕರಿಗೆ ಫೋನ್ ಕರೆ ಮಾಡಿ, ಬೆಲೆಯ ಬಗ್ಗೆ ಚರ್ಚಿಸಿ, ಅಡ್ವಾನ್ಸ್ ನೀಡಿದರಾಯ್ತು. ಕೆಲವೇ ದಿನಗಳಲ್ಲಿ ಆರ್ಡರ್ ಮಾಡಿದ ವ್ಯಕ್ತಿಯ ಮನೆ ಮುಂದೆ ಗನ್ ಹಾಜರಿರುತ್ತದೆ. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಕೇರಳ ಸಚಿವ – ರಾಜೀನಾಮೆಗೆ ಬಿಜೆಪಿ ಆಗ್ರಹ

    ಈ ವಹಿವಾಟು ರಹಸ್ಯವಾಗಿ ನಡೆಯುತ್ತದೆ ಎಂದು ಜನರು ಭಾವಿಸಬಹುದು. ಆದರೆ ಈ ಪ್ರಕ್ರಿಯೆಗಳು ಫೇಸ್‍ಬುಕ್ ಹಾಗೂ ವಾಟ್ಸಪ್‍ಗಳಲ್ಲೇ ಯಾವುದೇ ಮುಚ್ಚು ಮರೆ ಇಲ್ಲದೆ ನಡೆಯುತ್ತದೆ ಎನ್ನುವುದು ಆಘಾತಕಾರಿ ವಿಷಯ.

    ಗನ್ ಅನ್ನು ತರಿಸಿಕೊಂಡ ಪಾಕ್ ಪ್ರಜೆಯೊಬ್ಬ ಈ ರಹಸ್ಯವನ್ನು ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದಾನೆ. 38 ಸಾವಿರ ರೂ.ಯ ಗನ್ ತರಿಸಿಕೊಳ್ಳಲು ವಿತರಕ ಯಾವುದೇ ಪರವಾನಗಿಯನ್ನೂ ಕೇಳಿರಲಿಲ್ಲ. ಫೋನ್ ಮೂಲಕವೇ ಸಂಪೂರ್ಣ ವ್ಯವಹಾರ ನಡೆದಿದ್ದು, 10 ಸಾವಿರ ರೂ.ಯನ್ನು ಮುಂಗಡ ಪಾವತಿಯಾಗಿ ನೀಡಿದ್ದ. ಗನ್ ಆತನ ಕೈಗೆ ತಲುಪಿದ ಬಳಿಕ ಉಳಿದ ಹಣವನ್ನು ಪಾವತಿ ಮಾಡಿದ್ದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಋತುಸ್ರಾವದ ರಕ್ತ ಸೇವಿಸುತ್ತೇನೆ, ಫೇಸ್ ಮಾಸ್ಕ್‌ ಆಗಿ ಬಳಸುತ್ತೇನೆ

    ಕರಾಚಿಯಲ್ಲಿ ಅತ್ಯಂತ ಸುಲಭವಾಗಿ ಗನ್ ಖರೀದಿಸುವ ಜಾಲಗಳಿವೆ ಎಂಬುದು ತಿಳಿದು ಬಂದಿದೆ. ಶಸ್ತ್ರಾಸ್ತ್ರ ವಿತರಕರ ಹಾಗೂ ಅದನ್ನು ತಲುಪಿಸುವವರ ಪ್ರತ್ಯೇಕ ಎರಡು ನೆಟ್ವರ್ಕ್‍ಗಳು ಇವೆ. ಶಸ್ತ್ರಾಸ್ತ್ರ ಪ್ರಕಾರಗಳ ಆಯ್ಕೆಯಲ್ಲಿ ಯಾವುದೇ ರೀತಿಯ ಮಿತಿಗಳಿಲ್ಲ. 9 ಎಂಎಂ ಪಿಸ್ತುಲ್‍ನಿಂದ ಹಿಡಿದು ಎಕೆ-47 ವರೆಗಿನ ಎಲ್ಲಾ ರೀತಿಯ ಅಸ್ತ್ರಗಳು ಮಾರಾಟವಾಗುತ್ತವೆ ಎಂದು ವರದಿಗಳು ತಿಳಿಸಿವೆ.

  • ಉಚಿತವಾಗಿ ಬೆಳೆ ನೀಡಿ ಉಪ್ಪಿ ಸಮಾಜ ಸೇವೆಗೆ ಸಾಥ್ ನೀಡಿದ ರೈತ

    ಉಚಿತವಾಗಿ ಬೆಳೆ ನೀಡಿ ಉಪ್ಪಿ ಸಮಾಜ ಸೇವೆಗೆ ಸಾಥ್ ನೀಡಿದ ರೈತ

    ಬೆಂಗಳೂರು: ಉಪೇಂದ್ರ ಅವರು ಮಾಡುತ್ತಿರುವ ಸಮಾಜ ಸೇವೆಗೆ ಉಚಿತವಾಗಿ ಟೊಮೇಟೋ ನೀಡುವ ಮೂಲಕವಾಗಿ ರೈತರೊಬ್ಬರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಸಿದ್ದರಾಜು ಬ್ಯಾಲಾಳು ಗ್ರಾಮದ ರೈತರು ಇಂದು 15 ಕ್ರೇಟ್ ಟೊಮೇಟೋ ಉಚಿತವಾಗಿ ಕೊಟ್ಟು ಬೇಕಾದವರಿಗೆ ಹಂಚಿ ಎಂದು ನಮಗೆಲ್ಲರಿಗೂ ಮಾದರಿಯಾದರು. ಟೊಮೇಟೋಗೆ ಹಣ ಪಡೆಯಲು ನಿರಾಕರಿಸಿದ ಬ್ಯಾಲಾಳು ಸಿದ್ದರಾಜು ತನ್ನ ಗ್ರಾಮದಲ್ಲಿ ಸಂಕಷ್ಟದಲ್ಲಿರುವ ಇಪ್ಪತ್ತು ಕುಟುಂಬಕ್ಕೆ ದಿನಸಿ ಕಿಟ್ ವಿತರಿಸುವ ಜವಾಬ್ಧಾರಿಯನ್ನು ತಾನೇ ವಹಿಸಿಕೊಂಡು ಕಿಟ್ ಕೊಂಡೊಯ್ಯುತ್ತಿದ್ದಾರೆ ಎಂದು ಉಪೇಂದ್ರ ಅವರು ಮಾದರಿ ರೈತರ ಕುರಿತಾಗಿ ಟ್ವೀಟ್ ಮಾಡುವಮೂಲಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಲಾಕ್‍ಡೌನ್ ಕಾರಣ ಸಂಪಾದನೆ ಇಲ್ಲದೇ ಕೂತಿರುವ ರೈತರು ಹಾಗೂ ಬಡವರ ಪಾಲಿಗೆ ನಟ ಉಪೇಂದ್ರ ಅವರು ನೆರವಿಗೆ ನಿಂತಿದ್ದಾರೆ. ಇದೀಗ ಉಪೇಂದ್ರ ಅವರು ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಬ್ಯಾಲಾಳು ಗ್ರಾಮದ ರೈತರೊಬ್ಬರು ಸಾಥ್ ನೀಡಿದ್ದಾರೆ. ತಾವು ಬೆಳೆದಿರುವ ಫಸಲನ್ನು ಉಚಿತವಾಗಿ ಉಪೇಂದ್ರ ಅವರ ಕೈಗೊಪ್ಪಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

    ಕೊರೊನಾ ಬಿಕ್ಕಟ್ಟಿನ ಈ ಸಮಯದಲ್ಲಿ ಸಿನಿಕಾರ್ಮಿಕರಿಗೆ, ಬಡವರಿಗೆ ದಿನಸಿ ಕಿಟ್‍ಗಳನ್ನು ನೀಡುತ್ತಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಈಗ ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಅಗತ್ಯ ಇರುವವರಿಗೆ ಹಂಚುತ್ತಿದ್ದಾರೆ. ಬೆಳೆಯನ್ನು ಖರೀದಿ ಮಾಡಿ ಅಗತ್ಯ ಇರುವವರಿಗೆ ಹಂಚಿಕೆ ಮಾಡುತ್ತಿರುವ ಉಪೇಂದ್ರ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಸೈಟ್‍ಗಾಗಿ ನೀಡಿದ ಹಣ ವಾಪಸ್ ನೀಡದ್ದಕ್ಕೆ ಶಿಕ್ಷಕ ಆತ್ಮಹತ್ಯೆ

    ಸೈಟ್‍ಗಾಗಿ ನೀಡಿದ ಹಣ ವಾಪಸ್ ನೀಡದ್ದಕ್ಕೆ ಶಿಕ್ಷಕ ಆತ್ಮಹತ್ಯೆ

    – ಡೆತ್‍ನೋಟ್‍ನಲ್ಲಿ ಆತ್ಮಹತ್ಯೆಗೆ ಕಾರಣ ಬರೆದಿಟ್ಟ

    ಬಾಗಲಕೋಟೆ: ಸೈಟ್ ಗಾಗಿ ಮುಂಗಡ ಕೊಟ್ಟ ಹಣ ವಾಪಸ್ ಕೊಡದ ಹಿನ್ನೆಲೆ ಹೈಸ್ಕೂಲ್ ಶಿಕ್ಷಕರೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಮೂಗನೂರಲ್ಲಿ ನಡೆದಿದೆ.

    ಹನುಮಂತ ಪೂಜಾರ(42) ಮನೆಯಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಕಮತಗಿ ಪಟ್ಟಣದದ ಹೊಳೆಹುಚ್ಚೇಶ್ವರ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನನ್ನ ಸಾವಿಗೆ ತಿಮ್ಮಣ್ಣ ಬಸಪ್ಪ ಹಗೆದಾಳ ಕಮತಗಿ ಕಾರಣ. ಈತ ನನಗೆ ಮೂರು ಲಕ್ಷ ಹಣ ಕೊಡಬೇಕು. ಮರಳಿ ಕೊಟ್ಟಿರೋದಿಲ್ಲ, ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಬರೆದು ವಂಚನೆ ಮಾಡಿರುವ ವ್ಯಕ್ತಿಯ ಫೋನ್ ನಂಬರ್ ಅನ್ನು ಡೆತ್ ನೋಟ್‍ನಲ್ಲಿ ಬರೆದಿದ್ದಾರೆ.

    ಕಮತಗಿ ಪಟ್ಟಣದಲ್ಲಿ ಸೈಟ್ ಖರೀದಿಮಾಡಲು ಹನುಮಂತ ಮುಂದಾಗಿದ್ದರು. ತಿಮಣ್ಣ ಅವರಿಗೆ ಸೇರಿದ ಸೈಟ್ ಇದಾಗಿದ್ದು, 12 ಲಕ್ಷಕ್ಕೆ ಮಾತುಕತೆ ಮಾಡಲಾಗಿತ್ತು. ಮುಂಗಡವಾಗಿ ತಿಮ್ಮಣ್ಣ ಹಗೆದಾಳಗೆ ಮೂರು ಲಕ್ಷ ಹಣವನ್ನು ಹನುಮಂತ ನೀಡಿದ್ದರು. ತಿಮ್ಮಣ್ಣ ಹಣ ವಾಪಸ್ ಕೇಳಿದರೆ ಕೊಟ್ಟಿರಲಿಲ್ಲ. ಇದರಿಂದ ಮನನೊಂದ ಹನುಮಂತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

  • ರೈತರು ಹೇಳಿದ್ದೇ ದರ – ಈರುಳ್ಳಿ, ಟೊಮಾಟೊ, ಕಲ್ಲಂಗಡಿ ಖರೀದಿಸಿದ ವೈ.ಎಸ್.ವಿ.ದತ್ತ

    ರೈತರು ಹೇಳಿದ್ದೇ ದರ – ಈರುಳ್ಳಿ, ಟೊಮಾಟೊ, ಕಲ್ಲಂಗಡಿ ಖರೀದಿಸಿದ ವೈ.ಎಸ್.ವಿ.ದತ್ತ

    – ಮೇಷ್ಟ್ರು ಸರಳತೆಗೆ ರೈತರು ಪಿಧಾ

    ಚಿಕ್ಕಮಗಳೂರು: ಬದುಕಿಗಾಗಿ ಬೆಳೆ ಬೆಳೆದು ಲಾಕ್‍ಡೌನ್‍ನಿಂದ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದ ರೈತರ ಹೊಲಗಳಿಗೆ ಹೋಗಿ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಾಂಕೇತಿಕವಾಗಿ ರೈತರು ಹೇಳಿದ ಬೆಲೆಗೆ ಈರುಳ್ಳಿ, ಟೊಮಾಟೊ ಹಾಗೂ ಕಲ್ಲಂಗಡಿ ಖರೀದಿಸಿದ್ದಾರೆ.

    ಒಂದೆರಡು ಎಕ್ರೆಯಲ್ಲಿ ರೈತರು ಬದುಕಿಗಾಗಿ ನಾನಾ ಬೆಳೆ ಬೆಳೆದಿರುತ್ತಾರೆ. ಬೆಲೆ ಇದ್ದಾಗ ಬೆಳೆ ಇರಲ್ಲ. ಬೆಳೆ ಇದ್ದಾಗ ಬೆಲೆ ಇರಲ್ಲ. ರಾಜ್ಯದ ರೈತರದ್ದು ಶೋಚನಿಯ ಪರಿಸ್ಥಿತಿ. ರೈತರ ಬಹುಪಾಲು ಜೀವನ ಮಧ್ಯವರ್ತಿಗಳ ಜೇಬು ಸೇರುತ್ತೆ. ಅದರಲ್ಲೂ ಲಾಕ್‍ಡೌನ್ ವೇಳೆಯಲ್ಲಂತೂ ರೈತರ ಸ್ಥಿತಿ ಹೇಳತೀರದ್ದಾಗಿದೆ. ಎಲ್ಲದಕ್ಕೂ ಸರ್ಕಾರದ ಕೈ ಕಾಯದೆ, ಜನಪ್ರತಿನಿಧಿಗಳ ನಮ್ಮ ಸಾಮಾಜಿಕ ಜವಾಬ್ದಾರಿಯೂ ಇದೆ. ಎಲ್ಲದಕ್ಕೂ ಸರ್ಕಾರವನ್ನೇ ಕಾಯೋದು ಸೂಕ್ತವಲ್ಲ. ಹಾಗಾಗಿ, ನಮ್ಮ ಅಳಿಲೂ ಸೇವೆಯೂ ಇರಲೆಂದು ರೈತರ ಹೊಲಗಳಿಗೆ ಹೋದ ಮಾಜಿ ಶಾಸಕ ವೈ.ಎಸ್.ವಿ.ದತ್ತ ರೈತರಿಂದ 15 ಟನ್ ಕಲ್ಲಂಗಡಿ, 15 ಟನ್ ಟೊಮಾಟೊ ಹಾಗೂ 10 ಟನ್ ಈರುಳ್ಳಿ ಖರೀದಿಸಿದ್ದಾರೆ.

    ಸುಮಾರು ಒಂದೂವರೆ ಲಕ್ಷ ಮೌಲ್ಯದ ಈರುಳ್ಳಿ, ಟೊಮಾಟೊ ಹಾಗೂ ಕಲ್ಲಂಗಡಿ ಖರೀದಿಸಿದ್ದು, ನಾಳೆಯಿಂದ ಕಡೂರು ಹಾಗೂ ಬೀರೂರಿನಿ ಬಡವರಿಗೆ ಈ ಬೆಳೆಯನ್ನ ಹಂಚಲು ಮುಂದಾಗಿದ್ದಾರೆ. ರೈತರ ಹೊಲಗಳಿಗೆ ಭೇಟಿ ನೀಡಿದ್ದ ವೈ.ಎಸ್.ವಿ.ದತ್ತ, ರೈತರಿಂದ ನೇರವಾಗಿ ಖರೀದಿಸಿದ್ದಾರೆ. ಅದೂ ರೈತರು ಹೇಳಿದ ದರಕ್ಕೆ. ಒಂದು ರೂಪಾಯಿ ಹಿಂದೆ-ಮುಂದೆ ಚೌಕಾಸಿ ಮಾಡದೆ ಅವರು ಹೇಳಿದ ದರಕ್ಕೆ ಖರೀದಿಸಿದ್ದಾರೆ. ಒಂದು ಲಕ್ಷ ಖರ್ಚು ಮಾಡಿ ಮೂರು ಎಕರೆಯಲ್ಲಿ ಕಲ್ಲಂಗಡಿ ಬೆಳೆದಿದ್ದ ರೈತ, ಕೊಳ್ಳುವವರಿಲ್ಲದೆ ಹೊಲದಲ್ಲೇ ಬಿಟ್ಟು ಕಂಗಾಲಾಗಿದ್ದ. ಇಂದು ವೈ.ಎಸ್.ವಿ.ದತ್ತ ಹೊಲಕ್ಕೆ ಹೋಗಿ ಕೆ.ಜಿ.ಗೆ ಏಳು ರೂಪಾಯಿಯಂತೆ 15 ಟನ್ ಕಲ್ಲಂಗಡಿ ಖರೀದಿಸಿರೊದು ರೈತನ ಆರ್ಥಿಕ ನಷ್ಟವನ್ನು ಒಂದಷ್ಟು ಕಡಿಮೆ ಮಾಡಿದೆ.

    ಸರಳ ರಾಜಕಾರಣಿ ದತ್ತ: ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಧಿಕಾರದಲ್ಲಿರಲಿ ಇಲ್ಲದಿರಲಿ. ಸರಳ ಶಾಸಕ ಎಂದೇ ಖ್ಯಾತಿ. ಎಲ್ಲೆಂದರಲ್ಲಿ ಕುಳಿತುಕೊಳ್ಳುವುದು, ಊಟ-ತಿಂಡಿ ಮಾಡೋದು ಅವರ ಸರಳತನಕ್ಕೆ ಹಿಡಿದ ಕೈಗನ್ನಡಿ. ದತ್ತ ಮೇಷ್ಟ್ರ ಇಂತಹ ಸರಳತನಕ್ಕೆ ಹಲವು ಉದಾಹರಣೆಗಳಿವೆ. ಇಂದೂ ಕೂಡ ತಾಲೂಕಿನ ಎರಡು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಬೆಳೆ ಖರೀದಿಸಿ ರೈತರೊಂದಿಗೆ ಮಾತನಾಡಿದ ಅವರ ಕಷ್ಟ-ಸುಖ ಆಲಿಸಿದ ದತ್ತ, ಗೌಡನಕಟ್ಟೆಹಳ್ಳಿಯಲ್ಲಿ ಜನರೇ ತಯಾರಿಸಿದ್ದ ಚಿತ್ರಾನ್ನ ಹಾಗೂ ಬಜ್ಜಿಯನ್ನ ಅದೇ ಜನರ ಮಧ್ಯೆ ಗೋಡಾನ್‍ನಲ್ಲಿ ಕೂತು ಊಟ ಮಾಡಿದರು. ದತ್ತ ಅವರ ಈ ನಡೆ ಹೊಸತೇನಲ್ಲದಿದ್ದರೂ, ಈ ಸರಳತನಕ್ಕೆ ಹಳ್ಳಿಯ ಜನ ಕೂಡ ಫಿದಾ ಆಗಿದ್ದಾರೆ.

  • ರೈತರಿಂದ 70 ಸಾವಿರ ಕಲ್ಲಂಗಡಿ ಖರೀದಿಸಿ ಬಡವರಿಗೆ ನೀಡಿದ ಈಶ್ವರಪ್ಪ

    ರೈತರಿಂದ 70 ಸಾವಿರ ಕಲ್ಲಂಗಡಿ ಖರೀದಿಸಿ ಬಡವರಿಗೆ ನೀಡಿದ ಈಶ್ವರಪ್ಪ

    ಶಿವಮೊಗ್ಗ: ಕೊರೊನಾ ಮಹಾಮಾರಿ ಸೋಂಕು ರೈತರಿಗೂ ಬೆಂಬಿಡದೇ ಕಾಡುತ್ತಿದ್ದು, ತಾವು ಬೆಳೆದ ಬೆಳೆ, ಹಣ್ಣುಗಳನ್ನು ಮಾರಾಟ ಮಾಡಲಾಗದೇ ರೈತರು ಒದ್ದಾಡುತ್ತಿದ್ದಾರೆ. ಈ ವೇಳೆ ಸರ್ಕಾರವೇನಾದರೂ ಸಹಾಯ ಮಾಡಲಿ ಎಂದು ಗೋಗರೆಯುತ್ತಿದ್ದಾರೆ.

    ಈ ರೀತಿಯ ಸಂದರ್ಭದಲ್ಲಿ ಹಣ್ಣು ಬೆಳೆದ ಬೆಳೆಗಾರರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಬೆಂಬಲವಾಗಿ ನಿಂತಿದ್ದು, ಸುಮಾರು 70 ಸಾವಿರ ಕಲ್ಲಂಗಡಿ ಹಣ್ಣನ್ನು ತಾವೇ ಸ್ವಂತ ಹಣದಿಂದ ಖರೀದಿ ಮಾಡಿದ್ದಾರೆ. ಜೊತೆಗೆ ಇದನ್ನು ಸಾರ್ವಜನಿಕರಿಗೆ ವಿತರಿಸುವ ಕೆಲಸ ಕೂಡ ಮಾಡುತ್ತಿದ್ದಾರೆ.

    ಹಣ್ಣು ಬೆಳೆಗಾರರಿಗೆ ನಷ್ಟವುಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸಚಿವರು ತಾವೇ ಖರೀದಿಸಿ, ರೈತರ ಕೈ ಹಿಡಿದಿದ್ದಾರೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಹಣ್ಣು ಬೆಳೆಗಾರರು ವಿವಿಧ ಹಣ್ಣುಗಳನ್ನು ಬೆಳೆದು ಕೆಲವು ಕಡೆಗಳಲ್ಲಿ ನಾಶ ಮಾಡಿದ್ದರು. ಆದರೆ ಕೆಲವು ಭಾಗದಲ್ಲಿ ಕಲ್ಲಂಗಡಿ ಬೆಳೆದು ಮಾರಾಟ ಮಾಡಲಾಗದೆ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದ ಬೆಳಗಾರರಿಗೆ ಸಚಿವ ಈಶ್ವರಪ್ಪ ಬೆನ್ನೆಲುಬಾಗಿ ನಿಂತಿದ್ದಾರೆ. ವಿವಿಧ ಬೆಳೆಗಾರರಿಂದ ಸುಮಾರು 70 ಸಾವಿರ ಕಲ್ಲಂಗಡಿ ಹಣ್ಣನ್ನು ಖರೀದಿಸಿ ಮಾನವೀಯತೆ ಮೆರೆದಿದ್ದಾರೆ.

    ಅದರಂತೆ ಇಂದು ಈ ಹಣ್ಣುಗಳ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಕೋಟೆ ಸೀತಾರಾಮಾಂಜನೇಯ ದೇವಾಲಯದ ಬಳಿ ಹಣ್ಣುಗಳು ತುಂಬಿದ್ದ ವಾಹನಗಳಿಗೆ ಚಾಲನೆ ನೀಡಿದರು. ನಗರದ 35 ವಾರ್ಡ್ ಗಳಿಗೆ ತೆರಳಿ ಅಲ್ಲಿನ ಅರ್ಹ ಬಡವರಿಗೆ ಈ ಹಣ್ಣನ್ನು ಉಚಿತವಾಗಿ ಹಂಚುವ ಕಾರ್ಯವನ್ನು ಇಂದು ಸಚಿವ ಈಶ್ವರಪ್ಪ ಮಾಡುತ್ತಿದ್ದಾರೆ.

  • 67,490 ರೂ. ನಾಣ್ಯ ನೀಡಿ ದ್ವಿಚಕ್ರ ವಾಹನ ಖರೀದಿಸಿದ- ಎಣಿಸಲು ಬೇಕಾಯ್ತು 3 ಗಂಟೆ

    67,490 ರೂ. ನಾಣ್ಯ ನೀಡಿ ದ್ವಿಚಕ್ರ ವಾಹನ ಖರೀದಿಸಿದ- ಎಣಿಸಲು ಬೇಕಾಯ್ತು 3 ಗಂಟೆ

    ಭೋಪಾಲ್: ಮಧ್ಯ ಪ್ರದೇಶದ ವ್ಯಕ್ತಿಯೊಬ್ಬರು 67,490 ನಾಣ್ಯಗಳನ್ನು ನೀಡಿ ಹೊಂಡಾ ಆಕ್ಟೀವಾ ಖರೀದಿಸಿದ್ದಾರೆ.

    ಸತ್ನಾ ನಿವಾಸಿಯಾಗಿರುವ ರಾಕೇಶ್‍ರಿಗೆ ದ್ವಿಚಕ್ರ ವಾಹನ ಬೇಕಾಗಿತ್ತು. ಈ ವೇಳೆ ಅವರು ಹೊಂಡಾ ಆಕ್ಟೀವಾ ಖರೀದಿಸಲು ನಿರ್ಧರಿಸುತ್ತಾರೆ. ಬಳಿಕ  ನಾಣ್ಯಗಳು ತುಂಬಿರುವ ಬ್ಯಾಗ್ ತೆಗೆದುಕೊಂಡು ‘ಕೃಷ್ಣ ಹೊಂಡಾ ಡೀಲರ್ ಶಿಪ್’ಗೆ ಹೋಗುತ್ತಾರೆ.

    ರಾಕೇಶ್ ಆಕ್ಟೀವಾ 125BSVI ಖರೀದಿಸಲು ನಿರ್ಧರಿಸಿದ್ದರು. ಆಕ್ಟೀವಾ ಖರೀದಿಸಿ 67,490 ರೂ. ಅನ್ನು ನಾಣ್ಯದ ರೂಪದಲ್ಲಿ ಪೇಮೆಂಟ್ ಮಾಡಿದ್ದಾರೆ. ರಾಕೇಶ್ ನೀಡಿದ ನಾಣ್ಯದ ಹಣವನ್ನು ಎಣಿಸಲು ಸಿಬ್ಬಂದಿಗೆ ಬರೋಬ್ಬರಿ ಮೂರು ಗಂಟೆ ಬೇಕಾಯಿತು. ಇದನ್ನೂ ಓದಿ: ತಾಯಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡಲು 12 ವರ್ಷದಿಂದ ನಾಣ್ಯ ಸಂಗ್ರಹಿಸ್ದ

    ಈ ಬಗ್ಗೆ ಪ್ರತಿಕ್ರಿಯಿಸಿದ ರಾಕೇಶ್, ಬೇರೆ ಕುಟುಂಬಗಳಂತೆ ನನಗೂ ಹಾಗೂ ನನ್ನ ಕುಟುಂಬದವರಿಗೂ ದೀಪಾವಳಿ ಹಬ್ಬ ತುಂಬಾನೇ ಮುಖ್ಯ. ದನ್ತೇರಸ್(ಚಿನ್ನ ಅಥವಾ ಹೊಸ ವಸ್ತು ಖರೀದಿಸುವ ದಿನ) ದಿನದಂದು ನನಗೆ ನಾನೇ ನೀಡಿದ ಉಡುಗೊರೆ ಇದು ಎಂದು ಹೇಳಿದ್ದಾರೆ.

    ಈ ಹಿಂದೆ ರಾಜಸ್ಥಾನದ ಜೋಧ್‍ಪುರ್ ನಲ್ಲಿ 17 ವರ್ಷದ ಮಗನೊಬ್ಬ 12 ವರ್ಷದಿಂದ ನಾಣ್ಯಗಳನ್ನು ಸಂಗ್ರಹ ಮಾಡಿ 13,500ರೂ ಜೋಡಿಸಿ ತನ್ನ ತಾಯಿಯ ಹುಟ್ಟುಹಬ್ಬಕ್ಕೆ ಫ್ರಿಡ್ಜ್ ಅನ್ನು ಉಡುಗೊರೆಯಾಗಿ ನೀಡಿದ್ದನು. 13,500 ನಾಣ್ಯಗಳನ್ನು ಎಣಿಸಲು ಸಿಬ್ಬಂದಿಗೆ ಬರೋಬ್ಬರಿ ನಾಲ್ಕು ಗಂಟೆ ಬೇಕಾಯಿತು.

  • ಶಾಸಕರ ಖರೀದಿ ಮಾಡಲು ಯೋಗೇಶ್ವರ್ ಗೆ 20, 30 ಕೋಟಿ ಎಲ್ಲಿಂದ ಬಂತು: ಹೆಚ್‍ಡಿಕೆ ಪ್ರಶ್ನೆ

    ಶಾಸಕರ ಖರೀದಿ ಮಾಡಲು ಯೋಗೇಶ್ವರ್ ಗೆ 20, 30 ಕೋಟಿ ಎಲ್ಲಿಂದ ಬಂತು: ಹೆಚ್‍ಡಿಕೆ ಪ್ರಶ್ನೆ

    ರಾಮನಗರ: ನಾನು ಸಿಎಂ ಆಗಿದ್ದಾಗ ಪಾಪದ ಹಣವನ್ನು ಶೇಖರಣೆ ಮಾಡಿ 10 ಜನ ಎಂಎಲ್‍ಎಗಳನ್ನು ಖರೀದಿ ಮಾಡುವುದಕ್ಕೆ ಸಾಧ್ಯವಿರಲಿಲ್ಲವೇ? 20, 30 ಕೋಟಿಯನ್ನು ಎಂಎಲ್‍ಎಗಳಿಗೆ ಕೊಟ್ಟು ಅವರನ್ನು ಖರೀದಿ ಮಾಡಿ ನನ್ನ ಸರ್ಕಾರವನ್ನು ಬೀಳಿಸಿದರು. ಅದರ ನೇತೃತ್ವವನ್ನು ಮಾಜಿ ಶಾಸಕ ಯೋಗೇಶ್ವರ್ ವಹಿಸಿಕೊಂಡಿದ್ದರು. ಅವರಿಗೆ ಆ ಹಣ ಎಲ್ಲಿಂದ ಬಂತು ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‍ಎಸ್‍ಎಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮಾತನಾಡಿದ ಅವರು ನಾನು ಮಾಡಿದ ಸಾಲಮನ್ನಾ ಯೋಜನೆ ಸರ್ಟಿಫಿಕೇಟ್ ಸಿಗಲಿಲ್ಲ. ಸಾಲ ಮನ್ನಾ ಯೋಜನೆಯನ್ನಾ ಕೆಲ ಮೀಡಿಯಾದವರು ಅಪಪ್ರಚಾರವನ್ನ ಮಾಡಿದರು. ನಾನು ಸಾಲಮನ್ನಾ ಮಾಡುವ ಮೂಲಕ ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಕೆಲಸಕ್ಕೆ ಕೈಹಾಕಲಿಲ್ಲ ಎಂದು ಹೇಳಿದರು.

    224 ಕ್ಷೇತ್ರಗಳಲ್ಲಿ ಎಷ್ಟು ಕುಟುಂಬಗಳಿಗೆ ಸಾಲಮನ್ನಾ ಯೋಜನೆಯ ಪಲಾನುಭವಿಗಳಿದ್ದಾರೆ ಎಂಬ ಬುಕ್ ಮಾಡುತ್ತಿದ್ದು ಅದನ್ನ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ. ಆಗಲಾದರೂ ಮಾಧ್ಯಮದವರು ಏನ್ ಮಾಡುತ್ತಾರೆ ನೋಡೋಣ? ಅಧಿಕಾರದಿಂದ ಕೆಳಗಿಳಿದು ಬರುವಾಗ ಸಂತೋಷದಿಂದಲೇ ಬಂದೆ. ಇದೀಗ ಉತ್ತರ ಕರ್ನಾಟಕದಲ್ಲಿ ಜನ ಬೀದಿಗೆ ಬಿದ್ದಿದ್ದಾರೆ ಮಕ್ಕಳು ಶಾಲೆಗೆ ಹೋಗಲಾಗ್ತಿಲ್ಲ. ಸರ್ಕಾರಕ್ಕೆ ಅವರ ಬಗ್ಗೆ ಗಮನವಿಲ್ಲ ಎಂದು ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದರು.

    ನಾನು ಸಿಎಂ ಸ್ಥಾನದಲ್ಲಿ ಕೂತು ಪಾಪದ ಹಣ ಶೇಖರಣೆ ಮಾಡಿ 10 ಶಾಸಕರನ್ನು ಖರೀದಿ ಮಾಡಿ ಸರ್ಕಾರವನ್ನು ಉಳಿಸಿಕೊಳ್ಳಬಹುದಿತ್ತಲ್ವಾ. ಸರ್ಕಾರ ಬೀಳಿಸೋಕೆ ಲೀಡರ್ ಶಿಪ್ ವಹಿಸಿದ್ದು ಚನ್ನಪಟ್ಟಣದ ಮಾಜಿ ಶಾಸಕ ಯೋಗೇಶ್ವರ್. ಅವರಿಗೆ 20, 30 ಕೋಟಿ ಶಾಸಕರಿಗೆ ನೀಡೋಕೆ ಹಣ ಎಲ್ಲಿಂದ ಬಂತು? ಯಾವ ಪುರುಷಾರ್ಥಕ್ಕೆ ಸರ್ಕಾರವನ್ನು ಬೀಳಿಸಿದರು ಎಂದು ಪ್ರಶ್ನಿಸಿದರು.