Tag: puttenahalli

  • 21 ಮದುವೆಯಾಗಿಲ್ಲ, ನನ್ನಿಂದ್ಲೇ 17 ಲಕ್ಷ ಹಣ ವಸೂಲಿ ಮಾಡಿದ್ದಾರೆ: ಪತ್ನಿ ಆರೋಪ ಸುಳ್ಳೆಂದ ಪತಿ

    21 ಮದುವೆಯಾಗಿಲ್ಲ, ನನ್ನಿಂದ್ಲೇ 17 ಲಕ್ಷ ಹಣ ವಸೂಲಿ ಮಾಡಿದ್ದಾರೆ: ಪತ್ನಿ ಆರೋಪ ಸುಳ್ಳೆಂದ ಪತಿ

    – ಬೆಡ್‌ರೂಂನಲ್ಲಿ ಪ್ರೈವೆಟ್ ವೀಡಿಯೋ ಶೂಟ್ ಮಾಡಿದ್ದ ಎಂದು ಆರೋಪಿಸಿದ್ದ ಪತ್ನಿ

    ಬೆಂಗಳೂರು: ಬೆಡ್‌ರೂಂನಲ್ಲಿ (Bedroom) ಖಾಸಗಿ ವೀಡಿಯೋ ಶೂಟ್ ಮಾಡಿದ್ದ ಎಂದು ಆರೋಪಿಸಿದ್ದ ಪತ್ನಿಯ (Wife) ಆರೋಪವನ್ನು ಪತಿ (Husband) ಹೀನಾಮುಲ ಹಕ್ ತಳ್ಳಿಹಾಕಿದ್ದಾರೆ.

    ನನ್ನ ಗಂಡ 21 ಮದುವೆಯಾಗಿದ್ದಾನೆ, ನನ್ನ ಪ್ರೈವೆಟ್ ವೀಡಿಯೋ ಶೂಟ್ ಮಾಡಿದ್ದಾನೆ ಎಂದೆಲ್ಲಾ ಆರೋಪಿಸಿ ಪತ್ನಿ ಪತಿ ಹೀನಾಮುಲ ಹಕ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈ ಬೆನ್ನಲ್ಲೇ ವೀಡಿಯೋ ಮೂಲಕ ಪತಿ ಹೀನಾಮುಲ ಹಕ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    ಮದುವೆಗೆ ಮುಂಚೆ ಆಕೆಯ ಜೊತೆ ಸಂಬಂಧ ಹೊಂದಿದ್ದು ನಿಜ. ಆದರೆ ಆಕೆಯೇ ನನ್ನನ್ನು ಒತ್ತಾಯ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದು, ಸೈಕೋ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಳು ಎಂದು ಆರೋಪಿಸಿದ್ದಾರೆ. ನನಗೆ ಸಾಕಷ್ಟು ಟಾರ್ಚರ್ ಕೊಡುತ್ತಿದ್ದಳು. ನಾನು 21 ಮದುವೆಯಾಗಿಲ್ಲ, ನನಗೆ ಆಗಿರುವುದು ಒಂದೇ ಮದುವೆ. ನನ್ನ ಬಳಿಯೇ ಅವರು 17 ಲಕ್ಷ ಹಣ ವಸೂಲಿ ಮಾಡಿದ್ದಾರೆ. ನನ್ನ ಪತ್ನಿಗೆ 13 ಲಕ್ಷದ ಒಡವೆ ನಾನೇ ಕೊಡಿಸಿದ್ದೇನೆ. ನಾನು 21 ಮದುವೆ ಆಗಿದ್ದೆ ಆದರೆ ಆಕೆ ಯಾಕೆ ನನ್ನನ್ನು ಮದುವೆಯಾದಳು? ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ.‌ ಇದನ್ನೂ ಓದಿ: ಕೇಂದ್ರ ಸಚಿವ ಸೋಮಣ್ಣ ಮನೆಯಲ್ಲಿ ಜಾತಿಗಣತಿಗೆ 9 ಸಿಬ್ಬಂದಿ – ಸರ್ವೇಗೆ ಇಷ್ಟು ಜನ ಯಾಕೆ ಬಂದ್ರಿ ಅಂತ ಕ್ಲಾಸ್

  • ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    – ನಂಗೆ 19 ಮಹಿಳೆಯರ ಜೊತೆ ಅಕ್ರಮ ಸಂಬಂಧವಿದೆ, ನೀನು 2ನೇ ಹೆಂಡತಿ ಎಂದು ಕಿರುಕುಳ

    ಬೆಂಗಳೂರು: ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳನ್ನು ಸೀಕ್ರೆಟ್ ಕ್ಯಾಮರಾದಲ್ಲಿ ಸೆರೆ ಹಿಡಿದ ಪತಿ, ತನ್ನ ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಪತ್ನಿಯನ್ನು ಬ್ಲ್ಯಾಕ್‌ಮೇಲ್ ಮಾಡ್ತಿದ್ದ ಘಟನೆ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿಯಲ್ಲಿ ನಡೆದಿದೆ.

    ಕಾಮುಕ ಪತಿ ಸೈಯದ್ ಇನಾಮ್ ವಿರುದ್ಧ ಪತ್ನಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯ ಬೆಡ್‌ರೂಂನಲ್ಲಿ ಸೀಕ್ರೆಟ್ ಕ್ಯಾಮರಾ ಫಿಕ್ಸ್ ಮಾಡಿ, ನನ್ನ ಜೊತೆಗಿನ ಲೈಂಗಿಕ ಕ್ರಿಯೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ಖಾಸಗಿ ವಿಡಿಯೋಗಳನ್ನಿಟ್ಟುಕೊಂಡು ವಿದೇಶಿ ಸ್ನೇಹಿತರ ಜೊತೆ ಮಲಗುವಂತೆ ಒತ್ತಾಯಿಸಿದ್ದಾನೆ. ಅಲ್ಲದೇ ಈ ವಿಡಿಯೋಗಳನ್ನು ಸ್ನೇಹಿತರಿಗೆ ಶೇರ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: 5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್

    ಈಗಾಗಲೇ ನನಗೆ ಮತ್ತೊಂದು ಮದುವೆಯಾಗಿದೆ. ಇದು ಎರಡನೇ ಮದುವೆ. ಅಲ್ಲದೇ ನನಗೆ 19 ಹೆಂಗಸರ ಜೊತೆ ಸಂಬಂಧವಿದೆ ಎಂದು ಕಿರುಕುಳ ಕೊಡುತ್ತಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ದೂರಿನ ಆಧಾರದ ಮೇಲೆ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಪತಿ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.ಇದನ್ನೂ ಓದಿ: 2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ

  • ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

    ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

    ಬೆಂಗಳೂರು: ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ಆಟೋ ಚಾಲಕ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ (Bengaluru) ಜೆಪಿ ನಗರದಲ್ಲಿ (JP Nagar) ನಡೆದಿದೆ.

    ಆಟೋ ಚಾಲಕನನ್ನು ಹನುಮಂತಪ್ಪ ಹೆಚ್ ತಳವಾರ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ

    ಓರ್ವ ಯುವತಿ ಜೆಪಿ ನಗರದ ಏಳನೇ ಹಂತದಿಂದ ಆಟೋ ಬುಕ್ ಮಾಡಿದ್ದರು. ಆಟೋ ಲೋಕೇಶನ್‌ಗೆ ಬಂದ ತಕ್ಷಣ ಚಾಲಕ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದ. ಅಲ್ಲದೇ ನೀನು ಸಿನಿಮಾ ಹಿರೋಯಿನ್ ತರಾ ಇದೀಯಾ ಎಂದಿದ್ದನಂತೆ. ಬಳಿಕ ಯುವತಿ ಆಟೋ ಒಳಗೆ ಕುಳಿತುಕೊಳ್ಳುತ್ತಿದ್ದಂತೆ ಜ್ವರ ಇದೀಯಾ ಎಂದು ಹಣೆ ಮುಟ್ಟಿ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಕೂಡಲೇ ಯುವತಿ ಆಟೋದಿಂದ ಜಿಗಿದು ಓಡಿಹೋಗಿದ್ದಾರೆ.

    ಈ ಕುರಿತು ಯುವತಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಜೊತೆಗೆ ಆತ ಕೆಲಸ ಮಾಡುತ್ತಿದ್ದ ಕ್ಯಾಬ್ ಕಂಪನಿಗೂ ಮಾಹಿತಿ ನೀಡಿ, ಆತನ ಲೈಸೆನ್ಸ್ ವಿರುದ್ಧ ಕ್ರಮ ತೆಗದುಕೊಳ್ಳಲು ಸೂಚಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

  • ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ ಬರೆದದ್ದು ಚಿತ್ರರಂಗದವರೆ : ಸುದೀಪ್

    ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ ಬರೆದದ್ದು ಚಿತ್ರರಂಗದವರೆ : ಸುದೀಪ್

    ಮ್ಮ ಮನೆಯ ವಿಳಾಸಕ್ಕೆ ಖಾಸಗಿ ವಿಡಿಯೋ ಲೀಕ್ (Video Leak) ಮಾಡುವುದಾಗಿ ಬೆದರಿಸಿ ಪತ್ರ ಬರೆದವರು ಬೇರೆ ಯಾರೂ ಅಲ್ಲ, ಅವರು ಸಿನಿಮಾ ರಂಗದವರೇ ಆಗಿದ್ದಾರೆ ಎಂದು ಕಿಚ್ಚ ಸುದೀಪ್  (Sudeep) ತಿಳಿಸಿದ್ದಾರೆ.  ಅಲ್ಲದೇ, ಅವರು ಯಾರು ಅಂತಾನೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಪಾಠ ಕಲಿಸಲಾಗುವುದು ಎಂದು ಸುದೀಪ್ ತಿಳಿಸಿದ್ದಾರೆ. ಯಾವುದರ ಮೂಲಕ ಅವರಿಗೆ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಹಾಗೆಯೇ ಕೊಡುತ್ತೇನೆ ಎಂದು ಮಾಧ್ಯಮಗಳೊಂದಿಗೆ ಸುದೀಪ್ ಮಾತನಾಡಿದರು.

    ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ (Puttenahalli) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಮಾರ್ಚ್ 29 ರಂದೇ ಆ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದರು. ಇದನ್ನೂ ಓದಿ: ‘ಕಿರಿಕ್ ಪಾರ್ಟಿ’ ರಶ್ಮಿಕಾ ಮಂದಣ್ಣಗೆ ಶುಭಕೋರಿದ ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ

    ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ  ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ  ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

    ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.  ಅಲ್ಲದೇ ಕೇಸ್ ಅನ್ನು ಸಿಸಿಬಿ ವರ್ಗಾಯಿಸಿ ತನಿಖೆ ನಡೆಸುತ್ತಿದ್ದಾರೆ.

  • ಕಿಚ್ಚ ಸುದೀಪ್ ಗೆ ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ : ದೂರು ದಾಖಲು

    ಕಿಚ್ಚ ಸುದೀಪ್ ಗೆ ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ : ದೂರು ದಾಖಲು

    ಸ್ಯಾಂಡಲ್ ವುಡ್ ಹೆಸರಾಂತ ನಟ ಕಿಚ್ಚ ಸುದೀಪ್ (Sudeep) ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ (Puttenahalli) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ (Video Leak)  ಮಾಡುವುದಾಗಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ.

    ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ  ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ  ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಮಾಜಿ ಪತಿ ಹೊಸ ಸಂಬಂಧದ ಬಗ್ಗೆ ನಾನೇನು ಮಾತನಾಡಲೇ ಇಲ್ಲ: ಸಮಂತಾ ಸ್ಪಷ್ಟನೆ

    ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸುದೀಪ್ ಅವರು ಬಿಜೆಪಿಗೆ ಸೇರುತ್ತಿದ್ದಾರೆ ಎನ್ನುವ ಸುದ್ದಿಯ ಜೊತೆಗೆ ಈ ಪತ್ರ ಕೂಡ ಸಾಕಷ್ಟು ಸಂಚಲನವುಂಟು ಮಾಡಿದೆ. ಈ ಪತ್ರ ಬಂದಿರುವುದು ಎಲ್ಲಿಂದ? ಬರೆದವರು ಯಾರು ಎನ್ನುವುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯನ್ನೂ ನಡೆಸುತ್ತಿದ್ದಾರೆ.

  • ಚೀಲ, ಬೆಡ್‍ಶೀಟ್‍ನಲ್ಲಿ ಸುತ್ತಿದ ರೀತಿಯಲ್ಲಿ ವೃದ್ಧನ ಮೃತದೇಹ ಪತ್ತೆ

    ಚೀಲ, ಬೆಡ್‍ಶೀಟ್‍ನಲ್ಲಿ ಸುತ್ತಿದ ರೀತಿಯಲ್ಲಿ ವೃದ್ಧನ ಮೃತದೇಹ ಪತ್ತೆ

    ಬೆಂಗಳೂರು: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹ ಪತ್ತೆ ಆಗಿದೆ.

    ಜೆಪಿ ನಗರದ 6ನೇ ಹಂತದ ಸಮೀಪ ಮೃತದೇಹ ಪತ್ತೆ ಆಗಿದ್ದು, 67 ವರ್ಷದ ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿದೆ. ಮಗ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

    ಇದೇ ನವೆಂಬರ್ 16ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ (Badminton) ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣಿಯನ್ ಸಂಜೆ 4.55ರ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ರು. ಬಳಿಕ ಕರೆ ಮಾಡಿದ್ರೆ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ರು. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕನನ್ನು ಹೊರಗೆ ತಳ್ಳಿದ ಟಿಟಿಇ – ಕಾಲು ಕಳೆದುಕೊಂಡ ವ್ಯಕ್ತಿ ಸ್ಥಿತಿ ಗಂಭೀರ

    ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ಮೃತ ವೃದ್ಧನ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜೊತೆಗೆ ಸಂಪರ್ಕ ಇರುವುದು ಬಯಲಾಗಿದೆ. ಸಾರಕ್ಕಿ ಸಿಗ್ನಲ್ ಬಳಿ ಲಾಸ್ಟ್ ಲೊಕೇಶನ್ ಇದೆ. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಬಿದ್ದಿದೆ.

    ಈ ಸಂಬಂಧ ಪುಟ್ಟೇನಹಳ್ಳಿ ಠಾಣೆ (Puttenahalli Station) ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]