Tag: R. Devaraj

  • ಶಿಕ್ಷಣ ವ್ಯವಸ್ಥೆಯ ಕರಾಳಮುಖ ಬಯಲು ಮಾಡುವ ‘Scam (1770)’ ಸಿನಿಮಾ

    ಶಿಕ್ಷಣ ವ್ಯವಸ್ಥೆಯ ಕರಾಳಮುಖ ಬಯಲು ಮಾಡುವ ‘Scam (1770)’ ಸಿನಿಮಾ

    ಇಂದಿನ ವಿದ್ಯಾರ್ಥಿಗಳೆ ಮುಂದಿನ ಸತ್ಪ್ರಜೆಗಳು ಎಂಬ ಮಾತಿದೆ. ಅದಕ್ಕೆ ಅನುಗುಣವಾಗಿ ಈಗಿನ ಶಿಕ್ಷಣ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳನ್ನು  ಕುರಿತಾದ ಕಥಾಹಂದರ ಹೊಂದಿರುವ ‘SCAM (1770)’ ಚಿತ್ರ ಬರುತ್ತಿದೆ. ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್  (R. Devaraj)ನಿರ್ಮಿಸಿರುವ,  ವಿಕಾಸ್ ಪುಷ್ಪಗಿರಿ (Vikas Pushpagiri) ನಿರ್ದೇಶಿಸಿರುವ ಈ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು.

    ಬೆಂಗಳೂರು ನಗರದ ಆಟದ ಮೈದಾನವೊಂದರಲ್ಲಿ ಸುಮಾರು 20 ತಂಡಗಳು ಭಾಗವಹಿಸಿರುವ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು. ಆ ತಂಡಗಳ ನಾಯಕರು (ವಿದ್ಯಾರ್ಥಿಗಳು) SCAM (1770) ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೇನೆಲ್ಲಾ ನಡೆಯುತ್ತಿದೆ ಎಂಬ  ವಿಚಾರವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾನೆ SCAM (1770).  ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇಬೇಕಾದ ಚಿತ್ರವಿದು ಎಂದು ನಿರ್ದೇಶಕ ವಿಕಾಸ್ ಪುಷ್ಪಗಿರಿ ತಿಳಿಸಿದ್ದಾರೆ. ಇದನ್ನೂ ಓದಿ:ಅಲ್ಲು ಅರ್ಜುನ್-ಸುಕುಮಾರ್ ಕಾಂಬೋ ಬ್ಯಾಕ್, ಧೂಳ್ ಎಬ್ಬಿಸಿದ ‘ಪುಷ್ಪ 2’ ಗ್ಲಿಂಪ್ಸ್

    ಡಿ.ಕ್ರಿಯೇಷನ್ಸ್ ಇತ್ತೀಚೆಗೆ ಆಕ್ಟ್-1978 ಮತ್ತು 19.20.21 ಎಂಬ ಸದಭಿರುಚಿ ಚಿತ್ರಗಳನ್ನು ನೀಡಿದ್ದು,  ದೇವರಾಜ್ ಆರ್ ಅವರ ನಿರ್ಮಾಣದ ಈ ಚಿತ್ರಕ್ಕೆ ಇಂದು ನಟೇಶ್ ಹಾಗೂ ನೇತ್ರಾವತಿ ಕಥೆ ಬರೆದಿದ್ದಾರೆ. ಚಿತ್ರಕಥೆಯನ್ನು ಶಂಕರ್ ರಾಮನ್ ಹಾಗೂ ವಿಕಾಸ್ ಪುಷ್ಪಗಿರಿ ಬರೆದಿದ್ದಾರೆ. ಸಂಭಾಷಣೆ  ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ – ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನವಿದೆ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ರಂಜನ್(ದಡ್ಡ ಪ್ರವೀಣ), ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗಾಗಲೇ SCAM (1770) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ಧವಾಗಲಿದೆ.

  • ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ

    ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸದ್ದಿಲ್ಲದೇ ಅವರ ಹೊಸ ಸಿನಿಮಾದ ಶೂಟಿಂಗ್ ಅನ್ನು ಮುಗಿಸಿದ್ದಾರೆ.  ಬಿಡುವಿಲ್ಲದೇ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ಅವರ ತಂಡ ದಾಖಲೆ ಅನ್ನುವಂತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. 19.20.21 ಅನ್ನುವ ಕುತೂಹಲದ ಶೀರ್ಷಿಕೆ ಹೊತ್ತು ಈ ಸಿನಿಮಾ ಬರುತ್ತಿದೆ. ಇದನ್ನೂ ಓದಿ : ‘ಮುದುಕನ ಲವ್ ಸ್ಟೋರಿ’ಗೆ ಕೆಜಿಎಫ್ ತಾತ ಕೃಷ್ಣರಾವ್ ಹೀರೋ

    ಈ ಸಿನಿಮಾ  ಕುರಿತು ನಿರ್ದೇಶಕ ಮಂಸೋರೆ ಮಾತನಾಡಿ, “ಎರಡು ತಿಂಗಳ ಅವಧಿ, ಸತತ 51 ದಿನಗಳ ಚಿತ್ರೀಕರಣ, ಬಿಸಿಲು, ಚಳಿ, ಮಳೆ, ಹಗಲು-ರಾತ್ರಿ ಚಿತ್ರೀಕರಣ, ನೂರಕ್ಕೂ ಹೆಚ್ಚು ದೊಡ್ಡ-ಚಿಕ್ಕ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಲಾವಿದರ ದಂಡು, ಓಡಾಟ-ಹಾರಾಟ, ಕಾಡು, ಗುಡ್ಡ, ನಾಡು, ನದಿ, ಬಯಲು, ಧುತ್ತನೆ ಎದುರಾಗುವ ಹವಾಮಾನದ ವೈಪರೀತ್ಯಗಳ ನಡುವೆ, ನಾವು ಹೇಳಬೇಕೆಂದು ಬಯಸಿದ, ಈ ನೆಲದ ಕತೆಯೊಂದನ್ನು ಸಿನೆಮಾ ಮಾಡಬೇಕೆನ್ನುವ ನಮ್ಮಾಸೆಯ ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಲು ಹರ್ಷವಾಗುತ್ತಿದೆ” ಎಂದಿದ್ದಾರೆ. ಇದನ್ನೂ ಓದಿ : ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ಮುಂದುವರೆದು ಮಾತನಾಡಿದ ಅವರು, “ಸಿನೆಮಾದ ಚಿತ್ರೀಕರಣ ಪೂರ್ತಿಯಾಗಿದೆ. ಇದನ್ನು ಸಾಧ್ಯವಾಗಿಸಿದ ನನ್ನೆಲ್ಲಾ ತಂಡದ ಸದಸ್ಯರಿಗೆ ಹಾಗೂ ಚಿತ್ರೀಕರಣ ನಡೆಸಿದ ಪ್ರತೀ ಊರಿನಲ್ಲೂ ಸಹಕರಿಸಿದ, ಸಹಾಯ ಮಾಡಿದ ಸ್ನೇಹಿತರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಚಿತ್ರೀಕರಣ ಯಶಸ್ವಿಯಾಗಿ ಪೂರ್ತಿಗೊಳ್ಳಲು ಶ್ರಮಿಸಿದ ನನ್ನೆಲ್ಲಾ ನಿರ್ದೇಶನ ವಿಭಾಗದ ಸದಸ್ಯರಿಗೂ ಧನ್ಯವಾದಗಳು” ಎಂದಿದ್ದಾರೆ. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

    ಇಂತಹ ಒಂದು ಕತೆಯನ್ನು ಸಿನೆಮಾ ಮಾಡಲು ಮಂಸೋರೆ ಅವರಿಗೆ ಬೆನ್ನೆಲುಬಾಗಿ ನಿಂತವರು ನಿರ್ಮಾಪಕರಾದ ಆರ್.ದೇವರಾಜ್. ಸತ್ಯ ಹೆಗಡೆ  ಅವರ ಸಿನಿಮಾಟೋಗ್ರಫಿ ಚಿತ್ರಕ್ಕಿದೆ. ವೀರೇಂದ್ರ ಮಲ್ಲಣ್ಣ, ಸಂತೋಷ್ ಟೆಮ್ಕರ್  ಸೇರಿದಂತೆ ಹಲವರು ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದಾರೆ.