Tag: PV Sindhu

  • CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿ ಎರಡು ಚಿನ್ನದ ಪದಕಗಳು ಭಾರತದ ಪಾಲಾಗಿವೆ.

    48 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ನೀತು ಗಂಗಾಸ್ ಹಾಗೂ 51 ಕೆಜಿ ಪುರುಷ ವಿಭಾಗದಲ್ಲಿ ಅಮಿತ್ ಪಂಗಲ್ ಭರ್ಜರಿ ಜಯ ಸಾಧಿಸಿದ್ದು, ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

    ಪುರುಷರ ಫ್ಲೈವೇಟ್‌ನಲ್ಲಿ ಎದುರಾಳಿಯಾಗಿದ್ದ ಯುರೋಪಿಯನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಇಂಗ್ಲೆಂಡ್‌ನ ಕಿಯಾರನ್ ಮ್ಯಾಕ್‌ಡೊನಾಲ್ಡ್ ಅವರನ್ನು 5-0 ಅಂತರದಿಂದಲ್ಲಿ ಮಣಿಸುವ ಮೂಲಕ ಪಂಗಲ್ ಚಿನ್ನದ ಹಾರಕ್ಕೆ ಕೊರಳೊಡ್ಡಿದರು. 2018ರ  ಕಾಮನ್‌ವೆಲ್ತ್ ಆವೃತ್ತಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದ ಪಂಗಾಲ್ ಈ ಬಾರಿ ಉತ್ತಮ ಪ್ರದರ್ಶನದಿಂದ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರ ಹಾಕಿಯಲ್ಲಿ ರೋಚಕ ಕಾದಾಟ – ಪೆನಾಲ್ಟಿ ಶೂಟೌಟ್‍ನಲ್ಲಿ ಗೆದ್ದು ಕಂಚು ಮುಡಿಗೇರಿಸಿಕೊಂಡ ಭಾರತ

    ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತರಾಗಿದ್ದ ನೀತು ಗಂಗಾಸ್ ಇಂಗ್ಲೆಂಡ್‌ನ ಡೆಮಿ-ಜೇಡ್ ರೆಸ್ಟನ್ ರನ್ನು 5-0 ಅಂತರದಲ್ಲಿ ಬಗ್ಗು ಬಡಿಯುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದಾರೆ.

    ಸಿಂಧು ಫೈನಲ್‌ಗೆ ಎಂಟ್ರಿ: 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತರಾದ ಸಿಂಧು ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಸಿಂಗಾಪುರದ ಯೆಯೂ ಜಿಯಾಮಿನ್ ಅವರೊಂದಿಗೆ 49 ನಿಮಿಷಗಳ ಕಾಲ ಸೆಣಸಿದ ಸಿಂಧು ಜಿಯಾಮಿನ್ ಅವರನ್ನು 21-19, 21-17 ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆಯನ್ನೂ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Commonwealth Games: ಟಾಪ್-10 ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ

    Commonwealth Games: ಟಾಪ್-10 ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ

    ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022ರ ಕಾಮನ್‌ವೆಲ್ತ್ ಗೇಮ್ಸ್ ರೋಚಕತೆಯಿಂದ ಕೂಡಿದೆ. 72 ರಾಷ್ಟ್ರಗಳಿಂದ 5 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಕಣಕ್ಕಿಳಿದು, ಪೈಪೋಟಿ ನೀಡುತ್ತಿದ್ದಾರೆ.

    ಮಹಿಳಾ ಕ್ರಿಕೆಟ್, 3*3 ಬಾಸ್ಕೆಟ್‌ಬಾಲ್, ವ್ಹೀಲ್ ಚೇರ್ ಬಾಸ್ಕೆಟ್‌ಬಾಲ್, ಪ್ಯಾರಾ ಟೇಬಲ್ ಟೆನ್ನಿಸ್ ಕ್ರೀಡೆಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಸಾವಿರಾರು ಕ್ರೀಡಾ ಪ್ರತಿಭೆಗಳು ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡುತ್ತಿದ್ದು, ಇದರ ಟಾಪ್-10 ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದುಕೊಂಡಿದೆ. ಇದನ್ನೂ ಓದಿ: ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಕಳೆದ ಮೂರು ದಿನಗಳಿಂದಲೂ ಭಾರತ ಪದಕಗಳ ಭರ್ಜರಿ ಬೇಟೆಯಾಡುತ್ತಿದೆ. 21ರ ತರುಣ ಸಂಕೇತ್ ಮಹಾದೇವ್ ಸರ್ಗರ್ ಅವರು ಬೆಳ್ಳಿ ಪದಕ ಪಡೆಯುವ ಮೂಲಕ ಖಾತೆ ತೆರೆದ ಭಾರತ ಕಳೆದ ಮೂರು ದಿನಗಳಲ್ಲಿ 3 ಚಿನ್ನ ಸೇರಿ ಒಟ್ಟು 9 ಪದಕಗಳನ್ನು ಪಡೆಯುವ ಮೂಲಕ 6ನೇ ಸ್ಥಾನಕ್ಕೆ ಜಿಗಿದಿದೆ.

    ಆಸ್ಟ್ರೇಲಿಯಾ 31 ಚಿನ್ನ, 20 ಬೆಳ್ಳಿ ಹಾಗೂ 20 ಕಂಚು ಸೇರಿ 71 ಪದಕಗಳನ್ನು ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದೆ. 21 ಚಿನ್ನ, 22 ಬೆಳ್ಳಿ ಹಾಗೂ 11 ಕಂಚಿನ ಪದಕ ಪಡೆದ ಇಂಗ್ಲೆಂಡ್ 2ನೇ ಸ್ಥಾನದಲ್ಲಿದೆ 24 ಪದಗಳನ್ನು ಪಡೆದ ನ್ಯೂಜಿಲೆಂಡ್ 3ನೇ ಸ್ಥಾನ, 33 ಪದಕ ಪಡೆದ ಕೆನಡಾ 4ನೇ ಸ್ಥಾನ, 12 ಪದಕ ಪಡೆದ ಸೌತ್ ಆಫ್ರಿಕಾ 5ನೇ ಸ್ಥಾನದಲ್ಲಿದ್ದು, 9 ಪದಕಗಳನ್ನು ಪಡೆದ ಭಾರತ 6ನೇ ಸ್ಥಾನ ಉಳಿಸಿಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಭಾರತ 12-16ನೇ ಸ್ಥಾನದಲ್ಲಿತ್ತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾಬಾಯಿ ಚಾನು ಕಾಮನ್‌ವೆಲ್ತ್‌ನಲ್ಲಿ ಚಿನ್ನದ ಪದಕ ಪಡೆದರು. ನಂತರದಲ್ಲಿ ಜೆರೆಮಿ ಲಾಲ್ರಿನ್ನುಂಗಾ, ಅಚಿಂತ್ ಶೆಯುಲಿ ತಲಾ ಒಂದೊಂದು ಚಿನ್ನದ ಪದಕ ಗಿಟ್ಟಿಸಿಕೊಂಡರು. ಸಂಕೇತ್ ಸರ್ಗರ್, ಬಿಂದ್ಯಾರಾಣಿ ದೇವಿ ಹಾಗೂ ಸುಶೀಲಾ ದೇವ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರೆ, ಕನ್ನಡಿಗ ಗುರುರಾಜ್ ಪೂಜಾರಿ, ವಿಜಯ್‌ಕುಮಾರ್ ಯಾದವ್ ಹಾಗೂ ಹರ್ಜಿಂದರ್ ಕೌರ್ ಕಂಚಿನ ಪದಕಗಳನ್ನು ಗೆದ್ದು ಬೀಗಿದ್ದಾರೆ.

    ದೇಶ-ವಿದೇಶಗಳಿಂದ ಸಾವಿರಾರು ಕ್ರೀಡಾಪ್ರತಿಭೆಗಳು ತಮ್ಮ ಸಾಮರ್ಥ್ಯ ಮೆರೆಯುತ್ತಿದ್ದಾರೆ. ಈ ನೆಡುವೆ ಭಾರತದ ಯುವ ಸಮೂಹ ಹೊಸ ದಾಖಲೆ ಬರೆಯುವತ್ತ ದಾಪುಗಾಲು ಹಾಕುತ್ತಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಮಾನ್ಯರು ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ ಕಾಮನ್‍ವೆಲ್ತ್ ಗೇಮ್ಸ್ ಕಲರವ – ಪಿ.ವಿ ಸಿಂಧು ಧ್ವಜಧಾರಿ

    ಇಂದಿನಿಂದ ಕಾಮನ್‍ವೆಲ್ತ್ ಗೇಮ್ಸ್ ಕಲರವ – ಪಿ.ವಿ ಸಿಂಧು ಧ್ವಜಧಾರಿ

    ಲಂಡನ್: ಇಂದಿನಿಂದ ಬರ್ಮಿಂಗ್ ಹ್ಯಾಂನಲ್ಲಿ ಕಾಮನ್‍ವೆಲ್ತ್ ಗೇಮ್ಸ್ ಆರಂಭಗೊಳ್ಳಲಿದೆ. ಇಂದಿನ ಉದ್ಘಾಟನಾ ಸಮಾರಂಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದು ಭಾರತ ಕ್ರೀಡಾಪಟುಗಳ ತಂಡವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಮತ್ತು ಮನ್‍ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ.

    ಕಾಮನ್‍ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿ ಇಂದಿನಿಂದ ಶುರುವಾಗಲಿದೆ. ಇಂಗ್ಲೆಂಡ್‍ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯಲಿರುವ ಈ ಕ್ರೀಡಾಕೂಟದಲ್ಲಿ 72 ಕಾಮನ್‍ವೆಲ್ತ್ ರಾಷ್ಟ್ರಗಳ 5000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಭಾರತದಿಂದ 214 ಸ್ಪರ್ಧಿಗಳು ವಿವಿಧ ಸ್ಫರ್ದೆಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಕ್ರೀಡಾಕೂಟಗಳಲ್ಲಿ 134 ಪುರುಷರ ಪದಕ ಸ್ಪರ್ಧೆಗಳು ಮತ್ತು 136 ಮಹಿಳೆಯರ ಪದಕ ಸ್ಪರ್ಧೆಗಳು ನಡೆಯಲಿದೆ. ಇದನ್ನೂ ಓದಿ: ಗಿಲ್, ಚಹಲ್ ಆಟಕ್ಕೆ ದಕ್ಕಿದ ಜಯ – ವೆಸ್ಟ್ ಇಂಡೀಸ್‍ನಲ್ಲಿ ಚೊಚ್ಚಲ ಬಾರಿಗೆ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

    ಈ ಹಿಂದೆ ನೀರಜ್ ಚೋಪ್ರಾ ಧ್ವಜಧಾರಿಯಾಗಲಿದ್ದಾರೆ ಎನ್ನಲಾಗಿತ್ತು. ಗಾಯದ ಕಾರಣ ಕಾಮನ್‍ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಕಾರಣ ಪಿ.ವಿ ಸಿಂಧು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಮೂಲಕ ಪಿ.ವಿ ಸಿಂಧು ಎರಡನೇ ಬಾರಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ. 2018ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಪಿ.ವಿ ಸಿಂಧು ಧ್ವಜಧಾರಿಯಾಗಿದ್ದರು. ಇದನ್ನೂ ಓದಿ: ಬಿಸಿಸಿಐ ಶೀರ್ಷಿಕೆ ಪ್ರಾಯೋಜಕ ಪಡೆದುಕೊಂಡ ಮಾಸ್ಟರ್ ಕಾರ್ಡ್ – ಪ್ರತಿ ಪಂದ್ಯಕ್ಕೆ ಸಿಗುತ್ತೆ ಕೋಟಿ ಕೋಟಿ

    ಉದ್ಘಾಟನಾ ಸಮಾರಂಭ ಇಂಗ್ಲೆಂಡ್‍ನ ಬರ್ಮಿಂಗ್ ಹ್ಯಾಮ್‍ನಲ್ಲಿರುವ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭಕ್ಕೆ ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ಕಾಲಮಾನ ಇಂದು ರಾತ್ರಿ 11 ಗಂಟೆಯಿಂದ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಲಿದೆ.

    ಕಾಮನ್‍ವೆಲ್ತ್ ಕ್ರೀಡಾಕೂಟ ಯಾರಿಗೆಲ್ಲ ಅವಕಾಶ:
    ಕಾಮನ್‌ವೆಲ್ತ್‌ ಕ್ರೀಡಾಕೂಟ 1930 ರಲ್ಲಿ ಪ್ರಾರಂಭವಾಗಿ ಪ್ರತೀ ನಾಲ್ಕು ವರ್ಷಕ್ಕೆ ಒಮ್ಮೆ ಈ ಕ್ರೀಡಾ ಕಾರ್ಯಕ್ರಮ ನಡೆಯುತ್ತದೆ. ಜಗತ್ತಿನಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟ ಮತ್ತು ಏಷ್ಯನ್‌ ಗೇಮ್ಸ್ ಗಳನ್ನು ಹೊರತು ಪಡಿಸಿದರೆ ಮೂರನೇಯ ದೊಡ್ಡ ಕ್ರೀಡಾ ಕೂಟ. ಇದು ಹಿಂದೆ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟ ದೇಶಗಳು ಹಾಗೂ ಈಗಲೂ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟ ದೇಶಗಳಿಗೆ ಮಾತ್ರ ಸೀಮಿತವಾಗಿದೆ. ಕಾಮನ್‍ವೆಲ್ತ್ ಕ್ರೀಡಾಕೂಟವು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತದೆ. ಕಾಮನ್‍ವೆಲ್ತ್ ಒಕ್ಕೂಟ ಸದಸ್ಯ ರಾಷ್ಟ್ರಗಳು ಮಾತ್ರ ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತವೆ. ಇದೀಗ ಕಾಮನ್‍ವೆಲ್ತ್ ಒಕ್ಕೂಟದಲ್ಲಿ 56 ಸದಸ್ಯ ರಾಷ್ಟ್ರಗಳಿವೆ. ಇದಲ್ಲದೆ ಒಲಿಂಪಿಕ್ಸ್‌ನಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸದ ಇತರ ಪ್ರಾಂತ್ಯಗಳಿಗೂ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅದರಂತೆ ಈ ಬಾರಿ 5 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಕೂಟದಲ್ಲಿ ಭಾಗವಹಿಸಲಿದ್ದಾರೆ. ಇಂದಿನಿಂದ ಆರಂಭಗೊಳ್ಳುವ ಕಾಮನ್‍ವೆಲ್ತ್ ಗೇಮ್ಸ್‌ಗೆ ಆಗಸ್ಟ್ 8 ರಂದು ತೆರೆಬೀಳಲಿದೆ.

    2018ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ ಒಟ್ಟು 66 ಪದಕ ಗೆದ್ದಿತ್ತು. ಈ ಮೂಲಕ ಪದಕ ಪಟ್ಟಿಯಲ್ಲಿ ಟಾಪ್-5 ರಲ್ಲಿ ಸ್ಥಾನ ಸಂಪಾದಿಸಿತ್ತು. ಈ ಬಾರಿ ಕೂಡ ಪದಕ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದ್ದು, ಈ ಬಾರಿ ಟಿ20 ಮಾದರಿಯ ಮಹಿಳಾ ಕ್ರಿಕೆಟ್ ಕೂಡ ಸೇರಿಕೊಂಡಿದ್ದು ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ಪದಕ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇದರೊಂದಿಗೆ ಹಲವು ಅಥ್ಲೀಟ್‍ಗಳ ಮೇಲೆ ಪದಕದ ನಿರೀಕ್ಷೆ ಇರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಂಧು ಮಡಿಲಿಗೆ ಸಿಂಗಾಪುರ ಓಪನ್ ಕಪ್‌

    ಸಿಂಧು ಮಡಿಲಿಗೆ ಸಿಂಗಾಪುರ ಓಪನ್ ಕಪ್‌

    ಸಿಂಗಾಪುರ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್-2022 ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಭರ್ಜರಿ ಜಯ ಸಾಧಿಸಿದ್ದು, ಮೊದಲ ಸೂಪರ್-500 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

    ಚೀನಾದ ವಾಂಗ್ ಝಿ ಯಿ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಸಿಂಧು, ಸೂಪರ್-500 ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಆರಂಭದಲ್ಲೇ ವಾಂಗ್ ವಿರುದ್ಧ ಮೇಲುಗೈ ಸಾಧಿಸಿದ್ದ ಸಿಂಧು, ಮೊದಲ ಸೆಟ್ 21-9 ಅಂತರದಿAದ ಗೆದ್ದುಕೊಂಡರು. 2ನೇ ಸೆಟ್‌ನಲ್ಲಿ ವಾಂಗ್ ಝಿ ಯಿ ಕಂಬ್ಯಾಕ್ ಮಾಡಿದ್ದರು. 2ನೇ ಸುತ್ತಿನ ಆರಂಭದಲ್ಲೇ ಅತ್ಯುತ್ತಮ ಸ್ಮ್ಯಾಶ್‌ ಮೂಲಕ 6 ಪಾಯಿಂಟ್ ಗಳಿಸಿ ಸಿಂಧು ಅವರನ್ನ ಇಕ್ಕಟ್ಟಿಗೆ ಸಿಲುಕಿಸಿದ್ದರು. ಪರಿಣಾಮ 2ನೇ ಸುತ್ತಿನಲ್ಲಿ ಸಿಂಧು 11-21 ಅಂತರದಲ್ಲಿ ಸೋತರು. ಇದನ್ನೂ ಓದಿ: ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಮೊದಲೆರಡು ಸುತ್ತಿನಲ್ಲಿ ಇಬ್ಬರೂ ಸಮಬಲ ಸಾಧಿಸಿದ್ದರಿಂದ ಅಂತಿಮ ಸುತ್ತಿನ ಪಂದ್ಯ ರೋಚಕತೆಯಿಂದ ಕೂಡಿತ್ತು. ಅದರಂತೆ ಮೊದಲ 5 ಪಾಯಿಂಟ್‌ವರೆಗೂ ಜಿದ್ದಾ-ಜಿದ್ದಿನ ಹೋರಾಟ ಕಂಡು ಬಂದಿತು. ಈ ಹಂತದಲ್ಲಿ ಸಿಂಧು ಭರ್ಜರಿ ಸ್ಮ್ಯಾಶ್‌ಗಳ ಮೂಲಕ ವಾಂಗ್ ಅವರನ್ನು ಹಿಂದಿಕ್ಕಿದ್ದರು. ಇದರಿಂದ ವಾಂಗ್ ಝಿ ಯಿ ಅವರ ಪಾಯಿಂಟ್ 6 ಇದ್ದಾಗಲೇ ಸಿಂಧು ಅವರ ಪಾಯಿಂಟ್ 11ಕ್ಕೆ ಏರಿತ್ತು.

    ಮಧ್ಯಂತರದಲ್ಲಿ ಮತ್ತೊಮ್ಮೆ ಅದ್ಭುತವಾಗಿ ಕಂಬ್ಯಾಕ್ ಮಾಡಿದ ಚೀನಿ ಆಟಗಾರ್ತಿ ತೀವ್ರ ಪೈಪೋಟಿ ನೀಡಿದರು. ಸಿಂಧು 12 ಪಾಯಿಂಟ್ ಕಲೆಹಾಕುವಷ್ಟರಲ್ಲಿ ವಾಂಗ್ ಝಿ 11ಕ್ಕೆ ಬಂದು ನಿಂತರು. ಇದಾಗ್ಯೂ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಸಿಂಧು ಅವರು ಮತ್ತೊಮ್ಮೆ ಅಬ್ಬರಿಸಿ ಮೇಲುಗೈ ಸಾಧಿಸಿದರು. ಅಂತಿಮವಾಗಿ 21-15ರ ಅಂತರದಲ್ಲಿ ಗೆಲ್ಲುವ ಮೂಲಕ ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದರು.

    ನಿನ್ನೆ 32 ನಿಮಿಷಗಳ ಕಾಲ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ ಜಪಾನಿನ ಸೈನಾ ಕವಾಕಮಿ ಅವರನ್ನು 21-15 21-7 ಅಂತರದಲ್ಲಿ ಸೋಲಿಸುವ ಮೂಲಕ ಸಿಂಧು ಮೇಲುಗೈ ಸಾಧಿಸಿದ್ದರು. ಈ ಮೂಲಕ ವಿಶ್ವದ 38ನೇ ಶ್ರೇಯಾಂಕದ ಸೈನಾ ಕವಾಕಮಿ ವಿರುದ್ಧ ಸಂಪೂರ್ಣ ಹಿಡಿತ ತೋರಿ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದರು. ಇದನ್ನೂ ಓದಿ: Singapore Open 2022: ಫೈನಲ್‍ಗೆ ಲಗ್ಗೆ ಇಟ್ಟ ಪಿ.ವಿ ಸಿಂಧು

    ಎರಡು ಬಾರಿ ಒಲಿಂಪಿಕ್ಸ್ ಪ್ರಶಸ್ತಿ ವಿಜೇತರಾಗಿರುವ ಪಿ.ವಿ.ಸಿಂಧು 2022ನೇ ಋತುವಿನಲ್ಲಿ ಸಿಂಗಾಪುರ್ ಓಪನ್ 2022 ಸೈಯದ್ ಮೋದಿ ಇಂಟರ್‌ನ್ಯಾಷನಲ್ ಹಾಗೂ ಸ್ವಿಸ್ ಓಪನ್ ಬಿಡಬ್ಲ್ಯೂಎಫ್ ಸೂಪರ್ -300 ಪ್ರಶಸ್ತಿಗಳನ್ನು ಗೆದ್ದ ನಂತರ ಸೂಪರ್ 500 ಪ್ರಶಸ್ತಿ ಸಿಂಧು ಅವರ 3ನೇ ಪ್ರಶಸ್ತಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • Singapore Open 2022: ಫೈನಲ್‍ಗೆ ಲಗ್ಗೆ ಇಟ್ಟ ಪಿ.ವಿ ಸಿಂಧು

    Singapore Open 2022: ಫೈನಲ್‍ಗೆ ಲಗ್ಗೆ ಇಟ್ಟ ಪಿ.ವಿ ಸಿಂಧು

    ಸಿಂಗಾಪುರ: ಸಿಂಗಾಪುರ ಮುಕ್ತ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್‍ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು  ಗೆಲುವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.

    32 ನಿಮಿಷಗಳ ಕಾಲ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ  21-15 21-7 ಸೆಟ್‍ಗಳಿಂದ ಜಪಾನಿನ ಸೈನಾ ಕವಾಕಮಿ ಅವರನ್ನು ಸೋಲಿಸುವ ಮೂಲಕ ಸಿಂಧು ಮೇಲುಗೈ ಸಾಧಿಸಿದರು. ಈ ಮೂಲಕ ವಿಶ್ವದ 38ನೇ ಶ್ರೇಯಾಂಕದ ಸೈನಾ ಕವಾಕಮಿ ವಿರುದ್ಧ ಸಂಪೂರ್ಣ ಹಿಡಿತ ತೋರಿ ಫೈನಲ್‍ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ 2022ನೇ ವರ್ಷದಲ್ಲಿ ತನ್ನ ಮೊದಲ ಸೂಪರ್ 500 ಪ್ರಶಸ್ತಿಯ ಗೆಲುವಿಗೆ ಇನ್ನೊಂದು ಮೆಟ್ಟಿಲು ಬಾಕಿ ಇದೆ. ಇದನ್ನೂ ಓದಿ: ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು, ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್‌ ಮತ್ತು ಸ್ವಿಸ್ ಓಪನ್‍ನಲ್ಲಿ ಎರಡು ಸೂಪರ್ 300 ಪ್ರಶಸ್ತಿಗಳನ್ನು ಗೆದ್ದಿದ್ದರು. ಈ ಹಿಂದೆ 2018ರ ಚೀನಾ ಓಪನ್‍ನಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ಸಿಂಧು 2-0 ದಾಖಲೆ ಬರೆದಿದ್ದರು. ಇದನ್ನೂ ಓದಿ: ನಟಿ ಸುಶ್ಮಿತಾ ಸೇನ್ ಜೊತೆಗೆ ಲಲಿತ್ ಮೋದಿ ಲವ್ವಿ-ಡವ್ವಿ

    Live Tv
    [brid partner=56869869 player=32851 video=960834 autoplay=true]

  • Thailand Open – ನಂ.1 ಆಟಗಾರ್ತಿ ಯಮಗುಚಿಯನ್ನು ಸೋಲಿಸಿ ಸೆಮಿಗೆ ಸಿಂಧು ಎಂಟ್ರಿ

    Thailand Open – ನಂ.1 ಆಟಗಾರ್ತಿ ಯಮಗುಚಿಯನ್ನು ಸೋಲಿಸಿ ಸೆಮಿಗೆ ಸಿಂಧು ಎಂಟ್ರಿ

    ಬ್ಯಾಂಕಾಕ್: ಥೈಲ್ಯಾಂಡ್ ಓಪನ್ 2022 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಶ್ವ ನಂ.1 ಬ್ಯಾಡ್ಮಿಂಟನ್ ಆಟಗಾರ್ತಿ ಅಕಾನೆ ಯಮಗುಚಿಯನ್ನು ಕ್ವಾರ್ಟರ್ ಫೈನಲ್‍ನಲ್ಲಿ ಸೋಲಿಸಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಸೆಮಿಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.

    ಬ್ಯಾಂಕಾಕ್‍ನಲ್ಲಿ ನಡೆಯುತ್ತಿರುವ ಟೂರ್ನಿಯ ಕ್ವಾಟರ್ ಫೈನಲ್ ಪಂದ್ಯ ಬಾರಿ ರೋಚಕವಾಗಿ ಕೂಡಿತ್ತು. 51 ನಿಮಿಷಗಳ ವರೆಗಿನ ಹೋರಾಟದಲ್ಲಿ ಕೊನೆಗೆ ಪಿ.ವಿ ಸಿಂಧು 21-15, 20-22, 21-13 ಸೆಟ್‍ಗಳಿಂದ ಜಪಾನಿನ ಸ್ಟಾರ್ ಆಟಗಾರ್ತಿಯ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‍ನಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಈ ವರ್ಷದ ಆರಂಭದಲ್ಲಿ ಯಮಗುಚಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಟೂರ್ನಿಯಲ್ಲಿ ಸಿಂಧುರನ್ನು ಸೋಲಿಸಿದ್ದರು. ಆ ಬಳಿಕ ಥೈಲ್ಯಾಂಡ್ ಓಪನ್ 2022 ಬಾಡ್ಮಿಂಟನ್ ಟೂರ್ನಿಯಲ್ಲಿ ಎದುರುಬದುರಾದ ಇಬ್ಬರು ಆಟಗಾರ್ತಿಯರ ಮಧ್ಯೆ ತೀವ್ರ ಪೈಪೋಟಿ ಎದುರಾಯಿತು. ಆದರೆ ಅಂತಿಮ ಸೆಟ್‍ನಲ್ಲಿ ಯಮಗುಚಿ ಗಾಯಗೊಂಡು ಮೈದಾನ ತೊರೆದರು. ಈ ಮೂಲಕ ಸಿಂಧು ಸೆಮಿಫೈನಲ್‍ಗೆ ಲಗ್ಗೆ ಇಟ್ಟರು. ಇದನ್ನೂ ಓದಿ: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ – ಚಿನ್ನದ ಪದಕ ಗೆದ್ದ ಭಾರತದ ಬಾಕ್ಸರ್ ನಿಖತ್ ಜರೀನ್

    ಸೆಮಿಫೈನಲ್‍ನಲ್ಲಿ ಒಲಿಂಪಿಕ್ಸ್ ಚಾಂಪಿಯನ್ ಚೀನಾದ ಚೆನ್ ಯುಫೀನ್ ವಿರುದ್ಧ ಸಿಂಧು ಸೆಣಸಾಡಲಿದ್ದಾರೆ.

  • ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

    ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

    ಮನಿಲಾ: ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿವಿ ಸಿಂಧು ಅಂಪೈರ್‌ ವಿರುದ್ಧ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಫಿಲಿಪ್ಪೀನ್ಸ್‌ನಲ್ಲಿ ನಡೆದ ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು ಜಪಾನಿನ ಯಮಗುಚಿ ವಿರುದ್ಧ 21-13, 19-21, 16-21 ಸೆಟ್‌ನಿಂದ ಸೋತು ಕಂಚಿನ ಪದಕಕ್ಕೆ ತೃಪ್ತಿ ಪಡೆದಿದ್ದಾರೆ.

    ಎರಡನೇ ಗೇಮ್‌ ವೇಳೆ ಸಿಂಧು 14-12 ರಲ್ಲಿ ಮುಂದಿದ್ದಾಗ ಸರ್ವ್‌ ಮಾಡಲು ಬಹಳ ಸಮಯ ತೆಗೆಯುತ್ತಿದ್ದಾರೆಂದು ಎದುರಾಳಿ ಆಟಗಾರ್ತಿಗೆ ಅಂಪೈರ್‌ 1 ಪೆನಾಲ್ಟಿ ಅಂಕವನ್ನು ನೀಡಿದ್ದರು. ಈ ವೇಳೆ ಸಿಂಧು ಈ ರೀತಿ ಅಂಕ ನೀಡುವುದು ಎಷ್ಟು ಸರಿ ಎಂದು ಮೈದಾನದಲ್ಲೇ ಪ್ರಶ್ನೆ ಮಾಡಿ ಸಿಟ್ಟು ಹೊರ ಹಾಕಿದ್ದರು.

    ಪಂದ್ಯದ ಬಳಿಕ ಮಾತನಾಡಿದ ಸಿಂಧು, ಸರ್ವ್‌ ಮಾಡಲು ತಡ ಮಾಡುತ್ತಿದ್ದೇನೆ ಎಂದು ಹೇಳಿ ಅಂಪೈರ್‌ ಎದುರಾಳಿ ಆಟಗಾರ್ತಿಗೆ ಪೆನಾಲ್ಟಿ ಅಂಕ ನೀಡಿದರು. ಆದರೆ ನಾನು ಸರ್ವ್‌ ಮಾಡುವ ಸಮಯದಲ್ಲಿ ಆಟಗಾರ್ತಿ ಸಿದ್ಧವಾಗಿರಲಿಲ್ಲ. ಆದರೆ ಅಂಪೈರ್‌ ದಿಢೀರ್‌ ಅಂಕವನ್ನು ನೀಡಿದ್ದು ಸರಿಯಲ್ಲ. ಇದರಿಂದಾಗಿ ನನ್ನ ಆತ್ಮವಿಶ್ವಾಸ ಕುಗ್ಗಿತು. ಅಂಪೈರ್‌ ನಿರ್ಧಾರದಿಂದ ನಾನು ಸೋತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಡೇಜಾ CSK ನಾಯಕತ್ವ ತ್ಯಜಿಸಲು ಪ್ರಮುಖ ಕಾರಣವಿದು!

    ಅಂಪೈರ್‌ ಪನಾಲ್ಟಿ ನೀಡುವ ಸಮಯದಲ್ಲಿ ನಾನು ಮುಂದಿದ್ದೆ. ಈ ರೀತಿ ಅಂಕ ನೀಡಿದ್ದು ಅನ್ಯಾಯ. ಪಂದ್ಯದ ರೆಫ್ರಿ ಜೊತೆ ನಾನು ಮಾತನಾಡಿದೆ. ಆದರೆ ರೆಫ್ರಿ ಈಗಾಗಲೇ ಅಂಕ ನೀಡಲಾಗಿದೆ ಏನು ಮಾಡಲು ಆಗುವುದಿಲ್ಲ ಎಂದು ತಿಳಿಸಿದರು. ರಿಪ್ಲೈ ನೋಡುವಾಗ ಅವರಿಗೆ ಈ ತಪ್ಪು ಅರ್ಥವಾಗಬಹುದು. ಅಂಪೈರ್‌ ಈ ರೀತಿ ಅಂಕ ನೀಡದೇ ಇದ್ದಲ್ಲಿ ನಾನು ಪಂದ್ಯವನ್ನು ಗೆದ್ದು ಫೈನಲ್‌ ತಲುಪುತ್ತಿದ್ದೆ ಎಂದು ತಿಳಿಸಿದರು.

    ಸಿಂಧು ತಂದೆ ರಮಣ ಮಾತನಾಡಿ, ಈ ಟೂರ್ನಿಯಲ್ಲಿ ಸಿಂಧು ಚಿನ್ನ ಗೆಲ್ಲುವ ವಿಶ್ವಾಸದಲ್ಲಿದ್ದಳು. ಆಂಪೈರ್‌ ಯಾವುದೇ ಎಚ್ಚರಿಕೆ ನೀಡದೇ ಪೆನಾಲ್ಟಿ ನೀಡಿದ್ದು ತಪ್ಪು. ಮಗಳ ಜೊತೆ ಮಾತನಾಡುವಾಗ ಆಕೆ ಕಣ್ಣೀರಿಟ್ಟಳು ಎಂದು ಹೇಳಿದರು.

    ಅಂಪೈರ್‌ ವಿರುದ್ಧ ಸಿಟ್ಟು ಹೊರ ಹಾಕಿದ್ದ ಸಿಂಧು ಪಂದ್ಯದ ಬಳಿಕ ನಡೆದ ಪದಕ ವಿತರಣೆ ಕಾರ್ಯಕ್ರಮಕ್ಕೂ ಗೈರಾಗಿದ್ದರು.

  • ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪಿ.ವಿ ಸಿಂಧು

    ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪಿ.ವಿ ಸಿಂಧು

    ಬಾಸೆಲ್: ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಥಾಯ್ಲೆಂಡ್‍ನ ಬುಸಾನನ್ ಒಂಗ್‍ಬಮ್ರುಂಗ್‍ಫಾನ್ ವಿರುದ್ಧ ಫೈನಲ್‍ ಪಂದ್ಯ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

    ತೀವ್ರ ಕುತೂಹಲ ಮೂಡಿಸಿದ್ದ ಫೈನಲ್ ಪಂದ್ಯದಲ್ಲಿ ಬುಸಾನನ್ ಒಂಗ್‍ಬಮ್ರುಂಗ್‍ಫಾನ್ ವಿರುದ್ಧ ಸಿಂಧು 21-16, 21-8 ನೇರ ಸೆಟ್‌ನಿಂದ ಫೈನಲ್ ಪಂದ್ಯವನ್ನು ಗೆದ್ದು ಬೀಗಿದರು. ಇದನ್ನೂ ಓದಿ: ಕೊನೆಯ ಓವರ್ ಥ್ರಿಲ್ಲರ್ – ಆ ಒಂದು ‘ನೋ ಬಾಲ್‍’ನಿಂದ ಭಾರತ ತಂಡ ಮನೆಗೆ

    ಪಂದ್ಯ 49 ನಿಮಿಷಗಳ ವರೆಗೆ ಸಾಗಿತ್ತು. ಈ ಮೊದಲು ಬುಸಾನನ್ ಮತ್ತು ಸಿಂಧು 16 ಬಾರಿ ಮುಖಾಮುಖಿಯಾಗಿದ್ದರು. ಇದರಲ್ಲಿ ಸಿಂಧು 16 ಬಾರಿ ಜಯ ಗಳಿಸಿದ್ದರೆ, ಬುಸಾನನ್ ಒಂದು ಬಾರಿ ಮೇಲುಗೈ ಸಾಧಿಸಿದ್ದರು. ಇದೀಗ ಸ್ವಿಸ್ ಓಪನ್ ಫೈನಲ್‍ನಲ್ಲೂ ಸಿಂಧು, ಬುಸಾನನ್ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಜಯಿಸಿದ್ದಾರೆ. ಇದು ಸಿಂಧುಗೆ ಸ್ವಿಸ್ ಓಪನ್‍ನಲ್ಲಿ ಸತತ 2ನೇ ಫೈನಲ್ ಆಗಿತ್ತು. ಕಳೆದ ಬಾರಿ ಅವರು ಫೈನಲ್‍ನಲ್ಲಿ ಸ್ಪೇನ್‍ನ ಕ್ಯಾರೊಲಿನಾ ಮರೀನ್ ವಿರುದ್ಧ ಸೋತಿದ್ದರು. ಇದನ್ನೂ ಓದಿ: 2023 ರಿಂದ ಮಹಿಳಾ ಐಪಿಎಲ್ ಪ್ರಾರಂಭಿಸಲು ಬಿಸಿಸಿಐ ಸಿದ್ಧತೆ

    ಶನಿವಾರ ನಡೆದ ಮಹಿಳಾ ಸಿಂಗಲ್ಸ್‌ನ ರೋಚಕ ಸೆಮಿಫೈನಲ್‍ನಲ್ಲಿ ಸಿಂಧು, ಥಾಯ್ಲೆಂಡ್‍ನ ಸುಪನಿದಾ ಕಟೆಥೊಂಗ್ ವಿರುದ್ಧ 21-18, 15-21, 21-19 ಗೇಮ್‍ಗಳಲ್ಲಿ ಗೆಲುವು ಸಾಧಿಸಿದರು.

  • ಧೋನಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಉತ್ತಮ ವಾಲಿಬಾಲ್ ಆಟಗಾರರು: ಅಶ್ವಲ್ ರೈ

    ಧೋನಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಉತ್ತಮ ವಾಲಿಬಾಲ್ ಆಟಗಾರರು: ಅಶ್ವಲ್ ರೈ

    ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ಮಾಜಿ ನಾಯಕ ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಕ್ರಿಕೆಟ್ ಜೊತೆ ಉತ್ತಮ ವಾಲಿಬಾಲ್ ಆಟಗಾರರಾಗಿದ್ದಾರೆ ಎಂದು ಕೋಲ್ಕತ್ತಾ ಥಂಡರ್ಬೋಲ್ಟ್ಸ್ ನಾಯಕ ಅಶ್ವಲ್ ರೈ ಅಭಿಪ್ರಾಯಪಟ್ಟಿದ್ದಾರೆ.

    ಮುಂಬರುವ (ಪಿವಿಎಲ್) ಪ್ರೈಮ್ ವಾಲಿಬಾಲ್ ಲೀಗ್‍ನ ಪಂದ್ಯಾವಳಿಯ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲ್ಕತ್ತಾ ಥಂಡರ್ಬೋಲ್ಟ್ಸ್ (ಪಿವಿಎಲ್) ವಾಲಿಬಾಲ್ ಲೀಗ್ ಅಭಿಯಾನವನ್ನು ಮುಂದಿನ ವಾರ ಸೋಮವಾರದಿಂದ ಪ್ರಾರಂಭಿಸಲಿದೆ.

    ಧೋನಿ ಮತ್ತು ಪಾಂಡ್ಯ ಪಾಸಿಂಗ್‍ನಲ್ಲಿ ಉತ್ತಮವಾಗಿ ಕಾಣುತ್ತಾರೆ. ರಾಹುಲ್ ಉತ್ತಮ ಹೊಡೆತಗಾರನಾಗಿ ಕಾಣಿಸುತ್ತಾರೆ. ನಾನು ಈ ಹಿಂದೆ ಅವರು ದುಬೈನ ಬೀಚ್‍ವೊಂದರಲ್ಲಿ ವಾಲಿಬಾಲ್ ಆಡುವ ವೀಡಿಯೋವನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇನೆ. ಅವರೊಂದಿಗೆ ವಾಲಿಬಾಲ್ ಆಡುವ ಅವಕಾಶ ನಮಗೆ ಸಿಕ್ಕರೆ ಅದು ನಮ್ಮ ಅದೃಷ್ಟ ನಾನು ಇದಕ್ಕಾಗಿ ಕಾತರನಾಗಿದ್ದೇನೆ ಎಂದರು. ಇದನ್ನೂ ಓದಿ: ಐಪಿಎಲ್ ಹರಾಜಿನ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ

    ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧುರವರು ವಾಲಿಬಾಲ್ ಲೀಗ್‍ನ್ನು ಪ್ರಚಾರ ಮಾಡುತ್ತಿದ್ದು, ಅವರು ನಮ್ಮನ್ನು ಮೈದಾನದಲ್ಲಿ ಭೇಟಿಯಾಗಿ ಎಲ್ಲರೊಂದಿಗೆ ಮಾತನಾಡಿದರು. ವಾಲಿಬಾಲ್ ಆಟಕ್ಕೆ ಉತ್ತಮ ಗುಣಮಟ್ಟ ಮತ್ತು ಸರಿಯಾದ ರೀತಿಯ ಪ್ರಚಾರವನ್ನು ನೀಡಿದರೆ ಅದು ಕ್ರಿಕೆಟ್ ಮಟ್ಟಕ್ಕೆ ಬರಬಹುದು ಎಂದರು. ಇದನ್ನೂ ಓದಿ: U -19 World Cup 2022: 96 ರನ್‌ಗಳ ಭರ್ಜರಿ ಜಯ, ಫೈನಲಿಗೆ ಭಾರತ

    ಎಲ್ಲಾ ಆಟಗಾರರಿಗೆ, ಅವರ ಕ್ರೀಡಾ ಕೌಶಲ್ಯ ಮತ್ತು ಪ್ರದರ್ಶನವನ್ನು ತೋರಿಸಲು ಇದು ಸರಿಯಾದ ವೇದಿಕೆಯಾಗಿದೆ. ಮೊದಲು, ನನಗೆ ಕ್ರೀಡೆಯ ಬಗ್ಗೆ ಅಷ್ಟೊಂದು ಆಸಕ್ತಿ ಇರಲಿಲ್ಲ. ನಂತರ ನಾನು ಕ್ರಿಕೆಟ್ ಮತ್ತು ಫುಟ್‍ಬಾಲ್ ಅನ್ನು ಅನುಸರಿಸಲು ಪ್ರಾರಂಭಿಸಿದೆ. ನಾನು ಪ್ರತಿ ಬಾರಿ ಆಟದ ಮೈದಾನಕ್ಕೆ ಇಳಿದ ಬಳಿಕ ಶ್ರೇಷ್ಠ ಮಟ್ಟದ ಆಟವನ್ನು ಆಡಲು ಶ್ರಮಿಸುತ್ತೇನೆ ಎಂದರು.

    ಫೆಬ್ರವರಿ 5 ರಂದು ಪ್ರೈಮ್ ವಾಲಿಬಾಲ್ ಲೀಗ್‍ಗೆ ಚಾಲನೆ ದೊರೆಯಲಿದ್ದು, ಪಂದ್ಯಾವಳಿಯು ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಆರಂಭಿಕ ಪಂದ್ಯದಲ್ಲಿ ಬಲಿಷ್ಠ ಕೊಚ್ಚಿ ಬ್ಲೂ ಸ್ಪೈಕರ್ಸ್ ವಿರುದ್ಧ ಹೈದರಾಬಾದ್ ಬ್ಲಾಕ್ ಹಾಕ್ಸ್ ತಂಡವನ್ನು ಎದುರಿಸಲಿದೆ. ಸ್ಪರ್ಧೆಯ ಫೈನಲ್ ಫೆಬ್ರವರಿ 27 ರಂದು ನಡೆಯಲಿದೆ.

    ಪಂದ್ಯಾವಳಿಯು 23 ದಿನಗಳ ವರೆಗೆ ನಡೆಯಲಿದ್ದು, ಒಟ್ಟು 24 ಪಂದ್ಯಗಳು ಟೂರ್ನಿಯಲ್ಲಿ ಕಾಣಸಿಗಲಿದೆ. ಏಳು ಫ್ರಾಂಚೈಸಿಗಳಾದ- ಕ್ಯಾಲಿಕಟ್ ಹೀರೋಸ್, ಕೊಚ್ಚಿ ಬ್ಲೂ ಸ್ಪೈಕರ್ಸ್, ಅಹಮದಾಬಾದ್ ಡಿಫೆಂಡರ್ಸ್, ಹೈದರಾಬಾದ್ ಬ್ಲಾಕ್ ಹಾಕ್ಸ್, ಚೆನ್ನೈ ಬ್ಲಿಟ್ಜ್, ಬೆಂಗಳೂರು ಟಾರ್ಪಿಡೋಸ್ ಮತ್ತು ಕೋಲ್ಕತ್ತಾ ಥಂಡರ್ಬೋಲ್ಟ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.

  • ಪಿ. ವಿ ಸಿಂಧುಗೆ BWF ಗೌರವ

    ಪಿ. ವಿ ಸಿಂಧುಗೆ BWF ಗೌರವ

    ನವದೆಹಲಿ: 2 ಬಾರಿ ಒಲಿಂಪಿಕ್ಸ್ ಪದಕವನ್ನು ಗೆದ್ದು ಹೆಮ್ಮೆಗೆ ಪಾತ್ರವಾದ ಪಿ.ವಿ ಸಿಂಧು ಅವರಿಗೆ  ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್‌( ಬಿಡಬ್ಲ್ಯುಎಫ್) ವಿಶೇಷ ಗೌರವ ನೀಡಿದೆ.

    ಬಿಡಬ್ಲ್ಯುಎಫ್ ಅಥ್ಲೀಟ್‌ ಕಮಿಷನ್‍ನ ಸದಸ್ಯೆಯನ್ನಾಗಿ ನೇಮಿಸಿದೆ. ಬಿಡಬ್ಲ್ಯುಎಫ್ ಒಟ್ಟು 6 ಮಂದಿಗೆ ಈ ಗೌರವ ಸಲ್ಲಿಸಿದೆ. ಮಾಜಿ ವಿಶ್ವ ಚಾಂಪಿಯನ್, 26 ವರ್ಷದ ಸಿಂಧು ಸೇರಿ ಆರು ಮಂದಿ ಆಯೋಗಕ್ಕೆ ನೇಮಕವಾಗಿದ್ದು, 2025ರವರೆಗೆ ಇವರ ಅಧಿಕಾರಾವಧಿ ಇರಲಿದೆ. 2021-2025ರ ಅವಧಿಗೆ ಅಥ್ಲೀಟ್‍ಗಳ ಆಯೋಗಕ್ಕೆ ಐರಿಸ್ ವಾಂಗ್ (ಅಮೆರಿಕ), ರಾಬಿನ್ ಟೇಬೆಲಿಂಗ್ (ನೆದಲೆರ್ಂಡ್ಸ್), ಗ್ರೇಸಿಯಾ ಪೋಲಿ (ಇಂಡೊನೇಷ್ಯಾ), ಕಿಮ್ ಸೊಯೊಂಗ್ (ಕೊರಿಯಾ), ಪಿ.ವಿ. ಸಿಂಧು (ಭಾರತ), ಜೆಂಗ್ ಸಿ ವೇ (ಚೀನಾ) ಅವರನ್ನು ನೇಮಿಸಲಾಗಿದೆ ಎಂದು ಬಿಡಬ್ಲ್ಯುಎಫ್ ಹೇಳಿದೆ. ಇದನ್ನೂ ಓದಿ: ಹಿಂದಿಯನ್ನು ವಿರೋಧಿಸುವವರು, ಉರ್ದುವನ್ನು ವಿರೋಧಿಸಲ್ಲ ಯಾಕೆ: ಯತ್ನಾಳ್

    ಈ ಆರು ಸದಸ್ಯರಲ್ಲಿ ಇಬ್ಬರನ್ನು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಶೀಘ್ರ ಆಯ್ಕೆ ಮಾಡಲಾಗುತ್ತದೆ ಎಂದು ಫೆಡರೇಷನ್ ತಿಳಿಸಿದೆ. 2016ರ ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸಿಂಧು, ಈ ವರ್ಷದ ಆರಂಭದಲ್ಲಿ ನಡೆದ ಟೋಕಿಯೊ ಕೂಟದಲ್ಲಿ ಕಂಚಿನ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದರು. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಪಿ. ವಿ ಸಿಂಧು ಅವರು ಇದು ಹೆಮ್ಮೆಯ ಸಂಗತಿಯಾಗಿದೆ. ಬಿಡಬ್ಲ್ಯುಎಫ್ ಕರ್ತವ್ಯವನ್ನು ನಿಭಾಯಿಸಬಲ್ಲೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ