Tag: purushottama bilimale

  • ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಹೆಸರಿಡಲಿ: ಪುರುಷೋತ್ತಮ ಬಿಳಿಮಲೆ

    ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಹೆಸರಿಡಲಿ: ಪುರುಷೋತ್ತಮ ಬಿಳಿಮಲೆ

    – ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಹೆಸರು ಯಾಕೆ ಇಡಬೇಕು?

    ಕಾರವಾರ : ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯನ್ನು ಮಂಗಳೂರು (Mangaluru) ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು (Tulunadu) ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ಹೇಳಿದ್ದಾರೆ.

    ಕಾರವಾರದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಸ್ಥಳದ ಹೆಸರನ್ನು ಯಾರು ಕೂಡ ಬದಲಿಸಬಾರದು. ಹೊಸ ಜಿಲ್ಲೆಯನ್ನು ಮಾಡುವುದಾದರೇ ಯಾವ ಹೆಸರನ್ನಾದರೂ ಇಡಲಿ. ಕನ್ನಡ ಎಂದಿದ್ದಕ್ಕೆ ಕರ್ನಾಟಕ ಏಕೀಕರಣದ (Unification of Karnataka) ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ ಕಾಸರಗೋಡು (Kasaragod) ಬೇರೆಯಾಗಿರುತ್ತಿರಲಿಲ್ಲ ಎಂದರು.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಗಡಿ ನಾಡು ಉತ್ಸವ ಮಾಡಲಾಗುವುದು. ಕನ್ನಡ ಹೊರತು ಪಡಿಸಿ ಅನ್ಯ ಭಾಷಿಕರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದೆ. ಬೇರೆ ರಾಜ್ಯಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.  ಇದನ್ನೂ ಓದಿ: ದರ್ಶನ್ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ ಸುಪ್ರೀಂ

     

    36 ಗಂಟೆಯಲ್ಲಿ ಕನ್ನಡ ಕಲಿಯುವ ಯೋಜನೆ ರೂಪಿಸಿದ್ದೇವೆ. ಈಗಾಗಲೇ ಬೆಂಗಳೂರಿನಲ್ಲಿ 22 ಕಡೆ ಕನ್ನಡ ಕಲಿಕಾ ಕೇಂದ್ರ ಆರಂಭಿಸಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಕನ್ನಡದ ಐತಿಹಾಸಿಕ ಕುರುಹು ಇವೆ. ಐತಿಹಾಸಿಕ ಸ್ಥಳಗಳ ಕುರಿತು ಸಾರ್ವಜನಿಕರಿಗೆ ತಿಳಿಯುವಂತೆ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿ ಬಹಳ ವರ್ಷ ಕಳೆದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಮಾಡಲು ನಾವು ಆಗ್ರಹ ಮಾಡುತ್ತೇವೆ ಎಂದರು.

    10ನೇ ತರಗತಿಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಫೇಲಾದವರು ಮಂಡ್ಯ, ಮೈಸೂರು ಭಾಗದವರೇ ಹೆಚ್ಚು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆ ಮಾತು ಕನ್ನಡ ಇರದೆ ಇದ್ದರೂ ಕನ್ನಡ ಭಾಷೆಯಲ್ಲಿ ಮಕ್ಕಳ ಪಾಸ್ ಆಗಿರುವ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು. ಇದನ್ನೂ ಓದಿ: ನಕಲಿ ಬಿಲ್ ಪಾವತಿಗಾಗಿ ಹಿರಿಯ ಅಧಿಕಾರಿಗಳ ಕಿರುಕುಳ ಮಹಿಳಾ ಎಂಜಿನಿಯರ್ ಸೂಸೈಡ್

    ರಾಜ್ಯದಲ್ಲಿ ಕನ್ನಡ ಲಿಪಿಯ ಫಾಂಟ್ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ‌ .ಎ.ಐ ತಂತ್ರಜ್ಞಾನದ ಅನ್ಯ ಭಾಷೆಯಿಂದ ಕನ್ನಡಕ್ಕೆ ಭಾಷಾಂತರದ ಆಪ್ ಸಹ ಅಭಿವೃದ್ಧಿ ಮಾಡಲಾಗುತಿದ್ದು ನವೆಂಬರ್‌ನಲ್ಲಿ ಬಿಡುಗಡೆ ಮಾಡುತ್ತೇವೆ. ಬ್ಯಾಂಕ್ ಸಿಬ್ಬಂದಿ ಕನ್ನಡ ಮಾತನಾಡದಿರುವುದರಿಂದ ರಾಜ್ಯದಲ್ಲಿ 6 ಎಫ್‌ಐಆರ್‌ ದಾಖಲುಮಾಡಲಾಗಿದೆ ಎಂದು ಅವರು ಹೇಳಿದರು.

  • ಸಾಹಿತ್ಯ ಸಮ್ಮೇಳನ ವಿರೋಧಿಸಿ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ: ಪುರುಷೋತ್ತಮ ಬಿಳಿಮಲೆ

    ಸಾಹಿತ್ಯ ಸಮ್ಮೇಳನ ವಿರೋಧಿಸಿ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ: ಪುರುಷೋತ್ತಮ ಬಿಳಿಮಲೆ

    – ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಆಕ್ರೋಶ
    – ಈಗಿನ ಕಸಾಪ ಅಧ್ಯಕ್ಷರು ಸಾಹಿತಿಯೇ ಅಲ್ಲ ಎಂದ ಬಿಳಿಮಲೆ

    ಬೆಂಗಳೂರು: ಹಾವೇರಿ (Haveri) ಜಿಲ್ಲೆಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಪರ್ಯಾಯವಾಗಿ ಭಾನುವಾರ (ಜ.8) ಬೆಂಗಳೂರಿನಲ್ಲಿ ಜನಸಾಹಿತ್ಯ ಸಮ್ಮೇಳನ (Janasahitya Sammelana) ನಡೆಸಲಾಗುವುದು ಎಂದು ದೆಹಲಿಯ ಜೆಎನ್‌ಯು ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ (Purushottama Bilimale) ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಕೆ.ಆರ್‌. ವೃತ್ತದಲ್ಲಿರುವ ಅಲುಮ್ನಿ ಅಸೋಸಿಯೇಷನ್‌ ಆವರಣದಲ್ಲಿ ಸಮ್ಮೇಳನ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ, ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಬೊಮ್ಮಾಯಿ

    ಈಗಿನ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು ಸಾಹಿತಿಗಳಲ್ಲ, ಸಾಹಿತ್ಯ ಸಂಘಟಕರೂ ಅಲ್ಲ. ಸರ್ಕಾರ ಅನುದಾನ ಕೊಡುತ್ತೆ ಅಂತಾ ಯಾವುದೇ ಸಂಸ್ಥೆಗಳು ಅಡಿಯಾಳು ಆಗಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈಗಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಕೋಮುವಾದಿ. ಅದು ಸರ್ಕಾರಕ್ಕೆ ಕೂಡ ಬೇಕಾಗಿದೆ. ಮಹೇಶ್ ಜೋಷಿ ಕೋಮುವಾದಿ ಅನ್ನೋದರಲ್ಲಿ ಯಾವುದೇ ಸಂದೇಹವಿಲ್ಲ. ಕನ್ನಡ ಸಾಹಿತ್ಯ ಪರಿಷತ್‌ನ ಇವತ್ತಿನ ಕಾರ್ಯಕ್ರಮದಲ್ಲಿ ಮಹೇಶ್ ಜೋಷಿ ಮಗಳ ಡ್ಯಾನ್ಸ್ ಇದೆ. ಮಾನಸ ಜೋಷಿ ಡ್ಯಾನ್ಸ್‌ಗೆ ಅವಕಾಶ ಕೊಟ್ಟಿದ್ದಾರೆ. ಅಧ್ಯಕ್ಷರು ಅವರೇ ಆಗಿರುವಾಗ ಮಗಳಿಗೆ ಅವಕಾಶ ಕೊಡ್ತಾರೆ. ಹೀಗೆ ಹಲ್ಲು ಕಿರಿದುಕೊಂಡು ಸರ್ಕಾರದ ಪಾದದಡಿಯಲ್ಲಿ ಸಂಸ್ಥೆಯನ್ನು ಇಡೋದು ಸರಿಯಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ಕಳಸಾ ಬಂಡೂರಿ – ಇನ್ನೂ 60 ದಿನಗಳಲ್ಲಿ ಒಳ್ಳೆ ಸುದ್ದಿ‌ ಕೊಡ್ತೇವೆ: ಮುನೇನಕೊಪ್ಪ

    ಬೆಂಗಳೂರಿನ ಸಮಾವೇಶದ ಬಳಿಕ ಉತ್ತರ ಕರ್ನಾಟಕದಲ್ಲಿಯೂ ಸಮಾವೇಶ ಮಾಡುತ್ತೇವೆ. ಜಿಲ್ಲಾವಾರು ಸಮಾವೇಶಗಳನ್ನು ಆಯೋಜನೆ ಮಾಡಲಿದ್ದೇವೆ. ಪ್ರಭುತ್ವವನ್ನು ಎಚ್ಚರಿಸುವ ಕೆಲಸ ಮಾಡಬೇಕು. ಆದ್ರೇ ಇದು ಈಗ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k