Tag: puttannaiah

  • ಚುನಾವಣೆಗೆ ಸ್ಪರ್ಧಿಸ್ತಾರಾ ಪುಟ್ಟಣ್ಣಯ್ಯ ಪುತ್ರ ದರ್ಶನ್?

    ಚುನಾವಣೆಗೆ ಸ್ಪರ್ಧಿಸ್ತಾರಾ ಪುಟ್ಟಣ್ಣಯ್ಯ ಪುತ್ರ ದರ್ಶನ್?

    ಮಂಡ್ಯ: ರೈತ ಹೋರಾಟಗಾರ, ಶಾಸಕ ಪುಟ್ಟಣ್ಣಯ್ಯ ವಿಧಿವಶರಾಗ್ತಿದ್ದಂತೆ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಮುಂದಿನ ಚುನಾವಣೆಗೆ ಸ್ಪರ್ಧಿಸ್ತಾರಾ ಎಂಬ ಪ್ರಶ್ನೆ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ದರ್ಶನ್ ಪುಟ್ಟಣ್ಣಯ್ಯ, ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ನಾನು ಇನ್ನೂ ನಿರ್ಧರಿಸಿಲ್ಲ. ಹಸಿರುಸೇನೆ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ಚರ್ಚಿಸಿ ತೀರ್ಮಾನಿಸ್ತೀನಿ ಎಂದು ಹೇಳಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ದರ್ಶನ್, ಪುಟ್ಟಣ್ಣಯ್ಯ ಅವರ ಹನ್ನೊಂದನೇ ದಿನದ ಕಾರ್ಯವನ್ನು, ಅವರ ಆದರ್ಶಕ್ಕೆ ತಕ್ಕಂತೆ ‘ತಿಥಿ ಬಿಡಿ-ಸಸಿ ನೆಡಿ’ ಎಂಬ ಕಾರ್ಯಕ್ರಮದ ಮೂಲಕ ವಿನೂತನವಾಗಿ ನೆರವೇರಿಸೋದಾಗಿ ಹೇಳಿದರು. ಫೆಬ್ರವರಿ 28 ರಂದು ಹನ್ನೊಂದನೇ ದಿನದ ಕಾರ್ಯವನ್ನು ಸಸಿ ನೆಡುವ ಮೂಲಕ ಕ್ಯಾತನಹಳ್ಳಿಯಲ್ಲಿ ಆಚರಿಸಲಾಗುವುದು ಎಂದು ತಿಳಿಸಿದ್ರು. ಪುಟ್ಟಣ್ಣಯ್ಯ ಅವರ ಹೋರಾಟಕ್ಕೆ ಗೌರವವಾಗಿ ರೈತರು ಸಂಜೆ ನುಡಿ ನಮನ ಸಲ್ಲಿಸಲಿದ್ದಾರೆ. ಕಾಯಕ ಪ್ರಶಸ್ತಿ ವಿತರಿಸುವುದರ ಜೊತೆಗೆ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ರು. ಇದೇ ಸಂದರ್ಭದಲ್ಲಿ ಪುಟ್ಟಣ್ಣಯ್ಯ ಅವರ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವ ಬಗ್ಗೆ ಕುಟುಂಬ ವರ್ಗ ತೆಗೆದುಕೊಳ್ಳುತ್ತಿರುವ ತೀರ್ಮಾನದ ಬಗ್ಗೆಯೂ ದರ್ಶನ್ ಮಾತನಾಡಿದ್ರು.

    ನಾನು ರೈತ ಪರ ಚಳುವಳಿಗೆ ಧುಮುಕುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಪುಟ್ಟಣ್ಣಯ್ಯ ಕುಟುಂಬದಿಂದ ಮುಂದೆ ಯಾರಾದರೂ ಚುನಾವಣೆಗೆ ನಿಲ್ಲುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈಗಷ್ಟೇ ತಂದೆ ವಿಧಿವಶರಾಗಿದ್ದಾರೆ. ನಾನು ಅಮೆರಿಕದಲ್ಲಿ ಇದ್ದರೂ ರೈತ ಪರ ಕಾಳಜಿ ಯಾವಾಗಲೂ ಇದೆ. ಈಗ ಅವರು ಇಲ್ಲದಿದ್ದಾಗ ನಾವು ಒಂದಷ್ಟು ಬದಲಾವಣೆ ಮಾಡಿಕೊಳ್ಳಬೇಕಿದೆ. ವಿದೇಶದಲ್ಲಿ ಒಂದಷ್ಟು ಕಂಪೆನಿ ನಡೆಸುತ್ತಿದ್ದೇನೆ. ಇಲ್ಲಿಗೆ ವಾಪಸ್ ಬರಬೇಕಾದ್ರೆ ಏನು ಮಾಡಬೇಕು ಎಂಬುದನ್ನೆಲ್ಲ ಮುಂದಿನ ವಾರ ನಿರ್ಧರಿಸುತ್ತೇನೆ. ರಾಜಕೀಯವಾಗಿ ಯಾವ ಮುಖಂಡರ ಜೊತೆಗೂ ಇನ್ನೂ ಚರ್ಚೆ ನಡೆಸಿಲ್ಲ. ನಮ್ಮ ತಂದೆ ಯಾವಾಗಲೂ ಬೇರೆಯವರಿಗೆ ಒಳ್ಳೆಯದು ಮಾಡು ಅಂತಿದ್ದರು. ಸಮಾನತೆ ಬಗ್ಗೆ ಮಾತನಾಡುತ್ತಿದ್ದರು. ಅವರು ಜೀವಮಾನಪೂರ್ತಿ ರೈತರಿಗಾಗಿ ದುಡಿದರು. ರೈತರ ಬಗ್ಗೆ ಅವರಿಗಿರುವ ಪ್ರೀತಿ ನಮಗೂ ಇದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ದರ್ಶನ್ ತಿಳಿಸಿದ್ರು.

  • ಶಾಸಕ ಪುಟ್ಟಣ್ಣಯ್ಯ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಶರಣು

    ಶಾಸಕ ಪುಟ್ಟಣ್ಣಯ್ಯ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಶರಣು

    ಮಂಡ್ಯ: ರೈತ ಬಂಧು, ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ನಿಧನದಿಂದ ಮನನೊಂದ ಯುವಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    25 ವರ್ಷದ ಚಂದು ಮೃತ ಯುವಕ. ಕ್ಯಾತನಹಳ್ಳಿ ನಿವಾಸಿಯಾಗಿರೋ ಚಂದು ಹಲವು ವರ್ಷಗಳಿಂದ ರೈತ ನಾಯಕ ಪುಟ್ಟಣ್ಣಯ್ಯ ಅವರ ಅನುಯಾಯಿಯಾಗಿದ್ದರು. ಹೀಗಾಗಿ ತಮ್ಮ ನಾಯಕನ ಅಕಾಲಿಕ ಮರಣದಿಂದ ಮನನೊಂದು ಯುವಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಪುಟ್ಟಣ್ಣಯ್ಯ ಅವರ ಅಪ್ಪಟ ಅಭಿಮಾನಿಯಾಗಿದ್ದ ಚಂದು, ಇತ್ತೀಚೆಗೆ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಿಂದಲೇ ಆಚರಿಸಿದ್ದರು. ಆದ್ರೆ ಅವರು ವಿಧಿವಶವಾದ ಬಳಿಕ ಚಂದು ಸಾಕಷ್ಟು ಮನನೊಂದಿದ್ದರು. `ನಾನು ಪುಟ್ಟಣ್ಣಯ್ಯ ಅವರ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು, ಪುಟ್ಟಣ್ಣಯ್ಯ ಅಭಿಮಾನಿ ಬಳಗದ ಟಿ ಶರ್ಟ್ ಧರಿಸಿಕೊಂಡೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ರೈತ ಬಂಧು ಕೆಎಸ್ ಪುಟ್ಟಣ್ಣಯ್ಯ ಬದುಕಿನ ಪುಟಗಳ ಒಂದಿಷ್ಟು ಮಾಹಿತಿ ಇಲ್ಲಿದೆ

    ಸ್ವತಃ ಕಬಡ್ಡಿ ಪಟು, ಕುಸ್ತಿ ಪಟುವಾಗಿದ್ದ ರೈತ ಬಂಧು, ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆಎಸ್ ಪುಟ್ಟಣ್ಣಯ್ಯ ಅವರು ಫೆ. 18ರಂದು ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ದ ವೇಳೆ ಮರತಪಟ್ಟರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು. ಅಭಿಮಾನಿಗಳು, ಸ್ಥಳೀಯ ಮುಖಂಡರೊಂದಿಗೆ ಕುಳಿತು ಖುಷಿಯಾಗಿಯೇ ಪಂದ್ಯ ವೀಕ್ಷಿಸಿದ್ದ ಪುಟ್ಟಣ್ಣಯ್ಯರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ನೋಡನೋಡುತ್ತಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಇದನ್ನೂ ಓದಿ:  ಪುಟ್ಟಣ್ಣಯ್ಯರ ಕೊನೆ ಕ್ಷಣಗಳನ್ನ ನೆನೆದು ಕಣ್ಣೀರು ಹಾಕಿದ ಪತ್ನಿ, ಮಗ

    ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಈಗಾಗಲೇ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯಿಂದ ಮೃತದೇಹ ಮೆರವಣಿಗೆ ಮೂಲಕ ಸ್ವಗ್ರಾಮ ಕ್ಯಾತನಹಳ್ಳಿಗೆ ರವಾನೆಯಾಗಿದೆ. ಕ್ಯಾತನಹಳ್ಳಿಯ ಸರ್ಕಾರಿ ಶಾಲಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇದನ್ನೂ ಓದಿ: ಚಿತ್ರದಲ್ಲಿಯೂ ನಟಿಸಿ ಸೈ ಎನ್ನಿಸಿಕೊಂಡಿದ್ದ ರೈತ ಬಂಧು – ರೈತರ ಪರ ಖಡಕ್ ಡೈಲಾಗ್ ಹೊಡೆದಿದ್ದ ಪುಟ್ಟಣ್ಣಯ್ಯ

  • ಪುಟ್ಟಣ್ಣಯ್ಯರ ಕೊನೆ ಕ್ಷಣಗಳನ್ನ ನೆನೆದು ಕಣ್ಣೀರು ಹಾಕಿದ ಪತ್ನಿ, ಮಗ

    ಪುಟ್ಟಣ್ಣಯ್ಯರ ಕೊನೆ ಕ್ಷಣಗಳನ್ನ ನೆನೆದು ಕಣ್ಣೀರು ಹಾಕಿದ ಪತ್ನಿ, ಮಗ

    ಮಂಡ್ಯ: ರೈತ ಬಂಧು ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಪತ್ನಿ ಸುನೀತ ಪುಟ್ಟಣ್ಣಯ್ಯ ಹಾಗೂ ಮಗ ದರ್ಶನ್ ಅವರು ಪುಟ್ಟಣ್ಣಯ್ಯ ಅವರೊಂದಿಗಿನ ಕೊನೆ ಕ್ಷಣಗಳನ್ನು ನೆನೆದು ಕಣ್ಣೀರಾಗುತ್ತಿದ್ದಾರೆ.

    ಮಗ ದರ್ಶನ್ ತಂದೆಗೆ ಚುನಾವಣೆಯಲ್ಲಿ ಸಹಾಯ ಮಾಡಲು ಅಮೇರಿಕಾದಿಂದ ಬಂದು ಕೆಲವೇ ದಿನಗಳಾಗಿತ್ತು. ಕೊನೆಯ ಬಾರಿಗೆ ದರ್ಶನ್ ತಂದೆಯೊಂದಿಗೆ ಫೋನಿನಲ್ಲಿ ಮಾತನಾಡಿದ್ದರು. ಇದೀಗ ತನ್ನ ತಂದೆಯ ಕಾಲುಚೀಲವನ್ನು ಕೈಯಾರೆ ಬಿಚ್ಚಿದ್ದನ್ನು ನೆನೆದು ಮಗ ದರ್ಶನ್ ಕಣ್ಣೀರು ಹಾಕಿದ್ರು.

    ಪತ್ನಿ ಸುನೀತ ಅವರು ಇಡೀ ದಿನ ಪುಟ್ಟಣ್ಣಯ್ಯ ಅವರ ಜೊತೆಯಿದ್ದರಂತೆ. ಬೇಬಿ ಬೆಟ್ಟದಲ್ಲಿ ನಡೆದ ಕಾರ್ಯಕ್ರಮಕ್ಕೂ ಜೊತೆಯಲ್ಲೇ ಹೋಗಿದ್ರಂತೆ. ಆದ್ರೆ ಚೆನ್ನಾಗಿಯೇ ಇದ್ದ ಪುಟ್ಟಣ್ಣಯ್ಯ ಅವರು ಸಾವನ್ನಪ್ಪಿದ್ದು ಸಂಕಟ ತಂದಿದೆ ಎಂದು ದುಃಖಿಸಿದ್ರು.

    ಅಮೇರಿಕಾದಲ್ಲಿರಿರುವ ಹೆಣ್ಣಮಕ್ಕಳು ಮತ್ತು ಕುಟುಂಬಸ್ಥರು ಬರಬೇಕಾಗಿರುವುದರಿಂದ ಅಂತ್ಯಕ್ರಿಯೆ ಬುಧವಾರ ನಡೆಯುತ್ತದೆ. ತಡವಾಗಿ ಅಂತ್ಯಕ್ರಿಯೆ ನಡೆಯುತ್ತಿರುವುದಕ್ಕೆ ಅಭಿಮಾನಿಗಳು ಕ್ಷಮಿಸಬೇಕು ಪುಟ್ಟಣ್ಣಯ್ಯ ಪತ್ನಿ ಸುನೀತ ಮನವಿ ಮಾಡಿಕೊಂಡ್ರು.

    ವೇದಿಕೆಯಲ್ಲಿಯೇ ಹೃದಯಾಘಾತ: ರೈತ ಬಂಧು, ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಅವರು ಓರ್ವ ಕಬಡ್ಡಿ ಹಾಗೂ ಕುಸ್ತಿ ಪಟುವಾಗಿದ್ದರು. ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು.

    ಅಭಿಮಾನಿಗಳು, ಸ್ಥಳೀಯ ಮುಖಂಡರೊಂದಿಗೆ ಕುಳಿತು ಖುಷಿಯಾಗಿಯೇ ಪಂದ್ಯ ವೀಕ್ಷಿಸಿದ್ದ ಪುಟ್ಟಣ್ಣಯ್ಯರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ವಿಧಿ ಅದಾಗಲೇ ಪುಟ್ಟಣ್ಣಯ್ಯ ಬದುಕಿನ ಹೋರಾಟವನ್ನು ಕಿತ್ತುಕೊಂಡು ಬಿಟ್ಟಿತ್ತು. ಬಳಿಕ ಪುಟ್ಟಣ್ಣಯ್ಯ ಮೃತದೇಹವನ್ನು ಹುಟ್ಟೂರು ಕ್ಯಾತನಹಳ್ಳಿಗೆ ರವಾನಿಸಲಾಯಿತು. ಈ ವೇಳೆ ಸಾವಿರಾರು ಅಭಿಮಾನಿಗಳು ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಮುಗಿಬಿದ್ದರು. ಇನ್ನು ನಟ ದರ್ಶನ್ ರಾತ್ರೋರಾತ್ರಿ ಪುಟ್ಟಣ್ಣಯ್ಯರ ಅಂತಿಮ ದರ್ಶನ ಪಡೆದರು. ಈ ವೇಳೆ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.