Tag: quarell

  • ಬೇರೆ ರೂಟ್‍ಗೆ ಹೋಗು ಅಂದಿದ್ದಕ್ಕೆ ಬಡಿದಾಡಿದ ಸಾರಿಗೆ ಸಿಬ್ಬಂದಿ!

    ಬೇರೆ ರೂಟ್‍ಗೆ ಹೋಗು ಅಂದಿದ್ದಕ್ಕೆ ಬಡಿದಾಡಿದ ಸಾರಿಗೆ ಸಿಬ್ಬಂದಿ!

    ಹಾವೇರಿ: ವಾಯುವ್ಯ ಸಾರಿಗೆ ಬಸ್ ಕಂಟ್ರೋಲರ್ ಮತ್ತು ಕಂಡಕ್ಟರ್ ನಡುವೆ ಮಾತಿಗೆ ಮಾತು ಬೆಳೆದು ಬಸ್ ನಿಲ್ದಾಣದಲ್ಲಿಯೇ ಇಬ್ಬರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ.

    ಶಿಗ್ಗಾಂವಿ ಬಸ್ ನಿಲ್ದಾಣದ ಕಂಟ್ರೋಲರ್ ಎಂ.ಎನ್.ಶಿರಗುಪ್ಪಿ ಮತ್ತು ಕಂಡಕ್ಟರ್ ಶಂಕರಪ್ಪ ನಡುವೆ ಗಲಾಟೆ ನಡೆದಿದೆ. ಅಲ್ಲದೆ ಇಬ್ಬರು ಹೊಡೆದಾಡುವುದನ್ನ ಬಿಡಿಸಲು ಜನರು ಹರಸಾಹಸವನ್ನೇ ಪಟ್ಟಿದ್ದಾರೆ. ಬೇರೆ ರೂಟ್‍ಗೆ ಡ್ಯೂಟಿಗೆ ಹೋಗುವಂತೆ ಕಂಟ್ರೋಲರ್ ನಿರ್ವಾಹಕನಿಗೆ ಹೇಳಿದ್ದಕ್ಕೆ ಈ ಹೊಡೆದಾಟ ನಡೆದಿದೆ. ಮೊದಲು ಬರೀ ಮಾತಿನಿಂದ ಶುರುವಾದ ಜಗಳ ಕೊನೆಗೆ ಇಬ್ಬರೂ ಕೈ ಕೈ ಹಿಡಿದುಕೊಂಡು ಹೊಡೆದಾಡುವ ಮಟ್ಟಿಗೆ ತಲುಪಿದೆ.

    ನಿರ್ವಾಹಕನಿಗೆ ಹುಲಗೂರು ಕಡೆ ಭಾಗದಲ್ಲಿ ಜನರು ಹೆಚ್ಚಾಗಿದ್ದಾರೆ, ಆ ರೂಟ್‍ಗೆ ಹೋಗು ಎಂದು ಕಂಟ್ರೋಲರ್ ಹೇಳಿದ್ದಾರೆ. ಆದರೆ ನಿರ್ವಾಹಕ ಈ ಮಾತಿಗೆ ನಿರಾಕರಿಸಿದ್ದಾನೆ. ಆಗ ಇಬ್ಬರ ನಡುವೆ ಜಗಳ ಶುರುವಾಗಿದೆ. ಕೊನೆಗೆ ಸ್ಥಳೀಯರು ಹಾಗೂ ಪೊಲೀಸರ ಗಲಾಟೆಯನ್ನು ಶಾಂತಗೊಳಿಸಿದ್ದಾರೆ. ಅಲ್ಲದೆ ಡಿಪೋ ಮ್ಯಾನೇಜರ್ ಗೆ ಈ ಬಗ್ಗೆ ದೂರು ನೀಡಲು ಕಂಟ್ರೋಲರ್ ಮುಂದಾಗಿದ್ದಾರೆ ಎನ್ನಲಾಗಿದೆ.

  • 1 ಬಕೆಟ್ ನೀರಿಗಾಗಿ ಮಹಿಳೆಗೆ ಚಾಕು ಇರಿದ!

    1 ಬಕೆಟ್ ನೀರಿಗಾಗಿ ಮಹಿಳೆಗೆ ಚಾಕು ಇರಿದ!

    ನವದೆಹಲಿ: ಶೌಚಾಲಯದ ಬಾಗಿಲಲ್ಲಿ ಒಂದು ಬಕೆಟ್ ನೀರು ಇಟ್ಟು ಹೋದರು ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಗೆ ಚಾಕು ಇರಿದು ಕೊಲೆಗೈದ ಭಯಾನಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    ದೆಹಲಿಯ ರಂಗಪುರಿ ಪಹಾರಿ ಪ್ರದೇಶದಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದೆ. ರಂಗಪುರಿ ಪಹಾರಿ ನಿವಾಸಿ ಗೋಪಾಲ್ ಸಿಂಗ್ ಅದೇ ಪ್ರದೇಶದ ರೇಖಾ ಕೌರ್ ಅವರನ್ನು ಚಾಕು ಇರಿದು ಕೊಲೆ ಮಾಡಿದ್ದಾನೆ. ಶೌಚಾಲಯದ ಬಾಗಿಲ ಮುಂದೆ ರೇಖಾ ನೀರು ತುಂಬಿದ್ದ ಬಕೆಟ್ ಇಟ್ಟು ಹೋಗಿದ್ದಾರೆಂಬ ಕಾರಣಕ್ಕೆ ಗೋಪಾಲ್ ಕೋಪಗೊಂಡಿದ್ದಾನೆ. ಬಳಿಕ ಈ ಬಗ್ಗೆ ಮಹಿಳೆ ಬಳಿ ಜಗಳವನ್ನೂ ಕೂಡ ಮಾಡಿದ್ದಾನೆ. ಆದರೆ ಕೊನೆಗೆ ಜಗಳ ತಾರಕ್ಕಕ್ಕೇರಿ ಮಹಿಳೆಗೆ ಚಾಕು ಇರಿದು ಆರೋಪಿ ಕೊಲೆ ಮಾಡಿದ್ದಾನೆ.

    ಆರೋಪಿ ಯಾವಾಗಲು ನೆರೆಹೊರೆಯವರ ಜೊತೆ ಪದೇ ಪದೇ ಜಗಳಾವಾಡುತ್ತಿದ್ದ. ಅಲ್ಲದೆ ಕೆಲ ದಿನಗಳಿಂದ ರೇಖಾ ಟ್ಯಾಂಕರ್ ನಲ್ಲಿ ಬರುತ್ತಿದ್ದ ನೀರನ್ನು ಹೆಚ್ಚು ಬಳಸುತ್ತಾರೆ ಎಂದು ಆರೋಪಿ ಕ್ಯಾತೆ ತೆಗೆದಿದ್ದ. ಅಲ್ಲದೆ ನೀರಿಗಾಗಿ ಅವರಿಬ್ಬರ ನಡುವೆ ಜಗಳ ಕೂಡ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

    ಸದ್ಯ ಈ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

  • ಧರಂಸಿಂಗ್ ಪುತ್ರನ ವಿರುದ್ಧ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಅಭ್ಯರ್ಥಿ!

    ಧರಂಸಿಂಗ್ ಪುತ್ರನ ವಿರುದ್ಧ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಅಭ್ಯರ್ಥಿ!

    ಬೀದರ್: ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲಿ ಬೀದರ್ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ದಿವಂಗತ ಮಾಜಿ ಸಿಎಂ ಧರಂಸಿಂಗ್ ಪುತ್ರನ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಧರಂಸಿಂಗ್ ಪುತ್ರ, ವಿಧಾನ ಪರಿಷತ್ ಸದಸ್ಯ ವಿಜಯ್‍ಸಿಂಗ್ ವಿರುದ್ಧ ಔರಾದ್ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯ್‍ಕುಮಾರ್ ಕೌಡಿಯಾಳ ದೂರು ನೀಡಿದ್ದಾರೆ. ಅವರಿಬ್ಬರ ಮಧ್ಯ ಸ್ಥಳೀಯ ಚುನಾವಣೆಗೆ ಬಿ ಫಾರಂ ಹಂಚಿಕೆ ವಿಷಯಕ್ಕೆ ಮಾತಿನ ಚಕಮಕಿಯಾಗಿ ವಿಜಯ್‍ಸಿಂಗ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ, ವಿಜಯ್‍ಕುಮಾರ್ ಅವರು ಎಸ್‍ಪಿಗೆ ದೂರು ಸಲ್ಲಿಸಿದ್ದಾರೆ.

    ಮೇ 14ರಂದು ಔರಾದ್ ಪಟ್ಟಣ ಪಂಚಾಯ್ತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಪಕ್ಷದ ಕಾರ್ಯದರ್ಶಿ ಉಬೇದುಲ್ಲಾ ಶೇರಿಫ್, ಡಾ ಶೈಲಾಜನಾಥ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ವಿಜಯ್‍ಸಿಂಗ್ ಅವರು ವಿಜಯ್‍ಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮಾಡಲಾಗುತ್ತದೆ. ಆದರೆ ಈ ಆರೋಪವನ್ನು ವಿಜಯ್‍ಸಿಂಗ್ ತಳ್ಳಿ ಹಾಕಿದ್ದಾರೆ.

  • ಪೊಲೀಸರು, ಹಣ್ಣಿನ ವ್ಯಾಪಾರಿಗಳ ನಡುವೆ ಬೀದಿಕಾಳಗ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

    ಪೊಲೀಸರು, ಹಣ್ಣಿನ ವ್ಯಾಪಾರಿಗಳ ನಡುವೆ ಬೀದಿಕಾಳಗ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

    ಶಿವಮೊಗ್ಗ: ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿಕೊಂಡ ವ್ಯಾಪಾರಿಗಳು ಹಾಗೂ ಪೊಲೀಸರು ನಡುವೆ ನಡೆದ ಬೀದಿಕಾಳಗಕ್ಕೆ ಸಾವಿರಾರು ರೂ.ಗಳ ಹಣ್ಣುಗಳು ಮಣ್ಣುಪಾಲಾಗಿದೆ.

    ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿದ್ದಕ್ಕೆ ಅದನ್ನು ತೆರವುಗೊಳಿಸಲು ಸಂಚಾರಿ ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಹಣ್ಣು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಗಲಾಟೆಯಾಗಿದೆ. ಆದರೆ ಪೊಲೀಸರು ಹಾಗೂ ವ್ಯಾಪಾರಿಗಳ ನೂಕಾಟ ತಳ್ಳಾಟದಲ್ಲಿ ಹಣ್ಣುಗಳು ಮಣ್ಣುಪಾಲಾಗಿದ್ದು, ವ್ಯಾಪಾರಿಗಳು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.

    ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಹಣ್ಣುಗಳು ವ್ಯರ್ಥವಾಯ್ತಲ್ಲ ಎಂದು ವ್ಯಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಅಮೀರ್ ಅಹ್ಮದ್ ವೃತ್ತದಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಾಯಿತು.

    ಮಾತಿನ ಚಕಮಕಿಯಿಂದ ಶುರುವಾದ ಗಲಾಟೆ ಪ್ರತಿಭಟನೆ ನಡೆಸುವ ಮಟ್ಟಿಗೆ ಬಂದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ದೊಡ್ಡಪೇಟೆ ಪೊಲೀಸರು ಗಲಾಟೆಯನ್ನು ನಿಯಂತ್ರಿಸಿದರು.