Tag: R.Latha

  • ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ: ಆರ್. ಲತಾ

    ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ: ಆರ್. ಲತಾ

    ಚಿಕ್ಕಬಳ್ಳಾಪುರ: ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

    ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆ 2022ರ ಫೆಬ್ರವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ 2022ರ ಫೆಬ್ರವರಿ ತಿಂಗಳಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಕಳೆದ ಜನವರಿ ಮಾಹೆಯಲ್ಲಿಯೂ ಸಹ ಪ್ರಥಮ ಸ್ಥಾನಗಳಿಸಿ ಉತ್ತಮ ಸಾಧನೆ ಮಾಡಿತ್ತು ಎಂದು ತಿಳಿಸಿದ್ದಾರೆ.

    ಈ ಕುರಿತು ಅವರು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಫೆಬ್ರವರಿ ಮಾಹೆಯಲ್ಲಿ ಒಟ್ಟು 83,034 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಈ ಪೈಕಿ 74,968 ಅರ್ಜಿಗಳನ್ನು ಸಕಾಲ ನಿಯಮಗಳನ್ವಯ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ. 4,347 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕøತಗೊಂಡಿವೆ. ಇನ್ನೂ 6,522 ಅರ್ಜಿಗಳು ವಿಲೇವಾರಿಯಾಗುವುದು ಬಾಕಿಯಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ ಫೆಬ್ರವರಿ ಮಾಹೆಯಲ್ಲೂ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

    ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿದ್ದು, ಸದರಿ ಯೋಜನೆ ಆರಂಭವಾದಾಗಿನಿಂದ (2012 ರಿಂದ) ಈ ವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಜಿಲ್ಲೆಯು ರಾಜ್ಯದಲ್ಲಿಯೇ 48 ಬಾರಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲಾಡಳಿತದ ಪಾರದರ್ಶಕ, ಯುಕ್ತ, ತ್ವರಿತ ಆಡಳಿತಕ್ಕೆ ಹಾಗೂ ಸರ್ಕಾರದ ಎಲ್ಲಾ ಯೋಜನೆಗಳ ದಕ್ಷ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಂಕಿಂಗ್ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರೀಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ ಎಂದರು.

    ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈ ವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಒಟ್ಟು 21,81,415 ಅರ್ಜಿಗಳನ್ನು ಸ್ವೀಕರಿಸಿ 21,51,254 ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಈ ಪೈಕಿ 48 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನ ಗಳಿಸಿದೆ. ಒಟ್ಟಾರೆ 48 ಬಾರಿ (ಮಾಹೆ) ರಾಜ್ಯ ದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಡಳಿತ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಮಾನ್ಯ ಸಕಾಲ ಸಚಿವರಿಂದ ಪ್ರಶಂಸೆ ಪಡೆದಿರುವ ಕೀರ್ತಿಯು ಜಿಲ್ಲೆಗೆ ಸಲ್ಲುತ್ತದೆ. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಯೋಜನೆಗಳ ಅನುಷ್ಟಾನ ಹಾಗೂ ಸೇವೆ ನೀಡುವಲ್ಲಿ ಸಹಕಾರಿಯಾಗಿ ನಿಂತಿದೆ. ಈ ಅಭೂತಪೂರ್ವ ಸಾಧನೆಗೆ ಸಹಕಾರ ನೀಡಿದ ಹಾಗೂ ಅಹರ್ನಿಶಿ ಶ್ರಮಿಸಿದ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು.

    ಮುಂದಿನ ದಿನಗಳಲ್ಲಿಯೂ ತಾವೆಲ್ಲರೂ ತಮ್ಮ ಕಾರ್ಯ ವೈಖರಿಯನ್ನು ಹೀಗೆಯೇ ಯಶಸ್ವಿಯಾಗಿ ನಿರ್ವಹಿಸಿ ಪ್ರಥಮ ಸ್ಥಾನವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಈ ಸಾಧನೆಗೆ ಕೈಜೋಡಿಸಿದ ಜಿಲ್ಲೆಯ ಸಮಸ್ತ ಜನತೆಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆಯನ್ನು ತಿಳಿಸಿದರು.

  • ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ

    ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ

    – ಭಾರೀ ಮಳೆಯಿಂದಾಗಿ ನಂದಿ ಗಿರಿಧಾಮದದ ಬಳಿ ಭೂಕುಸಿತ

    ಚಿಕ್ಕಬಳ್ಳಾಪುರ: ಮಂಗಳವಾರ ರಾತ್ರಿ ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ನಂದಿ ಗಿರಿಧಾಮದ ಬಳಿ ಭೂಕುಸಿತ ಉಂಟಾಗಿ ನಂದಿಗಿರಿಧಾಮಕ್ಕೆ ಸಾಗುವ ರಸ್ತೆಗೆ ಒಂದು ಸ್ಥಳದಲ್ಲಿ ಹಾನಿಯಾಗಿದ್ದು, ಶಾಶ್ವತವಾಗಿ ರಸ್ತೆ ಪುನರ್ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

    ನಂದಿ ಗಿರಿಧಾಮದಲ್ಲಿ ಭೂಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಹೆಚ್ಚಿನ ಪ್ರಮಾಣದಲ್ಲಿ ನಿನ್ನೆ ರಾತ್ರಿ ಮಳೆ ಸುರಿದ ಪರಿಣಾಮ ಬೆಟ್ಟದ ಮೇಲಿನಿಂದ ನೀರು ಒಂದೇ ಭಾಗದಲ್ಲಿ ಇಳಿಜಾರಾಗಿ ನಿರಂತರವಾಗಿ ಹರಿಯುವ ವೇಳೆ ಒಂದೇ ಕಡೆ ನೀರು ಸಂಗ್ರಹಗೊಂಡಿದೆ. ಪರಿಣಾಮ ಅಲ್ಲಿದ್ದ ಮಣ್ಣು ಹಾಗೂ ಚಿಕ್ಕ ಗುಡ್ಡ ಇಳಿಮುಖವಾಗಿ ಕುಸಿದ ರಭಸ ಹಾಗೂ ಒತ್ತಡಕ್ಕೆ ನಂದಿಗಿರಿಧಾಮಕ್ಕೆ ಸಾಗುವ ರಸ್ತೆಗೆ ಒಂದು ಕಡೆ ಹಾನಿಯುಂಟಾಗಿದೆ. ಅಲ್ಲಿದ್ದ ಮರಗಿಡಗಳು ನಾಶವಾಗಿವೆ. ಭೂ ಕುಸಿತವಾದ ಕಾರಣ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದರು.

    ಇಂದೇ ತಾತ್ಕಾಲಿಕ ರಸ್ತೆಯನ್ನು ನಿರ್ಮಾಣ ಮಾಡಿ ಬೆಟ್ಟದ ಮೇಲಿರುವ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗುತ್ತಿದೆ. ಮತ್ತೆ ಭೂ ಕುಸಿತ ಉಂಟಾಗದಂತೆ ತಡೆಗೋಡೆ ನಿರ್ಮಾಣ, ನೀರು ಹರಿಯಲು ವ್ಯವಸ್ಥೆ ಹಾಗೂ ಕಲ್ವರ್ಟ್ ನ್ನು ಮುಂದಿನ 15-20 ದಿವಸಗಳ ಒಳಗಡೆ ನಿರ್ಮಿಸಿ ಶಾಶ್ವತವಾಗಿ ಸುರಕ್ಷಿತ ರಸ್ತೆಯನ್ನು ನಿರ್ಮಿಸಲಾಗುವುದು. ರಸ್ತೆ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಈಗಾಗಲೇ ಸೂಚಿಸಿದ್ದೇನೆ. ಅವರೂ ಸಹ ಈಗಾಗಲೇ ಕೆಲಸವನ್ನು ಆರಂಭಿಸಿದ್ದಾರೆ. ತಡೆಗೋಡೆ ಹಾಗೂ ಶಾಶ್ವತವಾಗಿ ರಸ್ತೆ ನಿರ್ಮಾಣವಾಗುವವರೆಗೂ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

    ಜಿಲ್ಲೆಯಾದ್ಯಾಂತ ಹಲವಡೆ ಮಳೆ:
    ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಡಿಸಿ ಭೇಟಿ ನೀಡಿದ್ರು. ಈ ಬಗ್ಗೆ ಮಾತನಾಡಿದ ಡಿಸಿ, ಚಿಕ್ಕಬಳ್ಳಾಪುರ ನಗರದ ಕೆಲ ವಾರ್ಡ್ ಗಳನ್ನು ಭೇಟಿ ಮಾಡಿದ್ದೇನೆ. 8 ಮತ್ತು 9ನೇ ವಾರ್ಡ್‍ನಲ್ಲಿ ಚರಂಡಿಗಳು ಚಿಕ್ಕದಿವೆ. ಮನೆಗಳು ಸಹ ತಗ್ಗು ಪ್ರದೇಶದಲ್ಲಿವೆ. ಆದ ಕಾರಣ ನೀರು ಮನೆಗಳಿಗೆ ನುಗ್ಗಿದೆ. 20ರಿಂದ 25 ಮನೆಗಳಿಗೆ ನೀರು ನುಗ್ಗಿದ್ದು, ಸದ್ಯಕ್ಕೆ ಅದನ್ನು ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶನಿ ಮಹಾತ್ಮ ದೇವಸ್ಥಾನದ ಬಳಿ ಕಟ್ಟೆ ಒಡೆದಿದೆ. ಆದ ಕಾರಣ ಆ ನೀರು ಬೇರೆ ಕಡೆಗೆ ನುಗ್ಗಿ ಸಮಸ್ಯೆಯಾಗುತ್ತಿದೆ. ಅದನ್ನು ಇಂದೇ ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದರು.

    ಜಕ್ಕಲಮಡುಗು ತುಂಬಿರುವುದು ಖುಷಿಯ ವಿಚಾರ:
    ಮೂರು ವರ್ಷದ ಚಿಕ್ಕಬಳ್ಳಾಪುರ ದೊಡ್ಡಬಳ್ಳಾಪುರ ನಗರಗಳ ಕುಡಿಯುವ ನೀರಿನ ಮೂಲ. ಜಕ್ಕಲಮಡುಗು ಈ ಹಿಂದೆ ಜಲಾಶಯ ಬರಿದಾಗಿತ್ತು. ಕಳೆದ ವರ್ಷ ಮತ್ತು ಈ ವರ್ಷ ತುಂಬಿದೆ. ಹೀಗಾಗಿ ಒಂದು ವರ್ಷ ನೀರಿನ ಸಮಸ್ಯೆ ಇರುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ.ಮಿಥುನ್ ಕುಮಾರ್, ಕಾರ್ಯಪಾಲಕ ಅಭಿಯಂತರ ತಿಮ್ಮರಾಯಪ್ಪ, ಜಿಲ್ಲಾ ಅರಣ್ಯಾಧಿಕಾರಿ ಅರ್ಸಲನ್, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.

  • ಪ್ರವಾಸಿಗರೇ ಶನಿವಾರ, ಭಾನುವಾರ ನಂದಿಬೆಟ್ಟಕ್ಕೆ ಬರಬೇಡಿ

    ಪ್ರವಾಸಿಗರೇ ಶನಿವಾರ, ಭಾನುವಾರ ನಂದಿಬೆಟ್ಟಕ್ಕೆ ಬರಬೇಡಿ

    ಚಿಕ್ಕಬಳ್ಳಾಪುರ: ಕೊರೊನಾ ಮೂರನೇ ಅಲೆ ತಡೆಯುವ ಸಲುವಾಗಿ ವಿಕೇಂಡ್ ಶನಿವಾರ ಮತ್ತು ಭಾನುವಾರ ನಂದಿಬೆಟ್ಟ ಸಂಪೂರ್ಣ ಬಂದ್ ಮಾಡಲಿದ್ದು, ಪ್ರವಾಸಿಗರೇ ನಂದಿಬೆಟ್ಟಕ್ಕೆ ಬರಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಲತಾ ಅವರು, ಕಳೆದ ಶನಿವಾರ ಹಾಗೂ ಭಾನುವಾರ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿದ್ದು, ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು. ನಂದಿಬೆಟ್ಟದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡುವಂತಾಯಿತು. ಭಾನುವಾರ 12,000 ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಬಂದು ಹೋಗಿದ್ದು, ಪ್ರವಾಸಿಗರ ದಟ್ಟಣೆ ಹೆಚ್ಚಾಗಿ ಕೊರೊನಾ ನಿಯಮಗಳನ್ನು ಪ್ರವಾಸಿಗರು ಗಾಳಿಗೆ ತೂರಿದ್ರು. ಹೀಗಾಗಿ ಪ್ರವಾಸಿಗರೇ ವಿಕೇಂಡ್ ಶನಿವಾರ-ಭಾನುವಾರ ನಂದಿಬೆಟ್ಟದತ್ತ ಬಂದು ಬೇಜಾರು ಮಾಡಿಕೊಂಡು ವಾಪಾಸ್ ಹೋಗಬೇಡಿ. ವಾರದ ಇತರ ದಿನಗಳಲ್ಲೂ ಪ್ರವಾಸಿಗರ ಪ್ರವೇಶಕ್ಕೆ ಅವಕಾಶವಿದೆ. ಆದರೆ ನಂದಿಬೆಟ್ಟದ ಮೇಲ್ಭಾಗದಲ್ಲಿ 550 ಬೈಕ್ ಹಾಗೂ 310 ಕಾರುಗಳಿಗಷ್ಟೇ ಪಾರ್ಕಿಂಗ್  ಸೌಲಭ್ಯವಿದ್ದು, ಇಷ್ಟು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ನಂದಿಬೆಟ್ಟದಲ್ಲಿ ಶ್ವಾನ-ಕೋತಿಗಳ ಸ್ನೇಹಕ್ಕೆ ಪ್ರವಾಸಿಗರು ಫಿದಾ

    ನಂದಿಬೆಟ್ಟದ ತಪ್ಪಲಿನ ಕೆಳಭಾಗದ ಚೆಕ್ ಪೋಸ್ಟ್ ನಲ್ಲೇ ಟೋಕನ್ ವಿತರಣೆ ಮಾಡಿ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಪ್ರಾಯೋಗಿಕ ಪ್ರಯತ್ನವನ್ನು ಮಾಡಲಾಗುವುದು. ಟೋಕನ್ ವಿತರಣೆ ಮಾಡುವ ಮೂಲಕ ವಾಹನಗಳ ದಟ್ಟಣೆ ಹಾಗೂ ಜನದಟ್ಟಣೆ ತಡೆಯುವ ಮೂಲಕ ಕೊರೊನಾ ಮೂರನೇ ಅಲೆ ತಡೆಯಲಾಗುವುದು. ಜೊತೆಗೆ ಈ ಟೋಕನ್ ವಿತರಣೆಯನ್ನು ಮುಂದಿನ ದಿನಗಳಲ್ಲಿ ಆನ್‍ಲೈನ್ ಮೂಲಕ ತಂತ್ರಜ್ಞಾನ ಬಳಸಿಕೊಂಡು ಟೋಕನ್ ನೀಡುವ ಕಾರ್ಯಕ್ಕೆ ಕೆಎಸ್‍ಟಿಡಿಸಿ ಆ್ಯಪ್ ತಯಾರಿ ಮಾಡಲಿದೆ. ಮತ್ತೊಂದೆಡೆ ಬೆಟ್ಟದ ಕೆಳಭಾಗದಲ್ಲಿ ಪಾರ್ಕಿಂಗ್ ಗೆ 7 ಎಕರೆ ಜಾಗ ಮೀಸಲಿಟ್ಟಿದ್ದು, ಅದಷ್ಟು ಬೇಗ ಪಾರ್ಕಿಂಗ್ ಸೌಲಭ್ಯ ಕಲ್ಪಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.

  • ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳಿರೋ ವ್ಯಕ್ತಿಗಳಿಲ್ಲ: ಡಿಸಿ ಸ್ಪಷ್ಟನೆ

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳಿರೋ ವ್ಯಕ್ತಿಗಳಿಲ್ಲ: ಡಿಸಿ ಸ್ಪಷ್ಟನೆ

    – ಸಾರ್ವಜನಿಕರೇ ಆತಂಕ ಬೇಡ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳಿರುವ ಯಾವುದೇ ವ್ಯಕ್ತಿಗಳಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ ಅಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

    ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರ್.ಲತಾ, ಜಿಲ್ಲೆಗೆ ವಿದೇಶಗಳಿಂದ ಇದುವರೆಗೂ 66 ಮಂದಿ ಆಗಮಿಸಿದ್ದಾರೆ. ಅದರಲ್ಲಿ 45 ಮಂದಿಯನ್ನ 14 ದಿನಗಳ ಕ್ವಾರಂಟೈನ್ ಮಾಡಲಾಗಿದ್ದು, ಅವರಿಗೆ ಯಾವುದೇ ರೀತಿಯ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

    ಸದ್ಯ ಉಳಿದ 21 ಮಂದಿಗೆ ಹೋಂ ಕ್ವಾರಂಟೈನ್‍ನಲ್ಲಿದ್ದು, ಇದುವರೆಗೆ ಅವರಿಗೂ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಹೀಗಾಗಿ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಕೊರೊನಾ ಸೋಂಕಿತ ಲಕ್ಷಣಗಳುಳ್ಳ ವ್ಯಕ್ತಿಗಳಿಲ್ಲದೆ ಇರುವುದರಿಂದ ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು..

    ಅಲ್ಲೀಪುರದಲ್ಲೂ ಸಹ ಸಂಶಯಾಸ್ಪದ ಪ್ರಕರಣಗಳಿಲ್ಲ, ಏರ್‌ಪೋರ್ಟಿನಲ್ಲಿ ಕೆಲಸ ಮಾಡುವ ಗುಡಿಬಂಡೆ ಮೂಲದ ವ್ಯಕ್ತಿಗೆ ಚಿಕಿತ್ಸೆ ಕೊಡಲಾಗಿದೆ ಅಷ್ಟೇ. ಅವರಿಗೂ ಸೋಂಕಿನ ಲಕ್ಷಣಗಳಿಲ್ಲ ಅಂತ ಸ್ಪಷ್ಟಪಡಿಸಿದರು. ಜಿಲ್ಲೆಯಾದ್ಯಾಂತ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಮನವಿ ಮಾಡಿಕೊಂಡರು.