Tag: PV Sindhu

  • ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು

    ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು

    ರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು (PV Sindhu) ಇದೇ 22 ರಂದು ಉದಯಪುರದಲ್ಲಿ (Udaipur) ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

    ಭಾನುವಾರ (ಡಿ.01) ರಂದು ಲಕ್ನೋದಲ್ಲಿ (Lucknow) ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು.ಇದನ್ನೂ ಓದಿ: ಹುಟ್ಟೂರಿಗೆ ಶೋಭಿತಾ ಮೃತದೇಹ – ಇಂದು ಅಂತ್ಯಕ್ರಿಯೆ

    ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ.

    ಈ ಕುರಿತು ಸಿಂಧು ತಂದೆ ಪಿವಿ ರಮಣ ಮಾಹಿತಿ ನೀಡಿದ್ದು, ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದೆ. ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಇನ್ನೂ ಡಿ.24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಸಿಂಧು ಇಲ್ಲಿಯವರೆಗೆ ಒಂದು ಚಿನ್ನದ ಪದಕ ಸೇರಿದಂತೆ ಒಟ್ಟು ಐದು ವಿಶ್ವ ಚಾಂಪಿಯನ್‌ಶಿಪ್ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ಇದನ್ನೂ ಓದಿ: ಚಿತ್ರದುರ್ಗದಲ್ಲಿ ವ್ಯಾಪಕ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

  • ಪ್ಯಾರಿಸ್‌ ಒಲಿಂಪಿಕ್ಸ್‌ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್‌

    ಪ್ಯಾರಿಸ್‌ ಒಲಿಂಪಿಕ್ಸ್‌ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್‌

    ಪ್ಯಾರಿಸ್‌: ಜುಲೈ 26ರಂದು ಆರಂಭಗೊಂಡ 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ (Paris Olympics 2024) ಕ್ರೀಡಾ ಹಬ್ಬ ಭಾನುವಾರ (ಇಂದು) ಮುಕ್ತಾಯಗೊಳ್ಳಲಿದೆ. ಈ ಮೂಲಕ 17 ದಿನಗಳ ಕ್ರೀಡಾ ಮಹಾ ಸಂಗಮಕ್ಕೆ ತೆರೆ ಬೀಳಲಿದೆ.

    ಕಳೆದ ಜುಲೈ 26ರಂದು ಪ್ಯಾರಿಸ್‌ನ (Paris) ಸೆನ್‌ ನದಿ ದಡದಲ್ಲಿ ಅದ್ಧೂರಿಯಾಗಿ ಆರಂಭವಾಗಿದ್ದ ಕ್ರೀಡಾಕೂಟಕ್ಕೆ ಸ್ಟೇಡ್‌ ಡೆ ಫ್ರಾನ್ಸ್‌ ಕ್ರೀಡಾಂಗಣದಲ್ಲಿ ತೆರೆ ಎಳೆಯಲಾಗುತ್ತದೆ. ಸಮಾರೋಪದಲ್ಲಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

    ಸಮಾರೋಪದಲ್ಲಿ ಕಲಾವಿದರು ಸಂಗೀತ ಪ್ರದರ್ಶನ ನೀಡಲಿದ್ದಾರೆ, ಅಲ್ಲದೇ ಲೇಸರ್‌ ಲೈಟ್‌ ಶೋ, ವೈಮಾನಿಕ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ ಎಂಬುದಾಗಿ ಪ್ಯಾರಿಸ್ ಒಲಿಂಪಿಕ್ಸ್ ಸಂಘಟನಾ ಸಮಿತಿ ಹೇಳಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ – ಕುಸ್ತಿಯಲ್ಲಿ ಕಂಚು ಗೆದ್ದ ಅಮನ್

    ಸಮಾರೋಪದಲ್ಲಿ ಏನಿದೆ ವಿಶೇಷತೆ? 
    ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆ ಸ್ಟೇಡ್‌ ಡೆ ಫ್ರಾನ್ಸ್‌ ಕ್ರೀಡಾಂಗಣದಲ್ಲಿ ಸಮಾರೋಪ ಆರಂಭಗೊಳ್ಳಲಿದ್ದು, ಸಂಜೆ 5:15 ರವರೆಗೆ ಇರಲಿದೆ. ಸಮಾರೋಪ ಸಮಾರಂಭ ಆಗಸ್ಟ್​​​ 11ರಂದು ಭಾನುವಾರ ನಡೆಯಲಿದೆ. ʻದಿ ಟುನೈಟ್ ಶೋʼ ನಿರೂಪಕ ಜಿಮ್ಮಿ ಫಾಲನ್ ಮತ್ತು ದೀರ್ಘಕಾಲದ ಕ್ರೀಡಾ ನಿರೂಪಕ ಮೈಕ್ ಟಿರಿಕೊ ಈ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ. ಇದನ್ನೂ ಓದಿ: ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿದ್ದ ಪದಕ ವಿಜೇತ ಅಮನ್‌

    ಸಮಾರೋಪ ಸಮಾರಂಭವು ಆಯಾ ದೇಶಗಳ ಧ್ವಜಗಳ ಪರೇಡ್​ನೊಂದಿಗೆ ಪ್ರಾರಂಭವಾಗುತ್ತದೆ. ಇದರಲ್ಲಿ ಪ್ರತಿ ರಾಷ್ಟ್ರದ ಕ್ರೀಡಾಪಟುಗಳು ತಮ್ಮ ಧ್ವಜದೊಂದಿಗೆ ಕ್ರೀಡಾಂಗಣಕ್ಕೆ ಬರಲಿದ್ದಾರೆ. ಒಲಿಂಪಿಕ್ಸ್‌ ಹುಟ್ಟಿಕೊಂಡ ಗ್ರೀಸ್‌ ದೇಶದ ಹೆಗ್ಗುರುತಿಗಾಗಿ ಗ್ರೀಕ್ ಧ್ವಜವು ಮೆರವಣಿಗೆಯನ್ನು ಮುನ್ನಡೆಸಲಿದೆ. ಆತಿಥೇಯ ದೇಶವು ಕೊನೆಯಲ್ಲಿ ಸಾಗಲಿದೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ ತಿಳಿಸಿದೆ.

    ಭಾರತದ ಧ್ವಜಧಾರಿಗಳು ಯಾರು?
    ಪ್ಯಾರಿಸ್ ಒಲಿಂಪಿಕ್ಸ್ 2024ರ ಸಮಾರೋಪ ಸಮಾರಂಭದಲ್ಲಿ ಪಿ.ಆರ್ ಶ್ರೀಜೇಶ್ ಮತ್ತು ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹೊತ್ತೊಯ್ಯಲಿದ್ದಾರೆ. ಉದ್ಘಾಟನೆ ಸಮಾರಂಭದಲ್ಲಿ ಅಥ್ಲಿಟ್‌ ಪಿ.ವಿ ಸಿಂಧು ಧ್ವಜಧಾರಿಯಾಗಿದ್ದರು. ಇದನ್ನೂ ಓದಿ: ವಿನೇಶ್ ಫೋಗಟ್‌ಗೆ ಮಧ್ಯಸ್ಥ ಮಂಡಳಿ ರಿಲೀಫ್ ನೀಡುತ್ತಾ? – ಒಲಿಂಪಿಕ್ಸ್ ಮುಗಿಯೋ ಮುನ್ನ ಸಿಎಎಸ್‌ನಿಂದ ತೀರ್ಪು

    ಒಲಿಂಪಿಕ್ಸ್‌ ಧ್ವಜ ಹಸ್ತಾಂತರ:
    ಬೇಸಿಗೆ ಕ್ರೀಡಾಕೂಟದ ಪ್ರಸ್ತುತ ಆತಿಥೇಯ ನಗರದ ಮೇಯರ್ ಒಲಿಂಪಿಕ್ ಧ್ವಜವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರ ಮಾಡಲಿದ್ದಾರೆ. ನಂತರ 2028ರ ಕ್ರೀಡಾಕೂಟ ನಡೆಯಲಿರುವ ಹಿನ್ನೆಲೆ ಧ್ವಜವನ್ನು ಲಾಸ್ ಏಂಜಲೀಸ್ ಮೇಯರ್ ಕರೆನ್ ಬಾಸ್ ಅವರಿಗೆ ಹಸ್ತಾಂತರಿಸಲಾಗುತ್ತದೆ. ಪ್ರತಿ ವರ್ಷ ಒಲಿಂಪಿಕ್ಸ್‌ ಕೂಟ ಮುಗಿಯುತ್ತಿದ್ದಂತೆ ಮುಂದಿನ ಆಯೋಜಕ ರಾಷ್ಟ್ರಕ್ಕೆ ಧ್ವಜ ಹಸ್ತಾಂತರಿಸುವುದು ಸಂಪ್ರದಾಯ.

  • ಪಿವಿ ಸಿಂಧು ಜೊತೆ ಕ್ಯಾಮೆರಾಗೆ ಪೋಸ್ ಕೊಟ್ಟ ಮೆಗಾಸ್ಟಾರ್ ಫ್ಯಾಮಿಲಿ

    ಪಿವಿ ಸಿಂಧು ಜೊತೆ ಕ್ಯಾಮೆರಾಗೆ ಪೋಸ್ ಕೊಟ್ಟ ಮೆಗಾಸ್ಟಾರ್ ಫ್ಯಾಮಿಲಿ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬ ಪ್ಯಾರಿಸ್‌ನಲ್ಲಿದ್ದಾರೆ. ಪ್ರಸ್ತುತ 2024ನೇ ಸಾಲಿನ ಒಲಿಂಪಿಕ್ಸ್ ನಡೆಯುತ್ತಿದ್ದು ಸದ್ಯ ಭಾಗಿಯಾಗಿರುವ ಪಿವಿ ಸಿಂಧು (PV Sindhu) ಜೊತೆ ಚಿರಂಜೀವಿ ಫ್ಯಾಮಿಲಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

    ತೆಲುಗು ನಟ ಚಿರಂಜೀವಿ ಕುಟುಂಬ ಸದ್ಯ ಪ್ಯಾರಿಸ್‌ನಲ್ಲಿ (Paris) ವೆಕೇಷನ್ ಮೂಡ್‌ನಲ್ಲಿದ್ದಾರೆ. ಪ್ಯಾರಿಸ್‌ನಲ್ಲಿ ಒಲಂಪಿಕ್ಸ್ ನಡೆಯುತ್ತಿದ್ದು, ಭಾರತವನ್ನು ಪ್ರತಿನಿಧಿಸಿರುವ ಪಿವಿ ಸಿಂಧು ಜೊತೆ ಚಿರಂಜೀವಿ ದಂಪತಿ ಮತ್ತು ರಾಮ್‌ ಚರಣ್‌ ದಂಪತಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಸಿಂಧುಗೆ ವಿಶೇಷವಾಗಿ ಚಿರಂಜೀವಿ ಕುಟುಂಬ ಶುಭಕೋರಿದೆ.

    ಅಂದಹಾಗೆ, ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್‌ಗಳನ್ನು ಪ್ಯಾರಿಸ್‌ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

  • Malaysia Masters: ಫೈನಲ್‌ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ

    Malaysia Masters: ಫೈನಲ್‌ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ

    ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿ.ವಿ ಸಿಂಧು (PV Sindhu) ಅವರು ಮಲೇಷ್ಯಾ ಮಾಸ್ಟರ್ಸ್ (Malaysia Masters 2024) ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಚೀನಾದ ವಾಂಗ್ ಝಿಯಿ ವಿರುದ್ಧ ಸೋತು ನಿರಾಸೆ ಮೂಡಿಸಿದ್ದಾರೆ.

    ಚೀನಾದ ಪ್ರತಿಸ್ಪರ್ಧಿ ವಾಂಗ್ ಝಿಯಿ (Wang Zhi Yi) ವಿರುದ್ಧ 16-21, 21-5, 21-16 ಸೆಟ್‌ಗಳಿಂದ ಸಿಂಧು ಸೋತಿದ್ದು, ಪ್ರಶಸ್ತಿ ಗೆಲ್ಲುವ ಕನಸು ಭಗ್ನವಾಗಿದೆ. ಮೊದಲ ಸೆಟ್‌ನಲ್ಲಿ 21-16 ಪಾಯಿಂಟ್ಸ್‌ ಗಳಿಸುವ ಮೂಲಕ 5 ಪಾಯಿಂಟ್ಸ್‌ಗಳಲ್ಲಿ ಮುನ್ನಡೆ ಸಾಧಿಸಿದ್ದ ಪಿ.ವಿ ಸಿಂಧು ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದ್ರೆ 2ನೇ ಸೆಟ್‌ನಲ್ಲಿ ಚೀನಾದ ಆಟಗಾರ್ತಿ ಭರ್ಜರಿ ಕಮ್‌ಬ್ಯಾಕ್ ಮಾಡಿದರು. ಇದರಿಂದ ಸಿಂಧು 5-21 ಪಾಯಿಂಟ್ಸ್‌ ಗಳಿಸಿ ತೀವ್ರ ಹಿನ್ನಡೆ ಅನುಭವಿಸಿದ್ದರು. ಬಳಿಕ 3ನೇ ಸೆಟ್‌ನಲ್ಲೂ ಸಿಂಧುಗೆ ಅವಕಾಶ ನೀಡದ ವಾಂಗ್ ಝಿಯಿ 21-16 ಪಾಯಿಂಟ್ಸ್‌ಗಳಿಂದ ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟರು.

    ಶನಿವಾರ ನಡೆದಿದ್ದ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ (Busanan Ongbamrungphan) ವಿರುದ್ಧ ಸಿಂಧು 13-21, 21-16, 21-12 ಸೆಟ್‌ಗಳಿಂದ ಗೆಲುವು ಸಾಧಿಸಿದ್ದರು. ಇದಕ್ಕೂ ಮುನ್ನ ವಿಶ್ವದ 6ನೇ ಶ್ರೇಯಾಂಕಿತ ಆಟಗಾರ್ತಿಯಾದ ಚೀನಾದ ಹಾನ್ ಯೂ ಅವರನ್ನ ಕ್ವಾರ್ಟರ್‌ ಫೈನಲ್‌ನಲ್ಲಿ ಮಣಿಸಿದ್ದರು. ಇದನ್ನೂ ಓದಿ: ವಿಶ್ವಕಪ್‌ ಒಂದು ಪಂದ್ಯಕ್ಕೆ ಕೊಹ್ಲಿ ಗೈರು ಸಾಧ್ಯತೆ

    ಕಳೆದ 2 ವರ್ಷಗಳಿಂದ ಫಾರ್ಮ್‌ ಕಳೆದುಕೊಂಡಿದ್ದ ಸಿಂಧು ಯಾವುದೇ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು. ಇದಕ್ಕೂ ಮುನ್ನ ಕಳೆದ ವರ್ಷ ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ಸ್‌ನಲ್ಲಿ ರನ್ನರ್ ಅಪ್‌ ಆಗಿದ್ದರು. 2022ರಲ್ಲಿ ಸಿಂಗಾಪುರ ಓಪನ್ಸ್‌ (Singapore Opens) ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೆ ಸೋಲಿನ ಅಭಿಯಾನ ಮುಂದುವರಿಸಿದ್ದಾರೆ. ಇದನ್ನೂ ಓದಿ: ನೀರಜ್‌ ಚೋಪ್ರಾಗೆ ಗಾಯದ ಸಮಸ್ಯೆ; ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024ನಿಂದ ಹೊರಕ್ಕೆ

  • Malaysia Masters: ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು!

    Malaysia Masters: ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು!

    ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ಸ್ (Malaysia Masters) ಬ್ಯಾಡ್ಮಿಂಟನ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿ.ವಿ ಸಿಂಧು (PV Sindhu), ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನ ಸೋಲಿಸಿ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

    ಶನಿವಾರ ಕೌಲಾಲಂಪುರದಲ್ಲಿ ನಡೆದ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 5ನೇ ಶ್ರೇಯಾಂಕಿತ ಸಿಂಧು ಅವರು ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. 88 ನಿಮಿಷಗಳ ಕಾಲ ನಡೆದ ಜಿದ್ದಾ ಜಿದ್ದಿ ಹೋರಾಟದಲ್ಲಿ ವಿಶ್ವದ 20ನೇ ಶ್ರೇಯಾಂಕಿತ ಬುಸಾನನ್ (Busanan Ongbamrungphan) ವಿರುದ್ಧ 13-21, 21-16, 21-12 ಅಂಕಗಳೊಂದಿಗೆ ಗೆಲುವು ಸಾಧಿಸಿ ಮೈಲುಗಲ್ಲು ಸಾಧಿಸಿದ್ದಾರೆ. ಇದನ್ನೂ ಓದಿ: IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಕಳೆದ 2 ವರ್ಷಗಳಿಂದ ಫಾರ್ಮ್‌ ಕಳೆದುಕೊಂಡಿದ್ದ ಸಿಂಧು ಯಾವುದೇ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು. ಇದಕ್ಕೂ ಮುನ್ನ ಕಳೆದ ವರ್ಷ ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ಸ್‌ನಲ್ಲಿ ರನ್ನರ್ ಅಪ್‌ ಆಗಿದ್ದರು. 2022ರಲ್ಲಿ ಸಿಂಗಾಪುರ ಓಪನ್ಸ್‌ (Singapore Opens) ಟ್ರೋಫಿ ಗೆದ್ದಿದ್ದರು. 2019ರ ಹಾಂಗ್‌ ಕಾಂಗ್‌ ಓಪನ್ಸ್‌ನಲ್ಲಿ ತಮ್ಮ ವೃತ್ತಿ ಬದುಕಿನಲ್ಲಿ ಮೊದಲಬಾರಿಗೆ ಭಾರತೀಯರನ್ನು ಸೋಲಿಸಿದ್ದ ಥಾಯ್ಲೆಂಡ್‌ನ ಬುಸಾನನ್ ವಿರುದ್ಧ ಇದು ಸಿಂಧು ಅವರ 18ನೇ ಜಯವಾಗಿದೆ. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ಕಳೆದ ಎರಡು ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ವಿಜೇತೆಯಾಗಿದ್ದ ಪಿ.ವಿ ಸಿಂಧು ಅವರು ಪ್ರಸಕ್ತ ವರ್ಷದಲ್ಲಿ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬ್ಯಾಡ್ಮಿಂಟನ್‌ನಿಂದ ಕೆಲಕಾಲ ಹೊರಗುಳಿದಿದ್ದರು. ಆ ನಂತರ ಹಲವು ಟೂರ್ನಿಗಳನ್ನು ಎದುರಿಸಿದ್ದರೂ ಫಾರ್ಮ್‌ ಕಳೆದುಕೊಂಡು ಸೋಲಿಗೆ ತುತ್ತಾಗಿದ್ದರು. ಇದೀಗ ಈ ಪ್ರಶಸ್ತಿ ಗೆಲುವಿನೊಂದಿಗೆ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಇದನ್ನೂ ಓದಿ: Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

  • ಒಂದೇ ಸಮಯದಲ್ಲಿ ಅಪ್ಲೋಡ್‌, ಟ್ಯಾಗ್‌ – ಸಿಂಧು, ನೀರಜ್‌ ಪೋಸ್ಟ್‌ ರಹಸ್ಯ ಬಯಲು

    ಒಂದೇ ಸಮಯದಲ್ಲಿ ಅಪ್ಲೋಡ್‌, ಟ್ಯಾಗ್‌ – ಸಿಂಧು, ನೀರಜ್‌ ಪೋಸ್ಟ್‌ ರಹಸ್ಯ ಬಯಲು

    ನವದೆಹಲಿ: ಬ್ಯಾಡ್ಮಿಂಟನ್‌ ಪಟು ಪಿವಿ ಸಿಂಧು (PV Sindhu) ಮತ್ತು ಜಾವೆಲಿನ್ ತಾರೆ ನೀರಜ್‌ ಚೋಪ್ರಾ (Neeraj Chopra) ಪರಸ್ಪರ ಪ್ರೀತಿಸುತ್ತಿದ್ದಾರಾ ಹೀಗೊಂದು ಪ್ರಶ್ನೆಯನ್ನು ಅಭಿಮಾನಿಗಳು ಈಗ ಕೇಳುತ್ತಿದ್ದಾರೆ.

    ಇನ್‌ಸ್ಟಾಗ್ರಾಮ್‌ನಲ್ಲಿ ಇವರಿಬ್ಬರೂ ಒಂದೇ ಸಮಯದಲ್ಲಿ ಅಪ್‌ಲೋಡ್‌ ಮಾಡಿದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

    ಪೋಸ್ಟ್‌ನಲ್ಲಿ ಏನಿತ್ತು?
    ನೀರಜ್‌ ಚೋಪ್ರಾ ಬ್ಯಾಡ್ಮಿಂಟನ್‌ ರಾಕೆಟ್‌ ಮತ್ತು ಕಾಕ್‌ನ ಫೋಟೋ ಹಂಚಿಕೊಂಡು, ಇದರ ಅರ್ಥ ಏನು ಊಹೆ ಮಾಡುವಿರಾ ಎಂದು ಪ್ರಶ್ನಿಸಿ ಪೋಸ್ಟ್‌ ಅನ್ನು ಪಿವಿ ಸಿಂಧು ಅವರಿಗೆ ಟ್ಯಾಗ್‌ ಮಾಡಿದ್ದರು.

    ಪಿವಿ ಸಿಂಧು ಕೂಡ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಜಾವೆಲಿನ್‌ ಫೋಟೋ ಹಂಚಿಕೊಂಡು, ಅರೇ ಇದು ಹೇಗೆ ನನ್ನ ಬಳಿ ಬಂತು? ಊಹೆ ಮಾಡ್ತೀರಾ ಎಂದು ಪ್ರಶ್ನಿಸಿ ನೀರಜ್‌ ಚೋಪ್ರಾ ಅವರಿಗೆ ಅನ್ನು ಟ್ಯಾಗ್‌ ಮಾಡಿದ್ದರು . ಇದನ್ನೂ ಓದಿ: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಖ್ಯಾತ ಹಾಕಿ ಆಟಗಾರನಿಂದ ಅಪ್ರಾಪ್ತೆಯ ಮೇಲೆ ರೇಪ್‌!

    ಇಬ್ಬರು ಪೋಸ್ಟ್‌ ಹಾಕಿದ್ದು ಯಾಕೆ?
    ಅಭಿಮಾನಿಗಳು ಇವರಿಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ ಎಂದು ಹೇಳಿದರೂ ಈ ತಾರೆಯರು ಕಂಪನಿಯೊಂದರ ಪ್ರಚಾರ ಸಂಬಂಧ ಪೋಸ್ಟ್‌ ಹಾಕಿದ್ದಾರೆ.

    ಒಲಿಂಪಿಕ್ಸ್‌ ಜಾವೆಲಿನ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಅವರನ್ನು ಜಾಗತಿಕ ಪೇಮೆಂಟ್‌ ಕಂಪನಿ ವೀಸಾ (Visa) ತನ್ನ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೂ ಮುನ್ನ ನೀರಜ್‌ ಚೋಪ್ರಾ ಅವರನ್ನು ನೇಮಕ ಮಾಡಿದೆ.

    ಈ ಹಿಂದೆ 2019ರಲ್ಲಿ ಪಿವಿ ಸಿಂಧು ಅವರನ್ನು ವೀಸಾ ಕಂಪನಿ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿತ್ತು. ಈಗ ವೀಸಾ ಕಂಪನಿಯ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾದ ಎರಡನೇ ಭಾರತೀಯ ಕ್ರೀಡಾಪಟು ನೀರಾಜ್‌ ಚೋಪ್ರಾ ಆಗಿದ್ದಾರೆ. ಇಬ್ಬರು ವೀಸಾ ಕಂಪನಿಯ ರಾಯಭಾರಿಯಾಗಿದ್ದಕ್ಕೆ ನೀರಜ್‌ ಜೋಪ್ರಾ ಬ್ಯಾಡ್ಮಿಂಟನ್‌ ರಾಕೆಟ್‌ ಫೋಟೋ ಹಂಚಿಕೊಂಡಿದ್ದರೆ ಸಿಂಧು ಜಾವೆಲಿನ್‌ ಫೋಟೋ ಅಪ್ಲೋಡ್‌ ಮಾಡಿದ್ದರು. ನಂತರ ಇವರಿಬ್ಬರು ಈ ಪೋಸ್ಟ್‌ ಡಿಲೀಟ್‌ ಮಾಡಿದ್ದಾರೆ.

  • ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    ಮುಂಬೈ: 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಸಾರ್ಥಕಗೊಳಿಸಿದರು. ಬಳಿಕ ಪ್ರಧಾನಿ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

    ಇಡೀ ದೇಶದ ಜನರು ಮನೆ-ಮನೆಯಲ್ಲೂ ಧ್ವಜ ಹಾರಿಸುವ ಮೂಲಕ ದೇಶ ಪ್ರೇಮ ಮೆರೆದಿದ್ದಾರೆ. ಇದಕ್ಕೆ ಭಾರತದ ಕ್ರೀಡಾ ತಾರೆಗಳೂ ಹೊರತಾಗಿಲ್ಲ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೇರಿ ಹಲವರು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಿದ್ದಾರೆ.

    ತಮ್ಮ ತಮ್ಮ ಟ್ವಿಟ್ಟರ್ ಖಾತೆಗಳಲ್ಲಿ ರಾಷ್ಟ್ರಧ್ವಜ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದು, ಭಾರತದ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ಕೋರಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, `ನಾನು ಭಾರತೀಯನೆಂದು ಹೇಳಲು ಹೆಮ್ಮೆ ಪಡುತ್ತೇನೆ. ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ಹೇಳಿದ್ದಾರೆ.

    ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಬಜನ್ ಸಿಂಗ್, ನಮ್ಮ ರಾಷ್ಟ್ರಧ್ವಜ ಹಿಂದಿನ ತ್ಯಾಗ ಬಲಿದಾನಗಳ ಸಂಕೇತ, ವರ್ತಮಾನದ ಸಮೃದ್ಧಿ ಹಾಗೂ ಭವಿಷ್ಯದ ಭರವಸೆಗಳ ಸಂಕೇತವಾಗಿದೆ ಎಲ್ಲರೂ ಅದಕ್ಕೆ ಸಲ್ಯೂಟ್ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: IPLನಲ್ಲಿ ಸೊನ್ನೆಗೆ ಔಟಾಗಿದ್ದಕ್ಕೆ ಮೂರ್ನಾಲ್ಕು ಬಾರಿ ಕಪಾಳಕ್ಕೆ ಬಾರಿಸಿದ್ರು – ರಾಸ್‌ ಟೇಲರ್‌ ರೋಚಕ ಅನುಭವ

    ಇದೇ ರೀತಿ ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಚೇತೇಶ್ವರ್ ಪೂಜಾರ, ಜಸ್ಪಿತ್ ಬುಮ್ರಾ, ಶಿಖರ್ ಧವನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಬಾಕ್ಸಿಂಗ್ ಮಾಜಿ ಕ್ರೀಡಾಪಟು ಮೇರಿ ಕೋಮ್, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಮೊದಲಾದವರು ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ್ದಾರೆ.

    ವಿದೇಶಿ ಕ್ರೀಡಾ ತಾರೆಗಳಿಂದಲೂ ವಿಶ್: ಇನ್ನೂ ಭಾರತೀಯರು ಮಾತ್ರವಲ್ಲದೇ ವಿದೇಶಿ ಕ್ರಿಕೆಟಿಗರೂ ಶುಭ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಹಾಗೂ ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟಿಗ ಡೇರೆನ್ ಸಾಮಿ ಶುಭ ಕೋರಿದ್ದಾರೆ. ಡೇವಿಡ್ ವಾರ್ನರ್ ನನ್ನೆಲ್ಲಾ ಭಾರತೀಯ ಕುಟುಂಬದ ಸ್ನೇಹಿತರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಹೇಳಿದ್ದಾರೆ. ಇನ್ನೂ ಡೇರೆನ್ ಸಾಮಿ `ನನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದು ಭಾರತದಲ್ಲೇ’ ಎಂದು ನೆನಪಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಮುಂಬೈ: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಈ ವರ್ಷದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಲಿದ್ದಾರೆ.

    ಪಿ.ವಿ ಸಿಂಧು ಅವರು ಸದ್ಯ ಕಾಲಿನ ಪಾದದ ಫ್ರ್ಯಾಕ್ಚರ್‌ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    ಕಾಮನ್‌ಲ್ತ್‌ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ.ಸಿಂದು ಕಾಲು ನೋವಿನ ಹೊರತಾಗಿಯೂ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ಸ್ ಪಂದ್ಯವನ್ನು ಆಡಿದ್ದರು.

    ಈ ಕುರಿತು ಟ್ವೀಟ್ ಮಾಡಿರುವ ಸಿಂಧು, `ದುರಾದೃಷ್ಟವಶಾತ್ ನಾನು ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಹೊರಗುಳಿಯಬೇಕಿದೆ. ಸದ್ಯ ನಾನು ಗಾಯದ ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದೇನೆ. ಕಾಮನ್‌ವೆಲ್ತ್ ಕ್ವಾಲಿಫೈಯರ್‌ನಲ್ಲಿಯೇ ಗಾಯದ ಭಯವಿತ್ತು. ಆದರೆ ನನ್ನ ತರಬೇತುದಾರರು ಹಾಗೂ ದೈಹಿಕ ತರಬೇತುದಾರರ ಸಹಾಯದಿಂದ ಪಂದ್ಯವನ್ನಾಡಿದೆ ಎಂದು ಸಿಂಧು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಬರ್ಮಿಂಗ್‌ಹ್ಯಾಮ್‌ನಿಂದ ಹೈದರಾಬಾದ್‌ಗೆ ಹಿಂದಿರುಗಿದ ನಂತರ ತಕ್ಷಣ ನಾನು ಎಂಆರ್‌ಐ ಸ್ಕ್ಯಾನ್‌ಗೆ ಧಾವಿಸಿದೆ. ವೈದ್ಯರು ನನ್ನ ಎಡಪಾದದಲ್ಲಿ ಗಂಭೀರ ಸಮಸ್ಯೆಯಾಗಿರುವುದನ್ನು ಗುರುತಿಸಿ ಕೆಲ ವಾರಗಳ ವರೆಗೆ ವಿಶ್ರಾಂತಿ ಪಡೆಯುವಂತೆ ಶಿಫಾರಸು ಮಾಡಿದ್ದಾರೆ. ಕೆಲವೇ ವಾರಗಳಲ್ಲಿ ನಾನು ತರಬೇತಿಗೆ ಹಿಂದಿರುಗಬೇಕು. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    2020ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಳ್ಳಿ ಪದಕ, 2019ರ ಟೂರ್ನಿಯಲ್ಲಿ ಚಿನ್ನದ ಪದಕ ನಂತರ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ. ಕೊನೆಯದಾಗಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಹಾಗೂ ಸಿಂಗಲ್ಸ್ನಲ್ಲಿ ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ಬರ್ಮಿಂಗ್‌ಹ್ಯಾಮ್: ಈ ಬಾರಿ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪ್ರತಿಷ್ಠಿತ ಕಾಮನ್‌ವೆಲ್ತ್ನಲ್ಲಿ 61 ಪದಗಳನ್ನು ಗೆದ್ದು ಬೀಗಿದ ಭಾರತ 4ನೇ ಸ್ಥಾನದೊಂದಿಗೆ ಹೊರಹೊಮ್ಮಿತು. ಈ ಬೆನ್ನಲ್ಲೇ 2026ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಎಲ್ಲಿ ನಡೆಯಲಿದೆ ಎನ್ನುವ ಅಧಿಕೃತ ಮಾಹಿತಿ ಹೊರಬಿದ್ದಿದೆ.

    ಮುಂದಿನ ಕಾಮನ್‌ವೆಲ್ತ್ ಗೇಮ್ಸ್ 2026ಕ್ಕೆ ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿ ನಡೆಯಲಿದೆ. 2026ರ ಮಾರ್ಚ್ 17 ರಿಂದ ಮಾರ್ಚ್ 29ರ ವರೆಗೆ ನಡೆಯಲಿದ್ದು, ಸುಮಾರು 20 ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು ಕಾಮನ್‌ವೆಲ್ತ್ ಕ್ರೀಡಾಮಂಡಳಿ ತಿಳಿಸಿದೆ. ಇದನ್ನೂ ಓದಿ: CWG 2022: ಬ್ಯಾಡ್ಮಿಂಟನ್‍ನಲ್ಲಿ 20ರ ಹರೆಯದ ಯುವಕನಿಗೆ ಚಿನ್ನದ ಹಾರ – ದಿಗ್ಗಜರ ಸಾಲಿಗೆ ಸೇರಿದ ಲಕ್ಷ್ಯ ಸೇನ್

    ಈ ಬಾರಿ ಬರ್ಮಿಂಗ್‌ಹ್ಯಾಂನಲ್ಲಿ ನಡೆದ ಕಾಮನ್‌ವೆಲ್ತ್ನಲ್ಲಿ ಒಟ್ಟು 61 ಪದಕಗಳನ್ನು ಗೆದ್ದು, ಭಾರತ 4ನೇ ಸ್ಥಾನ ಗಳಿಸಿದೆ. 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚಿನ ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ಹೊರಹೊಮ್ಮಿದೆ. 2010ಲ್ಲಿಯೂ ಭಾರತ 38 ಚಿನ್ನ ಸೇರಿದಂತೆ 101 ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನ ನೀಡಿತ್ತು. ಮ್ಯಾಂಚೆಸ್ಟರ್-2002ರಲ್ಲಿ 69 ಪದಕ, ಗೋಲ್ಡ್ ಕೋಸ್ಟ್-2018ರಲ್ಲಿ 66 ಪದಕ ಹಾಗೂ ಗ್ಲಾಸ್ಗೋ-2014ರಲ್ಲಿ 64 ಪದಕಗಳನ್ನು ಭಾರತ ಮುಡಿಗೇರಿಸಿಕೊಂಡಿತ್ತು.

    ಯಾವ ಕ್ರೀಡೆಯಲ್ಲಿ ಎಷ್ಟು ಪದಕ: ಕುಸ್ತಿಯಲ್ಲಿ 6 ಚಿನ್ನ, 1 ಬೆಳ್ಳಿ, 5 ಕಂಚು. ಟೇಬಲ್ ಟೆನ್ನಿಸ್‌ನಲ್ಲಿ 4 ಚಿನ್ನ, 1 ಬೆಳ್ಳಿ, 2 ಕಂಚು. ವೈಟ್‌ಲಿಫ್ಟಿಂಗ್‌ನಲ್ಲಿ 3 ಚಿನ್ನ, 3 ಬೆಳ್ಳಿ, 4 ಕಂಚು. ಬಾಕ್ಸಿಂಗ್‌ನಲ್ಲಿ 3 ಚಿನ್ನ, 1 ಬೆಳ್ಳಿ, 3 ಕಂಚು. ಬ್ಯಾಡ್ಮಿಂಟನ್‌ನಲ್ಲಿ 3 ಚಿನ್ನ, 1 ಬೆಳ್ಳಿ, 2 ಕಂಚು. ಅಥ್ಲೆಟಿಕ್ಸ್ನಲ್ಲಿ 1 ಚಿನ್ನ, 4 ಬೆಳ್ಳಿ, 3 ಕಂಚು. ಲಾನ್ ಬೌಲ್ಸ್ನಲ್ಲಿ 1 ಚಿನ್ನ, 1 ಬೆಳ್ಳಿ. ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ 1 ಚಿನ್ನ. ಜುಡೋದಲ್ಲಿ 2 ಬೆಳ್ಳಿ, 1 ಕಂಚು. ಹಾಕಿಯಲ್ಲಿ 1 ಬೆಳ್ಳಿ, 1 ಕಂಚು. ಕ್ರಿಕೆಟ್‌ನಲ್ಲಿ 1 ಬೆಳ್ಳಿ. ಸ್ಕ್ವಾಷ್‌ನಲ್ಲಿ 2 ಕಂಚು.

    ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದ ಕೊಹ್ಲಿ: ಈ ಬಾರಿ ಕಾಮನ್‌ವೆಲ್ತ್‌ನಲ್ಲಿ ಪ್ರಶಸ್ತಿ ವಿಜೇತರಿಗೆ ಶುಭ ಕೋರಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ನೀವು ನಮ್ಮ ದೇಶಕ್ಕೆ ದೊಡ್ಡ ಪ್ರಶಸ್ತಿಗಳನ್ನೇ ತಂದಿದ್ದೀರಿ. ಎಲ್ಲಾ ವಿಜೇತರು ಹಾಗೂ ಕಾಮನ್‌ವೆಲ್ತ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು. ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ’ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಮನ್‌ವೆಲ್ತ್‌ನಲ್ಲಿ ಹ್ಯಾಟ್ರಿಕ್‌ ಸಾಧನೆ – ಪಿವಿ ಸಿಂಧುಗೆ ಚಿನ್ನ

    ಕಾಮನ್‌ವೆಲ್ತ್‌ನಲ್ಲಿ ಹ್ಯಾಟ್ರಿಕ್‌ ಸಾಧನೆ – ಪಿವಿ ಸಿಂಧುಗೆ ಚಿನ್ನ

    ಬರ್ಮಿಂಗ್‌ಹ್ಯಾಮ್‌: ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿ.ವಿ. ಸಿಂಧು ಕಾಮನ್‌ವೆಲ್ತ್‌ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

    ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ನೇರ ಸೆಟ್‌ಗಳಿಂದ ಪಂದ್ಯವನ್ನು ಗೆದ್ದು ಸತತ ಮೂರು ಕಾಮನ್‌ವೆಲ್ತ್‌ ಕ್ರೀಡೆಗಳಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

    ಈ ಹಿಂದೆ 2014ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಕಂಚು, 2018 ರಲ್ಲಿ ಸೈನಾ ನೆಹ್ವಾಲ್‌ ವಿರುದ್ಧ ಸೋತು ಬೆಳ್ಳಿ ಗೆದ್ದಿದ್ದ ಸಿಂಧು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿವ ಮೂಲಕ ಕನಸು ನನಸು ಮಾಡಿದ್ದಾರೆ.

    19 ಚಿನ್ನ, 15 ಬೆಳ್ಳಿ, 22 ಕಂಚಿನ ಪದಕ ಗೆದ್ದಿರುವ ಭಾರತ ಈಗ ಪದಕ ಪಟ್ಟಿಯಲ್ಲಿ ನಾಲ್ಕನೇಯ ಸ್ಥಾನಕ್ಕೆ ಜಿಗಿದಿದೆ.

    Live Tv
    [brid partner=56869869 player=32851 video=960834 autoplay=true]