Tag: Pushpa Amarnath

  • ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

    ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

    ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಅತಿಹೆಚ್ಚು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ (Umashree) ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರಲ್ಲಿ ಮನವಿ ಮಾಡಿದ್ದಾರೆ.

    ಕಾಂಗ್ರೆಸ್ ಮಹಿಳಾ ಘಟಕದಿಂದ (Karnataka Pradesh Mahila Congress) ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ `ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ಬೆಂಗಳೂರು ಅರಮನೆ ಮೈದಾನದಲ್ಲಿ (Bengaluru Palace Ground) ಜನವರಿ 16ರಂದು `ನಾ ನಾಯಕಿ’ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ನ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿರೂ ಸೇರಿದಂತೆ ಎಲ್ಲರೂ ಬರಲಿದ್ದಾರೆ. ಇದೇ ವೇಳೆ ಮಹಿಳಾ ಘಟಕದ ಹಲವು ಬೇಡಿಕೆಗಳನ್ನ ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಾಲಿಗೂ ಬೇಗ ಮದುವೆ ಆಗೋಕೆ ಹೇಳಿದ್ದೇನೆ: ವಸಿಷ್ಠ ಸಿಂಹ

    ಈ ಬಾರಿ ವಿಧಾನಸಭೆ ಚುನಾವಣೆಗೆ 109 ಮಹಿಳೆಯರು ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಹಾಕಿದ್ದಾರೆ. ಈ ಬಾರಿ ಕಾಂಗ್ರೆಸ್ ನಿಂದ ಹೆಚ್ಚು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಬೇಕು. ಈ ಬಗ್ಗೆ `ನಾ ನಾಯಕಿ’ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಮಹಿಳಾ ಘಟಕದ (Karnataka Pradesh Mahila Congress) ಅಧ್ಯಕ್ಷೆ ಪುಷ್ಪಾ ಅಮರನಾಥ್ (Pushpa Amarnath) ಮಾತನಾಡಿ, ಮಹಿಳೆಯರಿಗಾಗಿ ವಿಶೇಷ ಹಾಗೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಈಗಾಗಲೇ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಲ್ಲಾಜಮ್ಮ ಸೇರಿದಂತೆ ಇತರ ಮಹಿಳಾ ನಾಯಕಿಯರು ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಾವುದೇ ಸೇಡಿನ ರಾಜಕೀಯ ಮಾಡ್ತಿಲ್ಲ: ಪುಷ್ಪಾ ಅಮರನಾಥ್

    ಯಾವುದೇ ಸೇಡಿನ ರಾಜಕೀಯ ಮಾಡ್ತಿಲ್ಲ: ಪುಷ್ಪಾ ಅಮರನಾಥ್

    ಬೆಂಗಳೂರು: ಪ್ರಚಾರಕ್ಕಾಗಿ ನಮ್ಮ ಮೇಲೆ ಕೆಲವರು ಆರೋಪ ಮಾಡ್ತಿದ್ದಾರೆ. ನಾನು ಅಧ್ಯಕ್ಷೆಯಾಗಿ ಇರಬೇಕಾ..? ಬೇಡವಾ..? ಅಂತ ಪಕ್ಷದ ನಾಯಕರು, ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ಕೆಪಿಸಿಸಿ (KPCC) ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ (Pushpa Amarnath) ಹೇಳಿದ್ದಾರೆ.

    ಮಹಿಳಾ ಘಟಕದ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕೋಸ್ಕರ, ಚುನಾವಣೆಗಾಗಿಯೇ ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲಾ ನಾಯಕರ ಅನುಮತಿ ಪಡೆದು ನಿರ್ಧಾರ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಅವರು ನಮ್ಮ ಇನ್ ಚಾರ್ಜ್. ಅವರ ಅನುಮತಿ ಪಡೆದು ನಿರ್ಧಾರ ಮಾಡಿದ್ದೇವೆ ಎಂದರು.

    ನಮ್ಮಲ್ಲಿ ಜಾತಿನೇ ಇಲ್ಲ. ನಮ್ಮ ಮನೆಯವರು ಬಂಟರು, ಈಗ ನಮ್ಮ ಕುಟುಂಬಕ್ಕೆ ಗೌಡ ಮನೆತನದಿಂದ ಮದುವೆ ಆಗ್ತಿದೆ. ನಾನು ಯಾವತ್ತೂ ಜಾತಿ ಇಟ್ಟುಕೊಂಡು ಕೆಲಸ ಮಾಡಿಲ್ಲ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗಮನಕ್ಕೆ ಬಾರದೇ ಏನೂ ಆಗಲ್ಲ. ಅವರ ಅನುಮತಿ ಪಡೆದೇ ಎಲ್ಲಾ ಮಾಡಿದ್ದೇನೆ. ಕೆಲವರು ಪ್ರಚಾರಕ್ಕೆ ನನ್ನ ಮೇಲೆ ಆರೋಪ ಮಾಡ್ತಿದ್ದಾರೆ ಅಂತ ತಮ್ಮ ವಿರುದ್ಧ ಪ್ರತಿಭಟನೆ ಮಾಡಿದವರ ವಿರುದ್ಧ ಅಸಮಾಧಾನ ಹೊರ ಹಾಕಿದ್ರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ಇಂಗ್ಲಿಷ್‌ ವೆಬ್‌ಸೈಟ್‌ ಲೋಕಾರ್ಪಣೆ

    ನಾನು ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ದೇನೆ. ಚುನಾವಣೆ ವರ್ಷ ಆಗಿರೋದ್ರೀಂದ ಸಿದ್ದರಾಮಯ್ಯ ಅನುಮತಿ ಪಡೆದೇ ಕೆಲವು ಬದಲಾವಣೆ ಮಾಡಿದ್ದೇವೆ. ನಾನು ಅಧ್ಯಕ್ಷೆಯಾಗಿ ಇರಬೇಕಾ ಬೇಡವಾ ಅಂತ ಪಕ್ಷ, ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ ಅಂತ ತಿಳಿಸಿದರು. ಈಗ 5-6 ಅಧ್ಯಕ್ಷರ ಬದಲಾವಣೆ ಮಾಡಿದ್ದೇವೆ. ಕೆಲಸ ಮಾಡ್ತಿಲ್ಲ ಅಂತ ಬದಲಾವಣೆ ಮಾಡಿದ್ದೇವೆ ಅಷ್ಟೆ. ಮಹಿಳಾ ಕಾಂಗ್ರೆಸ್ ಗೆ ಹಗಲು ರಾತ್ರಿ ನಾನು ಕೆಲಸ ಮಾಡ್ತಿದ್ದೇನೆ. ಕುಟುಂಬ ಬಿಟ್ಟು ಕೆಲಸ ಮಾಡ್ತಿದ್ದೇನೆ. ನಾನು ಪಕ್ಷದ ಹಿತಕ್ಕಾಗಿ ಕೆಲಸ ಮಾಡ್ತಿದ್ದೇನೆ. ಯಾವುದೇ ಸೇಡಿನ ರಾಜಕೀಯ ಮಾಡ್ತಿಲ್ಲ ಎಂದರು.

    ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ 6 ತಿಂಗಳಿಂದ ನಡೀತಿತ್ತು. ಈಗ ಆಗಿದೆ. ಕೆಲವು ಕಡೆ ಮಹಿಳಾ ಅಧ್ಯಕ್ಷರೇ ಬರೋದಿಲ್ಲ. ಹೀಗಾಗಿ ಬದಲಾವಣೆ ಮಾಡಿದ್ದೇವೆ. ಸಸಯಾರನ್ನು ಕಿತ್ತು ಹಾಕಿ ಮನೆಯಿಂದ ಕಳಿಸೊಲ್ಲ. ಹೆಚ್ಚಿನ ಜವಾಬ್ದಾರಿ ಕೊಡ್ತೀವಿ. ಎಲ್ಲರೂ ಅಸಮಾಧಾನ ಬಿಟ್ಟು ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಸಚಿವ ಸ್ಥಾನ ಕೊಟ್ರೆ ಮಹಿಳೆಯರೇ ಪುರುಷರಿಗಿಂತ ಚೆನ್ನಾಗಿ ಕೆಲಸ ಮಾಡ್ತಾರೆ- ಪುಷ್ಪಾ ಅಮರನಾಥ್

    ಸಚಿವ ಸ್ಥಾನ ಕೊಟ್ರೆ ಮಹಿಳೆಯರೇ ಪುರುಷರಿಗಿಂತ ಚೆನ್ನಾಗಿ ಕೆಲಸ ಮಾಡ್ತಾರೆ- ಪುಷ್ಪಾ ಅಮರನಾಥ್

    ಕೊಪ್ಪಳ: ಸಚಿವ ಸಂಪುಟದಲ್ಲಿ ಮಹಿಳಾ ಶಾಸಕಿಯರಿಗೆ ಸ್ಥಾನ ಕೊಟ್ರೆ ಪುರುಷರಿಗಿಂತ ಚೆನ್ನಾಗಿ ಕೆಲಸ ಮಾಡ್ತಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.

    ಕಾಂಗ್ರೆಸ್‍ನಲ್ಲಿ ಐದು ಜನ ಮಹಿಳಾ ಶಾಸಕಿಯರಿದ್ದಾರೆ. ಡಿಸೆಂಬರ್ 22 ರಂದು ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಶಾಸಕಿಯರಿಗೆ ಅವಕಾಶ ನೀಡಬೇಕು. ಪುರುಷರಿಗಿಂತ ಮಹಿಳೆಯರು ಜಾಸ್ತಿ ಕೆಲಸ ಮಾಡ್ತಾರೆ. ಐದು ಜನರಿಗೆ ಸಚಿವ ಸ್ಥಾನ ಕೊಟ್ರೂ ನಾನು ಖುಷಿ ಪಡ್ತೀನಿ, ಎಲ್ಲರು ಯಶಸ್ವಿಯಾಗಿ ಕೆಲಸ ಮಾಡ್ತಾರೆ ಅಂತ ನಂಬಿಕೆ ಇದೆ ಎಂದು ಪುಷ್ಪಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪುರುಷರಿಗಿಂತ ಚೆನ್ನಾಗಿ ಮಹಿಳೆಯರೇ ಕೆಲಸ ಮಾಡ್ತಾರೆ ಎಂದು ನಾನು ಸಾರಿ ಸಾರಿ ಹೇಳ್ತೀನಿ. ಐದು ಜನರಿಗೆ ಸಚಿವ ಸ್ಥಾನ ಕೊಟ್ರೆ ನಾವು ಹಬ್ಬ ಮಾಡ್ತೀವಿ. ಆದ್ರೆ ಉತ್ತರ ಕರ್ನಾಟಕಕ್ಕೆ ಹೆಚ್ಚು ಸ್ಥಾನ ಕೊಡಬೇಕು ಎಂದು ಹಿರಿಯ ನಾಯಕರು ನಿರ್ಧರಿಸಿದ್ದಾರೆ. ಹಾಗಾಗಿ ಮಹಿಳಾ ಶಾಸಕಿಯರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯ ರೀತಿ ಕೆಲಸ ಮಾಡ್ತೀವಿ ಅಂತ ಭರವಸೆ ನೀಡಿದ್ದಾರೆ.

    ಸಚಿವ ಸಂಪುಟದಿಂದ ಜಯಮಾಲಾ ಅವರನ್ನು ಕೈಬಿಡೋ ವಿಚಾರ ನನಗೆ ಗೊತ್ತಿಲ್ಲ, ಯಾವುದೇ ಮಾಹಿತಿ ಇಲ್ಲ. ನಾನು ಮಹಿಳೆಯರಿಗೆ ಅವಕಾಶ ಮಾಡಿಕೊಡಿ ಎಂದು ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದೇನೆ ಎಂದ ಪುಷ್ಪಾ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    – ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್ ನೇಮಕ

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಳಗಿಳಿಸಿ, ಪುಷ್ಪಾ ಅಮರನಾಥ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

    ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತವಾಗಿ ತೆರೆ ಬಿದ್ದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಧ್ಯಕ್ಷ ಪಟ್ಟದಿಂದ ಕೆಳಗಿಳಿಸುವಂತೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಸಹೋದರರು ಬೇಡಿಕೆ ಇಟ್ಟಿದ್ದರು. ಈಗ ಹೈ ಕಮಾಂಡ್ ಈ ಬೇಡಿಕೆಗೆ ಅಸ್ತು ಅಂದಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಳಗಡೆ ಇಳಿಸುವ ವಿಚಾರ ಚರ್ಚೆ ಆಗುತ್ತಿದ್ದಂತೆ ಅಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿತ್ತು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದರು. ಇದಾದ ಕೆಲವೇ ದಿನಗಳ ನಂತರ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನು ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದರು. ಈ ಎಲ್ಲ ಪ್ರಕ್ರಿಯೆ ಮೂಲಕ ಪುಷ್ಪಾ ಅಮರನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv