Tag: qatar

  • ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಗಿಫ್ಟ್ – ವಿಶೇಷತೆ ಏನು?

    ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಗಿಫ್ಟ್ – ವಿಶೇಷತೆ ಏನು?

    ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಕತಾರ್ (Qatar) 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನವೊಂದನ್ನು ಉಡುಗೊರೆಯಾಗಿ ನೀಡಲು ಮುಂದಾಗಿದೆ. ಮುಂದಿನ ವಾರ ಟ್ರಂಪ್ ಮಧ್ಯಪ್ರಾಚ್ಯ ಪ್ರವಾಸದ ವೇಳೆ ಈ ವಿಮಾನ (Flight) ಹಸ್ತಾಂತರಿಸುವ ಸಾಧ್ಯತೆ ಇದೆ.

    ಉಡುಗೊರೆ ಏಕೆ?
    ಹಾಲಿ ಅಮೆರಿಕ ಅಧ್ಯಕ್ಷರು ಬಳಸುವ ಏರ್‌ಫೋರ್ಸ್-1 ಬಹಳ ಹಳೆಯದ್ದಾಗಿದೆ. ಮೊದಲ ಅವಧಿಗೆ ಅಧ್ಯಕ್ಷರಾಗಿದ್ದಾಲೇ ಟ್ರಂಪ್ ಹೊಸ ವಿಮಾನಕ್ಕೆ ಬೇಡಿಕೆಯಿಟ್ಟಿದ್ದರು. ಶ್ವೇತಭವನ ಬೇಡಿಕೆ ಅನ್ವಯ ಸಿದ್ಧಪಡಿಸಲು 2 ವಿಮಾನಕ್ಕೆ 17,000 ಕೋಟಿ ರೂ. ಅಂದಾಜಿಸಲಾಗಿತ್ತು. ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಕಾರಣ ವಿಳಂಬವಾಗಿತ್ತು. ಬೇಡಿಕೆ ಸಲ್ಲಿಸಲಾಗಿದೆಯಾದರೂ ಇದು 2029ರ ಹೊತ್ತಿಗೆ ಪೂರೈಕೆಯಾಗುತ್ತದೆ. ಹೀಗಾಗಿ ದುಬೈ ದೊರೆಗಳು ತಮ್ಮ ಬಳಕೆಗೆಂದು ಖರೀದಿಸಿದ್ದ 747-8 ಬೋಯಿಂಗ್ ಅನ್ನು ಟ್ರಂಪ್‌ಗೆ ಉಡುಗೊರೆಯಾಗಿ ಕೊಡಲು ಮುಂದಾಗಿದ್ದಾರೆ. ಕತಾರ್ 747-8 ಬೋಯಿಂಗ್ ವಿಮಾನವನ್ನು ಅಮೆರಿಕ ಅಧ್ಯಕ್ಷರ ಬೇಡಿಕೆಗೆ ಅನ್ವಯ ಮರು ವಿನ್ಯಾಸಗೊಳಿಸಲಾಗುತ್ತದೆ ಎನ್ನಲಾಗಿದೆ.

    ವಿಮಾನದ ವಿಶೇಷತೆ ಏನು?
    ಈ ವಿಮಾನವನ್ನು ಫ್ಲೈಯಿಂಗ್ ಪ್ಯಾಲೆಸ್ ಅಥವಾ ಹಾರುವ ಅರಮನೆ ಎಂದು ಕರೆಯಲಾಗುತ್ತದೆ. ಇದು ಅತ್ಯಾಧುನಿಕ ಸ್ನಾನಗೃಹಗಳು, ಖಾಸಗಿ ಮಲಗುವ ಕೋಣೆಗಳು, ಭವ್ಯವಾದ ಮೆಟ್ಟಿಲುಗಳಿಂದ ಕೂಡಿದ ಒಳಾಂಗಣವನ್ನು ಹೊಂದಿದೆ. ಇದನ್ನು ಆರಂಭದಲ್ಲಿ ಕತಾರ್ ರಾಜಮನೆತದವರು ಬಳಸುತ್ತಿದ್ದರು. ಆ ಬಳಿಕ ಟರ್ಕಿ ಇದನ್ನು ಬಳಸುತ್ತಿತ್ತು.

    13 ವರ್ಷ ಹಳೆಯದಾದ ಕತಾರ್‌ನ ಈ ವಿಮಾನವನ್ನು ಟ್ರಂಪ್ ಅವಧಿ ಮುಗಿದ ನಂತರ ಅಧ್ಯಕ್ಷೀಯ ಗ್ರಂಥಾಲಯ ಪ್ರತಿಷ್ಠಾನಕ್ಕೆ ಸ್ಥಳಾಂತರಿಸಲಾಗುತ್ತದೆ. ಉಚಿತವಾಗಿ ಸಿಕ್ಕ ಜೆಟ್ ಅನ್ನು ಬೇಡ ಎನ್ನುವಷ್ಟು ಮೂರ್ಖ ನಾನಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಇದು ಲಂಚ ಅಂತ ವ್ಯಾಪಕ ಚರ್ಚೆ ಆಗುತ್ತಿದೆ.

    ಟ್ರಂಪ್ ಬಳಸುತ್ತಿರುವ ಏರ್‌ಫೋರ್ಸ್-1 ಹೇಗಿದೆ?
    ಏರ್ ಫೋರ್ಸ್ 1 ಅಮೆರಿಕದ ಅಧ್ಯಕ್ಷ ಟ್ರಂಪ್ ಸದ್ಯ ಬಳಸುತ್ತಿರುವ ವಿಮಾನ. ಇದನ್ನು ‘ಹಾರಾಡುವ ಶ್ವೇತ ಭವನ’ ಎಂದು ಕರೆಯುತ್ತಾರೆ. ಈ ವಿಮಾನ ಶ್ವೇತಭವನದ ರೀತಿಯ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. ಒಂದು ಬಾರಿ ಇಂಧನ ತುಂಬಿದರೆ 20 ಗಂಟೆ ಹಾರಾಡುವ ಸಾಮರ್ಥ್ಯನ್ನು ಇದು ಹೊಂದಿದ್ದು, ಖಾಸಗಿ ಕಚೇರಿ, ಸೆಮಿನಾರ್ ಹಾಲ್ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒಳಗೊಂಡಿದೆ.

  • ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

    ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

    ದೋಹಾ: ಏಷ್ಯನ್‌ ಚಾಂಪಿಯನ್‌ ಕತಾರ್‌ (Qatar) ತಂಡದ ಮೋಸದ ಆಟದಿಂದ 2026ರ ಫಿಫಾ ವಿಶ್ವಕಪ್‌ ಅರ್ಹತಾ ಟೂರ್ನಿಯಿಂದ (FIFA WC Qualifiers) ಭಾರತ ಹೊರಬಿದ್ದಿದೆ.

    ಅರ್ಹತಾ ಟೂರ್ನಿಯ 2ನೇ ಹಂತದ ಕೊನೆಯ ಪಂದ್ಯದ 75 ನಿಮಿಷದಲ್ಲಿ ನಡೆದ ಮೋಸದಿಂದಾಗಿ ಭಾರತದ (India) ಕನಸು ನುಚ್ಚುನೂರಾಯಿತು. ಕತಾರ್‌ ವಿರುದ್ಧ 2-1 ಗೋಲುಗಳಿಂದ ಸೋತ ಭಾರತ ಟೂರ್ನಿಯಿಂದ ನಿರ್ಗಮಿಸಿತು.

    37ನೇ ನಿಮಿಷದಲ್ಲಿ ಚಾಂಗ್ಟೆ ಗೋಲು ಹೊಡೆಯುವ ಮೂಲಕ ಭಾರತಕ್ಕೆ 1-0 ಮುನ್ನಡೆ ತಂದುಕೊಟ್ಟರು. 75 ನಿಮಿಷದಲ್ಲಿ ಕತಾರ್‌ ಗೋಲ್‌ ಗಳಿಸಲು ಮುಂದಾಯಿತು. ಈ ವೇಳೆ ಚೆಂಡು ಗೆರೆಯನ್ನು ದಾಟಿ ಹೊರಗಡೆ ಹೋಗಿತ್ತು. ಬಾಲ್‌ ಹೊರಗಡೆ ಹೋಗಿದ್ದರೂ ಕತಾರ್‌ ಆಟಗಾರ ಅಲ್‌ ಹಸನ್‌ ಚೆಂಡನ್ನು ಎಳೆದು ಯೂಸುಫ್‌ ಅಯೇಮ್‌ ನೀಡಿದರು. ಯೂಸೂಫ್‌ ಅವರು ಚೆಂಡನ್ನು ಗೋಲ್‌ ಪೆಟ್ಟಿಗೆ ತಳ್ಳಿದರು. ಗೋಲ್‌ ಹೊಡೆದ ಬಳಿಕ ಕತಾರ್‌ ಆಟಗಾರರು ಸಂಭ್ರಮಿಸತೊಡಗಿದರು.  ಇದನ್ನೂ ಓದಿ: India vs Pakistan: ಟ್ರ್ಯಾಕ್ಟರ್‌ ಮಾರಿ ಕ್ರಿಕೆಟ್‌ ನೋಡಲು ಬಂದ ಪಾಕ್ ಅಭಿಮಾನಿಗೆ ನಿರಾಸೆ


    ಕೂಡಲೇ ಭಾರತದ ಗೋಲ್‌ ಕೀಪ್‌ ಪ್ರೀತ್‌ ಸಂಧು ರೆಫ್ರಿ ಬಳಿ ಹೋಗಿ ಬಾಲ್‌ ಚೆಂಡು ದಾಟಿ ಹೊರಗಡೆ ಬಂದಿದೆ. ಹೀಗಾಗಿ ಈ ಗೋಲನ್ನು ಪರಿಗಣಿಸಬಾರದು ಎಂದು ಪರಿ ಪರಿಯಾಗಿ ಮನವಿ ಮಾಡಿದರು. ಭಾರತದ ಮನವಿಯನ್ನು ರೆಫ್ರಿ ಪುರಸ್ಕರಿಸಲಿಲ್ಲ. 85ನೇ ನಿಮಿಷದಲ್ಲಿ ಕತಾರ್‌ ಮತ್ತೊಂದು ಗೋಲು ಹೊಡೆದು 2 ಗೋಲುಗಳ ಮುನ್ನಡೆ ಪಡೆದು ಕೊನೆಗೆ ಜಯ ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಕುವೈತ್ ಗೆದ್ದಿದ್ದು ‘ಎ’ ಗುಂಪಿನಿಂದ 2ನೇ ತಂಡವಾಗಿ ಅರ್ಹತಾ ಟೂರ್ನಿಯ 3ನೇ ಸುತ್ತಿಗೇರಿದೆ.

    ಈಗ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಫುಟ್‌ಬಾಲ್‌ ಅಭಿಮಾನಿಗಳು ಸಿಟ್ಟಾಗಿ ಕತಾರ್‌ ಮತ್ತು ರೆಫ್ರಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಕತಾರ್‌ ಈಗಾಗಲೇ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ. ಹೀಗಿರುವಾಗ ಮೋಸ ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

  • ಮೋದಿಯಿಂದ ಬುಧವಾರ UAEಯ ಮೊದಲ ಹಿಂದೂ ದೇಗುಲ ಉದ್ಘಾಟನೆ – 65,000ಕ್ಕೂ ಹೆಚ್ಚು ಗಣ್ಯರ ನೋಂದಣಿ!

    ಮೋದಿಯಿಂದ ಬುಧವಾರ UAEಯ ಮೊದಲ ಹಿಂದೂ ದೇಗುಲ ಉದ್ಘಾಟನೆ – 65,000ಕ್ಕೂ ಹೆಚ್ಚು ಗಣ್ಯರ ನೋಂದಣಿ!

    – ಪ್ರಧಾನಿ ಮೋದಿ ಹೇಳಿದ್ದೇನು?

    ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಿರ್ಮಾಣಗೊಂಡಿರೋ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ಮೋದಿ (Narendra Modi) ಫೆ.14ರಂದು (ಬುಧವಾರ) ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.13 ಮತ್ತು 14ರಂದು ಎರಡು ದಿನಗಳ ಕಾಲ ಮೋದಿ ಯುಎಇ ಪ್ರವಾಸ ಕೈಗೊಂಡಿದ್ದಾರೆ.

    ಈಗಾಗಲೇ ಮಂದಿರ (Hindu Mandir) ಉದ್ಘಾಟನೆಗೆ ಭಾರೀ ತಯಾರಿ ಆರಂಭವಾಗಿದ್ದು, ಮಾ.1ರಿಂದ ಮಂದಿರವು ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಯುಎಇಯ ಬಿಎಪಿಎಸ್ ಸ್ವಾಮಿ ನಾರಾಯಣ ಸಂಸ್ಥೆ ಅಬುಧಾಬಿಯಲ್ಲಿ 27 ಎಕರೆ ಪ್ರದೇಶದಲ್ಲಿ ಬೃಹತ್ ಹಿಂದೂ ದೇವಸ್ಥಾನವೊಂದನ್ನು ನಿರ್ಮಿಸಿದೆ. ಇಲ್ಲಿ ಕೃಷ್ಣ-ರಾಧೆ, ಶಿವ- ಪಾರ್ವತಿ ಮತ್ತು ರಾಮ-ಸೀತೆ, ಲಕ್ಷ್ಮಣ ಹಾಗೂ ಹನುಮಂತ ಸೇರಿ ಬಹುತೇಕ ಎಲ್ಲ ಹಿಂದೂ ದೇವರರನ್ನ ಪೂಜಿಸಲಾಗುತ್ತದೆ. ಮಂದಿರವು 108 ಅಡಿ ಎತ್ತರ, 262 ಅಡಿ ಉದ್ದ, 180 ಅಡಿ ಅಗಲವಿದೆ.

    65,000ಕ್ಕೂ ಹೆಚ್ಚು ನೋಂದಣಿ:
    ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರು ಅಬುಧಾಬಿಯಲ್ಲಿ ನಡೆಯಲಿರುವ ‘ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆಗೆ ವ್ಯಕ್ತವಾಗಿದೆ. 65,000ಕ್ಕೂ ಹೆಚ್ಚು ಮಂದಿ ನೋಂದಣಿಯಾಗಿದ್ದಾರೆ. ಈ ಕುರಿತು ಯುಎಇನಲ್ಲಿರುವ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಮತ್ತು ‘ಅಹ್ಲಾನ್ ಮೋದಿ’ ಉಪಕ್ರಮದ ನಾಯಕ ಜಿತೇಂದ್ರ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

    ಇದು ಅತ್ಯಂತ ವಿಶಿಷ್ಟ ಕಾರ್ಯಕ್ರಮ, ಏಕೆಂದರೆ ಈ ಕಾರ್ಯಕ್ರಮವನ್ನು ಯಾವುದೇ ಒಂದು ಸಂಸ್ಥೆ ನಡೆಸುತ್ತಿಲ್ಲ. ಇಡೀ ಸಮುದಾಯ ಆಯೋಜಿಸುತ್ತಿದೆ. ಅಲ್ಲದೇ ಮೋದಿ ಅವರ ಹೆಸರು ಬಂದಾಗ, ಅಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೇರುತ್ತಾರೆ. ಇದು ಮೋದಿ ಅವರ ಮೇಲೆ ಜನರಿಗೆ ಇರುವ ಪ್ರೀತಿ ಎಂದು ಶ್ಲಾಘಿಸಿದ್ದಾರೆ.

    ಸಾಂಸ್ಕೃತಿಕ ವೈಭವಕ್ಕೆ ಸಿದ್ಧತೆ:
    ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಂದು ಸಾಂಸ್ಕೃತಿಕ ಕಾಯ್ರಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 700 ಕಲಾವಿದರು ವಿವಿಧ ಕಲಾ ಪ್ರಕಾರಗಳನ್ನ ಪ್ರದರ್ಶಿಸಲಿದ್ದಾರೆ. ಈ ಮೂಲಕ ಭಾರತೀಯ ಕಲೆಗಳಿಗೆ ಜೀವತುಂಬುವ ಕೆಲಸ ಮಾಡಲಿದ್ದಾರೆ ಎಂದು ಜಿತೇಂದ್ರ ತಿಳಿಸಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವು ಕೋಮು ಸೌಹಾರ್ದತೆಯನ್ನು ಸಾಕಾರಗೊಳಿಸುವ ಉದ್ದೇಶ ಹೊಂದಿದೆ ಎಂದು ಕಾರ್ಯಕ್ರಮ ಸಮಿತಿ ತಿಳಿಸಿದೆ.

    ಯುಎಇ ಭೇಟಿಗೆ ಮೋದಿ ಉತ್ಸುಕ:
    ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ಏಳನೆಯದ್ದಾಗಿದೆ. ಇದು ಭಾರತ-ಯುಎಇ ಬಲವಾದ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ ಮೊಹಮ್ಮದ್ ಬಿನ್ ಝಾಯೆದ್ ಅವರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ. ಅದರಲ್ಲೂ ಯುಎಇಯಲ್ಲಿ ಮೊದಲ ಹಿಂದೂ ಮಂದಿರ ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್‌ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್‌

    ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್‌ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್‌

    – ಮೋದಿಗೆ ಧನ್ಯವಾದ ಹೇಳಿದ ನಿವೃತ್ತ ಅಧಿಕಾರಿಗಳು

    ನವದೆಹಲಿ: ಭಾರತ ಸರ್ಕಾರಕ್ಕೆ (Indian Government) ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದ್ದು, ಗೂಢಚರ್ಯೆ (Espionage) ಪ್ರಕರಣದಲ್ಲಿ ಕತಾರ್‌ ಜೈಲಿನಲ್ಲಿದ್ದ (Qatar Jail) ಎಂಟು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳು ಬಿಡುಗಡೆಯಾಗಿದ್ದಾರೆ.

    ಎಂಟು ಮಂದಿ ಪೈಕಿ ಏಳು ಮಂದಿ 18 ತಿಂಗಳ ಜೈಲು ವಾಸದ ನಂತರ ಈಗಾಗಲೇ ಭಾರತಕ್ಕೆ (India) ಮರಳಿದ್ದಾರೆ.  ಇದನ್ನೂ ಓದಿ: ಪಬ್ಲಿಕ್ ಟಿವಿಗೆ ದ್ವಾದಶಿ ಸಂಭ್ರಮ

    ಕತಾರ್‌ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯರ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ. ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆಗೊಳಿಸಲು ಕಾರಣರಾದ ಕತಾರ್‌ ರಾಜ್ಯದ ಅಮೀರ್‌ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

    ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಸಿಷ್ಟ, ಕಮಾಂಡರ್ ಪೂರ್ಣೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಾಕಾಳ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗ್ಪಾಲ್ ಮತ್ತು ನಾವಿಕ ರಾಗೇಶ್ ಅವರು ಕತಾರ್ ಸೇನಾ ಪಡೆಗಳಿಗೆ ತರಬೇತಿ ನೀಡುವ ಓಮನ್ ಮೂಲದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಗೂಢಚರ್ಯೆ ಆರೋಪದ ಮೇರೆಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಇವರನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಅಕ್ಟೋಬರ್‌ನಲ್ಲಿ 8 ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು. ಇದನ್ನೂ ಓದಿ: ಒಂದೇ ಬೈಕ್ ಮೇಲೆ 300 ಕೇಸ್ – ಬರೋಬ್ಬರಿ 3 ಲಕ್ಷ ದಂಡ

    ಗಲ್ಲು ಶಿಕ್ಷೆ ವಿಧಿಸಿದ್ದನ್ನು ಭಾರತ ಸರ್ಕಾರ ಪ್ರಶ್ನೆ ಮಾಡಿತ್ತು. ಕಳೆದ ಡಿಸೆಂಬರ್‌ನಲ್ಲಿ ಎಂಟು ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಕತಾರ್ ಕೋರ್ಟ್ (Qatar Court) ತೀರ್ಪು ನೀಡಿತ್ತು. ಈ ಮೂಲಕ ಕಾನೂನು ಸಮರದಲ್ಲಿ ಭಾರತ ಸರ್ಕಾರಕ್ಕೆ (Indian Government) ಮೊದಲ ಗೆಲುವು ಸಿಕ್ಕಿತ್ತು.

    ಭಾರತಕ್ಕೆ ಮರಳಿದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ ಎಂದು ಹೇಳಲು ನಮಗೆ ತುಂಬಾ ಸಂತೋಷವಾಗಿದೆ. ನಾವು ಪ್ರಧಾನಿ ಮೋದಿಯವರಿಗೆ (PM Narendra Modi) ಧನ್ಯವಾದ ಹೇಳಲು ಬಯಸುತ್ತೇವೆ. ಅವರ ವೈಯಕ್ತಿಕ ಹಸ್ತಕ್ಷೇಪದಿಂದ ನಮ್ಮ ಬಿಡುಗಡೆ ಸಾಧ್ಯವಾಗಿದೆ  ಎಂದು ಹೇಳಿದರು.

    ನಾವು ಭಾರತಕ್ಕೆ ಮರಳಲು ಸುಮಾರು 18 ತಿಂಗಳುಗಳ ಕಾಲ ಕಾಯುತ್ತಿದ್ದೆವು. ನಾವು ಪ್ರಧಾನಿಗೆ ಅತ್ಯಂತ ಕೃತಜ್ಞರಾಗಿರುತ್ತೇವೆ. ಅವರ ವೈಯಕ್ತಿಕ ಹಸ್ತಕ್ಷೇಪ ಮತ್ತು ಕತಾರ್‌ನೊಂದಿಗಿನ ಅವರ ಸ್ನೇಹ ಇಲ್ಲದೇ ಇದ್ದರೆ ನಾವು ಬಿಡುಗಡೆಯಾಗುತ್ತಿರಲಿಲ್ಲ. ನಮ್ಮ ಬಿಡುಗಡೆಗೆ ಭಾರತ ಸರ್ಕಾರ ಮಾಡಿದ ಪ್ರತಿಯೊಂದು ಪ್ರಯತ್ನಕ್ಕೆ ನಾವು ಧನ್ಯವಾದ ಹೇಳುತ್ತಿದ್ದೇವೆ ಎಂದು ತಿಳಿಸಿದರು.

     

  • ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    – ಮೋದಿಯ ರಾಜತಾಂತ್ರಿಕ ವಿಜಯವೆಂದ ಬಿಜೆಪಿ

    ದೋಹಾ: ಗೂಢಚರ್ಯೆ ಪ್ರಕರಣದಲ್ಲಿ ಮರಣದಂಡನೆಯ (Death Sentence) ಭೀತಿ ಎದುರಿಸುತ್ತಿದ್ದ ಭಾರತೀಯ ನೌಕಾಪಡೆಯ ಎಂಟು ಮಂದಿ ನಿವೃತ್ತ ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಂಟು ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಕತಾರ್ ಕೋರ್ಟ್ (Qatar Court) ತೀರ್ಪು ನೀಡಿದೆ. ಈ ಮೂಲಕ ಕಾನೂನು ಸಮರದಲ್ಲಿ ಭಾರತ ಸರ್ಕಾರಕ್ಕೆ (Indian Government) ಮೊದಲ ಗೆಲುವು ಸಿಕ್ಕಿದೆ.

    ಮರಣದಂಡನೆಯನ್ನು ಜೈಲು ಶಿಕ್ಷೆಯಾಗಿ ಮಾರ್ಪಾಡು ಮಾಡಿ ತೀರ್ಪು ನೀಡಿದೆ. ಆದರೆ ಎಷ್ಟು ವರ್ಷ ಶಿಕ್ಷೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಬಗ್ಗೆ ಕತಾರ್ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಈ ಪ್ರಕರಣದಲ್ಲಿ ಮುಂದಿನ ಹೆಜ್ಜೆ ಇಡುವ ಬಗ್ಗೆ ಕಾನೂನು ಪರಿಣಿತರನ್ನು ಸಂಪರ್ಕಿಸಿದೆ.

    ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್ ಮತ್ತು ಇತರ ಅಧಿಕಾರಿಗಳು ಬಂಧಿತ ವ್ಯಕ್ತಿಗಳ ಕುಟುಂಬ ಸದಸ್ಯರೊಂದಿಗೆ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    ತೀರ್ಪಿನ ಸಂಪೂರ್ಣ ವಿವರಕ್ಕೆ ನಾವು ಕಾಯುತ್ತಿದ್ದೇವೆ. ಈ ವಿಚಾರದಲ್ಲಿ ಆರಂಭದಿಂದಲೂ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ ಮತ್ತು ನಾವು ಎಲ್ಲಾ ಕಾನ್ಸುಲರ್ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ. ಈ ಪ್ರಕರಣದ ವಿಚಾರಣೆಯು ಗೌಪ್ಯ ಮತ್ತು ಸೂಕ್ಷ್ಮ ಸ್ವರೂಪವಾಗಿರುವ ಕಾರಣ, ಈ ಹಂತದಲ್ಲಿ ಯಾವುದೇ ಹೆಚ್ಚಿನ ಪ್ರತಿಕ್ರಿಯೆಯನ್ನು ನೀಡುವುದು ಸೂಕ್ತವಲ್ಲಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಕತಾರ್ ಸೇನಾ ಪಡೆಗಳಿಗೆ ತರಬೇತಿ ನೀಡುವ ಓಮನ್ ಮೂಲದ ಸಂಸ್ಥೆಯಲ್ಲಿ ಭಾರತೀಯ ನೌಕಾಪಡೆಯ 8 ನಿವೃತ್ತ ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ಆದರೆ ಗೂಢಚರ್ಯೆ ಆರೋಪದ ಮೇರೆಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಇವರ ಬಂಧನವಾಗಿತ್ತು. ವಿಚಾರಣೆ ಬಳಿಕ ಈ ಅಕ್ಟೋಬರ್‌ನಲ್ಲಿ 8 ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು.

    ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಯಿಂದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ರಿಲೀಫ್‌ ಸಿಕ್ಕಿದೆ. ಇದು ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿದೇಶಾಂಗ ನೀತಿಯ ರಾಜತಾಂತ್ರಿಕ ಪ್ರಯತ್ನಕ್ಕೆ ಸಿಕ್ಕಿದ ವಿಜಯವಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ.

     

  • ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

    ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

    ನವದೆಹಲಿ: ಗೂಢಾಚಾರದ ಆರೋಪದ ಮೇಲೆ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ (Ex-Navy Personnel) ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ (India) ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ (Qatar) ನ್ಯಾಯಾಲಯ ಸ್ವೀಕರಿಸಿದೆ.

    ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಭಾರತ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ.

    ವರದಿಗಳ ಪ್ರಕಾರ ಗೂಢಾಚಾರಿಕೆ ಆರೋಪದ ಮೇಲೆ ಕತಾರ್‌ನ ಗುಪ್ತಚರ ಸಂಸ್ಥೆಯು 2022ರ ಆಗಸ್ಟ್‌ನಲ್ಲಿ ಭಾರತದ ನೌಕಾಪಡೆ 8 ಮಾಜಿ ಸಿಬ್ಬಂದಿಯನ್ನು ಬಂಧಿಸಿತು. ಆದರೆ ಕತಾರ್‌ನ ಅಧಿಕಾರಿಗಳು ಅವರ ವಿರುದ್ಧದ ಆರೋಪಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಅವರ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿತ್ತು. ಕಳೆದ ತಿಂಗಳು ಅವರ ವಿರುದ್ಧದ ತೀರ್ಪನ್ನು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಪ್ರಕಟಿಸಿತು. ಇದನ್ನೂ ಓದಿ: ಇಸ್ರೇಲ್-ಹಮಾಸ್ ನಡ್ವೆ ಇಂದಿನಿಂದ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಿದ್ಧತೆ

    ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂಧಿತ ಭಾರತೀಯ ನೌಕಾಪಡೆಯ ಮಾಜಿ ಯೋಧರು.

    ಎಲ್ಲಾ ಮಾಜಿ ನೌಕಾಪಡೆಯ ಅಧಿಕಾರಿಗಳು ಭಾರತೀಯ ನೌಕಾಪಡೆಯಲ್ಲಿ 20 ವರ್ಷಗಳವರೆಗಿನ ವಿಶಿಷ್ಟ ಸೇವಾ ದಾಖಲೆಯನ್ನು ಹೊಂದಿದ್ದಾರೆ ಮತ್ತು ಪಡೆಯಲ್ಲಿ ಬೋಧಕರನ್ನು ಒಳಗೊಂಡಂತೆ ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಅಡಚಣೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ ವಿಳಂಬ

  • ಮುಂಬರುವ ದಿನಗಳಲ್ಲಿ ಪ್ರೇಮಲೋಕ-2 ಚಿತ್ರ ನಿರ್ಮಿಸಿ ಬಿಡುಗಡೆ; ಕತಾರ್‌ನಲ್ಲಿ  ರವಿಚಂದ್ರನ್ ಭರವಸೆ

    ಮುಂಬರುವ ದಿನಗಳಲ್ಲಿ ಪ್ರೇಮಲೋಕ-2 ಚಿತ್ರ ನಿರ್ಮಿಸಿ ಬಿಡುಗಡೆ; ಕತಾರ್‌ನಲ್ಲಿ ರವಿಚಂದ್ರನ್ ಭರವಸೆ

    ದೋಹಾ: ಕತಾರ್ ನಲ್ಲಿರುವ ಕರ್ನಾಟಕ ಸಂಘವು 68ನೇ ಕನ್ನಡ ರಾಜ್ಯೋತ್ಸವನ್ನು ನವೆಂಬರ್ 3 ರಂದು ಅದ್ದೂರಿ ಕಾರ್ಯಕ್ರಮದ ಮೂಲಕ ಆಚರಿಸಿತು.

    ಕಾರ್ಯಕ್ರಮದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪತ್ರಕರ್ತರಾದ ಜೋಗಿ ಖ್ಯಾತಿಯ ಗಿರೀಶ್ ರಾವ್ ಹತ್ವಾರ್ ಹಾಗೂ ಸ್ಯಾಂಡಲ್ ವುಡ್‍ನ ಕ್ರೇಜಿ ಸ್ಟಾರ್ ವಿ ರವಿಚಂದ್ರನ್ ಅವರು ಭಾಗವಹಿಸಿದ್ದರು. ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಮಣಿಕಂಠನ್, ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗೆಲು, ಐಸಿಬಿಫ್ ನ ಅಧ್ಯಕ್ಷ ಶಾನವಸ್ ಬವ, ಕರ್ನಾಟಕ ಸಂಘದ ಸಲಹಾ ಮಂಡಳಿ ಸದಸ್ಯರು, ಸೋದರ ಸಂಸ್ಥೆಗಳ ಅಧ್ಯಕ್ಷರು ರಾಜ್ಯೋತ್ಸವದ ಆಚರಣೆಯಲ್ಲಿ ಪಾಲ್ಗೊಂಡರು.

    ರವಿಚಂದ್ರನ್  (Ravichandran) ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಮಹೇಶ್ ಗೌಡ ಅವರ ಪ್ರೀತಿಯ ಕರೆ ಅವರನ್ನು ಕತಾರ್‍ಗೆ ಬರುವಂತೆ ಪ್ರೇರೇಪಿಸಿದ್ದು ಹಾಗೂ ಅವರ ಕತಾರ್ ನ ಪ್ರವಾಸ ನೆನಪಿನಲ್ಲಿ ಉಳಿಯುವಂತದ್ದು ಎಂದು ಸಭೆಗೆ ತಿಳಿಸಿದರು. ಅವರ ತಂದೆಯ ಜೀವನ ಶೈಲಿಯನ್ನು ನೆನೆಸಿಕೊಂಡ ಅವರು, ಮುಂಬರುವ ದಿನಗಳಲ್ಲಿ ಪ್ರೇಮಲೋಕ ಚಿತ್ರದ ಭಾಗ-2 ನಿರ್ಮಿಸಿ ಬಿಡುಗಡೆಗೊಳಿಸುವ ಭರವಸೆ ನೀಡಿದರು.

    ಮಹೇಶ್ ಗೌಡ ಅವರು ಕಾರ್ಯಕ್ರಮವನ್ನು ಸ್ವಾಗತಿಸಿ, ಹಿಂದಿನ ಹಾಗೂ ಈಗಿನ ಆಡಳಿತ ಮಂಡಳಿಗೆ ಧನ್ಯವಾದ ತಿಳಿಸಿದರು. ಮುಂದಿನ ವರ್ಷ ಕರ್ನಾಟಕ ಸಂಘಕ್ಕೆ ರಜತ ಮಹೋತ್ಸವದ ಸಂಭ್ರಮ. ಈ ಸಂಭ್ರಮವನ್ನು ವಿಜ್ರಂಭಣೆಯಿಂದ ನಡೆಸಿಕೊಡುವುದಾಗಿ ಸಭೆಗೆ ತಿಳಿಸಿದರು. ಕತಾರ್ ನಲ್ಲಿನ ಭಾರತೀಯ ಅಂತಾರಾಷ್ಟ್ರೀಯ ಶಾಲೆಗಳಲ್ಲಿ ಕನ್ನಡ ಕಲಿಸುತ್ತಿರುವ ಶಿಕ್ಷಕ ಶಿಕ್ಷಕಿಯರಿಗೆ ಧನ್ಯವಾದಗಳನ್ನು ತಿಳಿಸಿ ಅವರಿಗೆ ಸ್ಮರಣ ಫಲಕ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ (Kannada rajyotsava in Qatar) ಪ್ರಶಸ್ತಿ ಪುರಸ್ಕೃತ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ದೀಪಕ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯೆ ಸಂಜನಾ ಜೀವನ್ ಅವರು ಸಂಯೋಜಿಸಿದ ರವಿಚಂದ್ರನ್ ಅವರ ಹದಿನಾರು ಪ್ರಖ್ಯಾತ ಹಾಡುಗಳ ನೃತ್ಯ ಮಾಲೆಯು ಸಭಾಂಗಣದಲ್ಲಿ ನೆರೆದಿದ್ದ ಪ್ರೇಕ್ಷರ ಹಾಗೂ ಮುಖ್ಯ ಅತಿಥಿಗಳು ರವಿಚಂದ್ರನ್ ಅವರಿಂದ ಮೆಚ್ಚುಗೆ ಪಡೆಯಿತು. ಉದಯೋನ್ಮುಖ ಗಾಯಕರು ಭೂಮಿಕಾ ಮಧುಸೂದನ್ ಹಾಗೂ ಶ್ರೀನಿಧಿ ಶಾಸ್ತ್ರಿ ಅವರು ಸಂಗೀತ ಸಂಜೆ ನೆಡೆಸಿಕೊಟ್ಟರು. ಕಾರ್ಯಕ್ರಮ ನಿರ್ವಹಣೆಯನ್ನು ಪ್ರಸಿದ್ಧ ನಿರೂಪಕರಾದ ಸವಿ ಪ್ರಕಾಶ್ ಅವರು ನಡೆಸಿದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಸುಶೀಲ ಸುನಿಲ್ ಅವರು ನೆರವೇರಿಸಿದರು.

    ದೋಹಾದ (Doha) ಡಿಪಿಎಸ್ ಶಾಲೆಯ 1,500ಕ್ಕೂ ಹೆಚ್ಚು ಕನ್ನಡ ಅಭಿಮಾನಿಗಳಿಂದ ತುಂಬಿದ ಸಭಾಂಗಣದಲ್ಲಿ ಮೊದಲು ಆಡಳಿತ ಮಂಡಳಿಯಿಂದ ಕನ್ನಡದ ದೀಪ ಹಚ್ಚಲಾಯಿತು. ಬಳಿಕ ಕೆಎಸ್ ನಿಸಾರ್ ಅಹ್ಮದ್ ರಚಿತ ಜೋಗದ ಸಿರಿ ಬೆಳಕಿನಲ್ಲಿ ಗಾನ ಮತ್ತು ಸಂಘದ ಅಧ್ಯಕ್ಷ ಮಹೇಶ್ ಗೌಡ ಅವರ ಸ್ವಾಗತ ಭಾಷಣದಿಂದ ಪ್ರಾರಂಭವಾದ ಕಾರ್ಯಕ್ರಮವು ಕರ್ನಾಟಕ ಸಂಘ ಹಾಗೂ ಅದರ ಸೋದರ ಸಂಸ್ಥೆಗಳಾದ ಬಂಟ್ಸ್ ಕತಾರ್, ಮಂಗಳೂರ ಕಲ್ಚರಲ್ ಅಸೋಸಿಯೇಷನ್ ಮಂಗಳೂರು ಕ್ರಿಕೆಟ್ ಕ್ಲಬ್ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅಂತ್ಯಗೊಂಡಿತು.

  • ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    ನವದೆಹಲಿ: ಕತಾರ್‌ನಲ್ಲಿ (Qatar) ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ (Former Navy Personnel) 8 ಮಂದಿ ಮಾಜಿ ಸಿಬ್ಬಂದಿ ಕುಟುಂಬಸ್ಥರನ್ನು ವಿದೇಶಾಂಗ ಸಚಿವ ಎಸ್.‌ ಜೈಶಂಕರ್‌ (Jaishankar) ಭೇಟಿಯಾದರು.

    ಕುಟುಂಬಸ್ಥರ ಕಳವಳ ಮತ್ತು ನೋವಿಗೆ ಸ್ಪಂದಿಸಿದ ಜೈಶಂಕರ್‌, ಅವರ ಬಿಡುಗಡೆಗೆ ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

    ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈಶಂಕರ್‌, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಭೇಟಿಯಾದೆ. ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ. ಆ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.

    ಕತಾರ್‌ನಲ್ಲಿ 1 ವರ್ಷಕ್ಕೂ ಹೆಚ್ಚು ಕಾಲ ಬಂಧಿತರಾಗಿರುವ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಗುರುವಾರ ಕತಾರ್‌ನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ತೀರ್ಪಿಗೆ ಭಾರತ (India) ತೀವ್ರ ಆಘಾತ ವ್ಯಕ್ತಪಡಿಸಿದೆ. ಸಿಬ್ಬಂದಿ ಬಿಡುಗಡೆಗೆ ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿರುವುದಾಗಿ ಹೇಳಿತ್ತು. ಇದನ್ನೂ ಓದಿ: ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!

    ನಾವು ಮರಣದಂಡನೆಯ ತೀರ್ಪಿನಿಂದ ತೀವ್ರ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಅವರ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

    ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

    ದೋಹಾ: ಕತಾರ್‌ನಲ್ಲಿ (Qatar) 1 ವರ್ಷಕ್ಕೂ ಹೆಚ್ಚು ಕಾಲ ಬಂಧಿತರಾಗಿರುವ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ (Former Navy Personnel) ಗುರುವಾರ ಕತಾರ್‌ನ ನ್ಯಾಯಾಲಯ ಮರಣದಂಡನೆ (Death Penalty) ವಿಧಿಸಿದೆ. ಈ ತೀರ್ಪಿಗೆ ಭಾರತ (India) ತೀವ್ರ ಆಘಾತ ವ್ಯಕ್ತಪಡಿಸಿದೆ ಮತ್ತು ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿರುವುದಾಗಿ ಹೇಳಿದೆ.

    ನಾವು ಮರಣದಂಡನೆಯ ತೀರ್ಪಿನಿಂದ ತೀವ್ರ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಅವರ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

    ನಾವು ಈ ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದೇವೆ ಮತ್ತು ಅದನ್ನು ನಿಕಟವಾಗಿ ಅನುಸರಿಸುತ್ತಿದ್ದೇವೆ. ನಾವು ಎಲ್ಲಾ ಕಾನೂನು ಸಹಾಯವನ್ನು ವಿಸ್ತರಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದೆ. ಆದರೂ ಎಂಇಎ ತನ್ನ ಹೇಳಿಕೆಯಲ್ಲಿ ಪ್ರಕ್ರಿಯೆಗಳ ಗೌಪ್ಯ ಸ್ವರೂಪವನ್ನು ಒಪ್ಪಿಕೊಂಡಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಇದನ್ನೂ ಓದಿ: 2036ರ ಜಾಗತಿಕ ಕ್ರೀಡಾಹಬ್ಬಕ್ಕೆ ಭಾರತ ತಯಾರಿ ಶುರು – ಮುಂದಿರುವ ಸವಾಲುಗಳೇನು?

    ಏನಿದು ಪ್ರಕರಣ?
    ಕಳೆದ ವರ್ಷ ಆಗಸ್ಟ್‌ನಲ್ಲಿ ಕತಾರ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಯನ್ನು ಇಸ್ರೇಲ್‌ಗೆ ಗೂಢಾಚಾರ ಕೆಲಸ ಮಾಡುತ್ತಿದ್ದ ಶಂಕೆಯ ಮೇಲೆ ಬಂಧಿಸಲಾಗಿತ್ತು. ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಾದ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ನಾವಿಕ ರಾಗೇಶ್ ಅವರನ್ನು 2022ರ ಆಗಸ್ಟ್ 30 ರಂದು ಕತಾರ್‌ನ ಗುಪ್ತಚರ ಸಂಸ್ಥೆ ದೋಹಾದಿಂದ ಬಂಧಿಸಿತ್ತು.

    ಬಂಧಿತ ಮಾಜಿ ನೌಕಾಪಡೆ ಸಿಬ್ಬಂದಿಯ ಜಾಮೀನು ಅರ್ಜಿಗಳನ್ನು ಕತಾರ್ ಅಧಿಕಾರಿಗಳು ಹಲವಾರು ಬಾರಿ ತಿರಸ್ಕರಿಸಿದ್ದರು. ಈ ಹಿಂದಿನ ದಿನಗಳಲ್ಲಿ ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಮರಣದಂಡನೆಯನ್ನು ಘೋಷಿಸಿತು. ಮಾಧ್ಯಮ ವರದಿಗಳ ಪ್ರಕಾರ ಬಂಧಿತರು ಇಸ್ರೇಲ್ ಪರವಾಗಿ ಜಲಾಂತರ್ಗಾಮಿ ವಿಷಯಕ್ಕೆ ಸಂಬಂಧಿಸಿದ ಬೇಹುಗಾರಿಕೆಯ ಆರೋಪಗಳನ್ನು ಎದುರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕತಾರ್ ಅಧಿಕಾರಿಗಳು ಹೆಚ್ಚುವರಿಯಾಗಿ ಎಲೆಕ್ಟ್ರಾನಿಕ್ ಪುರಾವೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯಕ್ಕೆ ಮೂಲ ಗೊತ್ತಿಲ್ಲ – ಆಪ್ ಸಚಿವೆ ವಿವಾದಾತ್ಮಕ ಹೇಳಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕತಾರ್ ಕನ್ನಡಿಗರನ್ನು ರಂಜಿಸಿದ ‘ಚೌಕಬಾರ’ ಸಿನಿಮಾ

    ಕತಾರ್ ಕನ್ನಡಿಗರನ್ನು ರಂಜಿಸಿದ ‘ಚೌಕಬಾರ’ ಸಿನಿಮಾ

    ‘ಪಾಪಾ ಪಾಂಡು’ ಖ್ಯಾತಿಯ ವಿಕ್ರಮ್ ಸೂರಿ (Vikram Suri) ನಿರ್ದೇಶನದ ‘ಚೌಕಬಾರ’ (Chowkabara)  ಸಿನಿಮಾ ದೋಹಾ ನಗರದಲ್ಲಿ ಮೇ 25 ರಂದು  ಯಶಸ್ವಿಯಾಗಿ ಪ್ರದರ್ಶನಗೊಂಡಿತು. ದೋಹಾ ನಗರದ ಕನ್ನಡಿಗರು ಸಿನಿಮಾ ಮೆಚ್ಚಿಕೊಂಡು ಕಲಾವಿದರನ್ನು ಗೌರವಿಸಿದರು.  ಚಿತ್ರದ ನಿರ್ದೇಶಕರಾದ ವಿಕ್ರಮ್ ಸೂರಿ, ನಟಿ ನಮಿತಾ ರಾವ್ (Namita Rao), ನಟ ವಿಹಾನ್ ಹಾಗೂ ಚಿತ್ರದ ಸಂಗೀತ ನಿರ್ದೇಶಕ ಅಶ್ವಿನ್ ಕುಮಾರ್ ಅವರೊಟ್ಟಿಗೆ ಕತಾರ್ ಕನ್ನಡಿಗರು ಚಿತ್ರವನ್ನು ನೋಡಿ ಆನಂದಿಸಿದರು.

    ಇದು ಕಾದಂಬರಿ ಆಧಾರಿತ ಚಿತ್ರವಾಗಿದ್ದು ವಿಶಿಷ್ಟ ಪ್ರೇಮಕಥೆಯನ್ನು ಹೊಂದಿದೆ. ಎಲ್ಲ ಕಲಾವಿದರು ಮನ ಮುಟ್ಟುವಂತೆ ಅಭಿನಯಿಸಿದ್ದಾರೆ. ಈ ಚಿತ್ರದ ಯಶಸ್ವಿ ಪ್ರದರ್ಶನಕ್ಕೆ ಸುಬ್ರಮಣ್ಯ ಹೆಬ್ಬಾಗಿಲು ಮತ್ತು ಅವರ ತಂಡ ಸಾಕಷ್ಟು ಪರಿಶ್ರಮ ಪಟ್ಟಿದೆ. ಕತಾರ್ (Qatar) ನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನವಾಗಲು ಸುಬ್ರಮಣ್ಯ ಹೆಬ್ಬಾಗಿಲು ಸಾಕಷ್ಟು ಶ್ರಮಿಸುತ್ತಿದ್ದಾರೆ. ಇದನ್ನೂ ಓದಿ:ಶಕುನಿ ಪಾತ್ರಧಾರಿ ಗೂಫಿ ಆರೋಗ್ಯ ಸ್ಥಿತಿ ಗಂಭೀರ

    ಈಗಾಗಲೇ ಕರ್ನಾಟಕದಲ್ಲೂ ಚಿತ್ರ ರಿಲೀಸ್ ಆಗಿದ್ದು, ಪ್ರೇಕ್ಷಕರು ಮೆಚ್ಚಿದ್ದರು. ವಿಕ್ರಮ್ ಸೂರಿ ನಿರ್ದೇಶನ ಮತ್ತು ಅವರ ಪತ್ನಿ ನಿಮಿತಾ ಅವರ ಅಭಿನಯವನ್ನು ಮೆಚ್ಚಿ ಮಾತನಾಡಿದ್ದರು. ಇದೀಗ ವಿದೇಶದಲ್ಲೂ ಚೌಕಬಾರ ರಿಲೀಸ್ ಆಗಿ, ವಿದೇಶಿಗರನ್ನು ರಂಜಿಸುತ್ತಿದೆ.