Tag: R

  • ಹಿರಿಯ ನಟಿ ಆರ್. ಸುಬ್ಬಲಕ್ಷ್ಮಿ ನಿಧನ

    ಹಿರಿಯ ನಟಿ ಆರ್. ಸುಬ್ಬಲಕ್ಷ್ಮಿ ನಿಧನ

    ಖ್ಯಾತ ಹಿರಿಯ ನಟಿ ಮತ್ತು ಸಂಗೀತ ಕ್ಷೇತ್ರದಲ್ಲೂ ಸಾಕಷ್ಟು ಹೆಸರು ಮಾಡಿರುವ ಮಲೆಯಾಳಂನ (Malayalam) ಆರ್.ಸುಬ್ಬಲಕ್ಷ್ಮಿ (R.Subbalakshmi) ನಿಧನರಾಗಿದ್ದಾರೆ (Passed away). 87ರ ವಯಸ್ಸಿನ ಈ ಹಿರಿ ಜೀವ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸಿನಮಾ ರಂಗದಲ್ಲಿ ಮಾತ್ರವಲ್ಲ, ಚಿತ್ರಕಲೆ ಮತ್ತು ಸಂಗೀತ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಸುಬ್ಬಲಕ್ಷ್ಮಿ.

    ಮಲಯಾಳಂನ ಅನೇಕ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ್ದ ಸುಬ್ಬಲಕ್ಷ್ಮಿ ಅವರು, ಇತ್ತೀಚಿನ ದಿನಗಳಲ್ಲಿ ಅಜ್ಜಿ ಪಾತ್ರಕ್ಕೆ ಫಿಕ್ಸ್ ಆಗಿದ್ದರು. ಸಾಕಷ್ಟು ಚಿತ್ರಗಳಲ್ಲಿ ಅಜ್ಜಿಯಾಗಿಯೇ ಫೇಮಸ್ ಆದವರು. ಪಾಂಡಿಪ್ಪ, ನಂದನಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು.

     

    ನಟಿಯ ನಿಧನಕ್ಕೆ ನಟರು ಮಾತ್ರವಲ್ಲ, ಕೇರಳದ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ.

  • ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

    ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

    ವಿಶ್ವದ ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್ ಗೆ (Oscar) ದಿನಗಣನೆ ಶುರುವಾಗಿದೆ. ಹಲವಾರು ಕಾರಣಗಳಿಂದಾಗಿ ಈ ಬಾರಿ ಆಸ್ಕರ್ ವೇದಿಕೆ ಕಲರ್ ಫುಲ್ ಆಗಿರುತ್ತದೆ. ಭಾರತದ ಹೆಸರಾಂತ ನಟರಾದ ರಾಮ್ ಚರಣ್ (Ram Charan) ಮತ್ತು ಜ್ಯೂನಿಯರ್ ಎನ್.ಟಿ.ಆರ್ (Jr.NTR) ‘ನಾಟು ನಾಟು’ ಹಾಡಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕುತ್ತಿದ್ದರೆ, ಈ ಬಾರಿಯ ಆಸ್ಕರ್ ಕಾರ್ಯಕ್ರಮದ ನಿರೂಪಣೆಯ ಹೊಣೆಯನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಹೊರಲಿದ್ದಾರೆ.

    ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

    ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.

  • 100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್  ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?

    100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್ ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕನ್ನಡ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಮಾರ್ಚ್ 19ರಂದು ನಡೆಯಲಿರುವ ಈ ಇವೆಂಟ್ ಗಾಗಿ 100 ಎಕರೆ ಪ್ರದೇಶ ಸಿದ್ಧಗೊಳ್ಳುತ್ತಿದೆ. 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿರುವ ಈ ಕಾರ್ಯಕ್ರಮದಲ್ಲಿ ತೆಲುಗು, ತಮಿಳು ಮತ್ತು ಕನ್ನಡದ ಸ್ಟಾರ್ ನಟರು ಭಾಗಿಯಾಗುತ್ತಿರುವುದು ವಿಶೇಷ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

    ಈ ಇವೆಂಟ್ ಅನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಲು ಚಿತ್ರತಂಡ ನಿರ್ಧರಿಸಿದ್ದು, ಪುನೀತ್ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಇದರ ನೇತೃತ್ವವನ್ನು ಶಿವರಾಜ್ ಕುಮಾರ್ ಅವರಿಗೆ ವಹಿಸಲಾಗಿದೆಯಂತೆ.  ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?

    ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಮಾತ್ರವಲ್ಲ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ಎಲ್ಲ ರೀತಿಯ ಭದ್ರತೆಯನ್ನೂ ಮಾಡಿಕೊಳ್ಳಲಾಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್, ಜ್ಯೂನಿಯರ್ ಎನ್.ಟಿ.ಆರ್, ಆಲಿಯಾ ಭಟ್, ಅಜಯ್ ದೇವಗನ್,  ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಸೇರಿದಂತೆ ಚಿತ್ರತಂಡದ ಬಹುತೇಕ ಸದಸ್ಯರು ಕೂಡ ಅಂದು ಭಾಗಿಯಾಗಲಿದ್ದಾರೆ. ಮನರಂಜನೆ ಕಾರ್ಯಕ್ರಮ ಮತ್ತು ಚಿತ್ರತಂಡದೊಂದಿಗೆ ಸಂವಾದ ಕೂಡ ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.